UN NETWORKS ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಇಂದ್ರಜಿತು ಕಾಳಗ ಹಾಗೂ ಯಕ್ಷಮಂಗಳ ಹಿರಿಯ ವಿದ್ಯಾರ್ಥಿಗಳಿಂದ ತರಣಿಸೇನ ಯಕ್ಷಗಾನ ಪ್ರದರ್ಶನವು ಬಿಕರ್ಣಕಟ್ಟೆಯಲ್ಲಿ ಭಾನುವಾರ ನಡೆಯಿತು. ಬಿಕರ್ಣಕಟ್ಟೆಯಲ್ಲಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಉಪನ್ಯಾಸಕ ಸದಾಶಿವ ಶೆಟ್ಟಿಗಾರ್ ಕಿನ್ನಿಗೋಳಿ ಅವರು ನಿರ್ದೇಶನ ನೀಡಿದ್ದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಪರವಾಗಿ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆ ಅವರನ್ನು ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಗೌರವಿಸಲಾಯಿತು.
Author: UllalaVani
UN NETWORKS ತೊಕ್ಕೊಟ್ಟು : ಲಾಡ್ಜ್ ನಲ್ಲಿ ತಂಗಿದ್ದ ವೃದ್ಧರೊಬ್ಬರು ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟಿನಲ್ಲಿ ಮಂಗಳವಾರ ನಡೆದಿದ್ದು ಮೃತರ ಕುರಿತಾಗಿ ಎರಡು ದಿನಗಳ ಹಿಂದೆ ಸುರತ್ಕಲ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಮೃತರನ್ನು ಸುರತ್ಕಲ್ ಬಳಿಯ ಕೃಷ್ಣಾಪುರ ನಿವಾಸಿ ಶೇಖರ್(71) ಎಂದು ಗುರುತಿಸಲಾಗಿದ್ದು ಪೊಲೀಸರು ನೀಡಿದ ಪ್ರಥಮ ಮಾಹಿತಿಯಂತೆ ಮೃತರು ಎರಡು ದಿನಗಳ ಹಿಂದೆ ತೊಕ್ಕೊಟ್ಟಿನ ವೃಂದಾವನ ಹೋಟೆಲ್ ನ ಉಡುಪಿ ಹೋಂನಲ್ಲಿ ಬಾಡಿಗೆಗೆ ಕೋಣೆ ಪಡೆದಿದ್ದರು. ಸಾವನ್ನಪ್ಪಿದ ಕುರಿತು ಮಂಗಳವಾರ ಸಂಜೆ ಸಿಕ್ಕಿದ ಮಾಹಿತಿ ಮೇರೆಗೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆಗೈದ ಕುರುಹುಗಳು ಕಾಣಿಸುತ್ತಿಲ್ಲ ಎನ್ನಲಾಗಿದ್ದು ಹೃದಯಾಘಾತ ಶಂಕೆ ವ್ಯಕ್ತಪಡಿಸಿದ್ದಾರೆ. ಶೇಖರ್ ಅವರ ಸೊಸೆ ಎರಡು ದಿನಗಳ ಹಿಂದೆ ಸುರತ್ಕಲ್ ಠಾಣೆಯಲ್ಲಿ ನೀಡಿದ ನಾಪತ್ತೆ ದೂರಿನಂತೆ ಮೃತರು ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದರು.
UN NETWORKS ಉಳ್ಳಾಲ: ತೊಕ್ಕೊಟ್ಟು ಬಳಿ ಸ್ಕೂಟರೊಂದಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಪವಾಡಸದೃಶ್ಯವಾಗಿ ಪಾರಾದ ಘಟನೆ ಮಂಗಳವಾರ ನಡೆದಿದ್ದು, ಘಟನೆ ರಾಜಿಯಲ್ಲಿ ಇತ್ಯರ್ಥಗೊಂಡಿದ್ದರಿಂದ ಪ್ರಕರಣ ದಾಖಲಾಗಿಲ್ಲ. ಪಜೀರು ಪಾನೆಲ ನಿವಾಸಿ ಶಾಹಿದ್ ಪವಾಡಸದೃಶ್ಯವಾಗಿ ಪಾರಾದವರು. ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕನ ಆರೋಗ್ಯ ವಿಚಾರಿಸಿ ಕೊಣಾಜೆ ಕಡೆ ಸ್ಕೂಟರ್ನಲ್ಲಿ ಸಾಗುತ್ತಿದ್ದಾಗ ತೊಕ್ಕೊಟ್ಟು ಬಸ್ ನಿಲ್ದಾಣದಕ್ಕೆ ಬರುವ ಕೊಣಾಜೆ ರಸ್ತೆಯಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಮೊಣಕಾಲಿನ ಗಾಯದೊಂದಿಗೆ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡ ಕಾರಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
UN NETWORKS ಪಾವೂರು : ಹಕ್ಕುಪತ್ರ ನೀಡುವ ಐತಿಹಾಸಿಕ ಕಾನೂನು ಜಾರಿಗೊಳಿಸಿದ ರಾಜ್ಯ ಸರಕಾರದ ಜನಪರ ಕಾಳಜಿಯಿಂದಾಗಿ 15 ವರ್ಷಗಳಿಂದ ಆತಂಕದಲ್ಲಿ ಜೀವನ ನಡೆಸುತ್ತಿದ್ದ ಗ್ರಾಮೀಣ ಭಾಗದ ಜನತೆ ಧೈರ್ಯದಿಂದ ಬಾಳುವಂತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಪಾವೂರು ಗ್ರಾಮ ಪಂಚಾಯತ್ ಇಲ್ಲಿ ನಿರ್ಮಾಣವಾದ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ, ಹಕ್ಕು ಪತ್ರ ವಿತರಣೆ, ಸರಕಾರದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದಿನ ಮೂರು ಸರಕಾರ ಆಡಳಿತ ನಡೆಸುವ ಸಂದರ್ಭ ಅಧಿವೇಶನದಲ್ಲಿ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಿದ್ದೆ. ಆದರೆ ಅಧಿಕಾರ ಹಂಚಿಕೆಯಲ್ಲೇ ಸರಕಾರ ಕಾಲ ಕಳೆಯುವ ನಡುವೆ ಜನರ ಕುರಿತು ಯೋಜನೆಗಳ ಅರಿವು ಅವರಿಗಿರಲಿಲ್ಲ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಅನ್ನಭಾಗ್ಯ, ಆಶ್ರಯಯೋಜನೆ ಸಾಲ ಮನ್ನಾ, ಭಾಗ್ಯಲಕ್ಷ್ಮೀ ಯೋಜನೆ ಹಾಗೂ ಕ್ಷೀರಭಾಗ್ಯ ಯೋಜನೆಗಳನ್ನು ಪ್ರಥಮವಾಗಿ ಜಾರಿಗೊಳಿಸಿತ್ತು. ತದನಂತರ…
UN NETWORKS ಗೋರಿಗುಡ್ಡ: “ರಾಷ್ಟ್ರೀಯ ದಂತ ವೈದ್ಯರ ದಿನ ಮಾರ್ಚ್ 6” ಇದರ ಅಂಗವಾಗಿ ನಗರದ ಗೋರಿಗುಡ್ಡದಲ್ಲಿರುವ ಕಿಟ್ಟೆಲ್ ಮೆಮೋರಿಯಲ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಡಾ|| ಮುರಲೀ ಮೋಹನ್ ಚೂಂತಾರು ಭಾಗವಹಿಸಿದ್ದರು. ಮಕ್ಕಳಿಗೆ ಹಲ್ಲಿನ ಆರೋಗ್ಯದ ರಕ್ಷಣೆಯ ಬಗ್ಗೆ, ಹಲ್ಲುಜ್ಜುವ ವಿಧಾನದ ಬಗ್ಗೆ ಮತ್ತು ದಂತ ಚೂರ್ಣದ ಬಗೆಗಿನ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಇದರ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಡಾ|| ಚೂಂತಾರು ಅವರು ಮಾತನಾಡುತ್ತಾ ಹಾಲು ಹಲ್ಲಿಗೆ ಶಾಶ್ವತ ಹಲ್ಲಿನಷ್ಟೇ ಪ್ರಾಮುಖ್ಯತೆ ನೀಡಬೇಕು. ಏನಿದ್ದರೂ ಬಿದ್ದು ಹೋಗುವ ಹಲ್ಲು ಎಂದು ಅಸಡ್ಡೆ ತೋರಬಾರದು ಎಂದು ಮಕ್ಕಳಿಗೆ ಮತ್ತು ಹೆತ್ತವರಿಗೆ ಕಿವಿಮಾತು ಹೇಳಿದರು. ದಂತ ಆರೋಗ್ಯ ಚೆನ್ನಾಗಿದ್ದಲ್ಲಿ ತಿಂದ ಆಹಾರ ಚೆನ್ನಾಗಿ ಜೀರ್ಣವಾಗಿ, ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಕರೆ ನೀಡಿದರು. ಶಾಲಾ ಕನ್ನಡ ಶಿಕ್ಷಕರಾದ ಕೃಷ್ಣ ನೀರಮೂಲೆ…
UN NETWORKS ಉಳ್ಳಾಲ: ಆರೋಗ್ಯ ಕ್ಷೇತ್ರ ಕ್ರೀಡೆಯಲ್ಲಿ ಹೆಚ್ಚಿನ ಪಾತ್ರವನ್ನು ವಹಿಸುತ್ತದೆ. ರೋಗಗಳನ್ನು ದೂರವಾಗಿಸಲು ವೈದ್ಯರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಲಹೆಯನ್ನು ನೀಡುತ್ತಾ ಬರಬೇಕಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಸಹ ಕುಲಾಧಿಪತಿ ವಿಶಾಲ್ ಹೆಗ್ಡೆ ಹೇಳಿದರು. ದಕ್ಷಿಣ ವಲಯ ಮಟ್ಟದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಅಂತರಕಾಲೇಜು ಕ್ರೀಡಾಕೂಟ ನಿಟ್ಟೆ ಅಕೊಲೇಡ್ಸ್ -2018 ಗೆ ಕ್ಷೇಮ ಆಡಿಟೋರಿಯಂನಲ್ಲಿ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ಅನ್ನುವುದು ವ್ಯಾವಹಾರಿಕವಾಗಿ ಮನರಂಜನೆಯಾಗಿ ವಿಶ್ವದಾದ್ಯಂತ ಬೆಳೆಯುತ್ತಿದೆ. ಭಾರತದಲ್ಲಿ ಎಸ್ ಎಸ್ ಎಲ್ ಸಿ ನಂತರ ವಿದ್ಯಾರ್ಥಿಗಳು ಕ್ರೀಡೆಯಲ್ಲಿನ ಒಲವನ್ನೇ ದೂರ ಮಾಡುತ್ತಾರೆ. ಹೆತ್ತವರ ಒತ್ತಾಯಕ್ಕಾಗಿ ಕ್ರೀಡೆಯಿಂದ ಮಕ್ಕಳು ದೂರ ಉಳಿಯುವಂತಾಗುತ್ತದೆ. ಅದರ ಪರಿಣಾಮವನ್ನು 40ರ ಹರೆಯದ ಬಳಿಕ ಅನುಭವಿಸಬೇಕಾಗುತ್ತದೆ, 20-40ರ ಹರೆಯದೊಳಗೆ ಕ್ರೀಡೆಯಲ್ಲಿ , ವ್ಯಾಯಾಮದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಲ್ಲಿ ಜೀವನದಲ್ಲಿ ಉತ್ಸಾಹದೊಂದಿಗೆ ಒತ್ತಡದ ಜೀವನಗಳಿಗೆ ಪರಿಹಾರವನ್ನು ಕಾಣಲು ಸಾಧ್ಯ. ಇದರಿಂದ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯ ಎಂದರು. ನಿಟ್ಟೆ ವಿ.ವಿ ಕುಲಸಚಿವೆ ಅಲ್ಕಾ ಕುಲಕರ್ಣಿ …
UN NETWORKS ಮಂಗಳೂರು : ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಿನ್ಯ ಎಸ್ವೈಎಸ್, ಎಸ್ಕೆಎಸ್ಎಸ್ಎಫ್ ಕಿನ್ಯ ಶಾಖೆ ಇದರ ವತಿಯಿಂದ ಕಿನ್ಯ ಸಿ. ಎಚ್. ನಗರದಲ್ಲಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯಿದ್ ಬಾತಿಷ್ ತಂಙಳ್ ಉದ್ಘಾಟಿಸಿದರು. ಸಯ್ಯಿದ್ ಅಮೀರ್ ತಂಙಳ್ ಮಜ್ಲಿಸುನ್ನೂರ್ಗೆ ನೇತೃತ್ವ ನೀಡಲಿದರು. ಸಯ್ಯಿದ್ ಬಾಫಖಿ ತಂಙಳ್ ಕೇರಳ ನವೀಕರಣ ಕಟ್ಟಡ ಉದ್ಘಾಟನೆ ಹಾಗೂ ದುಆ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಮೊದಲಿಗೆ ಕಿನ್ಯ ಕೇಂದ್ರ ಮಸೀದಿ ಮುದರ್ರಿಸರಾದ ಅಬ್ದುಲ್ ಫತ್ತಾಹ್ ಫೈಝಿ ಕಿನ್ಯ ದರ್ಗಾ ಝಿಯಾರತ್ಗೆ ನೇತೃತ್ವ ನೀಡಿದರು. ಧ್ವಜಾರೋಹಣವನ್ನು ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಿನ್ಯ ಇದರ ಕೋಶಾಧಿಕಾರಿ ಕೆ.ಐ. ಶೇಖಬ್ಬ ಹಾಜಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರೀಯ ಎಸ್ವೈಎಸ್ ಕಾರ್ಯದರ್ಶಿಯಾದ ಹಾಜಿ ಅಬ್ದುಸಮದ್ ಪೂಕೋಟೂರು, ಖಾಸಿಂ ದಾರಿಮಿ, ಅಬ್ದುರ್ರಹ್ಮಾನ್ ದಾರಿಮಿ ತಬೂಕ್, ಹಾರೂನ್ ಅಹ್ಸನಿ, ಭಾಷಣ ಮಾಡಿದರು. ಸಮಾರಂಭದಲ್ಲಿ ಇಬ್ರಾಹಿಂ ಬಾಖವಿ ಕೆ.ಸಿ. ರೋಡ್, ಶರೀಫ್ ಅರ್ಶದಿ ದೇರಳಕಟ್ಟೆ, ಅಲೀ ದಾರಿಮಿ,…
UN NETWORKS ಉಳ್ಳಾಲ: ವ್ಯಕ್ತಿಯೊಬ್ಬ ಜೀವಿತ ಕಾಲದಲ್ಲಿ ಹಾಗೆಯೇ ಮರಣಾ ನಂತರವೂ ಇತರರಿಗೆ ಸಹಾಯ ಮಾಡುವ ಮೂಲಕ ನಮ್ಮ ಹೆಸರು ಶಾಶ್ವತವಾಗಿಸಲು ಬಹಳಷ್ಟು ಮಾರ್ಗಗಳಿದೆ. ಆ ನಿಟ್ಟಿನಲ್ಲಿ ಸತ್ತ ನಂತರ ಮಾಡುವ ಅಂಗಾಗ ದಾನ ಶ್ರೇಷ್ಠ ಕಾರ್ಯ ಎಂದು ದೇರಳಕಟ್ಟೆಯ ಯೆನೆಪೋಯ ವಿವಿ ಕುಲಾಧಿಪತಿ ವೈ. ಅಬ್ದುಲ್ಲಾ ಕುಂಞ ಅಭಿಪ್ರಾಯಪಟ್ಟರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಿಡ್ನಿ ದಿನಾಚರಣೆ ಪ್ರಯುಕ್ತ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಸೋಮವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯೆನೆಪೋಯ ವಿವಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ಕೊಡಲಾಗಿದೆ. ಹಾಗೆಯೇ ಅಂಗಾಗ ದಾನ ಕಾರ್ಯಗಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಕಳೆದ ವರ್ಷ ಐವತ್ತು ಮಂದಿ ಅಂಗಾಗ ದಾನಕ್ಕೆ ನೋಂದಣಿ ಮಾಡಿಸಿದ್ದಾರೆ ಎಂದು ನುಡಿದರು. ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಹಕ್ಕು ಯಾರಿಗೂ ಇಲ್ಲ. ತಮ್ಮ ಪ್ರತಿಭೆಗೆ ಅವಕಾಶ ಸಿಕ್ಕಾಗ ಅದನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಕರ್ತವ್ಯ ನಿಷ್ಠೆ ಮೆರೆಯುತ್ತಾ ಕೊಟ್ಟ ಜವಬ್ದಾರಿಯ ಗೌರವ ಹೆಚ್ಚಿಸಿದ್ದಾರೆ…
UN NETWORKS ಉಳ್ಳಾಲ: ಸಾಮಾಜಿಕ ಚಟುವಟಿಕೆ ಸಾಂಘಿಕವಾಗಿ ನಡೆಸಿದಾಗ ಯಶಸ್ವಿಯಾಗಲು ಸಾಧ್ಯ. ಇಂತಹ ಕಾರ್ಯದಲ್ಲಿ ಎಲ್ಲರ ಸಲಹೆ ಸಹಕಾರವಿದ್ದರೆ ಸಾಮಾಜಿಕ ಚಟುವಟಿಕೆಗಳಿಗೆ ಇನ್ನಷ್ಟು ಬಲ ಬರುತ್ತದೆ ಎಂದು ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎ ಉಚ್ಚಿಲ್ ಅಭಿಪ್ರಾಯಪಟ್ಟರು. ಸೋಮೇಶ್ವರ ಪಶ್ಚಿಮ್ ರಿಹಾಬ್ನಲ್ಲಿ ಹೊಂಬೆಳಕು ಕೈ ಪಿಡಿ ಬಿಡುಗಡೆ ಹಾಗೂ ಗೌರವ ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಗನ್ನಾಥ್, ನಿವೃತ್ತ ಮುಖ್ಯೋಪಾಧ್ಯಾಯರು, ಶಿಕ್ಷಕ ವೃತ್ತಿಯೆಂಬುದು ಬಹಳ ಅತ್ಯನ್ನುತ ಸ್ಥಾನ ಎಂದೇ ನನ್ನ ಭಾವನೆ. ನನ್ನ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಹುದ್ದೆಗಳಲ್ಲಿದ್ದಾರೆ. ಆದರೆ ಈ ರೀತಿಯ ಸಮಾಜಕ್ಕೆ ಉತ್ತಮ ಕೊಡುಗೆ ಸಲ್ಲಿಸುತ್ತಿರುವವರನ್ನು ಕಂಡಾಗ ಬಹಳ ಸಂತೋಷವಾಗುತ್ತದೆ. ಈ ಸಂಸ್ಥೆಯ ನಿರ್ದೇಶಕ ರೋಹಿತ್ ನನ್ನ ವಿದ್ಯಾರ್ಥಿ, ಅವರನ್ನು ಈ ಸ್ಥಾನದಲ್ಲಿ ನೋಡಲು ನನಗೆ ಹೆಮ್ಮೆಯೆನಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷರು, ಸಂಸ್ಥೆಯ ನಿರ್ದೇಶಕ ರೋಹಿತ್ ಸ್ಯಾಂಕ್ಟಸ್ ಮಾತನಾಡಿ, ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ವಿಸ್ತಾರದ ಕುರಿತು ತಿಳಿಸಿದರು. ಸೇವೆ…
UN NETWORKS ಉಳ್ಳಾಲ: ಸಚಿವ ಯು.ಟಿ. ಖಾದರ್ ಅವರ ಮಂಗಳೂರು ಕ್ಷೇತ್ರ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ನಂಬರ್ವನ್ ಆಗಿದ್ದು, ಇಚ್ಚಾ ಶಕ್ತಿಯಿದ್ದರೆ ಯಾವುದೇ ಕ್ಷೇತ್ರ ಅಭಿವೃದ್ಧಿಯನ್ನು ಮಾಡಬಹುದು ಎನ್ನುವುದನ್ನು ಸಚಿವ ಖಾದರ್ ತೋರಿಸಿಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ ಅಭಿಪ್ರಾಯಪಟ್ಟರು. ಉಳ್ಳಾಲ ನಗರಸಭೆಯ ಚೆಂಬುಗುಡ್ಡೆ ವಾರ್ಡ್ಗೆ ಐವನ್ ಡಿ’ಸೋಜ ಅವರ ಅಲ್ಪಸಂಖ್ಯಾತ ನಿಧಿಯಡಿ ಐದು ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಜನ ಸಾಮಾನ್ಯರ ಸೇವೆಗೆ ಜನಪ್ರತಿನಿಧಿಗಳು ಬದ್ಧರಾಗಬೇಕು. ಕಳೆದ ಮೂರು ವರ್ಷದ ವಿಧಾನ ಪರಿಷತ್ನ ಶಾಸಕ ಅವಧಿಯಲ್ಲಿ ಸುಮಾರು 25 ಕೋಟಿ ರೂ. ಅಧಿಕ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಿದ್ದೇನೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುತ್ತಾಗಿರುವ ಬಡರೋಗಿಗಳಿಗೆ ಮುಖ್ಯಮಂತ್ರಿ ನಿಧಿಯಿಂದ ಕೋಟ್ಯಾಂತರ ರೂ. ಸಹಾಯ ಹಸ್ತವನ್ನು ನೀಡಲು ಸಾಧ್ಯವಾಗಿದೆ. ಮುಖ್ಯವಾಗಿ ತಮ್ಮ ಸೇವಾ ಅವಧಿಯಲ್ಲಿ ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಿದರೆ ಯಾವುದೇ ಕೆಲಸ ಅಸಾಧ್ಯ ಎನ್ನುವುದು ಇಲ್ಲ ಎಂದರು. ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್…

