Author: UllalaVani

Kannada News From Coastal Karnataka

UN NETWORKS ಉಳ್ಳಾಲ: ದುಷ್ಕರ್ಮಿಗಳಿಂದ ಹತ್ಯೆ ಯತ್ನಕ್ಕೊಳಗಾದ ಚಿರಂಜೀವಿ ಎಂಬ ಯುವಕನ ಚಿಕಿತ್ಸಾ ವೆಚ್ಛ ಮತ್ತು ವೈಯಕ್ತಿಕ ಪರಿಹಾರ ಒದಗಿಸುವಂತೆ ಮತ್ತು ನಿರಂತರ ಚೂರಿ ಇರಿತ ಕೃತ್ಯ ನಡೆಸುವವರನ್ನು ಬಂಧಿಸುವಂತೆ ಆಗ್ರಹಿಸಿ ಡಿ ವೈ ಎಫ್ ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಕೊಣಾಜೆ ಮತ್ತು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಕ್ಷೇತ್ರದ ಸೌಹಾರ್ದತೆಯನ್ನು, ಶಾಂತಿಯನ್ನು ಕೆದಡುವಂತ ಕೃತ್ಯಗಳು ನಡೆಯುತ್ತಿದೆ. ಈಗಾಗಲೇ, ಹಲವು ಕಡೆಗಳಲ್ಲಿ ಮುಗ್ಧ ಯುವಕರ ಮೇಲೆ ದಾಳಿಗಳು ನಡೆದಿದೆ. ಜುಲೈ 8 ರಂದು ರಾತ್ರಿ ಮುನ್ನೂರು ಗ್ರಾಮದ ಕುತ್ತಾರಿನಲ್ಲಿ ಚಿರಂಜೀವಿ ಎಂಬ ಯುವಕನಿಗೆ ಬೈಕಿನಿಂದ ಬಂದ ದುಷ್ಕರ್ಮಿಗಳು ತಲೆಗೆ ಬಲವಾಗಿ ತಲವಾರಿನಿಂದ ಹೊಡೆದು ಪರಾರಿಯಾಗಿದ್ದಾರೆ. ಚಿರಂಜೀವಿಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಲೆಗೆ 18 ಹೊಲಿಗೆ ಹಾಕಿದ್ದು ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಆಸ್ಪತ್ರೆಯಲ್ಲಿ ರೂ.21,000 ಚಿಕಿತ್ಸಾ ವೆಚ್ಚವಾಗಿದ್ದು, ಎರಡು ತಿಂಗಳು ವಿಶ್ರಾಂತಿ ಬೇಕು ಎಂದು ವೈದ್ಯರು…

Read More

UN NETWORKS ಮಂಗಳೂರು: ಆಗಸ್ಟ್ 29- ಸಮೀಕ್ಷೆಯೊಂದರ ಪ್ರಕಾರ ವಿಶ್ವದಲ್ಲೇ ಅತಿಹೆಚ್ಚು ಹೃದ್ರೋಗಿಗಳು ಭಾರತದಲ್ಲಿ ಕಂಡುಬರಲಿದ್ದಾರೆ. ಪ್ರತಿಐದು ಸಾವಿನಲ್ಲಿ ಒಬ್ಬರು ಹೃದ್ರೋಗದಿಂದಲೇ ಸಾಯುತ್ತಿದ್ದಾರೆ. 2020ರ ವೇಳೆಗೆ ಇವರ ಸಂಖ್ಯೆ ಮೂರಕ್ಕೆ ಏರಲಿದೆ. ಭಾರತದಲ್ಲಿ ಅಂದಾಜು 4.5 ಕೋಟಿ ಕೊರೊನರಿಆರ್ಟರಿ ರೋಗಿಗಳಿದ್ದಾರೆ. ಹೆಚ್ಚು ಹೆಚ್ಚು ಯುವಜನಾಂಗವೇಇದಕ್ಕೆ ಬಲಿಯಾಗುತ್ತಿದ್ದಾರೆ. ಜೀವನಶೈಲಿಯೇ ಇದಕ್ಕೆ ಮುಖ್ಯಕಾರಣ. ಪ್ರತಿಯೊಬ್ಬ ವ್ಯಕ್ತಿಯ ದೇಹದಲ್ಲಿರುವ ಡಿಎನ್‍ಎ ಆ ವ್ಯಕ್ತಿಯ ವೈಶಿಷ್ಟ್ಯತೆ ಮತ್ತು ಆರೋಗ್ಯವನ್ನುನಿರ್ಧರಿಸುತ್ತದೆ. ದೇಹದಲ್ಲಿರುವ ಪ್ರತಿಯೊಂದು ಪ್ರೋಟೀನ್‍ ಕಣವನ್ನುತೀರ್ಮಾನಿಸುವ ಜೈವಿಕ ಸಂಕೇತ ಇದು. ದೇಹ ಇಂಥದ್ದೊಂದು ಪ್ರೋಟೀನ್‍ ತಯಾರಿಸಬೇಕು ಎಂಬ ಸಂದೇಶವನ್ನು ನೀಡುವ ಪ್ರಕ್ರಿಯೆಗೆ ವೈದ್ಯಕೀಯ ಭಾಷೆಯಲ್ಲಿ ‘ಜೀನ್‍ಎಕ್ಸ್‍ಪ್ರೆಷನ್’ ಅಥವಾ ‘ಟ್ರಾನ್‍ಸ್ಕ್ರಿಪ್ಷನ್’ ಎನ್ನುತ್ತಾರೆ. ದೇಹದಲ್ಲಿರುವ, ತಯಾರಾಗುವ ಪ್ರತಿಯೊಂದು ಪ್ರೋಟೀನ್‍ಕಣವೂ ನಮ್ಮಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.ವಯಸ್ಸಾಗುತ್ತಿದ್ದಂತೆ ಡಿಎನ್‍ಎ ‘ಟ್ರಾನ್‍ಸ್ಕ್ರಿಪ್ಷನ್’ ನಿಧಾನವಾಗಿ ಸತ್ವ ಕಳೆದುಕೊಂಡು ಪ್ರೋಟೀನ್‍ಗಳು ಸರಿಯಾಗಿ ಉತ್ಪಾದನೆಯಾಗುವುದಿಲ್ಲ. ಈ ಕುರಿತು ವಿಸ್ಕೄ್ತ ಸಂಶೋಧನೆ ನಡೆಸಿದ ಯೂನಿಸಿಟಿ ಜಿನೊಮಿಸ್ಯುಟಿಕಲ್‍ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಇದರಡಿ ಸಿದ್ಧಪಡಿಸಲಾದ ಉತ್ಪನ್ನಗಳು ಜೀನ್‍ಎಕ್ಸ್‍ಪ್ರೆಷನ್ ಸಮರ್ಪಕವಾಗುವಂತೆ ಮಾಡಿಆರೋಗ್ಯಕರ ಶರೀರವನ್ನುಕಾಪಾಡಲು ಸಹಕಾರಿಯಾಗುತ್ತದೆ. ಜಿನೊಮಿಸ್ಯುಟಿಕಲ್‍ ತಂತ್ರಜ್ಞಾನವನ್ನು…

Read More

UN NETWORKS ಮಂಗಳೂರು: ಸ್ಟೂಡೆಂಟ್ ಇಸ್ಲಾಮಿಕ್ ಆರ್ಗೈನೈಝೇಶನ್ ಆಫ್ ಇಂಡಿಯಾ(ಎಸ್ ಐ ಓ) ಉಳ್ಳಾಲ ಘಟಕದ ವತಿಯಿಂದ 9 ರಿಂದ 14 ವರ್ಷದ ಮಕ್ಕಳಿಗಾಗಿ ಮರ್ ಹೂಂ ಇಸ್ಮಾಯೀಲ್ ಔಸಾಫ್ ರವರ ಸ್ಮರಣಾರ್ಥ 7 ಜನರ ಸೌಹಾರ್ದ ಫುಟ್ಬಾಲ್ ಟೂರ್ನಮೆಂಟ್ ಅನ್ನು ಆಯೋಜಿಸಲಾಯಿತು. ಪಂದ್ಯಾಟವನ್ನು ಮರ್ ಹೂಂ ಇಸ್ಮಾಯೀಲ್ ರವರ ತಂದೆ, ಸಾಮಾಜಿಕ ಕಾರ್ಯಕರ್ತರೂ ಆಗಿರುವ ಅಬ್ದುಲ್ ರಹಿಮಾನ್ ಕೋಟೆಕಾರ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಮಕ್ಕಳು ತಮ್ಮ ಪ್ರತಿಭೆಯನ್ನು ಗುರುತಿಸಬೇಕು ಆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಒಳ್ಳೆಯ ಹೆಸರು ತರುವವರಾಗಬೇಕು” ಎಂದರು. ಇಸ್ಲಾಮಿಕ್ ಚಿಲ್ಡ್ರನ್ ಸರ್ಕಲ್ ನ ರಾಜ್ಯ ಸಲಹಾ ಸಮಿತಿಯ ಸದಸ್ಯ ಇರ್ಫಾನ್ ಕುದ್ರೋಳಿ ರವರು ಚೆಂಡು ಹೊಡೆಯುವ ಮೂಲಕ ಆಟಕ್ಕೆ ಚಾಲನೆ ನೀಡಿದರು. ಪಂದ್ಯಾಟದಲ್ಲಿ ಬ್ರದರ್ಸ್ ಉಚ್ಚಿಲ ತಂಡವು ವಿಜಯಶಾಲಿಯಾಯಿತು ಸ್ಮಾರ್ಟ್ ಸಿಟಿ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿತು. ಉತ್ತಮ ಆಟಗಾರನಾಗಿ ಬ್ರದರ್ಸ್ ಉಚ್ಚಿಲ ತಂಡದ ಸಿನಾನ್ ಆಯ್ಕಾದರು. ಎಸ್.ಐ.ಓ ಜಿಲ್ಲಾ ಅಧ್ಯಕ್ಷರಾದ…

Read More

UN NETWORKS ಕಿನ್ಯಾ : ಆನ್‌ಲೈನ್ ಮೂಲಕ ಇರುವ ಸರಕಾರದ ಸವಲತ್ತುಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರಿಗೆ ಕಷ್ಟ ಆಗುವುದನ್ನು ಮನಗಂಡು ಸಚಿವ ಖಾದರ್ ಅವರು ಆದೇಶದ ಹಿನ್ನೆಲೆಯಲ್ಲಿ ಕಿನ್ಯಾ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆದ ಏಕದಿನದ ಆಧಾರ್, ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ಹೆಸರು ಬದಲಾವಣೆ ಅಭಿಯಾನಕ್ಕೆ ಕಿನ್ಯಾ ಬೆಳರಿಂಗೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಎನ್.ಎಸ್ ಕರೀಂ ಚಾಲನೆ ನೀಡಿದರು. ಈ ಸಂದರ್ಭ  ಉಪಾಧ್ಯಕ್ಷ ಸಿರಾಜ್ ಕಿನ್ಯ, ಸದಸ್ಯರಾದ ಫಾರೂಕ್ ಕಿನ್ಯ, ಮೋಹಮ್ಮದ್, ಕೆ.ಬಿ ಅಬುಸಾಲಿ, ಕಾಂಗ್ರೆಸ್ ಕಿನ್ಯ ಬ್ಲಾ ಕ್ ಅಧ್ಯಕ್ಷ. ಮೊದ್ದೀನ್ ಕುಂಞ ಮತ್ತಿತರರು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಹಿಂದು ಯುವಕರಿಬ್ಬರ ಹತ್ಯೆಗೆ ಸ್ಕೆಚ್ ರೂಪಿಸಿದ್ದ ಐವರನ್ನು ಎಸಿಪಿ ನೇತೃತ್ವದ ವಿಶೇಷ ಪೊಲೀಸ್ ತಂಡ, ಉಳ್ಳಾಲ ಪೊಲೀಸರ ದಸಹಕಾರದೊಂ ದಿಗೆ ಬಂಧಿಸಿದೆ. ಮದನಿನಗರ ನಿವಾಸಿಗಳಾದ ತಸ್ಲೀಂ(24), ಅಂಬ್ಲಮೊಗರು ನೌಷಾದ್ (32), ರಮೀಜ್ (20), ಖುರ್ಷಿದ್ (20), ನವಾಝ್ (24) ಬಂಧಿತರು. ಜೂ.18, 2017 ರಂದು ಆರೋಪಿಗಳು ಕುತ್ತಾರು ಸಮೀಪ ಗಂಗಾಧರ್ ಎಂಬವರ ತಲೆಗೆ ಸೋಡಾ ಬಾಟಲಿಯಿಂದ ಹೊಡೆದು ಹತ್ಯೆಗೆ ಯತ್ನಿಸಿದ್ದರು. ಆದರೆ ಆರೋಪಿಗಳಿಂದ ತಪ್ಪಿಸಿದ್ದ ಗಂಗಾಧರ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆರೋಪಿಗಳು ಎ.26, ,2016 ರಂದು ಉಳ್ಳಾಲದ ತಂಡ ದಿಂದ ಹತ್ಯೆಗೀಡಾದ ಪಿಲಾರು ನಿವಾಸಿ ಸಫ್ವಾನ್ (22) ಕೊಲೆಗೆ ಪ್ರತೀಕಾರವಾಗಿ , ಇಬ್ಬರು ಹಿಂದು ಯುವಕರ ಹತ್ಯೆಗೆ ಸಂಚು ರೂಪಿಸಿದ್ದರು. ಅಂಬ್ಲಮೊಗರು ಮತ್ತು ಕುತ್ತಾರು ಮೂಲದ ಇಬ್ಬರು ಹಿಂದು ಯುವಕರ ಹತ್ಯೆಗೆ ಸಂಚು ರೂಪಿಸಿದ್ದರೂ, ಪೊಲೀಸರ ಪತ್ತೆಯಿಂದ ಅದು ಅಸಾಧ್ಯವಾಗಿದೆ. ರಾಣಿಪುರ ಸಮೀಪ ಆರ್ ಎಸ್ ಎಸ್ ಕಾರ್ಯಕರ್ತ ರಾಮಮೋಹನ್ ಮತ್ತು ಚಿರಂಜೀವಿ ಎಂಬವರನ್ನು ತಲವಾರಿನಿಂದ ಕಡಿದು ಹತ್ಯೆಗೆ…

Read More

UN NETWORKS ಉಳ್ಳಾಲ: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ನಾಟೆಕಲ್ ಬಳಿ ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಪರಾರಿಯಾಗಿದ್ದಾನೆ. ಹರೇಕಳ ಕಡೆಯಿಂದ ಮಂಜನಾಡಿ ಮಾರ್ಗವಾಗಿ ಅಕ್ರಮ ಮರಳನ್ನು ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲಾರಿಯನ್ನು ನಿಲ್ಲಿಸಲೆತ್ನಿಸಿದಾಗ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರಭಾರ ಇನ್ಸ್ ಪೆಕ್ಟರ್ ಕೆ.ಎಂ. ಶರೀಫ್ ಮತ್ತು ಎಸ್‍ಐ ಸುಕುಮಾರ್ ಮತ್ತು ಸಿಬಂದಿಗಳು ಭಾಗವಹಿಸಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

UN NETWORKS ಉಳ್ಳಾಲ: ನೇಪಾಲ ಮೂಲದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಚಾರ ನಡೆಸಿದ ಆರೋಪದಲ್ಲಿ ನೇಪಾಲ ಮೂಲದ ಯುವಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟಿನಲ್ಲಿ ಫಾಸ್ಟ್ ಫುಡ್ ಮಾಡುತ್ತಿರುವ ದೇರಳಕಟ್ಟೆಯಲ್ಲಿ ವಾಸವಾಗಿರುವ ನೇಪಾಲ ನಿವಾಸಿ ಕುಮ್ಮ ಸಿಂಗ್(22) ಬಂಧಿತ ಆರೋಪಿಯಾಗಿದ್ದು, ಈತ ಕಳೆದ ಆರು ತಿಂಗಳಿನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ. ದೇರಳಕಟ್ಟೆಯ ಬಾಡಿಗೆ ಮನೆಯಲ್ಲಿ ನೇಪಾಲ ಮೂಲದ ಮೂರು ಕುಟುಂಬಗಳು ವಾಸವಾಗಿದ್ದು, ಬಾಲಕಿ ತನ್ನ ತಾಯಿ ತಂದೆಯೊಂದಿಗೆ ವಾಸವಾಗಿದ್ದರೆ, ಆರೋಪಿ ಕುಮ್ಮಸಿಂಗ್ ಮತ್ತು ಆತನ ಸಹೋದರ ಇದೇ ಮನೆಯಲ್ಲಿ ವಾಸವಾಗಿದ್ದರು. ಆದರೆ ಕುಮ್ಮ ಸಿಂಗ್ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದು, ಬಾಲಕಿ ಬಸುರಿಯಾದ ವಿಚಾರ ತಿಳಿದು ತಲೆಮರೆಸಿಕೊಂಡಿದ್ದ. ಬಾಲಕಿಯ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಕೊಣಾಜೆ ಪೊಲೀಸರು ಕೊಣಾಜೆ ಪ್ರಭಾರ ಇನ್ಸ್ ಪೆಕ್ಟರ್ ಕೆ.ಎಂ. ಶರೀಫ್ ಅವರ ಮಾರ್ಗದರ್ಶನದಲ್ಲಿ…

Read More

UN NETWORKS ಕೊಣಾಜೆ: ಕೊಣಾಜೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಕಾರಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 

Read More

UN NETWORKS ಉಳ್ಳಾಲ: ಮಂಗಳೂರಿನ ಶಾರದಾ ವಿದ್ಯಾಲಯದಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾಟದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಒಟ್ಟು 7 ಚಿನ್ನ, 6 ಬೆಳ್ಳಿ ಪದಕ ಹಾಗೂ 2 ಕಂಚಿನ ಪದಕ ಪಡೆದಿರುತ್ತಾರೆ. ಪಂದ್ಯಾವಳಿಯಲ್ಲಿ ಪಾಲ್ಗೊಂಡ 11ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 10ನೇ ತರಗತಿಯ ರೋಹಿತ್ ಪಾಲ್ ಹಾಗೂ 8ನೇ ತರಗತಿಯ ಸನ್ನಿಧಿ ವೈಯಕ್ತಿಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.

Read More

UN NETWORKS ಕಣಚೂರು: ದೇರಳಕಟ್ಟೆಯ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಕಾಲೇಜಿನ ಆಶ್ರಯದಲ್ಲಿ `ಕಿಮ್ಸ್ ಕಲ್‍ರವ್’- 2017 ಅಂತರ್ ಕಾಲೇಜ್ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗದ ಪ್ರೋ  ರವಿಶಂಕರ್ ಮಾತನಾಡಿ ವಿದ್ಯಾರ್ಥಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸುವುದರ ಮುಖ್ಯ ಉದ್ದೇಶವನ್ನು ವಿದ್ಯಾರ್ಥಿಗಳು ಮೊದಲು ತಿಳಿದು ಕೊಳ್ಳಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಸಾಮಾನ್ಯ. ಆದರೆ ನಮ್ಮ ಪ್ರಯತ್ನವನ್ನು ಮುಂದುವರಿಸುತ್ತಲೇ ಇರಬೇಕು. ಆಗ ಭವಿಷ್ಯದಲ್ಲಿ ಗೆಲುವು ನಿಶ್ಚಿತ. ಅದೇ ಜೀವನದ ಸಿದ್ಧಾಂತ ಎಂದು ನುಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ವಿನೀತಾ ಮಥಾಯಸ್, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ಆನಂದಿ ಹಾಗೂ ಪ್ರಿಸ್ಕೂಲ್‍ನ ಮುಖ್ಯ ಶಿಕ್ಷಕಿ ಲಿನೇಟ್ ಡಿಸೋಜ ಉಪಸ್ಥಿತರಿದ್ದರು. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೋ  ಇಕ್ಬಾಲ್ ಅಹಮದ್ ಯು.ಟಿ. ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಮುಬೀನ್ ತಾಜ್ ಕಾರ್ಯಕ್ರಮ ನಿರೂಪಿಸಿದರು. ಬಿ.ಸಿ.ಎ. ವಿಭಾಗದ…

Read More