ಉಳ್ಳಾಲ್ನ್ಯೂಸ್ ನೆಟ್ವರ್ಕ್ ಉಳ್ಳಾಲ: ದರ್ಗಾ ಸಮಿತಿಯಲ್ಲಿ 38 ವರ್ಷ ಸುದೀರ್ಘ ಅವಧಿಗೆ ಸದಸ್ಯರಾಗಿದ್ದು, ಇತ್ತೀಚೆಗೆ ನಿಧನರಾದ ಬಾವಾ ಫಕೀರ್ ಸಾಹೇಬ ಅವರ ಅನುಸ್ಮರಣಾ ಕಾರ್ಯಕ್ರಮ ಮೇಲಂಗಡಿ ಹೊಸಪಳ್ಳಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, 30 ವರ್ಷ ಮೇಲಂಗಡಿ ಹೊಸಪಳ್ಳಿ ಮುಹ್ಯಿದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ, 38 ವರ್ಷ ದರ್ಗಾ ಸಮಿತಿ ಸದಸ್ಯರಾಗಿ ಸುದೀರ್ಘ ಅವಧಿಯಲ್ಲಿ ಬಾವಾ ಫಕೀರ್ ಅವರು ಮಸೀದಿ ಅಭಿವೃದ್ಧಿಗೆ ಸಲ್ಲಿಸಿದ ಸೇವೆ ಅನನ್ಯ, ಇದರ ಜೊತೆಗೆ ಸಾಮಾಜಿಕ ಕಳಕಳಿಯ ಹೊಂದಿದ್ದ ಅವರು ಎಲ್ಲರಿಗೂ ಆದರ್ಶರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಮೇಲಂಗಡಿ ಜುಮಾ ಮಸೀದಿಯ ಅಧ್ಯಕ್ಷ ಫಾರೂಕ್ ಉಳ್ಳಾಲ್ ಮಾತನಾಡಿ, ಮರಣ ಹೊಂದಿದ ದಿನವೂ ಬಾವಾ ಫಕೀರ್ ಅವರು ಊರಿನವರಿಗಾಗಿ ಕೆಲಸ ನಿರ್ವಹಿಸಿದ್ದಾರೆಯೇ ಹೊರತು ತನ್ನ ಚಾಕರಿ ಮಾಡುವಂತಹ ಅವಕಾಶ ಕಲ್ಪಿಸದೇ ಸುಖ ಮರಣ ಕಂಡಿದ್ದಾರೆ ಎಂದು ತಿಳಿಸಿದರು. ಮೇಲಂಗಡಿ ಹೊಸಪಳ್ಳಿ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾಹಿ…
Author: UllalaVani
ಉಳ್ಳಾಲ್ನ್ಯೂಸ್ ನೆಟ್ವರ್ಕ್ ಉಳ್ಳಾಲ: ತುಳು ಧಾರಾವಾಹಿ ನಿರ್ಮಾಪಕ ಕುಂಪಲ ಮೂರುಕಟ್ಟೆ ನಿವಾಸಿ ಪ್ರವೀಣ್ ಕುಮಾರ್ ಬಿ (50) ಮನೆಯಲ್ಲಿ ನೇಣು ಬಿಗಿದು ಬುಧವಾರ ತಡ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಮೂವರು ಪುತ್ರರು ಹಾಗೂ ಪತ್ನಿ ಇದ್ದ ಸಂದರ್ಭದಲ್ಲೇ ಕೋಣೆಯೊಳಗೆ ಬಾಗಿಲು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ಹೊತ್ತಾದರೂ ಕೋಣೆಯಿಂದ ವಾಪಸ್ಸಾಗದೇ ಇದ್ದಾಗ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಪ್ರವೀಣ್ ಇವರು ಕಳೆದ ಒಂದು ವರ್ಷದಿಂದ ಚಿತ್ರೀಕರಣಗೊಳ್ಳುತ್ತಿದ್ದ ‘ದೇವೆರೆನ ದಯೆ ‘ ಎಂಬ ತುಳು ದಾರವಾಹಿಯನ್ನು ನಿರ್ಮಾಣ ಹಾಗೂ ನಿರ್ದೇಶಿಸುತ್ತಿದ್ದರು. ಹಣದ ಅಡಚಣೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಯೆನೆಪೋಯ: ದೇಶದಲ್ಲಿ ಮೊದಲ ಬಾರಿಗೆ ದಂತ ಭಾಗ್ಯ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದರ ಸದುಪಯೋಗವನ್ನು 10,000 ಮಂದಿ ಈಗಾಗಲೇ ಪಡೆದುಕೊಂಡಿದ್ದು ಇದು ದಂತ ವೈದ್ಯಕೀಯ ಕ್ಷೇತ್ರಕ್ಕೆ ಉತ್ತಮ ಸಂದೇಶವಾಗಿದೆ ಎಂದು ರಾಜ್ಯ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಸಾರ್ವಜನಿಕ ದಂತ ಚಿಕಿತ್ಸಾ ವಿಭಾಗ, ದೇರಳಕಟ್ಟೆ ಯೆನೆಪೋಯ ದಂತ ವೈದ್ಯಕೀಯ ಕಾಲೇಜು ಇದರ ವತಿಯಿಂದ ಯೆನೆಪೋಯ ವೈದ್ಯಕೀಯ ಕಾಲೇಜಿನ ಎಂಡ್ಯೂರೆನ್ಸ್ ಸಭಾಂಗಣದಲ್ಲಿ ನಡೆದ ಆನ್ ಆಪ್ಡೆಟ್ ಆನ್ ಓರಲ್ ಹೆಲ್ತ್ ಫಾಲಿಸಿ(ಕರ್ನಾಟಕ ರಾಜ್ಯ ಬಾಯಿ ಆರೋಗ್ಯದ ನೀತಿ ನಿಯಮಾವಳಿಯನ್ನು ನವೀಕರಣ) ಎಂಬ ವಿಷಯದ ಕುರಿತ ನಡೆದ ಒಂದು ದಿನದ ವಿಚಾರ ಸಂಕೀರ್ಣದ ಸಮಾರೋಪ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಬಾಯಿ ಆರೋಗ್ಯ ನೀತಿಯಡಿ ದಂತ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದರ ಭಾಗವಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರ್ವೆ ಕೈಗೊಂಡಾಗ ವೈದ್ಯರ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಹೈನುಗಾರಿಕೆ ನಡೆಸುವವರಲ್ಲದ ಆ ಪ್ರದೇಶದಲ್ಲಿ ಕೆಲವು ಸಮಯಗಳಿಂದ ಹಲವು ವರ್ಷಗಳಿಂದ ಮಕ್ಕಳಂತೆ ಸುಮಾರು ದನಗಳನ್ನು ಸಾಕುತ್ತಾ ಬಂದ ಬಾರ್ ಮಾಲೀಕರ ಮೇಯಲು ಹೋದ ಮೂರು ಹಸುಗಳನ್ನು ಕಳ್ಳರು ಕಳವುಗೈದು ಪರಾರಿಯಾದ ಘಟನೆ ಕುಂಪಲದಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ ಮೇಯಲೆಂದು ಬಿಟ್ಟಿದ್ದ ದನಗಳಲ್ಲಿ ದುರ್ಗಿ, ಕಪಿಲ ಹಾಗೂ ಬಾಲಕ್ಕ ಹೆಸರಿನ ಗರ್ಭಿಣಿ ಹಸುಗಳು ಕಾಣೆಯಾಗಿದ್ದವು ಕುಂಪಲದ ಕೇಸರಿ ಮಿತ್ರ ಮಂಡಳಿ ಎದುರುಗಡೆ ತಡರಾತ್ರಿವರೆಗೆ ಕುಳಿತಿದ್ದ ಜಾನುವಾರುಗಳನ್ನು ಬುಧವಾರ ಬೆಳಗ್ಗಿನ ಜಾವ ಕಳವುಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಬಂದಿರುವ ಆಗಂತುಕರು ಕೃತ್ಯವನ್ನು ಎಸಗಿದ್ದಾರೆ. ಕಾರು ತೆರಳುವ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸ್ಪಷ್ಟವಾಗಿರದ ಕಾರಣ ಪೊಲೀಸರ ತನಿಖೆಗೂ ತೊಂದರೆಯಾಗಿದೆ.ತಿನ್ನುವವರು ಜಾನುವಾರುಗಳನ್ನು ಸಾಕಿ ತಿನ್ನಲಿ, ಅದರ ನೋವು ತಿಳಿಯುತ್ತದೆ. ಅದನ್ನು ಬಿಟ್ಟು ಮಕ್ಕಳಂತೆ ಸಾಕಿ ಸಲಹುವ ಜಾನುವಾರುಗಳನ್ನು ಕ್ರೂರ ಮನಸ್ಸಿನವರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಾರ್ ಮಾಲೀಕರ ಜಾನುವಾರು ಪ್ರೀತಿ : ಮೂಲತಃ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ನಗರದ ವಿದ್ಯಾರ್ಥಿನಿಯರೆಂದರೆ ಉಡುಗೆ ತೊಡುಗೆಗೆ ಹೆಚ್ಚಿನ ಗಮನ ಕೊಡುವವರು, ಚಪ್ಪಲಿಯಿಂದ ಹಿಡಿದು ಕೊಡೆಯವರೆಗೆ ಒಂದೇ ಬಣ್ಣದ ಮ್ಯಾಚಿಂಗ್ ಉಡುಗೆಯನ್ನು ತೊಟ್ಟು ಹೋಗುವವರು, ತಿನ್ನುವ ಅನ್ನ ಯಾವ ರೀತಿಯಲ್ಲಿ ಆಗುತ್ತದೋ ಎಂದು ಪ್ರಶ್ನೆ ಮುಂದಿಟ್ಟರೂ ಹೇಳಲು ಸಾಧ್ಯವಾಗದ ವಿದ್ಯಾರ್ಥಿನಿಯರೇ ಹೆಚ್ಚು, ಆದರೆ ಇದನ್ನು ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿಯರು ಅಲ್ಲಗಳೆದಿದ್ದಾರೆ. 40ರಷ್ಟು ವಿದ್ಯಾರ್ಥಿನಿಯರು ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿನ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯ ಮಾಡುವ ಮೂಲಕ ಗ್ರಾಮಸ್ಥರ ಗಮನ ಸೆಳೆದರು. ಅಂಬ್ಲಮೊಗರು ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಆಚಾರ್ಯ ಹಾಗೂ ಪುತ್ತುಬಾವ ಎಂಬವರ ಹಡಿಲು ಬಿದ್ದ ಗದ್ದೆಯಲ್ಲಿ ಈ ಕಾರ್ಯವನ್ನು ವಿದ್ಯಾರ್ಥಿನಿಯರು ಕೈಗೊಂಡರು. ಸಮುದಾಯದತ್ತ ಆಗ್ನೇಸ್ ಎಂಬ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರು ಪ್ರತಿ ಶನಿವಾರ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಶನಿವಾರ ದಿನ 15 ವಿದ್ಯಾರ್ಥಿನಿಯರಲ್ಲಿ 40 ರಂತೆ ನಾಲ್ಕು ತಂಡಗಳನ್ನಾಗಿ ವಿಂಗಡಿಸಿ ಸೋಮೇಶ್ವರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ನಾರ್ಯಗುತ್ತು ಜಯರಾಮ ಕೊಂಡೆ(75) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಇವರು ಕಣಂತೂರು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ಆಡಳಿತ ಮೊಕ್ತೇಸರರಾದ ನಾರ್ಯಗುತ್ತು ಯಜಮಾನ್ ಎಂ.ತಿಮ್ಮಪ್ಪ ಕೊಂಡೆ ಅವರ ಕಿರಿಯ ಸಹೋದರರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ನಾರ್ಯಗುತ್ತು ಕುಟುಂಬಿಕರ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ,ಕೃಷ್ಣ ರೈ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕಿನ್ಯ: ಗ್ರಾಮ ಪಂಚಾಯತ್ 2017ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಉಕ್ಕುಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಾಲಿನಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. 2,500ರಷ್ಟು ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಕೇವಲ 12 ಸದಸ್ಯರಿಂದ ಅಭಿವೃದ್ಧಿ ಕಾರ್ಯಮಾಡಲು ಸಾದ್ಯವಿಲ್ಲ,ಗ್ರಾಮದ ಅಭಿವೃದ್ಧಿಗೆ ಸರ್ವ ಗ್ರಾಮಸ್ಥರ ಸಹಾಯ ಸಹಕಾರ ಬೇಕೆಂದು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಅಭಿಪ್ರಾಯ ಪಟ್ಟರು. ಮೆಸ್ಕಾಂ ಅಧಿಕಾರಿಗಳು ಗ್ರಾಮಸ್ಥರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಸಾರ್ವಜನಿಕರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು, ಹಾಗೂ ಕಿನ್ಯಾ ಗ್ರಾಮವು ಕ್ರೀಡೆಯಲ್ಲಿ ಹೆಸರುವಾಸಿಯಾಗಿದ್ದು ಈ ನಿಟ್ಟಿನಲ್ಲಿ ಉತ್ತಮ ಕ್ರೀಡಾಂಗಣ ಬೇಕೆಂದು ಗ್ರಾಮಸ್ಥರು ತಿಳಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಬಾನು,ನೋಡೆಲ್ ಅಧಿಕಾರಿಯಾಗಿ ಮಂಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ, ಕಿನ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯಾ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಸುರೇಖಾ, ಕಿನ್ಯಾ ಗ್ರಾಮ ಕರಣಿಕ ಎನ್.ಜಿ. ಪ್ರಸಾದ್, ಆಹಾರ ನಿರೀಕ್ಷಕರು ರಾಜಶ್ರೀ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಟಿಪ್ಪರ್ ಲಾರಿ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಎಂಬಲ್ಲಿ ಸಂಭವಿಸಿದೆ. ಕೇರಳದಿಂದ ಮಂಗಳೂರು ಕಡೆ ತೆರಳುತ್ತಿದ್ದ ಕಾರು ಎದುರಿನಲ್ಲಿ ಸಮುದ್ರ ತೀರಕ್ಕೆ ಕಲ್ಲು ಹಾಕುವ ಕಾಮಾಗಾರಿ ನಿರತ ಲಾರಿ ಉಚ್ಚಿಲ ಸಮೀಪ ತಿರುಗುತ್ತಿದ್ದಂತೆ ಹಿಂಬದಿಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ : ಜೀವನದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಂಡಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಆತ್ಮವಿಶ್ವಾಸದೊಂದಿಗೆ ಶಿಕ್ಷಣ ಮುಂದುವರೆಸಿದರೆ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಉಳ್ಳಾಲ ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಆಶ್ರಯದಲ್ಲಿ ಶೈಕ್ಷಣಿಕ ಪ್ರೋತ್ಸಹದ ಅಂಗವಾಗಿ 400 ವಿದ್ಯಾರ್ಥಿಗಳಿಗೆ 3.5 ಲಕ್ಷ ರೂ. ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಸಮಯ. ಈ ಸಂದರ್ಭದಲ್ಲಿ ಯುವ ಸಮುದಾಯ ತಮ್ಮ ತಂದೆ ತಾಯಿ, ನೆರೆಕರೆಯವರು ಮತ್ತು ಸ್ನೇಹಿತರ ನಡವಳಿಕೆಯಿಂದ ಪ್ರೇರಿತರಾಗುತ್ತಾರೆ. ಹೆತ್ತವರು ಇಂತಹ ಸಂದರ್ಭದಲ್ಲಿ ಮಕ್ಕಳು ದಾರಿ ತಪ್ಪದಂತೆ ಮುತವರ್ಜಿ ವಹಿಸಿ ಕೊಳ್ಳಬೇಕು. ಉತ್ತಮ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿಯ ಸಾರಥ್ಯದಲ್ಲಿ ಜಿಲ್ಲೆಯ 10 ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಅಭಿಯಾನದ ಪ್ರಯುಕ್ತ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭವು ತಾಜುಲ್ ಉಲಮಾ ಸುನ್ನೀ ಸೆಂಟರ್ ದೇರಳಕಟ್ಟೆಯಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಆಹ್ಮದ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್.ವೈ.ಎಸ್ ದೇರಳಕಟ್ಟೆ ಸೆಂಟರ್ ಅಧ್ಯಕ್ಷ ಏಷ್ಯನ್ ಬಾವಾ ಹಾಜಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಫದ್ಮುಂಜ,ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ , ಎಸ್ಸೆಸ್ಸೆಫ್ ರಾಜ್ಯ ಮುಂಖಂಡ ಅಲ್ತಾಪ್ ಕುಂಪಲ, ಎಸ್ಸೆಸ್ಸೆಫ್ ಬ್ಲಡ್ ಬ್ಯಾಂಕ್ ನ ಕರೀಂ ಕದ್ಕಾರ್,ಯೂಸುಫ್ ರಝ್ವಿ ದೇರಳಕಟ್ಟೆ,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ಮುಡಿಪು,ಕಾರ್ಯದರ್ಶಿ ಸಯ್ಯದ್ ಖುಬೈಬ್ ತಂಙಳ್, ಸದಸ್ಯರಾದ ತೌಸೀಫ್ ಸ ಅದಿ ಹರೇಕಳ, ಹಮೀದ್ ನಾಟೆಕಲ್ ಮೊದಲಾದವರು ಉಪಸ್ಥಿತರಿದ್ದರು. ಡಿವಿಷನ್…

