Author: UllalaVani

Kannada News From Coastal Karnataka

UN NETWORKS ಪಾವೂರು: ಹಲವು ವರ್ಷಗಳಿಂದ ಸಮರ್ಪಕ ರಸ್ತೆ ಇಲ್ಲದೆ, ನೀರಿನ ಸಮಸ್ಯೆ ಎದುರಿಸುತ್ತಿದ್ದರೂ ರಾಜಕೀಯ ಅಮಿಷಗಳಿಗೆ ಬಲಿಬೀಳದೆ ತಾಳ್ಮೆಯಿಂದ ಒಗ್ಗಟ್ಟು ಕಾಪಾಡಿದ ಸ್ಥಳೀಯ ಸರ್ವ ಧರ್ಮೀಯರೂ ಅಭಿನಂದನೆಗೆ ಅರ್ಹರು ಎಂದು ತಾಲೂಕು ಪಂಚಾಯತಿ ಸದಸ್ಯ ಮಹಮ್ಮದ್ ಮೋನು ಮಲಾರ್ ಹೇಳಿದರು. ಪಾವೂರು ಗ್ರಾಮದ ಒಂದನೇ ವಾರ್ಡ್ ಪೋಡಾರ್ ಸೈಟ್ ರಸ್ತೆಗೆ ಕಾಂಕ್ರೀಟ್, ಕುಡಿಯುವ ನೀರಿನ ತೆರೆದ ಬಾವಿ ಹಾಗೂ ಪೈಪ್‍ಲೈನ್ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ಸಮಾರಂಭದಲ್ಲಿ ಮಾತನಾಡಿದರು. ಸ್ಥಳೀಯ ರಸ್ತೆ ದುವರಸ್ತೆ ಬಗ್ಗೆ ಅರಿತು ಸಚಿವ ಯು.ಟಿ.ಖಾದರ್ ಅವರು ಪರಿಶೀಲನೆ ನಡೆಸಿ 25 ಲಕ್ಷ ಅನುದಾನ ನೀಡಿದ್ದಾರೆ. ಇದರಲ್ಲಿ 9 ಲಕ್ಷ ರೂಪಾಯಿ ನೀರಿನ ವ್ಯವಸ್ಥೆಗೆ ಬಳಕೆಯಾಗಲಿದ್ದು, ಅಗತ್ಯವಿದ್ದರೆ ಹೆಚ್ಚಿನ ಅನುದಾನ ದೊರಕಿಸಲು ಪ್ರಯತ್ನಿಸಲಾಗುವುದು, ಗ್ರಾಮದ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ. ಮನೆಯಿಲ್ಲದವರಿಗೆ ಜಮೀನು ಗುರುತಿಸಲಾಗುವುದು ಎಂದರು. ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಫಿರೋಜ್ ಮಲಾರ್ ಮಾತನಾಡಿ, ಹಲವು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ, ನೀರಿನ ಸಮಸ್ಯೆ ಪರಿಹಾರಕ್ಕೆ ಸಚಿವರು ಅನುದಾನ…

Read More

UN NETWORKS ಉಳ್ಳಾಲ: ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಉದ್ದೇಶಿತ ಗುರಿಯನ್ನು ತಲುಪಲು ಒಂದು ಸ್ಪಷ್ಟ ನಿರ್ಧಾರ, ನಿರ್ಣಯ, ಸಮರ್ಪಣಾ ಭಾವ ಹೊಂದಿರಬೇಕು. ಹಾಗೆಯೇ ನರ್ಸಿಂಗ್ ಪವೀಧದರಿಗೆ ದೇಶ ವಿದೇಶದಲ್ಲಿ ಬಹಳಷ್ಟು ಅವಕಾಶವಿದ್ದು ತಮಗೆ ಎದುರಾಗುವ ಯಾವುದೇ ಸಮಸ್ಯೆಯನ್ನು ಎದುರಿಸುವಲ್ಲಿ ಸಫಲರಾಗಿರುತ್ತಾರೆ ಎಂದು ಫಾ. ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲೆ ಪ್ರೊ. ಸಿಸ್ಟರ್ ಜೆಸಿಂತಾ ಡಿಸೋಜ ಅಭಿಪ್ರಾಯಪಟ್ಟರು. ಉಳ್ಳಾಲ ಸುಭಾಷ ನಗರದ ಕೆ. ಪಾಂಡ್ಯರಾಜ ಬಲ್ಲಾಳ್ ಕಾಲೇಜ್ ಆಫ್ ನರ್ಸಿಂಗ್‍ನ ಆಡಿಟೋರಿಯಂನಲ್ಲಿಶನಿವಾರ ನಡೆದ ಕೆ. ಪಾಂಡ್ಯರಾಜ ಬಲ್ಲಾಳ್ ಕಾಲೇಜ್ ಆಫ್ ನರ್ಸಿಂಗ್‍ನ ಪದವಿ ಪ್ರದಾನ ಹಾಗೂ ವಾರ್ಷಿಕೋತ್ಸವದಲ್ಲಿ ಪದವಿ ಪ್ರದಾನಗೈದು ಅವರು ಮಾತನಾಡಿದರು. ನರ್ಸಿಂಗ್ ಎಂಬುದು ಸೇವಾ ಕ್ಷೇತ್ರ. ಮಾನವೀಯ ನೆಲೆಯಲ್ಲಿಹೆಚ್ಚಿನ ಸೇವೆ ಸಲ್ಲಿಸುವುದರಿಂದ ನರ್ಸಿಂಗ್ ಹುದ್ದೆಗೆ ವಿಶೇಷ ಗೌರವವಿದೆ. ಹಾಗಾಗಿ ನಮ್ಮ ಗುರಿಯನ್ನು ತಲುಪಲು ಕಠಿಣ ಶ್ರಮ ವಹಿಸಬೇಕು. ಆದರಿಂದ ಉತ್ತಮ ಫಲಿತಾಂಶ ಪಡೆಯುವದರಲ್ಲಿ ಸಂಶಯವಿಲ್ಲ ಎಂದರು. ಸಂಸ್ಥೆಯ ಆಡಳಿತ ನಿರ್ದೇಶಕಿ, ಕೆ. ಪಾಂಡ್ಯರಾಜ ಬಲ್ಲಾಳ್ ಚಾರಿಟೇಬಲ್ ಟ್ರಸ್ಟ್ ನ…

Read More

UN NETWORKS ಪಾವೂರು: ಪಾವೂರು-ಹರೇಕಳದ ನಾಗಮೂಲೆ ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಕೋರ್ದಬ್ಬು, ತನ್ನಿಮಾನಿಗ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಗುರುವಾರ ಆರಂಭಗೊಂಡಿದ್ದು ಮಾ. 12ರ ತನಕ ನಡೆಯಲಿದೆ. ವೇದಮೂರ್ತಿ ಸೀತಾರಾಮ ಆಚಾರ್ಯ ನೇತೃತ್ವದಲ್ಲಿ ಬ್ರಹ್ಮಕಲಶಾಭಿಷೇಕ, ವೇದಮೂರ್ತಿ ರಮಾನಂದ ಸಾಮಗ ಅವರಿಂದ ನಾಗದರ್ಶನ ಸೇವೆ ನಡೆಯಿತು. ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ದೈವಸ್ಥಾನದವರೆಗೆ ನಡೆದ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಂದಿರದ ಕೋಶಾಧಿಕಾರಿ ನಾರಾಯಣ ಪೂಜಾರಿ, ಕಾರ್ಯದರ್ಶಿ ಜನಾರ್ದನ ಹರೇಕಳ, ಪ್ರಮುಖರಾದ ಪದ್ಮನಾಭ ಪೂಜಾರಿ ಖಂಡಿಗ, ಕೃಷ್ಣಪ್ಪ ನಾಗಮೂಲೆ, ಸತ್ಯಪಾಲ ರೈ ಕಡೆಂಜ, ರವಿ ಅಸೈಗೋಳಿ, ನವೀನ್ ಕೊಣಾಜೆ, ವಾಮನ್‍ರಾಜ್ ಪಾವೂರು, ಪ್ರೇಮ್‍ರಾಜ್ ಪಾವೂರು, ಪವಿತ್ರ ಕೆರೆಬೈಲ್, ಸಂಜೀವ ನಾಗಮೂಲೆ, ಗಣೇಶ ಪಂಜಿಮಾಡಿ, ಚೇತನಾ ಫ್ರೆಂಡ್ಸ್, ಬಬ್ಬುಸ್ವಾಮಿ ಸೇವಾ ಸಮಿತಿ, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿ.ಜೆ.ಪಿ ವಿಜಯ ಸಾಧಿಸುವುದು ಖಂಡಿತ,ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಕ್ತಿ ಮೀರಿ ಕಾರ್ಯ ನಿರ್ವಹಿಸುವುದು ಅತೀ ಅಗತ್ಯ ಎಂದು ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್ ಅಭಿಪ್ರಾಯಪಟ್ಟರು. ಅವರು ಮಂಗಳೂರು ಕ್ಷೇತ್ರ ಬಿ.ಜೆ.ಪಿ ಕಛೇರಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಿಯವರ ನಿಸ್ವಾರ್ಥ ಸೇವೆ ಹಾಗೂ ಅಭಿವೃದ್ಧಿ ಪರ ಯೋಜನೆಗಳನ್ನು ಜನ ಪುರಸ್ಕರಿಸಲಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡುವುದರ ಜೊತೆಗೆ ಕರ್ನಾಟಕ ಕಾಂಗ್ರೇಸ್ ಮುಕ್ತವಾಗಬೇಕೆಂದು ಎಂದರು. ಈ ಸಂದರ್ಭದಲ್ಲಿ ಮಂಗಳೂರು ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕೇರಳ ಬಿಜೆಪಿ ಮುಖಂಡ ಹರೀಶ್ಚಂದ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಕ್ಷೇತ್ರ ಪ್ರಭಾರಿ ನಿತಿನ್ ಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ನಮೀತಾ ಶ್ಯಾಮ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್, ಮನೋಜ್ ಆಚಾರ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ಧರು.

Read More

UN NETWORKS ಕೊಣಾಜೆ: ಮೊದಲ ವೃತ್ತಿಯಾಗಿ ಮಂಗಳೂರಿನ ಬಂದರು ಹಾಗೂ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿ ಪುತ್ತೂರು ಠಾಣೆಯಲ್ಲಿ ಸಬ್ ಇನ್ಸ್‍ಪೆಕ್ಟರ್ ಹುದ್ದೆ ಮಾಡುತ್ತಾ ಹಂತ ಹಂತವಾಗಿ ಮೇಲೇರುತ್ತಾ ಡಿಜಿಪಿ ಹುದ್ದೆ ತನಕ ಏರಿದ್ದು ನಿಜಕ್ಕೂ ಸಾಹಸ. ಚಿತ್ರದುರ್ಗದಂತಹ ಮುಂದುವರಿದಿರದ ಜಿಲ್ಲೆಯಲ್ಲಿ ಎಸ್‍ಪಿಯಾಗಿದ್ದಾಗ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಿಂಗಳಲ್ಲಿ ಒಂದು ಬಾರಿ ಪೊಲೀಸ್ ಠಾಣೆಗೆ ಭೇಟಿ ಕೊಡುವ ಕಾರ್ಯಕ್ರಮದ ಮೂಲಕ ಪೊಲೀಸ್ ಸೇವೆ ಬಗ್ಗೆ ಜನಜಾಗೃತಿ ಮೂಡಿಸಲು ಸಾಧ್ಯವಾಗಿತ್ತು ಎಂದು ದೇಶದ ಮೊದಲ ಮಹಿಳಾ ಡಿಜಿಪಿ, ಕರ್ನಾಟಕದ ಮೊದಲ ಮಹಿಳಾ ಐಪಿಎಸ್ ಆಫೀಸರ್ ಡಾ. ಜಿಜಾ ಮಾಧವನ್ ಹರಿಸಿಂಗ್ ಅಭಿಪ್ರಾಯಪಟ್ಟರು. ಮಂಗಳೂರು ವಿವಿಯ ಸೆಂಟರ್ ಫಾರ್ ವುಮೆನ್ಸ್ ಸ್ಟಡೀಸ್ ಆಶ್ರಯದಲ್ಲಿ ಗುರುವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಪೊಲೀಸ್ ಹುದ್ದೆಯಲ್ಲಿ ಇರುವವರಿಗೆ ಕೆಲವೊಂದು ಸಂದರ್ಭಗಳು ತಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಗಮನ ಕೊಡಲು ಸಾಧ್ಯವಿಲ್ಲ. ಕೆಲವು ಘಟನೆಗಳು ಆತಂಕಕ್ಕೆ ತಳ್ಳುತ್ತದೆ.…

Read More

UN NETWORKS ಉಳ್ಳಾಲ : ಕಲ್ಲಾಪು ಅಂಬಟಡಿಯ ರಸ್ತೆ ನಿರ್ಮಾಣ 15 ವರ್ಷಗಳ ಬೇಡಿಕೆಯಾಗಿತ್ತು. ಜನರ ಬೇಡಿಕೆಗಳಿಗೆ ಅನುಗುಣವಾಗಿ ರಸ್ತೆ ನಿರ್ಮಾಣದೊಂದಿಗೆ ಕಾಂಕ್ರಿಟೀಕರಣಕ್ಕೆ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಅಂಬಟಡಿ ರಸ್ತೆ 78 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣ, ಚರಂಡಿ ರಚನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ, ಅಧ್ಯಕ್ಷ ಹುಸೈನ್ ಕುಂಇಮೋನು, ಉಪಾಧ್ಯಕ್ಷೆ ಚಿತ್ರಾಚಂದ್ರಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷೆ ಜೇನ್‍ಶಾಂತಿ ಡಿ.ಸೋಜ ಸದಸ್ಯರಾದ ಉಸ್ಮಾನ್ ಕಲ್ಲಾಪು, ಪೆÇಡಿಮೋನು, ನಾಮನಿರ್ದೇಶನ ಸದಸ್ಯರಾದ ರಿಚ್ಚಾರ್ಡ್, ರವಿ ಕಾಪಿಕಾಡ್, ಅಭಿಯಂತರರಾದ ರೇಣುಕಾ , ಕಾಮತ್, ಇಲಿಯಾಸ್, ಡೆನ್ನಿಸ್ ಡಿ.ಸೋಜ, ಕುಂಇಮೋನು ಉಪಸ್ಥಿತರಿದ್ದರು. ಉಳ್ಳಾಲ ನಗರಸಭಾ ಸದಸ್ಯ ಫಾರೂಕ್ ಯು.,ಎಚ್. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Read More

UN NETWORKS ಕೊಣಾಜೆ: ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನ ವಿದ್ಯಾರ್ಥಿಯೋರ್ವರು ಸರಕಾರದ ಸವಲತ್ತಿನಿಂದ ವಂಚಿತರಾಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಂಗಳ ಹಿಂದೆ ನಡೆದಿದ್ದು, ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳೆಲ್ಲರೂ ಆತಂಕಗೊಂಡು ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನ ವಿದ್ಯಾರ್ಥಿ ಸಂತೋಷ್ ಹೇಳಿದ್ದಾರೆ. ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ದಲಿತ ವಿರೋಧಿ ಆಡಳಿತವನ್ನು ಖಂಡಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಎದುರುಗಡೆ ಗುರುವಾರ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರದಿಂದ ಸಿಗುವ ಸವಲತ್ತುಗಳನ್ನು ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಕೊಡಿಸುವಲ್ಲಿ ವಿಫಲವಾಗಿದೆ. ಹಲವು ಬಾರಿ ಬೇಡಿಕೆ ಮುಂದಿಟ್ಟರೂ ಸಕಾರಾತ್ಮಕ ಸ್ಪಂಧನೆ ದೊರೆಯದೆ ಕೇವಲ ವಿಶ್ವಾಸಗಳು ಮಾತ್ರ ಸಿಕ್ಕಿದೆ. ಪ್ರತಿ ಭೇಟಿಯ…

Read More

UN NETWORKS ಕಿನ್ಯ: ಔಲಿಯಾಗಳನ್ನು ಬಣ್ಣಿಸುವುದು ಅವರ ಹೆಸರಿನಲ್ಲಿ ಝಿಯಾರತ್ ಮಾಡುವುದು ಉತ್ತಮವಾದ ಕಾರ್ಯ. ಪ್ರವಾದಿಯವರು ಗುರು ಹಿರಿಯರನ್ನು ಗೌರವಿಸುವ ವಿಧಾನವನ್ನು ಕಲಿಸಿಕೊಟ್ಟಿದ್ದಾರೆ. ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಯ್ಯದ್ ಮುಕ್ತಾರ್ ತಂಙಳ್ ಕುಂಬೋಳ್ ಹೇಳಿದರು. ಅವರು ಕಿನ್ಯದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್‍ರವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಕೂಟು ಝಿಯಾರತ್ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಕಿನ್ಯ ಮಸೀದಿಗೆ ಬಹಳಷ್ಟು ಇತಿಹಾಸ ಇದೆ. ದರ್ಗಾ ಕೂಟು ಝಿಯಾರತ್ ಹಿಂದಿನಿಂದಲೇ ಇಲ್ಲಿದೆ. ಇದನ್ನು ವರ್ಷಂಪ್ರತಿ ಇಲ್ಲಿ ಆಚರಿಸಿಕೊಂಡು ಬರುವ ಪದ್ಧತಿ ನಿರಂತರವಾಗಿರಬೇಕು. ಪ್ರವಾದಿಯವರು ಏನನ್ನು ಕಲಿಸಿದ್ದಾರೆಯೋ ಅವರ ಬೋಧನೆ ಚೌಕಟ್ಟು ಮೀರದೇ, ಇಸ್ಲಾಂನ ನಿಯಮಗಳ ಚೌಕಟ್ಟು ಮೀರದೇ ಕಾರ್ಯಕ್ರಮ ನಡೆಸಿಕೊಂಡು ಬರಬೇಕು ಎಂದು ಕರೆ ನೀಡಿದರು. ಸಯ್ಯದ್ ಅಮೀರ್ ತಂಙಳ್ ಕಿನ್ಯ ದುವಾ ನೆರವೇರಿಸಿದರು. ಹುಸೈನ್ ಕುಂಞ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಿನ್ಯ ಕೇಂದ್ರ ಮಸೀದಿ ಖತೀಬ್ ಫತ್ತಾಹ್ ಫೈಝಿ ಧಾರ್ಮಿಕ ಉಪನ್ಯಾಸ ನೀಡಿದರು. ಕುತುಬಿಯಾ…

Read More

UN NETWORKS ತಲಪಾಡಿ: ತಲಪಾಡಿ ಗ್ರಾಮದ ಒಂದನೇ ವಾರ್ಡ್‍ನಲ್ಲಿ 55 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೊಮರಂಗಳ-ಕೆ.ಸಿ.ನಗರ-ಅಜ್ಜಿನಡ್ಕ ಸಂಪರ್ಕ ರಸ್ತೆಗೆ ಮಂಗಳವಾರ ಆಹಾರ ಸಚಿವ ಯು.ಟಿ.ಖಾದರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕೆ.ಸಿ.ನಗರದಿಂದ ಕೊಮರಂಗಳಕ್ಕೆ 20 ಲಕ್ಷ ಹಾಗೂ ಅಜ್ಜಿನಡ್ಕಕ್ಕೆ ನೇರ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಹಾಗೂ ಸೇತುವೆ 35 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿದೆ. ಇದು ಅಜ್ಜಿನಡ್ಕಕ್ಕೆ ಹತ್ತಿರ ರಸ್ತೆಯಾಗಲಿದೆ ಎಂದರು. ತಾಲೂಕು ಪಂಚಾಯಿತಿ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ ಮಾತನಾಡಿ, ಸ್ಥಳೀಯರ ಬೇಡಿಕೆ ಮೇರೆಗೆ ಸಚಿವರು ಅನುದಾನ ಬಿಡುಗಡೆಗೊಳಿಸಿರುವುದು ಈ ಭಾಗದ ಜನರ ಮೇಲೆ ಅವರಿಗಿರುವ ಕಾಳಜಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು. ತಲಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಇಬ್ರಾಹಿಂ ಮಾತನಾಡಿ, ಸ್ಥಳೀಯ ರಸ್ತೆ ಕೆಲವು ಸಮಯಗಳಿಂದ ನಾದುರಸ್ತಿಯಲ್ಲಿತ್ತು. ಕಾಂಕ್ರೀಟ್ ಮೂಲಕ ಶಾಶ್ವತ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಲಾಗಿತ್ತಾದರೂ ಅಜ್ಜಿನಡ್ಕಕ್ಕೆ ನೇರ ಸಂಪರ್ಕಿಸಲೂ ಸಚಿವರು ಅನುದಾನ ನೀಡಿದ್ದಾರೆ ಎಂದು ಹೇಳಿದರು. ಈ ಸಂದರ್ಭ ತಲಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಶ್ರಫ್,…

Read More

UN NETWORKS ತೌಡುಗೋಳಿ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೌಡುಗೋಳಿಯ ಹಫೀಝ್(32) ಎಂದು ಗುರುತಿಸಲಾಗಿದೆ. ಈತ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ರೌಡಿ ನಿಗ್ರಹದಳ ಸಿಬ್ಬಂದಿಗಳು ಹಾಗೂ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1.350 ಕೆ.ಜಿ ಗಾಂಜಾ ಮತ್ತು 2,500 ರೂ ನಗದು ಸ್ವಾಧೀನಪಡಿಸಿಕೊಂಡಿದ್ದಾರೆ. ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ, ಕರಾವಳಿ ಕಾವಲುಪಡೆ ಠಾಣೆ, ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಗಾಂಜಾ ಮಾರಾಟದ ಬಗ್ಗೆ ಪ್ರಕರಣ ದಾಖಲಾಗಿದ್ದು ಈತ ಕಳೆದ ಒಂದುವರೇ ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಪ್ರಸಕ್ತ ಈತನ ಮೇಲೆ ಉಳ್ಳಾಲ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಾರಣ ನ್ಯಾಯಾಲಯ ವಾರಂಟ್ ಹೊರಡಿಸಿತ್ತು

Read More