Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ವೈಜ್ಞಾನಿಕ ಯುಗದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿಯೂ ಬದಲಾವಣೆಗಳು ನಡೆಯುತ್ತಿದ್ದು, ಹೊಸ ಬದಲಾವಣೆಗೆ ತಕ್ಕಂತೆ ವೈದ್ಯರು ತಮ್ಮಲ್ಲಿರುವ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದ್ದು ಇಂತಹ ಕಾರ್ಯಾಗಾರಗಳು ಇದಕ್ಕೆ ಪೂರಕ ಎಂದು ಅಮೇರಿಕಾದ ಬೋಸ್ಟನ್ನಿನ ಮಸ್ಯಾಚುಸೆಟ್ಸ್ಯುನಿವರ್ಸಿಟಿಯ ನರಶಸ್ತ್ರ ಚಿಕಿತ್ಸೆಯ ಅನಸ್ಥೇಷಿಯ ವಿಭಾಗದ ಮುಖ್ಯಸ್ಥರಾದ ಡಾ| ಸ್ಟ್ಯಾನ್ಲಿ ಡಿ’ಸೋಜ ಅಭಿಪ್ರಾಯಪಟ್ಟರು ಅವರು ನಿಟ್ಟೆ ವಿಶ್ವವಿದ್ಯಾನಿಲಯದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಯ ಅರಿವಳಿಕೆಯಲ್ಲಿನ ನವೀನ ಬೆಳವಣಿಗೆಗಳ ಕುರಿತು ಒಂದು ದಿನದ ನಿರಂತರ ವೈದ್ಯಕೀಯ ಕಲಿಕಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಧಾರವಾಡದ ಡಿಮ್ಹಾನ್ಸ್‍ನ ಪ್ರಾಧ್ಯಾಪಕ ಡಾ| ಉಮೇಶ್ ಜಿ., ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ನರರೋಗ ತಜ್ಞ ಡಾ| ರಾಘವೇಂದ್ರ ಬಿ.ಎಸ್, ಕ್ಷೇಮ ಕಾಲೇಜಿನ ಡಾ| ಶ್ರೀಪಾದಜಿ ಮೆಹೆಂದಳೆ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಅರಿವಳಿಕೆಯ ವಿಭಾಗದ ಮುಖ್ಯಸ್ಥ ಡಾ| ಸತ್ಯಜಿತ್ ಕಾರಂತ್ ಉಪನ್ಯಾಸ ನೀಡಿದರು. ಕ್ಷೇಮದ ಡೀನ್ ಫ್ರೊಫೆಸರ್ ಡಾ| ಸತೀಶ್ ಕುಮಾರ್ ಭಂಂಡಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಕೊಣಾಜೆ ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಸೋಮವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆದಿದ್ದು, ಸಭೆಯಲ್ಲಿ ತೆರಿಗೆ ಪರಿಷ್ಕಣೆ, ತ್ಯಾಜ್ಯ, ಅಕ್ರಮ ಬೋರ್‍ವೆಲ್, ಪಡಿತರ ಚೀಟಿ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು. ಕೊಣಾಜೆ ಗ್ರಾಮದಲ್ಲಿ ತೆರಿಗೆ ಪರಿಷ್ಕರಣೆಯ ಬಗ್ಗೆ ಮಾಹಿತಿ ನೀಡಲಾಗಿದು ಆದರೆ ತೆರಿಗೆ ಪರಿಷ್ಕರಣೆಯ ಸಮರ್ಪಕ ಮಾಹಿತಿ ನೀಡಿ ಅಲ್ಲದೆ ಸರಕಾರದ ತೆರಿಗೆ ಪರಿಷ್ಕರಣೆಯ ಬಗ್ಗೆ ಸರಕಾರದ ಮಾನದಂಡ ಏನು ಎಂಬುದರ ಎಂದು ಗ್ರಾಮಸ್ಥರು ಪಂಚಾಯಿತಿ ಅಧ್ಯಕ್ಷರನ್ನು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಶೌಕತ್ ಆಲಿ ಅವರು ಈಗಾಗಲೇ ತೆರಿಗೆ ಪರಿಷ್ಕರಣೆಯ ಬಗ್ಗೆ ಸರಕಾರದ ನಿಯಮದಂತೆ ಯೋಜನೆ ರೂಪಿಸಲಾಗಿದ್ದು, ಉದಾಹರಣೆಗೆ ಹೆಂಚಿನ ಮನೆ ಇದ್ದು ಬಳಿಕ ಅವರು ಆರ್‍ಸಿಸಿ ಮನೆ ಕಟ್ಟಿದ್ದರೆ ನೂತನ ತೆರಿಗೆ ಜಾರಿಯಾಗುತ್ತದೆ ಎಂದು ಹೇಳಿದರು. ಪೋಡಿಮುಕ್ತ ಗ್ರಾಮ ಯೋಜನೆಯಡಿ ಸರ್ವೇಗೆ ಬಂದಿರುವ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಬದಲು ನಾವು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಹಳೆಕೋಟೆ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವನಮಹೋತ್ಸವ ಮತ್ತು ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮಕ್ಕೆ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಹಾಜಿ ಗಿಡ ನಡುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಶಾಲೆಯ ಒಂದು,ಒಂದು ವಿದ್ಯಾರ್ಥಿ ಒಂದೊಂದು ಗಿಡ ನಟ್ಟು ಬೆಳೆಸಿದರೆ ಉಳ್ಳಾಲ ಪರಿಸರಕ್ಕೆ ಅದುವೇ ನೀವು ಕೊಡುವ ದೊಡ್ಡ ಸಂಪತ್ತಾಗಿದೆ ಎಂದರು. ಮಂಚಿಲ ಫಿದಾಗೈಸ್ ಸದಸ್ಯರು ಶಾಲೆಯ ಮಕ್ಕಳಿಗೆ ಉಚಿತವಾಗಿ 100 ಬ್ಯಾಗ್‍ಗಳನ್ನು ನೀಡಿದರು. ಉಳ್ಳಾಲ ನಗರ ಸಭೆ ಸದಸ್ಯ ಫಾರೂಕ್.ಯು.ಎಚ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಫೀಕ್ ಹಳೆಕೋಟೆ, ಸಯ್ಯದ್ ಮದನಿ ಅರಬಿಕ್ ಟ್ರಸ್ಟ್ ಆಡಳಿತಾಧಿಕಾರಿ ಅಬ್ದುಲ್ ಲತೀಫ್,ಕೋಶಾಧಿಕಾರಿ ಕರೀಮ್.ಯು.ಎಚ್,ಶಾಲಾ ಸಂಚಾಲಕ ಮುಹಮ್ಮದ್ ಇಸ್ಮಾಯಿಲ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಇಬ್ರಾಹಿಂ,ದರ್ಗಾ ಸಮಿತಿ ಸದಸ್ಯರಾದ ಇಬ್ರಾಹಿಂ ಕಕ್ಕೆತೋಟ, ಶಿಕ್ಷಣ ಸಂಯೋಜಕ ಶ್ರೀಮತಿ ಹಿಲ್ಡಾ, ಫ್ರಾನ್ಸಿಸ್, ಫಿದಾ ಗೈಸ್ ಅಧ್ಯಕ್ಷ ಅರ್ಫಾಝ್, ಸದಸ್ಯರಾದ ನೌಫಲ್,ಫೈಝಲ್,ರಿಫಾತ್,ನಹೀಮ್,ಫಯಾಝ್,ಅಕ್ರಮ್,ಅಫೀಜ್,ಶಾಲಾ ಹಳೆ ವಿದ್ಯಾರ್ಥಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸೆಯ್ಯಿದ್ ಮದನಿ ಅರಬಿಕ್ ಎಜ್ಯುಕೇಶನಲ್ ಟ್ರಸ್ಟ್ ಇದರ ಮದ್ರಸ ವಿದ್ಯಾರ್ಥಿಗಳ ‘ನೋ ಚೇಂಜಸ್ ಇನ್ ಇಲ್ಮ್’ ಸಂಗಮವು ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ಜರಗಿತು. ಉಳ್ಳಾಲದಲ್ಲಿ ಪ್ರಸಕ್ತ ಪಠ್ಯಪುಸ್ತಕದಿಂದುಂಟಾಗಿರುವ ಗೊಂದಲದಿಂದಾಗಿ ಮದ್ರಸ ಪ್ರಾರಂಭವಾಗಿ 25 ದಿನ ಕಳೆದಿದ್ದರೂ, ಇನ್ನೂ ಪಠ್ಯ ಶುರುವಾಗದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದೇವೆ. ಹೆತ್ತವರು ದಿನನಿತ್ಯ ಮದ್ರಸಕ್ಕೆ ಅಗಮಿಸುತ್ತಿದ್ದು, ಗೊಂದಲ ಮುಕ್ತ ಮಾಡಬೇಕಾದವರು ನಮ್ಮ ಹೆತ್ತವರನ್ನು ಮಾನಹಾನಿಯಾಗುವಂತೆ ಅಪಹಾಸ್ಯ ಮಾಡುವುದು, ನಮ್ಮ ಉಸ್ತಾದರುಗಳನ್ನು ಹೆಸರೆತ್ತಿ ಕರೆಯುವುದು ನಮಗೆ ಅತೀವ ದು:ಖವನ್ನುಂಟು ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹೆತ್ತವರ ಕುರಿತು ನಿಂದಿನಾತ್ಮಕ ಸಂದೇಶಗಳನ್ನ ಹರಿಯ ಬಿಡುವುದನ್ನು ಕಾನೂನು ಪಾಲಕರು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ನಿಂದನಾತ್ಮಕ ಧ್ವನಿ ಸಂದೇಶ ಹರಿಯಬಿಟ್ಟವರ ವಿರುಧ್ಧ ಆಡಳಿತ ಸಮಿತಿ ಕ್ರಮ ಕೈಗೊಳ್ಳಬೇಕು. ಆಡಳಿತ ಸಮಿತಿ ಮತ್ತು ನಮ್ಮ ಹೆತ್ತವರ ನಡುವೆ ತರ್ಕ ತಾರಕ್ಕೇರುತ್ತಿದ್ದು, ದಿನನಿತ್ಯ ನಾವು ಮದ್ರಸಗಳಲ್ಲಿ ಬೊಬ್ಬೆ, ಗಲಾಟೆಗಳನ್ನು ನೋಡಬೇಕಾಗಿದೆ. ನಾಗರಿಕರ ಮತ್ತು ಅಡಳಿತ ಸಮಿತಿಗಳ ವರ್ತನೆಯಿಂದಾಗಿ ನಮ್ಮ ಶಿಕ್ಷಕರು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಅಂಬಿಕಾರೋಡ್ : ಸಾಮಾಜಿಕ ಸೇವಾ ಮನೋಭಾವೆನಯಿಂದ ಸಮಾಜ ಅಭಿವೃದ್ಧಿ ಸಾಧ್ಯ ಎಂದು ಗಟ್ಟಿ ಸಮಾಜ ಸೇವಾ ಸಂಘದ ನಿರ್ಗಮಿತ ಅಧ್ಯಕ್ಷ ಹಾಗೂ ಸೋಮೇಶ್ವರ ಸೋಮನಾಥ ದೇಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ಹೇಳಿದರು. ಅವರು ಅಂಬಿಕಾರೋಡ್‍ನ ಗಟ್ಟಿ ಸಮಾಜ ಭವನದಲ್ಲಿ ಗಟ್ಟಿ ಸಮಾಜ ಸೇವಾ ಸಂಘ ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಗಟ್ಟಿ ಸಮಾಜದ ಹಿರಿಯರಾದ ನಾರಾಯಣ ಗಟ್ಟಿ ಮೇಲ್ಡರು, ನಾಯ್ಗರ ಪ್ರತಿನಿ„ ಪದ್ಮನಾಭ ಗಟ್ಟಿ ಕಟ್ಟಪುಣಿ, ಗಟ್ಟಿ ಸಮಾಜ ಸೋಮನಾಥ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್. ಗಟ್ಟಿ ಕೊರಂತೋಡಿ, ಮಹಿಳಾ ಸಂಘದ ಅಧ್ಯಕ್ಷೆ ಹಿತಾಕ್ಷಿ ಹರೀಶ್ ಗಟ್ಟಿ ಜಪ್ಪು, ಯುವಜನ ವಿಭಾಗದ ಅಧ್ಯಕ್ಷ ಪದ್ಮನಾಭ ಗಟ್ಟಿ ಬಜಿಲಕೇರಿ, ಧಾರ್ಮಿಕ ಪರಿಷತ್‍ನ ಸದಸ್ಯ ಕೃಷ್ಣ ಗಟ್ಟಿ ಸೋಮೇಶ್ವರ , ಒಂಭತ್ತು ಮಾಗಣೆ ಸೀಮೆ ಗಟ್ಟಿ ಸಮಾಜದ ಗುರಿಕಾರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಟ್ಟಿ ಸಮಾಜ ಸೇವಾ ಸಂಘದ 2017-19ನೇ ಸಾಲಿನ ನೂತನ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಟೀಲು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಕಾವ್ಯ ಎಂಬ ಬಾಲಕಿಯ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿ ಕೊಡುವಂತೆ ಮಡ್ಯಾರ್ ಫ್ರೆಂಡ್ಸ್ ಮಡ್ಯಾರ್ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಇಂದು ನಡೆಯಿತು. ಬಾಲಕಿಯ ಸಾವಿಗೆ ಕಾರಣಕರ್ತರಾದವರನ್ನ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು‌.ಒಂದು ವೇಳೆ ಈ ತನಿಖೆಯಲ್ಲಿ ಸೂಕ್ತ ನ್ಯಾಯ ದೊರಕದಿದ್ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರೇ ಆ ಪಾಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ದೇವರಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು‌‌.ಒಂದು ವೇಳೆ ಪ್ರಕರಣವನ್ನ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾವು ಯಾವುದೇ ತರಹದ ಪ್ರತಿಭಟನೆಗೆ ಸಿದ್ದ ಹಾಗೂ ಈ ವಿಷಯದಲ್ಲಿ ಯಾವುದೇ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡರೆ ನಮ್ಮ ಬೆಂಬಲ ಯಾವಾಗಲೂ ಅವರಿಗೆ ಇದೆ ಎಂದು ತಿಳಿಸಿದರು. ಸಂಪತ್ ಮಡ್ಯಾರ್ ಪ್ರ.ಕಾರ್ಯದರ್ಶಿ ಯುವ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ. ಚಂದ್ರಹಾಸ್ ರೈ ಪಿಲಾರ್ ಕಾರ್ಯದ್ಯಕ್ಷರು ಕ.ರ.ವೇ ದ.ಕ ಜಿಲ್ಲೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಸಮಾಜದ ಎಲ್ಲಾ ಕ್ಷೇತ್ರದಲ್ಲೂ ಬ್ರಾಹ್ಮಣ ಸಮಾಜ ಪ್ರಥಮ ಸ್ಥಾನದಲ್ಲಿದ್ದು, ನಮ್ಮಲ್ಲಿ ಒಗ್ಗಟ್ಟಿನ ಕೊರತೆಯಿಂದ ನಾವು ಕೆಲವೊಂದು ಸ್ಥಾನಮಾನವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದು, ಈ ನಿಟ್ಟನಲ್ಲಿ ಬ್ರಾಹ್ಮಣ ಸಮಾಜದವರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದರೆ ಸಮಾಜದ ಅಭಿವೃದ್ಧಿ ಸಾದ್ಯ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟರಮಣ ಅಸ್ರಣ್ಣ ಅಭಿಪ್ರಾಯಪಟ್ಟರು. ಅವರು ಕೊಲ್ಯ ಶ್ರೀ ನಾಗಬ್ರಹ್ಮಸ್ಥಾನದ ಸೌಭಾಗ್ಯ ಸಭಾ ಭವನದಲ್ಲಿ ಹದಿನಾಲ್ಕು ಗ್ರಾಮಗಳ ಬ್ರಾಹ್ಮಣ ಸಮುದಾಯದ ಒಕ್ಕೂಟವಾದ ಬ್ರಾಹ್ಮಣ ಪರಿಷತ್ ಕೋಟೆಕಾರು ಭಾನುವಾರ ಏರ್ಪಡಿಸಿದ್ದ ಸ್ನೇಹ ಸಮ್ಮಿಲನ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಘಟನೆಗೆ ಅದರದ್ದೇ ಆದ ಶಕ್ತಿ ಇದೆ. ನಾವು ಹಿರಿಯರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಬಲಯುತರಾಗುವ ಅವಶ್ಯಕತೆಯಿದೆ. ನಮ್ಮ ಪೂರ್ವಿಕರು ಕಲಿಸಿದ ವಿದ್ಯೆಯನ್ನು ಇಂದಿನ ಪೀಳಿಗೆ ಮರೆಯುತ್ತಿರುವುದು ಖೇದನೀಯ. ವೇದಾಭ್ಯಾಸ, ದೇವರ ಬಗ್ಗೆ ಜ್ಞಾನ  ಹೆಚ್ಚಿಸುವ ಕಾರ್ಯ ಆಗಬೇಕಾಗಿದ್ದು ಹಿರಿಯರನ್ನು, ತಂದೆ ತಾಯಿಯನ್ನು ಗೌರವಿಸುವುದರೊಮದಿಗೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಾಸರಗೋಡು : ತಿರುವನಂತಪುರಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ (34) ನ ಕೊಲೆಯನ್ನು ಪ್ರತಿಭಟಿಸಿ ಬಿಜೆಪಿ ಕರೆ ನೀಡಿದ ಹರತಾಳ ಕಾಸರಗೋಡು ಜಿಲ್ಲೆಯಲ್ಲಿ ಭಾಗಶ: ವಾಗಿತ್ತು. ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸಿದವು. ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಆದಿತ್ಯವಾರವಾದುದರಿಂದ ಸಾಮಾನ್ಯವಾಗಿ ಅಂಗಡಿ ಮುಂಗಟ್ಟುಗಳಿಗೆ ರಜೆಯಾದುದರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಲಿಲ್ಲ. ಬೀದಿ ವ್ಯಾಪಾರ ಎಂದಿನಂತೆ ಕಂಡು ಬರುತ್ತಿತ್ತು . ನಗರದಲ್ಲಿ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಗರ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬಲವಂತವಾಗಿ ತಡೆದರು. ಅಗತ್ಯ ಸೇವೆಗಳಿಗೆ ಸಂಚಾರಕ್ಕೆ ವಿನಾಯಿತಿ ಎಂದು ಪ್ರಕಟಿಸಿದ್ದರೂ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿಲ್ಲ . ತೆರೆದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದರು. ಪೊಲೀಸರ ಸಮಯಪ್ರಜ್ಞೆ ಮತ್ತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡುದರಿಂದ ಕೆಲ ಸಮಯದ ಬಳಿಕ ವಾಹನ ಸಂಚಾರ ಕ್ಕೆ ಅನುವು ಮಾಡಿಕೊಡಲಾಯಿತು . ದಿಡೀರ್ ಹರತಾಳದಿಂದ ಸಂಕಷ್ಟಕ್ಕೆ ಸಿಲುಕಿದ ಜನಸಾಮಾನ್ಯರು ದಿಡೀರ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಗ್ರಾಮೀಣ ಪ್ರದೇಶದಲ್ಲಿ ಕೃಷಿ ಸಂಸ್ಕೃತಿ ಅವನತಿಯತ್ತ ಸಾಗುತ್ತಿರುವ ಈ ಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಗಳು ಕೃಷಿ ಕಾರ್ಯಕ್ಕೆ ಆನೆಬಲ ನೀಡುವ ಕಾರ್ಯ ಪ್ರಾರಂಭಗೊಂಡಿದೆ. ಹಿಂದೆ ಕೆಸರುಗದ್ದೆಯಲ್ಲಿ ಪಾಲ್ಗೊಳ್ಳುತ್ತಿದ್ದ ವಿದ್ಯಾರ್ಥಿಗಳು ಇಂದು ಕೈಯಲ್ಲಿ ನೇಜಿ ಹಿಡಿದು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸೋಮೇಶ್ವರದ ಗ್ರಾಮದ ಪಿಲಾರ್ ಪ್ರದೇಶದ ಕೃಷಿಕರಿಗೆ ಇದೀಗ ಕುಂಪಲದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ಎರಡು ವಾರಗಳಿಂದ ಗದ್ದೆಗಿಳಿದಿದ್ದಾರೆ. ಕೈಯಲ್ಲಿ ನೇಜಿ ಹಿಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಡಿಲು ಬಿದ್ದ ಗದ್ದೆಯೆಡೆಗೆ ಪ್ರತೀ ಶನಿವಾರ ತೆರಳಿ ಕೃಷಿ ಪಾಠ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ಥಳೀಯ ಹಿರಿಯ ಕೃಷಿಕರ ಮಾರ್ಗದರ್ಶನ ಶಾಲಾ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್ ಮತ್ತು ಕೇಸರಿ ಮಿತ್ರವೃಂದದ ಸ್ಥಾಪಕಾಧ್ಯಕ್ಷ ನಾರಾಯಣ ಬಿ. ಕುಂಪಲ ನೇತೃತ್ವದಲ್ಲಿ ಕಳೆದ ಶನಿವಾರ ದೇವೇಶ್ ಸರಳಾಯ ಅವರ ಗದ್ದೆಯ ನಾಟಿ ಕಾರ್ಯ ಮುಗಿಸಿದರೆ. ಶನಿವಾರ ಪಿಲಾರ್‍ನ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರಿಸರ ಸಂರಕ್ಷಿಸುವ ಕಾರ್ಯ ಆಗಬೇಕಾಗಿದ್ದು ಈ ನಿಟ್ಟಿನಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಪರಿಸರ ಸಂರಕ್ಷಣೆ ಸೇರಿದಂತೆ ಗಿಡ ನೆಡುವ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮ ಮತ್ತು ಸಂರಕ್ಷಣೆಯನ್ನು ಕೇವಲ ಸಾಂಕೇತಿಕ ಕಾರ್ಯಕ್ರಮವಾಗಿಸದೆ ದೈನಂದಿನ ಚಟುವಟಿಕೆಯಾಗಿ ಮುಂದುವರೆಸಿಕೊಂಡು ಹೋಗಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ಇದರ ಎನ್‍ಎಸ್‍ಎಸ್ ಘಟಕದ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷೇಮ ಹರ್ಬಲ್ ಗಾರ್ಡನ್ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್ ಹಸಿರು ಕ್ಯಾಂಪಸ್ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ಕೇವಲ ನಿಟ್ಟೆ ವಿವಿ ಮಾತ್ರವಲ್ಲದೇ ಪರಿಸರದ ಎಲ್ಲಾ ಕಡೆ ಹಸಿರುಮಯ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.…

Read More