Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕಿನ್ಯಾ ಕೇಶವ ಶಿಶುಮಂದಿರ ಇದರ ಮಾತೃಮಂಡಳಿಯ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ. 4ರಂದು ಶುಕ್ರವಾರ ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವೇದಮೂರ್ತಿ ಟಿ. ಬಾಲಕೃಷ್ಣ ಭಟ್ ಪಂಜಾಳ ಇವರ ನೇತೃತ್ವದಲ್ಲಿ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾರದಾ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕ ಹಾಗೂ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್, ಸುನಂದ ಎಂ. ಬಿ. ಪುರಾಣಿಕ್, ಭಾಜಪ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕ ಎ. ಬದ್ರಿನಾಥ್ ಕಾಮತ್ ಕದ್ರಿ ಮಂಗಳೂರು, ಮೀನಾಕ್ಷಿ ಮತ್ತು ಸಂಕಪ್ಪ ಶೇಖ ಮುಳಿಯಗುತ್ತು ಬಡಕಬೈಲು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಲ್ಯ : ಆಟಿ ತಿಂಗಳ ವಿಶೇಷತೆ ಬಗ್ಗೆ ಕೇವಲ ಮಹಿಳಾ ಮಂಡಲಗಳಿಗೆ ಸೀಮಿತವಾಗದೆ ಇಂದಿನ ಯುವ ಪೀಳಿಗೆಗೆ ಹಿಂದಿನ ಕಾಲದ ಕಷ್ಟಕರ ಜೀವನ ಸೇರಿದಂತೆ ನಮ್ಮ ಸಂಸ್ಕ್ರತಿ, ಆಚಾರ ವಿಚಾರಗಳನ್ನು ತಿಳಿ ಹೇಳುವ ಕಾರ್ಯ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸಿಕೊಳ್ಳುವ ಕಾರ್ಯ ಆಗಬೇಕು ಎಂದು ಸೋಮೇಶ್ವರ ಪರಿಜ್ಞಾನ ಪದವಿಪುರ್ವ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಯತೀಶ್ ಕುಮಾರ್ ಅಭಿಪ್ರಾಯಪಟ್ಟರು. ಅವರು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ನಾರಾಯಣ ಗುರು ಮಹಿಳಾ ಸಂಘ ಮತ್ತು ಬಿಲ್ಲವ ಸೇವಾ ಸಮಾಜ ಹಾಗೂ ಯುವ ವಾಹಿನಿ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಆಟಿ ತಿಂಗಳಲ್ಲಿ ಆನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುತ್ತಿದ್ದರು. ಈ ಸಂದರ್ಭದಲ್ಲಿ ಬರುವ ರೋಗ ರುಜಿನಗಳನ್ನು ತಡೆಯುವ ನಿಟ್ಟಿನಲ್ಲಿ ವಿವಿಧ ಬಗೆಯ ಪೃಕೃತಿಯಲ್ಲಿ ಸುಗುವ ಆಹಾರ ಪದಾರ್ಥಗಳನ್ನು ಬಳಸುತ್ತಿದ್ದರು,…

Read More

ಸೋಮೇಶ್ವರ:ನಾಗರ ಪಂಚಮಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದ ನಾಗ ಬನದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ನಾಗರ ದೇವರನ್ನು ಆರಾಧಿಸಲಾಯಿತು. ಮುಂಜಾನೆಯಿಂದ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ಹಾಗೂ ವಿಶೇಷ ಪೂಜೆ ನಡೆಯಿತು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುತ್ತಾರು: ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಹರೇಕಳ :ಸರಕಾರದಿಂದ ಕೊಡಮಾಡುವ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮವು ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಸೈಕಲ್‍ಗಳನ್ನು ಹಸ್ತಾಂತರಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನುರವರು ಕನ್ನಡ ಮಾಧ್ಯಮದ ಮಕ್ಕಳು ಬಹಳ ಆಸಕ್ತಿಯಿಂದ ಪ್ರತೀ ದಿನ ಶಾಲೆಗೆ ಹೋಗಬೇಕು. ಧೈರ್ಯ, ಏಕಾಗ್ರತೆ ಮತ್ತು ಉತ್ತಮ ಆರೋಗ್ಯವನ್ನು ಸದಾ ಹೊಂದಲು ಸೈಕಲ್ ತುಳಿಯುವುದು ಬಹಳ ಅವಶ್ಯ. ಈ ನಿಟ್ಟಿನಲ್ಲಿ ಸರಕಾರದ ಈ ಯೋಜನೆಯನ್ನು ಪ್ರತಿಯೋರ್ವರೂ ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆಯನ್ನು ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮುದಲೆಮಾರು ಪ್ರಹ್ಲಾದ ರೈ ವಹಿಸಿದ್ದರು. ಶಾಲಾ ಸಂಚಾಲಕ ಜಯರಾಮ ಆಳ್ವ  ಪೋಡಾರು, ಶಾಲಾ ಮುಖ್ಯೋಪಾಧ್ಯಾಯರಾದ ಕೆ.ರವೀಂದ್ರ ರೈ, ಹರೇಕಳ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತ ಡಿ’ಸೋಜ, ಶಿಕ್ಷಕರುಗಳಾದ ತ್ಯಾಗಂ ಹರೇಕಳ, ಉಷಾಲತ, ಮೋಹಿನಿ, ಕುಮುದ, ಸ್ಮಿತಾ, ನೂತನ, ಕೃಷ್ಣಶಾಸ್ತ್ರಿ, ರವಿಶಂಕರ್, ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಲಾರಿಯೊಂದು ಬುಧವಾರ ತಡರಾತ್ರಿ ವೇಳೆ ನೇತ್ರಾವತಿ ಸೇತುವೆಯ ತಡೆಗೆ ಢಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು, ತಡೆಯಲ್ಲಿ ನೀರಿನ ಪೈಪ್ ಇದ್ದುದರಿಂದ ನದಿಗೆ ಉರಳುವ ಸಂಭಾವ್ಯವಿದ್ದ ಲಾರಿ ದೊಡ್ಡದೊಂದು ಅನಾಹುತದಿಂದ ತಪ್ಪಿದಂತಾಗಿದೆ. ಕಣ್ಣೂರು ನಿವಾಸಿ ಸಂಶುದ್ದೀನ್ ಎಂಬವರಿಗೆ ಸೇರಿದ ಲಾರಿ ಇದಾಗಿದ್ದು, ಉಮೇಶ್ ಎಂಬಾತ ಲಾರಿ ಚಾಲಕನಾಗಿದ್ದಾನೆ. ಕಲ್ಲಾಪು ಭಾಗದಿಂದ ಮಂಗಳೂರು ಕಡೆಗೆ ಅಕ್ರಮವಾಗಿ  ಮರಳು ಸಾಗಾಟ ನಡೆಸುತ್ತಿರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹಳೇಯ ನೇತ್ರಾವತಿ ಸೇತುವೆಯ ಎಡಭಾಗಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ತಡೆ ಸಂಪೂರ್ಣ ಮುರಿದುಬಿದ್ದಿದ್ದು, ಢಿಕ್ಕಿ ಹೊಡೆದ ಲಾರಿ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ತಪ್ಪಿದೆ. ಕುಡಿಯುವ ನೀರಿನ ಪೈಪ್ ಲೈನ್ ಸೇತುವೆಯ ತಡೆಯಲ್ಲಿದ್ದುದರಿಂದಾಗಿ ತಡೆ ಮುರಿದರೂ ಕೆಳಗೆ ಬೀಳದೆ ಲಾರಿಯೂ ನದಿ ನೀರಿಗೆ ಉರುಳುವುದರಿಂದ ತಪ್ಪಿದಂತಾಗಿದೆ. ತಡರಾತ್ರಿ ಅಪಘಾತ ನಡೆದಿರುವ ಮಾಹಿತಿ ಠಾಣೆಗೆ ಬಂದಿದೆ. ಕೂಡಲೇ ಹೈವೇ ಮೊಬೈಲ್ ಪ್ಯಾಟ್ರಲಿಂಗ್‍ನಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೆ.ಸಿ ರೋಡು: ತಾಯಿ ಮೊದಲ ಪಾಠ ಶಾಲೆ ಎಂಬಂತೆ ಮಹಿಳೆಯರಿಗೆ ಉನ್ನತ ಧಾರ್ಮಿಕ ಹಾಗೂ ಲೌಕಿಕ ವಿದ್ಯೆ ನೀಡಿದಾಗ ಇಡೀ ಕುಟುಂಬ ಶಿಕ್ಷಿತರಾಗಲು ಸಾಧ್ಯ ಎಂದು ಅಸ್ಸಯ್ಯಿದ್ ಇಸ್ಮಾಈಲ್ ಮದನಿ ತಂಙಳ್ ಅಲ್-ಹಾದಿ ಉಜಿರೆ ಆಭಿಪ್ರಾಯಪಟ್ಟರು. ಅವರು ತಲಪಾಡಿ ಕೆ.ಸಿ ರೋಡು ತಾಜ್ ನಗರದಲ್ಲಿ ಮಿನ್‍ಹಾಜುಸುನ್ನ ಫೌಂಡೇಶನ್ ನಿರ್ಮಿಸಿದ ಮಿನ್ ಹಾಜು ಸ್ವಾಲಿಹತ್ ಮಹಿಳಾ ಶರೀಅತ್ ಕಾಲೇಜ್ ಕಟ್ಟಡ ಉದ್ಘಾಟಿಸಿ ಮತನಾಡಿದರು. ಮುಸ್ಲಿಂ ಮಹಿಳೆಯರು ಅಸುರಕ್ಷತೆಯ ಕೊರತೆಯಿಂದ ಧಾರ್ಮಿಕ ಶಿಕ್ಷಣ ಮೊಟಕುಗೊಳಿಸಿ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಮಹಿಳಾ ಸಂಸ್ಥೆಯಿಂದ ಸುರಕ್ಷಿತವಾಗಿ ಉನ್ನತ ಶಿಕ್ಷಣ ಪಡೆದು ಭವಿಷ್ಯದಲ್ಲಿ ಮಹಿಳಾ ಉಪನ್ಯಾಸಕರಾಗಿದ್ದುಕೊಂಡು, ಇನ್ನಷ್ಟು ಮಹಿಳೆಯರಿಗೆ ತರಬೇತಿ ನೀಡುವಂತಾಗಬೇಕು ಎಂದು ಶುಭಹಾರೈಸಿದರು. ಎಸ್ ವೈ ಎಸ್ ರಾಜ್ಯಾಧ್ಯಕ್ಷ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆ ಎರಡು ರೀತಿಯ ಉನ್ನತ ಶಿಕ್ಷಣ ನೀಡಿದಾಗ ನಿಮ್ಮ ಕುಟುಂಬದ ಜೀವನ ಉತ್ತಮವಾಗುವುದು. ಇಂದು ಲೌಕಿಕ ಶಿಕ್ಷಣಕ್ಕಾಗಿ ಮಕ್ಕಳ ಹೆತ್ತವರು ಪ್ರೋತ್ಸಾಹ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಮಂಗಳೂರು ಕರಾವಳಿ ಸಾಂಸ್ಕøತಿಕ ಪರಿಷತ್ ಇದರ ವತಿಯಿಂದ ಕಾರ್ಗಿಲ್ ವಿಜಯ್ ದಿವಸದ ಪ್ರಯುಕ್ತ ಶತಾಯುಷಿ ಹಾಗೂ ಹಿರಿಯ ಯೋಧ ಸೋಮೇಶ್ವರ ನಿವಾಸಿ ಕ್ಯಾಪ್ಟನ್ ಬಿ.ಎಸ್.ಬಾಲಕೃಷ್ಣ ರೈ ಇವರಿಗೆ ಸನ್ಮಾನ ಕಾರ್ಯಕ್ರಮ ಸ್ವಗೃಹದಲ್ಲಿ ಬುಧವಾರ ನಡೆಯಿತು. ಹವಾಲ್ದಾರರಾಗಿ, ಹಿರಿಯ ಅಧಿಕಾರಿಯಾಗಿ, ಸುಬೇದಾರರಾಗಿ, ಮೇಜರ್, ಲೆಪ್ಟಿನೆಂಟ್ ಆಗಿ ಸೇವೆ ಸಲ್ಲಿಸಿರುವ ಬಾಲಕೃಷ್ಣ ರೈ ಇವರು 1972ರಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದರು. ಸ್ವಾತ್ರಂತ್ಯ ಪೂರ್ವದಲ್ಲಿ ಬರ್ಮಾ, ಪಾಕಿಸ್ತಾನದ ರಾವಲ್ಪಿಂಡಿ, ಅಬಾಟಾಬಾದ್‍ನಲ್ಲಿದ್ದುಕೊಂಡು ದೇಶಸೇವೆ ಸಲ್ಲಿಸಿರುತ್ತಾರೆ. ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿ ದೇಹದ ಅಂಗಾಂಗಗಳನ್ನು ಕಳೆದುಕೊಂಡವರಲ್ಲಿ ಇವರು ಒಬ್ಬರು. ಇದೀಗ 100ನೇ ವಯಸ್ಸಿನಲ್ಲಿ ಪತ್ನಿ ಮಕ್ಕಳು ಹಾಗೂ ಕುಟುಂಬಿಕರೊಂದಿಗೆ ಅತ್ಯಂತ ಕ್ರೀಯಾಶೀಲರಾಗಿ, ಕುಟುಂಬದ ಹಿರಿಯರಾಗಿ, ಸಮಾಜಕ್ಕೆ ಉನ್ನತಸ್ತರದ ವ್ಯಕ್ತಿಯಾಗಿ ಆದರ್ಶಪ್ರಾಯರಾಗಿರುವ ಇವರು ಸನ್ಮಾನವನ್ನು ಸ್ವೀಕಲಿಸಿದ್ದಾರೆ. ಮಂಗಳೂರು ಕರಾವಳಿ ಸಾಂಸ್ಕøತಿಕ ಪರಿಷತ್ ಇದರ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರುಗಳಾದ ಚಂದ್ರಹಾಸ್ ಉಚ್ಚಿಲ್, ರವೀಂದ್ರ ರೈ ಉಳಿದೊಟ್ಟು, ಜಯರಾಮ್ ಶೆಟ್ಟಿ, ಕ್ಯಾಪ್ಟನ್ ಬ್ರಿಜೇಶ್…

Read More

ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಹಾಗೂ ಖಾಸಗಿ ಸಂಸ್ಥೆಗಳಿಂದ ನೀಡುವ ವಿದ್ಯಾರ್ಥಿ ವೇತನದ ಅರ್ಜಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಆರೋಗ್ಯ ಕಾರ್ಡು ವಿತರಿಸುವ ಮೂಲಕ ದಯಾಮಾತೆ  ಪಾನೀರು  ಚರ್ಚ್ ವಿನಲ್ಲಿ ಹೊಸ ಆಂದೋಲನ ರೂಪಿಸಲಾಗಿದೆ ಎಂದು ಕೆಥೋಲಿಕ್ ಸಭಾ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಹೇಳಿದ್ದಾರೆ. ಅವರು ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಪಾನೀರು ಘಟಕದ ವತಿಯಿಂದ ಭಾನುವಾರ ಪಾನೀರು ದಯಾಮಾತೆ ಚರ್ಚ್ ವಠಾರದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತದಾರರ ಪಟ್ಟಿಯಲ್ಲಿನ ಸೇರ್ಪಡೆಗೆ ನೋಂದಾವಣೆ ಆಂದೋಲನವನ್ನು ಮಾಡಲಾಗಿದೆ. ಈ ಮೂಲಕ 60 ವಿದ್ಯಾರ್ಥಿಗಳು ಈ ಬಾರಿಯ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಪಸಂಖ್ಯಾತ ಇಲಾಖೆ, ಜಿಂದಾಲ್, ರಿಲಾಯನ್ಸ್ ವತಿಯಿಂದ ನೀಡಲ್ಪಡುವ ವಿದ್ಯಾಥಿವೇತನದ ಅರ್ಜಿಗಳನ್ನು ವಿತರಿಸಲಾಗಿದೆ. ಇದರ ಜತೆಗೆ ವಿವಿಧ ಆಸ್ಪತ್ರೆಗಳ ಆರೋಗ್ಯ ಕಾರ್ಡನ್ನು ವಿತರಿಸಲಾಗಿದ್ದು, ಈ ಮೂಲಕ ಚರ್ಚ್ ವ್ಯಾಪ್ತಿಯ ಜನರಿಗೆ ಅನುಕೂಲವಾಗುವಂತೆ  ಚರ್ಚ್ ವತಿಯಿಂದ ಹೊಸ ಆಂದೋಲನವನ್ನು ರೂಪಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚ್ ಧರ್ಮಗುರು ಫಾ.ಡೆನಿಸ್…

Read More