UN NETWORKS ಉಳ್ಳಾಲ: ನೂರುಲ್ ಹುದಾ ಮಸ್ಜಿದ್ ತಖ್ವಾ ಮತ್ತು ಎಸ್ ವೈಎಸ್ ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖೆ ವತಿಯಿಂದ ಅಗಲಿದ ಸುನ್ನಿ ನೇತಾರರಾದ ತಾಜುಲ್ ಉಲಮಾ ಉಳ್ಳಾಲ್ ತಂಙಳ್ ನೂರುಲ್ ಉಲಮಾ ಅನುಸ್ಮರಣೆ ಮತ್ತು 14ನೇ ಸ್ವಲಾತ್ ವಾರ್ಷಿಕ ನರಿಂಗಾನ ಗ್ರಾಮದ ಕೊಲ್ಲರಕೋಡಿ ಮಂಜನಾಡಿ ಉಸ್ತಾದ್ ವೇದಿಕೆಯಲ್ಲಿ ನಡೆಯಿತು. ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್-ಹೈದ್ರೊಸಿ ಕಿಲ್ಲೂರು ತಂಙಳ್ ಸ್ವಲಾತ್ ಮಜ್ಲಿಸ್ ಗೆ ನೇತ್ರತ್ವವಹಿ ಮಾತನಾಡಿ, ಯುವ ಸಮೂಹ ದಾರಿತಪ್ಪುತ್ತಿದ್ದು, ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಯುವ ಜನಾಂಗ ದಾರಿ ತಪ್ಪಿದರೆ ಮತ್ತೆ ಸರಿಪಡಿಸಲು ಕಷ್ಟವಾಗುದರಿಂದ ಇಂದೇ ಪೋಷಕರು ಮಕ್ಕಳನ್ನು ಧಾರ್ಮಿಕ ಚೌಕಟ್ಟಿನಲ್ಲಿ ಬೆಳೆದು ಬರುವಂತೆ ನೋಡಿಕೊಳ್ಳಿರಿ ಎಂದು ಕರೆ ನೀಡಿದರು. ಮಂಜನಾಡಿ ಅಲ್-ಮದೀನಾ ವಿದ್ಯಾಸಂಸ್ಥೆ ಯ ಅಧ್ಯಕ್ಷ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಪಿ.ಎ ಅಹ್ಮದ್ ಬಾಖವಿ ಮುಖ್ಯ ಪ್ರಭಾಷಣಗೈದರು.ಕೊಲ್ಲರಕೋಡಿ ತಖ್ವಾ ಮಸೀದಿ ಅಧ್ಯಕ್ಷ ಅಬ್ದುಲ್ ರಝಾಕ್…
Author: UllalaVani
UN NETWORKS ಉಳ್ಳಾಲ : ಉಳ್ಳಾಲ ಕ್ರಿಕೆಟ್ ಬೋರ್ಡ್ ವತಿಯಿಂದ ಉಳ್ಳಾಲ ಪ್ರೀಮಿಯರ್ ಲೀಗ್-2018,ಸೀಸನ್ 5 ಮತ್ತು ಯು.ಟಿ.ಫರೀದ್ ಮೆಮೋರಿಯಲ್ ಟ್ರೋಫಿ2018,ಶಾಂತಿಗಾಗಿ ಕ್ರೀಡೆ ಎಂಬ ಘೋಷಣೆಯೊಂದಿಗೆ ಕ್ರಿಕೆಟ್ ಪಂದ್ಯಾಟ ಉಳ್ಳಾಲ ಸೀ ಗ್ರೌಂಡಲ್ಲಿ ನಡೆಯಿತು. ಬುಧವಾರ ರಾತ್ರಿ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಉಳ್ಳಾಲ ಪೊಲೀಸ್ ಎಲೆವೆನ್ ತಂಡ ಮತ್ತು ಉಳ್ಳಾಲ ಎಮ್.ಎಲ್.ಎ.ಎಲೆವೆನ್ ತಂಡಗಳ ಮದ್ಯೆ ಪ್ರದರ್ಶನ ಪಂದ್ಯ ಜರಗಿತು,ಪ್ರಥಮ ಸ್ಥಾನವನ್ನು ಉಳ್ಳಾಲ ಎಮ್.ಎಲ್.ಎ.ಎಲೆವೆನ್ ತಂಡ ಮತ್ತು ದ್ವಿತೀಯ ಸ್ಥಾನವನ್ನು ಉಳ್ಳಾಲ ಪೊಲೀಸ್ ಎಲೆವೆನ್ ತಂಡ ಪಡೆಯಿತು.
UN NETWORKS ಉಳ್ಳಾಲ: ಬೆಂಗಳೂರಿನಲ್ಲಿ ಜರಗಿದ 66ನೇ ರಾಷ್ಟ್ರೀಯ ಮಟ್ಟದ ದೇಹದಾಡ್ಯ ಚಾಂಪಿಯನ್ ಶಿಪ್ನಲ್ಲಿ ಭಾರತ್ ಶ್ರೀ ವಿಭಾಗದಲ್ಲಿ ಮೆಸ್ಕಾಂನ ಉದ್ಯೋಗಿ ರೋಶನ್ ಫೆರಾವೊ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ತೊಕ್ಕೊಟ್ಟಿನ ಬರ್ನ್ ಔಟ್ ಜಿಮ್ನ ತರಬೇತುದಾರಾಗಿದ್ದು, ಎಮ್. ಎಸ್. ಕುಮಾರ್ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ಭಾಸ್ಕರ್ ತೊಕ್ಕೊಟ್ಟು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.
UN NETWORKS ಉಳ್ಳಾಲ: ಉಳ್ಳಾಲ ಕ್ರಿಕೆಟ್ ಬೋರ್ಡ್ ವತಿಯಿಂದ ಉಳ್ಳಾಲ ಪ್ರೀಮಿಯರ್ ಲೀಗ್-2018,ಸೀಸನ್ 5 ಮತ್ತು ಯು.ಟಿ.ಫರೀದ್ ಮೆಮೋರಿಯಲ್ ಟ್ರೋಫಿ2018,ಶಾಂತಿಗಾಗಿ ಕ್ರೀಡೆ ಎಂಬ ಘೋಷಣೆಯೊಂದಿಗೆ ಕ್ರಿಕೆಟ್ ಪಂದ್ಯಾಟ ಉಳ್ಳಾಲ ಸೀ ಗ್ರೌಂಡಲ್ಲಿ ನಡೆಯಿತು. ಕಾರ್ಯಕ್ರಮವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು,ಬಳಿಕ ಮಾತನಾಡಿದ ಅವರು ಕ್ರೀಡೆಯು ಶಾಂತಿ ಸಹೋದರತೆ ಏಕತೆಯ ಸಂಕೇತವಾಗಿದೆ,ಯುವಕರು ಕ್ರೀಡೆಯಲ್ಲಿ ಮುಂದೆ ಬಂದ ಹಾಗೆ ಉದ್ಯೋಗದಲ್ಲಿಯೂ ಮುಂದೆ ಬರಬೇಕೆಂದು ಹೇಳಿದರು. ಉಳ್ಳಾಲ ನಗರ ಸಭೆ ಅಧ್ಯಕ್ಷ ಹುಸೈನ್ ಕುಂಞಮೋನು ಅಧ್ಯಕ್ಷತೆವಹಿಸಿದರು, ಉದ್ಯಮಿ ಎಚ್.ಕೆ.ಖಾದರ್,ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಸ್ಮಾನ್ ಕಲ್ಲಾಪು,ಸದಸ್ಯರಾದ ಮುಸ್ತಫ ಅಬ್ದುಲ್ಲ, ಮುಹಮ್ಮದ್ ಮುಕ್ಕಚ್ಚೇರಿ, ರಝಿಯಾ ಇಬ್ರಾಹಿಮ್, ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಬಸ್ತಿಪಡ್ಪುs,ಮಾಜಿ ಮೇಯರ್ ಕೆ.ಅಶ್ರಫ್ ಮಂಗಳೂರು ಮಂಗಳಾ ಸ್ಟೇಡಿಯಂ ಅಭಿವೃದ್ಧಿಯ ನಿರ್ದೇಶಕ ಐವನ್ ಪಿಂಟೋ, ಜನತಾದಳ ವಿದ್ಯಾರ್ಥಿ ಘಟಕ ಅಧ್ಯಕ್ಷ ಸಿನಾನ್, ಉಳ್ಳಾಲ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಖಲೀಲ್ ಉಳ್ಳಾಲ್,ಉಪಾಧ್ಯಕ್ಷ ಇಕ್ಬಾಲ್ ಕೆನರಾ,ಹನೀಫ್ ಬಿ.ಎಫ್.ಸಿ, ಪ್ರಧಾನ ಕಾರ್ಯದರ್ಶಿ…
UN NETWORKS ಉಳ್ಳಾಲ: ಬ್ಯಾರೀಸ್ ವೆಲ್ಫೇರ್ ಫೋರಮ್ ಅಬುದಾಭಿ, ಇದರ ಅಧ್ಯಕ್ಷರಾದ ಜನಾಬ್ ಮುಹಮ್ಮದ್ ಅಲಿ ಉಚ್ಚಿಲ್ ಅವರಿಗೆ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ರವರು ಸನ್ಮಾನಿಸಿದರು. ಇತ್ತೀಚೆಗೆ ನಡೆದ ಟ್ರಸ್ಟ್ನ 35ನೇ ವಾರ್ಷಿಕ ಸಮಾರಂಭಕ್ಕೆ ಕರ್ನಾಟಕ ರಾಜ್ಯಪಾಲರಾದ ವಜುಬಾಯಿ ರೂಡಬಾಲ ಅವರಿಂದ ಗೌರವಿಸುವ ಕಾರ್ಯಕ್ರಮಕ್ಕೆ ಕಾರಣಾಂತರದಿಂದ ಬರಲು ಅನಾನುಕೂಲವಾದ್ದರಿಂದ ಇಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ಅಭಿವೃದ್ದಿ ಕುರಿತು ಚರ್ಚಿಸಿದರು, ಟ್ರಸ್ಟ್ ಕಾರ್ಯದರ್ಶಿ, ಎ.ಕೆ ಮೊಹಿಯದ್ದೀನ್ ಹಾಜಿ, ಕೋಶಾಧಿಕಾರಿ ಜೆ ಅಬ್ದುಲ್ ಹಮೀದ್, ಕಾಲೇಜು ಆಡಳಿತಾಧಿಕಾರಿ ಅಬ್ದುಲ್ ಲತೀಫ್, ಹಝ್ರತ್ ಶಾಲಾ ಮುಖ್ಯೋಪಾಧ್ಯಯರುಗಳಾದ ಇಮ್ತಿಯಾಝ್, ಫಿಲೋಮಿನ, ಶಿಕ್ಷಕರಾದ ರಸೂಲ್ ಖಾನ್, ಖಾಲಿದ್, ಮತ್ತಿತ್ತರರು ಉಪಸ್ಥಿತರಿದ್ದರು.
UN NETWORKS ಇನೋಳಿ: ಇಂದಿನ ಮಕ್ಕಳಿಗೆ ಧಾರ್ಮಿಕ ಚಿಂತನೆ ಮೂಡಿಸುವವರ ಕೊರತೆಯಿದೆ, ಈ ಕಾರಣದಿಂದ ಕಿರಿಯರಿಂದ ಹಿರಿಯರಿಗೆ ನೀಡುವ ಗೌರವ ಕಡಿಮೆಯಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲೂ ಯುವಜನತೆ ಭಾಗವಹಿಸುವುದು ಕಡಿಮೆಯಾಗಿದೆ ಎಂದು ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ ಅಭಿಪ್ರಾಯಪಟ್ಟರು. ಇನೋಳಿ ದೇವಂದಬೆಟ್ಟು ಶ್ರೀ ಸೋಮನಾಥೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದು ನಮ್ಮಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ತತ್ಸಂಗಳ ಮೂಲಕ ದೇಶ ಮುಂದುವರಿಯುತ್ತಿದ್ದು, ಹಿರಿಯರು ನೀಡಿರುವ ಬಳುವಳಿಯಾಗಿದೆ. ಭಜನೆ, ತತ್ಸಂಗದಿಂದ ಶಿವನ ಅನುಗ್ರಹ ಪ್ರಾಪ್ತಿಸಲಿದೆ. ಧಾರ್ಮಿಕ ಚಿಂತನೆ ಉಳಿಯಬೇಕಾದರೆ ಮಕ್ಕಳಿಗೆ ವಿದ್ಯೆ ಜೊತೆ ಸಂಸ್ಕಾರವೂ ನೀಡಬೇಕಿದೆ ಎಂದರು. ಬಂಟರ ಯಾನೆ ನಾಡವರ ಮಾತೃ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಮಾತನಾಡಿ, ಶಿವನಿಗೆ ತಂಪು ಪರಿಸರ ಅಗತ್ಯವಿದೆ. ಇನೋಳಿ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹತ್ತು ಎಕರೆ ಜಮೀನು ಇದೆ.…
UN NETWORKS ಉಳ್ಳಾಲ: ಯೇನೆಪೊಯ ನರ್ಸಿಂಗ್ ಕಾಲೇಜಿನ ಮಕ್ಕಳ ಶುಶ್ರುಷಾ ವಿಭಾಗ ಹಾಗು ಮಕ್ಕಳ ದಂತ ವೈದ್ಯಕೀಯ ವಿಭಾಗ ಯೇನೆಪೊಯ ದಂತ ವೈದ್ಯಕೀಯ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಹಲ್ಲುಗಳ ಆರೈಕೆಯ ಬಗ್ಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಯೇನೆಪೊಯ ದಂತ ವೈದ್ಯಕೀಯ ಕಾಲೇಜನಲ್ಲಿ ನಡೆಯಿತು. ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್ ಹಾಗೂ ಉಪಪ್ರಾಂಶುಪಾಲ ಡಾ| ಶ್ಯಾಮ್ ಭಟ್, ಹಾಗೂ ಮಕ್ಕಳ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಪ್ರೊ| ಉಮರಾಣಿ ಜೆ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಸ್ಲಿಂ ರೆಸಿಡೆನ್ಸಿಯಲ್ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು, ಅರೋಗ್ಯ ಶಿಕ್ಷಣದ ನಂತರ ಮಕ್ಕಳಿಗೆ ಉಚಿತ ದಂತ ಚಿಕಿತ್ಸೆಯನ್ನು ನೀಡಲಾಯಿತು. ಸಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
UN NETWORKS ತೊಕ್ಕೊಟ್ಟು: ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ತೊಕ್ಕೊಟ್ಟು ಇದರ ಆಶ್ರಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ 2ನೇ ವರ್ಷದ ನಮ್ಮ ನಡಿಗೆ ಶಿವ ಕ್ಷೇತ್ರದೆಡೆಗೆ ತೊಕ್ಕೊಟ್ಟು ಒಳಪೇಟೆಯಿಂದ ಶ್ರೀ ಕ್ಷೇತ್ರ ಸೋಮೇಶ್ವರದವರೆಗೆ ನಡೆಯಿತು. ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣ ಬಳಿ ನಡೆದ ಕಾರ್ಯಕ್ರಮಕ್ಕೆ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ ಚಾಲನೆ ನೀಡಿದರು. ಮಂಗಳೂರು ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಶರತ್ ಕುಮಾರ್, ಶ್ರೀರಕ್ತೇಶ್ವರೀ ದೇವಸ್ಥಾನದ ಅಧ್ಯಕ್ಷ ಚಂದ್ರಕಾಂತ್, ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಘವ ಉಚ್ಚಿಲ, ಉಳ್ಳಾಲ ಶ್ರೀ ಚೀರುಂಭ ಭಗವತೀ ದೇವಸ್ಥಾನದ ಉಪಾಧ್ಯಕ್ಷ ಸುರೇಶ್ ಭಟ್ನಗರ್, ಮೊಕ್ತೇಸರರಾದ ಮಾಧವ ಸುವರ್ಣ ಒಂಭತ್ತುಕೆರೆ, ದಾಮೋದರ ಉಳ್ಳಾಲ, ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ತಾಲೂಕು ಪಂಚಾಯತ್ ಸದಸ್ಯೆ ಸುರೇಖಾ ಚಂದ್ರಹಾಸ್ ಉಪಸ್ಥಿತರಿದ್ದರು. ಪ್ರವೀಣ್ ಬಸ್ತಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಅಶೋಕ್ ಸಹಕರಿಸಿದರು.
UN NETWORKS ಕೋಟೆಕಾರ್: ಕೋಟೆಕಾರ್ ಮಾಡೂರು ಹಿಂದೂ ರುದ್ರ ಭೂಮಿ ಸಮಿತಿಯ ನೇತೃತ್ವದಲ್ಲಿ ಕೋಟೆಕಾರ್ ಪಟ್ಟಣ ಪಂಚಾಯತ್ ಸಹಕಾರದಿಂದ ಮಾಡೂರು ಹಿಂದೂ ರುದ್ರ ಭೂಮಿಯ ನೂತನ ವಿಶ್ರಾಂತಿ ಕೊಠಡಿಯನ್ನು ಬಿ.ಜೆ.ಪಿ ರಾಜ್ಯಕಾರ್ಯಕಾರಿ ಸದಸ್ಯ ರವೀಂದ್ರ ಶೆಟ್ಟಿ ಉದ್ಘಾಟಿಸಿದರು. ನೂತನ ಕಚೇರಿಯನ್ನು ಕೊಣಾಜೆ ಮಂಗಳಗಂಗೋತ್ರಿ ಲಯನ್ಸ್ ಕ್ಲಬ್ ಅಧ್ಯಕ್ಷ ಕಿಟ್ಟಣ್ಣ ರೈ ಮಾಡೂರು ಉದ್ಘಾಟಿಸಿದರು, ಹಾಗೂ ಇಂಟರ್ ಲಾಕ್ ರಸ್ತೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ನೆರವೇರಿಸಿದರು. ಮಾಡೂರು ಸಾಯಿಬಾಬ ಮಂದಿರದ ಆಡಳಿತ ಮೊಕ್ತೇಸರ ಸುರೇಶ್ ಕೆ.ಪಿ, ಪರಮ ಶಿವನ ಕಲಾಕೃತಿಯನ್ನು ಲೋಕಾರ್ಪಣೆಗೈದರು. ಮಾಜಿ ಶಾಸಕ ಜಯರಾಮ ಶೆಟ್ಟಿ ,ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸೊಲ್ಲೆಂಜೀರ್, ಕೊಂಡಾಣ ಕ್ಷೇತ್ರದ ಆಡಳಿತ ಮೊಕ್ತೇಸರ ಕೃಷ್ಣ ಶೆಟ್ಟಿ ಕೆಳಗಿನ ಮನೆ ಕೋಟೆಕಾರ್ ಗುತ್ತು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಪರಿಸರ ಪ್ರೇಮಿ ಮಾದವ ಉಳ್ಳಾಲ್, ವಿಶ್ವ ಹಿಂದೂ ಪರಿಷತ್ ಉಳ್ಳಾಲ…
UN NETWORKS ಕಿನ್ಯ: ದುರ್ಗಾಪುರ, ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಯುವಕ ಮಂಡಲದ 48ನೇ ವಾರ್ಷಿಕೋತ್ಸವವನ್ನು ಕೋಟೆಕಾರ್ ನೆಲ್ಲಿಸ್ಥಳ ಶ್ರೀ ಕಾಳಿಕಾಂಭ ದೇವಸ್ಥಾನದ ಅಧ್ಯಕ್ಷ ಸುಂದರ್ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ, ನಿರಂತರ ಯಕ್ಷಗಾನ ಚಟುವಟಿಕೆಯೊಂದಿಗೆ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಯಕ್ಷಗಾನ ಸಂಘ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು. ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಕೋಟೆಕಾರ್ ಕೆಳಗಿನಗುತ್ತು, ನಿವೃತ್ತ ಸರಕಾರಿ ಅಧಿಕಾರಿ, ತಲಪಾಡಿ ಬಿಲ್ಲವ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜೀವ ದೇವಾಡಿಗ, ಕಿನ್ಯ ಬೆಳರಿಂಗೆ ಭಂಡಾರಮನೆ ಶ್ರೀ ಮಲರಾಯ ದೈವದ ಪಾತ್ರಿ ಮೈಂದ ಪೂಜಾರಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಸ್ಪರ್ದಾ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಟಿ. ರಾಮಯ್ಯ ಕಿಲ್ಲೆ, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಯಕ್ಷಗಾನ ಸಂಘದ…

