ಉಳ್ಳಾಲ ನ್ಯೂಸ್ ನೆಟ್ವರ್ಕ್ ಸೋಮೇಶ್ವರ: ಅಂತರಾಷ್ಟ್ರಿಯ ಯೋಗ ದಿನಾಚರಣೆಯ ಅಂಗವಾಗಿ ಬುಧವಾರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮಂಗಳೂರು ಘಟಕ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರಸ್ವತ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಮಹೇಶ್ ಎಲ್. ಬೊಂಡಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ವಯಂ ಸೇವಕಿ ಶಕುಂತಲಾ, ಅಮಿತಾ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ಪಿ., ಉಪಸ್ಥಿತರಿದ್ದರು. ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಪ್ರಾತ್ಯಕ್ಷಿಕೆಯ ಮೂಲಕ ವಿವಿಧ ಯೋಗಾಸನಗಳನ್ನು ಶಾಲಾ ಶಿಕ್ಷಕರೂ, ಶಿಕ್ಷಕೇತರ ವೃಂದದವರು , ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮೊಗವೀರಪಟ್ಣ : ಇಲ್ಲಿನ ಮೊಗವೀರಪಟ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಉಳ್ಳಾಲ ವಲಯದ ಆಶ್ರಯದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿ ಲತಾ ಮತ್ತು ಅನಿತಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಮೊಗವೀರಪಟ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೇದಾವತಿ ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು: ಚಾಲಕನ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಕಾಮಗಾರಿಗಾಗಿ ಅಗೆಯಲಾದ ಹೊಂಡಕ್ಕೆ ಉರುಳಿಬಿದ್ದಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ. ಘಟನೆಯಿಂದಾಗಿ ಚಾಲಕನಿಗೆ ಗಾಯವಾಗಿರುವ ಕುರಿತು ತಿಳಿದುಬಂದಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಮೊಗವೀರಪಟ್ನ ಸಮುದ್ರ ತೀರದಿಂದ 700 ಮೀ ದೂರದಲ್ಲಿ ಕಡಲ್ಕೊರೆತ ಕಾಮಗಾರಿ ನಿರತ ಬಾರ್ಜ್ ದುರಂತ ನಡೆದು 18 ದಿನಗಳು ಕಳೆದಿದ್ದು, ಬುಧವಾರ ಬಂದರಿನಿಂದ ಟಗ್ ಮೂಲಕ ಸಿಂಗಾಪುರದ ತಾಂತ್ರಿಕ ತಂಡ ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದರೆ, ಬಾರ್ಜ್ ಮಾಲೀಕರು ಹಾಗೂ ಬಂದರು ಅಧಿಕಾರಿಗಳು ಮೊಗವೀರಪಟ್ನಕ್ಕೆ ಭೇಟಿ ನೀಡಿದರು. ಜೂ.3 ರಂದು ಕಡಲ್ಕೊರೆತದ ಶಾಶ್ವತ ತಡೆಗೋಡೆ ಕಾಮಗಾರಿಗಾಗಿ ಸಮುದ್ರ ತೀರದಿಂದ 700 ಮೀ ದೂರದಲ್ಲಿ ನಿಲ್ಲಿಸಲಾಗಿದ್ದ ಬಾರ್ಜ್ ಸಮುದ್ರದ ಅಲೆಗಳಿಗೆ ಸಿಲುಕಿ ತಡೆಗೋಡೆಯ ಕಲ್ಲುಗಳಿಗೆ ಸಿಲುಕಿ ಹಾನಿಯಾಗಿತ್ತು. ಪರಿಣಾಮ ಸಮುದ್ರದ ನೀರು ಒಳನುಗ್ಗಿ ಮುಳುಗಲು ಆರಂಭವಾಗಿದ್ದ ಬಾರ್ಜ್ನಿಂದ 27 ಸಿಬ್ಬಂದಿಯನ್ನು ರಕ್ಷಿಸಲಾಗಿತ್ತು. ದಿನ ಕಳೆದಂತೆ ಹೆಚ್ಚು ಮುಳುಗಲು ಆರಂಭವಾಗುತ್ತಿದ್ದಂತೆ ತೈಲ ಸೋರಿಕೆ ಕುರಿತು ಸ್ಥಳೀಯರಿಂದ ಆರೋಪ ಕೇಳಿಬಂದಿತ್ತು. ಅದಕ್ಕಾಗಿ ಜಿಲ್ಲಾಡಳಿತ ತುರ್ತಾಗಿ ಬಾರ್ಜ್ ಸಮುದ್ರಕ್ಕಿಳಿಸಿದ ಧರ್ತಿ ಕಂಪೆನಿ ಅಧಿಕಾರಿಗಳಿಗೆ ಮಾಲಿನ್ಯ ಕುರಿತು ಎಚ್ಚರ ವಹಿಸುವಂತೆಯೂ, ಸ್ಥಳೀಯವಾಗಿ ಮಲಿನವಾಗದಂತೆ ಎರಡು ದಿನಗಳಲ್ಲಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಈ ಕುರಿತು…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಶ್ರೀ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ಲಿವಿಂಗ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಉಳ್ಳಾಲದ ಶಾರದಾ ನಿಕೇತನದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕಿ ಸುಮನಾ ಕಾಮತ್, ಹಾಗೂ ಶಕುಂತಳಾ ಉಳ್ಳಾಲ್, ಲತಾ ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಶಾರದಾ ನಿಕೇತನದ ಅಧ್ಯಕ್ಷ ಶ್ರೀಕರ ಕಿಣಿ, ಮಹಿಳಾ ಮಂಡಲದ ಅಧ್ಯಕ್ಷೆ ಜಾನಕಿ ಪುತ್ರನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗಾಸನದ ಲಾಭವನ್ನು ಪಡೆದುಕೊಂಡರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಬೆಂಜನಪದವು : ರಿಕ್ಷಾ ಚಾಲಕ ಹಾಗೂ ಎಸ್ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಲೂರು ಕಲಾಯಿ ನಿವಾಸಿ ಅಶ್ರಫ್(35) ಎಂದು ಗುರುತಿಸಲಾಗಿದೆ. ಕಲಾಯಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ರನ್ನು ಬಾಡಿಗೆಯ ನೆಪದಲ್ಲಿ ಕರೆದೊಯ್ದು ದುಷ್ಕರ್ಮಿಗಳು ಬೆಂಜನಪದವು ಬಳಿ ಮಾರಕಾಯುಧಗಳಿಂದ ಕೊಚ್ಚಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ. ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಅಶ್ರಫ್ ಕಲಾಯಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ, ಬಳಿಕ ಹೊಂಡಮಯವಾಗಿರುವ ಕಲಾಯಿ ರಸ್ತೆಯ ದುರಸ್ತಿಗೊಳಿಸಲು ಸಾರ್ವಜನಿಕರೊಂದಿಗೆ ಶ್ರಮದಾನ ಮಾಡಿದ್ದರು. ಆ ಬಳಿಕ ಅವರ ಆಟೋ ರಿಕ್ಷಾವನ್ನು ಬಾಡಿಗೆಯ ನೆಪದಲ್ಲಿ ಕರೆದೊಯ್ದ ದುಷ್ಕರ್ಮಿಗಳು ಬೆಂಜನಪದವು ಎಂಬಲ್ಲಿ ತಲವಾರು ದಾಳಿ ನಡೆಸಿ ಭೀಕರವಾಗಿ ಹತೈಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೆÇಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರವನ್ನು ರಕ್ಷಿಸುವುದರ ಜೊತೆಗೆ ರೋಗದಿಂದ ದೂರವಿರಬಹುದು. ಈ ನಿಟ್ಟಿನಲ್ಲಿ ಪರಿಸರ ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡಬೇಕಿದೆ ಎಂದು ನರೇಗಾದ ಮಾಜಿ ಒಂಬುಡ್ಸ್ಮೆನ್ ಶೀನ ಶೆಟ್ಟಿ ಅಭಿಪ್ರಾಯಪಟ್ಟರು. ಮುಡಿಪು ಜನಶಿಕ್ಷಣ ಟ್ರಸ್ಟ್ ವತಿಯಿಂದ ಕೊಣಾಜೆ ಗ್ರಾಮ ಪಂಚಾಯಿತಿ, ಜನಜಾಗೃತಿ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಮಂಗಳವಾರ ಕೊಣಾಜೆ ವೇದಾವತಿ ಗಟ್ಟಿ ಎಂಬವರ ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಮಹಿಳೆಯರಿಗೆ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಂದು ಗ್ರಾಮದ ಜನರು ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕಿದೆ. ಪ್ಲಾಸ್ಟಿಕ್ ಸುಡುವುದು, ಎಲ್ಲೆಂದರಲ್ಲಿ ಎಸೆಯುವುದರಿಂದ ಕ್ಯಾನ್ಸರ್ನಂತಹ ಮಾರಕ ರೋಗ ಬರುತ್ತದೆ, ಇಂತಹ ರೋಗದಿಂದ ದೂರವಿಡಬೇಕಾದರೆ ಪ್ಲಾಸ್ಟಿಕ್ ಬಳಕೆಯನ್ನು ಮನೆಯಿಂದಲೇ ದೂರ ಇಡಬೇಕಾಗಿದೆ ಎಂದು ಹೇಳಿದರು. ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ ಪೂಜಾರಿ, ಕೊಣಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಎಸ್.ರಾವ್,…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಂತೋಷದಾಯಕ ಮತ್ತು ಆರೋಗ್ಯಯುತ ಜೀವನಕ್ಕಾಗಿ ದಿನನಿತ್ಯ ಯೋಗಾಭ್ಯಾಸ ನಡೆಸುವ ಅವಶ್ಯಕತೆ ಇದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಎಂ.ಎಸ್ ಮೂಡಿತ್ತಾಯ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ವತಿಯಿಂದ ದೇರಳಕಟ್ಟೆಯ ಕ್ಷೇಮ ಕಾಲೇಜಿನಲ್ಲಿ ಜರಗಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸರಿಯಾದ ದೃಷ್ಟಿಕೋನ ಹಾಗೂ ಬದ್ಧತೆಯನ್ನು ಇಟ್ಟುಕೊಂಡು ನಿರಂತರ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಿ. ಜೀವನದ ಸತ್ಯವೊಂದೇ ಸಾವು. ಅದರ ನಡುವಿನ ಜೀವನದ ವಿಶ್ಲೇಷಣೆ ಅತಿ ಅಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇಮ ಡೀನ್ ಡಾ.ಸತೀಶ್ ಭಂಡಾರಿ ವಹಿಸಿ ಮಾತನಾಡಿ ಕ್ಷೇಮ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಹಿರೇಮಠ್ ಮುಖ್ಯ ಅತಿಥಿಯಾಗಿದ್ದರು. ಡಾ.ರಶ್ಮಿತಾ ಶೆಟ್ಟಿ ಮತ್ತು ಸೀಮಾ ಕಾಡೋಸಾ ಯೋಗ ತರಬೇತಿ ನೀಡಿದರು. ನಿಟ್ಟೆ ಫಿಸಿಯೋಥೆರಪಿ ವಿಭಾಗದ ಪ್ರಾಂಶುಪಾಲ ಡಾ.ಧನೇಶ್ ಕುಮಾರ್ ಕೆ ಸ್ವಾಗತಿಸಿದರು. ಕಿರಣ್ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕಿ ಡಾ.ಸುಮಲತಾ ಆರ್. ಶೆಟ್ಟಿ ವಂದಿಸಿದರು. ಇದೇ ಸಂದರ್ಭ ನಿಟ್ಟೆ ವಿ.ವಿ ವೈದ್ಯರು, ವಿದ್ಯಾರ್ಥಿಗಳು ಹಾಗೂ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಎರಡು ಲಾರಿಗಳನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ತೊಕ್ಕೊಟ್ಟು ಸಮೀಪ ಕೆ.ಎಲ್.38.129 ನೋಂದಾಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತೊಕ್ಕೊಟ್ಟು ಸಮೀಪ ವಶಪಡಿಸಿಕೊಂಡರೆ 10 ಚಕ್ರದ ಲಾರಿಯನ್ನು ಉಳ್ಳಾಲ ಸಮೀಪ ವಶಪಡಿಸಿಕೊಳ್ಳಲಾಗಿದೆ. ಎರಡು ವಾಹನಗಳು ಅಕ್ರಮವಾಗಿ ಕೇರಳಕ್ಕೆ ಮರುಳು ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕರ ಬಗ್ಗೆ ಯಾವುದೇ ಮಾಹಿತಿ ಇನ್ನು ಲಭ್ಯವಾಗಿಲ್ಲ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಸುಭಾಷ್ನಗರ: ವಿಶ್ವಪರಿಸರ ದಿನಾಚರಣೆ ಅಂಗವಾಗಿ ಉಳ್ಳಾಲ ಸುಭಾಷ್ನಗರದ ಕೆ. ಪಾಂಡ್ಯರಾಜ ಬಲ್ಲಾಳ್ ಕಾಲೇಜು ಕ್ಯಾಂಪಸ್ನಲ್ಲಿ ಕೆ. ಪಾಂಡ್ಯರಾಜ ಬಲ್ಲಾಳ್ ಟ್ರಸ್ಟ್ನ ಮೆನೇಜಿಂಗ್ ಟ್ರಸ್ಟಿ ಡಾ. ಪ್ರಿಯಾ ಕೆ. ಬಲ್ಲಾಳ್ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಹಾಗೂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ ಉಪಸ್ಥಿತರಿದ್ದರು.

