Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಧಾರ್ಮಿಕ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ವ್ಯೆವಸ್ಥೆಗಳು ಇದ್ದರೂ ಕೂಡಾ ವಿದ್ಯಾಭ್ಯಾಸ ಮಾಡುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅಭಿಪ್ರಾಯಪಟ್ಟರು. ಅವರು ಶೈಖಾ ಮರ್ಕಝ್ ಯೂತ್ ವೆಲ್ಫೇರ್ ಅಸೋಸಿಯೇಶನ್ ನ 19ನೇ ವಾಷಿಕಕೊತ್ಸವ ನೆನಪಿಗೆ ಅಬ್ಬು ಹಾಜಿ ಖುತುಬಿನಗರ ಕೊಡುಗೆಯಾಗಿ ನಿರ್ಮಿಸಿಕೊಟ್ಟ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಲೌಕಿಕ ವಿದ್ಯಾಭ್ಯಾಸದ ಜತೆ ಧಾರ್ಮಿಕ ವಿದ್ಯೆಗೆ ಮಹತ್ವ ನೀಡಿದಾಗ ಮಾತ್ರ ಇಸ್ಲಾಂ ಧರ್ಮ ಬೆಳವಣಿಗೆ ಹೊಂದಲು ಸಾಧ್ಯ ಎಂದು ಹೇಳಿದರು. ಸುರಿಬೈಲ್ ದಾರುಲ್ ಅಶ್-ಅರಿಯ್ಯಾ ವಿದ್ಯಾ ಸಂಸ್ಥೆ ಯ ಮ್ಯಾನೇಜರ್ ಸಿ.ಎಚ್ ಮುಹಮ್ಮದಾಲಿ ಸಖಾಫಿ ಮಾತನಾಡಿ ಕಿನ್ಯಾ ಗ್ರಾಮದಲ್ಲಿ ಇರುವ ಬಡ ಹೆಣ್ಣಿನ ಮದುವೆ, ಮನೆ ಕಟ್ಟಲು, ವಿದ್ಯಾಭ್ಯಾಸ ಮುಂತಾದ ವಿಚಾರದಲ್ಲಿ ಹೆಚ್ಚಿನ ಅಧ್ಯತೆವಹಿಸಿ ಬಡರಿಗೆ ಅಶಾಕಿರಣವಾಗಿ ಬೆಳೆದು ಬಂದಿದೆ ಎಂದು ಹೇಳಿದರು. ಅಸೋಸಿಯೇಶನ್ ಅಧ್ಯಕ್ಷ ಕೆ.ಎ ಅಬೂಬಕ್ಕರ್ ಮಾತನಾಡಿದರು, ಖುತುಬಿ ನಗರ ಖತೀಬ್ ಶಫೀಕ್ ಸಅದಿ ವಿಷಯ ಮಂಡಿಸಿದರು. ಈ…

Read More

UN NETWORKS ಕಣಚೂರು: ನಾಟೆಕಲ್ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಮೆರಿಕಾದ ಟೆಕ್ಸಾಸ್‍ನ ಪ್ರಿಸಿಷನ್ ಆರ್ಥಪೆಡಿಕ್ಸ್ ಜತೆಗೆ ಜ್ಞಾನ ಬದಲಾವಣೆ ಮತ್ತು ಕೀಲು ಬದಲಿ ಶಸ್ತ್ರಚಿಕಿತ್ಸೆಯ ಕುರಿತು ಒಪ್ಪಂದ ಮಾಡಿಕೊಂಡಿದ್ದು, ಇದರ ಅಂಗವಾಗಿ ಮೂಳೆಚಿಕಿತ್ಸೆ ವಿಭಾಗದ ವಿವಿಧ ವೈದ್ಯರ ಸಮ್ಮುಖದಲ್ಲಿ `ಸಂಪೂರ್ಣ ಕೀಲು ಶಸ್ತ್ರಚಿಕಿತ್ಸೆಯ’ ನೇರ ಪ್ರಸಾರವನ್ನು ಕಣಚೂರು ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಾಡಲಾಗಿದೆ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೂಳೆಚಿಕಿತ್ಸೆ ವಿಭಾಗ ಮುಖ್ಯಸ್ಥ ಡಾ. ಜಲಾಲುದ್ದೀನ್ ಎಂ. ವಿ ತಿಳಿಸಿದ್ದಾರೆ. ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೀಲು ಬದಲಾವಣೆ ಕ್ಷೇತ್ರದಲ್ಲಿ ಜ್ಞಾನಾರ್ಜನೆ ಮತ್ತು ತರಬೇತಿಯನ್ನು ಒದಗಿಸುವ ಸಲುವಾಗಿ ಕಣಚೂರು ಸಂಸ್ಥೆ ಟೆಕ್ಸಾಸ್ ಮೂಲದ ಆರ್ಥಪೆಡಿಕ್ಸ್ ಸಂಸ್ಥೆ ಜತೆಗೆ ಕೈಜೋಡಿಸಿದೆ. ಕೆನರಾ ಆರ್ಥಪೆಡಿಕ್ಸ್ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪೂರ್ಣ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ನೇರಪ್ರಸಾರವನ್ನು ಆಸ್ಪತ್ರೆ ಆಡಿಟೋರಿಯಂನಲ್ಲಿ ಆಯೋಜಿಸಿತ್ತು. ಬಡಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂತಾರಾಷ್ಟ್ರೀಯ ಸಂಸ್ಥೆ ಜತೆಗೆ ಕೈಜೋಡಿಸಲಾಗಿದೆ. ರೋಗಿಗಳನ್ನು ಅತಿಥಿಯಂತೆ ಆಸ್ಪತ್ರೆ ನೋಡಿಕೊಳ್ಳುತ್ತಿದ್ದು, ಹಣ…

Read More

UN NETWORKS ಉಪ್ಪಿನಂಗಡಿ : ಸಮಾಜಕ್ಕೆ ಸರಿಯಾದ ದಿಗ್ದರ್ಶನ ನೀಡಿ ಸತ್ಪಥಕ್ಕೆ ಕೊಂಡೊಯ್ಯುವ ಬಹಳ ದೊಡ್ಡ ಜವಾಬ್ದಾರಿಯು ಧಾರ್ಮಿಕ ವಿದ್ವಾಂಸರ ಮೇಲಿದ್ದು ಅದನ್ನು ನಿರ್ವಹಣೆ ಮಾಡಲು ಅಗತ್ಯವಾದ ಪ್ರಾಮಾಣಿಕತೆ, ಬಧ್ದತೆ, ಮತ್ತು ಪ್ರಾಯೋಗಿಕ ತರಬೇತಿ ಉಲಮಾಗಳಿಗೆ ಅನಿವಾರ್ಯ ವಾಗಿದೆ ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಕಾರ್ಯದರ್ಶಿ ಮೌಲಾನಾ ಪೆರೋಡ್ ಅಬ್ದುಲ್ರಹ್ಮಾನ್ ಸಖಾಫಿ ಪ್ರಸ್ತಾಪಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾದ ವತಿಯಿಂದ ಉಪ್ಪಿನಂಗಡಿ ತಾಜುಲ್ ಉಲಮಾ ವೇದಿಕೆಯಲ್ಲಿ ಹಮ್ಮಿಕೊಂಡ ಬೃಹತ್ ಉಲಮಾ ಕಾನ್ಫರೆನ್ಸ್ ನ ಉದ್ಘಾಟನಾ ಸಂಗಮದಲ್ಲಿ ಅವರು “ಉಲಮಾಗಳ ಜವಾಬ್ದಾರಿ” ಎಂಬ ವಿಷಯ ದಲ್ಲಿ ಉಪನ್ಯಾಸ ಮಾಡುತ್ತಿದ್ದರು. ಆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ ಉಲಮಾ ಕಾನ್ಫರೆನ್ಸ್ ಕಾಲ ಘಟ್ಟದ ಬಲು ದೊಡ್ಡ ಬೇಡಿಕೆಯ ಈಡೇರಿಕೆಗೆ ಸಮರ್ಪಕ ಹೆಜ್ಜೆ ಯಾಗಿದ್ದು ಉಲಮಾಗಳ ನಾಯಕತ್ವದಲ್ಲಿ ಸಮುದಾಯವು ಪರಂಪರಾಗತ ಅಹ್ಲುಸ್ಸುನ್ನತಿ ವಲ್ ಜಮಾ ಅತಿನ ತತ್ವಾದರ್ಶಗಳ ತಳಹದಿಯಲ್ಲಿ ಒಗ್ಗಟ್ಟಿನಲ್ಲಿ ಮುಂದುವರಿಯ ಬೇಕೆಂದು ಅವರು ಕರೆ ನೀಡಿದರು. ಸಮಾವೇಶದಲ್ಲಿ ಕರ್ನಾಟಕ ಸುನ್ನೀ ಕೋ…

Read More

UN NETWORKS ಬಂಟ್ವಾಳ: ತಾಲೂಕು, ಕಾವಳಪಡೂರು ಗ್ರಾಮದ ವಗ್ಗ ಸರ್ಕಾರಿ ಫ್ರೌಢ ಶಾಲಾ ವಿಭಾಗದ ಪ್ರಭಾರ ಮುಖ್ಯೋಪಾದ್ಯಾಯರಾದ ಆಂಗ್ಲ ಭಾಷಾ ಶಿಕ್ಷಕ, ಸ್ವಚ್ಚ ಸುಂದರ ಶಾಲಾ ಪರಿಸರ ನಿರ್ಮಿಸುವಲ್ಲಿ ಆಧುನಿಕ ಮೂಲ ಸಾಮರ್ಥಗಳ ಜೊತೆಗೆ ಕಲಿಕೆಯ ಭದ್ರ ಬುನಾದಿ ಹಾಕಿ ಪ್ರಾಮಾಣಿಕ ಪ್ರಯತ್ನದ ಮೂಲಕ ಯಶಸ್ವಿ 2017-18 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶೇಖ್ ಆದಂ ಸಾಹೇಬ್ ಅವರಿಗೆ ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ವಗ್ಗದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜವಾನ್ ಫ್ರೆಂಡ್ಸ್ ತಂಡದ ಸದಸ್ಯ ಹಾಗೂ ವಗ್ಗ ಶಾಲೆಯ ಹಳೆ ವಿದ್ಯಾರ್ಥಿ ನೌಶಾದ್ ವಗ್ಗ ಮಾತನಾಡಿ ಆದಂ ಸಾಹೇಬ್ ಅವರು ಮಾದರಿ ಶಿಕ್ಷಕರಾಗಿದ್ದಾರೆ ವಿದ್ಯಾರ್ಥಿಗಳೊಂದಿಗೆ ಮತ್ತು ಪೋಷಕರೊಂದಿಗೆ ಬೆರೆತುಕೊಳ್ಳುವ ಇವರ ಉತ್ತಮ ನಡತೆಯೇ ಅವರ ಪ್ರಶಸ್ತಿಗೆ ಕಾರಣವಾಗಿದೆ . ಮುಂದಿನ ದಿನಗಳಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ದೊರಕಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಜವಾನ್…

Read More

UN NETWORKS ತೊಕ್ಕೊಟ್ಟು: ಪೆರ್ಮನ್ನೂರು ಸಂತ ಸೆಬಾಸ್ತಿಯನ್ನರ ಧರ್ಮಕೇಂದ್ರದ ಶತಮಾನೋತ್ಸವ ವರ್ಷದ ಅಂಗವಾಗಿ ಸಿ.ಎಲ್.ಸಿ. ಪೆರ್ಮನ್ನೂರು ಇದರ ವತಿಯಿಂದ ಕುಟುಂಬ ಸಂಭ್ರಮ ಕಾರ್ಯಕ್ರಮ ಧರ್ಮಕೇಂದ್ರದ ಮೈದಾನದಲ್ಲಿ ನಡೆಯಿತು. ಅಂತರಾಷ್ಟ್ರೀಯ`ಮಿಸ್ಟರ್ ವಲ್ರ್ಡ್’ ಖ್ಯಾತಿಯ ಬಾಡಿ ಬಿಲ್ಡರ್ ರೈಮಂಡ್ ಡಿ’ಸೋಜಾ, ಬಾಡಿ ಬಿಲ್ಡರ್ಸ್ ಎಸೋಸಿಯೇಶನ್‍ನ ಅಧ್ಯಕ್ಷ ಭಾಸ್ಕರ ತೊಕ್ಕೊಟ್ಟು, ಅಂತರರಾಷ್ಟ್ರೀಯ ಪವರ್ ಲಿಫ್ಟರ್ ಗೀತಾ ಬಾಯಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಬಾಡಿ ಬಿಲ್ಡರ್ ರೋಶನ್ ಫೆರಾವೋ ಇವರನ್ನು ಸನ್ಮಾನಿಸಿದರು. ಧರ್ಮಕೇಂದ್ರದ ಪ್ರಧಾನಗುರು ಫಾದರ್ ಜೆ.ಬಿ. ಸಲ್ದಾನ ಅವರ ಸನ್ಮಾನ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಚರ್ಚ್‍ನ ವಿವಿಧ ವಾರ್ಡ್‍ನವರಿಗೆ ಸ್ಪರ್ಧೆ ಏರ್ಪಡಿಸಲಾಯಿತು.

Read More

UN NETWORKS ಉಳ್ಳಾಲ: ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯ ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಕೈ ಜೋಡಿಸುವುದು ಕಾಲ ಘಟ್ಟದ ಅನಿವಾರ್ಯತೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಲಾ ಶೆಟ್ಟಿ ಹೇಳಿದರು. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ ಸರಕಾರಿ ಪ್ರಾಥಮಿಕ ಶಾಲೆ ಗಡಿಯಾರ ಇಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಂ.ಜೆ.ಎಂ. ಗಡಿಯಾರ್ ಇಲ್ಲಿನ ಖತೀಬರಾದ ಟಿ.ಪಿ. ಜಮಾಲುದ್ದೀನ್ ದಾರಿಮಿ ಪ್ರಾರ್ಥಿಸಿದರು. ಕಣಚೂರು ಸಮೂಹ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಅಧ್ಯಕ್ಷತೆಯನ್ನು ವಹಿಸಿದ್ದರು. ಸುಮಾರು 400ಕ್ಕೂ ಅಧಿಕ ಮಂದಿ ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಮುಖ್ಯ ಅತಿಥಿಗಳಾಗಿ ಎಂ.ಜೆ.ಎಂ. ಗಡಿಯಾರ್‍ನ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಪಾರ್ಪಕಜೆ, ಸರಕಾರೀ ಪ್ರಾರ್ಥಮಿಕ ಶಾಲೆ ಗಡಿಯಾರಿನ ಸಹ ಶಿಕ್ಷಕರಾದ ಸದಾನಂದ ಶೆಟ್ಟಿ ನೇರಳಕಟ್ಟೆ…

Read More

UN NETWORKS ಕೈರಂಗಳ:ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ಇದರ ವತಿಯಿಂದ ಕೆ.ಸಿ.ಸಿ ಮುಡಿಪು ಇದರ ಸಹಕಾರದೊಂದಿಗೆ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಸಂಸ್ಥೆಯ ಕಛೇರಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ನರಿಂಗಾನ ಗ್ರಾ.ಪಂ ಸದಸ್ಯರಾದ ಮುರಳಿದರ್ ಶೆಟ್ಟಿ ಇವರು ಉಧ್ಘಾಟಿಸಿದರು. ಹಿರಿಯರಾದ ಟಿ.ಕೆ ಇಸ್ಮಾಯಿಲ್ ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.ತಾ.ಪಂ ಸದಸ್ಯರಾದ ಹೈದರ್ ಕೈರಂಗಳ ಅವರು ಮಾತನಾಡಿ ಅಲ್-ಅಮೀನ್ ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ಸಂಧರ್ಭದಲ್ಲಿ S.J.M ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮುಹಿಯ್ಯದ್ದೀನ್ ಸಅದಿ ತೋಟಾಲ್ ಇವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಅಹ್ಮದ್ ಕುಂಙಿ,ಪಂ.ಸದಸ್ಯರಾದ ಹನೀಫ್,ಪ್ರಮುಖರಾದ ಅಬ್ಬು ಹಾಜಿ ಪಡಿಕ್ಕಲ್,ಅಕ್ಬರ್ ಪಿ.ಎ,ಮುನೈಝ್ ಕೈರಂಗಳ,ಶರೀಫ್ ಕೈರಂಗಳ,ಹಂಝ ಮತ್ತಿತರು ಉಪಸ್ಥಿತರಿದ್ದರು.ಪ್ರ.ಕಾರ್ಯದರ್ಶಿ ನಯೀಮುಲ್ ಹಕ್ ಸ್ವಾಗತಿಸಿ,ನಾಸೀರ್ ಕಾಯಾರ್ ವಂದಿಸಿದರು.

Read More

UN NETWORKS ಕೊಣಾಜೆ: ತಮ್ಮ ಅಪೂರ್ವವಾದ ಪ್ರತಿಭೆಯ ಮೂಲಕ ಯಕ್ಷಗಾನ ಲೋಕದಲ್ಲಿ ತನ್ನದೇ ಛಾಪು ಮೂಡಿಸಿ ಮೆರೆದವರು ಚಿಟ್ಟಾಣಿ ರಾಮಚಂದ್ರ ಹೆಗಡೆಯವರು. ಅವರು ರಂಗದಲ್ಲಿ ಯಾವುದೇ ಪಾತ್ರವನ್ನು ನಿರ್ವಹಿಸಿದರೂ ಪಾತ್ರದ ಅಂತರಾಳಕ್ಕೆ ಇಳಿದು ಕುಣಿತ, ಭಾವಾಭಿನಯದ ಸೊಗಸಿನೊಂದಿಗೆ ಪಾತ್ರಕ್ಕೆ ನೈಜತೆಯನ್ನು ಕಟ್ಟಿಕೊಡುತ್ತಿದ್ದರು. ಅವರ ಅಗಲಿಕೆ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟ ಎಂದು ಯಕ್ಷಗಾನ ಗುರು, ಅಧ್ಯಾಪಕ ಸದಾಶಿವ ಶೆಟ್ಟಿಗಾರ್ ಕಿನ್ನಿಗೋಳಿ ಅವರು ಅಭಿಪ್ರಾಯ ಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ನಡೆದ `ಚಿಟ್ಟಾಣಿ ನೆನಪು’ ಸಂತಾಪ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಕ್ಷಗಾನ ಕ್ಷೇತ್ರದಲ್ಲಿ ಅದೆಷ್ಟೋ ಮಹಾನ್ ಸಾಧಕರು ಯಕ್ಷಗಾನ ಕ್ಷೇತ್ರದ ಬೆಳವಣಿಗೆಗೆ ಒಂದಲ್ಲ ಒಂದು ರೀತಿಯಲ್ಲಿ ಕಾರಣಕರ್ತರಾಗಿದ್ದಾರೆ. ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ತನ್ನ ಪ್ರಾಮಾಣಿಕವಾದ ಕಲಾಸೇವೆಯೊಂದಿಗೆ ಯಕ್ಷರಂಗದ ಶ್ರೀಮಂತಿಗೆ ತನ್ನದೇ ಆದ ಕೊಡುಗೆ ನೀಡಿದವರಾಗಿದ್ದಾರೆ. ಈ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಹಾಗೂ ಪರಿಶ್ರಮಕ್ಕೆ ತಕ್ಕಂತೆ…

Read More

UN NETWORKS ಉಳ್ಳಾಲ: ಉಳ್ಳಾಲಬೈಲಿನ ಮಾತಾ ಕಾಂಪ್ಲೆಕ್ಸ್‍ನಲ್ಲಿ  ನೂತನವಾಗಿ ಶುಭಾರಂಭಗೊಂಡ  ` ತೂಭಾ ಫರ್ನಿಚರ್ಸ್ ‘ ಮಿತದರದ ಫರ್ನಿಚರ್ ಮಾರಾಟದ ಮಳಿಗೆಯ ಷೋರೂಂನ   ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಉಳ್ಳಾಲ ಕೇಂದ್ರ ಜುಮಾ ಮಸೀದಿಯ ಖತೀಬರಾದ ಮೊಹಮ್ಮದ್ ಶಮೀಮ್ ಸಖಾಫಿ  ದುಆ  ನೆರವೇರಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಅಧ್ಯಕ್ಷ   ಹಾಜಿ ಅಬ್ದುಲ್ ರಶೀದ್ ಮಾತನಾಡಿ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಉಳ್ಳಾಲದಲ್ಲಿ ವಸತಿ ಸಂಕೀರ್ಣಗಳು ಹೆಚ್ಚುತ್ತಿದ್ದು, ಅವರ ಮನೆಗಳಿಗೆ  ಫರ್ನಿಚರ್‍ಗಾಗಿ  ಮಂಗಳೂರಿಗೆ ಅಲೆದಾಡಬೇಕಾದ ಅನಿವಾರ್ಯತೆಯಿಲ್ಲ. ಉಳ್ಳಾಲ ಬೈಲಿನ ತೂಭಾ ಫರ್ನಿಚರ್ ಅಂಗಡಿಯಿಂದಲೇ ಮಿತದರದಲ್ಲಿ ಪಡೆಯುವಂತಹ ವ್ಯವಸ್ಥೆ ಆಗಿದೆ.  ವ್ಯಾಪಾರಸ್ಥರು ವ್ಯಾವಹಾರಿಕವಾಗಿ ಮಾತ್ರ  ಒಗ್ಗಿಕೊಳ್ಳದೆ ಸಾಮರಸ್ಯ  ಹಾಗೂ ಶಾಂತಿಯ ಉಳ್ಳಾಲವನ್ನು ರೂಪಿಸುವಲ್ಲಿ  ಸಹಕರಿಸಬೇಕಿದೆ  ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಉಳ್ಳಾಲದಲ್ಲಿ  ತೂಭಾ ಫರ್ನಿಚರ್ ಮಳಿಗೆ ಆರಂಭಗೊಳ್ಳುವ ಮೂಲಕ ಉಳ್ಳಾಲ ಭಾಗದ ಜನರಿಗೆ ವಿವಿಧ ವಿನ್ಯಾಸಗಳ  ಫರ್ನಿಚರ್…

Read More

UN NETWORKS ಉಳ್ಳಾಲ: ರಾಜ್ಯ, ರಾಷ್ಟ್ರ ರಹಿತವಾಗಿ ಕನ್ನಡದ ಜನರ ಏಳಿಗೆಗಾಗಿ ಹೋರಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಯುವಸಮುದಾಯಕ್ಕೆ ನಾಯಕತ್ವದ ಗುಣವನ್ನು ಕಲಿಸುತ್ತಾ ಬಂದಿದೆ ಎಂದುಕರವೇ ಚಿಕ್ಕಮಗಳೂರು ಹಾಗೂ ದ.ಕ ಉಸ್ತುವಾರಿ ಜಿಲ್ಲಾಧ್ಯಕ್ಷ ಜಗದೀಶ್ ಅರಸ್ ತೇಗೂರು ಹೇಳಿದ್ದಾರೆ. ಅವರು ಉಳ್ಳಾಲ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಉಳ್ಳಾಲ ಘಟಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಳ್ಳಾಲ ಭಾಗದಲ್ಲಿ ಜಾತಿಗಳ ಮಧ್ಯೆ ಹೊಡೆದಾಳುವ ನೀತಿ ನಡೆಯುತ್ತಿದೆ. ಈ ನಡುವೆ ಕನ್ನಡವೇ ಜಾತಿ , ಧರ್ಮ ಅನ್ನುವುದನ್ನು ಪಾಲಿಸುತ್ತಾ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯನ್ನು ಉಳ್ಳಾಲದಲ್ಲಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ಮೂಲಕ ಶಾಂತಿಯುತ ಉಳ್ಳಾಲದ ಜತೆಗೆ , ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯನ್ನು ಕಲ್ಪಿಸಿದಂತಾಗುತ್ತದೆ ಎಂದರು. ಕರವೇ ದ,ಕ ಜಿಲ್ಲಾಧ್ಯಕ್ಷ ಅನಿಲ್ ದಾಸ್ ಮಾತನಾಡಿ, ಅನಿಲ್ ದಾಸ್ ಮಾತನಾಡಿ ಕೆಲವರ ಸ್ವಾರ್ಥಕ್ಕಾಗಿ ಇಡೀ ಉಳ್ಳಾಲದ ನಾಗರಿಕರನ್ನು ಭಯಪಡಿಸುವಂತಹ…

Read More