Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು:ಮುಡಿಪು ಸಮೀಪದ ಇನ್‍ಫೋಸಿಸ್ ಬಳಿ ನಿರ್ಮಾಣಗೊಂಡಿರುವ ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮವು ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಜಲೀಲ್ ಮೋಂಟುಗೋಳಿ, ನಾಸೀರ್ ನಡುಪದವು, ಇನ್‍ಫೋಸಿಸ್ ಅಧಿಕಾರಿಗಳಾದ ದೀರಜ್, ಹರೀಶ್ ಮುಂತಾದವರು ಉಪಸ್ಥಿತರಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ವೃತ್ತಿಯಲ್ಲಿ ಬಸ್ ಕಂಡೆಕ್ಟರ್ ಆಗಿದ್ದ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದ ಪುರುಷೋತ್ತಮ ಉಳ್ಳಾಲ್(60) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಮಂಗಳೂರು ವಿಶ್ವವಿದ್ಯಾಲಯವನ್ನು ಸಂಪರ್ಕಿಸುವ ಕೊಣಾಜೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಮಂಜನಾಡಿ ಬಸ್‍ನಲ್ಲಿ ಕಂಡೆಕ್ಟರ್ ಆಗಿದ್ದ ಪುರುಷೋತ್ತಮ ಉಳ್ಳಾಲ್ ವಿದ್ಯಾರ್ಥಿಗಳ ಜೊತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದರು. ಇಂದಿಗೂ ಪುರುಷಣ್ಣ ಎಂದರೆ ಎಲ್ಲ ವಿದ್ಯಾರ್ಥಿಗಳಲ್ಲೂ ಆ ರೂಟಿನ ಮೆಚ್ಚಿನ ಕಂಡೆಕ್ಟರ್ ಆಗಿದ್ದರು. ಪದವಿ, ಸ್ನಾತಕೋತ್ತರ ಪದವಿ ಪಡೆದು ಉದ್ಯೋಗಕ್ಕೆ ಸೇರಿದರೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಹಪಾಠಿಯಂತೆಯೇ ಬೆರೆತುಹೋಗಿದ್ದ ಪುರುಷಣ್ಣನ ಜೊತೆಗೆ ತಮ್ಮ ನೆನಪುಗಳನ್ನು ಕಳೆಯಲು ಬಂದು ಮಾತನಾಡಿಸಿಕೊಂಡು ಹೋಗುತ್ತಿದ್ದರು. 80-90ರ ದಶಕದಲ್ಲಿ ಬಸ್‍ಗಳಲ್ಲಿ ಪುಂಡಾಟಿಕೆ ವಿಪರೀತ ಇದ್ದ ದಿನಗಳಲ್ಲೂ ಪುರುಷಣ್ಣ ಇದ್ದ ಬಸ್‍ನಲ್ಲಿ ವಿದ್ಯಾರ್ಥಿಗಳು ಗೌರವ ಕೊಡುತ್ತಿದ್ದರು. ಹವ್ಯಾಸಿ ಕಲಾವಿದರಾಗಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಬಹಳಷ್ಟು ನಾಟಕಗಳಲ್ಲಿ ಅಭಿನಯಿಸಿ ತುಳು ನಾಟಕ ರಂಗಭೂಮಿಯಲ್ಲಿ ಉತ್ತಮ ಹೆಸರು ಸಂಪಾದಿಸಿದ್ದರು. ಉತ್ತಮ ದೇಹರ್ದಾಢ್ರ್ಯತೆಯನ್ನು ಹೊಂದಿದ್ದ ಉಳ್ಲಾಲ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು : ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತದ ಚುಕ್ಕಾಣಿ ಹಿಡಿದ ದಿನದಿಂದ ಜಸಸಾಮಾನ್ಯರಿಂದ ಹಿಡಿದು ರೈತರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇನ್ನು ಎರಡು ವರ್ಷದಲ್ಲಿ ನರೇಂದ್ರ ಮೋದಿ ಸರಕಾರದ ಬದಲು ರಾಹುಲ್ ಗಾಂಧಿ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಅಭಿಪ್ರಾಯಪಟ್ಟರು. ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್‍ನ ಆಶ್ರಯದಲ್ಲಿ ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಒತ್ತಾಯಿಸಿ ತೊಕ್ಕೊಟ್ಟು ಎಸ್‍ಬಿಐ ಬ್ಯಾಂಕ್‍ನ ಎದುರು ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಸಿದ್ಧರಾಮಯ್ಯನವರು ಪ್ರತೀ ಜಿಲ್ಲೆಯಲ್ಲಿರುವ ರೈತರ ಬಗ್ಗೆ ಅಧ್ಯಯನ ನಡೆಸಿ ಇದೀಗ ಸಾಲ ಮನ್ನಾ ಮಾಡುವ ಮೂಲಕ ಬಿಜೆಪಿ ಸರಕಾರಕ್ಕೆ ತಕ್ಕ ಉತ್ತರ ನೀಡಿದ್ದು, ರೈತರ ಪರವಾಗಿ ಮೊಸಳೆ ಕಣ್ಣೀರು ಹಾಕುತ್ತಿದ್ದ ಬಿಜೆಪಿಗರು ಈಗ ತಲೆಮರೆಸಿಕೊಂಡಿದ್ದಾರೆ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ ಕೇಂದ್ರ ಸರಕಾರ ರೈತ ವಿರೋಧ ಸರಕಾರವಾಗಿದ್ದು ಇದರ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೋಟೆಕಾರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‍ನ ಕೆ.ಸಿರೋಡಿನಲ್ಲಿರುವ ತಲಪಾಡಿ ಶಾಖೆಯಿಂದ 30ಕೆ.ಜಿ ಚಿನ್ನಾಭರಣವನ್ನು ಡರೋಡೆಗೈಯಲು ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅದೇ ಬ್ಯಾಂಕಿಗೆ ಸೇರಿದ ನಿರ್ದೇಶಕಿಯ ಪತಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ತಡರಾತ್ರಿ ಪಿಲಾರು ಬಳಿಯಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಪಿಲಾರು ನಿವಾಸಿಗಳಾದ ಬೋಟ್ ರಾಮ ಯಾನೆ ರಾಮಚಂದ್ರ ಪೂಜಾರಿ (50) ಹಾಗೂ ನೆರೆಮನೆಯ ಮೋಹನ್ ಶೆಟ್ಟಿಗಾರ್(35) ಸಿಸಿಬಿ ಪೊಲೀಸರ ವಶದಲ್ಲಿರುವ ಆರೋಪಿಗಳು. ರಾಮ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕಿಯೋರ್ವರ ಪತಿಯಾಗಿದ್ದಾರೆ. ಜೂ. 23ರಂದು ಕೆ.ಸಿರೋಡಿನಲ್ಲಿರುವ ತಲಪಾಡಿ ಶಾಖೆಯಲ್ಲಿ ಡರೋಡೆಗೆ ವಿಫಲ ಯತ್ನ ನಡೆದಿತ್ತು. ಪಲ್ಸಾರ್ ಬೈಕಿನಲ್ಲಿ ಬಂದಿದ್ದ ಆಗಂತುಕರಿಬ್ಬರು ಬ್ಯಾಂಕಿನ ವಾಚ್‍ಮೆನ್‍ಗೆ ಹಲ್ಲೆ ನಡೆಸಿ ಬೆದರಿಸಿ ಒಳಕರೆದೊಯ್ದು ಶಟರನ್ನು ಹಾಕಿದ್ದರು. ಬಳಿಕ ಬ್ಯಾಂಕಿನಲ್ಲಿದ್ದ ಮೂವರು ಸಿಬ್ಬಂದಿಗೆ ಚೂರಿ ತೋರಿಸಿ ಅವರು ಶೌಚಾಲಯದೊಳಗೆ ಕೂಡಿ ಹಾಕಿದ್ದರು. ನಂತರ ಬ್ಯಾಂಕಿನೊಳಗೆ ಇದ್ದ ಲಾಕರಿನಿಂದ ಸುಮಾರು 30 ಕೆ.ಜಿ ಯಷ್ಟು ಚಿನ್ನವನ್ನು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಗಳೂರು:  ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕ ಡಾ. ಮುರಲೀ ಮೋಹನ್ ಚೂಂತಾರು ಇವರ ಆರನೇ ವೈದ್ಯಕೀಯ ಕೃತಿ “ಸಂಜೀವಿನಿ ಆರೋಗ್ಯ ಮಾರ್ಗದರ್ಶಿ” ಭಾಗ 2 ಕೃತಿ ಸೋಮವಾರದಂದು  ಓಷನ್‍ಪರ್ಲ್ ಹೋಟೆಲಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಇವರು ಕೃತಿಯನ್ನು ಬಿಡುಗಡೆ ಮಾಡಿದರು. ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜೊತೆಗೆ ನಡೆದ ಈ ಕಾರ್ಯಕ್ರಮದಲ್ಲಿ  ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ. ರಮಾನಂದ ಬನರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿ ಇದರ ಅಧ್ಯಕ್ಷರಾದ ಶ್ರೀ ಅರ್ಷದ್ ವರ್ಕಾಡಿ ಭಾಗವಹಿಸಿದ್ದರು. ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಉಸ್ತುವಾರಿ ಸಚಿವರಾದ  ರಮಾನಾಥ ರೈ ವೈದ್ಯಕೀಯ ವಿಷಯಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಕಲೆ ಡಾ. ಮುರಲೀಯವರಿಗೆ ಸಿದ್ದಿಸಿದೆ.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುತ್ತಾರು: ಶ್ರೀಕ್ಷೇತ್ರ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿ ವಿನಾಯಕ ದೇವಸ್ಥಾನದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿ ರಾಜೇಶ್ ಗಟ್ಟಿ ಮುಂಡೋಳಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಯಾದವ ಗಟ್ಟಿ ಮುಂಡೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಆಚಾರ್ಯ ದೇರಳಕಟ್ಟೆ, ಕೋಶಾಧಿಕಾರಿಯಾಗಿ ರವಿ ಕುಕ್ಕುದಕಟ್ಟೆ,  ಶೋಭಾ ಯಾತ್ರೆ ಸಂಚಾಲಕರಾಗಿ ಚಂದ್ರಹಾಸ್ ಕೊಟ್ಟಾರಿ ಪವಿತ್ರ ಕುಮಾರ ಗಟ್ಟಿ, ಜಗನ್ನಾಥ್ ಸಾಲಿಯಾನ್, ರಾಜೇಶ್ ಅತ್ತಾವರ, ಭವಾನಿ ಶಂಕರ್ ಸೇವಂತಿಗುತ್ತು, ನಂದಕುಮಾರ್ ಬಬ್ಬುಕಟ್ಟೆ, ಈಶ್ವರ್ ಬಡಾಜೆ, ದಿನೇಶ್ ಎಲ್ .ಎಸ್, ಸುಧಾಕರ್ ಅಮೀನ್ ಕುತ್ತಾರು, ಉಪಾಧ್ಯಕ್ಷರುಗಳಾಗಿ ಗೋಪಾಲ್ ಸರ್ವೇಯರ್ ಮುಂಡೋಳಿ, ಉದಯ ಬಾಕಿಮಾರ್, ಸುಹಾಸಿನಿ ಬಬ್ಬುಕಟ್ಟೆ, ವೇದ ಪವಿತ್ರ ಕುಮಾರ್ ಗಟ್ಟಿ, ಜಾನಕಿ ಗೋಕುಲ್ ದಾಸ್. ನವೀನ್ ಕುಮಾರ್ ಸಂತೋಷ್ ನಗರ, ಜಯಂತ್ ಪದ್ಮಾಶಾಲಿ, ಮನೋಜ್ ರೈ ಪಂಡಿತ್‍ಹೌಸ್, ಪುರಂದರ, ಜಯಪ್ರಕಾಶ್ ರೈ, ಸಂಘಟನಾ ಕಾರ್ಯದರ್ಶಿಯಾಗಿ ಚರಣ್ ಕುತ್ತಾರು, ಗೌರವ ಸಲಹೆಗಾರರಾಗಿ ಜಯರಾಮ್ ಚೆಂಬುಗುಡ್ಡೆ, ಚಂದ್ರಹಾಸ್ ಪಂಡಿತಹೌಸ್, ಪದ್ಮನಾಭ ಮರ್ಕೆದು, ನಿತೇಶ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಜೇಶ್ವರ: ಸುರಕ್ಷಾ ದಂತ ಚಿಕಿತ್ಸಾಲಯದ ವಿಂಶತಿಯ ಸಂಭ್ರಮವನ್ನು ಬಹಳ ವಿಶಿಷ್ಟ ರೀತಿಯಿಂದ ಆಚರಿಸಲಾಯಿತು. ಜುಲೈ 3 1997ರಲ್ಲಿ ಅಂದಿನ ಬಂಟ್ವಾಳ ಕ್ಷೇತ್ರದ ಶಾಸಕರಾಗಿದ್ದ ಬಿ. ರಮಾನಾಥ ರೈ ಇವರಿಂದ ಉದ್ಘಾಟನೆಗೊಂಡು 20 ವರ್ಷ ಸಾರ್ಥಕ ಸೇವೆ ಸಲ್ಲಿಸಿದ ನೆನಪಿನಲ್ಲಿ ಇಂದು ಸುರಕ್ಷಾ ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತವಾಗಿ ಸಾಗುವಾನಿ ಮತ್ತು ನೇರಳೆ ಗಿಡಗಳನ್ನು ನೀಡಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಲಾಯಿತು. 20 ವರ್ಷಗಳ ಹಿಂದೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಂದಿನ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷರಾಗಿದ್ದ ಅಹ್ಮದ್ ಕುಂಞÂ ಇಂದು ಕೂಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿ ಗಿಡ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೋಗಿಗಳಿಗೆ ಉನ್ನತ್ತ ಮಟ್ಟದ ದಂತ ಚಿಕಿತ್ಸೆ ನೀಡುವುದರ ಜೊತೆಗೆ, ವೈದ್ಯಕೀಯ ರಂಗದ ಬಗ್ಗೆ ಲೇಖನಗಳನ್ನು ಬರೆದು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿರುವ ಡಾ. ಮುರಲೀ ಮತ್ತು ಡಾ. ರಾಜಶ್ರೀ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಹೊಸದಿಲ್ಲಿ : “ಭಾರತದಿಂದ ಕಾಶ್ಮೀರವನ್ನು ವಿಮೋಚನೆಗೊಳಿಸುವ ತನಕವೂ ನಮ್ಮ ಹೋರಾಟ ಕೊನೆಗೊಳ್ಳುವುದಿಲ್ಲ’ ಆದ್ದರಿಂದ ಭಾರತದ ಯಾವುದೇ ಭಾಗದ ಮೇಲೆ ದಾಳಿ ನಡೆಸಬಲ್ಲೆವು ಎಂದು ಹಿಜ್ಬುಲ್  ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದಲ್ಲಿ ಬೆದರಿಕೆ ನೀಡಿದ್ದಾನೆ. ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಎಂದು ಸಲಾಹುದ್ದೀನ್ ಭಾರತದಲ್ಲಿ ಈಗಾಗಲೇ ಹಲವಾರು ಭಾರಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಿಕೊಂಡು ಬಂದಿದ್ದು, ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವರೆಗೂ ನಮ್ಮ ಹೋರಾಟ ಅಂತ್ಯಗೊಳ್ಳುವುದಿಲ್ಲ. ನಾನೊಬ್ಬ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಮೂರ್ಖ ಎಂದು ಹೇಳಿದ್ದಾನೆ. ಭಾರತದಲ್ಲಿ ತಾನು ಹಲವಾರು ಭಯೋತ್ಪಾದಕ ಕೃತ್ಯಗಳನ್ನು ನಡೆಸಿರುವುದು ನಿಜ ಎಂದು ಒಪ್ಪಿಕೊಂಡಿರುವ ಸಲಾಹುದ್ದೀನ್, ಕೆಲ ದಿನಗಳ ಹಿಂದಷ್ಟೇ ಅಮೆರಿಕ ಸಲಾಹುದ್ದೀನ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಣೆ ಮಾಡಿತ್ತು. ಅಮೆರಿಕದ ಈ ಕ್ರಮವನ್ನು ಪಾಕಿಸ್ತಾನ ಸಂಪೂರ್ಣ ಅಸಮರ್ಥನೀಯ ಎಂದು ಹೇಳಿತ್ತು. ಅಲ್ಲದೆ, ಸ್ವಯಂ ಆಡಳಿತೆಯ ಕಾಶ್ಮೀರಿಗಳ ಹಕ್ಕನ್ನು ಬೆಂಬಲಿಸುವ ವ್ಯಕ್ತಿ ಸಲಾಹುದ್ದೀನ್ ಎಂದು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಆಂಗ್ಲ ಮಾಧ್ಯಮ ಶಾಲಾ ಸಭಾ ಭವನದಲ್ಲಿ ಭಾನುವಾರ ನಡೆಯಿತು. ಸಂಸ್ಥೆಯ ಅಧ್ಯಕ್ಷ  ಎಂ.ಜಿ.ಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೆರ್ಮನ್ನೂರು ಚರ್ಚ್‍ನ ಧರ್ಮಗುರುಗಳಾದ ವಂದನೀಯ ರೆ| ಫಾ| ಜೆ.ಬಿ.ಸಲ್ದಾನ ಭಾಗವಹಿಸಿ  ಮಕ್ಕಳು ಸ್ಕೌಟ್ ಗೈಡ್ ಶಿಕ್ಷಣ ಪಡೆಯುವುದರ ಜತೆಗೆ  ಸದ್ಭಾವನೆ, ಸಚ್ಚಾರಿತ್ರ್ಯ ಸರ್ವಧರ್ಮ ಸಹಿಷ್ಣುತೆ ಮೊದಲಾದ ಸದ್ಗುಣಗಳನ್ನು ಪಡೆದು ಹೆತ್ತವರಿಗೆ, ಶಾಲೆಗೆ, ಊರಿಗೆ ಆ ಮೂಲಕ ದೇಶಕ್ಕೆ ಕೀರ್ತಿ ತರುವಂತಾಗಬೇಕು ಎಂದರು. ಜಿಲ್ಲಾ ಸ್ಕೌಟ್ಸ್  ಗೈಡ್ಸ್ ಸಂಸ್ಥೆಯ ಮುಖ್ಯ ಆಯುಕ್ತ ಎನ್.ಜಿ.ಮೋಹನ್ ಮಾತನಾಡಿ ಸ್ಕೌಟ್ಸ್ ಗೈಡ್ಸ್ ಗಳು ಕಲಿಕೆಯ ಜತೆಗೆ ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಪಾಲಿನ ಕರ್ತವ್ಯವನ್ನು ಮಾಡಬೇಕು ಎಂದ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲೆ ಮತ್ತು ರಾಜ್ಯದ ಹಲವಾರು ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲಾ ಆಯುಕ್ತ  ರಾಮಶೇಷ ಶೆಟ್ಟಿ,…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಮಂಗಳೂರಿನ ಲೈಟ್ ಹೌಸ್ ಹಿಲ್ ರಸ್ತೆಯ ಹೆಸರಿನ ವಿಚಾರದಲ್ಲಿ ಎದ್ದಿರುವ  ವಿವಾದಕ್ಕೆ  ರಾಜ್ಯ ಸರಕಾರ ಹಾಗೂ ಅದನ್ನು  ಬೆಂಬಲಿಸುತ್ತಿರುವ  ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯೇ ನೇರ ಕಾರಣ ಎಂದು  ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಫ್ರಾಂಕ್ಲಿನ್ ಮೊಂತೇರೊ ಹೇಳಿದ್ದಾರೆ. ಲೈಟ್ ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರ ರಾಂ ಶೆಟ್ಟಿ ಹೆಸರನ್ನು  ಇಡುವುದರ ವಿರುದ್ಧ ಸಂತ ಅಲೋಷಿಯಸ್ ಸಂಸ್ಥೆ ಹಾಗೂ ವಿಜಯ ಬ್ಯಾಂಕ್ ನೌಕರರ ಸಂಘ ದಿಂದ ವಿರೋಧ ವ್ಯಕ್ತವಾಗಿದೆ.  2013 ರಲ್ಲಿ ಮಂಗಳೂರು ನಗರಪಾಲಿಕೆ  ಹೆಸರು ಬದಲಾವಣೆ ಕುರಿತು ನಿರ್ಣಯ ಮಂಡಣೆ ಸಂದರ್ಭ ಅಲ್ಲಿನ   ಕಾರ್ಪೊರೇಟರ್ ಆಗಲಿ, ದಕ್ಷಿಣ ಶಾಸಕರು ಹಾಗೂ  ಮುಖ್ಯಸಚೇತಕರೂ  ಸುದ್ದಿಯಲ್ಲಿರಲಿಲ್ಲ,  ಆ ವೇಳೆ  ಎಲ್ಲರೂ ದನ ಮೇಯಿಸುತ್ತಿದ್ದರೆಂದು ಕಾಣುತ್ತಿದೆ. ಇದೀಗ  ತಡೆಯಾಜ್ಞೆ ತರುವ ಮೂಲಕ ಎರಡು ಪಂಗಡಗಳ ಮಧ್ಯೆ ವೈಮನಸ್ಸು ತರುವ ಪ್ರಯತ್ನ ಆಗಿದೆ. ಎಲ್ಲರೂ ಭಾವನೆಗಳಿಗೆ ತಕ್ಕಂತೆ  ಹೆಸರು ಕೇಳುತ್ತಿದ್ದಾರೆ.  ಅದಕ್ಕಾಗಿ  ಎರಡು ಪಂಗಡಗಳು  ಜತೆಯಾಗಿ…

Read More