UN NETWORKS ಉಳ್ಳಾಲ: ದೇಯಿ ಬೈದ್ಯೆತಿ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಔಷಧಿ ವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಉಳ್ಳಾಲ ವಲಯದ ದೇಯಿ ಬೈದ್ಯೆತಿ ಕೋಟಿ-ಚೆನ್ನಯ್ಯ ಮೂಲಸ್ಥಾನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ವತಿಯಿಂದ ಮನವಿ ನೀಡಲಾಯಿತು. ಈ ಸಂದರ್ಭ ಗೆಜ್ಜೆಗಿರಿ ನಂದನ ಬಿತ್ತಿಲ್, ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ , ಕಾರ್ಯಾಧ್ಯಕ್ಷ ಯಶವಂತ ದೇರಾಜೆ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಲಕ್ಷ್ಮಿ ಪಿಲಾರ್, ಗೆಜ್ಜೆಗಿರಿ ಉಳ್ಳಾಲ ವಲಯ ಮಹಿಳಾ ಸಮಿತಿ ಅಧ್ಯಕ್ಷೆ ನಮಿತಾ ಶ್ಯಾಂ, ರವೀಂದ್ರ ಬಂಗೇರ , ಆನಂದ ಅಸೈಗೋಳಿ, ಜಯಶ್ರೀ ಕರ್ಕೇರ, ಬಿಲ್ಲವ ಸಂಘ ಗ್ರಾಮಚಾವಡಿ ಅಧ್ಯಕ್ಷ ಲಕ್ಷ್ಮಣ ಕೋಟ್ಯಾನ್ , ಬಿಲ್ಲವ ಸಂಘ ಕೊಲ್ಯ ಮಾಜಿ ಅಧ್ಯಕ್ಷ ಬಾಳಪ್ಪ ಪೂಜಾರಿ, ಟಿ.ಮೋಹನ ಕೋಟ್ಯಾನ್ , .ನಾರಾಯಣ ಪೂಜಾರಿ , ಮುತ್ತಪ್ಪ ಪೂಜಾರಿ, ರವಿಚಂದ್ರ ಅಮೀನ್, ಉಮೇಶ್ ಕೈರಂಗಳ…
Author: UllalaVani
UN NETWORKS ಕುಂಪಲ: ಕುಂಪಲದ ಗುರುನಗರ ಶ್ರೀ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರುಕುಡಿಕೆ ಉತ್ಸವ ಸಂದರ್ಭ ಶ್ರೀ ಕೃಷ್ಣ ದೇವರ ವಿಶೇಷ ಪೂಜೆಯನ್ನು ಗೋವು ಬಂದು ನಿಂತು ವೀಕ್ಷಿಸಿದ ವಿಚಿತ್ರ ಪ್ರಸಂಗದ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ. ಎರಡು ದಿನಗಳ ಕಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನಮಾಷ್ಟಮಿ ಪ್ರಯುಕ್ತ ಪೂಜೆ ನಡೆಯುತಿತ್ತು. ಮೊದಲ ದಿನದ ರಾತ್ರಿ ಪೂಜೆಯ ಸಂದರ್ಭ ಗೋವು ದೇವಸ್ಥಾನದ ಅಂಗಳದಲ್ಲಿ ಹಾಕಲಾಗಿದ್ದ ರಂಗವಲ್ಲಿಯಲ್ಲಿ ನಿಂತು ಪೂಜೆಯನ್ನು ನೋಡಲು ನಿಂತಿತ್ತು. ಕೆಲ ನಿಮಿಷಗಳವರೆಗೆ ನಡೆದ ಪೂಜೆಯನ್ನು ನೋಡಿದ ಗೋವು ಬಳಿಕ ಪ್ರಸಾದ ವಿತರಣೆ ಬಳಿಕ ವಾಪಸ್ಸಾಗಿದೆ. ಗೋಪಾಲಕನ ಪೂಜೆಯನ್ನು ಕಣ್ತುಂಬಿಕೊಳ್ಳಲು ಗೋವೊಂದು ಬಂದಿತ್ತು. ಶ್ರೀಕೃಷ್ಣನಿಗೆ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ನಡೆಯುವವರೆಗೂ ದೇವಾಲಯದ ಗರ್ಭಗುಡಿಯ ಹೊರಗೆ ನಿಂತು ಶ್ರೀಕೃಷ್ಣನ ಬಿಂಬವನ್ನು ಕಣ್ತುಂಬಿಕೊಂಡಿಕೊಂಡಿರುವುದು ವಿಶೇಷವಾಗಿತ್ತು ಎಂಬುದು ಭಕ್ತರೋರ್ವರ ಅಭಿಪ್ರಾಯವಾಗಿದೆ. ಈ ಹಿಂದೆ ದೇವಸ್ಥಾನದಲ್ಲಿ ಮಧ್ಯಾಹ್ನ ಪೂಜೆಯ ವೇಳೆ ಗರುಡವೊಂದು ದೇವಸ್ಥಾನದ ಸುತ್ತ…
UN NETWORKS ನಾಟೆಕಲ್: ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ಸರಣಿ ಅಪಘಾತ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಪ್ರಯಾಣಿಕರನ್ನು ಹತ್ತಿಸಲೆಂದು ಆಸ್ಪತ್ರೆ ಎದುರುಗಡೆ ಬಿ.ಸಿ.ರೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ನಿಂತಿತ್ತು. ಈ ವೇಳೆ ಹಿಂಬದಿ ಯಿಂದ ಅತಿವೇಗವಾಗಿ ಬಂದ ಕಾರು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.ಅಷ್ಟರಲ್ಲಿ ಗುದ್ದಿದ ಕಾರಿನ ಹಿಂಬದಿಯಿದ್ದ ಇನ್ನೊಂದು ವ್ಯಾಗನಾರ್ ಕಾರು, ಕಾರಿನ ಹಿಂಬದಿಗೆ ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡು ಕಾರುಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ಸು ಚಾಲಕರು ಎಲ್ಲೆಂದರಲ್ಲಿ ಬಸ್ಸುಗಳನ್ನು ನಿಲ್ಲಿಸುತ್ತಿರುವುದರಿಂದ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಇಂದು ನಡೆದ ಘಟನೆಗೂ ಸಾರ್ವಜನಿಕರು ಬಸ್ಸು ಚಾಲಕರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ.
UN NETWORKS ಕೋಟೆಕಾರು: ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಣಾಮ್ನಾಯ ಶ್ರೀ ಶಾರದಾ ಪೀಠ ಕೋಟೆಕಾರು ಶಾಖಾ ಮಠದಲ್ಲಿ ಸೆ. 21ರಿಂದ 30ರವರೆಗೆ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ಶುಕ್ರವಾರ ಶಾಖಾ ಮಠದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸೆ. 21ರಂದು ಸಂಜೆ ಗಂಟೆ 5.00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಹರಿಕಥೆ, ಹರಿದಾಸರ ಶ್ರೀ ದೇವಕೀ ತನಯ ಕೋಡುಲ, ಪಾಶುಪಥ ಪ್ರದಾನ ಕಥಾಭಾಗ ನಡೆಯಲಿದೆ. ಸೆ. 22ರಂದು ಸಂಜೆ 5.30ಕ್ಕೆ ವಾಲಿಮೋಕ್ಷ ಯಕ್ಷಗಾನ ತಾಳಮದ್ದಲೆ, 23ರಂದು ಸಾಂಸ್ಕøತಿಕ ಕಾರ್ಯಕ್ರಮ, 24ರಿಂದ29ರವರೆಗೆ ಸಂಜೆ ಗಂಟೆ 5.30ಕ್ಕೆ ಕರ್ನಾಟ ಸಂಗೀತ ಕಛೇರಿ ಸೆ. 30ರಂದು ಹರಿಕಥೆ ಹಾಗೂ ಶ್ರೀ ದೇವಿ ಮಹಾತ್ಮೆ ಕಥಾಭಾಗ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶಾಖಾ ಮಠದ ಧರ್ಮಾಧಿಕಾರಿ ಬೊಳ್ಳಾವ…
UN NETWORKS ಉಳ್ಳಾಲ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ ಮತ್ತು ಮದನಿ ಪ್ರೌಢ ಶಾಲೆ ಅಳೇಕಲ ಉಳ್ಳಾಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕಲ್ಕಟ್ಟ, ಮಂಜನಾಡಿ, ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ.
UN NETWORKS ಉಳ್ಳಾಲ: ಶ್ರೀ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ಗುರುವಾರ ಬಾಲಯೋಗಿ ಅಮೃತಾನಂದ ಸ್ವಾಮೀಜಿಯ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕ್ಷೇತ್ರದಲ್ಲಿ ಶ್ರೀ ಕೃಷ್ಣ ಮೂರ್ತಿಯ ಪ್ರತಿಷ್ಠೆಯೊಂದಿಗೆ ನಡೆದ ಧಾರ್ಮಿಕ ಕಾರ್ಯಕ್ರಮ ವಿಜೃಂಭಣೆಯ ಮೊಸರು ಕುಡಿಕೆಯೊಂದಿಗೆ ಸಮಾರೋಪ ಕಂಡಿತು. ದೇವರ ನಾಮದ ಜಯಕಾರದೊಂದಿಗೆ ಕುಂಪಲದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಕೃಷ್ಣನ ಮೂರ್ತಿಯೊಂದಿಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಭಕ್ತರು ದಾರಿಯಲ್ಲಿ ಹಾಕಲಾದ ಕುಡಿಕೆ ಯನ್ನು ಒಡೆದು ಸಂಭ್ರಮಿಸಿದರು. ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿ ನಡೆದ ವಿವಿಧ ಆಟೋಟ ಸ್ಪರ್ಧೆ ಯನ್ನು ಉದ್ಯಮಿ ದೇವೀಶ್ ಸರಳಾಯ ಕುಂಪಲ ಉದ್ಘಾಟಿಸಿದರು. ಲಗೋರಿ, ಕಬಡ್ಡಿ, ಚೆಂಡಾಟ ಮತ್ತು ಮಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
UN NETWORKS ಉಳ್ಳಾಲ: ಕೇಂದ್ರ ಸಾಹಿತ್ಯ ಅಕಾಡಮಿ ವತಿಯಿಂದ ತುಳು ಭಾಷೆಗೆ ನೀಡಿದ ಕೊಡುಗೆಗಾಗಿ ಪ್ರೋ. ಅಮೃತ ಸೋಮೇಶ್ವರ ಅವರಿಗೆ ನೀಡಲಾದ ಭಾಷಾ ಸಮ್ಮಾನ್ ಪ್ರಶಸ್ತಿಯನ್ನು ನಿಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಪ್ರದಾನ ಮಾಡಲಾಯಿತು. ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೋ. ಅಮೃತ ಸೋಮೇಶ್ವರ ಅವರಿಗೆ ಆಸ್ಪತ್ರೆಯ ಸಭಾಂಗಣದಲ್ಲೇ ಇಂದು ಅತಿಥಿಗಳ ಸಮ್ಮುಖದಲ್ಲಿ ಈ ಪ್ರತಿಷ್ಠಿತ ಸಮ್ಮಾನ್ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರಧಾನ ಮಾಡಿದ ಕೇಂದ್ರ ಸಾಹಿತ್ಯ ಅಕಾಡಮಿಯ ಉಪಾಧ್ಯಕ್ಷ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಮಾತನಾಡಿ ಪಾಡ್ದನಗಳನ್ನು ಅನುವಾದ ಮಾಡಿ ಕನ್ನಡಕ್ಕೆ ಭಾಷಾಂತರ ನಡೆಸಿದ ಅಮೃತ ಸೋಮೇಶ್ವರ ಜತೆಗಿನ 30 ವರ್ಷಗಳ ಸ್ನೇಹ. ಸಿರಿ ಪಾಡ್ದನ ಸೇರಿದಂತೆ ತನ್ನ ಕೃತಿಯನ್ನು ತುಳುವಿಗೆ ಅನುವಾದಿಸಿದ ಕೀರ್ತಿ ಅಮೃತ ಸೋಮೇಶ್ವರ ಅವರಿಗೆ ಸಲ್ಲುತ್ತದೆ. ಸೋಮೇಶ್ವರ್ ಅವರ ಕೃತಿಗಳು ಯಕ್ಷಗಾನದ, ಕನ್ನಡ ಮತ್ತು ತುಳು ಭಾಷಾ ಕೃತಿಗಳು ಮೂರು ಸಂಪುಟಗಳಲ್ಲಿ ಬಿಡುಗಡೆ ಮಾಡಬೇಕಿದೆ ಎಂದ ಅವರು ಆಸ್ಪತ್ರೆಯಲ್ಲಿದ್ದಾರೆ…
UN NETWORKS ಉಳ್ಳಾಲ: ಮಹಿಳೆಯರ ಸಬಲೀಕರಣಕ್ಕಾಗಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಪ್ರತಿ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಮಹಿಳೆಯರು ಸ್ವಉದ್ಯೋಗದ ಮೂಲಕ ಜೀವನ ರೂಪಿಸಿಕೊಳ್ಳುವ ಉದ್ದೇಶ ಇಟ್ಟುಕೊಂಡು ಹಮ್ಮಿಕೊಂಡಿರುವ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಭಾನು ಅಭಿಪ್ರಾಯಪಟ್ಟರು. ಅವರು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಳ್ಮ ರೆಂಜಾಡಿ ಕೇಂದ್ರ ಜುಮಾ ಮಸೀದಿ ಮದರಸ ಕಟ್ಟಡದಲ್ಲಿ ಗುರುವಾರ ಅಯೋಜಿಸಿದ ಟೈಲರಿಂಗ್ ತರಬೇತಿ ಶಿಬಿರ “ವಿನ್ಯಾಸ ಟೈಲರಿಂಗ್ ಸೆಂಟರ್” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಆರು ತಿಂಗಳ ಕಾಲ ಸತತ ಪ್ರಯತ್ನ ಪಟ್ಟು ತರಬೇತಿ ಪಡೆದುಕೊಂಡು ತರಬೇತಿ ಪಡೆಯುವವರು ಉತ್ತಮ ಟೈಲರ್ಗಳಾಗಬೇಕಿದೆ. ಪ್ರತಿ ಗ್ರಾಮಗಳಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಟ್ಯಾಲೆಂಟ್ ರಿಸರ್ಚ್ ಫೌಂಡೇಷನ್ನಿನ ಕಾರ್ಯಕ್ರಮ ಸಮಾಜಕ್ಕೆ ಪೂರಕ ಎಂದರು. ಬೆಳ್ಮ ಗ್ರಾ.ಪಂ ಅಧ್ಯಕ್ಷ ವಿಜಯ ಕೃಷ್ಣ ಪೂಜಾರಿ ತರಬೇತಿಯನ್ನು ಉದ್ಘಾಟಿಸಿದರು. ಬೆಳ್ಮ ಗ್ರಾ.ಪಂ ಸದಸ್ಯೆ ಶರ್ಮಿಳಾ , ಆಸರೆ ವುಮೆನ್ಸ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷೆ ಶಬೀನ…
UN NETWORKS ಮಂಗಳೂರು: ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಎಸ್ಐಸಿ ಕಿನ್ಯ ಇದರ ವಾರ್ಷಿಕ ಮಹಾಸಭೆಯು ಸೈಯ್ಯದ್ ಅಮೀರ್ ತಂಙಳ್ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಾರೂನ್ ಅಹ್ಸನಿ ಉದ್ಘಾಟನೆಗೈದು, ಕೆ. ಪಿ. ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ಸಾರಥಿಗಳನ್ನು ಆಯ್ಕೆಮಾಡಲಾಯಿತು. ಗೌರವ ಅಧ್ಯಕ್ಷರುಗಳಾಗಿ-ಸೈಯ್ಯದ್ ಅಮೀರ್ ತಂಙಳ್, ಸೈಯ್ಯದ್ ಬಾತಿಷ್ ತಂಙಳ್, ಅಧ್ಯಕ್ಷರಾಗಿ-ಅಬ್ದುಲ್ ಖಾದರ್ ಕಾಯಿಂಞ ಹಾಜಿ, ಉಪಾಧ್ಯಕ್ಷರುಗಳಾಗಿ-ಹಾರೂನ್ ಅಹ್ಸನಿ ಕಿನ್ಯ, ಅಬ್ಬೂಹಾಜಿ, ಮೊೈದಿನ್ ಮೀಂಪ್ರಿ, ಪ್ರಧಾನ ಕಾರ್ಯದರ್ಶಿಯಾಗಿ-ಮುಸ್ತಫ ಫೈಝಿ, ಜೊತೆ ಕಾರ್ಯದರ್ಶಿಗಳಾಗಿ- ಆರಿಫ್ ಎಂ. ಎನ್., ಹಮೀದ್ ಕುತುಬಿಯಾನಗರ, ಸಿರಾಜುದ್ದೀನ್ ಸಾಫಿ, ಸಂಘಟನಾ ಕಾರ್ಯದರ್ಶಿಯಾಗಿ-ಇಬ್ರಾಹಿಂ ಸಾಗ್, ಸಂಚಾಲಕರಾಗಿ-ಫಾರೂಕ್ ಕುತುಬಿಯಾನಗರ, ಸುಹೈಲ್ ಕೂಡಾರ, ಕಛೇರಿ ಕಾರ್ಯದರ್ಶಿಯಾಗಿ-ಟಿ. ಎಂ. ಮುಹಮ್ಮದ್, ಕೋಶಾಧಿಕಾರಿಯಾಗಿ-ಕೆ. ಎಸ್. ಶೇಖಬ್ಬ ಹಾಜಿ, ಮಜ್ಲಿಸುನ್ನೂರ್ ಅಮೀರ್ ಆಗಿ-ಅಮೀರ್ ತಂಙಳ್, ಸಹಚಾರಿ ಮೆಡಿಕಲ್ ಡಿಪಾಟ್ಮೆಂಟ್-ಎ. ಟಿ. ಅಬ್ದುಲ್ ಹಮೀದ್, ರೂಂ ಬಾಡಿಗೆ ಉಸ್ತುವಾರಿಯಾಗಿ-ಕೆ. ಎಸ್. ಶೇಖಬ್ಬ ಹಾಜಿ, ಚೀಟ್ಫಂಡ್ ಉಸ್ತುವಾರಿಗಳಾಗಿ-ಅಬ್ದುಲ್ ಖಾದರ್ ಹಾಜಿ, ಶೇಖಬ್ಬ ಹಾಜಿ, ಹಮೀದ್ ಕುತುಬಿಯಾ ನಗರ,…
UN NETWORKS ಮುಂಬಯಿ: ತುಳುಕನ್ನಡಿಗರ ಅಂತರಾಷ್ಟ್ರೀಯ ಪ್ರಸಿದ್ಧ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದೆಣಿಸಿದ ಇಂಡಿಯಾ ಇಂಟರ್ನೇಶನ ಲ್ ಟ್ರೇಡ್ ಸೆಂಟರ್ (ಐಐಟಿಸಿ) ಸಂಸ್ಥಾಪಕ ಎಸ್.ಕೆ ಉರ್ವಾಲ್ ಅವರು ಐಐಟಿಸಿ ಮೂಲಕ ರಾಷ್ಟ್ರ್ರದ ಸಾವಿರಾರು ಮಕ್ಕಳು ಸ್ವದ್ಯಮಿಗಳಾಗಿ ಬದುಕು ರೂಪಿಸುವಲ್ಲಿ ಯಶಸ್ವಿ ಆಗಿದ್ದಾರೆ. ದೃಢವಿಶ್ವಾಸ, ಅಭಿಲಾಷೆ, ಶ್ರಮಜೀವನದಿಂದಲೇ ಸಫಲತಾ ಬದುಕು ರೂಪಿಸಲು ಸಾಧ್ಯವಾಗಿದ್ದು ಇವೆಲ್ಲಕ್ಕೂ ಆತ್ಮವಿಶ್ವಾಸ ಮುಖ್ಯವಾದದ್ದು. ಫ್ಯಾಶನ್ರಂಗ ಬರೇ ಜೀವನ ನಿರ್ಹಹಣೆ ಮಾತ್ರವಲ್ಲ ಬದುಕಿಗೆ ಪ್ರತಿಷ್ಠೆಯನ್ನೂ ತಂದೊದಗಿಸುವ ಕ್ಷೇತ್ರವಾಗಿದೆ. ಈ ಮೂಲಕ ವಿಶೇಷವಾಗಿ ಮಹಿಳೆಯರು ಸ್ವದ್ಯಮಿಗಳಾಗುವ ವಿಫುಲ ಅವಕಾಶಗಳಿವೆ ಎಂದು ಬಾಲಿವುಡ್ನ ಹೆಸರಾಂತ ವಿನ್ಯಾಸಗಾರ ಆ್ಯಶ್ಲೀ ರೆಬೆಲ್ಲೋ ತಿಳಿಸಿದರು. ಅಂಧೇರಿ ಪೂರ್ವದ ಹೊಟೇಲ್ ಲೀಲಾ ಕೆಂಪೆನ್ಸ್ಕಿ ಬಾಲ್ರೂಮ್ ಸಭಾಗೃಹದಲ್ಲಿ ತುಳುಕನ್ನಡಿಗರ ಅಂತರಾಷ್ಟ್ರೀಯ ಪ್ರಸಿದ್ಧ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದೆಣಿಸಿದ ಐಐಟಿಸಿ ಸಂಸ್ಥೆ ತನ್ನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ `ಫ್ಯಾಶನ್ ರಂಗದ ಭವಿಷ್ಯ’ ಕುರಿತಾದ ಕಾರ್ಯಗಾರ ನಡೆಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆ್ಯಶ್ಲೀ ರೆಬೆಲ್ಲೋ ಮಾತನಾಡಿದರು. ನಿವೃತ್ತಿಯಿಲ್ಲದ ಉದ್ಯೋಗಕ್ಕೆ ಫ್ಯಾಶನ್ರಂಗ ಸಹಕಾರಿ. ಫ್ಯಾಶನ್ರಂಗ ಸ್ವಬದುಕು ರೂಪಿಸುವ…

