UN NETWORKS ಮಂಗಳೂರು: ದಸರಾ ಕ್ರೀಡೋತ್ಸವದ ಅಂಗವಾಗಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಪ್ರತಿನಿಧಿಸಿದ ಮಂಗಳೂರಿನ ಮಂಗಳಾ ಸ್ಟೇಡಿಯಂನ ವಾಲಿಬಾಲ್ ತಂಡ 33 ವರ್ಷಗಳ ನಂತರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದ ಕೋಚ್ ನಾರಾಯಣ ಆಳ್ವ ಮತ್ತು ಟೀಂ ಮ್ಯಾನೇಜರ್ ಆಲ್ಫ್ರೆಡ್ ಫೆರ್ನಾಂಡೀಸ್ ತಂಡದ ಜೊತೆಗಿದ್ದಾರೆ.
Author: UllalaVani
UN NETWORKS ಉಳ್ಳಾಲ: ಆರೋಪಿಗಳನ್ನು ಮಾತ್ರವಲ್ಲ ಸುಪಾರಿ ನೀಡಿದವರನ್ನು ಬಂಧಿಸಿ, ಲಾಭಿಗೆ ಮಣಿಯುವುದಾದರೆ ಠಾಣೆ ಬಿಟ್ಟು ತೊಲಗಿ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಅಮಾಯಕ ಜುಬೈರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಉಳ್ಳಾಲದ ನಾಗರಿಕರು ಜತೆಯಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಗುರುವಾರ ಸಂಜೆ ವೇಳೆ ಹಾಕಿದ ಮುತ್ತಿಗೆ ವೇಳೆ ಆಗ್ರಹಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಜುಬೈರ್ ಅಮಾಯಕನಾಗಿದ್ದು, ಯಾವುದೇ ಕೃತ್ಯಗಳಲ್ಲಿ ಭಾಗಿಯಾದವನಲ್ಲ. ಇಂತಹ ವ್ಯಕ್ತಿಯನ್ನು ಹತ್ಯೆಗೈದ ಗೂಂಡಾ ಪಡೆಯನ್ನು ಪೊಲೀಸರು ಬಂಧಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ಉಳ್ಳಾಲದಲ್ಲಿ ಅನೇಕ ಘಟನೆಗಳು ನಡೆಯುತ್ತಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗದೆ ಅವರು ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಮನೆ ಧ್ವಂಸ ಮಾಡಿದರೂ, ಹಲ್ಲೆ ನಡೆಸಿದರೂ ಆರೋಪಿಗಳಿಗೆ ಶಿಕ್ಷಯಾಗುತ್ತಿಲ್ಲ. ಅದಕ್ಕಾಗಿ ಪೊಲೀಸರು ಆರೋಪಿಗಳನ್ನು ಮಾತ್ರವಲ್ಲ, ಅವರನ್ನು ಬಳಸುವ ಸುಪಾರಿ ಕೊಡುವವರನ್ನು ಬಂಧಿಸಬೇಕಿದೆ. ಇದರ ಜತೆಗೆ ಗಾಂಜಾ ವ್ಯಸನಿಗಳು ಹಾಗೂ ಅದರ ಮೂಲವನ್ನು …
UN NETWORKS ಹರೇಕಳ: ಯಡಿಯೂರಪ್ಪ ಬಗ್ಗೆ ಮಾತನಾಡಿದರೆ ಉರಿದುಬೀಳುತ್ತಿದ್ದ ಶೋಭಾ ಕೆರಂದ್ಲಾಜೆಯವರು, ಇದೀಗ ಮೋದಿ ಬಗ್ಗೆ ಮಾತನಾಡಿದಾಗ ಉರಿದುಬೀಳಲು ಏನು ಕಾರಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಹೇಳಿದ್ದಾರೆ. ಹರೇಕಳ ಪಂಚಾಯತ್ ವ್ಯಾಪ್ತಿಯ 59ನೇ ವಾರ್ಡಿನ ಕಿಸಾನ್ ನಗರದಲ್ಲಿ ಗುರುವಾರ ಹಮ್ಮಿಕೊಂಡ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬಂಟ್ವಾಳ ಮತ್ತು ಉಳ್ಳಾಲ ಕ್ಷೇತ್ರದ ಸಚಿವರು ಎಷ್ಟು ಒಳ್ಳೆಯವರು ಅನ್ನುವುದು ಬೂತ್ ಮಟ್ಟದ ಕಾರ್ಯಕರ್ತರ ಬೆಂಬಲದಿಂದ ಗೊತ್ತಾಗುತ್ತಿದೆ. ಬಿಜೆಪಿಯವರ ದುರಾಡಳಿತ ಮತ್ತು ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರಿಸಿದ ವಿವರ ಹಾಗೂ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಯಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದ ಅವರು ಪ್ರಚಾರದ ವೇಳೆ ಹಿಂದಿನಿಂದ ದೇಶವನ್ನಾಳಿದ ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿಗಳ ನಡವಳಿಕೆ ಮತ್ತು ಮುಖ್ಯಮಂತ್ರಿಗಳ ಸರಳ ವ್ಯಕ್ತಿತ್ವದ ಉಲ್ಲೇಖವನ್ನು ಒಳಗೊಂಡಂತಹ ಪುಸ್ತಕವನ್ನು ಮನೆಗಳಿಗೆ ನೀಡುತ್ತಿದ್ದೇವೆ. ಕರ್ನಾಟಕ ಇತಿಹಾಸದಲ್ಲೇ ಪ್ರಥಮ ಬಾರಿ ಬಿಜೆಪಿ ಮುಖ್ಯಮಂತ್ರಿ ಹಾಗೂ ಸಚಿವರುಗಳು ಜೈಲು ಪಾಲಾಗಿದ್ದಾರೆ.…
UN NETWORKS ಉಳ್ಳಾಲ: ಸೇತುವೆಯಿಂದ ನದಿಗೆ ಹಾರಿ ರಿಕ್ಷಾ ಚಾಲಕರೋರ್ವರು ಆತ್ಮಹತ್ಯೆ ನಡೆಸಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಗುರುವಾರ ನಡೆದಿದೆ. ಮಂಗಳೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ರಿಕ್ಷಾ ಸೇತುವೆಯ ಆರಂಭದಲ್ಲಿ ನಿಂತಿತ್ತು. ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಸವಾರರು ನೋಡನೋಡುತ್ತಿದ್ದಂತೆ ರಿಕ್ಷಾದಲ್ಲಿದ್ದ ಚಾಲಕ, ದಿಢೀರನೇ ರಿಕ್ಷಾದಿಂದ ಇಳಿದು ಸೇತುವೆಯಿಂದ ನೇರವಾಗಿ ನದಿಗೆ ಹಾರಿದ್ದ. ಹಾರಿದ ಕೆಲವೇ ಕ್ಷಣಗಳಲ್ಲಿ ಚಾಲಕ ನದಿ ನೀರಿನಲ್ಲಿ ಮುಳುಗಿದ್ದರು. ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಚಾಲಕ ನದಿ ಪಾಲಾಗಿದ್ದ. ಘಟನೆ ಬಳಿಕ ಸೇತುವೆಯಲ್ಲಿ ಜನ ಜಮಾಯಿಸಿದ್ದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ರಿಕ್ಷಾದಲ್ಲಿ ಸಿಕ್ಕ ದಾಖಲೆಯಂತೆ, ವಾಹನ ಕೋಡಿಕಲ್ ಅಶೋಕನಗರದ ಬಶೀರ್ ಅಹಮ್ಮದ್ ಎಂಬವರಿಗೆ ಸೇರಿದ್ದಾಗಿದೆ. ಅವರೇ ಚಾಲಕರಾಗಿದ್ದರೇ ಅಥವಾ ಬೇರೆ ಚಾಲಕರಿಗೆ ಬಾಡಿಗೆ ನೀಡಿದ್ದರೇ ಅನ್ನುವುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
UN NETWORKS ಉಳ್ಳಾಲ: ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೆಳ್ಳಿಗದೆಯ 17ನೇ ವರ್ಷದ ಕುಸ್ತಿ ಪಂದ್ಯಾಟದಲ್ಲಿ ಆಂಜನೇಯ ಸಸಿಹಿತ್ಲುವಿನ ರಾಕೇಶ್ `ಶ್ರಿ ಶಾರದಾ ಕೇಸರಿ’ ಪ್ರಶಸ್ತಿ ಪಡೆದರೆ, ಚಿತ್ರಾಪುರದ ದುರ್ಗಾಪರಮೇಶ್ವರೀಯ ರವಿ `ಶ್ರೀ ಶಾರದಾಶ್ರೀ’ ಮತ್ತು ಬಿ.ಎಚ್.ಎಲ್ ಸುರತ್ಕಲ್ನ ಜಸ್ಮಾನ್ ಇರ್ಶಾದ್ `ಶ್ರೀ ಶಾರದಾ ಕಿಶೋರ್’ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, `ದುರ್ಗಾಪರಮೇಶ್ವರೀ ಚಿತ್ರಾಪುರ` ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಹಾಗೂ ಮೊಗವೀರ ಹಿ. ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಮೊಗವೀರಪಟ್ಣ, ಉಳ್ಳಾಲ, ಇದರ 70ನೇ ಉಳ್ಳಾಲ ದಸರಾ ಪ್ರಯುಕ್ತ ದಿ| ಪೈಲ್ವಾನ್ ಮೋತಿ ಪುತ್ರನ್ ಉಳ್ಳಾಲ ಇವರ ಸ್ಮರಣಾರ್ಥವಾಗಿ ನಡೆದ ಪಂದ್ಯಾಟದ 74ಕೆ.ಜಿ. ವಿಭಾಗದಲ್ಲಿ ಆಂಜನೇಯ ಸಸಿಹಿತ್ಲುವಿನ ರಾಕೇಶ್ ಅವರು ದುರ್ಗಾಪರಮೇಶ್ವರೀ ಚಿತ್ರಾಪುರದ ಜಗದೀಶ್ ಮಲ್ಲ ಅವರನ್ನು ಸೋಲಿಸಿ ಶ್ರೀ ಶಾರದಾ ಕೇಸರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, 60 ಕೆ.ಜಿ ವಿಭಾಗದಲ್ಲಿ ದುರ್ಗಾ ಪರಮೇಶ್ವರೀ ಚಿತ್ರಾಪುರದ ರವಿ…
UN NETWORKS ಸೋಮೇಶ್ವರ: ಸೋಮೇಶ್ವರ ಗ್ರಾಮದಲ್ಲಿ ಧಾರ್ಮಿಕ ಸ್ಥಳಗಳ ಸಮೀಪ ಕಾನೂನು ಬಾಹಿರವಾಗಿ ಮಧ್ಯದ ಅಂಗಡಿ ಕಟ್ಟಡ ನಿರ್ಮಾಣಾಗುತ್ತಿದ್ದು, ಇದಕ್ಕೆ ತಡೆ ಹೇರಬೇಕು ಎಂದು ಒತ್ತಾಯಿಸಿ ಕಾಟುಂಗರೆ ಡೈಮಂಡ್ ವೆಲ್ಫೇರ್ ಅಸೋಸಿಯೇಶನ್ ಜಿಲ್ಲಾಧಿಕಾರಿ, ಅಬಕಾರಿ ಇಲಾಖೆ ಹಾಗೂ ಸೋಮೇಶ್ವರ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದೆ. ಸೋಮೇಶ್ವರ ಗ್ರಾಮದ 18ನೇ ವಾರ್ಡ್ ಕದಿ ಎಂಬಲ್ಲಿ ವಿಷ್ಣುಮೂರ್ತಿ ದೇವಸ್ಥಾನ, ಮುಹಿಯುದ್ದೀನ್ ಜುಮಾ ಮಸೀದಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆ ಸಹಿತ 200ಕ್ಕೂ ಅಧಿಕ ಮನೆಗಳಿಂದ ಜನನಿಬಿಡ ಪ್ರದೇಶವಾಗಿದೆ. ಆದರೆ 100 ಮೀಟರ್ ಅಂತರದಲ್ಲಿ ವೈನ್ಶಾಪ್ ಕಟ್ಟಡ ನಿರ್ಮಾಣವಾಗುತ್ತಿದ್ದು ಅಬಕಾರಿ ನಿಯಮದ ಉಲ್ಲಂಘನೆಯಾಗಿರುವುದರಿಂದ ಇದಕ್ಕೆ ಅನುಮತಿ ನೀಡಬಾರದು ಎಂದು ಡೈಮಂಡ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಸಂಶುದ್ದೀನ್ ಉಚ್ಚಿಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಹಾಗೂ ಅಬಕಾರಿ ಇಲಾಖೆಯ ಉಪನಿರೀಕ್ಷಕಿ ಶೈಲಜಾ ಮನವಿ ಸ್ವೀಕರಿಸಿದ್ದಾರೆ.
UN NETWORKS ಕಿನ್ಯ : ದೇರಳಕಟ್ಟೆಯ ಬ್ಯಾರಿ ಲೇಖಕರು ಮತ್ತು ಕಲಾವಿದರ ಬಳಗವಾದ `ಮೇಲ್ತೆನೆ’ ಸಂಘಟನೆಯ ವತಿಯಿಂದ ಮಂಗಳವಾರ ಕಿನ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ `ಮೇಲ್ತೆನೆ’ಯ ಅಧ್ಯಕ್ಷ ಆಲಿಕುಂಞ ಪಾರೆ ನಾಡಿನ ಎಲ್ಲೆಡೆ ಬ್ಯಾರಿ ಭಾಷಾ ದಿನ ಆಚರಿಸುತ್ತಿರುವುದು ಸಂತಸದ ವಿಚಾರ. ಬ್ಯಾರಿಗಳ ಪಾಲಿಗೆ ಈ ದಿನ ಹಬ್ಬದ ದಿನವಾಗಿ ಮಾರ್ಪಾಡು ಆಗಲಿ. ಭವಿಷ್ಯ ದಿನಗಳಲ್ಲಿ ಅ.3ರಂದು ಮನೆ ಮನೆಗಳಲ್ಲಿ ಬ್ಯಾರಿ ಭಾಷಾ ದಿನದ ಸಂಭ್ರಮ ಕಂಡು ಬರಲಿ ಎಂದು ಆಶಿಸಿದರು. ಮೇಲ್ತೆನೆಯ ಉಪಾಧ್ಯಕ್ಷ ಇಸ್ಮತ್ ಪಜೀರ್, ಪ್ರಧಾನ ಕಾರ್ಯದರ್ಶಿ ಟಿ. ಇಸ್ಮಾಯೀಲ್, ಜೊತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ, ಸದಸ್ಯರಾದ ಬಶೀರ್ ಅಹ್ಮದ್ ಕಿನ್ಯ, ನಿಯಾಝ್ ಪಿ., ರಫೀಕ್ ಪಾಣೇಲ, ಆರೀಫ್ ಕಲ್ಕಟ್ಟ, ಮುಹಮ್ಮದ್ ಬಾಷಾ, ಹಂಝ ಮಲಾರ್ ಉಪಸ್ಥಿತರಿದ್ದರು.
UN NETWORKS ಉಳ್ಳಾಲ: ಬೈಕಿನಲ್ಲಿ ಬಂದ ಆಗಂತುಕರಿಬ್ಬರು ತಲವಾರು ದಾಳಿ ನಡೆಸಿ ವ್ಯಕ್ತಿಯೋರ್ವನ ಹತ್ಯೆ ನಡೆಸಿ, ಇನ್ನೋರ್ವನ ಮೇಲೆ ದಾಳಿಗೈದು ಪರಾರಿಯಾದ ಘಟನೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಗೇಟಿನ ಎದುರುಗಡೆ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ. ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಜುಬೈರ್ (39) ಹತ್ಯೆಯಾದವರು. ಇವರ ಜತೆಗಿದ್ದ ಮಾರ್ಗತಲೆ ನಿವಾಸಿ ಇಲ್ಯಾಸ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸಂಜೆ ಮುಕ್ಕಚ್ಚೇರಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದಂತೆ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ತಲವಾರಿನಿಂದ ಜುಬೈರ್ ಅವರ ತಲೆಯ ಭಾಗಕ್ಕೆ ಕಡಿದಿದ್ದಾರೆ. ಇದನ್ನು ಇಲ್ಯಾಸ್ ಅವರು ತಡೆಯಲು ಬಂದಾಗ ಅವರ ಕೈ ಮತ್ತು ಕಾಲಿನ ಭಾಗಕ್ಕೆ ಇಬ್ಬರು ಕಡಿದು , ಬೈಕಿನ ಮೂಲಕ ಪರಾರಿಯಾಗಿದ್ದಾರೆ. ಉಳ್ಳಾಲದ ಫಿಶ್ಮಿಲ್ನಲ್ಲಿ ಇಲೆಕ್ಟ್ರೀಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜುಬೈರ್ ಅವರು ವಿವಾಹಿತರಾಗಿದ್ದು, ನಾಲ್ವರು ಶಾಲೆ ಕಲಿಯುವ ಮಕ್ಕಳಿದ್ದಾರೆ. ಹತ್ಯೆಗೀಡಾದ ಜುಬೈರ್ ಈವರೆಗೂ ಯಾವುದೇ ಸಂಘಟನೆಗಳಲ್ಲಿ ತೊಡಗಿಸಿಕೊಂಡಿಲ್ಲ. ವೈಯಕ್ತಿಕ ದ್ವೇಷ ಸಾಧ್ಯತೆ : ಜುಬೈರ್…
UN NETWORKS ತಲಪಾಡಿ: ಕೇರಳದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸುರಕ್ಷಾ ಯಾತ್ರೆ ಮುಗಿಸಿ ದೆಹಲಿಗೆ ವಾಪಸ್ಸಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗಡಿನಾಡು ತಲಪಾಡಿಯಲ್ಲಿ ಹೂಹಾರ ಹಾಕುವ ಮೂಲಕ ಸ್ವಾಗತಿಸಿದರು.
UN NETWORKS ಉಜಿರೆ: ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ” ಉನ್ನತ ಗುರಿಗಾಗಿ ಉತ್ತಮ ಮಾರ್ಗದರ್ಶನ” ಎಂಬ ಘೋಷ ವಾಕ್ಯದಲ್ಲಿ ಯುನಿಟ್ ಮಟ್ಟದಲ್ಲಿ ಸಕ್ರೀಯ ಕಾರ್ಯಕರ್ತರನ್ನು ಸೃಷ್ಟಿಸುವ ನಿಟ್ಟಿನಲ್ಲಿ ನಡೆದ 4ಜಿ ಕ್ಯಾಂಪ್ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನರವರ ಅಧ್ಯಕ್ಷತೆಯಲ್ಲಿ ಉಜಿರೆ ಮಲ್ಜ ಅ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅಕ್ಟೋಬರ್ 1 ಆದಿತ್ಯವಾರ ಮಧ್ಯಾಹ್ನ ಗಂಟೆಗೆ ಮಲ್ಜ ಅ ವಿದ್ಯಾ ಸಂಸ್ಥೆಯ ಶಿಲ್ಪಿ ಸಯ್ಯದ್ ಜಲಾಲುದ್ದೀನ್ ತಂಙಳ್ ರವರ ದುಆ:ದೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ರವರ ಉದ್ಘಾಟನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ವಿವಿಧ ಅವಧಿಗಳಲ್ಲಿ ನಡೆದ ತರಗತಿಯಲ್ಲಿ ಉಮರ್ ಸಖಾಫಿ ಎಡಪ್ಪಾಲ,ಎಸ್ ಪಿ ಹಂಝ ಸಖಾಫಿ ಬಂಟ್ವಾಳ,ಅಬ್ದುಸ್ಸಲಾಂ ಮುಸ್ಲಿಯಾರ್ ದೇವರಶೋಲ,ರಫೀಕ್ ಸ ಅದಿ ಬಾಕಿಮಾರ್ ಉಸ್ತಾದರುಗಳಿಂದ ಸಾಂಘಿಕ ತರಗತಿಗಳು,ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ರವರಿಂದ ಬ್ರೈನ್ ಜಿಮ್ಎಂಬ ಪ್ರಾಯೋಗಿಕ…

