Author: UllalaVani

Kannada News From Coastal Karnataka

UN NETWORKS ಮಂಗಳೂರು : ದ.ಕ.ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಪಿಎಫ್‍ಐ ಮತ್ತು ಎಸ್‍ಡಿಪಿಐ ಮತ್ತಿತರ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ಅಯೋಜಿಸಿದ ” ಮಂಗಳೂರಿನಲ್ಲಿಚಲೋ ಬೈಕ್ ರ್ಯಾಲಿ”ಇಂದು ( ಗುರುವಾರ ) ಅರಂಭಗೊಂಡಿದ್ದು.                Photo: Dinesh R Shetty Annu ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯುಡಿಯೂರಪ್ಪ ,ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ,ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ , ಅರ್ .ಅಶೋಕ,ಯುವಮೋರ್ಚಾ ಅಧ್ಯಕ್ಷ ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ, ಸಂಸದ ಪ್ರಹ್ಲಾದ ಜೋಶಿ,ನಳಿನ್ ಕುಮಾರ್ ಕಟೀಲು,ಶೋಭಾ ಕರಂದ್ಲಾಜೆ ಮತ್ತಿತರ ನಾಯಕರು ಭಾಗವಹಿಸಿ ರಾಜ್ಯ ಸರಕಾರದ ಅಡಳಿತ ವ್ಯಪಲ್ಯವನ್ನು ಖಂಡಿಸಿ ಅಕ್ರೋಶ ವ್ಯಕ್ತಪಡಿಸಿದರು. ಮಂಗಳೂರು ನಗರದ ಜ್ಯೋತಿ ಸರ್ಕಲ್‍ನಲ್ಲಿ ಪ್ರತಿಭಟನೆ ರ್ಯಾಲಿಯ ಸಭೆಯನ್ನುದ್ದೇಶಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯುಡಿಯೂರಪ್ಪ ಅವರು ಮಾತನಾಡಿ….. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಗೆ ಇಲ್ಲಿಯ…

Read More

UN NETWORKS ಕೊಣಾಜೆ: ಯಕ್ಷಗಾನ ಎಷ್ಟು ಶ್ರೀಮಂತ ಕಲೆಯೋ ಆ ರಂಗದಲ್ಲಿ ಅಷ್ಟೇ ಬಡತನ ಅನುಭವಿಸುವ ಕಲಾವಿದರು ಇದ್ದಾರೆ. ಅಂತಹ ಕಲಾವಿದರ ನೆರವಿಗೆ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾಭಿಮಾನಿಗಳ ಸಹಕಾರದಿಂದ ಸ್ವಲ್ಪ ಮಟ್ಟಿಗೆ ಸಹಾಯ ಮಾಡಲು ಸಾಧ್ಯವಾಗಿದೆ ಎಂದು ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ.ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿವಿಯ ಮಂಗಳ ಸಭಾಂಗಣದಲ್ಲಿ ಬುಧವಾರ ನಡೆದ ಯಕ್ಷ ಕವಿ ಕಾವ್ಯ ಯಾನ, ಉಪನ್ಯಾಸ ಮಾಲಿಕೆ 2017-18 ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಲ ಫೌಂಡೇಶನ್ ಮೂಲಕ ಇದುವರೆಗೆ 1ಕೋಟಿ 20ಲಕ್ಷ ರೂ. ಕ್ರೋಢೀಕರಿಸಲು ಸಾಧ್ಯವಾಗಿದ್ದು ಆ ಹಣದಿಂದ ಕಲಾವಿದರನ್ನು ಗೌರವಿಸುವ ಹಾಗೂ ಅಶಕ್ತ ಕಲಾವಿದರನ್ನು ಸಹಕರಿಸಲು ಸಾಧ್ಯವಾಗಿರುವುದು ಎಲ್ಲದ್ದಕ್ಕೂ ಯಕ್ಷಗಾನದಿಂದ ಸಾಧ್ಯವಾಗಿದೆ. ಪಾರಂಪರಿಕ ಕಲೆ ಯಾವತ್ತೂ ಅಳಿಯಬಾರದು. ಆ ನಿಟ್ಟಿನಲ್ಲಿ 15 ವರ್ಷಗಳ ಹಿಂದೆ ನಿಲ್ಲುವ ಹಂತಕ್ಕೆ ತಲುಪಿದ್ದ ಯಕ್ಷಗಾನ ಕಲೆ ಇಂದು ವಿಜೃಂಭಿಸುತ್ತಿರುವುದು ಕಲೆಗೆ…

Read More

UN NETWORKS ಕೊಣಾಜೆ: ಭಾರತೀಯ ಸಮಾಜ ಸುಧಾರಕರನ್ನು ಕೇವಲ ಒಂದು ಸಮುದಾಯಕ್ಕೆ ಬ್ರ್ಯಾಂಡ್ ಮಾಡಬಾರದು. ನಾರಾಯಣಗುರುಗಳು, ಬಸವಣ್ಣ, ಅಂಬೇಡ್ಕರ್ ಕೂಡಾ ಸಮಾಜ ಸುಧಾರಕರೇ ಆಗಿದ್ದು ಅವರೆಲ್ಲರ ಕಥೆಯೂ ಅದೇ ಆಗುತ್ತಿದೆ. ಸಮಾಜದ ಬದಲಾವಣೆ ಕಾಣಬೇಕಾದರೆ ಸಮಾಜ ಸುಧಾರಕರು ಕೆಲವೊಂದು ಹೆಗ್ಗುರುತು ಬಿಟ್ಟು ಹೋಗಿದ್ದು ಅದು ಅವರ ಹೆಸರನ್ನು ಶಾಶ್ವತವಾಗಿಡುತ್ತದೆ ಎಂದು ವಿವಿಯ ಇತಿಹಾಸ ವಿಭಾಗದ ನಿವೃತ್ತ ಪ್ರೋಫೆಸರ್ ಸುರೇಂದ್ರ ರಾವ್ ಹೇಳಿದ್ದಾರೆ. ಮಂಗಳೂರು ವಿವಿಯ ಬ್ರಹ್ಮ ಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ವಿವಿಯ ಆಡಳಿತ ಸೌಧದ ನೂತನ ಸೆನೆಟ್ ಹಾಲ್ ನಲ್ಲಿ ಬುಧವಾರ ನಡೆದ ನಾರಾಯಣಗುರು ಜಯಂತಿ-2017 ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಇಡೀ ಸಮಾಜವನ್ನು ಹೊಸದಾಗಿ ಕಟ್ಟಿದ ಹೊಂದಿಸಿದ ಕೀರ್ತಿ ನಾರಾಯಣಗುರುಗಳದ್ದಾಗಿದೆ. ಒಂದೇ ಜಾತಿ ಒಂದೇ ಧರ್ಮ ಎಂದು ಹೇಳಿದವರು ಕೇವಲ ಒಂದು ಸಮುದಾಯದ ಗುರುಗಳಲ್ಲ. ಅವರ ಆದರ್ಶ ಇಡೀ ಸಮಾಜಕ್ಕೆ ಬೇಕಾಗಿದ್ದು ಅವರು ಇಡೀ ಸಮಾಜಕ್ಕೆ ಗುರುಗಳು ಎಂದರು. ಎಷ್ಟೋ ಕಡೆಯಲ್ಲಿ ದೇವಸ್ಥಾನದಲ್ಲಿ ಇಂದ ಇಂದಿಗೂ…

Read More

UN NETWORKS ಮಂಗಳೂರು: ದ.ಕ.ಜಿಲ್ಲಾ ಸುನ್ನೀ ಜಂಇಯತುಲ್ ಉಲಮಾ ದ ವತಿಯಿಂದ ತ್ರಿವಳಿ ತಲಾಖ್ ವಿವರಣಾ ಸಮಾವೇಶ ಮತ್ತು ಸ್ನೇಹ ಸಂವಾದ ಕಾರ್ಯಕ್ರಮವು ದಿನಾಂಕ 09 – 09 – 2017 ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮಂಗಳೂರು ಸೂರ್ಯ ಹೋಟೇಲ್ ಸಭಾಂಗಣದಲ್ಲಿ ಜರಗಲಿದೆ. ಅಲ್ ಹಾಜ್ ಮುಹಮ್ಮದಲಿ ಫೈಝಿ ಬಾಳೆಪುಣಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದು, ಯು.ಕೆ.ಮುಹಮ್ಮದ್ ಸಅದಿ ವಳವೂರು ಉದ್ಘಾಟಿಸಲಿದ್ದಾರೆ.ಎಸ್.ಪಿ.ಹಂಝ ಸಖಾಫಿ ಬಂಟ್ವಾಳ ದಿಕ್ಸೂಚಿ ಭಾಷಣ ಹಾಗೂ ಟಿ.ಯಂ.ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಾಲೆಮುಂಡೋವು ಮಹ್ಮೂದುಲ್ ಫೈಝಿ, ಇಬ್ರಾಹಿಂ ಫೈಝಿ ಕನ್ಯಾನ, ಇಬ್ರಾಹಿಂ ಮದನಿ ಮಂಚಿ, ಖಾಸಿಂ ಮುಸ್ಲಿಯಾರ್ ಕರಾಯ, ಆದಂ ಅಹ್ಸನಿ, ಡಿಕೆ ಉಮರ್ ಸಖಾಫಿ, ಕಂಬಳ ಬೆಟ್ಟು, ಅಬ್ದುರ್ರಶೀದ್ ಝೈನಿ ಸಖಾಫಿ, ಜಿ.ಯಂ. ಮುಹಮ್ಮದ್ ಕಾಮಿಲ್ ಸಖಾಫಿ , ಆತೂರು ಸಅದ್ ಮುಸ್ಲಿಯಾರ್, ಕೆಕೆಯಂ ಕಾಮಿಲ್ ಸಖಾಫಿ, ಸಿದ್ದೀಖ್ ಸಖಾಫಿ ಮೂಳೂರು, ಸಿರಾಜುದ್ದೀನ್ ಸಖಾಫಿ,ಕನ್ಯಾನ ಮುಂತಾದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ…

Read More

UN NETWORKS ಬೆಂಗಳೂರು: ನನ್ನ ಆತ್ಮೀಯರೂ, ರಾಷ್ಟ್ರಮಟ್ಟದ ಪ್ರಗತಿಪರ ಚಿಂತಕರೂ, ಸಮಾಜದ ಶೋಷಿತ ವರ್ಗದ ಶಕ್ತಿಯಾಗಿದ್ದ ಗೌರಿ ಲಂಕೇಶ್ ಅವರ ಹತ್ಯೆ ಕನ್ನಡ ನಾಡಿಗೆ ಮಾಡಿದ ದ್ರೋಹವಾಗಿದೆ. ಇದು ಖಂಡನೀಯ. ಇದರ ಹಿಂದಿರುವ ದುಷ್ಟ ಶಕ್ತಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ. ಕಳೆದ ವಾರವಷ್ಟೇ ವಿಧಾನಸೌಧದಲ್ಲಿ ತನ್ನನ್ನು ಭೇಟಿಯಾಗಿ ಇಲಾಖೆಗೆ ಸಂಬಂಧಿಸಿದ ಮನವಿಯನ್ನು ನೀಡಿದ್ದರು. ರಾಜ್ಯದ ಕಟ್ಟಕಡೆಯ ಜನರ ಧ್ವನಿಯಾಗಿದ್ದ ಗೌರಿ ಲಂಕೇಶ್ ತನ್ನ ತಂದೆ ಲಂಕೇಶ್ ಹಾದಿಯಲ್ಲಿ ನಡೆಯುತ್ತಾ ಸಂಚಲನ ಮೂಡಿಸಿದ್ದರು. ಅವರ ಹತ್ಯೆ ದೊಡ್ಡ ದುರಂತ. ಕ್ರೂರ ಮನಸ್ಸಿನ ಉಗ್ರಗಾಮಿಗಳಾದ ತಪ್ಪಿತಸ್ಥ ಹಂತಕರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೊಳಪಡಿಸಲು ರಾಜ್ಯ ಸರಕಾರ ಸಿದ್ಧವಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

Read More

UN NETWORKS ಉಳ್ಳಾಲ: ಶಾಂತಿ ಕದಡುವಂತಹ ಘಟನೆಗಳು ನಡೆಯುವ ಸಂದರ್ಭದಲ್ಲಿ ಉಳ್ಳಾಲ ದರ್ಗಾ ಸಮಿತಿ ಎಲ್ಲಾ ಜಾತಿ ಧರ್ಮದವರನ್ನು ಕರೆದು ಈದ್ ಸ್ನೇಹ ಸಮ್ಮಿಲನ ಹಮ್ಮಿಕೊಳ್ಳುತ್ತಿರುವುದು ಉತ್ತಮ ಕಾರ್ಯ. ಇಂತಹ ಕಾರ್ಯಕ್ರಮವು ಸೌಹಾರ್ದತೆಯನ್ನು ಉಳಿಸಲು ಪೂರಕವಾಗಲಿದೆ ಎಂದು ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದ್ದಾರೆ. ಉಳ್ಳಾಲ ಕೇಂದ್ರ ಜುಮಾ ಮಸೀದಿ ಹಾಗೂ ಸಯ್ಯದ್ ಮದನಿ ದರ್ಗಾ ಆಶ್ರಯದಲ್ಲಿ ಸೋಮವಾರ ದರ್ಗಾ ವಠಾರದಲ್ಲಿ ನಡೆದ ಈದ್ ಸ್ನೇಹ ಸಮ್ಮಿಲನ-2017 ಕಾರ್ಯಕ್ರಮದಲ್ಲಿ ಮಾತನಾಡಿದರು.ವಿವಿಧ ದರ್ಮಗಳು ಇರುವ ಈ ನೆಲದಲ್ಲಿ ವಿವಿಧ ಹಬ್ಬಗಳು ಆಚರಣೆಯಾಗುತ್ತವೆ. ಅವರವರ ವಿಶ್ವಾಸ, ನಂಬಿಕೆಯ ನೆಲೆಯಲ್ಲಿ ಆಚರಣೆಗಳು ನಡೆಯುತ್ತವೆ. ಇದನ್ನು ಅರ್ಥಮಾಡಿಕೊಳ್ಳಲು ಇಂತಹ ಸ್ನೇಹ ಕೂಟದಿಂದ ಮಾತ್ರ ಸಾಧ್ಯ ಎಂದರು. ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್ ಮಾತನಾಡಿ ದರ್ಗಾದಿಂದ ಕಳೆದ ಎರಡು ವರ್ಷಗಳಿಂದ ಉಳ್ಳಾಲದಲ್ಲಿ ಶಾಂತಿ, ಸೌಹಾರ್ದತೆ ಸ್ಥಾಪಿಸುವ ಪ್ರಯತ್ನ ನಡೆಯುತ್ತಿದೆ, ಇದು ನಿರಂತರ ನಡೆದರೆ ಭಗವಂತ ಪ್ರತಿಫಲ ನೀಡುವುದನ್ನು…

Read More

UN NETWORKS ಮುಡಿಪು: ಕೋಮು ಗಲಭೆಯಲ್ಲಿ ಭಾಗಿಯಾಗುವವರನ್ನು ರಕ್ಷಿಸುವ ಜವಾಬ್ದಾರಿಯನ್ನು ರೈ ಮತ್ತು ಖಾದರ್ ಮಾಡುತ್ತಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋಮುದಳ್ಳುರಿಯನ್ನು ನಡೆಸಲು ಕಾರಣರಾಗುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಾರರ್ಯಕಾರಿಣಿ ಸಮಿತಿ ಸದಸ್ಯ ರಾಜೇಶ್ ಶೆಟ್ಟಿ ಪಜೀರುಗುತ್ತು ಆರೋಪಿಸಿದ್ದಾರೆ. ಅವರು ಬಿಜೆಪಿ ಕುರ್ನಾಡು ಶಕ್ತಿಕೇಂದ್ರದ ವತಿಯಿಂದ ಪಿಎಫ್ ಐ ಎಸ್ ಡಿಪಿಐ ಸಂಘಟನೆಗಳ ನಿಷೇಧ ಮತ್ತು ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಮುಡಿಪು ಜಂಕ್ಷನ್, ಮತ್ತು ಕುರ್ನಾಡು ಗ್ರಾ.ಪಂ ಎದುರುಗಡೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಂಘಪರಿವಾರದ ಕಾರ್ಯಕರ್ತರುಗಳ ಹತ್ಯೆ ನಡೆಸಿರುವಂತಹ ಆರೋಪಿಗಳ ರಕ್ಷಣೆ ಸರಕಾರದಿಂದ ಆಗುತ್ತಿದೆ. ಉಸ್ತುವಾರಿ ಸಚಿವರ ಕೈಯಡಿಯಲ್ಲಿರುವ ಪುಢಾರಿಗಳೇ ಕರೋಪಾಡಿ ಹತ್ಯೆಯಿಂದ ಶರತ್ ಹತ್ಯೆಯನ್ನು ನಡೆಸಿದ್ದಾರೆ. ಇದರಿಂದ ಜಿಲ್ಲೆಯಾದ್ಯಂತ ಕೋಮು ದಳ್ಳುರಿ ನಡೆಸಿ, ಅಶಾಂತಿಯ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಸೌಹಾರ್ದತೆ, ಶಾಂತಿಯುತ ವಾತಾವರಣ ಜಿಲ್ಲೆಯಾದ್ಯಂತ ನೆಲೆಸಬೇಕಿದೆ. ಆದರೆ ಅದನ್ನು ಬಿಡದ ಜಿಲ್ಲೆಯ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕೂಡಲೇ ರಾಜೀನಾಮೆ ನೀಡಬೇಕು. ಅಲ್ಲದೆ ಹಿಂದುಗಳ ಹತ್ಯೆಯನ್ನು ನಿರಂತರವಾಗಿ ನಡೆಸುತ್ತಿರುವ…

Read More

UN NETWORKS ಉಳ್ಳಾಲ: ಶಿಕ್ಷಕರಿಗೆ ವೇತನ ಹೆಚ್ಚಳ ಮಾಡಿರುವ ಆದೇಶ ಶೀಘ್ರವೇ ಮುಖ್ಯಮಂತ್ರಿಯವರು 6ನೇ ಹಣಕಾಸು ಅಯೋಗಕ್ಕೆ ನೀಡುವ ನಿರೀಕ್ಷೆ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಂಗಳೂರು ದಕ್ಷಿಣ ಬೋಳಾರ ವತಿಯಿಂದ ಜೆಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜರಗಿದ ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಇಲ್ಲದಿದ್ದಲ್ಲಿ ಜೀವನ ದುಸ್ತರವಾಗುತ್ತದೆ, ಇಂದು ಹೆಚ್ಚು ಸುಶಿಕ್ಷಿತರೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದು, ಅವರಲ್ಲಿರುವ ಆತ್ಮ ವಿಶ್ವಾಸದ ಕೊರತೆ ಕಾರಣ ಎಂದರು. ಗುರುಚೇತನ ಪುಸ್ತಕ ಬಿಡುಗಡೆಗೊಳಿಸಿದ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಸಮಾಜ, ದೇಶದ ಅಭಿವೃದ್ಧಿ, ರಕ್ಷಣೆಗೆ ಸೂಕ್ತ ಪ್ರಜೆಗಳು ಅಗತ್ಯ, ಅಂತಹ ಪ್ರಜೆಗಳನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮಾಡುತ್ತಿದ್ದಾರೆ. ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಶಿಕ್ಷಕರಿಗಾಗಿ…

Read More

UN NETWORKS ಉಳ್ಳಾಲ; ಬೈಕ್ ರ್ಯಾಲಿಯಲ್ಲಿ ಮಂಗಳೂರು ಕ್ಷೇತ್ರದಿಂದ 4,000ದಷ್ಟು ಬೈಕಿನಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದು, ಎಷ್ಟು ತಡೆದರೂ ಸಾಂವಿಧಾನಿಕ ಹಕ್ಕಾದ ಪ್ರತಿಭಟನೆಯನ್ನು ಯುವ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಮುಖಂಡರುಗಳ ನೇತೃತ್ವದಲ್ಲಿ ಮಾಡಿಯೇ ಸಿದ್ಧ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ತೊಕ್ಕೊಟ್ಟು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರದ ಎಷ್ಟು ಪೊಲೀಸರು ಕಾರ್ಯಚರಿಸಿದರೂ, ಎಷ್ಟೇ ಕಾರ್ಯಕರ್ತರ ಬಂಧನವಾದರೂ ಎದೆಗುಂದದೆ ಬೈಕ್ ರ್ಯಾಲಿಯನ್ನು ನಡೆಸಿಯೇ ನಡೆಸುತ್ತೇವೆ. ಉಳ್ಳಾಲದ 195 ಬೂತ್ ಗಳಿಂದ 2,200 ಬೈಕ್ ಸೇರಿದಂತೆ ಒಟ್ಟು 4,000 ಬೈಕ್ ಗಳಲ್ಲಿ ಕಾರ್ಯಕರ್ತರು ರ್ಯಾಲಿ ಮೂಲಕ ಭಾಗವಹಿಸಲಿದ್ದಾರೆ. ಹಿಂದು ವಿರೋಧಿ ಧೋರಣೆಯನ್ನು ತೋರಿಸುತ್ತಿರುವ ಸರಕಾರ ಮತ್ತು ಉಸ್ತುವಾರಿ ಸಚಿವ ರೈ ವಿರುದ್ಧದ ಹಾಗೂ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನೆಯಾಗಿದೆ. ಅಲ್ಲದೆ ಹಿಂದು ಕಾರ್ಯಕರ್ತರ ಸರಣಿ ಹತ್ಯೆ ನಡೆಸುತ್ತಿರುವ ಪಿಎಫ್ ಐ , ಕೆಎಫ್ ಡಿ ನಿಷೇಧಕ್ಕೆ ಆಗ್ರಹಿಸಿ ರ್ಯಾಲಿಯನ್ನು…

Read More

UN NETWORKS ಕೊಣಾಜೆ: ಜಿಲ್ಲೆಯ ಸಚಿವರುಗಳು ಕೆಎಫ್‍ಡಿ , ಪಿಎಫ್‍ಐ ಜತೆಗೆ ಒಳ ಒಪ್ಪಂದ ಮಾಡಿಕೊಂಡು ಹಿಂದುಗಳ ಹಾಗೂ ಪಕ್ಷದ ಕಾರ್ಯಕರ್ತರ ಹತ್ಯೆ ನಡೆಸುತ್ತಾ ಬಂದಿದ್ದು, ಇಲ್ಲವಾದಲ್ಲಿ ಅಂತಹ ಸಂಘಟನೆಗಳನ್ನು ನಿಷೇಧಿಸಬೇಕಿತ್ತು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ಹೇಳಿದ್ದಾರೆ. . ಅವರು ಕೊಣಾಜೆ ಗ್ರಾಮ ಪಂಚಾಯಿತಿ ಎದುರುಗಡೆ ಕೊಣಾಜೆ ವಲಯದ ಬಿಜೆಪಿ ಯುವಮೋರ್ಚಾ ವತಿಯಿಂದ ಕೆಎಫ್ ಡಿ , ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯನ್ನೇ ನಿಲ್ಲಿಸಲು ರಾಜ್ಯ ಸರಕಾರ ಮುಂದಾಗಿದೆ. ಮೂರು ಹಕ್ಕೊತ್ತಾಯಗಳನ್ನು ಮುಂದಿಟ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದುಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು, ನಾಲ್ಕೂವರೆ ವರ್ಷದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡದ ಸರಕಾರ ಇಲ್ಲಿನ ಉಸ್ತುವಾರಿ ಸಚಿವರನ್ನು ರಾಜೀನಾಮೆ ಕೊಡಿಸಬೇಕಿದೆ. ಜಮ್ಮು ಕಾಶ್ಮೀರದಲ್ಲಿರುವ ಶಾಂತಿ ಜಿಲ್ಲೆಯಲ್ಲಿ ಇಲ್ಲದಂತಾಗಿದೆ. ಜೈಲಿನೊಳಗಡೆ ಪೊಲೀಸರ ಮೇಲೆ ಹಲ್ಲೆಯಾಗುತ್ತಿದೆ. ದೇರಳಕಟ್ಟೆ…

Read More