Author: UllalaVani

Kannada News From Coastal Karnataka

UN NETWORKS ಕೊಣಾಜೆ: ನಮ್ಮ ಗ್ರಾಮ, ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದರೊಂದಿಗೆ ಸಮಾಜದ ಅಭಿವೃದ್ಧಿಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು. ಗ್ರಾಮದ ಅಭಿವೃದ್ಧಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಎಷ್ಟು ಜವಾಬ್ಧಾರಿ ಇದೆಯೋ ಅಷ್ಟೇ ಜವಬ್ಧಾರಿ ಗ್ರಾಮದ ಪ್ರತಿಯೊಬ್ಬನಿಗೂ ಇದೆ. ಆದ್ದರಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಕೊಣಾಜೆ ಪಂಚಾಯಿತಿಯ ಮಾಜಿ ಮಂಡಲ ಪ್ರಧಾನರು ಹಾಗೂ ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷರಾದ ಟಿ.ಎಸ್.ಅಬ್ದುಲ್ಲಾ ಸಾಮಾಣಿಗೆ ಅವರು ಅಭಿಪ್ರಾಯಪಟ್ಟರು. ಅವರು ಕೊಣಾಜೆ ಗ್ರಾಮ ಪಂಚಾಯಿತಿ ಬಳಿ ನೆಹರೂ ಯುವ ಕೇಂದ್ರ ಮಂಗಳೂರು, ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಕೊಣಾಜೆ ಗ್ರಾಮ ಪಂಚಾಯಿತಿ, ಜನಶಿಕ್ಷಣ ಟ್ರಸ್ಟ್, ವಿಜಯಗ್ರಾಮಾಭಿವೃದ್ಧಿ ಪ್ರತಿಷ್ಠಾನ ಹಾಗೂ ಸಹ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ನಡೆದ `ನೆರೆಹೊರೆ-ಯುವಸಂಸತ್ತು’ ಕೇಂದ್ರ ಪುರಸ್ಕøತ ಯೋಜನೆಗಳು ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊಣಾಜೆ ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಚತೆ, ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಲ್ಲದೆ ಹಿಂದೆ ಮಂಡಲ…

Read More

UN NETWORKS ಉಳ್ಳಾಲ: ಎಳೆಯರಲ್ಲಿ ಭಾಷೆ ಕುರಿತು ಪ್ರೀತಿಯನ್ನು ಹುಟ್ಟಿಸುವ ಕಾರ್ಯ ಆಗಬೇಕಿದೆ. ಸುತ್ತಮುತ್ತಲಿನ ಸಂಪತ್ತನ್ನು ಹಾಡಿ ಹೊಗಳಿದರೆ ಸಾಲದು, ಮುಂದಿನ ಪೀಳಿಗೆಗೆ ಅದರ ಅರಿವು ಮೂಡದೇ ಇದ್ದಲ್ಲಿ ಪ್ರಯೋಜನವಿಲ್ಲ. ಎಂದು ತುಳು ಸಾಹಿತಿ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಅವರು ನಿಟ್ಟೆ (ಸ್ವಾಯುತ್ತೆ ಆಗಲಿರುವ ವಿ.ವಿ) ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಾತೃಭಾಷಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಷೆಗಳ ಪ್ರಾಚೀನತೆ 1,000 ವರ್ಷಕ್ಕಿಂತಲೂ ಹಿಂದಿನದ್ದು, ತುಳುನಾಡ ಜನರ ಇಚ್ಛಾಶಕ್ತಿ ಕೊರತೆಯಿಂದ ಭಾಷೆಯ ಮೇಲಿನ ಮಮಕಾರ ಕಳೆದುಹೋಗಿದೆ. ಇದರಿಂದ ಶಾಸ್ತ್ರೀಯ ಭಾಷೆಯ ಸ್ಥಾನಮಾನ ತುಳು ಭಾಷೆಗೆ ಇನ್ನೂ ಬಂದಿಲ್ಲ. ಪಂಚದ್ರಾವಿಡ ಭಾಷೆಗಳಲ್ಲಿ ಇತರೆ ನಾಲ್ಕು ಭಾಷೆಗಳೂ ಸಾಂವಿಧಾನಿಕವಾಗಿ ಸೇರ್ಪಡೆಗೊಂಡಿದ್ದರೆ, ತುಳು ಸೇರ್ಪಡೆಯಾಗಿಲ್ಲ. ಇದರಿಂದ ಭಾಷೆ, ಭಾಷಿಗರಿಗೆ ಹಿನ್ನೆಡೆಯಾಗಿದೆ. ಕನ್ನಡದಷ್ಟೇ ಪ್ರಭಾವಿ ಭಾಷೆ ತುಳುವನ್ನು ಜಿಲ್ಲೆಯ ಭಾಷೆಯನ್ನಾಗಿ ಮಾಡಲು ಈವರೆಗೆ ಸಾಧ್ಯವಾಗಿಲ್ಲ. ಸಾಂವಿಧಾನಿಕವಾಗಿ ಸೇರ್ಪಡೆಗೊಳ್ಳದೇ ಇದ್ದಲ್ಲಿ ಅಧಿಕೃತವಾಗಿ ಭಾಷೆಯನ್ನು ಎಲ್ಲಿಯೂ…

Read More

UN NETWORKS ಇರಾ: ರಾಜ್ಯದ ಆಹಾರ ಮತ್ತು ನಾಗರೀಕ ಪೊರೈಕೆ ಸಚಿವರಾದ ಯು.ಟಿ.ಖಾದರ್ ರವರ ಅನುದಾನದಿಂದ ಇರಾ ಗ್ರಾಮದ ದರ್ಕಾಸ್ ಗ್ರಾಮ ಪಂಚಾಯತ್ ಸಂಪರ್ಕ ರಸ್ತೆ ಡಾಮರೀಕರಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ ರವರು ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಪಂಚಾಯತ್ ಸದಸ್ಯರಾದ ಎಮ್.ಬಿ.ಉಮರ್, ಮೊಹಿದಿನ್ ಕುಂಞ ,ರಮೇಶ್ ಪೂಜಾರಿ ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮುರಲೀದರ್ ಭಂಡಾರಿ ,ಅನಿಲ್ ಸೂತ್ರಬೈಲ್ ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಮುರಳಿ, ಗ್ರಾಮದ ಸ್ಥಳೀಯರಾದ ವಿಶ್ವನಾಥ್ ಕೊಟ್ಟಾರಿ, ಚಂದ್ರಶೇಖರ್ ,ಬಶೀರ್ ಇರಾ, ಶ್ರೀಧರ ಬೆಳ್ಚಡ ,ಹನೀಫ್ ಪರಪ್ಪು ,ಮುಂತಾದ ಗಣ್ಯರು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ತ್ರಿವಳಿ ತಲಾಖ್ ವಿರುದ್ಧ ಕಾನೂನು ಹೊರಡಿಸುವ ಹಿಂದೆ ಫ್ಯಾಸಿಸ್ಟ್ ಶಕ್ತಿಗಳ ಕುತಂತ್ರ, ಅಜೆಂಡಾ ಹಾಗೂ ಷಡ್ಯಂತ್ರವಿದೆ. ಇದನ್ನು ಮುಸ್ಲಿಂ ಸಮುದಾಯ ಒಕ್ಕೊರಲಿನಿಂದ ವಿರೋಧಿಸಬೇಕಿದೆ ಎಂದು ಎಸ್ ಡಿಪಿಐ ಜಿಲ್ಲಾ ಮುಖಂಡ ಅಶ್ರಫ್ ಎ.ಕೆ ಹೇಳಿದ್ದಾರೆ. ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ವತಿಯಿಂದ ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಗೊಳಿಸಿರುವುದನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಪ್ರಯುಕ್ತ ದೇರಳಕಟ್ಟೆ ಜಂಕ್ಷನ್ನಿನಲ್ಲಿ ಮಂಗಳವಾರ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಸ್ಲಿಂ ಸಹೋದರಿಯರನ್ನು ಹತ್ಯೆಗೈದು ಅಧಿಕಾರ ಸ್ವೀಕರಿಸಿಕೊಂಡ ಕೇಂದ್ರದ ಮೋದಿ ಸರಕಾರಕ್ಕೆ, ಮುಸ್ಲಿಂ ಮಹಿಳೆಯರ ಮೇಲೆ ಅತೀವ ಕಾಳಜಿಯನ್ನು ತೋರಿಸುತ್ತಿದೆ. ಕಾಳಜಿ ಪ್ರದರ್ಶಿಸುವ ಮುನ್ನ ಗುಜರಾತಿನಲ್ಲಿ ಹತ್ಯೆಗೀಡಾದ ಮುಸ್ಲಿಂ ಗರ್ಭಿಣಿ ಮಹಿಳೆ ಸೇರಿದಂತೆ ಇತರೆ ಮಹಿಳೆಯರು ಹಾಗೂ ವಿಧವೆಯರನ್ನಾಗಿ ಮಾಡಿದವರನ್ನು ಮುಂಚಿತವಾಗಿ ಸಹೋದರಿಯರನ್ನಾಗಿ ಸ್ವೀಕರಿಸಲಿ. ದೇಶದ ಸಂವಿಧಾನದಲ್ಲಿ ಮುಸ್ಲಿಂ ಮಹಿಳೆಯರಿಗೆ ಅನ್ಯಾಯವಾದಲ್ಲಿ ಸೂಕ್ತ ಕಾನೂನುಗಳಿವೆ. ಆದರೆ ಏಕಾಏಕಿ ತ್ರಿವಳಿ ತಲಾಖ್ ವಿರುದ್ಧ ಕಾನೂನು ಹೊರಡಿಸುವ…

Read More

UN NETWORKS ಕೋಟೆಕಾರ್: ಶ್ರೀ ಸತ್ಯನಾರಾಯಣ ಮಂದಿರ ಬಗಂಬಿಲ ಕೋಟೆಕಾರ್ ಇದರ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ “ಶ್ರೀ ಸತ್ಯನಾರಾಯಣ ಸಾಂಸ್ಕೃತಿಕ ಭವನದ” ಶಿಲನ್ಯಾಸ ಸಮಾರಂಭ ಬಗಂಬಿಲದಲ್ಲಿ ನಡೆಯಿತು. ಭವನಕ್ಕೆ ಶಂಕುಸ್ಥಾಪನೆಯನ್ನು ಮಾಡೂರು ಶಿರಡಿ ಸಾಯಿ ಮಂದಿರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಪಿ ನೆರವೇರಿಸಿದರು. ಪಿ.ಡಬ್ಲ್ಯು ಡಿ. ಗುತ್ತಿಗೆದಾರರಾದ ಮಾಧವ ರಾವ್ ಕೊಂಡಾಣ ದೀಪಬೆಳಗಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ವಹಿಸಿದ್ದು, ಚಿತ್ರದುರ್ಗದ ಉದ್ಯಮಿ ಪ್ರವೀಣ್ ಸುವರ್ಣ ಬಗಂಬಿಲ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು.ಮುಖ್ಯ ಅತಿಥಿಗಳಾಗಿ ಪಿಲಿಚಾಮುಂಡಿ ದೈವಸ್ಥಾನದ ಅಧ್ಯಕ್ಷರಾದ ಮಾಧವ ಬಗಂಬಿಲ, ಲೋಕಯಪಾಲು ನಾಗಬ್ರಹ್ಮ ಮಹಾಕಾಳಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎಂ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನಾಧಿಕಾರಿ ಉಮರಬ್ಬ, ಪುರೋಹಿತರಾದ ಪಿ. ತಿರುಮಲೇಶ್ವರ ಭಟ್, ಮಂದಿರದ ಮಹಾಪೋಷಕ ದಿವಾಕರ ಬಗಂಬಿಲ, ಉದ್ಯಮಿ ಅಶೋಕ್ ರೈ ಮಡ್ಯಾರ್, ವಾಸ್ತುಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತ್, ಮಂದಿರದ ಉಪಾಧ್ಯಕ್ಷ ಗಣೇಶ್…

Read More

UN NETWORKS ಉಳ್ಳಾಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ಕ ಜಿಲ್ಲಾ ವತಿಯಿಂದ ತಲಪಾಡಿಯಲ್ಲಿ ಅಮಾಯಕ ವಿದಾರ್ಥಿಗಳ ಮೇಲೆ ನಡೆದ ಹಲ್ಲೆಯ ವಿರುದ್ದ ಪ್ರತಿಭಟನೆಯನ್ನು ತಲಪಾಡಿ ಬಸ್ ನಿಲ್ದಾಣದ ಬಳಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷರಾದ ಇಮ್ರಾನ್ ಪಿಜೆ ಪ್ರಾಸ್ತವಿಕವಾಗಿ ಮಾತನಾಡಿ ಘಟನೆಗೆ ಸಂಬಂದಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದಂತ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಫಯಾಝ್ ದೊಡ್ಡಮನೆ ಮಾತನಾಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗಳು ಮಿತಿಮೀರುತ್ತಿದ್ದು ಭಯದ ವಾತಾವಾರಣ ನಿರ್ಮಾಣವಾಗಿದೆ. ಅದರಲ್ಲೂ ಕೇರಳ ಮೂಲದ ವಿದ್ಯಾರ್ಥಿಗಳನ್ನು ಗುರಿಪಡಿಸಲಾಗುತ್ತಿದೆ ಪರಿಣಾಮ ಇದು ಎರಡು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು ಅಲ್ಲದೆ ಸಂಬಂದಪಟ್ಟ ಜನಪ್ರತಿನಿಧಿಗಳು ಕೇವಲ ಮಸೀದಿ ಮಂದಿರಗಳನ್ನು ಸುತ್ತುವುದು ಬಿಟ್ಟು ತಮ್ಮ ಜವಾಬ್ದಾರಿಯನ್ನು ಅರಿತು ವಿದ್ಯಾರ್ಥಿಗಳ ನೋವನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವತ್ತಾ ಕಾರ್ಯೋನ್ಮುಖರಾಗಿ ಎಂದು ಸಲಹೆ ನೀಡಿದರು ರಾಜ್ಯ ಸಮಿತಿ ಸದಸ್ಯರಾದ ರಿಯಾಝ್…

Read More

UN NETWORKS ಉಳ್ಳಾಲ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಏಅಈ ಡೇ ಪ್ರಯುಕ್ತ ರಕ್ತದಾನ ಶಿಬಿರ ಮತ್ತು ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮವು ಸೆಕ್ಟರ್ ಸಾಂತ್ವನ ವಿಭಾಗ ಅಧ್ಯಕ್ಷರು ಮೂಸಾ ಹಾಜಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಕಿಂಗ್ ಅಬ್ದುಲ್ ಅಝೀಝ್ ಆಸ್ಪತ್ರೆ ಝಾಹಿರ್ ನಲ್ಲಿ ಜರುಗಿತು. ಸೆಕ್ಟರ್ ಅಧ್ಯಕ್ಷರಾದ ಹನೀಫ್ ಸಖಾಫಿ ಬೊಳ್ಮಾರ್ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ಹಜ್ಜ್ ಸಮಿತಿ ಸದಸ್ಯರಾದ ಬಹು ಕೆ.ಎಂ. ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ ಮಾತನಾಡಿ,ಧನ್ಯ ಭೂಮಿ ಮಕ್ಕಾದಲ್ಲಿ ಒಂದಕ್ಕೆ ಒಂದು ಲಕ್ಷ ಪುಣ್ಯ ಲಭಿಸುವ ಮಸ್ಜಿದುಲ್ ಹರಾಮ್ ನ ನಾಡಿನಲ್ಲಿ ಉದ್ಯೋಗದಲ್ಲಿರುವ ತಾವು ಬಹಳ ಭಾಗ್ಯವಂತರು, ಅದರೊಂದಿಗೆ ರಕ್ತದಾನ ದಂತಹ ಅತ್ಯಂತ ಶ್ರೇಷ್ಠವಾದ ದಾನವನ್ನು ನೀಡಿ ಮತ್ತಷ್ಟು ಪುಣ್ಯ ಸಂಪಾದಿಸುತ್ತಿದ್ದೀರಿ, ನಿಜಕ್ಕೂ ಕೆಸಿಎಫ್ ನಡೆಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮವು ಶ್ಲಾಘನೀಯ ಎಂದರು.ತಮ್ಮ ಕುಟುಂಬವನ್ನು ಸಲಹುವ ನಿಟ್ಟಿನಲ್ಲಿ ದುಃಖ ದುಮ್ಮಾನಗಳನ್ನು…

Read More

UN NETWORKS ಮಂಗಳೂರು: ಇತಿಹಾಸ ಪ್ರಸಿದ್ಧ ಅಡ್ಯಾರ್ ಕಣ್ಣೂರು ಹಝ್ರತ್ ಶೈಖ್ ಯೂಸುಫ್ ಸಿದ್ದೀಖ್ ವಲಿಯುಲ್ಲಾಹಿ(ಖ.ಸ)ರವರ ದರ್ಗಾ ಶರೀಫ್ ಉರೂಸ್ ಮುಬಾರಕ್ ಫೆಬ್ರವರಿ18ರಿಂದ25ತನಕ ನಡೆಯಲಿದ್ದು ಭಾನುವಾರ ದ.ಕ ಜಿಲ್ಲಾ ಖಾಝಿ ತ್ವಾಖ ಅಹ್ಮದ್ ಮುಸ್ಲಿಯಾರ್ ಧ್ವಜಾರೋಹಣಗೈದು ಅಡ್ಯಾರ್ ಕಣ್ಣೂರು ಉರೂಸ್ ಮುಬಾರಕ್-2018ಗೆ ಚಾಲನೆ ನೀಡಿದರು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಮಿತ್ತಬೈಲ್ ಉಸ್ತಾದ್ ದುಅ ನೇತ್ರತ್ವ ವಹಿಸಿದರು. ಕಣ್ಣೂರು ಬದ್ರಿಯ ಜುಮಾ ಮಸೀದಿ ಮುದರ್ರಿಸ್ ಅನ್ಸಾರ್ ಫೈಝಿ ಬು್ಹಾನಿ, ಎಸ್ ವೈಎಸ್ ಶರೀಯತ್ ಕಾಲೇಜ್ ಪ್ರಿನ್ಸಿಪಾಲ್ ಇಸ್ಮಾಯಿಲ್ ಮದನಿ, ಕಣ್ಣೂರು ಬದ್ರಿಯ ಜುಮಾ ಮಸೀದಿ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ ರಹ್ಮಾನ್, ಉಪಾಧ್ಯಕ್ಷ ಹಾಜಿ ಕೆ.ಎಸ್ ಹಮೀದ್, ಕೋಶಾಧಿಕಾರಿ ಹಾಜಿ ಕೆ.ಬಿ ಅಬ್ದುಲ್ ರಹ್ಮಾನ್, ಲೆಕ್ಕ ಪರಿಶೋಧಕ ಹಾಜಿ ಡಿ.ಎಂ ಮುಹಮ್ಮದ್‌, ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ಎ.ಕೆ, ಮಾಜಿ ಅಧ್ಯಕ್ಷ ಹಾಜಿ ಎಸ್. ಅಬ್ದುಲ್‌ ಖಾದರ್, ಮಂಗಳೂರು ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಮೀದ್ ಹಾಜಿ, ಉದ್ಯಮಿಗಳಾದ ಅದ್ದು…

Read More

UN NETWORKS ಉಳ್ಳಾಲ: 2017 ಫೆಬ್ರವರಿ ತಿಂಗಳ ನಂತರ ಆನ್‍ಲೈನ್‍ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಸಿಗದೇ ಇರುವವರು ಕುಟುಂಬದ ಇತ್ತೀಚಿನ ಆದಾಯ ಪ್ರಮಾಣ ಪತ್ರ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್‍ನ ಪ್ರತಿ, ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಪ್ರತಿಗಳೊಂದಿಗೆ ಫೆ.21 ರಂದು ಬೆಳಿಗ್ಗೆ 10.00ರಿಂದ ಉಳ್ಳಾಲ ನಗರಸಭೆಯ ಸಮುದಾಯ ಭವನದಲ್ಲಿ ಸ್ಥಳದಲ್ಲಿಯೇ ಪಡಿತರ ಚೀಟಿಯ ಪ್ರತಿ ಪಡೆಯಬಹುದು. ಮಂಗಳೂರು ಬಿ ಹೋಬಳಿಯ ಎಲ್ಲಾ ಗ್ರಾಮಪಂಚಾಯತ್‍ಗಳು ಕೋಟೆಕಾರು, ಸೋಮೇಶ್ವರ, ತಲಪಾಡಿ, ಬೆಳ್ಮ, ಕಿನ್ಯಾ, ಹರೇಕಳ, ಮಂಜನಾಡಿ, ಬೋಳಿಯಾರು, ಕೋಣಾಜೆ, ಅಂಬ್ಲಮೊಗರು, ಹಾಗೂ ಉಳ್ಳಾಲ, ಪೆರ್ಮನ್ನೂರು ನಿವಾಸಿಗಳು ಪಡಿತರ ಚೀಟಿಯ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯಬಹುದು ಎಂದು ನಗರಸಭೆ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

UN NETWORKS ತಲಪಾಡಿ: ತಲಪಾಡಿಯಲ್ಲಿ ಬಸ್ಸಿನಿಂದ ಎಳೆದು ಹಾಕಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತಲಪಾಡಿ ನಾರ್ಲ ಪಡಿಲ್ ನಿವಾಸಿ ಜೀವನ್ ಡಿ’ಸೋಜ (23), ಮೈಕಲ್ ಯಾನೆ ಕಿಶೋರ್ (20) , ಮಂಜೇಶ್ವರ ಕುಂಜತ್ತೂರು ನಿವಾಸಿ ಶೋಬಿತ್(20) , ಕುಂಜತ್ತೂರು ಕೊಚ್ಚಿಕಾಡ್ ನಿವಾಸಿ ನಿಕೇಶ್(19) ಎಂಬವರು ಬಂಧಿತರು.ನಾಲ್ವರನ್ನು ಉಳ್ಳಾಲ ಠಾಣಾಧಿಕಾರಿಯ ನೇತೃತ್ವದ ತಂಡ ಕೋಟೆಕಾರ್ ಬೀರಿ ಎಂಬಲ್ಲಿಂದ ಬಂಧಿಸಿದ್ದಾರೆ. ನಾಲ್ವರು ಫೆ.17 ರಂದು ತಲಪಾಡಿಯಲ್ಲಿ ಬಸ್ಸಿನೊಳಗಡೆ ಕುಳಿತಿದ್ದ ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ , ಕುಂಜತ್ತೂರು ನಿವಾಸಿ ಅಹಮ್ಮದ್ ಇಮ್ರಾನ್ ಮತ್ತು ಫೈಝಲ್ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೀಟಿನ ವಿಚಾರಕ್ಕೆ ಸಂಬಂಧಿಸಿ ತಂಡ ವಿದ್ಯಾರ್ಥಿ ಗಳ ಮೇಲೆ ದಾಳಿ ನಡೆಸಿತ್ತು. ಅದರಂತೆ ಅಪರಾಧ ಪ್ರಕರಣ ಕಾಯ್ದೆ 143, 147,…

Read More