Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು: ಶ್ರೀಮಂತರು ಬಡವರನ್ನು ಗುರುತಿಸಿ ಸಹಾಯ ಮಾಡಲಿ ಎಂದು ಕರೆ ನೀಡುವ ಇಸ್ಲಾಂ ಧರ್ಮ ಭಿಕ್ಷಾಟನೆಗೆ ಎಂದಿಗೂ ಪ್ರೋತ್ಸಾಹ ನೀಡುವುದಿಲ್ಲ ಎಂದು ಮಲ್ ಜಅಹ್ ಸಂಸ್ಥೆಯ ಶಿಲ್ಪಿ ಅಸಯ್ಯದ್ ಜಲಾಲುದ್ದೀನ್ ಅಲ್-ಹಾದಿ ಉಜಿರೆ ತಂಙಳ್ ಹೇಳಿದ್ದಾರೆ. ಅವರು ಕುಂಪಲದ ಎಮ್.ಆರ್ ಪ್ಯಾಲೇಸ್ ನಲ್ಲಿ ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ವತಿಯಿಂದ ಶುಕ್ರವಾರ ನಡೆದ ಬಡ ಕುಟುಂಬದ ಹೆಣ್ಣಿನ ಮದುವೆಗೆ ಚಿನ್ನ ವಿತರಣೆ ಮತ್ತು ಪ್ರಾರ್ಥನಾ ಸಂಗಮದ ನೇತ್ರತ್ವ ವಹಿಸಿ ಮಾತನಾಡಿದರು. ಇಸ್ಲಾಮಿನ ನಿಯಮ ಪ್ರಕಾರ ಶ್ರೀಮಂತರು ತನ್ನ ಆಸ್ತಿಯ ಎರಡು ಶೇಕಡಾ ಅರ್ಹ ಬಡವನನ್ನು ಗುರುತಿಸಿ ನೀಡಬೇಕು. ಅದರೆ ಇಂದು ಬಡವ ಸಹಾಯ ಯಾಚಿಸಿಲು ಶ್ರೀಮಂತರನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದ್ದು ಇದು ಸರಿಯಲ್ಲ. ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್ ನ ಈ ಸೇವೆಯ ಮಹತ್ವ ತಿಳಿದು ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್…

Read More

UN NETWORKS ಉಳ್ಳಾಲ: ಸಚಿವ ಖಾದರ್ ಅವರನ್ನು ಮುಕ್ಕಚೇರಿಯಿಂದ ಹಿಂದಕ್ಕೆ ಕಳುಹಿಸಿದರೆ ಸಾಲದು ,ವಿಧಾನಸಭೆಯಿಂದಲೇ ಅವರನ್ನು ಹೊರ ಕಳುಹಿಸುವ ಮೂಲಕ ಗಾಂಜ ಮುಕ್ತ ಸಮಾಜವನ್ನು ನಿರ್ಮಿಸಬೇಕಿದೆ ಎಂದು ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದ್ದಾರೆ. ಅವರು ಗಾಂಜಾ ವಿರುದ್ಧ ಧ್ವನಿ ಎತ್ತಿದ್ದ ಸಾಮಾಜಿಕ ಕಾರ್ಯಕರ್ತ ಜುಬೈರ್ ಹತ್ಯೆ ಖಂಡಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಶುಕ್ರವಾರ ಸಂಜೆ ಮುಕ್ಕಚ್ಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಿಂದಾಗಿ ಶಾಂತಿಭಂಗ ಉಂಟಾಗುತ್ತಿದೆ. ಯುವಸಮುದಾಯ ಸಮಾಜಘಾತುಕರಾಗಿ ಬೆಳೆಯುತ್ತಿದ್ದಾರೆ ಅನ್ನುವ ಸಾಮಾಜಿಕ ಕಳಕಳಿಯನ್ನು ಮುಂದಿಟ್ಟು ಜುಬೈರ್ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಜೈಲುಪಾಲಾದ 18 ಪ್ರಕರಣಗಳ ಆರೋಪಿಯೇ ಜೈಲಿನಿಂದ ಬಿಡುಗಡೆಯಾಗಿ ಜುಬೈರ್ ಹತ್ಯೆ ನಡೆಸಿರುವುದು ಪೊಲೀಸ್ ವೈಫಲ್ಯತೆಯನ್ನು ತೋರಿಸುತ್ತದೆ. 18 ಪ್ರಕರಣಗಳ ಆರೋಪಿಗಳನ್ನು ಹತೋಟಿಯಲ್ಲಿಡಲು ಸಾಧ್ಯವಾಗದ ಉಳ್ಳಾಲ ಪೊಲೀಸರು ಕುರಿ ಕಾಯುವ ಕೆಲಸವನ್ನು ಮಾಡಬೇಕಿದೆ,. ಉಳ್ಳಾಲ ಪೊಲೀಸರು ಪತ್ತೆ ಹಚ್ಚದ ಹಲವು ಕೊಲೆ, ಕೊಲೆಯತ್ನ ಪ್ರಕರಣಗಳಿವೆ. ಕ್ಷಣಕ್ಷಣದಲ್ಲಿ ಇನ್ಸ್ ಪೆಕ್ಟರ್ ಬದಲಾವಣೆ ಮಾಡಿದರೆ ಸಾಲದು, 7-8…

Read More

UN NETWORKS ಉಳ್ಳಾಲ: ಮೃತ ಜುಬೈರ್ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದವರಾಗಿದ್ದಾರೆ. ದಿನಗೂಲಿ ನಿರ್ವಹಿಸಿ ಕುಟುಂಬ ಸಲಹುತ್ತಿದ್ದ ಜುಬೈರ್ ಅವರ ಸಾವಿನಿಂದ ಕುಟುಂಬದ ಆಧಾರ ಸ್ತಂಭ ಕಳಚಿದಂತಾಗಿದೆ. ಅಲ್ಲದೆ ಇದರಿಂದ ಜುಬೈರ್ ಅವರ ಶಾಲೆ ಮತ್ತು ಕಾಲೇಜಿಗೆ ತೆರಳುತ್ತಿರುವ ಮಕ್ಕಳ ವಿದ್ಯಾಭ್ಯಾಸದಲ್ಲಿ ಮೊಟಕುಗೊಳಿಸುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮುನೀರ್ ಬಾವಾ ಹಾಜಿ ಅವರು ಜುಬೈರ್ ಅವರ ಆರು ಮಕ್ಕಳ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ತಿಳಿಸಿ ಆರು ಮಂದಿ ಎಳೆಯ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದುಕೊಂಡಿದ್ದಾರೆ.

Read More

UN NETWORKS ಉಳ್ಳಾಲ: ಸಚಿವ ಖಾದರ್ ಅವರಿಗೆ ಘೇರಾವ್ ಹಾಕಿದ ಅರ್ಧ ಗಂಟೆಯಲ್ಲೇ ಹತ್ಯೆಗೀಡಾದ ಜುಬೈರ್ ಮನೆಗೆ ಭೇಟಿ ನೀಡಲು ಬಂದ ಸಂಸದ ನಳಿನ್ ಕುಮಾರ್ ಅವರನ್ನು ಮುಕ್ಕಚ್ಚೇರಿ ನಿವಾಸಿಗಳು ಸ್ವಾಗತಿಸಿ ಜುಬೈರ್ ವಾಸವಿದ್ದ ಬಾಡಿಗೆ ಮನೆಗೆ ಕರೆದೊಯ್ದಿದ್ದಾರೆ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕಟೀಲ್ ಮನೆಮಂದಿಗೆ ಸಾಂತ್ವನ ಹೇಳಿದರಲ್ಲದೆ, ಘಟನೆಯನ್ನು ಖಂಡಿಸಿದರು. ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಸಂಸದರು ಜುಬೈರ್ ಅವರನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆಸಲಾಗಿದೆ. ಕೇರಳದ ಬಾಹ್ಯಶಕ್ತಿಯಿಂದಲೇ ಜುಬೈರ್ ಹತ್ಯೆ ನಡೆದಿದೆ. ಮೃತನ ಕುಟುಂಬಕ್ಕೆ ರಾಜ್ಯ ಸರಕಾರ ಕನಿಷ್ಟ ರೂ. 50 ಲಕ್ಷ ಪರಿಹಾರವನ್ನು ಒದಗಿಸಬೇಕಿದೆ. ಅಲ್ಲದೆ ಹಂತಕರ ಬಂಧನದಲ್ಲಿ ಪೊಲೀಸರನ್ನು ನಿಯಂತ್ರಿಸಲು ಸರಕಾರ ಯತ್ನಿಸಿದಲ್ಲಿ ಉಗ್ರ ಹೋರಾಟ ಎದುರಿಸಬೇಕಾದೀತು ಎಂದ ಅವರು ಉಳ್ಳಾಲ ಮತ್ತು ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಹಿತಕರ ಘಟನೆಗಳಲ್ಲಿ ಮಾದಕ ವ್ಯಸನಿಗಳ ಫಾತ್ರವೇ ಹೆಚ್ಚಿದೆ. ಈ ಹಿಂದೆಯೂ ಮಾದಕ ವ್ಯಸನ ಜಾಲದ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚಿಸಲಾಗಿತ್ತು. ಆದರೆ…

Read More

UN NETWORKS ಉಳ್ಳಾಲ: ಮುಕ್ಕಚ್ಚೇರಿ ನಿವಾಸಿ ಜುಬೈರ್ ಹತ್ಯೆ ಹಿನ್ನೆಲೆಯಲ್ಲಿ , ಮೃತರ ಮನೆಗೆ ಭೇಟಿ ನೀಡಲು ಬಂದ ಸಚಿವ ಖಾದರ್ ಅವರನ್ನು ಉದ್ರಿಕ್ತ ಗುಂಪು ಘೇರಾವ್ ಹಾಕಿ ವಾಪಸ್ಸು ಕಳುಹಿಸಿದ ಘಟನೆ ಮುಕ್ಕಚ್ಚೇರಿ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದ್ದು, ಸಚಿವರನ್ನು ದೂಡಿಕೊಂಡೇ ಹಿಂದಕ್ಕೆ ಕಳುಹಿಸಿದ ಗುಂಪು ಕಲ್ಲು ತೂರಾಟ ನಡೆಸಿದರೂ ಯಾವುದೇ ಹಾನಿಯಾಗಿಲ್ಲ. ಅ.4 ರಂದು ಮುಕ್ಕಚ್ಚೇರಿ ನಿವಾಸಿ ಜುಬೈರ್ ಹತ್ಯೆ ಮಸೀದಿ ಎದರುಗಡೆ ನಡೆದಿತ್ತು. ಐವರ ತಂಡ ತಲವಾರಿನಿಂದ ಕಡಿದು ಹತ್ಯೆ ನಡೆಸಿತ್ತು. ಸಂಶಯಿತ ಆರೋಪಿಗಳು ಯುವಕಾಂಗ್ರೆಸ್ ಮುಖಂಡನ ಬೆಂಬಲಿಗರೆಂದು ಸ್ಥಳೀಯರ ಆರೋಪ ವ್ಯಕ್ತವಾಗಿತ್ತು. ಈ ನಡುವೆ ಜುಬೈರ್ ಬಿಜೆಪಿ ಕಾರ್ಯಕರ್ತರಾಗಿದ್ದರು ಎಂಬುದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಅಲ್ಲದೆ ಜುಬೈರ್ ಹತ್ಯೆಗೆ ಸಚಿವ ಖಾದರ್ ಪರೋಕ್ಷ ಕಾರಣವೆಂದು ಆರೋಪಿಸಿದ ಮುಕ್ಕಚ್ಚೇರಿ ನಿವಾಸಿಗಳು ಜುಬೈರ್ ದಫನ ಸಂದರ್ಭವೂ ಸಚಿವರು ಬಾರದೇ ಇರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶುಕ್ರವಾರ ಸಂಜೆ ಡಿವೈಎಫ್ ಐ ನೇತೃತ್ವದಲ್ಲಿ ಮುಕ್ಕಚ್ಚೇರಿ ಮಸೀದಿ ಎದುರುಗಡೆ ಜುಬೈರ್…

Read More

UN NETWORKS ಉಳ್ಳಾಲ : ಜಿಲ್ಲೆಯಲ್ಲಿ ಮಾದಕದ್ರವ್ಯ ಮಾರಾಟಗಾರರಿಗೆ ಮತ್ತು ರೌಡಿಗಳಿಗೆ ಸಹಕಾರ ನೀಡುವ ಮೂಲಕ ರಾಜ್ಯ ಸರಕಾರ ಪೊಲೀಸರಿಗೆ ಕರ್ತವ್ಯ ನಡೆಸಲು ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ಚೂರಿ ಇರಿತ ಕೊಲೆಗಳಾಗುತ್ತಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದ್ದಾರೆ. ತೊಕ್ಕೊಟ್ಟು ಜಂಕ್ಷನ್‍ನಲ್ಲಿ ಕಾಂಗ್ರೆಸ್‍ನ ದುರಾಡಳಿತ, ಸಚಿವ ಖಾದರ್ ಅವರ ಅಸಮರ್ಥತನದ ವಿರುದ್ಧ ಬಿಜೆಪಿ ಕಾರ್ಯಕರ್ತ ಝುಬೇರ್ ಹತ್ಯೆ ವಿರೋಧಿಸಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಕೊಲೆಗಡುಕ ರಾಜ್ಯವಾಗಿ ಪರಿವರ್ತನೆಯಾಗುತ್ತಿದೆ. , ಕಲಬುರ್ಗಿ, ಗೌರೀ ಲಂಕೇಶ್ ಕೊಲೆಯಾದರೂ ಕೊಲೆಗಡುಕರು ಪತ್ತೆಯಾಗಿಲ್ಲ ಸಂಘ ಪರಿವಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗುತ್ತಿದೆ . ಕೋಮು ಸೌಹಾರ್ದ ಇದ್ದ ಜಿಲ್ಲೆಯನ್ನು ಕಾಂಗ್ರೆಸ್ ಸಿದ್ಧರಾಮಯ್ಯ ಆಡಳಿತಕ್ಕೆ ಬಂದ ನಂತರ ಜಿಲ್ಲೆ ಕೋಮು ಸೌಹಾರ್ದತೆಯನ್ನು ಕದಡಿದೆ. ಒಂದು ವರ್ಗ, ಕೊಲೆಗಡುಕರನ್ನು, ಮಾದಕ ದ್ಯವ್ಯ ಆರೋಪಿಗಳನ್ನು ಓಲೈಸುವುದರಿಂದ ಸ್ಥಾನ ಭದ್ರವಾಗಿ ಉಳಿಯಲು ಸಾಧ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ…

Read More

UN NETWORKS ಉಳ್ಳಾಲ: ಸಯ್ಯದ್ ಮದನಿ ಉಳ್ಳಾಲ ದರ್ಗಾ ಆಡಳಿತ ಸಮಿತಿ ಪ್ರಮುಖರು ಅದ್ಯಕ್ಷ ಹಾಜಿ ಅಬ್ದುಲ್ ರಶೀದ್ ರವರ ನೇತೃತ್ವದಲ್ಲಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ನೀಡಿ ಸಯ್ಯದ್ ಮದನಿ ದರ್ಗಾ ಅಧೀನದಲ್ಲಿ ಸರ್ವ ಧರ್ಮದವರಿಗೆ ಸಹಕಾರಿಯಾಗುವಂತೆ ಹಲವಾರು ವಿದ್ಯಾಸಂಸ್ಥೆಗಳು ಕಾರ್ಯಚರಿಸುತ್ತಿರುವುದರ ಕುರಿತು ವಿವರಿಸಿ ಸರ್ಕಾರದ ವತಿಯಿಂದ ಪೂರ್ಣ ಸಹಕಾರವನ್ನು ಕೋರಿದರು. ನಿಯೋಗದಲ್ಲಿ ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹಾ, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಎ ಕೆ ಮೊಯಿದೀನ್ ಇನ್ನಿತರರು ಉಪಸ್ಥಿತರಿದ್ದರು. ( ಇತ್ತೀಚೆಗೆ ಉಳ್ಳಾಲದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಜುಬೈರ್ ರವರ ಹಂತಕರನ್ನ ಆದಷ್ಟು ಭೇಗ ಬಂಧಿಸಿ ಕಾನೂನು ಸುವ್ಯವಸ್ಥೆ ಭದ್ರಪಡಿಸಬೇಕಾಗಿ ನಿಯೋಗವು ಮುಖ್ಯಮಂತ್ರಿಯವರಲ್ಲಿ ಮನವಿ ಸಲ್ಲಿಸಿತು.)

Read More

UN NETWORKS ಕೋಟೆಕಾರ್: ಕೋಟೆಕಾರ್ ಪಟ್ಟಣ ಪಂಚಾಯತ್‍ಗೆ ಕರ್ನಾಟಕ ಸರ್ಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಕಾಂಗ್ರೇಸ್ಸ್‍ನ ಪುರುಷೋತ್ತಮ್ ಅಂಚನ್ ವೈಧ್ಯನಾಥ ನಗರ ಇವರನ್ನು ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೇಸ್ಸ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ಇವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.

Read More

UN NETWORKS ಮಂಗಳೂರು: ಕರ್ನಾಟಕ ಜಂಇಯ್ಯತುಲ್ ಉಲಮಾ ಇದರ ವತಿಯಿಂದ ಅಕ್ಟೋಬರ್ ತಿಂಗಳ 8,9 ಮತ್ತು 10 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಉಲಮಾ ಕಾನ್ಫರೆನ್ಸನ್ನು ವಿಜಯಗೊಳಿಸುವಂತೆ ಎಸ್.ಇ.ಡಿ.ಸಿ. ಮುಅಲ್ಲಿಮರಿಗೆ ಕರೆ ನೀಡಿದೆ. ಅಕ್ಟೋಬರ್ 9 ರ ರಾತ್ರಿ ಹಾಗೂ 10 ರ ಬೆಳಿಗ್ಗಿನ ತರಗತಿಗಳಿಗೆ ಸಮ್ಮೇಳನ ಪ್ರಯುಕ್ತ ವಿದ್ಯಾಭ್ಯಾಸ ಬೋರ್ಡ್ ರಜೆ ಘೋಷಣೆ ಮಾಡಿರುವುದರಿಂದ ಎಲ್ಲಾ ಮುಅಲ್ಲಿಮರು ಕ್ಯಾಂಪಿನಲ್ಲಿ ಭಾಗವಹಿಸುವಂತೆ ಅದು ಮುಅಲ್ಲಿಮರಲ್ಲಿ ವಿನಂತಿಸಿಕೊಂಡಿದೆ. ಉಲಮಾ ಕಾನ್ಫರೆನ್ಸ್ ಯಶಸ್ವಿಗೆ ಮದನೀಸ್ ಅಸೋಸಿಯೇಷನ್ ಕರೆ: ಕರ್ನಾಟಕ ಜಂಇಯ್ಯತುಲ್ ಉಲಮಾ ಇದರ ವತಿಯಿಂದ ಅಕ್ಟೋಬರ್ ತಿಂಗಳ 8,9 ಮತ್ತು 10 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಉಲಮಾ ಕಾನ್ಫರೆನ್ಸ್ ನಲ್ಲಿ ಎಲ್ಲಾ ಮದನಿಗಳು ಭಾಗವಹಿಸುವ ಮೂಲಕ ಯಶಸ್ವಿ ಗೊಳಿಸುವಂತೆ ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿಯು ಸರ್ವ ಮದನಿಗಳಿಗೆ ಕರೆ ನೀಡಿದೆ.

Read More

UN NETWORKS ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಮಡ್ಯಾರು, ಪನೀರು ಹಾಗೂ ಸಂಕೊಳಿಗೆ ಪ್ರದೇಶಗಳ ಕೆಲವು ರಸ್ತೆಗೆ ಕಾಂಕ್ರೇಟಿಕರಣಕ್ಕೆ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು ವಿವಿಧ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮಾಂತರ ಪ್ರದೇಶ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸಿದ್ದರ ಫಲ ಇದಾಗಿದ್ದು ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ರಾಜಕೀಯ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕಾಗಿದೆ ಅದಲ್ಲದೆ ಕೌನ್ಸಿಲರ್‍ರವರಿಗೆ ಇನ್ನೂ ಕಾಲ ಮಿಂಚಿಲ್ಲ ಬಾಕಿ ಉಳಿದ ಕಾಮಗಾರಿಗಳಿಗೆ ಶಾಸಕರ ಸಂಸದರಲ್ಲಿ ಮನವಿ ಮಂಡಿಸಿ ಕೆಲಸ ಪೂರ್ತಿಗೊಳಿಸಬೇಕು ಎಂದು ಹೇಳಿದರು. ಮಾತ್ರವಲ್ಲದೆ ತಕ್ಷಣವೇ ಕೆಲಸ ಪ್ರಾರಂಭಿಸಲು ಗುತ್ತಿಗೆದಾರರನ್ನು ಒತ್ತಾಯಿಸಿ ಕಾಮಗಾರಿಯ ಗುಣಮಟ್ಟವನ್ನು ಗ್ರಾಮಸ್ಥರು ಆಗಾಗ್ಗೆ ಪರೀಕ್ಷಿಸುತ್ತಿರಬೇಕೆಂದು ಈ ಸಂದರ್ಭ ಹೇಳಿದರು. ಮಡ್ಯಾರ್‍ನಲ್ಲಿ 2ಲಕ್ಷ, ಪನೀರ್‍ನಲ್ಲಿ 4 ಲಕ್ಷ, ಸಂಕೊಳಿಗೆಯಲ್ಲಿ ತಲಾ 2ಲಕ್ಷ ಹಾಗೂ 3ಲಕ್ಷ ರೂ. ಹೀಗೆ ಸುಮಾರು 11 ಲಕ್ಷ ಅನುದಾನದ ಕಾಮಗಾರಿಗಳು…

Read More