UN NETWORKS ಉಳ್ಳಾಲ: ಉಳ್ಳಾಲದಲ್ಲಿ ಕಡಲ್ಕೊರೆತ, ಕುಡಿಯುವ ನೀರಿನ ಸಮಸ್ಯೆ ಹಲವು ದಶಕಗಳ ಸಮಸ್ಯೆಯಾಗಿದೆ. ಹಲವು ಇಲ್ಲಗಳ ಆಗರವಾಗಿದೆ. ಅಗ್ನಿಶಾಮಕ ದಳ, ಸುಸಜ್ಜಿತ ಕ್ರೀಡಾಂಗಣ, 100 ಬೆಡ್ ರೂಂನ ಸರಕಾರಿ ಆಸ್ಪತ್ರೆ, ಸರಕಾರಿ ಪಾಲಿ ಟೆಕ್ನಿಕ್ ಗಳನ್ನು ಪ್ರಭಾವಿ ಸಚಿವರಾಗಿದ್ದರು ಕ್ಷೇತ್ರಕ್ಕೆ ಸಂಪೂರ್ಣ ವಿಫಲವಾಗಿದ್ದಾರೆ. ಕ್ಷೇತ್ರದ ಜನಕ್ಕೆ ಚೂರಿ ಭಾಗ್ಯ ನೀಡಿರುವುದೇ ಖಾದರ್ ರವರ ಸಾಧನೆ ಎಂದು ಬಿ.ಜೆ.ಪಿ. ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್ ಆರೋಪಿಸಿದರು.ಅವರು ಅಸೈಗೋಳಿಯಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಹೇಳಿದರು. ಮಂಗಳೂರು ಕ್ಷೇತ್ರ ಸಾಮರಸ್ಯದ ಬೀಡಾಗಬೇಕು, ಅಭಿವೃದ್ಧಿಯ ಕೇಂದ್ರವಾಗಬೇಕು, ಅಪರಾಧ ಮುಕ್ತವಾಗಬೇಕು. ಇದಕ್ಕೆಲ್ಲಾ ಬಿ.ಜೆ.ಪಿ. ಯೇ ಸೂಕ್ತ ಆಯ್ಕೆ ಎಂದು ಸಾರ್ವಜನಿಕರಲ್ಲಿ ಮತ ಯಾಚಿಸಿದರು. ಜಿಲ್ಲಾ ವಕ್ತಾರ ವಿಕಾಸ್ ಪುತ್ತೂರು, ಮಾಜಿ ಶಾಸಕರಾದ ಕೆ. ಜಯ ರಾಮ್ ಶೆಟ್ಟಿ, ಕ್ಷೇತ್ರ ಚುನಾವಣಾ ಸಂಚಾಲಕ ಸತೀಶ್ ಕುಂಪಲ, ಸಹ ಸಂಚಾಲಕ ಚಂದ್ರಹಾಸ್ ಉಳ್ಳಾಲ, ಮುಖಂಡರಾದ ಚಂದ್ರಶೇಖರ ಉಚ್ಚಿಲ, ರವೀಂದ್ರ ಶೆಟ್ಟಿ, ಚಂದ್ರಹಾಸ್ ಅಡ್ಯಂತಾಯ, ಜಿ.ಪಂ. ಸದಸ್ಯೆ ಧನಲಕ್ಷೀ…
Author: UllalaVani
UN NETWORKS ಉಳ್ಳಾಲ: ಆರಾಮವಾಗಿ ಕೋಕೊ ಕೋಲಾ ಕುಡಿಯುವ ಸಚಿವ ಖಾದರ್ ಕ್ಷೇತ್ರದ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಂಸದ ನಳಿನ್ ಕಟೀಲ್ ಹೇಳಿದ್ದಾರೆ. ತೊಕ್ಕೊಟ್ಟು ವಿನಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಚುನಾವಣೆಯ ಕಾವು ರಂಗೇರುತ್ತಿದ್ದು, ರಾಜಕೀಯ ಜಿದ್ದಾಜಿದ್ದಿಯ ಮೇಲಾಟಗಳು ನಡೆಯುತ್ತಿದೆ. ಮಂಗಳೂರು ಕ್ಷೇತ್ರದಲ್ಲಿ ಜನರ ಕೂಗು ಶಾಸಕರ ವಿರುದ್ದವಾಗಿದೆ. ಸಮೀಕ್ಷೆಯಲ್ಲೂ ಬಿಜೆಪಿ ಪರವಾಗಿ ವರದಿಗಳು ಬಂದಿವೆ. ಈ ಭಾಗದ ಶಾಸಕರು ಆಡಳಿತ ನಡೆಸಿದ ಆರಂಭದಿಂದಲೂ ಕ್ಷೇತ್ರ ವ್ಯಾಪ್ತಿಯಲ್ಲಿ ಮತೀಯವಾದಕ್ಕೆ ಹೆಚ್ಚಿನ ಪುಷ್ಠಿ ನೀಡುತ್ತಾ ಬಂದಿದ್ದಾರೆ. ಇದು ಜನರ ವಿರೋಧಕ್ಕೆ ಕಾರಣವಾಗಿದೆ. ದೊರೆಯುವ ಸಾಧನಗಳನ್ನು ಉಪಯೋಗಿಸಲು ವಿಫಲರಾಗಿರುವ ಸಚಿವರಾದ ಖಾದರ್, ಶಾಶ್ವತ ಯಾವುದೇ ಪ್ರಾಜೆಕ್ಟ್ ಗಳ ನಿರ್ಮಾಣಮಾಡಿಲ್ಲ. ರಸ್ತೆ,ಯೇ ಅಭಿವೃದ್ದಿ ಎಂದು ಹೇಳಿಕೊಂಡು ಬರುತ್ತಿರುವ ಅವರು ಶಾಶ್ವತ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಬಹುದೊಡ್ಡ ನೀರಿನ ಸಮಸ್ಯೆಯಿದೆ. ಆದರು ತಾನು ಆರಾಮವಾಗಿ ಕೋಕಾ ಕೋಲಾ ಕುಡಿದರೆ…
UN NETWORKS ಸೋಮೇಶ್ವರ : ಸೋಮೇಶ್ವರ ಕಡಲ ಕಿನಾರೆಗೆ ಸಂಬಂಧಿಕರ ಜೊತೆಗೆ ಬಂದ ಯುವಕನೋರ್ವ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ಹಠಾತ್ತನೆ ಸಮುದ್ರದ ನೀರಿಗೆ ಕುಸಿದು ಬಿದ್ದಿದ್ದು ಸ್ಥಳೀಯರು ಸೇರಿ ಪ್ರಥಮ ಚಿಕಿತ್ಸೆ ನ್ಡೀ ಅಸ್ಪತ್ರೆಗೆ ಸಾಗಿಸುವ ಮದ್ಯೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ರಾಕೇಶ್ ಆಚಾರ್(38) ಎಂದು ಗುರುತಿಸಲಾಗಿದೆ. ಮೈಸೂರಿನ ಜೆಪಿನಗರ ನಿವಾಸಿಯಾಗಿರುವ ರಾಕೇಶ್ ಶಕ್ತಿನಗರದಲ್ಲಿ ಎ. 28ರಂದು ನಡೆದ ತನ್ನ ತಂಗಿಯ ನೂತನ ಮನೆಯ ಗೃಹಪ್ರವೇಶದಲ್ಲಿ ಭಾಗವಹಿಸಿದ್ದರು. ಸೋಮವಾರ ತಂಗಿಯ ಕುಟುಂಬದೊಂದಿಗೆ ತೊಕ್ಕೊಟ್ಟುವಿನ ದೊಡ್ಡಮನ ಮಗಳ ಮನೆಯಲ್ಲಿ ಊಟ ಮುಗಿಸಿ ಸಂಜೆ ಕಡಲ ಕಿನಾರೆಗೆ ಬಂದಿದ್ದು, ಕುಟುಬದ ಸದಸ್ಯರ ಜೊತೆ ಸಮುದ್ರದ ಬದಿಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ರಾಕೇಶ್ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ಈಜುಗಾರರು ಅವರನ್ನು ಸಮುದ್ರದಿಂದ ಮೇಲೆತ್ತಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಮೃತಪಟ್ಟರು ಎಂದು ತಿಳಿದು ಬಂದಿದೆ. ತುತುಋ ಸಂದರ್ಭದಲ್ಲಿ ಅಯಂಬುಲೆನ್ಸ್ ಗೆ ಕರೆ ಮಾಡಿದರೂ…
UN NETWORKS ಕೋಟೆಕಾರ್: ಏನೋ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ಗೆ ಸೇರಿದ್ದ ನಾನು ಅದರ ಒಳಗೆ ಹೋದ ನಂತರವೇ ಕಾಂಗ್ರೆಸ್ ಬಣ್ಣ ಹಾಗೂ ನೈಜ ಸಂಗತಿ ಅರಿವಾಗಿದೆ. ಇಂದು ನಾನು ಕಾಂಗ್ರೆಸ್ನಿಂದ ಬಿಜೆಪಿಗೆ ಬಂದಿದ್ದೇನೆ. ಕಾಂಗ್ರೆಸ್ನಲ್ಲಿರುವ ಇನ್ನಷ್ಟು ಜನ ಬಿಜೆಪಿಗೆ ಪರಿವರ್ತನೆಯಾಗಲಿದ್ದಾರೆ. ನಾಳೆ ಯು.ಟಿ.ಖಾದರ್ ಅವರು ಕೂಡಾ ಬಿಜೆಪಿ ಬರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಇದೆ ಎಂದು ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರ್ ಬೀರಿಯಲ್ಲಿ ಸೋಮವಾರ ಸಂಜೆ ನಡೆದ ಬಿಜೆಪಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ 60 ವರ್ಷದಿಂದ ದೇಶದಲ್ಲಿ ಆಳ್ವಿಕೆ ಮಾಡಿರುವ ಕಾಂಗ್ರೆಸ್ ಪಕ್ಷದಿಂದ ಇಂದಿಗೂ ದೇಶದಲ್ಲಿ ಜಾತಿಯ, ಧರ್ಮದ ಅಸಮಾನತೆಗೆ ಮುಕ್ತಿ ಸಿಕ್ಕಿಲ್ಲ, ಶ್ರೀಮಂತ ಬಡವ ಅಂತರಕ್ಕೆ ಮುಕ್ತಿ ಸಿಕ್ಕಿಲ್ಲ. ರಾಹುಲ್ ಗಾಂಧಿಯಂತವರು, ಸಿದ್ದರಾಮಯ್ಯನಂತವರು, ಯು.ಟಿ.ಖಾದರ್ ನಂತವರು ದೇಶದಲ್ಲಿ ಸಾವಿರಾರು ಜನ ಹುಟ್ಟುತ್ತಾರೆ. ಆದರೆ ನರೇಂದ್ರ ಮೋದಿಯಂತವರು ಒಬ್ಬರೇ ಹುಟ್ಟಲು ಸಾಧ್ಯ. ಮೋದಿಯ ಆಡಳಿತದಿಂದ ಇಂದು ವಿಶ್ವಗುರುವಾಗಿ ಬೆಳೆಯುತ್ತಿದ್ದು,…
UN NETWORKS ಉಳ್ಳಾಲ: ಕಾರ್ಯಗಾರಗಳ ಮೂಲಕ ಜ್ಞಾನ ವೃದ್ಧಿಸುವುದರ ಜತೆಗೆ ಪರಸ್ಪರ ಜ್ಞಾನ ಹಂಚಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ನಿಮ್ಹಾನ್ಸ್ ನ ಸೈಕೋಫಾರ್ಮಕಾಲಜಿ ವಿಭಾಗ ಮುಖ್ಯಸ್ಥ ಡಾ| ಚಿತ್ತರಂಜನ್ ಅಂದ್ರಾಡೆ ಅಭಿಪ್ರಾಯಪಟ್ಟರು. ನಿಟ್ಟೆ ಮನೋವೈದ್ಯಶಾಸ್ತ್ರ ವಿಭಾಗ ಹಮ್ಮಿಕೊಂಡ ಕ್ಷೇಮ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಸೋಮವಾರ ` ಖಿನ್ನತೆ-ಶಮನಕಾರಿ ಮಧ್ಯಸ್ಥಿಕೆಗಳಲ್ಲಿ ನಾವೀನ್ಯತೆಗಳು ಹಾಗೂ ಕೆಟಮೈನ್ ಬಳಕೆಯ ಸಿದ್ಧಾಂತ ಮತ್ತು ಅಭ್ಯಾಸ ಕುರಿತ ಒಂದು ದಿನದ ಕಾರ್ಯಗಾರವನು ಉದ್ಘಾಟಿಸಿ ಮಾತನಾಡಿದರು. ಕಿಟಮೈನ್ ಅನಸ್ತೇಷಿಯಾ ವಿಭಾಗದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತಿದ್ದು, ಖಿನ್ನತೆಗೆ ಒಳಗಾದವರನ್ನು ನಿಯಂತ್ರಿಸಲು ಕಿಟಮೈನ್ ಬಳಕೆ ಮಾಡಲಾಗುತ್ತಿದೆ. ಆದರೆ ಕಿಟಮೈನ್ ಕುರಿತ ಅಪಪ್ರಚಾರಗಳು ಹೆಚ್ಚಿದ್ದು, ಈ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ವೈದ್ಯರಲ್ಲಿ ಹೆಚ್ಚಿನ ಜ್ಞಾನ ಅಗತ್ಯ ಇರಬೇಕಿದೆ ಎಂದರು. ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್ ಡಾ|ಪಿ.ಯಸ್. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಸಹ ಡೀನ್ ಡಾ| ಜಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ್ ಹಿರೇಮಠ, ನಿಟ್ಟೆ ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಸತೀಶ್…
UN NETWORKS ಉಳ್ಳಾಲ: ಉಳ್ಳಾಲಭಾಗದಲ್ಲಿ ಜಾತಿ ಧರ್ಮವನ್ನು ಬದಿಗಿಟ್ಟು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದವರಿಗೆ ಬೆನ್ನೆಲುಬಾಗಿ ನಿಂತ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಶ್ಲಾಘನೀಯ ಎಂದು ಎಂದು ಸೈಯ್ಯಿದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು. ಅವರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಇದರ ಐದು ವರ್ಷ ಪೂರೈಸಿದ ಅಂಗವಾಗಿ ಬಾಂಧವ್ಯ ಅನ್ನುವ ಸ್ಮರಣ ಸಂಚಿಕೆಯನ್ನು ಇತ್ತೀಚೆಗೆ ಮಾಸ್ತಿಕಟ್ಟೆಯ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಶಿಕ್ಷಣ, ಆರೋಗ್ಯ, ಹಿಂದುಳಿದವರ ಅಭಿವೃದ್ಧಿಯ ಉದ್ದೇಶವನ್ನಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ಟ್ರಸ್ಟ್ ಐದು ವರ್ಷಗಳಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಸಮಾಜಕ್ಕೆ ಪೂರಕವಾಗಿದೆ. ಉಳ್ಳಾಲ ಭಾಗದಲ್ಲಿ ಇಂತಹ ಸಾಮರಸ್ಯಕ್ಕೆ ಪೂರಕವಾಗಿ ಕಾರ್ಯಾಚರಿಸುತ್ತಿರುವ ಟ್ರಸ್ಟ್ ಇನ್ನಷ್ಟು ಜನರ ಬಾಳಿಗೆ ಬೆಳಕಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಇದರ ಅಧ್ಯಕ್ಷ ಅನ್ವರ್ ಹುಸೈನ್ ಮಾತನಾಡಿ ಐದು ವರ್ಷಗಳಿಂದ ಜನತೆಗೆ ಆಶಾಕಿರಣವಾಗಿ ಟ್ರಸ್ಟ್ ಸ್ಪಂಧಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ…
UN NETWORKS ಉಳ್ಳಾಲ: ಕೇರಳ ರಾಜ್ಯ ಲಾಟರಿ ಈ ಬಾರಿ ಹೊಸಂಗಡಿಯ ಛಾಯಗ್ರಾಹಕರೊಬ್ಬರಿಗೆ ಒಲಿದಿದ್ದು, ಹೊಸಂಗಡಿ ಅಮ್ಮ ಲಾಟರಿ ಏಜೆನ್ಸಿಯಿಂದ ಎ.30ರಂದು 30 ರೂ. ನಲ್ಲಿ ಖರೀದಿಸಿದ ಕೇರಳ ರಾಜ್ಯ ಲಾಟರಿ ವಿನ್ ವಿನ್ ತಿ458 ಕ್ಕೆ ರೂ. 65 ಲಕ್ಷ ಒಲಿದಿದೆ. ಹೊಸಂಗಡಿ ಬಳಿಯ ಮಜಿಬೈಲು ಮಂಜಯ್ಯ ಹಿತ್ಲು ನಿವಾಸಿ ಪ್ರಭಾಕರ ಶೆಟ್ಟಿ ಅದೃಷ್ಟವಂತ. ಮಂಜೇಶ್ವರ ಬ್ಲಾಕ್ ಪಂಚಾಯಿತಿನ ಮಾಜಿ ಸದಸ್ಯರಾಗಿರುವ ಇವರು ಹವ್ಯಾಸಿ ಯಕ್ಷಗಾನ ಕಲಾವಿದರು ಹಾಗೂ ಕೃಷಿಕರಾಗಿದ್ದಾರೆ. ಸಿಪಿಎಂ ನೇತಾರರಾಗಿರುವ ಇವರು ಉಪ್ಪಳ ಶ್ರೀ ಸದಾಶಿವ ದೇವಸ್ಥಾನದ ಮಾಜಿ ಟ್ರಸ್ಟೀಯೂ ಆಗಿದ್ದಾರೆ. ವೃತ್ತಿಯಲ್ಲಿ ಛಾಯಗ್ರಾಹಕನಾಗಿರುವ ಪ್ರಭಾಕರ ಶೆಟ್ಟಿ ಎ.29ರ ಬೆಳಿಗ್ಗೆ ಮಂಗಳೂರಿಗೆ ಮದುವೆ ಸಮಾರಂಭಕ್ಕೆ ತೆರಳುವ ಸಂದರ್ಭ ಹೊಸಂಗಡಿಯಲ್ಲಿ ಅಮ್ಮ ಲಾಟರಿ ಏಜೆನ್ಸಿಯಿಂದ ಲಾಟರಿಯನ್ನು ಖರೀದಿಸಿದ್ದರು. ಎ.30 ರ ಸಂಜೆ ಹೊತ್ತಿಗೆ ಡ್ರಾ ಆಗುತ್ತಿದ್ದಂತೆ ಬೇರೊಂದು ಸಮಾರಂಭದಲ್ಲಿದ್ದ ಪ್ರಭಾಕರ್ ಶೆಟ್ಟಿ ಅವರು ಏಜೆನ್ಸಿಯಲ್ಲಿ ಕೇಳಿದ್ದಾರೆ. ಅದರಂತೆ ಏಜೆನ್ಸಿ ಮಾಲೀಕರು ನಂಬರು ನೀಡಿದ್ದು, ಆದರೆ ಪ್ರಭಾಕರ್ ಶೆಟ್ಟಿ ಟಿಕೇಟನ್ನು…
UN NETWORKS ಮಂಗಳೂರು : ಮಂಗಳೂರು ತಾಲೂಕಿನ ಗುರುಕಂಬಳದ ಎ.ಕೆ.ಯು ಅನುದಾನಿತ ಪ್ರೌಢಶಾಲೆಯಲ್ಲಿ ಸುಮಾರು 33 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ರಹಿಮಾನ್ ಅವರ ವಿದಾಯ ಸನ್ಮಾನ ಸಮಾರಂಭವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸನ್ಮಾನವನ್ನು ನೆರವೇರಿಸಿ ಮಾತನಾಡಿದ ಜುಮ್ಮ ಮಸೀದಿ ಸೂರಲ್ಪಾಡಿ ಇದರ ಅಧ್ಯಕ್ಷರಾದ ಅಬ್ದುಲ್ ಮಜೀದ್ರವರು ಶಾಲೆಯಲ್ಲಿ ಕೇವಲ ಪಠ್ಯವನ್ನು ಬೋದಿಸಿದರೆ ಸಾಲದು ಪಠ್ಯೇತ್ತರ ಚಟುವಟಿಕೆಗಳನ್ನು ಹಮ್ಮಿ ಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಬಹಳ ಪ್ರಮುಖ್ಯವಾಗಿ ಶಿಸ್ತನ್ನು ಕಲಿಸಿ ಕೊಡುವುದು ಕೂಡ ಅಷ್ಟೇ ಮುಖ್ಯ ವೆಂದರು. ಈ ನೆಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ್ಜರು ಸಂಸ್ಥೆಗೆ ನೀಡಿದ ಸೇವೆ ಅಪಾರ ವೆಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಂಘದ ಅಧ್ಯಕ್ಷರಾದ ತ್ಯಾಗಂ ಹರೇಕಳ ಇವರು ತನ್ನ ಅಭಿನಂದನಾ ಭಾಷಣದಲ್ಲಿ ಅಬ್ದುಲ್ ರಹಿಮಾನ್ರವರು ತಮ್ಮ ಸೇವಾ ಅವಧಿಯಲ್ಲಿ ಹಲವಾರು ವಿದ್ಯಾರ್ಥಿಗಳನ್ನು ರಾಜ್ಯಮಟ್ಟಕ್ಕೆ ಕಳಿಸಿ ಕೊಡುವುದರೊಂದಿಗೆ ಅಲ್ಲಿಯೂ ಉತ್ತಮ ಸಾಧನೆಯನ್ನು…
UN NETWORKS ಬಜ್ಪೆ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಜ್ಪೆ ಮತ್ತು ಸುಂಕದಕಟ್ಟೆ ವಲಯ ಹಾಗೂ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಬಜ್ಪೆ ರೋಯಲ್ ಹೌಸ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎಫ್.ಐ ಬಜ್ಪೆ ಡಿವಿಷನ್ ಅಧ್ಯಕ್ಷ ಇಸ್ಮಾಯಿಲ್ ಇಂಜಿನಿಯರ್ ವಹಿಸಿದರು. ವೇದಿಕೆಯಲ್ಲಿ ನಿವ್ರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜ ವಿ ಮುಹಮ್ಮದ್, ಡಾ. ರಿತೇಶ್ ಶೆಟ್ಟಿ,ಅಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಇಬ್ರಾಹಿಂ ಹಾಜಿ,ಕಾರ್ಯದರ್ಶಿ ಪಯಣಿಗ ಉಂಜಾಕ, ಹಿರಿಯ ನಾಗರಿಕ ಮುಹಮ್ಮದ್, ಸಾಯಿ ಮೆಡಿಕಲ್ ಮಾಲೀಕರಾದ ಚಂದ್ರಶೇಖರ್, ಕೆ.ಎಂ.ಸಿ ಆಸ್ಪತ್ರೆ ಡಾ.ಮುಕುಂದ,ಪಿ.ಎಫ್.ಐ ಬಜ್ಪೆ ಡಿವಿಷನ್ ಕಾರ್ಯದರ್ಶಿ ಮುಹಮ್ಮದ್ ರಿಯಾಝ್, ಪಿ.ಎಫ್.ಐ ಮೆಡಿಕಲ್ ಇಂಚಾಝ್ ಇಲ್ಯಾಸ್, ಪಿ.ಎಫ್.ಐ ಬಜ್ಪೆ ಏರಿಯಾ ಅಧ್ಯಕ್ಷ ಆಸೀಪ್, ಸುಂಕದಕಟ್ಟೆ ಕಾರ್ಯದರ್ಶಿ ರಹ್ಮತುಲ್ಲಾ ಉಪಸ್ಥಿತರಿದ್ದರು.
UN NETWORKS ಉಳ್ಳಾಲ: ತಂತ್ರಜ್ಞಾನ ಯುಗದ ವಿದ್ಯಾರ್ಥಿಗಳ ಬದಲಾವಣೆಗೆ ತಕ್ಕಂತೆ ಕಾಲೇಜಿನ ಉಪನ್ಯಾಸಕರು ಮತ್ತು ಹೆತ್ತವರು ತಮ್ಮ ಜ್ಞಾನ ಕೌಶಲ್ಯವನ್ನು ಬದಲಾಯಿಸಿಕೊಂಡರೆ ಮಾತ್ರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸಾಧ್ಯ ಎಂದು ಜ್ಞಾನ ಆಯೋಗದ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅಭಿಪ್ರಾಯಿಸಿದ್ದಾರೆ. ಅವರು ದೇರಳಕಟ್ಟೆಯ ಯೇನೆಪೊಯ ವಿವಿ ಕ್ಯಾಂಪಸ್ನ ಯೆಂಡ್ಯೂರೆನ್ಸ್ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದಿನ ಕಾಲದ ಮಕ್ಕಳು ಹಿಂದಿನ ಕಾಲದ ವ್ಯವಸ್ಥೆಯಲ್ಲಿ ಇಲ್ಲ. ತಂತ್ರಜ್ಞಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳ ಕೌಶಲ್ಯ, ಕಾರ್ಯವೈಖರಿಯಲ್ಲಿ ಬದಲಾಗಿದ್ದಾರೆ. ಅವರ ಬದಲಾವಣೆ ಮತ್ತು ಅವರಿಗೆ ಬೇಕಾದ ಜ್ಞಾನವನ್ನು ನೀಡುವ ಕಾರ್ಯಕ್ಕೆ ಉಪನ್ಯಾಸಕರು ತಮ್ಮನ್ನು ಸಜ್ಜುಗೊಳಿಸಬೇಕಾಗಿದೆ. ಈ ರೀತಿಯಲ್ಲಿ ಕಾರ್ಯವಾದಾಗ ಯುವ ಜನಾಂಗ ಹೊಸ ವಿಚಾರಗಳ ಬಗ್ಗೆ ಅಭಿರುಚಿಯೊಂದಿಗೆ ನಾಯಕತ್ವವನ್ನು ವಹಿಸಕೊಳ್ಳಲು ಸಾಧ್ಯವಾಗುತ್ತದೆ ಎಂದರು. 80 ದಶಕದ ಡಿಜಿಟಲ್ ಕ್ರಾಂತಿಗೆ ಅಡಿಪಾಯ : ಇಂದು ಡಿಜಿಟಲ್ ಇಂಡಿಯಾ ವಿಚಾರದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಡಿಜಿಟಲ್ ಕ್ರಾಂತಿ 80ರ ದಶಕದಲ್ಲೇ ರಾಜೀವ್ ಗಾಂಧಿ ಕಾಲದಲ್ಲಿ ಅಡಿಪಾಯ ಹಾಕಲಾಗಿತ್ತು.…

