Author: UllalaVani

Kannada News From Coastal Karnataka

UN NETWORKS ಮಂಗಳೂರು: ನಕಲಿ ಚಿನ್ನ ನೀಡಿ ಲಕ್ಷಾಂತರ ಹಣ ನೀಡುವಂತೆ ಹೇಳಿದ ಮೂವರ ತಂಡದಲ್ಲಿ ಒಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಿನ್ನೆ ನಡೆದಿದ್ದು, ಇನ್ನಿಬ್ಬರು ಸ್ಥಳದಿಂದ ಓಡಿ ತಲೆಮರೆಸಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಹೊರರಾಜ್ಯದಿಂದ ಹಿಂದಿ ಮಾತನಾಡುವ ಮೂರು ಜನರ ತಂಡ ತೊಕ್ಕೊಟ್ಟು ಎಸ್.ಮೈ ಶಾಪ್ ಫ್ಯಾನ್ಸಿ ಸೆಂಟರಿಗೆ ಪ್ರವೇಶಿಸಿತ್ತು. ಅಲ್ಲಿ ಅಂಗಡಿ ಮಾಲೀಕರಲ್ಲಿ ತಮ್ಮಲ್ಲಿ ರೂ. 40 ಲಕ್ಷ ಬೆಲೆಬಾಳುವ ಚಿನ್ನಾಭರಣವಿದ್ದು, ರಸ್ತೆ ಬದಿಯಲ್ಲಿ ಸಿಕ್ಕಿದೆ. ಅದನ್ನು ಎಲ್ಲಿಯೂ ಮಾರಾಟ ಮಾಡಲು ಆಗುತ್ತಿಲ್ಲ. ಅದಕ್ಕಾಗಿ ಕೇವಲ ರೂ. 4 ಲಕ್ಷ ನೀಡಿದರೆ ಸಾಕು, ಅಷ್ಟೂ ಚಿನ್ನವನ್ನು ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಸ್ಯಾಂಪಲ್ಲಾಗಿ ಒಂದು ತುಂಡು ಚಿನ್ನವನ್ನು ಪರಿಶೀಲನೆಗೆ ನೀಡಿದ್ದರು. ಅದನ್ನು ಪರಿಶೀಲಿಸುವಾಗ ಅಸಲಿಯೇ ಆಗಿತ್ತು. ಅಲ್ಲದೆ ಬಾಕಿ ಚಿನ್ನವನ್ನು ನಾಳೆ ತರುವುದಾಗಿ ಹೇಳಿದ ತಂಡ ಕೊಟ್ಟ ಚಿನ್ನದ ತುಂಡನ್ನು ವಾಪಸ್ಸು ಪಡೆದು ಹೊರಟಿತ್ತು. ಇವರ ವರ್ತನೆಯಿಂದ ಸಂಶಯಗೊಂಡಿದ್ದ ಮಾಲೀಕರು ತಮ್ಮ ಸ್ನೇಹಿತರಲ್ಲಿ ವಿಷಯ ತಿಳಿಸಿದ್ದರು.…

Read More

UN NETWORKS ಉಳ್ಳಾಲ: ವ್ಯಕ್ತಿಯು ತನ್ನ ಸ್ವಂತ ಇಚ್ಚೆಯಿಂದ ನಿರ್ಧರಿಸಿದಲ್ಲಿ ತಂಬಾಕು ವರ್ಜನೆ ಸಾಧ್ಯ ಎಂದು ಕೆ.ಎಸ್.ಹೆಗ್ದೆ ಆಸ್ಪತ್ರೆಯ ಅಧೀಕ್ಷಕ ಮೇಜರ್ ಡಾ| ಶಿವಕುಮಾರ್ ಹೀರೆಮಠ್ ಅಭಿಪ್ರಾಯಪಟ್ಟರು.ಜಸ್ಟಿಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮನೋರೋಗ ಚಿಕಿತ್ಸಾ ವಿಭಾಗದ ವತಿಯಿಂದ “ವಿಶ್ವ ತಂಬಾಕು ರಹಿತ ದಿನ” ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಂಬಾಕು ಸೇವನೆಯಿಂದ ಚಟದಿಂದ ಹೊರಬರಲು ಸಹಾಯದ ಅವಶ್ಯಕತೆಯಿದೆ. ಸಹಾಯದ ಅವಶ್ಯಕತೆಯಿದ್ದವರು ಕ್ಷೇಮದ ಮನೋರೋಗ ವಿಭಾಗದ ತಂಬಾಕು ವರ್ಜನ ಕೇಂದ್ರದ ಸಹಾಯವನ್ನು ಪಡೆಯಬಹುದು ಎಂದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆ ಎಸ್ ಹೆಗ್ದೆ ಆಸ್ಪತ್ರೆಯ ಕಿವಿ ಮೂಗು ಗಂಟಲು ವಿಭಾಗದ ಡಾ| ವಾದೀಶ್ ಭಟ್ ರವರು ತಂಬಾಕು ಬಳಕೆಯಿಂದ ಬಾಯಿ ಮತ್ತು ಗಂಟಲಿನ ಭಾಗಗಳಿಗೆ ಆಗುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ವಾಸಕೋಶ ವಿಭಾಗದ ಡಾ| ಗಿರಿಧರ್ ರವರು ತಂಬಾಕು ಸೇವನೆಯಿಂದ ಶ್ವಾಸಕೋಶಕ್ಕೆ ಆಗುವ ತೊಂದರೆಗಳ ಬಗ್ಗೆ ಮತ್ತು ನಿಶ್ಕ್ರಿಯ ಧೂಮಪಾನದ ಬಗ್ಗೆ ತಿಳುವಳಿಕೆ ನೀಡಿದರು. ಹ್ರದ್ರೋಗ ವೈದ್ಯ ಡಾ| ಸುಬ್ರಮಣ್ಯ ಅವರು ತಂಬಾಕು…

Read More

UN NETWORKS ಕೋಟೆಕಾರು: ಮನೆಗಳು ಮಾತ್ರವಲ್ಲ, ದೇವ ಸಂಕಲ್ಪಗಳು, ನಾಗಚೈತನ್ಯ ವಾಸಸ್ಥಾನ, ದೈವಗಳ ತಾಣ, ದೇವತಾ ಸಂಕಲ್ಪ ಕುಣಿದಾಡುವ ತಾಣವಾದ ಕಾಯರ್‍ಮಜಲಿನ ಸುಮಾರು 9.98 ಎಕರೆ ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕದ ಸ್ಥಾಪನೆಗೆ ಮುಂದಾದವರ ಮಾನಸಿಕ ಭಾವನೆಗಳ ಬಗ್ಗೆ ಸಂಶಯವಿದೆ ಎಂದು ಮರಕಡ ಶ್ರೀ ಗುರು ಪರಾಶಕ್ತಿ ಕ್ಷೇತ್ರದ ಶ್ರೀ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿ ಖೇದ ವ್ಯಕ್ತಪಡಿಸಿದ್ದಾರೆ. ಕೋಟೆಕಾರು ಕಾಯರ್ ಮಜಲು ಎಂಬಲ್ಲಿ ಯೋಜಿತ ಘನ ತ್ಯಾಜ್ಯ ನಿರ್ವಹಣಾ ಘಟಕದ ಸ್ಥಾಪನೆಯ ದುಷ್ಪರಿಣಾಮದ ಕುರಿತು ಕೋಟೆಕಾರು ಗ್ರಾಮಸ್ಥರ ಸಮ್ಮುಖದಲ್ಲಿ , ಕಾಯರ್‍ಮಜಲು ದೇವರ ಅರಮನೆ ವಠಾರದಲ್ಲಿ ಭಾನುವಾರ ಜರಗಿದ ಬಹಿರಂಗ ಜಾಗೃತಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಹಲವು ಮನೆಗಳು ಇರುವ ಪ್ರದೇಶದಲ್ಲೇ ಕಾನೂನು ಮೀರಿ ಘಟಕ ಸ್ಥಾಪನೆಗೆ ಮುಂದಾಗಿರುವುದು ದುರಂತ. ಪ್ರದೇಶದ ಪಾವಿತ್ರ್ಯತೆಯನ್ನು ತಿಳಿದು ಮಾಡಲು ಹೊರಟಿರುವುದರ ವಿರುದ್ಧ ಖೇದವಿದೆ. ಜಾಗದ ವೈಶಿಷ್ಟ್ಯತೆ ತಿಳಿದವರೇ ಜಾಗ ತೋರಿಸಿರುವುದು ಅಚ್ಚರಿಯ ಬೆಳವಣಿಗೆ. ಇದನ್ನು ಗ್ರಾಮದ ಜನತೆ ವಿರೋಧಿಸುವುದರ ಮೂಲಕ…

Read More

UN NETWORKS ಕೈರಂಗಳ: ಸಹಪಠ್ಯ ಚಟುವಟಿಕೆಗಳು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಸಹಕಾರಿ ಎಂದು ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ ರಾಜಾರಾಮ ಭಟ್ ಅಭಿಪ್ರಾಯಪಟ್ಟರು. ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಸಹಪಠ್ಯ ಚಟುವಟಿಕೆ ತರಗತಿಗಳ ಉದ್ಘಾಟಿಸಿ ಮಾತನಾಡಿದ ಅವರು ಸಹಪಠ್ಯ ಚಟುವಟಿಕೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ವಿಕಾಸಕ್ಕೆ ಎಡೆ ಮಾಡಿಕೊಡುತ್ತವೆ. ಈ ವ್ಯವಸ್ಥೆಯ ಸದುಪಯೋಗವನ್ನು ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು ಎಂದು ನುಡಿದರು. ತಾಲೂಕು ಪಂಚಾಯತ್ ಸದಸ್ಯ ಹೈದರ್ ಕೈರಂಗಳ, ಶಾಲಾ ಮಾರ್ಗದರ್ಶಕ ಪಿ. ಶಂಕರಭಟ್ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ಕೊಣಾಜೆ ಲಲಿತ ಕಲೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ತರಬೇತುದಾರರಾದ ಉಪೇಂದ್ರ, ವೀಣಾಸರಸ್ವತಿ, ದಿನೇಶ್ ಉಪಸ್ಥಿತರಿದ್ದರು. ಪ್ರಾಂಶುಪಾಲೆ ದಿವ್ಯದೀಪ ಸ್ವಾಗತಿಸಿದರು. ಸಹಶಿಕ್ಷಕ ಶ್ರೀಹರಿ ಕೆ.ವಿ. ಪ್ರಸ್ತಾವನೆಗೈದರು. ಉಪಪ್ರಾಂಶುಪಾಲ ಎಂ. ಸೋಮಶೇಖರ ವಂದಿಸಿದರು. ಸಹಶಿಕ್ಷಕಿ ಯೋಗಿತಾ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ಹರೇಕಳ: ಸೌಜನ್ಯ ಸ್ಕೌಟ್‍ದಳ, ನೇತ್ರಾವತಿ ಇಕೋಕ್ಲಬ್ ಹರೇಕಳ ವತಿಯಿಂದ ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಿಡಕ್ಕೆ ನೀರು ಹಾಕುವ ಮುಖೇನ ಉದ್ಘಾಟಿಸಿದ ಮಂಗಳೂರಿನ ಉಪವಲಯ ಅರಣ್ಯಾಧಿಕಾರಿ ರವಿ ಕುಮಾರ್ ರವರು ದಿನಾಚರಣೆಯ ಮಹತ್ವವನ್ನು ತಿಳಿಯ ಪಡಿಸುವುದರೊಂದಿಗೆ “ಕಾಡು ನಾಶದಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗುತ್ತದೆ. ನಾವು ಬದುಕಲು ಸಸಿನೆಟ್ಟು ಪೋಷಿಸುವಂತಹ ಅರಣೀಕರಣ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಂಡು ಕಾರ್ಯಗತವಾಗಬೇಕು. ಈ ನಿಟ್ಟಿನಲ್ಲಿ ಅರಣ್ಯ ವಿಭಾಗದಿಂದ ಎಲ್ಲಾ ಸಲಹೆ-ಸಹಕಾರಗಳನ್ನು ನೀಡಲು ಸಿದ್ಧ” ಎಂದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ಪ್ರಾಧ್ಯಾಪಕರಾಗಿರುವ ಪ್ರೊ. ಪ್ರಶಾಂತ್ ನಾೈಕ್‍ರವರು ಇಂದು ಕ್ಯಾನ್ಸರ್ ಪೀಡಿತರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರುತ್ತಿದೆ. ಇದಕ್ಕೆ ಮುಖ್ಯ ಕಾರಣಗಳಲ್ಲಿ ಒಂದು ಪ್ಲಾಸ್ಟಿಕ್ ಮಾಲಿನ್ಯ. ಪ್ಲಾಸ್ಟಿಕ್‍ನಲ್ಲಿ ಇರುವ ಪುರಾನ್, ಒನ್‍ಫಿನಾಲ್, ಡೈಯಾಕ್ಲಿನ್, ಕ್ಯಾನ್ಸರ್ ಕಾರಕಗಳಾಗಿವೆ. ನಾವು ಬಳಸಿ ಎಸೆಯುವ ಪ್ಲಾಸ್ಟಿಕ್‍ನಿಂದ ಪರಿಸರದಲ್ಲಿ ನಾನಾ ಸಮಸ್ಯೆಗಳ ಜೊತೆಗೆ ತೀವ್ರತರವಾದ ಆರೋಗ್ಯ ದುಷ್ಪರಿಣಾಮಗಳಿಗೆ ಕಾರಣವಾಗಿದೆ. ಆದುದರಿಂದ ಈ ವರ್ಷದ ವಿಶ್ವ…

Read More

UN NETWORKS ಮಂಗಳೂರು: ಮಂಗಳೂರಿನ ಸರೋಜಿನಿ ಭಟ್ ಪ್ರತಿಷ್ಠಾನ, ಹವ್ಯಕ ಸಭಾ ಮಂಗಳೂರು ಆಶ್ರಯದಲ್ಲಿ ತೇಜಸ್ವಿನಿ ಆಸ್ವತ್ರೆ ಸಹಕಾರದೊಂದಿಗೆ ನಗರದ ಕದ್ರಿ ನಂತೂರಿನ ಭಾರತಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಭಾನುವಾರ ರಕ್ತದಾನ ಶಿಬಿರ ನಡೆಯಿತು. ನಗರದ ಖ್ಯಾತ ವಕೀಲ ಕೇಶವ ನಂದೋಡಿ ಕಾರ್ಯಕ್ರಮ ಉದ್ಘಾಟಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಜಿಲ್ಲಾ ಗೃಹರಕ್ಷಕದ¼ದ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಕ್ತದಾನದಿಂದ ಸಾಮರಸ್ಯ ವೃದ್ಧಿಯಾಗುತ್ತದೆ ಎಂದರು.ಮಂಗಳೂರು ಹವ್ಯಕ ಸಭಾ ಮಧ್ಯವಲಯ ಕಾರ್ಯದರ್ಶಿ ಭಾಸ್ಕರ ಹೊಸಮನೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 21ನೇ ಬಾರಿ ರಕ್ತದಾನ ಮಾಡಿದ ಜಯಪ್ರಕಾಶ್ ಅವರನ್ನು ಗೌರವಿಸಲಾಯಿತು. ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ಶ್ರೀಕೃಷ್ಣ ನೀರಮೂಲೆ ಕಾರ್ಯಕ್ರಮ ನಿರೂಪಿಸಿದರು. ತೇಜಸ್ವಿನಿ ಆಸ್ವತ್ರೆಯ ಡಾ. ಶ್ರೀದೇವಿ ಮತ್ತು ತಂಡದವರು ಶಿಬಿರಕ್ಕೆ ಸಹಕರಿಸಿದರು. 20ಮಂದಿ ಶಿಬಿರದಲ್ಲಿ ರಕ್ತದಾನ ಮಾಡಿದರು.

Read More

UN NETWORKS ಉಳ್ಳಾಲ: ವೈದ್ಯಕೀಯ ಕ್ಷೇತ್ರದಲ್ಲಿ ಅನುಭೂತಿ, ಸಹಾನುಭೂತಿ , ಮಾನವೀಯತೆಯನ್ನು ಪ್ರತಿಪಾದಿಸುವುದರ ಜತೆಗೆ ಹಿಂದಿನ ವೈದ್ಯ ವಿಜ್ಞಾನದ ಕಲೆಯನ್ನು ಪುನರ್ ಸ್ಥಾಪಿಸುವ ಉದ್ದೇಶದೊಂದಿಗೆ ಯುನೆಸ್ಕೋ ದ ಜೈವಿಕ ನೀತಿಶಾಸ್ತ್ರ ವಿಭಾಗಗಳನ್ನು ಹುಟ್ಟಿಹಾಕಿಕೊಂಡಿದೆ ಎಂದು ಯುನೆಸ್ಕೋ ಚೇರ್ ಇನ್ ಬಯೋಎಥಿಕ್ಸ್ ಹೈಫಾ ದ ಪ್ರೊ. ರಸ್ಸೆಲ್ ಡಿಸೋಜಾ ಅಭಿಪ್ರಾಯಪಟ್ಟರು.ಅವರು ಹೈಫಾ,ದ ಯುನೆಸ್ಕೋ ಚೇರ್ ಇನ್ ಬಯೋ ಎಥಿಕ್ಸ್ ಇದರ ಅಂತರಾಷ್ಟ್ರೀಯ ನೆಟ್‍ವರ್ಕ್‍ನಡಿ ನಿಟ್ಟೆ (ಸ್ವಾಯುತ್ತೆಗೊಳ್ಳಲಿರುವ ವಿ.ವಿ) ಯಲ್ಲಿ ಆರಂಭಿಸಿದ ಜೈವಿಕ ನೀತಿಶಾಸ್ತ್ರದ ವಿದ್ಯಾರ್ಥಿ ವಿಭಾಗವನ್ನು ಸೋಮವಾರ ದೇರಳಕಟ್ಟೆ ಕ್ಷೇಮ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ದೇಶದಾದ್ಯಂತ 65 ವಿದ್ಯಾರ್ಥಿ ತಂಡಗಳು ಸಕ್ರಿಯವಾಗಿ ಹೈಫಾ ಯುನೆಸ್ಕೋದ ಜೈವಿಕ ನೀತಿಶಾಸ್ತ್ರ ವಿಂಗ್‍ನಡಿ ಕಾರ್ಯಾಚರಿಸುತ್ತಿದೆ. ಶೇ.80-90 ವಿದ್ಯಾರ್ಥಿಗಳು ಜನರ ರಕ್ಷಣೆ, ಆರೈಕೆ, ಜವಾಬ್ದಾರಿಯನ್ನು ಮನದಲ್ಲಿಟ್ಟುಕೊಂಡು ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಡುತ್ತಾರೆ. ಅದನ್ನು ಸಾಕಾರಗೊಳಿಸುವ ಉದ್ದೇಶದೊಂದಿಗೆ ಯುನೆಸ್ಕೋ ಕಾರ್ಯಾಚರಿಸುತ್ತಿದೆ. ಕೇರಳ ಭಾಗದಲ್ಲಿ ಹಿಂದಿನ ಆರೋಗ್ಯ ನೀತಿಗಳು ಈಗಲೂ ಪಾಲನೆಯಾಗುತ್ತಿದೆ. ಇತರೆಡೆ ಇದನ್ನು ಪಾಲನೆ ಮಾಡುವ ಉದ್ದೇಶದ…

Read More

UN NETWORKS ಇರಾ: ವಿಶ್ವ ಪರಿಸರ ದಿನಾಚರಣೆಯ ಸಲುವಾಗಿ ಇರಾ ಗ್ರಾಮ ಪಂಚಾಯತ್ ಹಾಗು ಇರಾ ತಾಳಿತ್ತಬೆಟ್ಟು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಗಿಡ ನೆಡುವ ಮೂಲಕ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಉಪಾಧ್ಯಕ್ಷೆ ಚಂದ್ರಾವತಿ ಕರ್ಕೇರ, ಪಂಚಾಯತ್ ಸದಸ್ಯರಾದ ಮೊಯಿದಿನ್ ಕುಂಞಿ, ಗೋಪಾಲ ಅಶ್ವತ್ಥಡಿ, ರಮೇಶ್ ಪೂಜಾರಿ, ಎಂ.ಬಿ.ಉಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ.ಎ.ಕೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳೀಧರ ಭಂಡಾರಿ, ಶಾಲಾ ಶಿಕ್ಷಕ ವೃಂದ, ಪಂಚಾಯತ್ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದರು. ಶಿಕ್ಷಕರಾದ ಶಂಕರ್ ಸ್ವಾಗತಿಸಿ, ಜೋನ್ ಫೆರ್ನಾಂಡೀಸ್ ಧನ್ಯವಾದ ಸಲ್ಲಿಸಿದರು.

Read More

UN NETWORKS ಮಂಗಳೂರು: ಬಡ ರಿಕ್ಷಾ ಚಾಲಕರನ್ನು ಗುರುತಿಸಿ ಅವರಿಗೆ ಕಿಟ್ ವಿತರಣೆ ಮತ್ತು ಇಫ್ತಾರ್ ಕೂಟ ಏರ್ಪಡಿಸುವುದು ಉತ್ತಮ ಕಾರ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಾಸ್ತಿಕಟ್ಟೆ ಅಝಾದ್‍ನಗರ ರಿಕ್ಷಾಚಾಲಕರ ಸಂಘದ ವತಿಯಿಂದ ಭಾನುವಾರ ಮಾಸ್ತಿಕಟ್ಟೆಯಲ್ಲಿ ನಡೆದ ಇಫ್ತಾರ್ ಕೂಟ ಮತ್ತು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇಫ್ತಾರ್ ಮತ್ತು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾಜಿ ತಾ.ಪಂ. ಸದಸ್ಯ ಮುಸ್ತಫಾ, ಲಿಬ್‍ಝತ್, ಮಾಸ್ತಿಕಟ್ಟೆ ಅಝಾದ್‍ನಗರ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ನಝೀರ್, ಕಾರ್ಯದರ್ಶಿ ರವೂಪ್, ಸದಸ್ಯರಾದ ಸತ್ತಾರ್, ಅಂತೋನಿ, ಸವೇರ, ಕಬೀರ್, ಖಲೀಲ್, ಅಶ್ರಫ್, ಕರಾಮತ್ತ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 67 ಮಂದಿ ಬಡ ರಿಕ್ಷಾ ಚಾಲಕರಿಗೆ ಕಿಟ್ ವಿತರಣೆ ಮಾಡಲಾಯಿತು.

Read More

UN NETWORKS ದೇರಳಕಟ್ಟೆ: ದ್ವೇಷ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿಯಲ್ಲ. ಅದು ಬಿಜೆಪಿಯ ಸಂಸ್ಕೃತಿ. ನಮ್ಮದು ಏನಿದ್ದರೂ ಪ್ರೀತಿಯ ರಾಜಕಾರಣ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿದ್ದರೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸುವುದರಲ್ಲಿ ಕಾರ್ಯಕರ್ತರ ಪರಿಶ್ರಮವೇ ಕಾರಣ. ಮುಂದಿನ ಲೋಕಸಭೆ ಚುನಾವಣೆಗೆ ನಾವೆಲ್ಲರೂ ಸಿದ್ದರಾಗಬೇಕಿದೆ ಎಂದು ಶಾಸಕ ಯು.ಟಿ.ಖಾದರ್ ಅವರು ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಖಾಸಗಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ಹಾಗೂ ಇಪ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.ಮಂಗಳೂರು ಕ್ಷೇತ್ರದ ಜನತೆ ಅತ್ಯಂತ ಪ್ರೀತಿ ವಿಶ್ವಾಸ ನಂಬಿಕೆಯೊಂದಿಗೆ ಮತ್ತೆ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸದಂತೆ ಕ್ಷೇತ್ರದ ಅಭಿವೃದ್ದಿಗಾಗಿ ಪ್ರಯತ್ನ ಪಡುತ್ತೇನೆ. ಈ ಬಾರಿ ಕ್ಷೇತ್ರದಲ್ಲಿ ಮತಗಳ ಅಂತರ ಕಡಿಮೆಯಾಗಿದೆ ಎಂದು ಯಾರೂ ಬೇಸರಪಡುವ ಅಗತ್ಯವಿಲ್ಲ, ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಹೆಚ್ಚುವರಿ ಮತಪಡೆಯುವಲ್ಲಿ ನಾವು ತೊಡಗಿಸಿಕೊಳ್ಳೋಣ ಎಂದರು. ಕಾಂಗ್ರೆಸ್ ಮುಖಂಡ ಮುಸ್ತಫಾ ಹರೇಕಳ ಅವರು ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಜಾತಿ ಮತ ಬೇದ ನೋಡದೆ ಪ್ರತಿಯೊಬ್ಬರ…

Read More