ಪಜೀರು: ಮನೆಯೊಂದರಲ್ಲಿ ಜಾನುವಾರುಗಳನ್ನು ಕಡಿಯುತ್ತಿದ್ದ ಮಾಹಿತಿ ಪಡೆದ ಸುಮಾರು 50 ಜನರ ಗುಂಪು ದಾಳಿ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿ ನಡೆದಿದ್ದು, ಈ ವೇಳೆ ಮೂವರು ಗಾಯಗೊಂಡು ದೇರಳಕಟ್ಟೆ ಖಾಸಗಿ ಆಸ್ಪತ್ರೆಂiÀiಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಗುಂಪಿನಿಂದ ದಾಳಿಗೆ ಒಳಗಾದವರನ್ನು ಪಾವೂರು ಗ್ರಾಮದ ಮನ್ಸೂರು (28 ), ಇರ್ಷಾದ್ (17) ಹಾಗೂ ಅಂಬ್ಲಮೊಗರು ಗ್ರಾಮದ ಅಸ್ಲಂ ಯಾನೆ ಸಲಾಂ (38) ಎಂದು ಗುರುತಿಸಲಾಗಿದೆ. ಮೂವರು ಅಡ್ಕ ಎಂಬಲ್ಲಿರುವ ಜೋಕಿ ಡಿಸೋಜ ಎಂಬವರ ಮನೆಯಲ್ಲಿ ಜಾನುವಾರುಗಳನ್ನು ಮಾಂಸಕ್ಕಾಗಿ ಕಡಿಯುತ್ತಿದ್ದರು. ಮಾಂಸ ಕೊಂಡೊಯ್ಯಲು ತಡರಾತ್ರಿ ರಿಕ್ಷಾ ಸಂಚಾರ ಅಧಿಕವಿದ್ದಾಗ, ಸಂಶಯಗೊಂಡ ಸ್ಥಳೀಯರು ಹಿಂದು ಸಂಘಟನೆಗೆ ಮಾಹಿತಿ ನೀಡಿದ್ದರು. ಅದರಂತೆ ಸುಮಾರು 50 ಮಂದಿಯ ತಂಡ ಮನೆಗೆ ದಾಳಿ ನಡೆಸಿ ಕಲ್ಲು, ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ರೂ. 50,000 ನಗದು ಕಳವುಗೈದಿದ್ದಾರೆಂದು ಆಸ್ಪತ್ರೆಯಲ್ಲಿ…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಬೀರಿ: ರಸ್ತೆಗೆ ಆಲದ ಮರ ಉರುಳಿಬಿದ್ದು ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಬೀರಿ- ದೇರಳಕಟ್ಟೆ ರಸ್ತೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಸಂಭವಿಸಿದೆ. ಮಾಡೂರು ಹರಿ ಬಡಾವಣೆ ನಿವಾಸಿ ಅವಿನಾಶ್ ಮಾಡೂರು(28) ಗಂಭೀರ ಗಾಯಗೊಂಡವರು. ದ್ವಿಚಕ್ರ ವಾಹನದಲ್ಲಿ ಮಾಡೂರಿನ ಮನೆಯಿಂದ ತೊಕ್ಕೊಟ್ಟು ಕಡೆಗೆ ತೆರಳುವ ಸಂದರ್ಭ ಜೋರಾಗಿ ಬೀಸಿದ್ದ ಗಾಳಿಯಿಂದಾಗಿ ಹಲವು ವರ್ಷಗಳಿಂದ ರಸ್ತೆಬದಿಯಲ್ಲಿದ್ದ ಬೃಹತ್ ಗಾತ್ರದ ಆಲದ ಮರ ಉರುಳಿಬಿದ್ದಿದೆ. ಮರದ ಕೊಂಬೆಯೊಂದು ಅವಿನಾಶ್ ತಲೆಭಾಗಕ್ಕೆ ಬಿದ್ದು ಸ್ಕೂಟರ್ ಸಮೇತ ಅವರು ರಸ್ತೆಗೆ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಮರ ತೆರವುಗೊಳಿಸುವಲ್ಲಿ ಶ್ರಮಿಸಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಹಾಯಕ ಖಾಝಿ ಅಬ್ದುಲ್ ರವೂಫ್ ಉಸ್ತಾದ್ರವರು ಉಡುಪಿ ಮತ್ತು ಮಂಗಳೂರು ಖಾಝಿಯವರು ಭಟ್ಕಳದಲ್ಲಿ ಚಂದ್ರದರ್ಶನವಾಗಿರುವ ಮಾಹಿತಿ ಪಡೆದು ಈದ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಸಂಭ್ರಮದಿಂದ ಈದುಲ್ ಫಿತ್ರ್ ಆಚರಿಸಲಾಗುತ್ತಿದೆ ಎಂದು ಉಳ್ಳಾಲ ಸೈಯ್ಯಿದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದ್ದಾರೆ. ಅವರು ರವಿವಾರ ಉಳ್ಳಾಲ ಸೈಯ್ಯದ್ ಮದನಿ ದರ್ಗಾದಲ್ಲಿ ಈದ್ ವುಲ್ ಫಿತ್ರ್ ಪ್ರಯುಕ್ತ ನಡೆದ ವಿಶೇಷ ನಮಾಝ್ನಲ್ಲಿ ಭಾಗವಹಿಸಿ ಬಳಿಕ ಮಾತನಾಡಿದರು. ಉಡುಪಿ ಸಂಯುಕ್ತ ಖಾಝಿ ಬೇಕಲ ಇಬ್ರಾಹಿಂ ಮುಸ್ಲಿಯಾರ್ ಮತ್ತು ಮಂಗಳೂರು ಖಾಝಿ ತ್ವಾಕಾ ಉಸ್ತಾದ್ರವರು ಭಟ್ಕಳದಲ್ಲಿ ಚಂದ್ರದರ್ಶನವಾಗಿರುವ ಬಗ್ಗೆ ನೀಡಲಾದ ಮಾಹಿತಿಯ ಮೇರೆಗೆ ಉಳ್ಳಾಲದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಿಸಲಾಗಿದೆ. ಸೈಯದ್ ಫಝಲ್ ಕೋಯಮ್ಮ ತಂಙಳ್ ಅವರು ಒಂದು ವರ್ಷದಿಂದ ಉಳ್ಳಾಲದಲ್ಲಿ ಸಂಪರ್ಕ ಇಲ್ಲದ ಕಾರಣ ಸಹಾಯಕ ಖಾಝಿ ಅಬ್ದುಲ್ ರವೂಫ್ ಉಸ್ತಾದ್ ಅವರ ಮಾಹಿತಿ ಪಡೆದು ಹಬ್ಬವನ್ನು ಆಚರಿಸಲಾಗುತ್ತಿದೆ ಎಂದ ಅವರು ಈದುಲ್ ಫಿತ್ರ್ ಶಾಂತಿ,…
ಉಳ್ಳಾಲ ನ್ಯೂಸ್ ನೆಟ್ವರ್ಕ್ ದೇರಳಕಟ್ಟೆ: ಮನಸ್ಸಿನ ಗೊಂದಲಗಳ ಮಧ್ಯೆ ಬದುಕುವವರ ಸೇವೆ ಹಾಗೂ ಅವರ ಜತೆಗೆ ಹಬ್ಬದ ಆಚರಣೆ ನಡೆಸುವುದರ ಮೂಲಕ ಅವರ ಬಾಳಿನಲ್ಲೂ ಸ್ಫೂರ್ತಿ ತುಂಬಿಸುವ ಕೆಲಸ ಹೆಲ್ಪ್ ಇಂಡಿಯಾ ಫೌಂಡೇಶನ್ನಿನಿಂದ ಆಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯಪಟ್ಟರು. ಅವರು ಹೆಲ್ಪ್ ಇಂಡಿಯಾ ಫೌಂಡೇಷನ್ ಆಯೋಜಿಸಿದ್ದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮಾನಸಿಕ ರೋಗಿಗಳ ಜತೆಗಿನ ಈದ್ ಉಲ್ ಫಿತರ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಒಳ್ಳೆಯ ಉದ್ದೇಶ ಇಟ್ಟುಕೊಂಡು ಉಪವಾಸ ಆಚರಣೆ ಬಳಿಕ ನಡೆಯುವ ಹಬ್ಬ ಈದ್ ಉಲ್ ಫಿತರ್ ಆಚರಣೆ ಸಮಾಜದಲ್ಲಿ ಎಲ್ಲರಿಗೂ ಪ್ರೇರಣೆಯಾಗಿದೆ. ಯುವಕರ ಯೋಚನೆಗಳ ಜತೆಗೆ ಹಿರಿಯ ಆಲೋಚನೆಗಳು ಬದಲಾದಲ್ಲಿ ಸಮಾಜದ ಉದ್ಧಾರ ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮ ಪರಿಸರದಲ್ಲಿ ಸಾಮರಸ್ಯ ಕಾಪಾಡಲು ಪ್ರೇರಣಾದಾಯಕ ಎಂದರು. ಕೃಷಿಕ ಸಮಾಜದ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ ಮಾತನಾಡಿ ಪ್ರತಿಯೊಂದು ಸಂಘ ಸಂಸ್ಥೆಗಳ ಹಿಂದೆ ಸ್ವಾರ್ಥ ಇರುತ್ತದೆ. ಆದರೆ ಹೆಲ್ಪ್ ಇಂಡಿಯಾದ ಸದಸ್ಯರು ಸ್ವಾರ್ಥವಿಲ್ಲದೆ ಸೌಹಾರ್ದಯುತವಾಗಿ…
ಉಳ್ಳಾಲ್ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಹೋದರತೆ ಮತ್ತು ವಿಶ್ವಾಸಯುತ ವಾತಾವರಣವನ್ನು ನಿರ್ಮಿಸುವುದೇ ಹಬ್ಬಗಳ ಸಂದೇಶವಾಗಿದ್ದು, ಇದನ್ನು ಮನದಲ್ಲಿಟ್ಟುಕೊಂಡು ಸರೋಜ್ ಆಸ್ಪತ್ರೆ ಹಮ್ಮಿಕೊಂಡಿರುವ ಕಾರ್ಯಕ್ರಮ ಶಾಂತಿ ಮತ್ತು ಏಕತೆಯನ್ನು ಬೆಳೆಸಲು ಪೂರಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಸೈಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿರುವ ಸರೋಜ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಳ್ಳಾಲದ ಆಸ್ಪತ್ರೆ ಆವರಣದಲ್ಲಿ ಶನಿವಾರ ಜರಗಿದ ಸಾಂಕೇತಿಕ ಇಫ್ತಾರ್ ಕೂಟ ಹಾಗೂ ರವiದಾನ್ ಕಿಟ್ ವಿತರಿಸಿ ಮಾತನಾಡಿದರು. ಏಕತೆ, ಪ್ರೀತಿ, ವಿಶ್ವಾಸ, ಸಹೋದರತೆ ಪ್ರತಿ ಧರ್ಮದ ಸಂದೇಶವಾಗಿದೆ. ಆರೋಗ್ಯ ಸೇವೆಯಲ್ಲಿ ಮಾನವೀಯತೆಯನ್ನು ಕಾಪಾಡಿಕೊಂಡು ಬರುತ್ತಿರುವ ಆಸ್ಪತ್ರೆ ಬಡವರನ್ನು ಗುರುತಿಸುವ ಕಾರ್ಯ ಶ್ಲಾಘನೀಯ. ಸಂಪಾದಿಸಿದ ಸಂಪತ್ತಿನಲ್ಲಿ ಅಲ್ಪವನ್ನು ನೊಂದವರಿಗೆ, ಸಮಾಜದಿಂದ ಹಿಂದುಳಿದವರಿಗೆ ವಿತರಿಸುವ ಕಾರ್ಯ ಹಿಂದಿನಿಂದ ಬಂದಿರುತ್ತದೆ. ಅದನ್ನು ಪಾಲಿಸುವ ಜವಾಬ್ದಾರಿ ಮುಂದಿನ ಪೀಳಿಗೆಯಿಂದಲೂ ಆಗಬೇಕಿದೆ ಎಂದರು. ದರ್ಗಾದ ಉಸ್ತಾದ್ ಮುಝಾಂಬಿಲ್ ದುಆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರೋಜ್ ಆಸ್ಪತ್ರೆ ಮುಖ್ಯಸ್ಥ ಡಾ.ಗಜಾನನ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ :ಎಸ್.ಎಸ್.ಎಫ್ ಉಳ್ಳಾಲ ಸೆಕ್ಟರ್ ವತಿಯಿಂದ ಈದ್ ಕಿಟ್ ವಿತರಣಾ ಕಾರ್ಯಕ್ರಮ ಉಳ್ಳಾಲ ಆಜಾದ್ ನಗರದ ಎಸ್.ಎಸ್.ಎಫ್ ಕಚೇರಿಯಲ್ಲಿ ನಡೆಯಿತು. ಉಳ್ಳಾಲ ಎಸ್.ಎಸ್.ಎಫ್ ಡಿವಿಸನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಈದ್ ಕಿಟ್ ವಿತರಿಸಿದರು, ಬಳಿಕ ಮಾತನಾಡಿದ ಅವರು ಇಸ್ಲಾಮಿನ ನಿಯಮದಂತೆ ಖಡ್ಡಾಯವಾಗಿ ಝಕಾತನ್ನು ನೀಡ ಬೇಕಾದ ರೂಪದಲ್ಲಿ ನೀಡಿರುತ್ತಿದ್ದರೆ ನಮ್ಮ ಸಮುದಾಯದ ಬಡವರನ್ನು ಉತ್ತುಂಗಕ್ಕೆ ಏರಿಸಿ,ಸಮಾಜದ ಮುಖ್ಯವಾಹಿನಿಗೆ ತರಲು ಸಾದ್ಯವಿರುತ್ತಿತ್ತು ಎಂದರು. ಎಸ್.ಎಸ್.ಎಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯದ್ ಕುಬೈಬ್ ತಂಙಳ್,ಎಸ್.ಎಸ್.ಎಫ್ ಉಳ್ಳಾಲ ಸೆಕ್ಟರ್ ಉಸ್ತುವಾರಿ ತೌಸೀಫ್ ಸಅದಿ ಹರೇಕಳ,ಉಳ್ಳಾಲ ಎಸ್.ಎಸ್.ಎಫ್ ಡಿವಿಸನ್ ಕೋಶಾಧಿಕಾರಿ ಹಮೀದ್ ತಲಪಾಡಿ, ಎಸ್,ವೈ.ಎಸ್,ಉಳ್ಳಾಲ ಸೆಕ್ಟರ್ ಕಾರ್ಯದರ್ಶಿ ಹನೀಫ್ ಹಾಜಿ, ಮಾದ್ಯಮ ಕಾರ್ಯದರ್ಶಿ ನವಾಝ್ ಸಖಾಫಿ,ಎಸ್.ಎಸ.ಎಫ್.ಮೇಲಂಗಡಿ ಯುನಿಟ್ ಕಾರ್ಯದರ್ಶಿ ಜಮಾಲುದ್ದೀನ್ ಮುಸ್ಲಿಯಾರ್, ಸಿರಾಜ್ ಮುಸ್ಲಿಯಾರ್, ಎಸ್.ಎಸ್.ಎಫ್ ಮತ್ತು ಎಸ್.ವೈ.ಎಸ್ ಸಾಂತ್ವನ ವಿಭಾಗದ ಕಾರ್ಯದರ್ಶಿ ತಾಹೀರ್ ಹಾಜಿ, ಸಾದಾತ್ ಅಸೋಸಿಯೇಶನ್ ಸಂಯೋಜಕರಾದ ದಾವೂದ್ ತಂಙಳ್ ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಉಳ್ಳಾಲ ಸೆಕ್ಟರ್ ಜೊತೆ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಮಾಜದಲ್ಲಿ ಹಿಂದುಳಿದವರ ಸೇವೆ ಮಾಡುವುದರ ಮೂಲಕ ಅಂತವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕಾರ್ಯ ಶ್ಲಾಘನೀಯ ಎಂದು ಮೊೈದೀನ್ ಜುಮಾ ಮಸೀದಿ ಖತೀಬರಾದ ನಝೀರ್ ಅಹ್ಮದ್ ಬೋಲ್ ಮೀನಾರ್ ಹೇಳಿದರು. ಅವರು ಬಜಾಲ್ ಪಕ್ಕಲಡ್ಕದ ರಿಫಾಯಿಯ್ಯ ದಫ್ ಕಮಿಟಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಅಬ್ದುಲ್ ಹಮೀದ್ ಅವರಿಗೆ ನಿರ್ಮಿಸಿದ ಮನೆಯಲ್ಲಿ ದುಆ ನೆರವೇರಿಸಿ ಮಾತನಾಡಿದರು. ರಿಫಾಯಿಯ್ಯ ದಫ್ ಕಮಿಟಿ ಸದಸ್ಯ ಫೈರೋಝ್ ಉಳ್ಳಾಲ್ ಮಾತನಾಡಿ ರಿಫಾಯಿಯ್ಯ ದಫ್ ಕಮಿಟಿ 13 ವರ್ಷಗಳಿಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಜಮಾಅತಿನ ಬಡವರ ಹೆಣ್ಣು ಮಕ್ಕಳ ಮದುವೆಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಪುಸ್ತಕ ವಿತರಣೆ, ವೈದಕೀಯ ವೆಚ್ಛಗಳನ್ನು ಭರಿಸುವುದು, ಮನೆ ನಿರ್ಮಾಣ, ಮನೆ ದುರಸ್ತಿಯಂತಹ ಕಾರ್ಯ ಮಾಡುತ್ತಾ ಬಂದಿದ್ದು. ಮುಂದೆಯೂ ಇದೇ ರೀತಿಯಲ್ಲಿ ಇನ್ನಷ್ಟು ಯೋಜನೆಗಳನ್ನು ನಡೆಸಲು ನಿರ್ಧರಿಸಿದೆ ಎಂದರು. ಈ ಸಂದರ್ಭ ಪಕ್ಕಲಡ್ಕ ರಿಫಾಯಿಯ್ಯ ದಫ್ ಕಮಿಟಿ ಅಧ್ಯಕ್ಷ ಝೈನುದ್ದೀನ್, ಕಾರ್ಯದರ್ಶಿ ಸಬೀರ್ ಅಹ್ಮದ್, ಜೊತೆ ಕಾರ್ಯದರ್ಶಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ :ಅಪಘಾತ ನಡೆಸಿ ಕಾರಿನಲ್ಲಿದ್ದವರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನು ಐದು ಮಂದಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅಜ್ಜಿನಡ್ಕ ನಿವಾಸಿ ಸಾದಿಕ್ (24) ಎಂಬಾತನನ್ನು ಬಂಧಿಸಲಾಗಿದೆ. ಜೂ.21ರ ಮಧ್ಯಾಹ್ನ ವೇಳೆ ಬಜಪೆ ವಿಮಾನ ನಿಲ್ದಾಣದಿಂದ ವಾಪಸ್ಸಾಗುತ್ತಿದ್ದ ಕೇರಳ ತ್ರಿಕರಿಪುರ ನಿವಾಸಿಗಳಾದ ತಾಹೀಝ್ ಮತ್ತು ಅಶ್ರಫ್ ಎಂಬವರನ್ನು ತಂಡ ಅಪಹರಣಕ್ಕೆ ಯತ್ನಿಸಿತ್ತು. ಆಗಷ್ಟೇ ವಿದೇಶದಿಂದ ವಾಪಸ್ಸಾಗಿದ್ದ ಅಶ್ರಫ್ ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದರೆ ತಾಹೀಝ್ ನನ್ನು ತಂಡ ಅಪಹರಣ ನಡೆಸಿ ರೂ. 5 ಲಕ್ಷದ ಬೇಡಿಕೆ ಮುಂದಿಟ್ಟಿತ್ತು. ಉಳ್ಳಾಲ ಮತ್ತು ಮಂಜೇಶ್ವರ ಪೊಲೀಸರು ಜಂಟಿಯಾಗಿ ನಿರಂತರ ಐದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತಡರಾತ್ರಿ ವೇಳೆ ಅಪಹೃತ ತಾಹೀಝನನ್ನು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು. ಈ ಕುರಿತು ಪ್ರಕರಣ ಉಳ್ಳಾಲ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಓರ್ವನನ್ನು ಬಂಧಿಸಲಾಗಿದ್ದು ಇನ್ನು ಕಡಂಬಾರು, ಮಂಜೇಶ್ವರ ನಿವಾಸಿಗಳಾದ ಐದು ಮಂದಿಯ ಶೋಧ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ. ಕೃತ್ಯವನ್ನೇ ಉದ್ಯೋಗವಾಗಿಸಿದ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು:ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈಯವರು ಪ್ರಭಾಕರ ಭಟ್ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸದ್ದಾರೆಯೇ ವಿನಹ ಯಾವುದೇ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸಚಿವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ತಿಳಿಸಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಜಿಲ್ಲೆಯಲ್ಲಿ ಕೋಮ ಪ್ರಚೋದನೆ ಮಾಡುವ ಶಕ್ತಿಗಳ ಬಗ್ಗೆ ಯಾವುದೇ ಚಕಾರ ಎತ್ತದ ಪಟ್ಟಭದ್ರ ಹಿತಾಸಕ್ತಿಗಳು ಈ ರಾಜ್ಯದ ಹಿರಿಯ ಸಚಿವರೂ ದ.ಕ.ಜಿಲ್ಲೆಯ ಪ್ರಗತಿಯ ಹರಿಕಾರರೂ, ಈ ಜಿಲ್ಲೆ ಕಂಡ ನೈಜ ಜಾತ್ಯಾತೀತ ರಾಜಕಾರಣಿಯೂ ಆಗಿರುವ ಬಿ. ರಮಾನಾಥ ರೈಯವರನ್ನು ತಪ್ಪಿಸತಸ್ಥರನ್ನಾಗಿ ಮಾಡಿರುವುದು ತೀವ್ರ ಖಂಡನೀಯ ಎಂದ ಅವರು ಕಲ್ಲಡ್ಕ ಪ್ರಭಾಕರ ಭಟ್ ಕಳೆದ 45 ವರ್ಷಗಳಿಂದ ಈ ಜಿಲ್ಲೆಯಲ್ಲಿ ಕೋಮುಭಾವನೆಯನ್ನು ಹರಡುತ್ತಿರುವುದು ಈ ರಾಜ್ಯದ ಜನತೆಗೆ ತಿಳಿದಿದ್ದು, ಈವರೆಗೆ ಅವರ ಮೇಲೆ ಕ್ರಮಕೈಗೊಂಡಿಲ್ಲ, ಈ ನಿಟ್ಟಿನಲ್ಲಿ…
ಕೊಣಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶ್ವಮಂಗಳ ಸಭಾ ಭವನದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ| ಕೆ. ಕೃಷ್ಣ ಶರ್ಮ, ಉಪನ್ಯಾಸಕರಾದ ತಿರುಮಲೇಶ್ವರ ಪ್ರಸಾದ್ ಇವರು ಯೋಗಾಸನಗಳ ಮಹತ್ವ ಮತ್ತು ಪರಿಣಾಮದ ಬಗ್ಗೆ ವಿವರಿಸಿದರು. ಶಾಲಾ ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಹೇಳಿ ಕೊಡಲಾಯಿತು. ಶಾಲಾ ಸಹ ಶಿಕ್ಷಕಿಯಾದ ಮಾನಸರವರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶ್ವಮಂಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಬಿ. ಇಸ್ಮಾಯಿಲ್, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಶರೀನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮ ಶೆಟ್ಟಿ, ಪ್ರೌಢ ಶಾಲಾ ಮುಖ್ಯಸ್ಥೆ ಪ್ರಿಯ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ಶೋಭಾವತಿ, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ಅಂತು ಡಿ’ಸೋಜರವರು ಉಪಸ್ಥಿತರಿದ್ದರು. ಶಾಲಾ ನಾಯಕಿ ಧನ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.

