UN NETWORKS ಉಳ್ಳಾಲ: ನಮ್ಮ ದೇಶೀಯ ಕ್ರೀಡೆಯಾಗಿರುವ ಕುಸ್ತಿ ಪಂದ್ಯಾಟಕ್ಕೆ ಸರಕಾರ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ತುಳುನಾಡಿನ ಯುವಜನರು ಈ ಕಲೆಯನ್ನು ಕಲಿತು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಉಳ್ಳಾಲ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಶ್ರೀಕರ ಕಿಣಿ ಅಭಿಪ್ರಾಯಪಟ್ಟರು. ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಹಾಗೂ ಮೊಗವೀರ ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಮೊಗವೀರಪಟ್ಣ, ಉಳ್ಳಾಲ, ಇದರ 70ನೇ ಉಳ್ಳಾಲ ದಸರಾ ಪ್ರಯುಕ್ತ ದಿ| ಪೈಲ್ವಾನ್ ಮೋತಿ ಪುತ್ರನ್ ಉಳ್ಳಾಲ ಇವರ ಸ್ಮರಣಾರ್ಥವಾಗಿ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೆಳ್ಳಿಗದೆಯ 17ನೇ ವರ್ಷದ ಕುಸ್ತಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಳ್ಳಾಲ ಶ್ರೀ ವ್ಯಾಘ್ರ ಚಾಮುಂಡೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ಸುಭಾಷ್ ಅಮಿನ್ ಕಾರ್ಯಕ್ರಮ ಉದ್ಘಾಟಿಸಿದರು. ಕುಸ್ತಿ ಪಂದ್ಯಾಟದ ಅಖಾಡ ಉದ್ಘಾಟನೆಯನ್ನು ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಕಾಶಿನಾಥ್ ಪುತ್ರನ್ ಉದ್ಘಾಟಿಸಿದರು.…
Author: UllalaVani
UN NETWORKS ಕೋಟೆಕಾರು: ಹಿ0ದೂಗಳಾದ ಎಲ್ಲರೂ ಇನ್ನಷ್ಟೂ ಧಾರ್ಮಿಕ ಚಿಂತನೆಗಳನ್ನು ಮಾಡುವುದರ ಮೂಲಕ ಮಕ್ಕಳಲ್ಲಿ ಧಾರ್ಮಿಕ ಮನೋಭಾವನೆ ಮೂಡಿಸುವ ಕೆಲಸ ಮಾಡಬೇಕಾಗಿದೆ , ಸರಕಾರ ದೇವಸ್ಥಾನ ದೈವಸ್ಥಾನಗಳಿ0ದ ಬರುವ ಆದಾಯಗಳನ್ನು ಶ್ರದ್ಧಾ ಕೇ0ದ್ರಗಳಿಗೆ ಸರಿಯಾಗಿ ಬಳಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಹೇಳಿದ್ದಾರೆ. ಅವರು ಶ್ರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ0, ಶ್ರೀ ಶಾರದಾ ಪೀಠ0, ಶೃ0ಗೇರಿ ಇದರ ಕೋಟೆಕಾರು ಶಾಖಾ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ” ದಸರಾ ನಾಡಹಬ್ಬ ಕಾರ್ಯಕ್ರಮ ” ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು. ಧಾರ್ಮಿಕ ಪರಿಷತ್ ನ ಸದಸ್ಯರಾದ ಪಿ.ಕೃಷ್ಣ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ರವೀ0ದ್ರ ಶೆಟ್ಟಿ ಉಳಿದೊಟ್ಟು ಅಧ್ಯಕ್ಷತೆ ವಹಿಸಿದ್ದರು. ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ , ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು , ರಾಮರಾಜ ಕ್ಷತ್ರೀಯ…
UN NETWORKS ಕೊಣಾಜೆ: ಕಾಲೇಜು ವಿದ್ಯಾರ್ಥಿಗಳ ಜತೆಗೆ ಗದ್ದೆಯಲ್ಲಿ ನಾಟಿ ಕಾರ್ಯ ನಡೆಸಿದ್ದ ಸಚಿವರು ಇಂದು ಕೂಡಾ ಅದನ್ನೇ ಮುಂದುವರಿಸಿ ಟಿಲ್ಲರ್ ಚಲಾಯಿಸಿದರಲ್ಲದೆ ವಿದೇಶಿ ವಿದ್ಯಾರ್ಥಿಗಳಿಗೆ ಕೃಷಿಪಾಠ ನೀಡುವುದರ ಜತೆಗೆ ವಿದ್ಯಾರ್ಥಿಗಳ ಜತೆಗೆ ಗದ್ದೆಯಲ್ಲಿ ಓಟ ನಡೆಸಿ ಅತಿಸಾಮಾನ್ಯರಂತೆ ಕಂಡುಬಂದ ಆಹಾರ ಸಚಿವರು ಆಹಾರ ಬೆಳೆಸುವ ಕಾಯಕಕ್ಕೆ ಪ್ರೋತ್ಸಾಹ ನೀಡಿದರು. ಇದು ಡಾ.ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ರೆಡ್ ರಿಬ್ಬನ್, ಕೊಣಾಜೆ ಗ್ರಾಮ ಪಂಚಾಯತ್, ರೈತ ಸಂಘ ಹಸಿರುಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಹಾಗೂ ಮಂಗಳೂರು ವಿ.ವಿಯ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರ ಮಂಗಳಗಂಗೋತ್ರಿ ಇವುಗಳ ಜಂಟಿ ಆಶ್ರಯದಲ್ಲಿ ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ ವಿದ್ಯಾರ್ಥಿಗಳ ನಡಿಗೆ ರೈತರ ಹಡಿಲು ಭೂಮಿಯ ಕಡೆಗೆ ಇದರ ಅಂಗವಾಗಿ ಕೃಷಿ ಸಂವಾದ ಮುಂಗಾರಿನ ನಾಟಿಯ ಅಂತಿಮ ಸುತ್ತಿನ ಕಾರ್ಯಕ್ರಮದಲ್ಲಿ ಸಚಿವರ ವಿವಿಧ ಚಟುವಟಿಕೆಗಳು ರೈತರಿಗೆ ಪ್ರೋತ್ಸಾಹ ನೀಡಿತು. ಕೊಣಾಜೆ ಎರಡನೇ…
UN NETWORKS ಉಳ್ಳಾಲ: ಕಲ್ಮಶವಿಲ್ಲದಂತೆ ಆಶ್ರಮದಲ್ಲಿ ಇರುವ ಹಿರಿಯರ ಮಧ್ಯೆ ಆಡಿಯೋ ಬಿಡುಗಡೆ ನಡೆಸಿರುವ ಕಾರ್ಯ ಅರ್ಥಪೂರ್ಣವಾಗಿದ್ದು, ಚಿತ್ರ ತಂಡ ಪ್ರತಿಭಾವಂತರಾಗಿದ್ದು, ಭವಿಷ್ಯದಲ್ಲಿ ಗೆಲುವು ಖಚಿತ ಎಂದು ಕಾರ್ಕಳದ ಮಾಜಿ ಶಾಸಕ ಹೆಚ್. ಗೊಪಾಲ ಭಂಡಾರಿ ಹೇಳಿದರು. ಅವರು ಅಸೈಗೋಳಿಯ ಅಭಯಾಶ್ರಮದಲ್ಲಿ ಶುಕ್ರವಾರ ನಾಗೇಶ್ವರ ಸಿನಿ ಕಂಬೈನ್ಸ್ ಇವರ ಮೊದಲ ತುಳು ಚಲನಚಿತ್ರ ಅಂಬರ್ ಕ್ಯಾಟರರ್ಸ್ ಇದರ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪಂಚತಾರಾ ಹೊಟೇಲುಗಳಲ್ಲಿ ನಡೆಯುವಂತಹ ಕಾರ್ಯಕ್ರಮವನ್ನು ವೃದ್ಧಾಶ್ರಮದಲ್ಲಿ ನಡೆಸಿರುವುದು ಇತರರಿಗೆ ಮಾದರಿ. ತುಳು ಚಲನಚಿತ್ರಗಳ ರಚನೆಯ ಮೂಲಕ ವಿಶ್ವದಾದ್ಯಂತ ಇರುವ ತುಳು ಅಭಿಮಾನಿಗಳ ಗಮನ ಸೆಳೆಯುವಂತಾಗಲಿ ಎಂದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಮಾತನಾಡಿ ಎಲ್ಲರೂ ನೋಡುವಂತಹ ಚಿತ್ರವಾಗಿ ಹೊರಹೊಮ್ಮಲಿ. ಚಿತ್ರದ ನಾಯಕನಟ ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ನಾಯಕನಟನಾಗಿ ಭವಿಷ್ಯ ರೂಪಿಸುವಂತಾಗಲಿ ಎಂದ ಅವರು ರಾಜಕೀಯ ನಟರಿಗಿಂತ ಚಿತ್ರ ನಟರು ಒಳ್ಳೆಯವರು , ಅವರಿಗೆ ಪ್ರೋತ್ಸಾಹ ಅಭಿಮಾನಿಗಳು ನೀಡಬೇಕಾಗಿದೆ ಎಂದರು. ಬಿಜೆಪಿ…
UN NETWORKS ಮುಡಿಪು: ಮುಡಿಪು ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದಲ್ಲಿ ವಾಹನ -ಯಂತ್ರೋಪಕರಣ ಪವಿತ್ರೀಕರಣ ಕಾರ್ಯಕ್ರಮವನ್ನು ಸಪ್ಟೆಂಬರ್ 29 ರಂದು ಏರ್ಪಡಿಸಲಾಗಿತ್ತು. ಪವಿತ್ರ ಪರಮ ಪ್ರಸಾದದ ಆರಾಧನೆ ಮತ್ತು ಪವಿತ್ರ ಬಲಿ ಪೂಜೆಯ ಸಮಯದಲ್ಲಿ ವಾಹನ ಚಾಲಕ ಮಾಲೀಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಾಡಂತ್ಯಾರ್ ಚರ್ಚ್ ಸಹಾಯಕ ಧರ್ಮಗುರುಗಳು ವಂ. ಆಲ್ವಿನ್ ಡಿಸೋಜ ರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮುಡಿಪು ಚರ್ಚ್’ನ ಧರ್ಮಗುರುಗಳಾದ ವಂ. ಬೆಂಜಮಿನ್ ಪಿಂಟೊ ರವರು ಪ್ರಯಾಣಿಕರಿಗೋಸ್ಕರ ಪ್ರಾರ್ಥನೆ ನಡೆಸಿ ನೆರೆದ ಭಕ್ತರನ್ನು ಮತ್ತು ಅಸಂಖ್ಯ ವಾಹನಗಳನ್ನು ಪವಿತ್ರಜಲದಿಂದ ಪವಿತ್ರೀಕರಿಸಿದರು. ಇತರ ಧರ್ಮಗುರುಗಳು ಮತ್ತು ಸಹಸ್ರಾರು ಭಕ್ತರು ಹಾಜರಿದ್ದರು.
UN NETWORKS ಮಂಜನಾಡಿ: ಯಾವ ಭಾಷೆ ಮೇಲೂ ಅಲ್ಲ, ಕೀಳೂ ಅಲ್ಲ. ತುಳುನಾಡಿನ ಮಣ್ಣಿನಲ್ಲಿ ಹುಟ್ಟಿ ಬೆಳೆದ ಬ್ಯಾರಿ ಭಾಷೆ ಕೂಡ ಇತರ ಯಾವ ಭಾಷೆಗೂ ಕಡಿಮೆ ಏನೂ ಅಲ್ಲ. ಹಾಗಾಗಿ ಕನ್ನಡ ಮತ್ತಿತರ ಭಾಷೆಯ ಜೊತೆಗೆ ಬ್ಯಾರಿ ಭಾಷೆಯಲ್ಲೂ ಸಾಹಿತ್ಯ ಕೃಷಿ ಮಾಡಿ ಎಂದು `ಮೇಲ್ತೆನೆ’ ಸಂಘಟನೆಯ ಅಧ್ಯಕ್ಷ ಆಲಿಕುಂಞ ಪಾರೆ ಹೇಳಿದರು. ಮಂಜನಾಡಿ ಗ್ರಾಮದ ಕಲ್ಕಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಉಳ್ಳಾಲ ಅಳೇಕಲದ ಸೈಯದ್ ಮದನಿ ಪಿಯು ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರದಲ್ಲಿ `ಮೇಲ್ತೆನೆ’ ಸಂಘಟನೆಯ ವತಿಯಿಂದ ಶನಿವಾರ ನಡೆದ `ಬ್ಯಾರಿ ಕವಿಗೋಷ್ಠಿ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಹಿತ್ಯವು ಸುಳ್ಳಿನ ಮೇಲೆ ನಿಲ್ಲದೆ ಸತ್ಯದ ಪರದೆಯ ಮೇಲೆಯೇ ರಚನೆಗೊಳ್ಳಲಿ. ಬರೆಯುವ ತುಡಿತದೊಂದಿಗೆ ಸಾಹಿತ್ಯ ಕೃಷಿ ಮಾಡಿದರೆ ಅದು ಸಾಕಷ್ಟು ಬಲಿಷ್ಠಗೊಳ್ಳಲಿದೆ. ಬ್ಯಾರಿ ಭಾಷೆಯ ಅವನತಿಯಲ್ಲಿಲ್ಲ. ಅದಕ್ಕೂ ಉಜ್ವಲ ಭವಿಷ್ಯವಿದೆ ಎಂಬ ವಿಶ್ವಾಸದೊಂದಿಗೆ ಬ್ಯಾರಿ ಭಾಷೆಯಲ್ಲಿ ಬರೆಯಲು ಮುಂದಾಗಬೇಕು ಎಂದು ಆಲಿಕುಂಞ ಪಾರೆ ನುಡಿದರು. ಯುವ ಲೇಖಕ ಇಸ್ಮತ್ ಪಜೀರ್…
UN NETWORKS ತೊಕ್ಕೊಟ್ಟು: ತೊಕ್ಕೊಟಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ವಾರ್ಷಿಕ ಮಹಾಸಭೆಯು ಮತ್ತು ಗುರುಜಯಂತಿ ಆಚರಣೆ ಭಾನುವಾರದಂದು ತೊಕ್ಕೊಟಿನ ವೇದಿಕೆ ಕಛೇರಿಯಲ್ಲಿ ಕೆ.ಟಿ.ಸುವರ್ಣರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಡೂರು ಸಾಯಿ ಮಂದಿರದ ಆಡಳಿತ ಮೋಕ್ತೆಸರರಾದ ಕೆ.ಪಿ.ಸುರೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆ ಮಾಜಿ ಅಧ್ಯಕ್ಷ ರಾದ ಆನಂದ್ ಕೆ.ಅಸೈಗೋಳಿ ಗುರು ಸಂದೇಶ ನೀಡಿದರು. ಬಳಿಕ ನೂತನ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಈ ಸಂಧರ್ಬದಲ್ಲಿ ಪಡುಮಲೆ ದೇಯಿ ಬೈದೆದಿ ಪ್ರತಿಮೆ ಅವಮಾನಿಸಿದ ದುರುಳರ ಕೃತ್ಯವನ್ನು ಖಂಡಿಸಿ, ಇತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಲಾಯಿತು.ವೇದಿಕೆಯ ಪ್ರಮುಖರಾದ ಸತೀಶ್ ಕರ್ಕೇರ,ಜೀವನ್ ಕುಮಾರ್, ಗೋಪಿನಾಥ್ ಬಗಂಬಿಲ, ಹರೀಶ್ ಅಂಬ್ಲಮೊಗರು, ಲಕ್ಷ್ಮಣ ಪೂಜಾರಿ,ಹರೀಶ್ ಮುಂಡೋಳಿ , ರಾಜೇಶ್ ಕೆರೆಬೈಲ್, ಉಪಸ್ಥಿತರಿದ್ದರು.
UN NETWORKS ಕೊಲ್ಯ: ಸೋಮೇಶ್ವರ ಕೊಲ್ಯದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಆಚರಿಸುವ 36 ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಸೆ.28 ರಂದು ವಿಗ್ರಹ ಪ್ರತಿಷ್ಠೆಯಿಂದ ಆರಂಭಗೊಂಡು ಅ.1 ರಂದು ಸಂಜೆ 8 ಕ್ಕೆ ಶೋಭಾಯಾತ್ರೆ ನಡೆದು ಜಲಸ್ಥಂಭನಗೊಳ್ಳಲಿದೆ ಎಂದು ಉತ್ಸವ ಸಮಿತಿಯ ಗೌರವ ಸಲಹೆಗಾರ ತೋನ್ಸೆ ಪುಷ್ಕಳ್ ಕುಮಾರ್ ಹೇಳಿದ್ದಾರೆ. ಕೊಲ್ಯ ಶ್ರೀ ಶಾರದಾ ಸಭಾ ಸದನದಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸೋಮೇಶ್ವರದ ಮದ್ವೇಶರ್ ಭಟ್ ಇವರ ನೇತೃತ್ವದಲ್ಲಿ ಬೆಳಿಗ್ಗೆ 9.15ಕ್ಕೆ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನಡೆಯಲಿದೆ. ಸೆ. 28 ರಂದು 11.00ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ ವಹಿಸಲಿದ್ದು, ಚಾರ್ಟೆಡ್ ಅಕೌಂಟೆಂಟ್ ಎಸ್ ಎಸ್ ನಾಯಕ್ ಉದ್ಘಾಟಿಸಲಿದ್ದಾರೆ. ವಿಟ್ಲ ಹಿಂದು ಜಾಗರಣ ವೇದಿಕೆ ಸಂಚಾಲಕ ಕೆದಿಲ ಬಾ.ಗಣರಾಜ್ ಭಟ್ ರಿಂದ ಧಾರ್ಮಿಕ ಉಪನ್ಯಾಸ ಹಾಘೂ ಸೋಮನಾಥ ದೇವಸ್ಥಾನದ ವ್ಯವಸ್ಥಾಪನ…
UN NETWORKS ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳೂರು ಝೋನ್ ಮಟ್ಟದ ಅಂತರ್ಕಾಲೇಜು ಫುಟ್ ಬಾಲ್ ಪಂದ್ಯಾಟದಲ್ಲಿ ಉಳ್ಳಾಲ ಒಂಭತ್ತುಕೆರೆಯ ಮೆರೇಡಿಯನ್ ಕಾಲೇಜಿನ ತಂಡ ಮಡಿಕೇರಿ ತಂಡವನ್ನು 4-0 ಗೋಲ್ ಸಾಧಿಸುವುದರ ಮೂಲಕ ಚಾಂಪಿಯನ್ಶಿಪ್ ಪಡೆದುಕೊಂಡಿದೆ.
UN NETWORKS ತಲಪಾಡಿ: ಮೈಸೂರಿನಲ್ಲಿ ನಡೆಯಲಿರುವ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷರಾಗಿ ಚಿಂತಕ, ಸಾಹಿತಿ ಪ್ರೋ. .ಚಂದ್ರಶೇಖರ್ ಪಾಟೀಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದರು. ಮಂಗಳೂರು ಸಮೀಪದ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸೋಮವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ನ 101ನೇ ವಾರ್ಷಿಕ ಮಹಾಅ„ವೇಶನದಲ್ಲಿ ನಿರ್ಣಯ ಪಡೆದುಕೊಳ್ಳಲಾಗಿದೆ ಎಂದು ನುಡಿದರು. ಮೈಸೂರಿನಲ್ಲಿ ನ. 24,25 ಹಾಗೂ 26 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಅಧ್ಯಕ್ಷರಾಗಿ ರಾಜ್ಯ ಹಾಗೂ ಹೊರಭಾಗದಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಪಸರಿಸಿದ ಹಾಗೂ ಹೋರಾಟ ನಡೆಸಿದ ಪ್ರೋ .ಚಂದ್ರಶೇಖರ ಪಾಟೀಲ (ಚಂಪ) ಅವರನ್ನು ಆಯ್ಕೆ ಮಂಡಳಿ ನಿರ್ಧರಿಸಿದೆ. ಸಮ್ಮೇಳನ ಅಧ್ಯಕ್ಷರ ಪಟ್ಟಿಯಲ್ಲಿ ಧಾರವಾಡದ ಡಾ. ವೀಣಾ ಶಾಂತೇಶ್ವರ್ , ಮೈಸೂರಿನ ಡಾ. ಲತಾ ರಾಜಶೇಖರ್, ಮಂಗಳೂರಿನ ಸಾರಾ ಅಬೂಬಕರ್ ಮತ್ತು ಉತ್ತರಕನ್ನಡದ ಡಾ.ಎನ್. ಆರ್. ನಾಯಕ್ ಹೆಸರು ಪ್ರಸ್ತಾವನೆಯಲ್ಲಿತ್ತು…

