UN NETWORKS ಉಳ್ಳಾಲ: ತುಳುನಾಡಿನ ಕೃಷಿ, ಕ್ರೀಡೆ, ಸಂಪ್ರದಾಯ ಸೇರಿದಂತೆ ತುಳುನಾಡಿನ ನೆಲದ ಸಂಸ್ಕೃತಿ, ಗ್ರಾಮೀಣ ಸೊಗಡನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ದೇರಳಕಟ್ಟೆ ಮಾಗಣ್ತಡಿ ಗುತ್ತು ಮನೆಯಲ್ಲಿ ಕಂಬಳ ಪ್ರಾತಕ್ಷಿಕೆ, ಜನಪದ ಆಟೋಟ ಸ್ಪರ್ಧೆ, ಕೆಸರು ಗದ್ದೆ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳ, ಪುರಾತನ ವಸ್ತುಗಳ ಪ್ರದರ್ಶನ ಸಂಗಮ ಮೊದಲಾದ ವೈಶಿಷ್ಟಪೂರ್ಣ ಕಾರ್ಯಕ್ರಮವು ಭಾನುವಾರ ನಡೆಯಿತು. ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಗಳು ಲಯನ್ಸ್ ಜಿಲ್ಲೆ-317 ಡಿ ಇದರ ವತಿಯಿಂದ ಪುರಾತನವಾದ ಮಾಗಣ್ತಡಿ ಗುತ್ತುವಿನ ಮನೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾಗಣ್ತಡಿ ಮನೆಯ ಆವರಣ, ಗದ್ದೆಯಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ನಡೆದ ಈ ತುಳುನಾಡಿನ ಗ್ರಾಮೀಣ ಸಂಸ್ಕೃತಿಯ ವೈಶಿಷ್ಟ್ಯ ಪೂರ್ಣ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು ಸೇರಿದಂತೆ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು. ಬೆಳಿಗ್ಗೆ ಕಾರ್ಯಕ್ರಮಕ್ಕೆ ಆಗಮಿಸಿದ ಲಯನ್ಸ್ನ ಎಚ್.ಆರ್.ಹರೀಶ್, ಲಯನ್ಸ್ನ ಪ್ರಥಮ ಉಪರಾಜ್ಯಪಾಲರಾದ ದೇವದಾಸ್ ಭಂಡಾರಿ, ದ್ವಿತೀಯ ಉಪರಾಜ್ಯಪಾಲರಾದ ರೊನಾಲ್ಡ್ ಗೋಮ್ಸ್, ಜಿಲ್ಲಾ ಸಂಪುಟ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ…
Author: UllalaVani
UN NETWORKS ಉಳ್ಳಾಲ: ಹಿಂದೆ ಶಿವರಾತ್ರಿಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿತ್ತು. ಆದರೆ ಇಂದು ಧಾರ್ಮಿಕ ವಿಚಾರದಲ್ಲಿ ಸಂಘ ಸಂಸ್ಥೆಗಳು ಶಿವರಾತ್ರಿಯ್ನು ಧಾರ್ಮಿಕವಾಗಿ ಆಚರಿಸುತ್ತಿರುವುದರಿಂದ ಜನರ ಮನಸ್ಥಿತಿಯೂ ಬದಲಾಗಿದ್ದು, ಎಲ್ಲರಲ್ಲಿಯೂ ಧಾರ್ಮಿಕ ಭಾವನೆ ಜಾಗೃತಿಯಾಗುತ್ತಿದೆ ಎಂದು ಬಿರುವೆರ್ ಕುಡ್ಲ ಉಳ್ಳಾಲ ಘಟಕದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು. ಅವರು ಕುಂಪಲ ಶ್ರೀ ದುರ್ಗಾ ಪರಮೇಶ್ವರ ಕ್ಷೇತ್ರದ ಶಿವರಾತ್ರಿ ಮಹೋತ್ಸವ ಮತ್ತು ಕುಂಪಲ ರಥೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾನಿ ವೆಂಕಟೇಶ್ ಕುಂಪಲ, ಮಂಗಳೂರು ಕ್ಷೇತ್ರ ಬಿ.ಜೆ.ಪಿ. ಉಪಾಧ್ಯಕ್ಷ ಪ್ರಕಾಶ್ ಸಿಂಪೋನಿ, ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ನಿವೃತ್ತ ಸೇನಾನಿ ಅಶೋಕ್ ಕುಂಪಲ, ಚೆಂಬುಗುಡ್ಡೆ ಕೆರೆಬೈಲ್ ಕೊರಗಜ್ಜ ಸೇವಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಬಿ, ಸೋಮೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷ ಮೋಹನ್ ಶೆಟ್ಟಿ ಕುಂಪಲ, ಶ್ರೀ ಕ್ಷೇತ್ರದ ಅರ್ಚಕ ಭವಾನಿ ಶಂಕರ ಶಾಂತಿ,…
UN NETWORKS ಉಳ್ಳಾಲ: ಜೀವನದಲ್ಲಿ ಏನೇ ಸಾಧನೆ ಮಾಡಿದರೂ ಆ ಸಾಧನೆಯ ಹಿಂದೆ ಒಂದು ದೈವಿಕವಾದ ಪ್ರೇರಣಾ ಶಕ್ತಿ ಇದೆ. ಈ ನಿಟ್ಟಿನಲ್ಲಿ ಧಾರ್ಮಿಕ ಚಿಂತನೆಗಳನ್ನು ನಾವು ನಿತ್ಯ ಜೀವನದಲ್ಲಿ ಅಳವಡಿಸಿದರೆ ಯಶಸ್ಸು ಸಾದ್ಯ ಎಂದು ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಅಭಿಪ್ರಾಯಪಟ್ಟರು. ಉಳ್ಳಾಲ ಉಮಾಪುರಿ, ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮಂಗಳೂರು ರಾಗ ತರಂಗದ ಮಾಜಿ ಪ್ರಧಾನ ಕಾರ್ಯದರ್ಶಿ ಸುಮಾ ಪ್ರಸಾದ್ ಅಧ್ಯಕ್ಷತೆ ವಹಿಸಿದರು. ಮಂಗಳೂರು ಎಮ್.ಸಿ.ಎಫ್ ಜನರಲ್ ಮೆನೇಜರ್ ಎಮ್.ಆರ್.ವೆಂಕಟೇಶ್ ಶರ್ಮಾ, ಮಂಗಳೂರು ಎಮ್.ಸಿ.ಎಫ್ ಇದರ ಮಾರ್ಕೆಟಿಂಗ್ ಡೆವಲಪ್ ಮೆಂಟ್-ಕೆಮಿಕಲ್ಸ್ನ ಉಪ ಮಹಾಪ್ರಬಂಧಕ ಕೆ.ಬಿ.ಕೀರ್ತನ್ ಕುಮಾರ್, ದುಬೈ ಉದ್ಯಮಿ ಶಶಿಧರ್ ಶೆಟ್ಟಿ ಮಜಲು ಕೈರಂಗಳ, ಮರಾಠಾಸ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಸಂಚಾಲಕ ಹರೀಶ್ ರಾವ್ ಮಡ್ಯಾರ್, ಆಡಳಿತ ಮೊಕ್ತೇಸರ ಎ.ಜೆ. ಶೇಖರ್, ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ,…
UN NETWORKS ಉಳ್ಳಾಲ: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಮಾರ್ಚ್ 5,6,7,ರಂದು ಜರಗಲಿರುವ 22 ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ‘ಲಾಂಛನ’ವನ್ನು ಹಿರಿಯ ಸಾಹಿತಿ ಪ್ರೊ|| ಅಮೃತ ಸೋಮೇಶ್ವರ ಅವರು ಬಿಡುಗಡೆಗೊಳಿಸಿದರು. ಕೋಟೇಕಾರ್ನಲ್ಲಿರುವ ಅಮೃತರ ಮನೆ “ಒಲುಮೆ”ಯಲ್ಲಿ ಸಮಾರಂಭ ಜರಗಿತು. ಇದೇ ಸಂದರ್ಭ “ ಲಾಂಛನ”ವನ್ನು ಸಿದ್ದಪಡಿಸಿದ ಕಲಾವಿದ ಜಾನ್ ಚಂದ್ರನ್ ಅವರನ್ನೂ ಅಮೃತ ಸೋಮೇಶ್ವರರು ಶಾಲು ಹೊದಿಸಿ ಅಭಿನಂದಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ| ಡಾ.ಕೆ. ಚಿನ್ನಪ್ಪಗೌಡ ಅಮೃತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು ಅಮೃತರು ಬರೆದ ಭಾವಗಾನವೊಂದನ್ನು ರತ್ನಾವತಿ ಜೆ. ಬೈಕಾಡಿಯವರು ಹಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ| ಸುರೇಂದ್ರ ರಾವ್ ಉಪಸ್ಥಿತರಿದ್ದರು. ನಿವೃತ್ತ ಪ್ರಾಂಶುಪಾಲ ಬೈಕಾಡಿ ಜನಾರ್ದನ ಆಚಾರ್ ವಂದನಾರ್ಪಣೆಗೈದರು,
UN NETWORKS ಇರಾ: ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕಾ ಸಚಿವರು ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ಮತ್ತು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಇರಾ ಗ್ರಾಮದ ಬಾಳೆಪುಣಿ ಶಾಲಾ ಬಳಿಯ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ,ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ ಉಮ್ಮರ್ ,ಸೆಫಿಯಾ,ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹಾಜಿ.ಸಿ.ಎಚ್.ಮಹಮ್ಮದ್ ಶಾಲಾ ಎಸ.ಡಿ.ಎಂ.ಸಿ ಅಧ್ಯಕ್ಷರಾದ ಹಸೈನಾರ್, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಅಝೀಝ್,,ಶಾಲಾ ಮುಖ್ಯ ಶಿಕ್ಷಕಿ ಸವಿತಾ,ಗುತ್ತಿಗೆದಾರರಾದ ಶಾಹುಲ್ ಹಮೀದ್,,ಸ್ಥಳೀಯ ಗಣ್ಯರಾದ ಹಾಜಿ ಇಬ್ರಾಹಿಂ,ಬಿ.ಪಿ ಮೊಯಿದುಕುಂಞ ,ಅಬ್ಬಾಸ್ ಬಾಳೆಪುಣಿ,,ಸೈಯದ್ ಬಡದಲ ಇನ್ನಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
UN NETWORKS ಇರಾ: ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕಾ ಸಚಿವರು ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ರವರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಇರಾ ಗ್ರಾಮದ ಬಾಳೆಪುಣಿ ಸರ್ಕಾರಿ ಶಾಲೆಯ ಕ್ರೀಂಡಾಗಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ರವರು ಚಾಲನೆ ನೀಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸರ್ಕಾರಿ ಶಾಲೆಗಳ ಮೂಲಭೂತ ಅಭಿವೃದ್ಧಿಗಳಿಗೆ ಸೂಕ್ತವಾಗಿ ಸ್ಪಂದಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದ್ದು ಊರರವರು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೈಜೋಡಿಸಿದಾಗ ಇನ್ನಷ್ಟು ಪ್ರಗತಿ ಸಾಧ್ಯ ಎಂದರು. ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ರವರು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನವನ್ನು ದೊರಕಿಸಿ ಕೊಡುವುದರಲ್ಲಿ ಪ್ರಮಾಣಿಕವಾಗಿ ಪ್ರಯತ್ನಿಸುವುದಾಗಿ ಸಂಧರ್ಭೊಚಿತವಾಗಿ ತಿಳಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ.ಉಮ್ಮರ್,ಸೆಫಿಯಾ,ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಹಸೈನಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹಾಜಿ.ಸಿ.ಎಚ್.ಮಹಮ್ಮದ್,ಶಾಲಾ ಮುಖ್ಯ ಶಿಕ್ಷಕಿ ಸವಿತಾ,ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಅಝೀಝ್,ಸ್ಥಳೀಯ ಗಣ್ಯರಾದ ಹಾಜಿ ಇಬ್ರಾಹಿಂ,ಸೈಯದ್ ಬಡದಲ,ಮುಯಿದಿನ್…
UN NETWORKS ಉಳ್ಳಾಲ : ಜಾತಿ, ಮತ, ಭೇದ ಬಿಟ್ಟು ಎಲ್ಲರೂ ಸೌಹಾರ್ದತೆಯಿಂದ ಒಂದಾಗಿ ಆಡುವ ಕ್ರೀಡೆ ಕ್ರಿಕೆಟ್ ಆಗಿದೆ, ಸೌಹಾರ್ದತೆಯಿಂದ ಒಂದಾಗಿ ಬಾಳಿದರೆ ದೇಶ ಕಟ್ಟಬಹುದು ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ’ಸೋಜ ಅಭಿಪ್ರಾಯಪಟ್ಟರು. ಬ್ರೈಟ್ ಬಾಯ್ಸ್ ಅಳೇಕಲ, ಉಳ್ಳಾಲ ವತಿಯಿಂದ ಬಡ ಹಾಗೂ ನಿರ್ಗತಿಕರ ಸಹಾಯಾರ್ಥಕವಾಗಿ ಅಲೇಕಲ ಮದನಿ ಶಾಲಾ ಮೈದಾನದಲ್ಲಿ ನಡೆದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಳ್ಳಾಲ ಮದನಿ ಎಜ್ಯುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಇಬ್ರಾಹಿಂ ಖಾಸಿಂ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ಮತ್ತು ಸಮಾಜ ಸೇವಕಿ ರೇಶ್ಮಾ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಉಪಾಧ್ಯಕ್ಷ ನೌಶಾದ್ ಕಿನ್ಯ ಅವರನ್ನು ಸನ್ಮಾನಿಸಲಾಯಿತು. ಕರಾವಳಿ ವಲಯ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯು.ಬಿ. ಸಲೀಂ, ಮಂಗಳೂರು ತಾಲೂಕು ಪಂಚಾಯತ್ ಆಧ್ಯಕ್ಷ ಮೊಹಮ್ಮದ್ ಮೋನು, ಉದ್ಯಮಿ ಲಾರೆನ್ಸ್ ರೂಡಿ. ಡಿ’ಸೋಜ, ಉಳ್ಳಾಲ ನಗರ ಸಭೆ…
UN NETWORKS ಕುತ್ತಾರು: ಶ್ರೀ ಕ್ಷೇತ್ರ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ವರ್ಷಾವಧಿ ಮಹೋತ್ಸವ ಫೆ.15 ರಿಂದ ಫೆ.18 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಶ್ರೀ ಕ್ಷೇತ್ರದಲ್ಲಿ ಫೆ.16ರಂದು ಗಣಯಾಗ, ನವ ಕ¯ಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿ, ಫೆ.17ರಂದು ಭಜನಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದುರ್ಗಾವಾಹಿನಿ ಮಹಿಳಾ ಮಂಡಳಿ ಇವರಿಂದ ನೃತ್ಯ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ಕ್ಕೆ ಶಾರದಾ ಆಟ್ರ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ಕುಸಲ್ದರಸೆ ನವೀನ್ ಡಿ.ಪಡೀಲ್ ನಿರ್ದೇಶನದ ಅಂಚಗೆ ಇಂಚಗೆ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ. ಫೆ.18 ರಂದು ಸಾಮೂಹಿಕ ಮಹಾ ಚಂಡಿಕಾಯಾಗ, ಶ್ರುತಿಲಯ ಕಲಾಕೇಂದ್ರ ಕುತ್ತಾರು ಇವರಿಂದ ನೃತ್ಯ ವೈವಿಧ್ಯ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.
UN NETWORKS ತಲಪಾಡಿ : ತಲಪಾಡಿ ಗ್ರಾಮದ ಅಲಂಕಾರಗುಡ್ಡೆ ಶ್ರೀ ಮಲರಾಯ, ಧೂಮಾವತಿ, ಬಂಟ ದೈವಸ್ಥಾನದ ಶ್ರೀ ನಾಗದೇವರು ಮತ್ತು ಶ್ರೀ ಮಲರಾಯ, ಧೂಮಾವತಿ, ಬಂಟ ದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸತ್ಕರ್ಮ ಫೆ. 21ರಿಂದ 25ರವರೆಗೆ ಬಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವೇದಮೂರ್ತಿ ತಲಪಾಡಿ ಪಂಜಾಳ ಶ್ರೀ ಬಾಲಕೃಷ್ಣ ಭಟ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಳ್ಳನ ಮನೆ ಯಾನೆ ತಲಪಾಡಿ ದೊಡ್ಡಮನೆ ರವೀಂದ್ರನಾಥ ಶೆಟ್ಟಿ ತಿಳಿಸಿದರು. ಕ್ಷೇತ್ರದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಜೀರ್ಣೋದ್ಧಾರ ನಡೆಯದೆ ಹಲವು ವರ್ಷಗಳಾಗಿತ್ತು. ಜೀರ್ಣೋದ್ಧಾರ ಕುರಿತಂತೆ ಕ್ಷೇತ್ರದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದಂತೆ ಅಂದಾಜು ಸುಮಾರು 75ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ನಡೆಸುವುದೆಂಬ ಯೋಜನೆ ಹಾಕಲಾಗಿತ್ತಾದರೂ ವಾಸ್ತು ಶಿಲ್ಪಿ ಮುನಿಯಂಗಳ ಕೃಷ್ಣ ಭಟ್ ಅವರ ನಿರ್ದೇಶನದಂತೆ ಗರ್ಭಗುಡಿ, ಚಾವಡಿ, ಸುತ್ತುಪೌಳಿ, ಗೋಪುರ, ಪಾಗರ ಕ್ಷೇತ್ರದ ಅಭ್ಯುದಯ ದೃಷ್ಟಿಯಲ್ಲಿ ಒಂದಕ್ಕೊಂದು…
UN NETWORKS ಇರಾ: ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕ ಸಚಿವ ಸ್ಥಳೀಯ ಶಾಸಕರಾದ ಯು.ಟಿ. ಖಾದರ್ ಅವರ ಅನುದಾನದಲ್ಲಿ ಇರಾ ಗ್ರಾಮದ ಕೆಳಗಿನಮನೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಕಿರುಸೇತುವೆ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಶಿಲಾನ್ಯಾಸಗೈದರು. ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ. ಉಮರ್, ಮೊಯಿದಿನ್ ಕುಂಞ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್ ಸೂತ್ರಬೈಲ್, ಸ್ಥಳೀಯ ಗಣ್ಯರಾದ ಮೊಹಮ್ಮದ್ ಕೆ.ಎಂ, ಅಝೀಝ್ ಸಖಾಫಿ, ಹಸೈನಾರ್ ಯು, ಕೆ ಮೊಯಿದಿನ್ ಕುಂಞ ಕೆಳಗಿನಮನೆ, ಅಬೂಬಕರ್, ಕೆ ಮಹಮ್ಮದ್ ಉಪಸ್ಥಿತರಿದ್ದರು.

