UN NETWORKS ಉಳ್ಳಾಲ: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬಹರೈನ್ ರಾಷ್ಟ್ರೀಯ ಸಮಿತಿ ಯ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಮನಾಮ ಕೆಸಿಎಫ್ ಸೆಂಟರ್ ನಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ನೂತನ ಸಾಲಿನ ಅಧ್ಯಕ್ಷ ರಾಗಿ ಜಮಾಲುದ್ದೀನ್ ವಿಟ್ಟಲ್, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಶರೀಫ್ ಕಕ್ಕೆಪದವು, ಕೋಶಾಧಿಕಾರಿಯಾಗಿ ಎಸ್.ಎಂ. ಫಾರೂಖ್ ಕುಂಬ್ರ,ಉಪಾಧ್ಯಕ್ಷರುಗಳಾಗಿ ಸಯ್ಯದ್ ಅಲಿ ತಂಬುತಡ್ಕ , ಅಬ್ದುಲ್ ಅಝೀಝ್ ಸುಳ್ಯ, ಹನೀಫ್ ಕಿನ್ಯ *ಕಾರ್ಯದರ್ಶಿಗಳಾಗಿ* ಫಝಲ್ ಸುರತ್ಕಲ್, ಅಶ್ರಫ್ ರೆಂಜಾಡಿ, ಅಬ್ದುಲ್ ಕರೀಂ ಮಾಝಾ ಕೆ.ಸಿ.ರೋಡ್, ಇವರನ್ನು ಆರಿಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ* ರಿಯಾಝ್ ಸುಳ್ಯ, ಇಖ್ಬಾಲ್ ಮಂಜನಾಡಿ,ಮುಹಮ್ಮದ್ ಬಲ್ಕಾಡ್,ಅಬ್ದುಸಮದ್ ಉಜಿರ್ಬೆಟ್ಟು,, ಅಶ್ರಫ್ ಬೇಂಗಿಲ,ಶಾಫಿ ಕಬಕ,ಝಕರಿಯಾ ಎಣ್ಮೂರ್,ಸುಹೈಲ್ ಮೂಲರಪಟ್ನ, ಮುಹ್ಸಿನ್ ಸುಳ್ಯ, ಮನ್ಸೂರ್ ಬೆಳ್ಮ, ಸಲೀಂ ಕೆ.ಸಿ.ರೋಡ್,ಅಬ್ದುಲ್ ಮಜೀದ್ ಮುಕ್ಕ,ಹಾರಿಸ್ ಒಕ್ಕೆತ್ತೂರ್, ಸೂಫಿ ಪೈಂಬಚಾಲ್, ಮೂಸ ಪೈಂಬಚಾಲ್, ಅಶ್ರಫ್ ಕಿನ್ಯ, ನೌಫಲ್ ವಿಟ್ಲ, ಹನೀಫ್ ಗುರುವಾಯನಕೆರೆ, ಅಬ್ದುಲ್…
Author: UllalaVani
UN NETWORKS ಬಾಯಾರ್: ಕಾಸರಗೋಡುವಿನ ಬಾಯಾರ್ ಮುಜಮ್ಮಉ ಸಖಾಫಾತ್ ಸುನ್ನಿಯ್ಯಾದಲ್ಲಿ ಜೂನ್7 ರಮಳಾನಿನ 23ನೇ ರಾತ್ರಿಯಂದು ಪ್ರಾರ್ಥನಾ ಸಮ್ಮೇಳನ ಪ್ರಯುಕ್ತ ಸಮೂಹಿಕ ಇಫ್ತಾರ್ ಹಾಗೂ ಕೂಟು ಪ್ರಾರ್ಥನೆ ಅಸ್ಸಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ನೇತೃತ್ವದಲ್ಲಿ ಮುಜಮ್ಮಉ ಸಖಾಫಾತಿ ಸುನ್ನಿಯ್ಯಾ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮ್ಯಾನೇಜರ್ ಸಿದ್ದೀಕ್ ಸಖಾಫಿ ಬಾಯಾರ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
UN NETWORKS ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರದ ಮಹತ್ತ್ವವನ್ನು ಕುರಿತು ಮಾತನಾಡಿದರು. ಘೋಷಣೆಗಳೊಂದಿಗೆ, ಕೊಣಾಜೆ ಪರಿಸರದಲ್ಲಿ ಜಾಥಾವನ್ನು ನಡೆಸಿದ ಬಳಿಕ ಶಾಲಾ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರಗೀತೆಯನ್ನು ಹಾಡುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಹಾಗೂ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
UN NETWORKS ನಾಟೆಕಲ್: ಕಣಚೂರು ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಕುರಿತಾದ ಭಾಷಣ ಹಾಗೂ ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸುವ ಸಲುವಾಗಿ ಘೋಷಣೆಯೊಂದಿಗೆ ಭಿತ್ತಿಪತ್ರವನ್ನು ಪ್ರದರ್ಶಿಸಲಾಯಿತು. ಮಕ್ಕಳು ಅಂಗಡಿಗಳಿಗೆ ತೆರಳಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಜನಜಾಗೃತಿ ಮೂಡಿಸಿದರು.
UN NETWORKS ಕೊಣಾಜೆ: ಸಮಾಜದಲ್ಲಿ ಹಿಂದುಳಿದ ಮಕ್ಕಳಿಗೂ ಶಿಕ್ಷಣ ದೊರಕು ನಿಟ್ಟಿನಲ್ಲಿ ಪ್ರೋತ್ಸಾಹಿಸಿದಾಗ ಕುಟುಂಬ ಸಬಲೀಕರಣವಾಗಲಿದೆ, ಈ ಹಿನ್ನೆಲೆಯಲ್ಲಿ ಸಂಘದ ಗ್ರಾಮೀಣ ಭಾಗದಲ್ಲೂ ಅರ್ಹರನ್ನು ಉಚಿತ ಪುಸ್ತಕ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅಭಿಪ್ರಾಯಪಟ್ಟರು. ಮಂಗಳೂರು ಉತ್ತರ ಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಕೊಣಾಜೆ ಅಡ್ಕರೆ ಪಡ್ಪು ಗ್ರೀನ್ವೀವ್ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದ.ಕ. ಮತ್ತು ಉಡುಪಿ ಜಿಲ್ಲೆ ಜಮೀಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್, ಮಂಗಳೂರು ಉತ್ತರ ಕ್ಕೆ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಇಬ್ರಾಹಿಂ ಕೆ.ಎಮ್.ಎಚ್, ಅಶ್ರಫ್ ಪದಿಂಜಾರ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಆಲಿ, ಅಸೈಗೋಳಿ ಅಯ್ಯಪ್ಪ ಸ್ವಾಮಿ `ಭಜನಾ ಮಂದಿರದ ಅಧ್ಯಕ್ಷ…
UN NETWORKS ಉಳ್ಳಾಲ: ಉಳ್ಳಾಲ, ಎಸ್.ಎಸ್.ಎಫ್. ಆಝಾದ್ ನಗರ ಯುನಿಟ್ ವತಿಯಿಂದ ಮಾಸ್ತಿಕಟ್ಟೆ ಜಂಕ್ಷನ್ನಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. ಎಸ್.ಎಸ್.ಎಫ್.ಉಳ್ಳಾಲ ಡಿವಿಜನ್ ಅಧ್ಯಕ್ಷ ಮುನೀರ್ ಅಹ್ಮದ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಜ್ಞಾನಿಗಳು,ಸಾಮಾಜಿಕ ನೇತಾರರು ಉಪವಾಸಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ,ಉಪವಾಸದಿಂದ ಮನುಷ್ಯನ ಶರೀರಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಅಭಿಪ್ರಾಯ ಪಟ್ಟರು. ಎಸ್.ಎಸ್.ಎಫ್. ಆಝಾದ್ ನಗರ ಯುನಿಟ್ ಅಧ್ಯಕ್ಷ ಹಾಫಿಲ್ ಮುಯೀನ್ ರಝ ಅಂಜದಿ ಅಧ್ಯಕ್ಷತೆವಹಿಸಿದರು, ಎಸ್.ವೈ.ಎಸ್ ಜಿಲ್ಲಾ ಕೋಶಾಧಿಕಾರಿ ಹನೀಫ್, ಎಸ್.ವೈ.ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಸಯ್ಯುದ್ ಜಲಾಲ್ ತಂಙಳ್, ಎಸ್.ಎಸ್.ಎಫ್. ಉಳ್ಳಾಲ ಡಿವಿಜನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಶರೀಫ್ ಮುಡಿಪು, ಉಳ್ಳಾಲ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟಳಿಕೆ,ಜೊತೆ ಕಾರ್ಯದರ್ಶಿ ಅಬೂಸಾಲಿ ಹರೇಕಳ, ಎಸ್.ಎಸ್.ಎಫ್ ಉಳ್ಳಾಲ ಡಿವಿಜನ್ ಕಾರ್ಯಕಾರಿ ಸದಸ್ಯ ಅಝೀಝ್ ಎಚ್.ಕಲ್ಲು, ನೌಫಲ್ ಫರೀದ್ ನಗರ, ತ್ವಾಹ ಅಹ್ಸನ್ ಉಸ್ತಾದ್ ಮಂಜನಾಡಿ, ಕುಬೈಬ್ ತಂಙಳ್ ಉಳ್ಳಾಲ, ಎಸ್.ಎಸ್.ಎಫ್ ಉಳ್ಳಾಲ ಸೆಂಟರ್ ಅಧ್ಯಕ್ಷ ಮುಸ್ತಫ ಉಳ್ಳಾಲ, ಎಸ್.ವೈ.ಎಸ್, ಮೇಲಂಗಡಿ…
UN NETWORKS ತಲಪಾಡಿ: ತಲಪಾಡಿ ಕೆ.ಸಿ.ನಗರದ ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ದೈಹಿಕ ಶಿಕ್ಷಣ ಶಿಕ್ಷಕ ಭರತ್ ಎಂ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮಹಮ್ಮದ್ ರಫೀಕ್, ಹಿರಿಯ ಶಿಕ್ಷಕಿ ಐರಿನ್, ಸಾಧನಾ ರಾವ್, ಲತಾ ಪಿ, ವನಿತಾ, ಚಂದ್ರಕಲಾ, ಚಿತ್ರಕಲಾ ಶಿಕ್ಷಕ ನವೀನ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
UN NETWORKS ಪಾವೂರು: ಸರಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಶೈಕ್ಷಣಿಕ ಸವಲತ್ತನ್ನು ನೀಡುವ ಯಾದ್ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಅಭಿಪ್ರಾಯಪಟ್ಟರು. ಯಾದ್ ಫೌಂಡೇಶನ್ ಮಲಾರ್ ಇದರ ವತಿಯಿಂದ ಇನೋಳಿ ಪ್ರಾಥಮಿಕ ಶಾಲೆ, ಬದ್ರಿಯಾ ನಗರ ಶಾಲೆ, ಇನೋಳಿ ಪ್ರೌಢಶಾಲೆ , ಸರಕಾರಿ ಪ್ರಾಥಮಿಕ ಶಾಲೆ ಗಾಡಿಗದ್ದೆಯಲ್ಲಿ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣಕ್ಕೆ ಸಂಘ ಸಂಸ್ಥೆಗಳ ಸಹಕಾರ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಆದರೆ ಹಲವಾರು ಶಾಲೆಗಳನ್ನು ಗುರುತಿಸಿ ಶಿಕ್ಷಣಕ್ಕೆ ಸಹಕಾರ ನೀಡುವ ಮೂಲಕ ಈ ಸಂಸ್ಥೆ ಮಾದರಿ ಕಾರ್ಯವನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಿಯಾಝ್ ಅಹ್ಮದ್ ಪಾವೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಫಿರೋಝ್ ಮಲಾರ್,ಉಪಾಧ್ಯಕ್ಷೆ ಲೀಲಾವತಿ, ಪಂಚಾಯತ್ ಸದಸ್ಯ ವಿವೇಕ್ ರೈ, ಎಮ್. ಪಿ. ಹಸನ್, ಮಾಜಿ ಸದಸ್ಯ ಮಹಮ್ಮದ್ ಬದ್ರಿಯಾ…
UN NETWORKS ಉಳ್ಳಾಲ: ವಿಶ್ವ ಪರಿಸರ ದಿನವನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಆಚರಿಸಿದರೆ ಅದು ಅರ್ಥಪೂರ್ಣವಾಗುತ್ತದೆ. ಪ್ರತೀಯೋರ್ವರು ತಮ್ಮಿಂದಾಗುವ ಸ್ವಚ್ಚತೆಯ ಜನಜಾಗೃತಿ ಕಾಳಜಿಯನ್ನು ವಹಿಸಿಕೊಂಡಲ್ಲಿ ಸ್ಥಳೀಯವಾಗಿ ಯಶಸ್ವಿಯನ್ನು ಸಾಧಿಸಲು ಸಾಧ್ಯ ಎಂದು ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆ ಕೋಟೆಪುರ ಇಲ್ಲಿನ ಮುಖ್ಯ ಶಿಕ್ಷಕರಾದ ಎಂ.ಹೆಚ್ ಮಲಾರ್ ಅಭಿಪ್ರಾಯಪಟ್ಟರು. ಉಳ್ಳಾಲ ಕೋಟೆಪುರದ ಅನುದಾನಿತ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಕರಾವಳಿ ತೀರದ ನಾವುಗಳು ನದಿ ಹಾಗೂ ಸಾಗರಗಳಿಗೆ ಕಸ ಕಡ್ಡಿ ಪ್ಲಾಸ್ಟಿಕ್ ಮೊದಲಾದ ಮಾಲಿನ್ಯ ವಸ್ತುಗಳನ್ನು ಎಸೆಯದಂತೆ ಎಚ್ಚರಿಕೆ ವಹಿಸಿದರೆ ನದಿ ಹಾಗೂ ಸಾಗರದ ಮಾಲಿನ್ಯವನ್ನು ತಡೆಗಟ್ಟಬಹುದು. ವಿದ್ಯಾರ್ಥಿಗಳ ಜಾಥವು ಕೋಟೆಪುರದ ಪರಿಸರದಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು. ಈ ಸಂದರ್ಭ ಸ್ವಚ್ಚ ಪರಿಸರದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.
UN NETWORKS ಮುಡಿಪು: ಸಂಬಾರತೋಟ ವಿಸ್ಡಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಂಸ್ಥೆಯ ಲಾಂಛನ ಬಿಡುಗಡೆ ಕಾರ್ಯಕ್ರಮಕ್ಕೆ ಸಂಬಾರತೋಟ ನೂರಾನಿಯ್ಯಾ ಜುಮಾ ಮಸೀದಿ ಖತೀಬರಾದ ಪಿ.ಕೆ.ಮುಹಮ್ಮದ್ ಮದನಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯೆಗೆ ಇರುವಷ್ಟು ಪ್ರಾಧಾನ್ಯತೆ ಈ ಲೋಕದಲ್ಲಿ ಬೇರೆ ಯಾವುದಕ್ಕೂ ಇಲ್ಲ, ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿರುವ ಸಂಘದ ಕಾರ್ಯ ಶ್ಲಾಘನೀಯ ಎಂದರು. ಹೂ ಹಾಕುವ ಕಲ್ಲು ಸಮೂಹ ಸಂಪನ್ಮೂಲ ವ್ಯಕ್ತಿ ಆಶಾ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಸಂಬಾರತೋಟ ನೂರಾನಿಯ್ಯಾ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಹಾಜಿ, ಪ್ರಧಾನ ಕಾರ್ಯದರ್ಶಿ ಎಸ್,ಇ.ಮುಹಮ್ಮದ್,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬೂಬಕರ್ ಕೊಡೆಕ್ಕಲ್, ಅಹ್ಮದ್ ಕುಂಞ ಕತ್ತರ್, ಸಂಬಾರತೋಟ ಶಾಲಾ ಮುಖ್ಯೋಪದ್ಯಾಯಿನಿ ಶಹನಾಝ್ ಪರ್ವಿನ್, ಸಂಬಾರತೋಟ ಖಿದ್ಮತುಲ್ ಇಸ್ಲಾಂ ಅಸೋಸಿಯೇಶನ್ ಅಧ್ಯಕ್ಷ ಎಚ್.ಎಮ್.ಶಾಹುಲ್ ಹಮೀದ್, ವಿಸ್ಡಮ್ ವೆಲ್ಫೇರ್…

