Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು: ಸಸಿಗಳನ್ನು ನೆಡುವ ಮೂಲಕ ಪರಿಸರ ಪೂರಕ ಕಾರ್ಯಗಳಿಗೆ ಒತ್ತನ್ನು ಕೊಡುವುದರ ಮೂಲಕ, ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕಲ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸೋಮೇಶ್ವರ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಸಮೃದ್ಧಿ ಹೌಸಿಂಗ್ ಸೊಸೈಟಿ ವತಿಯಿಂದ ಸೊಸೈಟಿ ಆವರಣದಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕರಿಗೆ ಸಸಿ ವಿತರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಟಿ.ಸುವರ್ಣ ಮಾತನಾಡಿ ಸ್ವಾತಂತ್ರ್ಯೋತ್ಸವದ ದಿನದಂದು ವಿತರಿಸಲಾದ ಗಿಡಗಳನ್ನು ನೆಡುವುದರ ಜತೆಗೆ ಪೋಷಿಸುವ ಕೆಲಸವನ್ನು ಮಾಡಿದಲ್ಲಿ ಪರಿಸರವನ್ನು ಉಳಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಿದಂತಾಗುವುದು ಎಂದರು. ಈ ಸಂದರ್ಭ ಭರತ್ ರಂಗೋಲಿ, ದಯಾನಂದ, ರಾಜೇಶ್ ಕೆರೆಬೈಲ್, ಬಾಲಕೃಷ್ಣ, ವನಮಾಲ ಪ್ರಕಾಶ್, ರೇಣುಕೋ ಕೋಟ್ಯಾನ್, ಜನಾರ್ದನ ಆಚಾರ್ಯ, ಪ್ರೇಮನಾಥ್ ಉಳ್ಳಾಲ್, ಭಾಸ್ಕರ್, ಫ್ರಾನ್ಸಿಸ್ ಡಿಸೋಜ ಉಪಸ್ಥಿತರಿದ್ದರು. ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

UN NETWORKS ತೊಕ್ಕೊಟ್ಟು:ಉಳ್ಳಾಲ ಹಸಿದ ವಿದ್ಯಾರ್ಥಿಗೆ ಊಟ ಕೊಡಲಾರದ ಸೆಕ್ಯುಲಾರ್‍ವಾದಿಗಳಂತಹ ಚಿಂತನೆಯಿಂದ ಹಿಂದು ಸಮುದಾಯ ಶೋಷಣೆಗೆಕ್ಕೊಳಗಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲೆ ಕಾರ್ಯಕಾರಿಣಿ ಸದಸ್ಯ ಹಾಗೂ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಸಲುವಾಗಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಿಂದ ತೊಕ್ಕೊಟ್ಟು ಬಸ್ಸು ನಿಲ್ದಾಣದವರೆಗೆ ಸೋಮವಾರ ಜರಗಿದ ಬೃಹತ್ ಪಂಜಿನ ಮೆರವಣಿಗೆ ಮತ್ತು ತೊಕ್ಕೊಟ್ಟುವಿನಲ್ಲಿ ನಡೆದ ದಿಕ್ಸೂಚಿ ಭಾಷಣ ಮಾಡಿದರು. ಹಿಂದು ರಾಷ್ಟ್ರದಲ್ಲಿ ಹಿಂದುಗಳು ಹಬ್ಬಗಳನ್ನು ಆಚರಿಸುವ ಸಂದರ್ಭ ಗಣೇಶನ ವಿಗ್ರಹದ ಎತ್ತರ, ಪೆಂಡಾಲ್ ಅಳತೆಯನ್ನು ಲಿಖಿತವಾಗಿ ನೀಡುವ ದೌರ್ಭಾಗ್ಯ ಇದೆ. ಹಿಂದಿನ ಇತಿಹಾಸವೆಲ್ಲವೂ ಭೂಮಿಯಲ್ಲಿ ಇದ್ದವರೆಲ್ಲಾ ಹಿಂದುಗಳು ಹಾಗೂ ಹಿಂದುಸ್ತಾನ ತ್ಯಾಗದ ನೆಲ ಎಂಬ ಇತಿಹಾವಿದೆ. ಆದರೆ ತುಷ್ಟೀಕರಣದ ಗೋಜಿನಲ್ಲಿ ಧ್ವಜದ ಬಣ್ಣವನ್ನು ತುಂಡು ಮಾಡುವುದರ ಜತೆಗೆ ದೇಶವನ್ನೇ ತುಂಡು ಮಾಡಲಾಗಿದೆ. ಹಿಂದುಗಳ ಭಾವನೆಯನ್ನು ಒಂದುಗೂಡಿಸುವ ಸಲುವಾಗಿ…

Read More

UN NETWORKS ಉಳ್ಳಾಲ: ಶಾಲೆಗಳಲ್ಲಿ ಸರ್ವಧರ್ಮಗಳ ಆಚರಣೆಯನ್ನು ಆಚರಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಏಕತೆಯ ಸಂದೇಶವನ್ನು ಮೂಡಿಸಲು ಸಾಧ್ಯ ಎಂದು ರತ್ನ ಎಜ್ಯೂಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೆ.ರವೀಂದ್ರ ರೈ ಉಳಿದೊಟ್ಟು ಅಭಿಪ್ರಾಯಪಟ್ಟರು.ಅವರು ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ರವೀಂದ್ರ ಕಲಾ ವೇದಿಕೆಯಲ್ಲಿ ಶಾಲೆಯ ಸಿರಿಮುಡಿ ತುಳು ಸಂಘ ಶನಿವಾರ ಆಯೋಜಿಸಿದ್ದ ಆಟಿದೊಂಜಿ ದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸರ್ವಧರ್ಮಗಳ ಆಚರಣೆಗಳನ್ನು ಶಾಲೆಯ ಸಿರಿಮುಡಿ ತುಳು ಸಂಘ ಆಚರಿಸುವ ಮೂಲಕ ವಿದ್ಯಾರ್ಥಿಗಳಿಗೂ ಉತ್ತಮ ಸಂದೇಶವನ್ನು ನೀಡುತ್ತಾ ಬಂದಿದೆ. ಹಿಂದೆ ಕಷ್ಟ ಕಾಲದಲ್ಲಿ ಪ್ರಕೃತಿಯಿಂದ ಸಿಕ್ಕ ಸೊತ್ತುಗಳನ್ನೇ ಉಪಯೋಗಿಸಿಕೊಂಡು ಜನ ಆಹಾರವಾಗಿ ಬಳಸುತ್ತಿದ್ದರು. ಇದೇ ಆಟಿ ತಿಂಗಳ ಆಚರಣೆಯ ಮೂಲಕ ಅದನ್ನು ಸ್ಮರಿಸುವುದರೊಂದಿಗೆ ಮುಮದಿನ ಪೀಳಿಗೆಗೆ ತಿಳಿಸುವ ಕೆಲಸ ನಡೆಯಬೇಕಿದೆ ಎಂದರು. ವಿದ್ಯಾ ರತ್ನ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಶಾಲಾ ಮುಖ್ಯೋಪಾದ್ಯಾಯಿನಿ ನಯಿಮ ಹಮೀದ್ ಉಪಸ್ಥಿತರಿದ್ದರು.ರವಿ ಕುಮಾರ್ ಕೋಡಿ ಕಾರ್ಯಕ್ರಮ ಸ್ವಾಗತಿಸಿ ನಿರ್ವಹಿಸಿದರು, ಶಿಕ್ಷಕ ರಮೇಶ್ ವಂದಿಸಿದರು.…

Read More

UN NETWORKS ಕುತ್ತಾರು: ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ “ದೇಶ ಉಳಿಸಿ, ದ್ವೇಷ ಅಳಿಸಿ” ಎಂಬ ಘೋಷ ವಾಕ್ಯದೊಂದಿಗೆ ಅಝಾದಿ ರ್ಯಾಲಿಯು ಶನಿವಾರ ಮದನಿ ನಗರದಿಂದ ದೇರಳಕಟ್ಟೆ ಸಿ.ಟಿ ಗ್ರೌಂಡ್ ತನಕ ನಡೆಯಿತು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಅಧ್ಯಕ್ಷತೆಯಲ್ಲಿ ನಡೆದ ರ್ಯಾಲಿಗೆ ಉಮರಾ ನೇತಾರ ಉಂಞ ಚಾಲನೆ ನೀಡಿದರು.

Read More

UN NETWORKS ಕೊಣಾಜೆ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು  ಎಂದು ಮೂಡದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರು ಅಭಿಪ್ರಾಯ ಪಟ್ಟರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇದರ ಆಶ್ರಯದಲ್ಲಿ ಕೊಣಾಜೆ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಆರ್ಥಿಕ ಸಂಕಷ್ಟದಿಂದ ಯಾವುದೇ ವಿದ್ಯಾರ್ಥಿಯ ಶಿಕ್ಷಣ ಮೊಟಕುಗೊಳ್ಳಬಾರದೆಂಬ ಉದ್ದೇಶದಿಂದ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಶಿಕ್ಷಣಕ್ಕಾಗಿ ಬೃಹತ್ ಮೊತ್ತದ ಹಣವನ್ನು ವಿನಿಯೋಗಿಸುತ್ತಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದ ಅವರು ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು. ಉದ್ಯಮಿ ಪ್ರಸಾದ್ ರೈ ಕಲ್ಲಿಮಾರ್ ಅವರು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳಿವೆ. ಆದರೆ ಸ್ಪರ್ಧೆಯು ಆರೋಗ್ಯಕರವಾಗಿರಬೇಕು. ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸುತ್ತದೆ…

Read More

UN NETWORKS ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ಬಿಸಿಎ ಹಾಗೂ ಬಿ.ಎಸ್ಸಿ ವಿಭಾಗದ ಪಠ್ಯಪುಸ್ತಕದಲ್ಲಿ ದೇಶ ಕಾಯುವ ಸೈನಿಕರ ಕುರಿತು ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿರುವ ನಡೆಯ ವಿರುದ್ಧ ಮತ್ತು ಪಠ್ಯ ಪುಸ್ತಕವನ್ನು ಆಯ್ಕೆ ಮಾಡಿದ ಸಮಿತಿ ಸದಸ್ಯರಿಗೆ ನೋಟೀಸು ಜಾರಿ ಮಾಡುವಂತೆ ಆಗ್ರಹಿಸಿ ಕರಾವಳಿ ಸಾಂಸ್ಕೃತಿಕ ಪರಿಷತ್ ವತಿಯಿಂದ ಅಪರ ಜಿಲ್ಲಾಧಿಕಾರಿಯವರಿಗೆ ಶುಕ್ರವಾರ ಮನವಿಯನ್ನು ಸಲ್ಲಿಸುವ ಮೂಲಕ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಮಂಗಳೂರು ವಿವಿಯ ಬಿಸಿಎ, ಹಾಗೂ ಬಿ.ಎಸ್ಸಿ ವಿಭಾಗದ ಕನ್ನಡ ಪಠ್ಯಪುಸ್ತಕದಲ್ಲಿ 12ಗದ್ಯಪಾಠಗಳನ್ನು ಅಳವಡಿಸಿದ್ದು ಅದರಲ್ಲಿ 10ನೇ ಪಾಠವಾಗಿ ಬರಗೂರು ರಾಮಚಂದ್ರಪ್ಪ ಅವರು ಬರೆದ ` ಸಂಸ್ಕೃತಿ: ಶ್ರಮ ಮತ್ತು ಸೃಜನಶೀಲತೆ’ ಎಂಬ ಕೃತಿಯಿಂದ ಆಯ್ದುಕೊಳ್ಳಲಾದ `ಯುದ್ಧ: ಒಂದು ಉದ್ಯಮ’ ಎಂಬ ವಿಷಯವನ್ನು ಆಯ್ಕೆ ಮಾಡಿದ್ದಾರೆ. ಇಲ್ಲಿ ಸೈನಿಕರನ್ನು ಅತ್ಯಾಚಾರಿಗಳಂತೆ ಬಂಬಿಸಲಾಗಿದ್ದು, ಸೈನಿಕರ ಪತ್ನಿಯರನ್ನು ಅವಮಾನಿಸಲಾಗಿದೆ. ಯುದ್ಧ ಎನ್ನುವುದು ಒಂದು ವ್ಯಾಪಾರ ಅನ್ನುವಂತಹ ಸಂದೇಶವನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮೂಡುವಂತಹ ಪಾಠವಿದೆ. ಪಠ್ಯವನ್ನು ಆಯ್ಕೆ ಮಾಡಿದ ಸಮಿತಿ ಸದಸ್ಯರಿಗೆ ನೊಟೀಸ್ ಜಾರಿ ಮಾಡಿ ಅವರಿಂದ…

Read More

UN NETWORKS ಉಳ್ಳಾಲ: ಬೋಳಿಯಾರು ಬಿಜೆಪಿ ಸಭೆಯಲ್ಲಿ ಹನೀಫ್ ನಿಝಾಮಿಯವರು ಮಂಜನಾಡಿ ಗ್ರಾ.ಪಂ ಅಧ್ಯಕ್ಷರನ್ನು ಹೀನಾಯವಾಗಿ ನಿಂದಿಸಿರುವುದು ಖಂಡನೀಯ, ವಾರ್ಡಿಗೆ ಬಿಜೆಪಿಯವರು ಕೇವಲ 30,000 ರೂ. ನೀರು ನೀಡಿದ್ದರೆ, ಸಚಿವರು ಕೋಟ್ಯಂತರ ಅನುದಾನವನ್ನು ಒದಗಿಸಿದ್ದಾರೆ ಎಂದು ಅಸೈ ಮದಕ ನಿವಾಸಿ ಅಬೂಬಕರ್ ಎಂಬವರು ಹೇಳಿದ್ದಾರೆ. ಹನೀಫ್ ನಿಝಾಮಿ ನಡೆ ವಿರೋಧಿಸಿ ಅಸೈ ಮದಕ ನಾಗರಿಕರು ಪ್ರತಿಕ್ರಿಯಿಸಿ, ಕಾಂಗ್ರೆಸ್ ನ ಸಚಿವರು ಐದು ವರ್ಷದ ಅವಧಿಯಲ್ಲಿ ಅಸೈಗೋಳಿ 5 ಲಕ್ಷ ರೂ, ಬೊಳ್ಯ ರಸ್ತೆ ರೂ. 5ಲಕ್ಷ, ಬಲ್ಪ ಗೋಳಿ 13 ಲಕ್ಷ ಸೇರಿದಂತೆ ಕೋಟಿಗೂ ಅಧಿಕ ಅನುದಾನ ಒದಗಿಸಿದ್ದು, ವಾರ್ಡು ಅಭಿವೃದ್ಧಿಯಲ್ಲಿ ಮುಂದಿದೆ. ಆದರೆ ಅಸೈ ಮದಕ ವಾರ್ಡಿನ ಸದಸ್ಯ ಮಹಮ್ಮದ್ ಅಸೈ ಅವರನ್ನು ನಿಂದಿಸಿ, ಕುಡಿಯುವ ನೀರು ಮತ್ತು ಬೀದಿ ದೀಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನಿಝಾಮಿ ನಡೆ ಸರಿಯಲ್ಲ. ಅಧಿಕಾರಿಗಳು ಮತ್ತು ನಿಝಾಮಿ ವಾರ್ಡಿಗೆ ಬಂದು ದಾರಿದೀಪಗಳ, ಕುಡಿಯುವ ನೀರಿನ ಯೋಜನೆಗಳನ್ನು ಪರಿಶೀಲಿಸಿ ಮತ್ತೆ ಮಾತನಾಡಲಿ ಎಂದು ಆಗ್ರಹಿಸಿರುವ…

Read More

UN NETWORKS ಗ್ರಾಮಚಾವಡಿ: ಕೋಟಿಪದವು ಶ್ರೀ ರಾಮ ಮಂದಿರ ಮತ್ತು ದಕ್ಷ ಯುವ ಬಳಗ ಗ್ರಾಮಚಾವಡಿ ಇದರ ವತಿಯಿಂದ ಕೋಟಿಪದವು ಶ್ರೀ ರಾಮ ಮಂದಿರ ವಠಾರದಲ್ಲಿ ವನಮಹೊತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಸಂಘದ ಗೌರವ ಸಲಹೆಗಾರರಾದ ನಾರಾಯಣ ಟೈಲರ್ ,ನಾಗೇಶ್ ಗಟ್ಟಿ, ನವೀನ್ ಕೊಣಾಜೆ, ಸಂಘದ ಅಧ್ಯಕ್ಷರಾದ ನವೀನ್ ಆರ್ಚಾಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

UN NETWORKS ದೇರಳಕಟ್ಟೆ : ದೇರಳಕಟ್ಟೆ ಜಂಕ್ಷನ್ನಿನ ರಸ್ತೆಬದಿಯಲ್ಲಿದ್ದ ಬೀದಿ ಬದಿ ವ್ಯಾಪಾರಸ್ಥರ ಮತ್ತು ಗೂಡಂಗಡಿಗಳ ತೆರವು ಕಾರ್ಯಾಚರಣೆ ಬೆಳ್ಮ ಗ್ರಾಮ ಪಂಚಾಯತ್ ವತಿಯಿಂದ ಶುಕ್ರವಾರ ನಡೆಯಿತು. ಬೆಳ್ಮ ಪಂಚಾಯತ್ ಗೆ ಒಳಪಡುವ ದೇರಳಕಟ್ಟೆ ಜಂಕ್ಷನ್ನಿನ ರಸ್ತೆ ಬದಿಗಳಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಗೂಡಂಗಡಿಗಳ ಮತ್ತು ಬೀದಿ ಬದಿ ವ್ಯಾಪಾರಿಗಳನ್ನು ಪಂಚಾಯತ್ ಆಡಳಿತ ಮುನ್ಸೂಚನೆ ನೀಡಿ ತೆರವುಗೊಳಿಸಿದೆ. ಅಂಗಡಿಗಳ ಕಾರ್ಯಾಚರಣೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗುತಿತ್ತು. ಇದರಿಂದ ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪರಿಸರವನ್ನು ಸ್ವಚ್ಛ, ಸುಂದರವಾಗಿ ಮಾಡಬೇಕು ಅನ್ನುವ ಉದ್ದೇಶದಿಂದ 15 ಬೀದಿ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ರಸ್ತೆ ಬದಿಯಲ್ಲಿ ವಾಹನಗಳು ನಿಲ್ಲಲ್ಲು ಅಸಾಧ್ಯವಾಗುತಿತ್ತು. ಅದರಂತೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರಾಗಿಯೇ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಗ್ರಾಮಸ್ಥರ ಸಹಕಾರದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಬೆಳ್ಮ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ತಿಳಿಸಿದರು. ಗ್ರಾ.ಪಂ ಸದಸ್ಯೆ ಕಬೀರ್. ಡಿ, ಯೂಸುಫ್ ಬಾವ, ಅಕ್ಸಾ ಉಸ್ಮಾನ್, ಸಿಬ್ಬಂದಿ…

Read More

UN NETWORKS ಕಲ್ಲಾಪು: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕಂದಕಕ್ಕೆ ಉರುಳಿದ ಘಟನೆ ರಾ.ಹೆ.66ರ ಕಲ್ಲಾಪು ಬಳಿ ಶುಕ್ರವಾರ ಸಂಭವಿಸಿದೆ. ಕೇರಳ ಕಡೆಯಿಂದ ಮಂಗಳೂರು ಕಡೆಗೆ ಸರಕು ಸಾಗಿಸುವ ಲಾರಿ ಕಲ್ಲಾಪು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

Read More