Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಕುಂಪಲ ಸರ್ಕಾರಿ ಪ್ರೌಢಶಾಲೆ (ಆರ್‍ಎಂಎಸ್‍ಎ) ವಿಜ್ಞಾನ ಸಂಘದ ವತಿಯಿಂದ 50 ವಿದ್ಯಾರ್ಥಿಗಳು ಕುಲಶೇಖರದಲ್ಲಿ ಕೆ.ಎಂ.ಎಫ್‍ಗೆ ಭಾನುವಾರ ಭೇಟಿ ನೀಡಿದರು. ಹಾಲಿನ ಪ್ಯಾಕಿಂಗ್, ಉತ್ಪನ್ನಗಳ ತಯಾರಿಕೆ ಸಹಿತ ಸಮಗ್ರ ಮಾಹಿತಿಯನ್ನು ತರಬೇತುದಾರ ಹುಸೈನ್ ಅವರ ಮುಖಾಂತರ ಕಲೆ ಹಾಕಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ರಾಧಿಕಾ ಎಸ್.ರಾವ್, ಸಹಶಿಕ್ಷಕಿಯರಾದ ಸುಮಾನ ಕುಂದರ್, ತೆರೆಜಾ ಲೀನಾ, ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಶಿರ್ಲಾಲ್ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಸದಸ್ಯ ವಿನೋದ್ ಕುಂಪಲ ಸಹಕರಿಸಿದರು.

Read More

UN NETWORKS ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶನಿವಾರ ಜರಗಿದ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆ ವೇಳೆ ಕಂಡು ಬಂದ ಆಕರ್ಷಕ ಸ್ತಬ್ಧಚಿತ್ರಗಳು.

Read More

UN NETWORKS  ತಲಪಾಡಿ: ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ 3.25 ಎಕರೆ ಜಮೀನು ಮೀಸಲಿಡಲಾಗಿತ್ತು. ಆದರೆ ಖಾಸಗಿಯವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ ಎಂದು ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಹೇಳಿದ್ದಾರೆ. ಸ್ವಚ್ಛ ಭಾರತ್ ಮಿಷನ್‍ನಡಿ ತಲಪಾಡಿ ಗ್ರಾಮ ಪಂಚಾಯಿತಿಯಿಂದ ಶನಿವಾರ ಕೆ.ಸಿ.ನಗರ ಫಲಾಹ್ ಶಾಲೆಯಲ್ಲಿ ಶನಿವಾರ ನಡೆದ ಸ್ವಚ್ಛತಾ ಮಾಹಿತಿ ಸಭೆಯಲ್ಲಿ ಅವರು ಮಾತನಾಡಿದರು. ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಜಮೀನು ಮೀಸಲಿಟ್ಟರೂ ತಡೆಯಾಜ್ಞೆಯಿಂದಾಗಿ ಅದು ಸಾಧ್ಯವಾಗಿಲ್ಲ. ಫಲಾಹ್ ಶಾಲೆ ಬಳಿ ಜನವಸತಿ ಇಲ್ಲದ ಕಾರಣ ರಸ್ತೆಬದಿ ಕಸ ಬೀಳುತ್ತಿದ್ದು, ತಿಂಗಳಿಗೆರೆಡು ಬಾರಿ ತೆಗೆಯಲಾಗುತ್ತಿದೆ. ಆದರೆ ಮನಪಾದಿಂದ ಸ್ವೀಕರಿಸದ ಕಾರಣ ಸಮಸ್ಯೆ ಬಂದಿದೆ. ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಅಂಗಡಿ, ಫ್ಲ್ಯಾಟುಗಳಿಗೆ ಮಾಹಿತಿ ನೀಡಿ ಸಂಬಂಧಪಟ್ಟವರು ಮನಸ್ಸು ಗೆಲ್ಲುತ್ತೇವೆ. ನಂತರವೂ ಬಗ್ಗದಿದ್ದರೆ ಕಾನೂನು ಕ್ರಮದ ಮುಖಾಂತರ ಬಗ್ಗಿಸುವ ಪ್ರಯತ್ನ ಮಾಡುತ್ತೇವೆ ಎಂದುತ್ತರಿಸಿದರು. ಪ್ಲಾಸ್ಟಿಕ್ ಎನ್ನುವುದು ಕೊಡುಗೆಯೂ ಹೌದು, ಕುರ್ಚಿ, ಬಕೆಟ್ ಹೀಗೆ ವಿವಿಧ ರೀತಿಯಲ್ಲಿ ಪ್ಲಾಸ್ಟಿಕ್ ಮರುಬಳಕೆ ಮಾಡಲಾಗುತ್ತಿದೆ. ತೆಳುವಾದ…

Read More

UN NETWORKS  ಉಳ್ಳಾಲ: ಆಯಾಯ ಮಸೀದಿ ಮದರಸಗಳಲ್ಲಿ ಕಾರ್ಯ ನಿರ್ವಹಿಸುವ ಉಸ್ತಾದರಿಗೆ ಮತ್ತು ಖತೀಬರಿಗೆ ಅವರ ವಾಸ್ತವ್ಯ ಪ್ರದೇಶದಲ್ಲಿ ವ್ಯಾಪಾರ ವ್ಯವಹಾರ ನಡೆಸಲು ಪೂರಕವಾಗುವಂತೆ ಶ್ರಮಶಕ್ತಿ ಯೋಜನೆಯಡಿ ದೊಡ್ಡ ಮಟ್ಟದ ಹಣ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆ ಸರಕಾರಕ್ಕೆ ನೀಡಿದ್ದು ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದರು. ಅವರು ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ದ.ಕ ಜಿಲ್ಲಾ ನೂತನ ಅಧ್ಯಕ್ಷರಾಗಿ ಅಯ್ಕೆಯಾದ ಎನ್.ಎಸ್ ಕರೀಂರವರಿಗೆ ಮಂಜನಾಡಿ ಅಲ್-ಮದೀನಾ ಇಸ್ಲಾಮಿಕ್ ಕಾಂಪ್ಲೇಕ್ಸ್‍ನಲ್ಲಿ ಅಯೋಜಿಸಿದ ಅಭಿನಂದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಖತೀಬರು ಮತ್ತು ಉಸ್ತಾದರಿಗೆ ಹೊರಗಿನ ಪ್ರದೇಶದಲ್ಲಿ ಹೋಗಿ ಕೆಲಸ ಅಥವಾ ವ್ಯಾಪಾರ ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಿದ್ದು, ಫಲಾನುಭವಿಗಳನ್ನು ಗುರುತಿಸುವ ಕಾರ್ಯ ವಕ್ಪ್ ಮಂಡಳಿಗಳು ಮಾಡಬೇಕು ಎಂದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅಲ್ಪ ಸಂಖ್ಯಾತ…

Read More

UN NETWORKS  ಮುಡಿಪು: ಒಂದೆಡೆ ಭಜನೆಯ ವಾತಾವರಣ, ಇನ್ನೊಂದೆಡೆ ಸ್ತಬ್ಧಚಿತ್ರಗಳ ಪ್ರದರ್ಶನ, ಹೀಗೆ 100ಕ್ಕೂ ಅಧಿಕ ಹಿಂದೂ ಭಕ್ತರು ಭಾಗವಹಿಸಿದ್ದ ಶೋಭಾಯಾತ್ರೆಯಲ್ಲಿ ಮುಸ್ಲಿಂ ಯುವಕರ ಸಂಘದ ವತಿಯಿಂದ ಮುಸ್ಲಿಂ ಯುವಕರು ಸಿಹಿತಿಂಡಿ ಮತ್ತು ತಂಪುಪಾನೀಯಗಳನ್ನು ವಿತರಿಸುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾದರು. ಮುಡಿಪು ಕಾಲೇಜಿನಲ್ಲಿ ನಡೆಯುವ 40 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆಯ ನಿಮಿತ್ತ ಕೆಲ ಕಿ.ಮೀ ಉದ್ದಕ್ಕೂ ಕ್ರಮಿಸಿ ದನಿವಾದ ಹಿಂದೂ ಬಾಂಧವರಿಗೆ ಮಳೆಯನ್ನು ಲೆಕ್ಕಿಸದೆ ಹಲವು ಮುಸ್ಲಿಂ ಯುವಕರು ಸಿಹಿತಿಂಡಿ, ಪಾನೀಯ ನೀಡುವಲ್ಲಿ ಸಹಕರಿಸಿದ್ದಾರೆ. ಮುಡಿಪು ಸರಕಾರಿ ಕಾಲೇಜಿನಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. 40 ನೇ ವರ್ಷದ ಆಚರಣೆಯಲ್ಲಿ ಮುಸ್ಲಿಂ ಯುವಕರು ಜತೆಗೂಡಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗವಹಿಸುವ ಭಕ್ತರಿಗೆ ಹಾಗೂ ಸಮಿತಿ ಸದಸ್ಯರಿಗೆ ತಂಪು ಪಾನೀಯ ಹಾಗೂ ಸಿಹಿ ತಿಂಡಿ ವಿತರಿಸಲಾಗಿದೆ. ಪ್ರಥಮವಾಗಿ ನಡೆಸಿರುವ ಕಾರ್ಯಕ್ರಮ ಎಲ್ಲರಿಗೂ ಸಂತಸ ತಂದಿದೆ. ಸುರಿಯುವ ಮಳೆಯನ್ನು ಲೆಕ್ಕಿಸದೆ ಹಲವು ಮುಸ್ಲಿಂ ಯುವಕರು ಸಿಹಿತಿಂಡಿ, ಪಾನೀಯ ನೀಡುವಲ್ಲಿ…

Read More

ಗಲ್ಲಿಯಿಂದ ಹಿಡಿದು ದಿಲ್ಲಿಯ ವರೆಗೆ ಪ್ರತಿಯೊಂದು ಹಿಂದೂಗಳು ಆಚರಿಸುವ ಸಂಭ್ರಮದ ಹಬ್ಬಗಳಲ್ಲಿ ಗೌರಿ-ಗಣೇಶ ಹಬ್ಬ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ. ಎಲ್ಲಾ ಶುಭ ಕಾರ್ಯಗಳಲ್ಲೂ ಮೊದಲ ಪೂಜೆಯನ್ನು ಪಡೆಯುವ ವಿಘ್ನೇಶ್ವರನ್ನು ಈ ದಿನದಂದು ಶ್ರದ್ಧಾ ಭಕ್ತಿಯಿಂದ ಆರಾಧಿಸಲಾಗುತ್ತದೆ. ವರ್ಷಂಪ್ರತಿಯಂತೆ ಈ ಭಾರಿಯು ಕೂಡ ಸಂಭ್ರಮದ ಗೌರಿ ಗಣೇಶ ಹಬ್ಬ ಮತ್ತೆ ಬಂದಿದೆ. ಸಂಬಂಧಗಳ ನಂಟನ್ನು ಗಟ್ಟಿ ಮಾಡುವ ಚತುರ್ಥಿ ಹಬ್ಬ ಆಚರಿಸುವುದೆಂದರೆ ಹಿಂದೂಗಳಿಗೆ ಅದು ಎಲ್ಲಿಲ್ಲದ ಖುಷಿ. ಅದರಲ್ಲೂ ಕೂಡ ಹಬ್ಬಗಳು ಬಂತೆಂದರೆ ಸಾಕು ಸಂಭ್ರಮ ಸಡಗರ ಮನೆಯಲ್ಲಿಯೂ ಮನದಲ್ಲಿಯೂ ಮೂಡಿರುತ್ತದೆ. ಮೊನ್ನೆ ಮೊನ್ನೆಯಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಸವಿಯನ್ನು ಉಂಡ ನಮಗೆ ಅದರ ಬೆನ್ನ ಹಿಂದೆಯೇ ಗೌರಿ-ಗಣೇಶ ಹಬ್ಬ ಬಂದಿರುವುದು ಇನ್ನೊಂದು ಸಡಗರವೇ ಸರಿ. ಅಷ್ಟಮಿಯ ಸಿಹಿ ಮುಗಿಯುತ್ತ ಬರುತ್ತಿದ್ದಂತೆ ಇದೀಗ ಗೌರಿ ಗಣೇಶ ಹಬ್ಬದ ಸಿಹಿ ಉನ್ನಲು ತಯಾರಾಗುತ್ತಿದ್ದೇವೆ. ಹಿಂದೂ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬ ಮಹತ್ತರವಾದ ಹಬ್ಬವಾಗಿದ್ದು. ಹಿರಿಯರು ಕಿರಿಯರಿಗೆ ಬಹುಮಾನವಾಗಿ ಕೊಟ್ಟು ಹೋದ ಹಬ್ಬವೆಂದರೂ ತಪ್ಪಗಲಾರದು. ಹಬ್ಬಗಳ…

Read More

UN NETWORKS ಕೋಟೆಕಾರು: ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠಂ ಇದರ ಕೋಟೆಕಾರು ಶಾಖೆಯ ವತಿಯಿಂದ ಆ.24 ಮತ್ತು ಆ.25ರವೆರೆಗೆ ಗೌರಿ ಹಬ್ಬ ಮತ್ತು ಶ್ರೀ ಗಣೇಶ ಹಬ್ಬ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ. ಕೋಟೆಕಾರಿನಲ್ಲಿ ಸೋಮವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಆ.24ರ ಪೂರ್ವಾಹ್ನ 8.30ಕ್ಕೆ ಶ್ರೀ ಗೌರಿ ವಿಗ್ರಹದ ಪ್ರತಿಷ್ಠೆ, ಲಲಿತಾ ಹೋಮದ ಆರಂಭ, ಬೊಳ್ಳಾವ ವಿದ್ಯಾಶಂಕರವರಿಂದ ಕರ್ನಾಟಕ ಸಂಗೀತ ಕಚೇರಿ, ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಹರ್ಷ ಕುಮಾರ್ ಕೇದಗೆ ಮತ್ತು ಕನಕವಲ್ಲಿ ಹೆಚ್. ಕೇದಗೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆನೆಗುಂದಿ ಮಹಾಸಂಸ್ಥಾನಂ, ಸರಸ್ವತಿ ಪೀಠ ಕಟಪಾಡಿಯ ಗೌರವಾರ್ಧಯಕ್ಷ ಕೆ.ಕೇಶವ ಆಚಾರ್ಯ, ನ್ಯಾಯವಾದಿ ಅನಿಲ್ ಬೇಕಲ್, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪಾರ್ ಪತ್ತಿಗೆದಾರರಾದ ಪಿ. ಲಕ್ಷ್ಮೀನಾರಾಯಣ ರಾವ್, ಆರ್ಯ ಮರಾಠ ಸಮಾಜ ಸಂಘ…

Read More

UN NETWORKS ಪಾನೀರು : ಶಾಲೆಗಳಲ್ಲಿ ನಾಲ್ಕು ಗೋಡೆಯೊಳಗೆ ಪಾಠ ಮಾಡಲಾಗುತ್ತದೆ, ಆದರೆ ಹೊರಗಡೆಯ ಅಭಿವೃದ್ಧಿಯೂ ಅಗತ್ಯವಿದ್ದು, ಕ್ರೀಡೆಯಲ್ಲಿ ಶಿಕ್ಷಣ, ಮನರಂಜನೆ, ಅಭಿವೃದ್ಧಿ ಎಲ್ಲವೂ ಸಿಗುತ್ತದೆ ಎಂದು ಪಾನೀರ್ ಚರ್ಚ್‍ನ ಧರ್ಮಗುರು ವಂದನೀಯ ಫಾ.ಡೆನ್ನಿಸ್ ಸುವಾರಿಸ್ ಅಭಿಪ್ರಾಯಪಟ್ಟರು. ಪಾನೀರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಪಾನೀರ್ ಚರ್ಚ್ ಮೈದಾನದಲ್ಲಿ ಮಂಗಳವಾರ ನಡೆದ ಉಳ್ಳಾಲ ಬಿ. ಹೋಬಳಿ ಮಟ್ಟದ ಪಾಥಮಿಕ ಶಾಲಾ ಬಾಲಕ-ಬಾಲಕಿಯರ ಖೋ-ಖೋ ಮತ್ತು ವಾಲಿಬಾಲ್ ಪಂದ್ಯಾಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನಿಂದ ಹಿಡಿದು ಅಂತರಾಷ್ಟ್ರೀಯ ಮಟ್ಟದವರೆಗೂ ಕ್ರೀಡಾಪಟುಗಳನ್ನು ಸೃಷ್ಟಿಸುವ ಅವಶ್ಯಕತೆ ನಮ್ಮ ದೇಶಕ್ಕಿದೆ, ಆ ನಿಟ್ಟಿನಲ್ಲಿ ಎಳವೆಯಲ್ಲೇ ಕ್ರೀಡಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕಿದ್ದು, ಕ್ರೀಡಾಕೂಟಗಳ ಸಹಕಾರಿಯಾಗಿದೆ ಎಂದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಎಲಿಯಾಸ್ ಡಿಸೋಜ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕೋಟೆಕಾರ್ ಪಟ್ಟಣ ಪಂಚಾಯಿತಿ ಸದಸ್ಯ ಲ್ಯಾನ್ಸಿ ಡಿಸೋಜ, ಶಿಕ್ಷಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ರಾವ್, ನೋಡೆಲ್ ಅಧಿಕಾರಿಗಳಾದ ಪುರುಷೋತ್ತಮ, ಪ್ರಮೋದ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ…

Read More

UN NETWORKS ಉಳ್ಳಾಲ: ಆಧುನಿತೆಗೆ ತಕ್ಕಂತೆ ಬದಲಾವಣೆಗಳೂ ಅಗತ್ಯ, ಶಾಲೆಯಲ್ಲಿ ನೀಡುವ ಶಿಕ್ಷಣದಲ್ಲಿ ಬದಲಾವಣೆ ಕಾಣುತ್ತಿದ್ದು ಅದೇ ಮಾದರಿಯ ಶಿಕ್ಷಣ ಮದರಸಾ ಮಕ್ಕಳಿಗೆ ಸಿಗಬೇಕೆನ್ನುವ ನಿಟ್ಟಿನಲ್ಲಿ ಮದರಸಾಗಳಲ್ಲೂ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗುತ್ತಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದರು. ಕೇಂದ್ರ ಜುಮಾ ಮಸೀದಿಯ ದ್ಸಿಕ್ರ್ ಸಭಾಂಗಣದಲ್ಲಿ ಮಂಗಳವಾರ ಮದರಸಾಗಳಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಧಾರ್ಮಿಕ ಶಿಕ್ಷಣ ಬಲಗೊಂಡರೆ ಧರ್ಮವೂ ಬಲಗೊಳ್ಳುತ್ತದೆ, ಇಂದು ಕುರ್‍ಆನ್‍ಗಳು ಭಾಷಾಂತರಗೊಂಡ ಕಾರಣ ವಿದೇಶಗಳಲ್ಲಿ ಇಸ್ಲಾಂ ಸ್ವೀಕರಿಸುವವರು ಹೆಚ್ಚಾಗಿದ್ದಾರೆ. ನಮ್ಮಲ್ಲಿನ ವೈಮನಸ್ಸಿನಿಂದಾಗಿ ಇಸ್ಲಾಮಿಕ್ ಕಾನೂನುಗಳು ಕೈತಪ್ಪುತ್ತಿವೆ. ಕ್ಷುಲ್ಲಕ ವಿಚಾರಗಳಲ್ಲಿ ಪರಸ್ಪ ಹೊಡೆದಾಡುವ ಬದಲು ಒಗ್ಗಟ್ಟಿನಿಂದ ಬರುವ ಸಮಸ್ಯೆಗಳನ್ನು ಎದುರಿಸಬೇಕಿದೆ. ಬಡಮಕ್ಕಳಿಗೆ ಮದರಸಾದಲ್ಲಿ ಆಧುನಿಕ ಶಿಕ್ಷಣ ಸಿಗಬೇಕೆನ್ನುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದ್ದು, ಮುಂದೆ ಎಲ್ಲಾ ಮದರಸಾಗಳಿಗೆ ವಿಸ್ತರಿಸಲಾಗುವುದು, ಇದಕ್ಕೆ ಜಮಾಅತಿನ ಸರ್ವರೂ ಒಗ್ಗಟ್ಟಿನಿಂದ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು. ಮದರಸಾಗಳ ಮುಫತ್ತಿಸ್ ಸುಲೈಮಾನ್ ಸಖಾಫಿ ಮಾತನಾಡಿ, 1ರಿಂದ 7ನೇ ತರಗತಿವರೆಗೆ ಮದರಸಾದಲ್ಲಿ…

Read More

UN NETWORKS  ಕಿನ್ಯಾ: ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದುಬಿದ್ದು, ಮನೆಮಂದಿ ಪವಾಡಸದೃಶವಾಗಿ ಪಾರಾದ ಘಟನೆ ಕಿನ್ಯ ಗ್ರಾಮಪಂಚಾಯಿತಿನ ಮಿನಾದಿ ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶ್ರೀನಿವಾಸ ಮತ್ತು ಭಾಗ್ಯಶ್ರೀ ದಂಪತಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಸಂದರ್ಭದಲ್ಲಿ ಮನೆಯೊಳಗೆ ದಂಪತಿ ಹಾಗೂ ಮಕ್ಕಳಾದ ಸುಶಾಂತ್, ನಿಶಾಂತ್, ಶುಭಶ್ರೀ ಪವಾಡಸದೃಶವಾಗಿ ಪಾರಾಗಿದ್ದಾರೆ. ಮನೆ ಕುಸಿಯಲು ಆರಂಭವಾಗುತ್ತಿದ್ದಂತೆ ಸದ್ದು ಕೇಳಿ ಎಲ್ಲರೂ ಹೊರಬಂದ ತಕ್ಷಣ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು, ಗೋಡೆಗಳಲ್ಲಿ ಬಿರುಕುಂಟಾಗಿದೆ. ಘಟನೆಯಿಂದ ರೂ.1 ಲಕ್ಷ ನಷ್ಟ ಸಂಭವಿಸಿದೆ. ಅಶಕ್ತ ಕುಟುಂಬ : ಮೂರು ತಿಂಗಳ ಹಿಂದೆಯಷ್ಟೇ ಶ್ರೀನಿವಾಸ್ ಅವರ ತಾಯಿ ತೀರಿಕೊಂಡಿದ್ದರು. ಅಲ್ಲದೆ ಶ್ರೀನಿವಾಸ್ ಅವರು ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೆ, ಓರ್ವ ಪುತ್ರನೂ ಅಂಗವಿಕಲನಾಗಿದ್ದಾನೆ. ಇಬ್ಬರು ಎಳೆಯ ಹರೆಯದ ಮಕ್ಕಳು ಶಾಲೆ ಕಲಿಯುತ್ತಿದ್ದಾರೆ. ಇಡೀ ಕುಟುಂಬದ ಜವಾಬ್ದಾರಿ ಶ್ರೀನಿವಾಸ್ ಅವರ ಮೇಲಿದ್ದರೂ, ಅನಾರೋಗ್ಯದಿಂದ ಕೆಲಸಕ್ಕೆ ಹೋಗಲು ಸಾಧ್ಯವಾಗದೆ, ಅಪರೂಪಕ್ಕೊಮ್ಮೆ…

Read More