Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ` ಸಾಮರಸ್ಯ-ಸಂಘಟನೆ- ಅಭಿವೃದ್ಧಿ ಕೊಟ್ಟ ಮಾತು ದಿಟ್ಟ ಹೆಜ್ಜೆ’ ಧ್ಯೇಯ ವಾಕ್ಯದಡಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಸೆ.22 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ತಿಳಿಸಿದ್ದಾರೆ. ತೊಕ್ಕೊಟ್ಟುವಿನಲ್ಲಿ ಬುಧವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಮುಡಿಪು ಬ್ಲಾಕ್ ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು. ಕೇರಳದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಿದ್ಧರಾಮಯ್ಯ ನೇತೃತ್ವದ ಸರಕಾರದ ಸಾಧನೆ ಮತ್ತು ಕೇಂದ್ರದ ಮೋದಿ ಸರಕಾರದ ವೈಫಲ್ಯತೆಯನ್ನು ತಿಳಿಸಲಿದ್ದಾರೆ. ಮುಂಬರುವ ಚುನಾವಣೆಯನ್ನು ಮುಂದಿಟ್ಟು ಆಯೋಜಿಸಲಾದ ಸಮಾವೇಶದಲ್ಲಿ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.…

Read More

UN NETWORKS ಕೊಲ್ಯ: ಕೊಲ್ಯ ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಕದ್ರಿ ಕದಲಿ ಜೋಗಿಮಠದ ಸ್ವಾಮೀಜಿಗಳು ಭೇಟಿ ನೀಡಿ ಶ್ರೀ ರಮಾನಂದ ಸ್ವಾಮೀಜಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ನ್ಯಾಯವಾದಿ ಮಹಾಬಲ ಶೆಟ್ಟಿ , ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರದ ಗೌರವಾಧ್ಯಕ್ಷರಾದ ನಾರಾಯಣ ಗೋರಿಗುಡ್ಡೆ, ಕಾರ್ಯದರ್ಶಿ ನಾರಾಯಣ ಕುಂಪಲ, ಬಾಲಕೃಷ್ಣ ಕೊಲ್ಯ, ಸಂತೋಷ್ ಕುಮಾರ್ ಕನೀರು ತೋಟ, ಕೋಶಾಧಿಕಾರಿ ರಾಧಕೃಷ್ಣ ಕೊಲ್ಯ, ರಾಘವೇಂದ್ರ, ಶೇಖರ್ ಕನೀರುತೋಟ, ಮಾತೃಮಂಡಳಿಯ ಗುಣವತಿ ಟೀಚರ್, ಹಾಗೂ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡೆರೇಶನ್ ಎಸ್ ಎಸ್ ಎಫ್ ಸಪ್ಟೆಂಬರ್ 19 ಧ್ವಜ ದಿನದ ಪ್ರಯುಕ್ತ ತೊಕ್ಕೊಟ್ಟು ಹಿದಾಯತ್ ನಗರ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಹಿದಾಯತ್ ನಗರ ಮೈದಾನದಲ್ಲಿ ನಡೆಯಿತು. ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲದ ಅಧ್ಯಕ್ಷ ಹಸನ್ ಮುಬಾರಕ್ ಸಖಾಫಿ ಧ್ವಜಾರೋಹಣ ನೆರೆವೇರಿಸಿ ಎಸ್ ಎಸ್ ಎಫ್ ನ ಮಹತ್ವವನ್ನು ವಿವರಿಸಿದರು. ಉಳ್ಳಾಲ್ ನಗರ ಸಭೆಯ ಸದಸ್ಯ ಸ್ತಳೀಯ ಕೌನ್ಸಿಲರ್ ಫಾರುಕ್ ಯು.ಎಚ್ ಮಾತನಾಡಿ ಎಲ್ಲರೊಂದಿಗೆ ಉತ್ತಮ ರೀತಿಯಲ್ಲಿ ಬಾಂದವ್ಯ ಬೆಳೆಸಿ ಕಾರ್ಯಚರಿಸಲು ಉಪದೇಶ ನೀಡಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಸಯ್ಯದ್ ಮದನಿ ದರ್ಗ ಉಳ್ಳಾಲ ಸದಸ್ಯರಾದ ಮುಹಮ್ಮದ್ , ತೊಕ್ಕೋಟ್ಟು ಸೆಕ್ಟರ್ ಪ್ರ.ಕಾರ್ಯದರ್ಶಿ ಜಾಫರ್ ಯು.ಎಸ್, ಸೆಕ್ಟರ್ ರಿಲೀಫ್ ಸರ್ವಿಸ್ ಕೋಶಾಧಿಕಾರಿ ಶಮೀರ್ ಹಿದಾಯತ್ ನಗರ, ಎಸ್ ವೈ ಎಸ್ ಸದಸ್ಯರಾದ ಅಮೀರ್ ತೊಕ್ಕೊಟ್ಟು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಕಾರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಮಂಗಳವಾರ ಸಂಭವಿಸಿದೆ. ತಲಪಾಡಿ ನಿವಾಸಿ ಪ್ರಜ್ವಲ್ (19) ಕಾಲಿಗೆ ಗಂಭೀರ ಗಾಯವಾಗಿದ್ದು, ಸವಾರ ಕುಂಪಲ ನಿವಾಸಿ ಧನುಷ್ (22) ಎಂಬವರಿಗೂ ಗಾಯವಾಗಿದೆ. ವಿದ್ಯಾರ್ಥಿಗಳಾಗಿರುವ ಇಬ್ಬರು ಉಚ್ಚಿಲದ ಪೆಟ್ರೋಲ್ ಪಂಪಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದಂತೆ ಕೇರಳ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎಂದು ಗಾಯಾಳುಗಳು ತಿಳಿಸಿದ್ದಾರೆ. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

UN NETWORKS ಕುತ್ತಾರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಕಂಕನಾಡಿ `ಡನ್ ಗ್ರೂಪ್ ‘ ಯುವಕರ ತಂಡದ  ವತಿಯಿಂದ ಕುತ್ತಾರು ಬಾಲಸಂರಕ್ಷಣಾ ಕೇಂದ್ರದ ಮಕ್ಕಳಿಗೆ  ಹೊಸ ಬಟ್ಟೆಗಳನ್ನು ವಿತರಿಸಲಾಯಿತು. ತಂಡ ಮಂಗಳೂರಿನ ಭಗಿನಿ ಸಮಾಜ,  ಪಂಪ್ ವೆಲ್  ಆಶ್ರಮ, ವಾಮಂಜೂರು ಡಂಪಿಂಗ್ ಯಾರ್ಡ್ ಕಾಲನಿ ಮಕ್ಕಳಿಗೆ ಮತ್ತು ಆರ್ಯ ಸಮಾಜದಲ್ಲಿರುವವರಿಗೆ ಹೊಸ ಬಟ್ಟೆಗಳನ್ನು ವಿತರಿಸಿದೆ. ಈ ಸಂದರ್ಭ ಗಣೇಶ್ ಮಾಡೂರು, ವಿಕ್ರಂ ಶೆಟ್ಟಿ,  ನೀತು ಶೆಟ್ಟಿ,  ಸೌರಜ್, ಪವನ್ ಕುಮಾರ್,  ನಾಗರಾಜ್ ಕುಂಪಲ,  ಉದಯ ಸುವರ್ಣ, ಚರಣ್ ಶೆಟ್ಟಿ,  ಗಂಗಾಧರ ಎಕ್ಕೂರು,  ಸಂಕೇತ್, ಸಂಜಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More

UN NETWORKS ತೊಕ್ಕೊಟ್ಟು: ತುಳುನಾಡು ರಕ್ಷಣಾ ವೇದಿಕೆ ಕಚೇರಿಯ ಬಳಿ ಹಾಕಲಾದ ಬ್ಯಾನರ್‍ಗಳನ್ನು ಕಿಡಿಗೇಡಿಗಳು ಹರಿದು, ಶಟರನ್ನು ತೆರೆಯಲು ಯತ್ನಿಸಿರುವ ಘಟನೆ ಸೋಮವಾರ ಮಧ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ತುಳುನಾಡು ರಕ್ಷಣಾ ವೇದಿಕೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಕಚೇರಿ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಕಾರ್ಯಾಚರಿಸುತ್ತಿದೆ. ಇಲ್ಲಿ ಕಚೇರಿಯ ಹೊರ ಆವರಣದ ಗೋಡೆಯಲ್ಲಿ ಎರಡು ಬೃಹತ್ ಗಾತ್ರದ ಬ್ಯಾನರ್ ಗಳನ್ನು ಅಳವಡಿಸಲಾಗಿತ್ತು. ಇದರಲ್ಲಿ ಒಂದು ಬ್ಯಾನರನ್ನು ಸಂಪೂರ್ಣ ಹರಿದು ಕೊಂಡೊಯ್ದಿರುವ ಕಿಡಿಗೇಡಿಗಳು ಇನ್ನೊಂದು ಬ್ಯಾನರಿಗೆ ಭಾಗಶ: ಹಾನಿ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪ್ರಯತ್ನ : ತುಳುನಾಡು ರಕ್ಷಣಾ ವೇದಿಕೆ ಹಲವು ಸಾಮಾಜಿಕ ಪಿಡುಗುಗಳ ವಿರುದ್ಧ , ದುರ್ಬಲರ ಪರವಾಗಿ ದನಿ ಎತ್ತಿರುವುದಲ್ಲದೆ ಉಳ್ಳಾಲ ವ್ಯಾಪ್ತಿಯಲ್ಲಿ ಅವ್ಯಾಹತವಾಗಿರುವ ಗಾಂಜಾ ವಿರುದ್ಧ ಹೋರಾಟ ನಡೆಸಿತ್ತು. ಇಂತಹ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕಿಡಿಗೇಡಿಗಳು ದುಷ್ಕøತ್ಯ ಎಸಗಿದ್ದಾರೆ ಎಂಬುದು ತು.ರ.ವೇ ಮುಖಂಡ ಸಿರಾಜ್ ಅಡ್ಕರೆ ಆರೋಪಿಸಿದ್ದಾರೆ.

Read More

UN NETWORKS ಬಾಯರ್: ಮ್ಯಾನ್ಮರ್‍ನಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ಮಾರಣ ಹೋಮ ಕ್ರೌರ್ಯ ಕಳವಳಕಾರಿಯಾದುದ್ದು ಮತ್ತು ಹೃದಯ ವಿದ್ರಾವಕವಾದುದು. ಮ್ಯಾನ್ಮರ್ ಸರಕಾರದ ಆದೇಶದ ಮೇರೆಗೆ ಆ ದೇಶದ ಸೈನ್ಯ ಮತ್ತು ಅರಕಾನ್ ಬೌದ್ಧರು ರೋಹಿಂಗ್ಯಾ ಮುಸ್ಲಿಮರನ್ನು ಸರ್ವನಾಶ ಮಾಡುತ್ತಿದ್ದು ಮ್ಯಾನ್ಮರ್ ಸರಕಾರದ ಈ ತೀರ್ಪನ್ನು ಮರುಪರಿಶೀಲನೆ ನಡೆಸಿ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ಹೇಳಿದರು. ಅವರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ಕಾಸರಕೋಡುವಿನ ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಾ ಸಂಸ್ಥೆಯಲ್ಲಿ ಮಾಸಿಕ ನಡೆಸಿ ಬರುವ ಸ್ವಲಾತ್ ಮಜ್ಲಿಸ್ ಮತ್ತು ಮರ್ಹೂಂ ಪೊಸೋಟು ಉಮರುಲ್ ಫಾರೂಕ್ ತಂಙಳ್ ಅನುಸ್ಮರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮತನಾಡಿದರು. ಇತ್ತಿಚೆಗಿನ ಎಲ್ಲಾ ಪ್ರಕರಣಗಳನ್ನು ನೋಡಿದಾಗ ಪ್ರವಾದಿ ಹೆಳೀದ ಜಗತ್ತಿನ ಅಂತ್ಯ ದಿನದ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಮುಸ್ಲಮಾನರು ತನ್ನ ಜೀವನದಲ್ಲಿ ನಡೆದ ತಪ್ಪುಗಳನ್ನು ಅಲ್ಲಾಹನದಲ್ಲಿ ಕ್ಷಮೆಯಾಚಿಸಲು ಮುಂದಾಗಬೇಕು ಎಂದು ಹೇಳಿದರು.ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಾ ಸಂಸ್ಥೆಯ ಶಿಲ್ಫಿ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿ…

Read More

UN NETWORKS ದೇರಳಕಟ್ಟೆ: ದೇರಳಕಟ್ಟೆಯ ಬ್ಯಾರಿ ಸಾಹಿತಿ ಮತ್ತು ಕಲಾವಿದರ ಒಕ್ಕೂಟವಾದ `ಮೇಲ್ತೆನೆ’ ಸಂಘಟನೆಯ ವತಿಯಿಂದ ಸಂಘಟನೆಯ ಸದಸ್ಯ, ಯೆನೆಪೊಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಿಯಾಝ್ ಪಿ. ಅವರ ಮನೆಯಲ್ಲಿ ರವಿವಾರ ಬ್ಯಾರಿ ಸಾಹಿತ್ಯ ಸಂವಾದ ಕೂಟ ನಡೆಯಿತು. “ಕಾಲೇಜುಗಳಲ್ಲಿ ಬ್ಯಾರಿ ಭಾಷೆ” ಎಂಬ ವಿಷಯದಲ್ಲಿ ನಿಯಾಝ್ ಮಂಡಿಸಿದ ಪ್ರಬಂಧದ ಮೇಲೆ ಸಂಘಟನೆಯ ಸದಸ್ಯರು ವಿಸ್ತೃತ ಚರ್ಚೆ ನಡೆಸಿದರು.ಕಾಲೇಜು ಆವರಣದಲ್ಲಿ ಬ್ಯಾರಿ ಮಕ್ಕಳು ಬ್ಯಾರಿ ಭಾಷೆಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದಾರೆ. ಕೆಲವು ಕಡೆ ದಂಡ ಹಾಕುವ ಪ್ರಕ್ರಿಯೆಯೂ ಇದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಅಲ್ಲದೆ, ಶಾಲಾ-ಕಾಲೇಜುಗಳಲ್ಲಿ ತುಳು, ಕೊಂಕಣಿ ಸಾಹಿತ್ಯ ಸಂಘ ರಚಿಸಿದಂತೆ ಬ್ಯಾರಿ ಸಾಹಿತ್ಯ ಸಂಘ ರಚಿಸಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮುಂದಾಗಬೇಕು. ಶಾಲಾ-ಕಾಲೇಜುಗಳ ಗೋಡೆಬರೆಹ ಸಂಚಿಕೆಗಳಲ್ಲಿ ಬ್ಯಾರಿ ಭಾಷೆಗೂ ಅವಕಾಶ ಸಿಗುವಂತಾಗಬೇಕು ಎಂದು ನಿಯಾಝ್ ಅಭಿಪ್ರಾಯಪಟ್ಟರು. ಇದಕ್ಕೆ ಇತರ ಸದಸ್ಯರೂ ಧ್ವನಿಗೂಡಿಸಿದರು. `ಮೇಲ್ತೆನೆ’ ಸಂಘಟನೆಯ ಅಧ್ಯಕ್ಷ ಆಲಿಕುಂಞ ಪಾರೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮೇಲ್ತೆನೆಯ ಪದಾಧಿಕಾರಿಗಳಾದ ಇಸ್ಮಾಯೀಲ್ ಟಿ.,…

Read More

UN NETWORKS ಕೊಣಾಜೆ: ಓಬೆಲೆ ಲೇಲೆ ಐಲೇ ಸಾ ಐ ಲೇಸಾ… ಹೀಗೆ ವಿದ್ಯಾರ್ಥಿಗಳ ಹಾಗೂ ಕೃಷಿ ಕಾರ್ಯದಲ್ಲಿ ತೊಡಗಿಕೊಂಡವರ ಜತೆಗೆ ಜಾನಪದ ಪದಗಳೊಂದಿಗೆ ದನಿಗೂಡಿಸಿ ನಾಟಿ ಕೆಲಸದಲ್ಲಿ ತೊಡಗಿಸಿಕೊಂಡವರು ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಇವರು ಕೊಣಾಜೆಯ ಅಣ್ಣೆರೆಪಾಲು ಗದ್ದೆಯಲ್ಲಿ ಮಂಗಳೂರು ರಥಬೀದಿಯ ಡಾ.ಪಿ. ದಯಾನಂದ ಪೈ, ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು, ರೆಡ್ ರಿಬ್ಬನ್ ಮತ್ತು ಕೊಣಾಜೆ ಗ್ರಾಮ ಪಂಚಾಯತ್ , ರೈತ ಸಂಘ ಹಸಿರು ಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ನಡಿಗೆ ರೈತರ ಹಡೀಲು ಭೂಮಿಯ ಕಡೆಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾದ ಸಚಿವರು ತಡವಾಗಿ ಆಗಮಿಸಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ವಿದ್ಯಾರ್ಥಿಗಳ ಜತೆಗಿನ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಕೃಷಿ ಕೆಲಸಕ್ಕೆ ಸ್ಪೂರ್ತಿ ತುಂಬಿದರು. ಟ್ರಾಫಿಕ್ ನಿರ್ವಹಿಸಿ, ಬಸ್ಸನ್ನು ಚಲಾಯಿಸಿ, ಬುಲ್ಡೋಜರ್ ನ್ನೂ ಚಲಾಯಿಸಿ…

Read More

UN NETWORKS  ಮುಡಿಪು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿಯೊಬ್ಬನಿಗೆ ಹುಟ್ಟಿದ ನೆಲದ ಒಡೆತನ ಸಿಕ್ಕಾಗ ಸಿಗುವಷ್ಟು ಸಾರ್ಥಕತೆ ಮತ್ತೊಂದಿಲ್ಲ. ಹಾಗಾಗಿ ನೆಲದ ಒಡೆತನದ ಇಲ್ಲದ ಬಡವರು ತಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಬೇಕು, ನಮ್ಮ ನೆಲದಲ್ಲಿ ನಾವಿದ್ದೇವೆ ಎಂಬ ಭಾವನೆ ಮೂಡಬೇಕು ಎಂಬ ನೆಲೆಯಲ್ಲಿ ಹಕ್ಕುಪತ್ರ ಕೊಡಲಾಗಿದೆ ಹಕ್ಕುಪತ್ರ ಅರ್ಜಿ ಸಲ್ಲಿಕೆ ದಿನಾಂಕ ಅನಿವಾರ್ಯತೆ ಇದ್ದಲ್ಲಿ ವಿಸ್ತರಿಸಲಾಗುವುದು ಎಂದು ಹೇಳುತ್ತಿದ್ದಂತೆ , ನಡುವೆ ಮಾತನಾಡಿದ ಕುರ್ನಾಡು ಜಿ.ಪಂ ಸದಸ್ಯೆ ಮಮತಾ ಗಟ್ಟಿ ಮತ್ತು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ` ಲೇ ಹುಚ್ಚರೇ. ಸರಿಯಾಗಿ ಕೆಲಸ ಮಾಡ್ರಿ’ ಎಂದು ತರಾಟೆಗೆ ತೆಗೆದುಕೊಂಡ ಘಟನೆ ಇತ್ತೀಚೆಗೆ ನಡೆಯಿತು. ಕರ್ನಾಟಕ ಸರಕಾರ ಕಂದಾಯ ಇಲಾಖೆ ಆಶ್ರಯದಲ್ಲಿ ಮುಡಿಪುವಿನ ಕುರ್ನಾಡು ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸುವ ವೇಳೆ ಇಬ್ಬರ ಮೇಲೆ ಸಚಿವರು ಗುಡುಗಿದರು. ಉಳುವವನೆ ಹೊಲದೊಡೆಯ…

Read More