ಉಳ್ಳಾಲ ನ್ಯೂಸ್ ನೆಟ್ವರ್ಕ್ ಅಂಬಿಕಾರೋಡ್: ಪೊಲದವರ ಯಾನೆ ಗಟ್ಟಿ ಸಮುದಾಯ ಇವರ ಮಹಿಳಾ ಘಟಕದ ವತಿಯಿಂದ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ವರ ಮಹಾಲಕ್ಷ್ಮೀ ಪೂಜೆ ಶುಕ್ರವಾರ ಜರಗಿತು. ವಿಶೇಷ ಪೂಜೆಯಲ್ಲಿ ಮಹಿಳೆಯರು ಪಾಲ್ಗೊಂಡರು.
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕಿನ್ಯ:ತುಳುನಾಡಿನ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ಕೆಲಸ ಸಂಘಟನೆಗಳ ಕರ್ತವ್ಯ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಅಲ್ಲಲ್ಲಿ ಪರಂಪರೆಯನ್ನು ಬಿಂಬಿಸುವ ಕೂಟವನ್ನು ಆಯೋಜಿಸುವ ಮೂಲಕ ಮಹತ್ವದ ಪಾತ್ರ ವಹಿಸಬೇಕು ಎಂದು ಬಾಬು ಶಾಸ್ತಾ ಕಿನ್ಯ ಅಭಿಪ್ರಾಯ ಪಟ್ಟರು. ಅವರು ಶ್ರೀ ಮಹಮ್ಮಾಯಿ ಮಾತೃ ಮಂಡಳಿ ಕಿನ್ಯ ಬೆಳರಿಂಗೆ ಇದರ ದ್ವಿತೀಯ ವರ್ಷದ ಆಟಿದ ಕೂಟ ಗೌಜಿ ಗಮ್ಮತ್ತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಲ್ಕಟ್ಟ ಶಾಲೆ ಇದರ ಶಿಕ್ಷಕಿ ನಂದನ ಅಧ್ಯಕತೆ ವಹಿಸಿದ್ದರು.ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆಯ ಪಾತ್ರಿಗಳಾದ ರವಿ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಿನ್ಯ ಭಂಡಾರಮನೆಯ ಪಾತ್ರಿಗಳಾದ ಯಾದವ ಪೂಜಾರಿ, ಕಿಶೋರ್ ಪೂಜಾರಿ, ಶಿಕ್ಷಕ ಪ್ರಭಾಕರ ಜೋಗಿ, ವಾಮನಪೂಜಾರಿ ಕಿನ್ಯ, ಜಯಂತ ಪೂಜಾರಿ, ನಾರಾಯಣ ಪೂಜಾರಿ, ಸದಾಶಿವ ಬಟ್ಯಡ್ಕ, ಹರೀಶ್ ಕಿನ್ಯ, ಸ್ವರ್ಣಲತಾ ಕಿನ್ಯ ಉಪಸ್ಥಿತರಿದ್ದರು. ರವಿ ಕಿನ್ಯ ಸ್ವಾಗತಿಸಿದರು. ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ತುಳು ಸಂಸ್ಕೃತಿಯಲ್ಲಿ ಆಷಾಡ ಮಾಸಕ್ಕೆ ವಿಷೇಶವಾದ ಸ್ಥಾನಮಾನವಿದೆ. ತಲಪಾಡಿಯ ಶಾರದಾವಿದ್ಯಾನಿಕೇತನ ವಸತಿ ಶಾಲೆಯಲ್ಲಿ ಜ್ಞಾನಾರ್ಜನೆಗೈಯುತ್ತಿರುವ ದೇಶ ವಿದೇಶಗಳ ವಿದ್ಯಾರ್ಥಿಗಳಿಗೆ ತುಳುನಾಡಿನ ವೈಶಿಷ್ಠ್ಯತೆಯನ್ನು ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಆಟಿ ಅಮಾವಾಸ್ಯೆಯ ದಿನದಂದು ವಿದ್ಯಾರ್ಥಿಗಳಿಗೆ ಹಾಲೆ ಮರದ ತೊಗಟೆಯ ಕಷಾಯವನ್ನು ನೀಡಿ ಅದರ ಮಹತ್ವವನ್ನು ತಿಳಿಸಲಾಯಿತು. ವಿದ್ಯಾರ್ಥಿಗಳಿಗೆ ಆಷಾಡ ಮಾಸದ ವಿಶೇಷ ಆಚರಣೆಯ ಕುರಿತಾದ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಮದ್ಯಾಹ್ನ ವಿದ್ಯಾರ್ಥಿಗಳಿಗೆ ಆಟಿ ತಿಂಗಳ ವಿಶೇಷ ಖಾದ್ಯ, ತಿನಿಸುಗಳ ಮನೆ ಆಡಿಗೆಯ ಸವಿಯನ್ನು ಉಣಬಡಿಸಲಾಯಿತು. ಆ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರಕಾರ 25 ಕೋಟಿ ರೂ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಜನರಿಗೆ ಸಮರ್ಪಕವಾಗಿ ಉಪಯೋಗವಾಗುವ ರೀತಿಯಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ಅಭಿಪ್ರಾಯಪಟ್ಟರು. ಅವರು ಅನುದಾನ ಸಮರ್ಪಕವಾಗಿ ಉಪಯೋಗವಾಗುವ ನಿಟ್ಟಿನಲ್ಲಿ ಉಳ್ಳಾಲ ನಗರ ಸಭಾ ವ್ಯಾಪ್ತಿಯ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸಿದರು. ರಾಜ್ಯ ಸರಕಾರ ಬಿಡುಗಡೆಗೊಳಿಸಿರುವ ವಿಶೇಷ ಅನುದಾನ ಭಾಗದ ಜನರಿಗೆ ಉಪಯೋಗವಾಗಬೇಕು. ವಿಶೇಷವಾಗಿ ನೀರಿನ ಅಭಾವವಿರುವ ಪ್ರದೇಶ ಹಾಗೂ ರಸ್ತೆ ಸಮಸ್ಯೆ ಯನ್ನು ಮನಗಂಡು ಯಾವ ಭಾಗದಲ್ಲಿ ಈ ಸಮಸ್ಯೆಯೇ ಹೆಚ್ಚಿದೇ ಎಂದು ಪರಿಶೀಲನೆ ನಡೆಸಿ ಮೊದಲಿಗೆ ಆ ಭಾಗಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಈಗಾಗಲೇ ಉಳ್ಳಾಲ ಭಾಗದ ಚೆಂಬುಗುಡ್ಡೆ, ಕಾಪಿಕಾಡು, ಕಲ್ಲಾಪು, ಸೇವಂತಿಗುಡ್ಡೆ ಉಳ್ಳಾಲಬೈಲು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸ್ಥಳೀಯ ಪ್ರತಿನಿಧಿಗಳು ಹಾಗೂ ಜನರ ಸಹಕಾರದಂದಿಗೆ ಮುಂದಿನ ದಿನಗಳಲ್ಲಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕುತ್ತಾರು: ಮೂಡಬಿದಿರೆಯಲ್ಲಿ ಅನುಮಾನಾಸ್ಪದ ಸಾವಿಗೀಡಾಗಿರುವ ಕಾವ್ಯಾಳ ಪ್ರಕರಣ ನಡೆದು ಹಲವು ದಿನಗಳಾದರೂ ಪೋಷಕರ ಅನುಮಾನಗಳಿಗೆ ಉತ್ತರವೂ ಸಿಕ್ಕಿಲ್ಲ, ತನಿಖೆ ಕೂಡ ನಡೆದಿಲ್ಲ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಹೇಳಿದ್ದಾರೆ. ಅವರು ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಅಸಹಜ ಸಾವು ಪ್ರಕರಣ ಸೂಕ್ತ ತನಿಖೆಗೆ ಒತ್ತಾಯಿಸಿ ಎಸ್ ಎಫ್ ಐ ಹಾಗೂ ಡಿ ವೈ ಎಫ್ ಐ ವತಿಯಿಂದ ಕುತ್ತಾರು ಜಂಕ್ಷನ್ನಿನಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಮಾರ್ಚ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾವ್ಯಾ ಆತ್ಮಹತ್ಯೆಗೈದ ನಂತರ ಪೊಲೀಸರು ಹಾಗೂ ಹೆತ್ತವರು ಸ್ಥಳಕ್ಕೆ ಬರುವ ಮುನ್ನವೇ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಇಲ್ಲಿ ಕಾವ್ಯಾ ಆತ್ಮಹತ್ಯೆ ನಡೆಸಲು ಉಪಯೋಗಿಸಿದ ಸೀರೆ ಹಾಸ್ಟೆಲ್ಲಿನಲ್ಲಿ ಎಲ್ಲಿಂದ ಬಂದಿದೆ ಮತ್ತು ಕಾವ್ಯ ದಿನನಿತ್ಯ ಬರೆಯುತ್ತಿದ್ದ ಡೈರಿ ಕೂಡಾ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ನಡೆದು ಹಲವು ದಿನಗಳಾದರೂ ಪೊಲೀಸರು ಮಾತ್ರ ತನಿಖೆಯನ್ನು ನಡೆಸದೆ ಪ್ರಕರಣವನ್ನು ಮುಚ್ಚಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಅಂಬಿಕಾರೋಡ್: ಪೊಲೀಸ್ ಬೀಟ್ ವ್ಯವಸ್ಥೆಯಡಿ ಅವರಿಗೆ ಮಾಹಿತಿದಾರರನ್ನಾಗಿ ನೇಮಿಸುವ ಕಮಿಟಿಯಲ್ಲಿ ಯಾವುದೇ ಅಪರಾಧಿ ಚಟುವಟಿಕೆಯಲ್ಲಿ ತೊಡಗಿಕೊಂಡವರನ್ನು ಕೈಬಿಡಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಹೇಳಿದ್ದಾರೆ. ಅವರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಧಾರಿತ ಗಸ್ತು ವ್ಯವಸ್ಥೆ – ಜನಸ್ನೇಹಿ ಪೊಲೀಸ್ ಹಾಗೂ ಪ್ರದೇಶಕ್ಕೊಬ್ಬ ಪೊಲೀಸ್ ಕುರಿತು ಸೋಮವಾರ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉಳ್ಳಾಲ ಠಾಣಾ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ 55 ಬೀಟ್ ಗಳನ್ನು ರಚಿಸಲಾಗಿದೆ. ಆಯಾಯ ಬೀಟ್ ಗಳ ಜವಾಬ್ದಾರಿ ಸಿಬ್ಬಂದಿಗೆ ನೀಡಲಾಗಿದೆ. ಅವರಡಿ ಬರುವ ಪ್ರದೇಶದ ಜನರ ಕಮಿಟಿಗಳಲ್ಲಿ ಯಾವುದೇ ಅಪರಾಧ ಹಿನ್ನೆಲೆ ಉಳ್ಳವರನ್ನು ಸೇರಿಸಲಾಗುವುದಿಲ್ಲ. ಇದರಿಂದ ಜನರು ಮುಕ್ತವಾಗಿ ಆಯಾಯ ಬೀಟ್ ಗಳಲ್ಲಿ ಕಾರ್ಯಾಚರಿಸುವ ಸಿಬ್ಬಂದಿಯಲ್ಲಿ ಮಾಹಿತಿ ನೀಡಬಹುದು. ಈ ಮೂಲಕ ಇಲಾಖೆ ಸೂಕ್ತ ಕ್ರಮಕೈಗೊಳ್ಳಬಹುದು ಎಂದರು. ನಗರಸಭೆ ಸದಸ್ಯ ಮಹಮ್ಮದ್ ಮುಕ್ಕಚ್ಚೇರಿ ಅವರು ಬೀಟ್ ವ್ಯವಸ್ಥೆಯಡಿಯಲ್ಲಿ ಅಪರಾಧಿಗಳನ್ನು ಕಮಿಟಿಯಲ್ಲಿ ಸೇರ್ಪಡೆ ಮಾಡಿದಲ್ಲಿ ಮಾಹಿತಿಗಳು ಸೋರಿಕೆಯಾಗುವ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಮುಖ್ಯ ಗೇಟಿನ ಎದುರುಗಡೆ ಮಂಗಳವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ಪ್ರತೀಕ್ ಮಾತನಾಡಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಾಗಿ ಆತ್ಮಹತ್ಯೆ ನಡೆಸುತ್ತಿದ್ದಾರೆ. ಕ್ರೀಡಾಪಟುಗಳ ಜೀವಕ್ಕೆ ಬೆಲೆ ಇಲ್ಲದಿದ್ದಲ್ಲಿ ಕಾವ್ಯಾ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಬೇಸರದ ಸಂಗತಿಯಾಗಿದೆ. ಇಡೀ ಘಟನೆಯನ್ನು ಖಂಡಿಸುತ್ತೇವೆ. ವಿದ್ಯಾರ್ಥಿನಿ ಹೊರಗೆ, ಒಳಗೆ ಹೋಗುವ ಸಿಸಿಟಿವಿ ದೃಶ್ಯವನ್ನು ತೋರಿಸುತ್ತಾರೆ. ಆದರೆ ಮೃತದೇಹ ಕೊಂಡೊಯ್ಯುವ ದೃಶ್ಯವನ್ನು ತೋರಿಸುತ್ತಿಲ್ಲ. ಹಿಂದೆಯೂ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೈದಿದ್ದಾರೆ. ಬಲವಾದ ಕಾರಣಗಳಿಂದಲೇ ವಿದ್ಯಾರ್ಥಿನಿ ನಿಯಲದಲ್ಲೇಢ ಆತ್ಮಹತ್ಯೆಗಳು ನಡೆಯುತ್ತಿವೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕಾಲೇಜಿನಲ್ಲೇ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲದಿರುವುದು ಖಂಡನೀಯ. ಶೀಘ್ರವೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದೆ. ವಿದ್ಯಾರ್ಥಿ ಸಿರಾಜ್ ಮಾತನಾಡಿ ಕಾವ್ಯಾ ಸಾವಿನ ಬಗ್ಗೆ ಸಂಶಯವಿದೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕಿದ್ದು, ಜಿಲ್ಲೆಯಾದ್ಯಂತ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಛಾಯಾಗ್ರಹಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಸಂಘಟನೆಯ ಮೂಲಕ ಒಗ್ಗಟ್ಟಾಗಿದ್ದಾಗ ಮಾತ್ರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ನ ಅಧ್ಯಕ್ಷ ಜಗನ್ನಾಥ ಶೆಟ್ಟಿ ಮಂಗಳೂರು ಅಭಿಪ್ರಾಯಪಟ್ಟರು. ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ನ ಉಳ್ಳಾಲ ವಲಯದ ಚತುರ್ಥ ವಾರ್ಷಿಕ ಮಹಾಸಭೆಗೆ ಚಾಲನೆ ನೀಡಿ ಮಾತನಾಡಿದರು. ಯಾವುದೇ ಕೆಲಸ ಮಾಡಿದಾಗ ಸಂಘಟಿತರಾಗಿ ಮುಂದೆ ನಡೆದಾಗ ಮಾತ್ರ ಯಶಸ್ವಿ ಸಾಧ್ಯ.ವೃತ್ತಿ ಸಂಬಂಧಪಟ್ಟ ಭಿನ್ನಾಭಿಪ್ರಾಯ ಬರುವುದು ಸಹಜ ಆದರೆ ಸಂಘಟಿತರಾಗಿ ಕೆಲಸ ಮಾಡಿದಾಗ ಯಾವುದೇ ಸಮಸ್ಯೆಯನ್ನು ಬಗೆಹರಿಸಬಹುದು. ಕಳೆದ ನಾಲ್ಕು ವರ್ಷದಲ್ಲಿ ಉಳ್ಳಾಲ ವಲಯ ಉತ್ತಮ ಕಾರ್ಯವನ್ನು ಮಾಡಿದೆ.ಇದರೊಂದಿಗೆ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುತ್ತಿರುವ ಸಹಕಾರಿ ಸಂಘ ಉತ್ತಮ ವ್ಯವಹಾರ ನಡೆಸುತ್ತಿದ್ದು ಸುಮಾರು 2 ಕೋಟಿಗೂ ಮಿಕ್ಕಿ ಸಾಲವನ್ನು ನೀಡಿದ್ದು ಎಲ್ಲಾ ಸದಸ್ಯರು ಪ್ರಯತ್ನಿಸಿದರೆ ಜಿಲ್ಲೆಯಲ್ಲಿ ಒಂದು ಉತ್ತಮ ಬ್ಯಾಂಕ್ ಆಗಿ ಪರಿವರ್ತನೆ ಮಾಡಲು ಸಾಧ್ಯ ಎಂದರು. ಮಹಾಸಭೆಯ ಅಧ್ಯಕ್ಷತೆಯನ್ನು ಎಸ್ಕೆಪಿಎ ಉಳ್ಳಾಲ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಸೋಮೆಶ್ವರ: ಸೋಮೆಶ್ವರ ಆನಂದಾಶ್ರಮ ಫ್ರೌಢಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಆನಂದಾಶ್ರಮ ಪ್ರೌಢಶಾಲೆ, ಪರಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಜ್ಞಾನ ವಿದ್ಯಾಲಯದ ವಿದ್ಯಾರ್ಥಿಗಳು ತಯಾರಿಸಿ ತಂದ ಆಟಿತಿಂಗಳ ವಿಶೇಷ ತಿನಿಸುಗಳಾದ ಪತ್ರೊಡೆ, ಉಪ್ಪಡ್ ಪಚ್ಚಿಲ್, ಮೆಂತೆ ಉಂಡೆ, ಪೋಡಿ, ಪತ್ತೋಳಿ, ಗಾರಿಗೆ, ಹುರುಳಿ ಚಟ್ನಿ, ಸೇಮೆದಡ್ಯಾ, ಸೊಪ್ಪು ಪಲ್ಯ ಇತ್ಯಾದಿ ಇಪ್ಪತ್ತಕ್ಕೂ ಹೆಚ್ಚು ತಿನಿಸುಗಳನ್ನು ಪ್ರದರ್ಶಿಸಿ ಉತ್ತಮ ಆರೋಗ್ಯಕ್ಕಾಗಿ ಅವುಗಳ ಸೇವನೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ಜಿಲ್ಲಾ ಶಾರೀರಿಕ್ ಪ್ರಮುಖ್ ನಾಗೇಶ್ ಕುಂಪಲ, ಸಾರಸ್ವತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಹೇಶ್ ಎಲ್. ಬೊಂಡಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಎ.ಎಸ್. ರಾಮಚಂದ್ರ ರಾವ್, ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಕ್ರಮ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಗುರುಮೂರ್ತಿ ಪಿ. , ಪರಿಜ್ಞಾನ ವಿದ್ಯಾಲಯದ ಪುಟಾಣಿ ವಿದ್ಯಾರ್ಥಿಗಳ ಅಜ್ಜ-ಅಜ್ಜಿಯಂದಿರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ವನಮಹೋತ್ಸವ ಮತ್ತು ಸಾವಯವ ಗೊಬ್ಬರ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಇತ್ತೀಚೆಗೆ ಉಳ್ಳಾಲ ಬಿ.ಎಂ.ಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಮನ್ ಶೆಟ್ಟಿ, ನಂದಿನಿ ರಘುಚಂದು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ, ಸಾವಯಾವ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಕಸ ಸಂಗ್ರಹಿಸುವ ಟೆರಕೂಟ ಮಡಕೆಯ ಬಳಕೆಯನ್ನು ವಿವರಿಸಲಾಯಿತು. ಫಾಸ್ಟಿನ್ ಸ್ವಾಗತಿಸಿದರು. ಸ್ಮಿತಾ ವಂದಿಸಿದರು. ಅನಿತಾ ಕಾರ್ಯಕ್ರಮ ನಿರೂಪಿಸಿದರು.

