UN NETWORKS ಉಳ್ಳಾಲ: ಲೇಸರ್ ತಂತ್ರಜ್ಞಾನದ ಚಿಕಿತ್ಸಾ ವಿಧಾನದಲ್ಲಿ ಪರಿಣತರಾಗಲು ಸಮಯ ತಗಲುವುದು, ಅದಕ್ಕಾಗಿ ಶ್ರಮದ ಅಗತ್ಯವಿದೆ ಎಂದು ಯುರೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾ ಇದರ ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ಕೆಎಂಸಿಯ ಪ್ರೊ. ಡಾ| ಪಿ.ವೇಣುಗೋಪಾಲ್ ಹೇಳಿದರು. ಅವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿ ಆಶ್ರಯದಲ್ಲಿ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾದ ಲೇಸರ್ ಡುಯೊ: ಥುಲಿಯಂ 120 ಡಬ್ಲ್ಯು ಮತ್ತು ಹೋಲ್ಮಿಯಂ 20 ಡಬ್ಲ್ಯು ಗೆ ಚಾಲನೆ ಮತ್ತು `ಲೇಸರ್ಸ್ ಇನ್ ಯುರೋಲಾಜಿ ಕುರಿತು ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರಕ್ಕೆ ಕ್ಷೇಮ ಆಸ್ಪತ್ರೆ ಸೆಮಿನಾರ್ ಹಾಲ್ ನಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದರು. ತಂತ್ರಜ್ಞಾನಗಳು ಮುಂದುವರಿಯುತ್ತಿದ್ದಂತೆ ಮೂತ್ರಶಾಸ್ತ್ರ ಚಿಕಿತ್ಸೆ ವಿಧಾನದಲ್ಲೂ ಅನೇಕ ಬದಲಾವಣೆಗಳು ಆಗಿವೆ. 1965 ರಲ್ಲಿ ತೆರೆದ ಶಸ್ತ್ರಚಿಕಿತ್ಸೆ ವಿಧಾನದಲ್ಲಿ ಚಿಕಿತ್ಸೆ ತರಬೇತಿ ಪಡೆದುಕೊಂಡಿದ್ದಲ್ಲಿ, ಸೇವೆ ಆರಂಭದ ಬಳಿಕ ಚಿಕಿತ್ಸೆ ವಿಧಾನವೇ ಬದಲಾಗಿ, ಸೇವಾ ಅವಧಿಯಲ್ಲೇ ಅನುಭವದ ಮೂಲಕ ತರಬೇತಿ ಪಡೆಯಬೇಕಾಯಿತು. ಮೂತ್ರಶಾಸ್ತ್ರ ವಿಭಾಗದಲ್ಲಿ ತೆರೆದ ಶಸ್ತ್ರಚಿಕಿತ್ಸೆಯೇ ಉತ್ತಮ ವಿಧಾನವಾಗಿತ್ತು.…
Author: UllalaVani
UN NETWORKS ಬಾಳೆಪುಣಿ: ಕಳೆದ ಹತ್ತು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಸರಕಾರಗಳು ಇಚ್ಛಾಶಕ್ತಿ ಹಾಗೂ ಸಮಯವಕಾಶ ಮಾಡಿಕೊಂಡು ಅದಕ್ಕೆ ಪೂರಕವಾದ ಕಾನೂನು ರೂಪಿಸಿಕೊಂಡು ಹಕ್ಕುಪತ್ರ ಕೊಡಲು ಮನಸ್ಸು ಮಾಡಿದ್ದರೆ ಅದೆಷ್ಟೋ ಸಂಖ್ಯೆಯ ಅರ್ಹ ಕುಟುಂಬಕ್ಕೆ ಅದಾಗಲೇ ಹಕ್ಕುಪತ್ರ ಪಡೆಯುವ ಅವಕಾಶ ಲಭ್ಯವಾಗುತ್ತಿತ್ತು. ಆದರೆ ಆ ಸರಕಾರ ಅದಕ್ಕೆ ಅವಕಾಶ ಕೊಡಲಿಲ್ಲ. ಆದರೆ ಅಂತಹ ಮಹತ್ತರ ಕಾರ್ಯವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲ ಭಾಗದಲ್ಲೂ ಕಾರ್ಯಗತ ಮಾಡಿದ್ದು ತಮ್ಮದೇ ನಿವೇಶನ ಹಕ್ಕು ಸ್ಥಾಪಿಸಲು ಸಾಧ್ಯವಾಗಿದೆ ಎಂದು ಆಹಾರ ಹಾಗೂ ನಾಗರೀಕ ಪೂರೈಕೆ ಸಚಿವ ಯು. ಟಿ. ಖಾದರ್ ನುಡಿದರು. ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸೋಮವಾರ ನಡೆದ 94ಸಿ ಹಾಗೂ 94ಸಿಸಿ ಅಡಿಯಲ್ಲಿ ಮಂಗಳೂರು ಕ್ಷೇತ್ರದ ಬಾಳೆಪುಣಿ, ಪಜೀರು, ಇರಾ, ಕುರ್ನಾಡು ಕೈರಂಗಳ, ನರಿಂಗಾನ ಗ್ರಾಮದ ಅರ್ಹ ಫಲಾನುಭವಿಗಳಿಗೆ ಹಕ್ಕಪತ್ರ ವಿತರಿಸಿ ಮಾತನಾಡಿದರು. ನಿಜವಾಗಿಯೂ ಬಡವರಿಗೆ ಹಕ್ಕುಪತ್ರ ವಿತರಿಸಲು ಸರಕಾರಕ್ಕೆ ಯಾವುದೇ ಖರ್ಚು ಇಲ್ಲ. ಬಡವರ ನೆಲೆಗೆ ಒಂದು…
UN NETWORKS ಕೊಣಾಜೆ : ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ನಂತರ ಮೂಲಭೂತ ಸೌಕರ್ಯದೊಂದಿಗೆ ಹಕ್ಕುಪತ್ರ ನೀಡುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದ್ದು, ಈ ಕ್ಷೇತ್ರದಲ್ಲಿ ತುರ್ತಾಗಿ ಕುಡಿಯುವ ನೀರಿಗೆ ಸರಕಾರ ಹಣ ಮಂಜೂರು ಮಾಡಿದ್ದು, ಮುಂದಿನ ದಿನಗಳಲ್ಲಿ ನಿರಂತರ ನೀರು ನೀಡುವ ಕಾರ್ಯಕ್ಕೆ ಹರೇಕಳದಲ್ಲಿ 174 ಕೋಟಿ ರೂ. ವೆಚ್ಚದ ಯೋಜನೆಗೆ ಬಜೆಟ್ನಲ್ಲಿ ಘೋಷಣೆಯಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅಸೈಗೋಳಿ ಕೇಂದ್ರ ಮೈದಾನದಲ್ಲಿ ಕೊಣಾಜೆ ಗ್ರಾಮದ ಅರ್ಹ ಫಲಾನುಭವಿಗಳಿಗೆ ನಮ್ಮ ಮನೆ ನಮ್ಮ ಹಕ್ಕು ಯೋಜನೆಯಡಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಂಗಳೂರು ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುವಲ್ಲಿ ಜನಪ್ರತಿನಿಧಿಗಳೊಂದಿಗೆ ಸ್ಥಳೀಯರ ಸಹಕಾರ ಅಗತ್ಯ. ಸಚಿವನಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿದಾಗ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಬೆಂಬಲದಿಂದ ಸ್ಥಳೀಯ ಸಮಸ್ಯೆಗಳ ಪರಿಹಾರ ಸೇರಿದಂತೆ ಅಭಿವೃದ್ಧಿ…
UN NETWORKS ಕೊಣಾಜೆ: ಸಮಾಜದಲ್ಲಿ ಕಲಾವಿದರನ್ನು ಗುರುತಿಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ. ಅಲ್ಲದೆ ಅಶಕ್ತ ಕಲಾವಿದರನ್ನು ಪ್ರೋತ್ಸಾಹಿಸಿ ಅವರಿಗೆ ಜೀವನ ಭದ್ರತೆಯನ್ನು ಒದಗಿಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಕಳೆದ ಎರಡುವರೇ ವರ್ಷದಿಂದ ಅಶಕ್ತ ಕಲಾವಿದರಿಗೆ ಮತ್ತಿ ಅವರ ಕುಟುಂಬಕ್ಕೆ ಸುಮಾರು 1.50 ಕೋಟಿ ರೂ. ಸಹಾಯಧನವನ್ನು ವಿತರಿಸಲಾಗಿದೆ. ಇದೆಲ್ಲವೂ ಆ ಕಟೀಲು ದೇವಿಯ ಆಶೀರ್ವಾದದಿಂದ ನಡೆಯುತ್ತಿದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ಅವರು ಹೇಳಿದರು. ಅವರು ಮುಡಿಪುವಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ)ಮಂಗಳೂರು ಇದರ ಮುಡಿಪು ಘಟಕದ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಮಾತನಾಡಿದರು. ಯಕ್ಷಗಾನ ಕಲಾವಿದರು ಆರ್ಥಿಕವಾಗಿ ಎಷ್ಟೇ ಸಂಕಷ್ಟದಲ್ಲಿದ್ದರೂ ಯಕ್ಷಗಾನ ಕಲೆಯನ್ನು ಶ್ರೀಮಂತಗೊಳಿಸುವಲ್ಲಿ ಬಹಳಷ್ಟು ಶ್ರಮವನ್ನು ಪಡುತ್ತಿದ್ದಾರೆ. ಆದ್ದರಿಂದ ಇಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಯಕ್ಷಗಾನ ಪ್ರೇಮಿಗಳ ಸಹಕಾರದೊಂದಿಗೆ ಫೌಂಡೇಶನ್ನ ವಿಸ್ತಾರದೊಂದಿಗೆ ಜವಾಬ್ಧಾರಿಯೂ ಹೆಚ್ಚುತ್ತಿದೆ ಎಂದು ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ…
UN NETWORKS ಕೊಣಾಜೆ: ಇಂದು ವಿಜ್ಷಾನ ಕ್ಷೇತ್ರವು ಕ್ಷಿಪ್ರಗತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದ್ದರೂ ಜನರಲ್ಲಿ ವೈಜ್ಞಾನಿಕ ಸ್ವಭಾವಗಳು ಕಡಿಮೆಯಾಗುತ್ತಿದೆ. ಇದಕ್ಕೆ ದೇಶದ ಸಾಂಸ್ಕøತಿಕ ಪ್ರಭಾವಗಳೂ ಕಾರಣವಾಗುತ್ತಿದ್ದು ಈ ನಿಟ್ಟಿನಲ್ಲಿ ನಮ್ಮಲ್ಲಿ ವೈಜ್ಞಾನಿಕ ಸ್ವಭಾವಗಳನ್ನು ಹೆಚ್ಚೆಚ್ಚು ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಯೋಗಿ ವೆಮನ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿ ಪ್ರೊ.ಅರ್ಜುಲ ರಾಮಚಂದ್ರ ರೆಡ್ಡಿ ಅವರು ಅಭಿಪ್ರಾಯಪಟ್ಟರು. ಅವರು ಬುಧವಾರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸ್ವಭಾವ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿಜ್ಞಾನ ಕ್ಷೇತ್ರಕ್ಕೆ ನೋಬೆಲ್ ಪುರಸ್ಕøತ ಸಿ.ವಿ.ರಾಮನ್ ಅವರು ಕೊಡುಗೆ ಅಪಾರವಾದುದು. ಹಿಂದಿನ ಕಾಲದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಗಣನೀಯ ಅಲ್ಲದಿದ್ದರೂ ಇತ್ತೀಚಿನ ವರ್ಷಗಳಲ್ಲಿ ಭಾರತವು ಈ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ ಸಮುದಾಯ ಕೂಡಾ ಇಂದು ವಿಜ್ಞಾನ ಕ್ಷೇತ್ರದ ಆಯ್ಕೆಯಲ್ಲಿ ಒಲವು ತೋರಿಸುತ್ತಿದ್ದಾರೆ. ಇದರ ಜೊತೆಗೆ ವೈಜ್ಷಾನಿಕ ಸ್ವಭಾವನ್ನೂ ಬೆಳೆಸಿಕೊಂಡು ನೂತನ ಆವಿಷ್ಕಾರಗಳಿಗೆ ಸಾಕ್ಷಿಯಾಗಬೇಕು ಎಂದು ಹೇಳಿದರು. ಸಮಾರಂಭದ…
UN NETWORKS ಬಬ್ಬುಕಟ್ಟೆ: ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ನೀಡುವ ವಿದ್ಯೆ, ಧಾರ್ಮಿಕ ಸಂಸ್ಥೆಗಳಲ್ಲಿ ಧರ್ಮಗುರುಗಳು ನೀಡುವ ಬೋಧನೆಯಿಂದಲೇ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಉಳ್ಳಾಲ ನಗರಸಭಾ ವ್ಯಾಪ್ತಿಯ ಬಬ್ಬುಕಟ್ಟೆ ಸುಮಯ್ಯ ಜುಮಾ ಮಸೀದಿ ಆವರಣಕ್ಕೆ ಮೂರು ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಇಂಟರ್ಲಾಕ್ ಸೋಮವಾರ ಉದ್ಘಾಟಿಸಿ ಮಾತನಾಡಿದರು. ಓರ್ವ ವ್ಯಕ್ತಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕಾದರೆ ಲೌಕಿಕ ಮಾತ್ರವಲ್ಲ ಧಾರ್ಮಿಕ ಶಿಕ್ಷಣವೂ ಪಡೆಯುವುದು ಮುಖ್ಯ, ಅಂತಹ ಕೆಲಸ ಶಾಂತಿ ಶಿಕ್ಷಣ ಸಂಸ್ಥೆಯಿಂದ ನಡೆಯುತ್ತಿದೆ. ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿರುವ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನೂ ಜಾತ, ಧರ್ಮವಿಲ್ಲದೆ ನೀಡಿದ್ದು, ಶೇ.90ರಷ್ಟು ಕೆಲಸ ಮುಗಿದಿದೆ ಎಂದು ಹೇಳಿದರು. ಈ ಸಂದರ್ಭ ಉಳ್ಳಾಲ ನಗರಸಭಾಧ್ಯಕ್ಷ ಹುಸೈನ್ ಕುಂಞಮೋನು, ಉಪಾಧ್ಯಕ್ಷೆ ಚಿತ್ರಾಕ್ಷಿ, ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಸದಸ್ಯರಾದ ಫಾರೂಕ್ ಉಳ್ಳಾಲ್, ಇಸ್ಮಾಯಿಲ್ ಪೊಡಿಮೋನು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್, ನಗರಸಭೆಯ…
UN NETWORKS ಉಳ್ಳಾಲ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ 75ನೇ ಹುಟ್ಟುಹಬ್ಬ ದಿನಾಚರಣೆ ಪ್ರಯುಕ್ತ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಕುತ್ತಾರಿನ ದುರ್ಗಾವಾಹಿನಿ ಮಹಿಳಾ ಮಂಡಲದ ಸಭಾಂಗಣದಲ್ಲಿ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ, ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
UN NETWORKS ಉಳ್ಳಾಲ : ಪರೀಕ್ಷೆ ಅನ್ನುವುದು ಜೀವನದ ಹಂತ, ಅದನ್ನು ಪ್ರೀತಿಯಿಂದ ಎದುರಿಸುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಬೇಕಿದೆ ಎಂದು ಜಿಲ್ಲ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎಂ.ಆರ್.ರವಿ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಆಶ್ರಯದಲ್ಲಿ ತೊಕ್ಕೊಟ್ಟು ಕಲ್ಲಾಪು ಖಾಸಗಿ ಸಭಾಂಗಣದಲ್ಲಿ ಮಂಗಳವಾರ ಉಳ್ಳಾಲ ಝೋನಲ್ ವ್ಯಾಪ್ತಿಯ ಅನುದಾನ ಹಾಗೂ ಅನುದಾನ ರಹಿತ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪರೀಕ್ಷೆ ಪೂರ್ವ ತಯಾರಿ ಹಾಗೂ 2017ರ ಎಸ್ ಎಸ್ ಎಲ್ ಸಿ ಟಾಪರ್ ವಿದ್ಯಾರ್ಥಿ ಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವರ್ಷದ ಸಾಮರ್ಥ್ಯ ವನ್ನು ಮೂರು ಗಂಟೆಗಳಲ್ಲಿ ಅಳೆಯುವಂತಹ ಪ್ರಬಲ ಮಾಧ್ಯಮ ಪರೀಕ್ಷೆಯಾಗಿದೆ. ಕಳೆದ ಸಾಲಿನಲ್ಲಿ 5,283 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ಗಣಿತ, ವಿಜ್ಞಾನ ವಿಷಯಗಳಲ್ಲಿ ಹೆಚ್ಚಾಗಿ ಅನುತ್ತೀರ್ಣಗೊಳ್ಳುತ್ತಿದ್ದ ವಿದ್ಯಾರ್ಥಿ ಗಳು ಕಳೆದ ಬಾರಿ ಸಮಾಜ ವಿಜ್ಞಾನ ಹಾಗೂ ಹಿಂದಿ ಭಾಷೆಯಲ್ಲಿ ಅನುತ್ತೀರ್ಣಗೊಂಡವರಿದ್ದಾರೆ. ಸಮಸ್ಯೆಗಳ ಚರ್ಚೆಯನ್ನು ನಡೆಸಿ, ಪರೀಕ್ಷೆಗಳನ್ನು ಎದುರಿಸುವ ಶಕ್ತಿಯನ್ನು ನಿರ್ಮಿಸುವ…
UN NETWORKS ತಲಪಾಡಿ: ಆಧುನಿಕ ಬದುಕಿನ ಅಗತ್ಯತೆ ಕಂಡಾಗ ಕೆಲವು ಭಾಷೆಗಳು ನಮಗೆ ಅನಿವಾರ್ಯವೇನೋ ಸರಿ. ಆದರೆ ನಮ್ಮದು ಎಂಬ ನಮ್ಮ ಬದುಕುವ ಧರ್ಮವಾಗಿರುವ ಸನಾತನವನ್ನು ಮರೆಯದೆ ನೂತನ ಅಧ್ಯಯನ ಮಾಡುವುದು ತಪ್ಪಲ್ಲ ಅಷ್ಟಕ್ಕೂ ವಿಜ್ಞಾನದಲ್ಲಿ ದಿನನಿತ್ಯ ಬದಲಾವಣೆ ಆಗುತ್ತಿದ್ದು ಆಧ್ಯಾತ್ಮಿಕದಲ್ಲಿ ಬದಲಾವಣೆ ಎಂಬುದು ಇಲ್ಲ. ಅದು ಯಾವ ಕಾಲಕ್ಕೂ ಬದಲಾಗದು. ಹಾಗಾಗಿ ವಿಜ್ಞಾನಕ್ಕಿಂತ ಸನಾತನ ಭಿನ್ನ ಎಂದು ಶ್ರೀ ಕ್ಷೇತ್ರ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಟ್ಟರು. ತಲಪಾಡಿ ಅಲಂಕಾರಗುಡ್ಡೆ ಶ್ರೀ ಮಲರಾಯ ಧೂಮಾವತೀ ಬಂಟ ದೈವಸ್ಥಾನದ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.ಯಾವುದೇ ಧರ್ಮ ಸರ್ವರ ಸಕಲರ ಅಭ್ಯುದಯಕ್ಕಾಗಿ ಇರುವುದು, ಇರಬೇಕು. ಧರ್ಮವಿಲ್ಲದೆ ಬದುಕಿಲ್ಲ. ಧರ್ಮವಿಲ್ಲದ ಬದುಕು ನೀರಿನಿಂದ ಮೇಲೆ ಬಂದ ಮೀನಿನಂತೆ. ಹಕ್ಕಿ ಆಕಾಶದಲ್ಲಿ ಹಾರಾಡುತ್ತಾ ನೀರಿನಲ್ಲಿ ಈಜುವ, ಮೀನು ನೀರಿನಲ್ಲಿ ಈಜುತ್ತಾ ಬಾನಂಚಿನಲ್ಲಿ ಹಾರಾಡುವ ಕನಸುಕಾಣುವುದುರಿಂದ ಯಾವುದೇ ಬದಲವಾಣೆ ಸಿಗದು. ಯಾಕೆಂದರೆ ಮೀನು ನೀರಿನಿಂದ ಹೊರಬಂದರೆ…
UN NETWORKS ಉಳ್ಳಾಲ: ಡಾ| ದಯಾನಂದ ಪೈ, ಪಿ. ಸತೀಶ್ ಪೈ ಸರ್ಕಾರಿ ಪ್ರಥಮದರ್ಜೆ ಕಾಲೇಜು ರಥಬೀದಿ ಮಂಗಳೂರಿನಲ್ಲಿ ಸಂಸ್ಕೃತಿ ಬಿಂಬ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಬಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೂಪ ವಿಜಯೇಂದ್ರ ಭಟ್, ಸ್ಥಳೀಯ ಕಾರ್ಪೊರೇಟರ್ ಹಾಗೂ ಕಾಲೇಜು ಅಭಿವೃದ್ಧಿ ಸದಸ್ಯ ರಾಮದಾಸ್, ಕಾಲೇಜಿನ ಪ್ರೊ| ಶೇಷಪ್ಪ ಅಮೀನ್ ಉಪಸ್ಥಿತರಿದ್ದರು.

