UN Networks ಉಳ್ಳಾಲ: ಕೇರಳ ಕಡೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳು ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ನೆತ್ತಿಲಪದವು ಬಳಿ ಬುಧವಾರ ಪತ್ತೆ ಹಚ್ಚಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.ಬಂದಿತ ಚಾಲಕನನ್ನು ಬಾಲಕೃಷ್ಣ ಎಂದು ಹೆಸರಿಸಲಾಗಿದೆ. ಬೆಳ್ತಂಗಡಿ ಮೂಲದವನಾದ ಬಾಲಕೃಷ್ಣ ಉದ್ಯೋಗದಲ್ಲಿ ಚಾಲಕನಾಗಿದ್ದು, ಬುಧವಾರ ಕಲ್ಲಾಪುವಿನಿಂದ ಮಂಜನಾಡಿ ರಸ್ತೆಯಾಗಿ ಕೇರಳ ಕಡೆ ಮರಳು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮರಳು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: UllalaVani
UN Networks ಉಳ್ಳಾಲ: ಕೃಷಿ ಪ್ರಧಾನ ತುಳುನಾಡಿನಲ್ಲಿ ಆಟಿ ತಿಂಗಳಿಗೆ ಮಹತ್ವವಿದ್ದು, ಕಷ್ಟಗಳನ್ನು ಕಳೆಯುವ ಸಲುವಾಗಿ ವಿವಿಧ ಸಂಪ್ರದಾಯಗಳನ್ನು ಅನುಸರಿಸುವ ಕಾಲವಾಗಿದ್ದು, ಅದನ್ನು ಮುಂದುವರಿಸುವ ಕಾರ್ಯ ಶ್ಲಾಘನೀಯ ಎಂದು ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಸಂಯೋಜಕಿ ವಿಜಯಲಕ್ಷ್ಮೀ ರೈ ಕಲ್ಲಿಮಾರು ಅಭಿಪ್ರಾಯಪಟ್ಟರು. ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ರವಿಂದ್ರ ಕಲಾ ವೇದಿಕೆಯಲ್ಲಿ ನಡೆದ ` ಆಟಿಡೊಂಜಿ ದಿನ ‘ ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಆಟಿ ತಿಂಗಳಲ್ಲಿ ಕಷ್ಟ ಕೋಟೆಗಳನ್ನು ಕಳೆಯಲು ಆಟಿ ಕಳೆಂಜದ ಮೂಲಕ ದೇವರು ಬರುವ ಸಂಪ್ರದಾಯ, ಕಷ್ಟದ ಬದುಕನ್ನು ಸಾಗಿಸುವ ತಿಂಗಳಲ್ಲಿ ಪ್ರಕೃತಿಯಿಂದ ಸಿಗುವ ವಸ್ತುಗಳಿಂದ ಆಹಾರ ತಯಾರಿ. ಸೊಸೆಯನ್ನು ತವರು ಮನೆಗೆ ಕಳುಹಿಸುವ ಸಂಪ್ರದಾಯದಿಂದ ತಾಯಿ ಮಗಳ ಪ್ರೀತಿ ಮತ್ತೆ ನೆನಪಿಸುವುದರ ಜತೆಗೆ, ಸೊಸೆಗೂ ಅದೇ ರೀತಿಯ ಪ್ರೀತಿಯನ್ನು ಕೊಡಬೇಕಾದ ಜ್ಞಾನಾರ್ಜನೆಯೂ ಆಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ದೇರಳಕಟ್ಟೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ…
UN Networks ಉಳ್ಳಾಲ: ಅಣ್ಣ-ತಂಗಿ ಸಂಭದದ ಪಾವಿತ್ರತೆಯನ್ನು ತಿಳಿಸುವ ಭಾಂದವ್ಯವನ್ನು ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ತೊಕ್ಕೊಟ್ಟು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಆಹಾರ ಸಚಿವ ಯು.ಟಿ.ಖಾದರ್ ಅವರಿಗೆ ರಕ್ಷೆಯನ್ನು ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಯು.ಟಿ.ಖಾದರ್ ಅಣ್ಣ-ತಂಗಿ ಸಂಭದದ ಪಾವಿತ್ರತೆಯನ್ನು ಸಾರುವ ರಕ್ಷಾಬಂಧನ ಹಬ್ಬಕ್ಕೆ ವಿಶೇಷ ಮಹತ್ವಿದೆ,ಭಾರತೀಯರು ಜಾತಿ-ಮತ ಬೇದವಿಲ್ಲದೆ ನಾವೆಲ್ಲರೂ ಒಂದೇ ಎಂದು ಒಗ್ಗೂಡಿದಾಗ ಮಾತ್ರ ದೇಶೋದ್ಧಾರವಾಗಲು ಸಾದ್ಯ ಎಂದರು. ತೊಕ್ಕೊಟ್ಟು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿಶ್ವೇಶ್ವರಿ,ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ನಗರಸಭಾ ಸದಸ್ಯ ಬಾಝಿಲ್ ಡಿಸೋಜ, ಸುಕುಮಾರ್,ರಝಿಯಾ ಇಬ್ರಾಹಿಂ,ಮುಸ್ತಫ ಅಬ್ದುಲ್ಲ, ನಗರಸಭಾ ನಾಮ ನಿರ್ದೇಶಕ ಸದಸ್ಯರಾದ ರವಿ ಭಟ್ನಗರ,ಕಿಶೋರ್,ರಿಚರ್ಡ್,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ,ಸೋಮೇಶ್ವರ ಪಂಚಾಯತ್ ಸದಸ್ಯ ದೀಪಕ್ ಪಿಲಾರ್,ಮೂಡ ಸದಸ್ಯ ಮುರಳಿ ಸಾಲಿಯಾನ್ ಉಪಸ್ಥಿತರಿದ್ದರು.
UN Networks ಉಳ್ಳಾಲ: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಮಾನತೆಯ ಬೀಜವನ್ನು ಬಿತ್ತುವ ದೃಷ್ಟಿಯಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿದ್ದು, ಈ ಮೂಲಕ ಬಡವ ಸಿರಿವಂತ ಎಂಬ ಭೇಧ ಭಾವ ಇಲ್ಲದೆ ಪ್ರತಿಯೊಬ್ಬರು ಸಮಾನತೆಯ ನೆಲೆಯಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎಂದು ಉಳ್ಳಾಲ ನಗರಸಭೆ ಪೌರಯುಕ್ತೆ ವಾಣಿ ಆಳ್ವ ಅಭಿಪ್ರಾಯಪಟ್ಟರು. ಅವರು ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯಿದ್ ಮದನಿ ಪ್ರೌಢ ಶಾಲೆ ಹಳೆಕೋಟೆ ಉಳ್ಳಾಲ ಇದರ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ವಠಾರದಲ್ಲಿ ಮಂಗಳವಾರ ನಡೆದ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಹೆತ್ತವರನ್ನು , ಶಿಕ್ಷಕರನ್ನು ಪ್ರೀತಿಸುವುದನ್ನು ಮೊದಲು ಕಲಿಯಬೇಕು. ಮೌಲ್ಯಾಧಾರಿತ ಶಿಕ್ಷಣದ ಜೊತೆಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತಂದುಕೊಡುವ ಜವಾಬ್ದಾರಿ ಪ್ರತಿಯೊಂದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಮೂಡಬೇಕು ಎಂಬ ದೃಷ್ಟಿಯನ್ನು ಇಟ್ಟುಕೊಂಡು ಉಚಿತ ಸಮವಸ್ತ್ರವನ್ನು…
UN Networks ಉಳ್ಳಾಲ: ಪೌರಾಣಿಕ ಹಾಗೂ ಐತಿಹ್ಯದಂತೆ ಮೀನುಗಾರಿಕೆಗೆ ಹೊರಡುವ ಮೊದಲು ಸಮುದ್ರ ಪೂಜೆಯನ್ನು ನೆರವೇರಿಸಲಾಗುತ್ತದೆ. ಈ ಮೂಲಕ ಉತ್ತಮ ಮೀನು ಸಂಪತ್ತು ದೊರೆಯಲಿ ಮತ್ತು ಗಂಗಾ ಸ್ವರೂಪಿ ಸಮುದ್ರ ದೇವಿ ಸುರಕ್ಷತೆಯನ್ನು ನೀಡಲಿ ಎಂದು ಪ್ರಾರ್ಥನೆ ನೆರವೇರಿಸುವ ಮೂಲಕ ಆಚರಿಸಲಾಗಿದೆ ಎಂದು ಮೊಗವೀರ ಸಮಾಜ ಉಳ್ಳಾಲ ಇದರ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಹೇಳಿದರು. ಅವರು ಉಳ್ಳಾಲ ಮೊಗವೀರಪಟ್ನದ ವಿಠೋಭ ರುಕ್ಮಯಿ ಭಜನಾ ಮಂದಿರದ ಆಶ್ರಯದಲ್ಲಿ ಉಳ್ಳಾಲ ಮೊಗವೀರ ಸಂಘದ ಸಹಾಕರದೊಂದಿಗೆ ಮೊಗವೀರಪಟ್ನದಲ್ಲಿ ಸೋಮವಾರ ಜರಗಿದ 84 ನೇ ವರ್ಷದ ಸಮುದ್ರಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು. ಮೊಗವೀರ ಸಮಾಜ ಅನಾದಿ ಕಾಲದಿಂದ ಸಮುದ್ರ ಪೂಜೆಯನ್ನು ಆಚರಿಸುತ್ತಿದೆ. ಉಳ್ಳಾಲ ಹೊರತುಪಡಿಸಿ ಉಳಿದೆಡೆ ಬೆಳಿಗ್ಗೆ ಸಮುದ್ರ ಪೂಜೆ ನಡೆಯುತ್ತದೆ. ಆದರೆ ಉಳ್ಳಾಲದಲ್ಲಿ ಬೆಳಿಗ್ಗೆ ಸೂರ್ಯೋಯದಿಂದ ಸಂಜೆ ಸೂರ್ಯ ಅಸ್ತದ ವರೆಗೆ ಮಂದಿರದಲ್ಲಿ ಭಜನೆ ನೆರವೇರಿಸಿ, ಬಳಿಕ ಸಮುದ್ರ ಪೂಜೆಯನ್ನು ನೆರವೇರಿಸಲಾಗುತ್ತದೆ. ಉಳ್ಳಾಲದಲ್ಲಿ ಮಾತ್ರ ಆಚರಣೆಯು ವಿಭಿನ್ನವಾಗಿದೆ ಎಂದ ಅವರು ಕೃಷಿಕರು ಬೆಳೆ ಬೆಳದ ನಂತರ…
UN Networks ಮಾಡೂರು:ಅರಣ್ಯ ನಾಶದಿಂದ ಮಳೆಯೂ ಕಡಿಮೆಯಾಗುತ್ತಿದ್ದು, ಪಕ್ಷಿ ಸಂಕುಲಗಳು ನಶಿಸಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಗಿಡ ಮರಗಳ ಪೋಷಣೆಯೊಂದಿಗೆ ಕಾಡನ್ನು ಸಂರಕ್ಷಿಸುವ ಕಾರ್ಯ ಆಗಬೇಕಿದೆ ಎಂದು ಮಂಗಳೂರು ಪ್ರಾದೇಶಿಕ ಅರಣ್ಯ ಅಧಿಕಾರಿ ಪಿ. ಶ್ರೀಧರ್ ಅಭಿಪ್ರಾಯಪಟ್ಟರು. ಅವರು ಕೋಟೆಕಾರು ಪಟ್ಟಣ ಪಂಚಾಯತ್, ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ , ರೋಟರಿ ಕ್ಲಬ್ ದೇರಳಕಟ್ಟೆ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮಾಡೂರಿನ ಹಿಂದೂ ರುದ್ರ ಭೂಮಿಯಲ್ಲಿ ಭಾನುವಾರ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮರಗಳನ್ನು ಕಡಿಯುವ ಮೂಲಕ ಕಾಡುಗಳು ಅವನತಿಯತ್ತ ಸಾಗುತ್ತಿದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ಮಳೆ ಇಲ್ಲದೇ ಬರಗಾಲವನ್ನು ಎದುರಿಸುವ ಪರಿಸ್ಥಿತಿ ಎದುರಾಗಿದ್ದು, ಪರಿಸರ ಸಂರಕ್ಷಣೆಯಲ್ಲಿ ಮರ ಗಿಡಗಳ ಪಾತ್ರ ಬಹುಮುಖ್ಯವಾಗಿದೆ. ಇದಕ್ಕೆ ಅನುಗುಣವಾಗಿ ಹಿಂದೂ ರುದ್ರ ಭೂಮಿ ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯ ಎಂದರು. ದೇರಳಕಟ್ಟೆ ರೋಟರಿ ಕ್ಲಬ್ನ ವಿಕ್ರಂ ದತ್ತಾ, ಕಾರ್ಯದರ್ಶಿ ಪಿ.ಬಿ ರೈ, ಮಾಡೂರು ಶಿರ್ಡಿ ಸಾಯಿಬಾಬ ಮಂದಿರದ…
UN Networks ಉಳ್ಳಾಲ: ಕೆಲವು ವರ್ಷಗಳಿಂದ ಕತ್ತರ್ ನಲ್ಲಿ ವಾಹನ ಚಾಲಕ ವೃತ್ತಿಯಲ್ಲಿದ್ದ ಬೆಳ್ತಂಗಡಿ ತಾಲ್ಲೂಕಿನ ಕಿಲ್ಲೂರು, ನಾಡ ಎಂಬಲ್ಲಿನ ಅಬ್ದುಲ್ ಹಮೀದ್ ಎಂಬವರು ವಿದೇಶಿಯೊಬ್ಬರಿಂದ ಲಭಿಸಿದ ಹೆಚ್ಚಿನ ವೇತನದ ಬೇರೊಂದು ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಇದ್ದ ಕೆಲಸವನ್ನೂ ಬಿಟ್ಟು, ಹೆಚ್ಚಿನ ವೇತನ ಸಿಗುವ ಹೊಸ ಕನಸುಗಳೊಂದಿಗೆ ಆ ಹೊಸ ಉದ್ಯೋಗವನ್ನು ಗಿಟ್ಟಿಸಿಕೊಂಡರು. ಕೆಲಕಾಲದ ಪರಿಚಯಸ್ತನಾದುದರಿಂದ ಹಿಂದೆ ಮುಂದೆ ನೋಡದೆ ಕೆಲಸಕ್ಕೆ ಸೇರಿಕೊಂಡರು. ಟ್ರೈಲರ್ ಒಂದರಲ್ಲಿ ಘನವಾಹನ ಚಾಲಕ ಹುದ್ದೆ. ವೇತನವೂ ಹೆಚ್ಚು ಲಭಿಸಿದರೆ ತನ್ನ ಜೀವನದ ಜಂಜಾಟಗಳಿಗೆ ಇನ್ನೇನು ಪರಿಹಾರವಾಗಲಿದೆ ಅಂದುಕೊಂಡು ಮನಸ್ಸಲ್ಲಿ ಕನಸಿನ ಗೋಪುರಗಳನ್ನು ಕಟ್ಟುತ್ತಾ ಹೊಸ ವೃತ್ತಿಯನ್ನಾರಂಭಿಸಿಬಿಟ್ಟರು. ಸಾಮಾನ್ಯವಾಗಿ 10-12 ಗಂಟೆಗಳಷ್ಟಿರುವ ಕೆಲಸವು ಪ್ರಾರಂಭದಿಂದಲೇ ಇಮ್ಮಡಿಯಷ್ಟಾದರೂ ಸುಧಾರಿಸಿಕೊಂಡು ವೃತ್ತಿಯಲ್ಲಿ ತಲ್ಲೀನರಾದರು.ಇತರ ಕೆಲವು ಚಾಲಕರು ರಜೆಯಲ್ಲಿದ್ದಾರೆ, ಕೆಲವೇ ದಿನಗಳಲ್ಲಿ ಅವರು ಬಂದುಬಿಡುತ್ತಾರೆ ಸಾವರಿಸಿ ಕೊಳ್ಳಿ ಅಂತ ಸಮಜಾಯಿಷಿ ಮಾಡಿ ದಿನ ದೂಡಿಸಿದರು. ನಂತರದ ದಿನಗಳಲ್ಲಿ ಕಡಿಮೆಯೆಂದರೆ ದಿನಕ್ಕೆ 20 ಗಂಟೆಗಳಷ್ಟಾದರೂ ದುಡಿಯಬೇಕಾದ ಪರಿಸ್ಥಿತಿ ಎದುರಾಗಿತ್ತು. ತುರ್ತಾಗಿ ಬರುವ ಇತರ…
UN Networks ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಪ್ರಥಮ ವಾರ್ಷಿಕೋತ್ಸವ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮಂಗಳೂರು, ಬ್ಲಡ್ ಹೆಲ್ಪ್ ಲೈನ್ ಸಮಾಜಕ್ಕೆ ಮತ್ತು ದೇಶಕ್ಕೆ ಪೂರಕವಾಗುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದೆ ಎಂದು ಆಹಾರ ಸಚಿವ ಯುಟಿ ಖಾದರ್ ಹೇಳಿದರು. ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ರವಿವಾರ ನಗರದ ಫೋರಂ ಫಿಝಾ ಮಾಲ್ನಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನ್ನದಾನ, ಶಿಕ್ಷಣ ದಾನದಂತೆ ರಕ್ತದಾನ ಕೂಡ ಶ್ರೇಷ್ಠದಾನವಾಗಿದೆ. ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ದೂರ ಮಾಡಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಹುಟ್ಟಿಸಬೇಕು ಎಂದು ಸಚಿವ ಖಾದರ್ ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪ್ರೋ. ಪಟ್ಟಾಭಿರಾಮ ಸೋಮಯಾಜಿ ರಕ್ತದಾನ ಮಾಡುವ ಸಂದರ್ಭ ಹಲವು ತೊಂದರೆಗಳನ್ನು ಎದುರಿಸುವ ಸಾಧ್ಯತೆ ಇದೆ. ಹಾಗಾಗಿ ರಕ್ತದಾನ ಮಾಡಲು ಆಸ್ಪತ್ರೆಗೆ ತೆರಳುವ ಸಂದರ್ಭ ಯಾವುದೇ ತೊಡಕುಗಳು ಆಗದಂತೆ ಸರಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ.…
UN Networks ಕೊಣಾಜೆ: ಕೊಣಾಜೆಯ ಕುಂಟಾಳಗುಳಿಯ ಶ್ರೀ ಮಹಾಕಾಳಿ ವನಸಾನಿಧ್ಯದ ಬಳಿ ಶ್ರೀ ಮಹಾಕಾಳಿ ಸೇವಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಇದೇ ಸಂದರ್ಭ ಶ್ರೀ ಮಹಾಕಾಳಿ ಸೇವಾ ಮಂಡಳಿ ವತಿಯಿಂದ ಇತ್ತೀಚೆಗೆ ನಡೆದ ವರಮಹಾಲಕ್ಷ್ಮೀ ಪೂಜಾ ಸಂದರ್ಭದಲ್ಲಿ ಹಿರಿಯರಾದ ಸೇಸಮ್ಮ ಅವರನ್ನು ಮಹಿಳಾ ಮಂಡಳಿ ವತಿಯಿಂದ ಗೌರವಿಸಲಾಯಿತು.
UN Network ಮೊಗವೀರಪಟ್ನ: ಉತ್ತರಭಾರತದಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಆಚರಣೆ ವಿಳಂಬವಾಗಿಯಾದರೂ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತಿದೆ. ಪೂಜೆಯ ಆಚರಣೆಯಿಂದ ವೃದ್ಧಿ ಸಾಧ್ಯ ಎಂದು ಉದ್ಯಮಿ ಪಾಲ್ಕೆ ಧನಂಜಯ ಆಚಾರ್ ಅಭಿಪ್ರಾಯ ಪಟ್ಟರು. ಅವರು ಉಳ್ಳಾಲ ಮೊಗವೀರಪಟ್ನದ ಧರ್ಮ ರಕ್ಷಣಾ ಮೊಗವೀರ ವೇದಿಕೆ ಇದರ ನಾಲ್ಕನೇ ವಾರ್ಷಿಕ ಸಮಾರಂಭ ಪ್ರ ಯುಕ್ತ ಫಲಾನುಭವಿಗಳಿಗೆ ದಿನಬಳಕೆ ವಸ್ತುಗಳ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಅಭಿನಂದನಾ ಸಮಾರಂಭ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಗೆ ಮೊಗವೀರಪಟ್ನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿದರು. ದ್ವಾಪರಯುಗದಲ್ಲಿ ಚಾರುಮತಿ ಎಂಬ ಮಹಿಳೆ 14,000 ಶ್ಲೋಕವನ್ನು ವೈದಿಕರಿಂದ ಪಠಿಸಿ ಆರಂಭಿಸಿದ ಪೂಜೆ, ಉತ್ತರಭಾರತದಲ್ಲಿ ಮಾತ್ರವಲ್ಲದೆ ಇದೀಗ ದಕ್ಷಿಣಭಾರತದಲ್ಲೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಪೂಜೆಯ ಜತೆಗೆ ಹಲವು ಮೀನುಗಾರರ ಕುಟುಂಬಕ್ಕೆ ದಿನಬಳಕೆ ವಸ್ತುಗಳ ವಿತರಣೆ ಜತೆಗೆ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸುವ ಕಾರ್ಯ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುವ ಕಾರ್ಯವಾಗಿದೆ ಎಂದರು. ಈ ಸಂದರ್ಭ ಮೊಗವೀರ ಸಮಾಜದ ಹಿರಿಯ…

