Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಕಳೆದ ಒಂದು ವರ್ಷದಿಂದ ಗೂಡಂಗಡಿಗೆ ವಿದ್ಯುತ್ ಸಂಪರ್ಕವಿಲ್ಲದೇ ವ್ಯಾಪಾರ ನಡೆಸಲು ಅಸಾಧ್ಯವಾಗದೇ ಈ ಬಗ್ಗೆ ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದ ನಿಟ್ಟಿನಲ್ಲಿ ಅಂಗವಿಕರೋರ್ವರು ತಮ್ಮ ಗೂಡಂಗಡಿಗೆ ನಿರಕ್ಷೇಪಣಾ ಪತ್ರವನ್ನು ನೀಡುವಂತೆ ಒತ್ತಾಯಿಸಿ ಉಳ್ಳಾಲ ನಗರಸಭೆಯ ಎದುರುಗಡೆ ಧರಣಿ ಸತ್ಯಾಗ್ರಹ ಕುಳಿತಿರುವ ಘಟನೆ ಸೋಮವಾರ ನಡೆದಿದೆ. ಮಹಮ್ಮದ್ ನೂರುಲ್ ಹಕ್ ಎಂಬ ಅಂಗವಿಕಲ ವ್ಯಕ್ತಿಯೋರ್ವರು ಉಳ್ಳಾಲ ಪೊಲೀಸ್ ಠಾಣೆಯ ಸಮೀಪ ಗೂಡಂಗಡಿ ಹೊಂದಿದ್ದು, ಅದಕೆ ವಿದ್ಯುತ್ ಸಂಪರ್ಕ ಒದಗಿಸಲು ನಗರಸಭೆಯಿಂದ ನಿರಾಕ್ಷೇಪಣಾ ಪತ್ರವನ್ನು ಕೇಳಿದ್ದರು. ಆದರೆ ಒಂದು ವರ್ಷದಿಂದ ರಸ್ತೆ ಅಗಲೀಕರಣ ಸಂದರ್ಭ ಅಂಗಡಿ ತೆರವುಗೊಳಿಸಲಾಗುವುದು ಅನ್ನುವ ಕಾರಣ ನೀಡಿ ಪತ್ರವನ್ನು ನೀಡಿರಲಿಲ್ಲ. ಮೂರು ವರ್ಷದ ಅಂಗವಿಕಲರಿಗಾಗಿ ನೀಡುವ ಶೇ.3ರ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ, ಸಿಗಬೇಕಾದ ರೂ. 6,000 ಸಹಾಯಧನ ಇನ್ನೂ ಕೈ ಸೇರಿಲ್ಲ. ತನ್ನ ಬಳಿಕ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಹಣ ಬಂದಿದೆ. ಈ ಕುರಿತು ನಗರಸಭೆ ಅಧಿಕಾರಿಗಳು ಬಂದಿರುವ ಹಣವನ್ನು ಏನು ಮಾಡಿದ್ದಾರೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮೊಂಟೆಪದವು :ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವಲ್ಲಿ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಂದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸೋಮವಾರ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಬೆಳೆಸಿ ಉತ್ತಮ ಶಿಕ್ಷಣವನ್ನು ನೀಡುವಲ್ಲಿ ಕರ್ನಾಟಕ ಸರಕಾರವು ಈಗಾಗಲೇ ಕ್ಷೀರ ಭಾಗ್ಯದಂತಹ ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು. ಮೊಂಟೆಪದವು ಶಾಲೆಯು ಇದೀಗ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತಿದ್ದು ಇಲ್ಲಿಯ ಮೂಲಭೂತ ಸೌಲಭ್ಯಗಳು ವಿಸ್ತಾರಗೊಂಡಿದೆ. ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನೂತನ ಕಟ್ಟಡವು ನಿರ್ಮಾಣಗೊಳ್ಳಲಿದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಸೋಮೇಶ್ವರ: 300 ಮನೆಗಳಿಗೆ ಮೂರರಿಂದ ನಾಲ್ಕು ಗ್ರಾ.ಪಂ. ಸದಸ್ಯರಿದ್ದು ತಮ್ಮ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ ಜನರ ಪ್ರೀತಿ ಗಳಿಸಲು ಐದು ವರ್ಷ ಸಾಕಾಗುತ್ತದೆ, ಆದರೆ ಹೆಚ್ಚಿನವರು ಶಾಸಕರ ಕೆಲಸಕ್ಕೆ ಕೈ ಹಾಕುತ್ತಿರುವುದರಿಂದ ಗ್ರಾ.ಪಂ. ಸದಸ್ಯರ ಕೆಲಸ ಶಾಸಕರು ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದರು. ಸೋಮೇಶ್ವರ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಲಾದ ನೂತನ ಸಭಾ ಭವನ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎನ್ನುವುದು ಗಾಂಧೀಜಿ ಕನಸಾಗಿತ್ತು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಆತ್ಮವಿಶ್ವಾಸ, ಸ್ವಾಭಿಮಾನದಿಂದ ಕೆಲಸ ನಿರ್ವಹಿಸುವಂತಾಗಬೇಕು ಎನ್ನುವ ನೆಲೆಯಲ್ಲಿ ಸರ್ಕಾರ ಗೌರವ ಧನ ಹೆಚ್ಚಳ ಜೊತೆ ವಿವಿಧ ಸವಲತ್ತು ನೀಡಿದೆ. ಗ್ರಾಮ ಪಂಚಾಯಿತಿ ಆಡಳಿತ ಸಮರ್ಪಕವಾಗಿ ಆಡಳಿತ ನಿರ್ವಹಿಸಿದಾಗ ಜನರೂ ಸಹಕಾರ ನೀಡುತ್ತಾರೆ ಎನ್ನುವುದಕ್ಕೆ ಸೋಮೇಶ್ವರ ಗ್ರಾ.ಪಂ. ಸಾಕ್ಷಿ ಎಂದು ತಿಳಿಸಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ವಿದಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಮದ ಸರ್ಕಾರ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಚ್ಚಿಲ: ದೇವಸ್ಥಾನಗಳು ದೈವಸ್ಥಾನಗಳು ಒಂದೇ ಛತ್ರದಡಿ ಬರುವ ಮೂಲಕ ಏಕರೂಪ ನಿರ್ಣಯಗಳನ್ನು ತರುವ ಕಾರ್ಯ ಮಾಗಣೆಗಳ ಮಹಾ ಮಂಡಳಿಯಿಂದ ನಡೆದಾಗ ಹಿಂದೂ ಸಮಾಜಕ್ಕೆ ಸುಭದ್ರವಾದ ಬುನಾದಿ ಹಾಕಲು ಸಹಕಾರಿ ಎಂದು ಎಂದು ಶ್ರೀ ಕ್ಷೇತ್ರ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸೋಮೇಶ್ವರ ಉಚ್ಚಿಲದ ಪದ್ಮ ವಿಹಾರದಲ್ಲಿ ಉಳ್ಳಾಲ ವ್ಯಾಪ್ತಿಯ 17 ಗ್ರಾಮಗಳನ್ನೊಳಗೊಂಡ ಐದು ಮಾಗಣೆಗಳ ಎಲ್ಲಾ ಹಿಂದೂ ಸಮುದಾಯಗಳ ಒಕ್ಕೂಟವಾದ `ಮಾಗಣೆಗಳ ಮಹಾ ಮಂಡಳಿ’ ಇದರ ನೂತನ ಕಚೇರಿಗೆ ಚಾಲನೆ ನೀಡಿ ಮಾತನಾಡಿದರು. ದೇವಸ್ಥಾನಗಳಲ್ಲಿ ಆರಾಧನೆ ಸಂಸ್ಕøತಿ ಅವರವರ ಭಾವಕ್ಕೆ ತಕ್ಕಂತೆ ಇರುವುದು ಸಹಜ ಆದರೆ ದೇವಸ್ಥಾನಗಳು ವ್ಯವಾಹಾರಿಕ ತಾಣವಾಗದೆ ಸಮಾಜದ ವಿಚಾರಗಳ ಕಡೆ ಹೆಚ್ಚಿನ ಒಲವು ನೀಡುವ ಕಾರ್ಯದೊಂದಿಗೆ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಒಲವು ನೀಡಬೇಕು ಎಂದರು. ಖ್ಯಾತ ಸಾಹಿತಿ ಹಿರಿಯ ಸಮಾಜಿಕ ಚಿಂತಕ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ ಮಾಗಣೆಗಳ ಮಹಾ ಮಂಡಳಿ ಯಾವಾಗಲೂ ಆಗಬೇಕಾದ ಕಾರ್ಯವಾಗಿತ್ತು. ಆದರೆ ತಡವಾಗಿಯಾದರೂ ಒಕ್ಕೂಟ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಉಳ್ಳಾಲ ಮಸ್ಜಿದುಲ್ ಜಾಮಿಯಾ ಅಲ್-ಮುನವ್ವರ್ ಮತ್ತು ಮಂಬವುಲ್ ಉಲೂಂ ಮದ್ರಸ ಮಂಚಿಲ ಇದರ ಜಂಟಿ ಅಶ್ರಯದಲ್ಲಿ ಮುನವ್ವರ್ ಮತ್ತು ಮಂಬವುಲ್ ಉಲೂಂ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಮದ್ರಸ ಪಾಠ ಪುಸ್ತಕ ವಿತರಣೆ ಮಸ್ಜಿದುಲ್ ಜಾಮಿಯಾ ಅಲ್-ಮುನವ್ವರ್ ಹಾಲ್‍ನಲ್ಲಿ ನಡೆಯಿತು. ಉಳ್ಳಾಲ ಸಯ್ಯಿದ್ ಮದನಿ ಅರಬಿಕ್ ಕಾಲೇಜ್‍ನ ಪ್ರಿನ್ಸಿಪಾಲ್ ಅಹ್ಮದ್ ಬಾವಾ ಮುಸ್ಲಿಯಾರ್ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಾಠ ಪುಸ್ತಕ ವಿತರಿಸಿ ಮಾತನಾಡಿ ಸಾವಿರ ವರ್ಷಗಳ ಹಿಂದೆ ಇಸ್ಲಾಮಿನ ಹಿರಿಯ ಪಂಡಿತರು ಬರೆದ ಗ್ರಂಥವನ್ನು ಇಂದು ಮದರಸಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಸುತ್ತಿರುವುದು. ಧಾರ್ಮಿಕ ವಿಧ್ಯೆ ಕಲಿಸಿದರೆ ಮಾತ್ರ ಇಸ್ಲಾಂ ಧರ್ಮ ಅಂತ್ಯ ದಿನದವರೆಗೆ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮಂಚಿಲ ಜುಮಾ ಮಸೀದಿ ಖತೀಬ್ ಹಸನ್ ಮುಬಾರಕ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ವಿಧ್ಯೆ ಕಲಿಯುವ ವಿದ್ಯಾರ್ಥಿಗಳಿಗೆ ಉಚಿತ ಮದ್ರಸ ಗ್ರಂಥಗಳನ್ನು ನೀಡುವ ಮೂಲಕ ಪವಿತ್ರವಾದ ಇಸ್ಲಾಂ ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಮುಸ್ಲಮಾನ ಕರ್ತವ್ಯವಾಗಿದೆ ಎಂದು ಹೇಳಿದರು.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುತ್ತಾರು: ಬೈಕಿನಲ್ಲಿ ಬಂದ  ಆಗಂತುಕರಿಬ್ಬರು ಯುವಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಕುತ್ತಾರು ರಾಣಿಪುರದಲ್ಲಿ ಶನಿವಾರ ರಾತ್ರಿ ವೇಳೆ ಸಂಭವಿಸಿದೆ. ಚಿರಂಜೀವಿ(24) ಅಪರಿಚಿತರಿಂದ ಹಲ್ಲೆಗೊಳಗಾಗಿದ್ದು,  ಬೈಕಿನಲ್ಲಿ ಚಲಿಸುತ್ತಿದ್ದ ವೇಳೆ   ದುಷ್ಕರ್ಮಿಗಳು ಯುವಕನ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕನನ್ನು   ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬಿ.ಸಿ.ರೋಡ್:  ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಶವ ಯಾತ್ರೆ ಮೆಲ್ಕಾರ್ ತಲುಪುತ್ತಿದ್ದಂತೆ ಕೈಕಂಬದಲ್ಲಿ ಕಲ್ಲುತೂರಾಟ ನಡೆದಿದ್ದು, ಯುವಕನೊರ್ವನ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಆರ್‍ಎಸ್‍ಎಸ್  ಕಾರ್ಯಕರ್ತ ಶರತ್ ಮಡಿವಾಳ ಶವ ಯಾತ್ರೆ ಮೆಲ್ಕಾರ್ ತಲುಪುತ್ತಿದ್ದಂತೆ ಕೈಕಂಬ ಸಮೀಪ ಹಲವು ವಾಹನಗಳಿಗೆ ಕಲ್ಲುತೂರಾಟ ನಡೆದಿದ್ದು, ಘಟನೆಯಿಂದಾಗಿ ಯುವಕನೊರ್ವ ಗಂಭೀರ ಗಾಯಗೊಂಡು ಬಿ.ಸಿ.ರೋಡ್, ಮೆಲ್ಕಾರ್ ಪ್ರದೇಶದಾದ್ಯಂತ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಗಲಭೆಗೆ ಸಂಬಂಧಿಸಿ ಹಲವರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. ಶರತ್ ಪಾರ್ಥೀವ ಶರೀರದ ಯಾತ್ರೆ ಬಿ.ಸಿ.ರೋಡ್ ತಲುಪುತ್ತಿದ್ದಂತೆಯೇ ದುಷ್ಕರ್ಮಿಗಳ ತಂಡವೊಂದು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿತ್ತು. ಇದರಿಂದ ಇತ್ತಂಡಗಳ ನಡುವೆ ಕಲ್ಲು ತೂರಾಟ ನಡೆದು, ಹಲವು ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳ ಗಾಜುಗಳು ಪುಡಿಯಾಗಿವೆ. ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು. ಕಲ್ಲು ತೂರಾಟ ನಡೆದ ಜಾಗದಿಂದ 5 ಮಂದಿಯನ್ನು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪದ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಅಂತಿಮಯಾತ್ರೆ ಇದೀಗ ಎ.ಜೆ.ಆಸ್ಪತ್ರೆಯಿಂದ ಹೊರಟಿದ್ದು, ಗಣ್ಯರ ಸಮೇತ ಸಾವಿರಾರು ಕಾರ್ಯಕರ್ತರ ಜಮಾವಣೆಯೊಂದಿಗೆ ಅಂತಿಮ ಯಾತ್ರೆ ಪೊಲೀಸ್ ಬಿಗಿಬಂದೋಬಸ್ತಿನೊಂದಿಗೆ ಆರಂಭವಾಗಿದೆ. ನಂತೂರು, ಪಡೀಲ್, ಅಡ್ಯಾರ್, ಫರಂಗಿಪೇಟೆ ಮಾರ್ಗವಾಗಿ ತೆರಳಲಿರುವ ಅಂತಿಮ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯ ಹಾಗೂ ಜಿಲ್ಲಾ ನಾಯಕರು ಪಾಲ್ಗೊಂಡಿದ್ದಾರೆ. ನಿನ್ನೆ ಸಾವು: ಎರಡು ದಿನಗಳ ಹಿಂದೆ ಅಪರಿಚಿತರ ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಶರತ್ (28) ಮೃತಪಟ್ಟಿದ್ದಾರೆ .ಅವರು ಮೃತಪಟ್ಟಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಮೊನ್ನೆ ಸಂಜೆಯಿಂದ ಹರಿಯಲು ಆರಂಭಿಸಿತ್ತು. ಶರತ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಸ್ಪತ್ರೆಯಾಗಲಿ ಅಥವಾ ಶರತ್ ಅವರ ಕುಟುಂಬದವರಾಗಲಿ ಈ ಸುದ್ದಿಯನ್ನು ಖಚಿತ ಪಡಿಸಿರಲಿಲ್ಲ. ಅದರೆ ನಿನ್ನೆ ರಾತ್ರಿ 8.30ರ ಸುಮಾರಿಗೆ ಅವರು ಮೃತಪಟ್ಟಿರುವುದನ್ನು ಆಸ್ಪತ್ರೆ ಮೂಲಗಳು ಖಚಿತ ಪಡಿಸಿವೆ. ಹಲ್ಲೆಯಾದ ಸ್ಥಳದಿಂದ ತುಂಬೆ ಆಸ್ಫತ್ರೆಗೆ ಶರತ್ ಅವರನ್ನು ಕರೆದುಕೊಂಡು ಹೋಗುವಾಗಲೇ ಅವರ ಜೀವ ಹಾರಿ ಹೋಗಿತ್ತು ಎಂಬ ಆರೋಪವು ಈಗ ಕೇಳಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬಿ.ಸಿ.ರೋಡು: ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಕೊಲೆಯತ್ನಕ್ಕೆ ಸಂಬಂಧಿಸಿದಂತೆ ಹಿಂದೂ ಹಿತರಕ್ಷಣಾ ಸಮಿತಿ ಬಿ.ಸಿರೋಡಿನಲ್ಲಿ ಕರೆ ನೀಡಿದ್ದ ಪ್ರತಿಭಟನೆಯು ನಿಷೇದಾಜ್ಞೆಯ ನಡುವೆಯೂ ಸಾವಿರಾರು ಕಾರ್ಯಕರ್ತರ ಒಗ್ಗೂಡುವಿಕೆಯಿಂದ ಶುಕ್ರವಾರ ನಡೆಯಿತು. ಈ ಸಂದರ್ಭ ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್, ವಿದಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಕ್ಷನ್ 144 ಜಾರಿಯಲ್ಲಿದ್ದರು ಪ್ರತಿಭಟನೆಯನ್ನು ಕೈಗೊಂಡ ಹಿನ್ನಲೆಯಲ್ಲಿ 500 ಮಂದಿ ವಿರುದ್ಧ ಸೆಕ್ಷನ್ 143 ಹಾಗೂ 149 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನೆಗೂ ಮುನ್ನ ಸಂಸದೆ ಶೋಭಾ ಕರಂದ್ಲಾಜೆ, ಶರತ್ ಮೇಲೆ ದಾಳಿಯಾದ ಅವರ ಅಂಗಡಿಗೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಸೇರಿದಂತೆ ಕೊಲೆಗಳು ನಡೆಯುತ್ತಿದ್ದು ಈ ಬಗ್ಗೆ ಸರಿಯಾಗಿ ತನಿಖೆ ಮಾಡಲು ರಾಜ್ಯ ಸರಕಾರ ಬಿಡುತ್ತಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ 50ಕೋಟಿ ರೂ ಬಿಡುಗಡೆಗೊಳಿಸಿದ್ದು ಜಪಾನಿನ ವಿವಿಗಳಲ್ಲಿ ಇರುವ ಮಾದರಿಯಲ್ಲಿ ಪ್ರಥಮವಾಗಿ ಕರ್ನಾಟಕದಲ್ಲಿ ಸುಧಾರಿತ ವಿಜ್ಞಾನ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ತಿಳಿಸಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಹೊಸ ಸನೆಟ್ ಸಭಂಗಣದಲ್ಲಿ ಗುರುವಾರ ನಡೆದ ಶೈಕ್ಷಣಿಕ ಮಂಡಳಿಯ 2017-18ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದರು. ಸುಧಾರಿತ ವಿಜ್ಞಾನ ಸಂಶೋಧನೆಗೆ ಸುಮಾರು 120 ಕೋಟಿಯಷ್ಟು ಖರ್ಚು ಅಂದಾಜಿಸಲಾಗಿದ್ದು ಈ ಬಗ್ಗೆ 120 ಕೋಟಿ ಅನುದಾನವನ್ನು ಬಿಡಗಡೆಗೊಳಿಸಬೇಕೆಂದು ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂಧಿಸಿದ ಸರಕಾರ 100 ಕೋಟಿ ಹಣವನ್ನು ಬಿಡುಗೆಗೊಳಿಸುವ ವಿಶ್ವಾಸ ನೀಡಿದೆ. ಈ ಪೈಕಿ 50 ಕೋಟಿಯನ್ನು ಬಿಡಗಡೆಮಾಡಿ ನಂತರ ಹಂತ ಹಂತವಾಗಿ 25ಕೋಟಿ ರೂ.ಗಳಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಲಿದೆ. ಸಂಶೋಧನ ಕೇಂದ್ರ ಸ್ಥಾಪನೆಗೆ ನೆಲ್ಯಾಡಿಯಲ್ಲಿ 26 ಎಕರೆ ಜಾಗವನ್ನು ನೀಡಿದೆ. ಬೆಳಪುವಿನಲ್ಲಿ 20ಎಕರೆ ಜಾಗದಲ್ಲಿ…

Read More