UN NETWORKS ಉಳ್ಳಾಲ: ಆ.22ರ ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದುಲ್ -ಹಜ್ಜ್ ಒಂದರ ಚಂದ್ರ ದರ್ಶನವಾಗಿರುವುದರಿಂದ ಸೆ.1 ರಂದು ಶುಕ್ರವಾರ ಈದುಲ್-ಅಝ್ಹಾ (ಬಕ್ರೀದ್ ಹಬ್ಬ) ಆಗಿರುತ್ತದೆ ಎಂದು ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: UllalaVani
UN NETWORKS ತೊಕ್ಕೊಟ್ಟು: ಪರಿಶಿಷ್ಟ ಜಾತಿ ಕುಟುಂಬಕ್ಕೆ ಸೇರಿದ ಜಾಗವನ್ನು ಮಾರಾಟ ಮಾಡಿ ಖಾಸಗಿಯವರಿಗೆ ನೀಡಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಕುಟುಂಬಕ್ಕೆ ಆಗಿರುವ ವಂಚನೆಗೆ ಕಂದಾಯ ಅಧಿಕಾರಿಗಳೇ ನೇರ ಹೊಣೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘದ ಸಮಿತಿ ಸದಸ್ಯ ನಿರ್ಮಲ್ ಕುಮಾರ್ ಹೇಳಿದ್ದಾರೆ. ಅವರು ತೊಕ್ಕೊಟ್ಟು ಗಾಂಧಿನಗರದಲ್ಲಿ ಮಂಗಳವಾರ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ದಿ. ತೋಮರವರಿಗೆ ಮಂಜೂರಾಗಿರುವ ಸರಕಾರಿ ಜಮೀನಿನ ಪಿಟಿಸಿಎಲ್ ಕಾಯ್ದೆ ಉಲ್ಲಂಘಿಸಿದ ಕಂದಾಯ ಅಧಿಕಾರಿಗಳ ಧೋರಣೆ ಹಾಗೂ ನ್ಯಾಯಾಲಯ ನೀಡಿದ ಆದೇಶವನ್ನು ಜಾರಿ ಮಾಡುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಜನಸೇವೆಗೆಂದು ಇರುವ ಸರಕಾರಿ ಅಧಿಕಾರಿಗಳು ಜನವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಹಣ ಗಳಿಸುವ ಉದ್ದೇಶದಿಂದಲೇ ಪರಿಶಿಷ್ಟ ಜಾತಿ ಕುಟುಂಬಕ್ಕೆ ಸೇರಿದ ಜಾಗವನ್ನು ಇಂದು ಕಬಳಿಸಲಾಗಿದೆ. ಬಂಗಲೆ ನಿರ್ಮಾಣದಲ್ಲಿ ನಿರತರಾಗಿರುವ ಅಧಿಕಾರಿಗಳ ವಿರುದ್ಧ ಜನರ ಪರ ದನಿ ಎತ್ತುತ್ತಿಲ್ಲ. ಜಿಲ್ಲೆಯಾದ್ಯಂತ ಎಕರೆಗಟ್ಟಲೆ ಸರಕಾರಿ ಭೂಮಿಯಿದ್ದರೂ ದಲಿತರಿಗೆ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.…
UN NETWORKS ಕೊಲ್ಯ: ಸೇವಾ ಭಾರತಿ ಉಳ್ಳಾಲ ಇದರ ವತಿಯಿಂದ ಉಳ್ಳಾಲ ಹೋಬಳಿ ವಲಯದ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯು ಕೊಲ್ಯ ಶ್ರೀ ರಮಾನಂದಾಶ್ರಮದಲ್ಲಿ ಭಾನುವಾರ ನಡೆಯಿತು. ಕೊಲ್ಯ ಶ್ರೀ ರಮಾನಂದಾಶ್ರಮದ ಅರ್ಚಕ ಶ್ಯಾಂಪ್ರಕಾಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಧ್ಯಕ್ಷತೆಯನ್ನು ನಾರಾಯಣ ಕುಂಪಲ ವಹಿಸಿದ್ದರು. ಪಾವೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಪ್ರಶಾಂತ್, ತೊಕ್ಕೊಟ್ಟು ಸೆಬೆಸ್ಟಿಯನ್ ಕಾಲೇಜಿನ ಕನ್ನಡ ಉಪನ್ಯಾಸಕ ಅರುಣ್, ಬೊಳ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಹರಿಪ್ರಸಾದ್ ತೀರ್ಪುಗಾರರಾಗಿದ್ದರು. ರವಿಚಂದ್ರನ್, ರೋಹಿತ್, ಮಹೇಶ್ ಬಹುಮಾನ ವಿತರಿಸಿದರು. ಕುಂಪಲ ಶಾಲೆಯ ಮುಖ್ಯೋಪಾಧ್ಯಯರಾದ ವಿಶ್ವನಾಥ್ ಎಂ.ಕೆ ಪ್ರಸ್ತಾವನೆಗೈದರು, ಸುರೇಶ್ ಸ್ವಾಗತಿಸಿದರು.
UN NEWTWORKS ನವದೆಹಲಿ: ದೇಶದ್ಯಾಂತ ತೀವ್ರ ಕುತೂಹಲ ಕೆರಳಿಸಿದ್ದ ತ್ರಿವಳಿ ತಲಾಖ್ ಸಂವಿಧಾನ ಬಾಹಿರ ಎಂದು ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸು ಮಹತ್ವದ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ನೀಡಿದೆ. ಸಿಜೆಐ ನೇತೃತ್ವದ ಪಂಚ ಸದಸ್ಯ ಪೀಠದ ನ್ಯಾಯಮೂರ್ತಿಗಳ ಪೀಠದಲ್ಲಿ ಇಬ್ಬರು ಸದಸ್ಯರು ತ್ರಿವಳಿ ತಲಾಖ್ ಗೆ ಅನುಮೋದನೆ ನೀಡಿದ್ದು, ಉಳಿದ ಮೂವರು ನ್ಯಾಯಾಧೀಶರು ಮುಸ್ಲಿಂ ವೈಯಕ್ತಿಕ ಕಾನೂನಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಉದಯ್ ಲಲಿತ್, ಕುರಿಯನ್ ಜೋಸೆಫ್ ಹಾಗೂ ರೋಹಿಂಗ್ಟನ್ ಅವರು ಎಂದು ಹೇಳಿ ತ್ರಿವಳಿ ತಲಾಖ್ ಅನ್ನು ರದ್ದುಪಡಿಸಿ ಬಹುಮತದ ತೀರ್ಪು ನೀಡಿದ್ದಾರೆ. ಅದರಂತೆ ಬಹುಮತದ ಆಧಾರದ ಮೇಲೆ ತ್ರಿವಳಿ ತಲ್ಲಾಖ್ ಅನ್ನು ಮುಂದಿನ 6 ತಿಂಗಳ ಕಾಲ ರದ್ದು ಮಾಡಲಾಗಿದ್ದು, 6 ತಿಂಗಳೊಳಗೆ ಈ ಬಗ್ಗೆ ಸೂಕ್ತ ಕಾನಾನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಐವರು…
UN NETWORKS ಸೋಮೇಶ್ವರ: ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶ್ರಾವಣ ಅಮವಾಸ್ಯೆ ಪ್ರಯುಕ್ತ ಸಾವಿರದಷ್ಟು ಮಂದಿ ಸಮುದ್ರದಲ್ಲಿ ತೀರ್ಥಸ್ನಾನಗೈದು ಪಾಪ ವಿಮೋಚನೆ ಮತ್ತು ರೋಗ ಬಾಧೆಗಳ ನಿವಾರಣೆಗೆ ದೇವರಲ್ಲಿ ಪ್ರಾರ್ಥಿಸಿಕೊಂಡರು. ಖಗ್ರಾಸ ಸೂರ್ಯ ಗ್ರಹಣವಿದ್ದರೂ, ಭಾರತಕ್ಕೆ ವಿಶೇಷ ಫಲವಿಲ್ಲವೆಂದು ಜ್ಯೋತಿಷಿಗಳ ಅಭಿಪ್ರಾಯಗಳಾಗಿದ್ದರಿಂದಾಗಿ ಶ್ರಾವಣ ಅಮಾವಸ್ಯೆಗೆ ತೀರ್ಥ ಸ್ನಾನ ಮಾಡುವವರ ಸಂಖ್ಯೆಯಲ್ಲಿ ಕಡಿಮೆಯಾಗಿರಲಿಲ್ಲ. ಜಿಲ್ಲೆ ಮತ್ತು ಹೊರಜಿಲ್ಲೆಗಳಿಂದ ಆಗಮಿಸಿದ ಭಕ್ತಾಧಿಗಳು ದೇವಸ್ಥಾನದ ಉತ್ತರದಲ್ಲಿರುವ ಗದಾತೀರ್ಥ ಕೆರೆಯಲ್ಲಿ ಮಿಂದು, ಬಳಿಕ ಸಂಪ್ರದಾಯದಂತೆ ವೀಳ್ಯದೆಲೆ ಮತ್ತು ಅಡಿಕೆಯನ್ನು ಸಮುದ್ರಕ್ಕೆ ಸಲ್ಲಿಸಿದ ನಂತರ ಸಮುದ್ರದ ನೀರಿನಲ್ಲಿ ತೀರ್ಥಸ್ನಾನಗೈದರು.. ಬೆಳಿಗ್ಗೆ 4 ಗಂಟೆಯಿಂದ ಮಧ್ಯಾಹ್ನ 12ರ ವರೆಗೆ ಜಿಲ್ಲೆ ಮತ್ತು ಹೊರಜಿಲ್ಲೆಯ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿದರು. ಕಡಲತಡಿಗೆ ತೆರಳಿ ಸಮುದ್ರ ಗಂಗಾ ಮಾತೆಗೆ ನಮಸ್ಕರಿಸಿ ವರ್ಷದ ಪಾಪ ವಿಮೋಚನೆಗೆ ಪ್ರಾರ್ಥಿಸುವುದು ಮತ್ತು ಚರ್ಮ ರೋಗಗಳ ನಿವಾರಣೆಯ ಸಲುವಾಗಿ ಉಪ್ಪು ನೀರಿನಲ್ಲಿ ತೀರ್ಥಸ್ನಾನಗೈಯ್ಯುತ್ತಾರೆ ಅನ್ನುವುದು ಹಿರಿಯರ ಅಭಿಪ್ರಾಯ. ಸಮುದ್ರದ ನೀರಿನಲ್ಲಿ 5 ಮತ್ತು 7 ಬಾರಿ ಮುಳುಗುತ್ತಾರೆ. ಬಳಿಕ…
UN NETWORKS ಉಳ್ಳಾಲ : ಭಾರತ ಬಹು ಸಂಸ್ಕೃತಿಯನ್ನು ಹೊಂದಿರುವ ಕೃಷಿ ಪರಂಪರೆ ಇಂತಹ ದೇಶವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರ ಭೂಮಿಯನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಮಾರುವ ಮೂಲಕ ದೇಶದಲ್ಲಿ ರುಷಿ ಪರಂಪರೆಯನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಜನಪರ ಚಿಂತಕಿ ಹಾಗೂ ಬರಹಗಾರ್ತಿ ಕೆ. ನೀಲಾ ಅಭಿಪ್ರಾಯಪಟ್ಟರು. `ಅಬ್ಬಕ್ಕನ ಮಡಿಲು ಸೌಹಾರ್ದತೆಯ ಕಡಲು’ ಅರಿವು, ಸೌಹಾರ್ದತೆ, ಮುನ್ನಡೆಗಾಗಿ ಘೋಷ ವಾಕ್ಯದೊಂದಿಗೆ ಕುತ್ತಾರಿನ ಮುನ್ನೂರು ಯುವಕ ಮಂಡಲದ ಸಭಾಂಗಣದಲ್ಲಿ ಭಾನುವಾರ ನಡೆದ 13 ನೇ ಉಳ್ಳಾಲ ವಲಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಭಾರತದ ಆನಾದಿ ಕಾಲದಿಂದಲೂ ಕೃಷಿ ಆಧಾರಿತ ದೇಶವಾಗಿದೆ. ಜಗದ ಜೀವರಾಶಿಗೆ ಅನ್ನ ನೀಡುವ ಕೃಷಿ ಸಂಸ್ಕೃತಿಯನ್ನು ಮೋದಿ ನೇತೃತ್ವದಲ್ಲಿ ಅದಾನಿ ಅಂಬಾನಿಗಳು ಕೂತು ತಿನ್ನುವ ರುಷಿ ಪರಂಪರೆಯೆಡೆಗೆ ಕೊಂಡೊಯ್ಯುತ್ತಿದ್ದಾರೆ. ದೇಶದ ಕೃಷಿ ಭೂಮಿಗಳನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ಪರಭಾರೆಯಾಗುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಯುವಜನತೆ ಹಣಕ್ಕಾಗಿ ತಪ್ಪು ದಾರಿಗಳನ್ನು ಹುಡುಕುತ್ತಿದ್ದಾರೆ. ಕೇಂದ್ರ ಸರಕಾರದ ಸರ್ವೇಯಂತೆ ದೇಶದಲ್ಲಿ ಶೇ. 71ರಷ್ಟು…
UN NETWORKS ಅಸೈಗೋಳಿ: ಅಸೈಗೋಳಿ ಕೇಂದ್ರ ಮೈದಾನದಲ್ಲಿ ಕಾರ್ಯಕ್ರಮಕ್ಕೆಂದು ಹಾಕಲಾಗಿದ್ದ ಕಬ್ಬಿಣದ ತಗಡು ಶೀಟಿನ ಚಪ್ಪರವೊಂದು ಏಕಾಏಕಿ ಕುಸಿದು ಬಿದ್ದ ಘಟನೆ ಶನಿವಾರ ಸಂಜೆ ಸಂಭವಿಸಿದ್ದು, ಘಟನೆ ವೇಳೆ ಚಪ್ಪರದ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರು ಅದೃಷ್ಟವಶಾತ್ ಜೀವಾಪಾಯದಿಂದ ಪಾರಾಗಿದ್ದಾರೆ. ಅಸೈಗೋಳಿಯ ಮೈದಾನದಲ್ಲಿ ಇತ್ತೀಚೆಗೆ ಮೊಸರು ಕುಡಿಕೆ ಉತ್ಸವ ನಡೆದಿದ್ದು ಇದಕ್ಕಾಗಿ ಶೀಟಿನ ಚಪ್ಪರವನ್ನು ಹಾಕಲಾಗಿತ್ತು. ಅಲ್ಲದೆ ಮುಂದಿನ ವಾರ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೂ ಇದೇ ಚಪ್ಪರವನ್ನು ಇಡಲು ನಿರ್ಧರಿಸಲಾಗಿತ್ತು. ಇದೇ ವೇಳೆ ಚಪ್ಪರವನ್ನು ಇನ್ನಷ್ಟು ವಿಸ್ತರಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ಸಹಿತ ಚಪ್ಪರವು ಹಠಾತ್ತನೆ ಕುಸಿದು ಬಿದ್ದಿದೆ. ಕೂಡಲೇ ಚಪ್ಪರದಡಿಯಲ್ಲಿದ್ದ ಕಾರ್ಮಿಕರು ಓಡಿ ಜೀವವನ್ನು ರಕ್ಷಿಸಿಕೊಂಡಿದ್ದಾರೆ. ಒಂದು ವೇಳೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಚಪ್ಪರ ಕುಸಿದು ಬೀಳುತ್ತಿದ್ದ ದೊಡ್ಡ ಮಟ್ಟದ ಅನಾಹುತ ಸಂಭವಿಸುತ್ತಿತ್ತು.
UN NETWORKS ಉಳ್ಳಾಲ: ಅಂಬ್ಲಮೊಗರು ಗ್ರಾಮದ ಕೋಟೆದಡಿ ಬಾಕಿಮಾರ್ ಪರಿಸರದಲ್ಲಿ ಶನಿವಾರ ಗಾಳಿ ಮಳೆಗೆ ಮರಗಳು ಬಿದ್ದು, ಒಂದು ಮನೆ, ದೈವಸ್ಥಾನ ಮತ್ತು ಒಂದು ದನದ ಕೊಟ್ಟಿಗೆಗೆ ಹಾನಿಯಾಗಿದ್ದು ಸುಮಾರು 7 ಲಕ್ಷ ರೂ, ನಷ್ಟ ಆಂದಾಜಿಸಲಾಗಿದೆ. ಪದ್ಮನಾಭ ಕೋಟೆದಡಿ ಅವರ ಮನೆಗೆ ಹಾನಿಯಾಗಿದ್ದು ಸುಮಾರು 5 ಲಕ್ಷ ನಷ್ಟವದರೆ, ಲೋಕಯ್ಯ ಪೂಜಾರಿ ಅವರ ಮನೆಯ ಎದುರಿನ ದೈವಸ್ಥಾನಕ್ಕೆ ಹಾನಿಯಾಗಿದ್ದು, ಅಗಸ್ತಿನಾ ಡಿ.ಸೋಜ ಅವರ ಮನೆಯ ಕೊಟ್ಟಿಗೆಗೆ ಹಾನಿಯಾಗಿದ್ದರಿಂದ ಸುಮಾರು 2 ಲಕ್ಷರೂ. ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಆಂಬ್ಲಮೊಗರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದರು.
UN NETWORKS ಉಳ್ಳಾಲ:ಆರ್ಎಸ್ಎಸ್ ಕೃಪಾಪೋಷಿತ ಸಂಘಟನೆಗಳು ಇಲ್ಲಿರುವ ಮುಸ್ಲಿಂ, ಕ್ರೈಸ್ತರ ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಈ ಎಲ್ಲಾ ಜಾತಿಗಳು ಸಂಘಟಿತವಾದರೆ ಮಾತ್ರ ಫ್ಯಾಸಿಸ್ಟ್ ಶಕ್ತಿಗಳನ್ನು ಎದುರಿಸಲು ಸಾಧ್ಯ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅಭಿಪ್ರಾಯಪಟ್ಟರು. ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಜನತೆಯ ಅಭಿಯಾನದ ಅಂಗವಾಗಿ ಆ, 1ರಿಂದ ಆ.25ರವರೆಗೆ ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ ಭಾರತದ ನೋವು ಭರಿತ ರಕ್ತ ಸುರಿಯುತ್ತದೆ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ತೊಕ್ಕೊಟ್ಟು ಜಂಕ್ಷನ್ ಬಸ್ ನಿಲ್ದಾಣ ಬಳಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಿ ಪ್ರಧಾನ ಭಾಷಣ ಮಾಡಿದರು. ಗೋರಕ್ಷಣೆಯ ಹೆಸರಲ್ಲಿ ಹೊಸ ಅಜೆಂಡಾದ ಮೂಲಕ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ. ಇದರ ಹಿಂದೆ ಭಾರತವನ್ನು ಹಿಂದೂ ಫ್ಯಾಸಿಸ್ಟ್ ರಾಷ್ಟ್ರವನ್ನಾಗಿ ಮಾಡುವ ಸಂಘ ಪರಿವಾರ ನಡೆಸಿರುವ ಅಜೆಂಡಾದ ಭಾಗವೇ ಈ ಗುಂಪು ಹಿಂಸಾ ಹತ್ಯೆಯಾಗಿದ್ದು, ಇದರ ವಿರುದ್ಧ ಆ. 25ರಂದು ಮನೆಯಿಂದ ಹೊರಗೆ ಬನ್ನಿ…
UN NETWORKS ಹರೇಕಳ: ಹರೇಕಳ ಶ್ರೀ ರಾಮಕೃಶ್ಣ ಪ್ರೌಢಶಾಲೆಯ ಸೌಜನ್ಯ ಸ್ಕೌಟ್ ದಳದ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಶ್ರೀ ಕೃಷ್ಣನ ಸಂದೇಶವನ್ನು ತಿಳಿಸಿದ ಮುಖ್ಯೋಪಾಧ್ಯಾಯರಾದ ಕೆ. ರವೀಂದ್ರ ರೈ ಯವರು ಭಗವಾನ್ ಶ್ರೀ ಕೃಷ್ಣನ ಜೀವನಾದರ್ಶಗಳು ಮಾನವ ಬದುಕಿಗೆ ದಾರಿ ದೀಪವಾಗಿದೆ. ಈತನು ಓರ್ವ ಪರಿಸರ ಪ್ರೇಮಿ. ಪರಿಸರದಲ್ಲಿರುವ ನೀರು, ಗಾಳಿ, ಮಣ್ಣು, ಮರಗಿಡಗಳು, ಪ್ರಾಣಿ ಪಕ್ಷಿಗಳಲ್ಲಿಯೂ ದೇವತಾಂಶವಿದೆ ಎಂಬುದನ್ನು ತೋರಿಸಿಕೊಟ್ಟವನು. ನರಕಾಸುರನ ಸೆರೆಮನೆಯಿಂದ ಮುಕ್ತಗೊಳಿಸಿ ಅನಾಥ ಮಹಿಳೆಯರಿಗೆ ರಕ್ಷಣೆ ನೀಡಿದವನು. ಅನಾಥ ಮಹಿಳೆಯರ ರಕ್ಷಣೆ ನಮ್ಮ ಧರ್ಮವಾಗಿರಬೇಕು, ತ್ಯಾಗ ಮತ್ತು ಪರೋಪಕಾರ ನಮ್ಮ ದಿನನಿತ್ಯದ ಕಾರ್ಯವಾಗಿರಬೇಕು, ಭೇದ ಮರೆತು ಎಲ್ಲರೊಡಗೂಡಿ ಬದುಕುವುದೇ ನಮ್ಮ ಜೀವನವಾಗಬೇಕು ಎಂಬುದು ಭಗವಾನ್ ಶ್ರೀ ಕೃಷ್ಣನ ದಿವ್ಯ ಸಂದೇಶವಾಗಿದೆ ಎಂದು ಹೇಳಿದರು. ಪ್ರಸ್ತಾವಿಕವಾಗಿ ಮಾತನಾಡಿದ ಸಂತೋಜಕ ಸ್ಕೌಟ್ ಮಾಸ್ಟರ್ ತ್ಯಾಗಂ ರವರು ಶೈಕ್ಷಣಿಕ ವರ್ಷದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಕ್ರಿಸ್ಮಸ್ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಆಚರಿಸಲ್ಪಡುತ್ತಿದ್ದು, ಪ್ರತಿಯೊಂದು ಹಬ್ಬದಲ್ಲಿ ಮಹಾತ್ಮರ…

