UN NETWORKS ಕಿನ್ಯ: ದುರ್ಗಾಪುರ, ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಯುವಕ ಮಂಡಲದ 48ನೇ ವಾರ್ಷಿಕೋತ್ಸವವನ್ನು ಕೋಟೆಕಾರ್ ನೆಲ್ಲಿಸ್ಥಳ ಶ್ರೀ ಕಾಳಿಕಾಂಭ ದೇವಸ್ಥಾನದ ಅಧ್ಯಕ್ಷ ಸುಂದರ್ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ, ನಿರಂತರ ಯಕ್ಷಗಾನ ಚಟುವಟಿಕೆಯೊಂದಿಗೆ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಯಕ್ಷಗಾನ ಸಂಘ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು. ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಕೋಟೆಕಾರ್ ಕೆಳಗಿನಗುತ್ತು, ನಿವೃತ್ತ ಸರಕಾರಿ ಅಧಿಕಾರಿ, ತಲಪಾಡಿ ಬಿಲ್ಲವ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜೀವ ದೇವಾಡಿಗ, ಕಿನ್ಯ ಬೆಳರಿಂಗೆ ಭಂಡಾರಮನೆ ಶ್ರೀ ಮಲರಾಯ ದೈವದ ಪಾತ್ರಿ ಮೈಂದ ಪೂಜಾರಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಸ್ಪರ್ದಾ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಟಿ. ರಾಮಯ್ಯ ಕಿಲ್ಲೆ, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಯಕ್ಷಗಾನ ಸಂಘದ…
Author: UllalaVani
UN NETWORKS ಉಳ್ಳಾಲ: ಕರ್ನಾಟಕ ರಾಜ್ಯ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಮಂಗಳೂರು ದಕ್ಷಿಣ ವಲಯ ವತಿಯಿಂದ ಇಂದು ಮಂಗಳೂರಿನ ಚಿನ್ಮಯ ಪ್ರೌಢಶಾಲೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಕಾರ್ಯಗಾರ ಹಾಗೂ ಈಗಾಗಲೇ ವರ್ಗಾವಣೆಗೊಂಡಿರುವ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಜ್ಞಾನೇಶ್ ಎಂ.ಪಿ. ಇವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಅಭಿನಂದನೆ ಸಲ್ಲಿಸಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ. ಖಾದರ್ ಅವರು ಒಬ್ಬ ವ್ಯಕ್ತಿ ತನ್ನ ಕರ್ತವ್ಯವನ್ನು ನಿಷ್ಠೆ ಹಾಗೂ ದಕ್ಷತೆಯಿಂದ ಸೇವೆ ಸಲ್ಲಿಸಿದಾಗ ಸಮಾಜವೇ ಅವರನ್ನು ಗುರುತಿಸುತ್ತದೆ ಮತ್ತು ಗೌರವಿಸುತ್ತದೆ. ಹಾಗೆಯೇ ನಮ್ಮ ದಕ್ಷಿಣ ವಲಯದಲ್ಲಿ ಜ್ಞಾನೇಶ್ರವರು ಎಲ್ಲರನ್ನೂ ತನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮುಖೇನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಗಾಗಿ ವರ್ಗಾವಣೆಗೊಂಡರೂ ಅವರನ್ನು ವಿವಿಧ ಸಂಘಗಳು ಅವರ ಸೇವೆಯನ್ನು ಪರಿಗಣಿಸಿ ಗೌರವಿಸುತ್ತಿದೆ. ಇದು ಅಭಿನಂದನೀಯವೆಂದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನುರವರು ಕಾರ್ಯಗಾರವನ್ನು ಉದ್ಘಾಟಿಸಿ ಶಿಸ್ತುವನ್ನು ರೂಪಿಸುವಲ್ಲಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ…
UN NETWORKS ಕೊಣಾಜೆ: ವಿಶ್ವವಿದ್ಯಾನಿಲಯಗಳು ಸಂಶೋಧನೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಅಧ್ಯಯನಗಳಿಗೆ ಮಹತ್ವ ನೀಡಬೇಕಿದೆ ಎಂದು ಆಸ್ಟ್ರೇಲಿಯಾದ ನ್ಯೂ ಸೌಥ್ ವೇಲ್ಸ್ನ ನ್ಯೂಕಾಸ್ಟಲ್ ವಿಶ್ವವಿದ್ಯಾನಿಲಯದ ಹಿರಿಯ ಉಪಾಧ್ಯಕ್ಷರಾದ ಪ್ರೊ.ಕೆವಿನ್ ಹಾಲ್ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮಂಗಳೂರು ವಿವಿ ಹಾಗೂ ಆಸ್ಟ್ರೇಲಿಯಾದ ನ್ಯೂ ಕಾಸ್ಟಲ್ ವಿವಿ ನಡುವೆ ಐದು ವರ್ಷಗಳ ಶೈಕ್ಷಣಿಕ ಒಡಂಬಡಿಕೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಒಡಂಬಡಿಕೆಯಲ್ಲಿ ಮಂಗಳೂರು ವಿವಿ ಹಾಗೂ ಆಸ್ಟ್ರೇಲಿಯಾ ವಿವಿಯು ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಿದೆ ಮತ್ತು ಸಂಶೋಧನೆಗೆ ವೇದಿಕೆಯನ್ನು ಕಲ್ಪಿಸಿಕೊಡಲಿದೆ. ಇದರಲ್ಲಿ ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೆ ಪ್ರಾಧ್ಯಾಪಕ ಸಿಬ್ಬಂದಿಗಳಿಗೂ ಸಂಶೋಧನೆಗೆ ಅವಕಾಶಗಳ ಬಗ್ಗೆ ಒತ್ತು ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ನ್ಯೂ ಕಾಸ್ಟಲ್ ವಿವಿಯ ಗ್ಲೋಬಲ್ ಇನ್ನಾವೇಶನ್ ಸೆಂಟರ್ನ ನಿರ್ದೇಶಕರಾದ ಪ್ರೊ.ಅಜಯನ್ ವಿನು ಅವರು ಮಾತನಾಡಿ, ಈ ಎರಡು ವಿವಿಗಳ ನಡುವಿನ ನಡುವಿನ ಶೈಕ್ಷಣಿಕ ಒಡಂಬಡಿಕೆಯು ಉತ್ತಮವಾದ ಸಹಕಾರದೊಂದಿಗೆ…
UN NETWORKS ಉಳ್ಳಾಲ: ದಕ್ಷಿಣ ಕನ್ನಡ ಫುಟ್ಬಾಲ್ ಅಸೊಶಿಯೇಶನ್ ವತಿಯಿಂದ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಅಹಮ್ಮದ್ ಮಾಸ್ಟರ್ ಮೆಮೊರಿಯಲ್ ದಕ್ಷಿಣ ಕನ್ನಡ ಎ ದಿವಿಶನ್ ಫುಟ್ಬಾಲ್ ಲೀಗ್ ನಲ್ಲಿ ಯೆನೆಪೋಯ ಡೀಮ್ದ್ ಟು ಬಿ ವಿಶ್ವವಿದ್ಯಾಲಯವು ಭಾಗವಹಿಸಿ ಪ್ರಥಮ ಸ್ಥಾನ ಪಡೆಯಿತು. ತಂಡವು ಅಂತಿಮ ಪಂದ್ಯಾವಳಿಯಲ್ಲಿ ಬೆಂಗರೆ ಫುಟ್ಬಾಲ್ ತಂಡವನ್ನು 3-0 ಅಂತರದಲ್ಲಿ ಪರಾಜಯ ಗೊಳಿಸಿತು. ತಂಡವು ಬೀಬಿ ತೋಮಸ್ ರಿಂದ ತರಬೇತಿ ಪಡೆದ್ದಿತ್ತು.
UN NETWORKS ಉಳ್ಳಾಲ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೋಕಟ್ಟೆಯ ಓರ್ವ ಉಸ್ತಾದರ ಅನಾರೋಗ್ಯದ ಸಮಸ್ಯೆಯನ್ನು ಮನಗಂಡು ಅವರ ಜೋಕಟ್ಟೆಯಲ್ಲಿರುವ ನಿವಾಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಾಯಕರು ಭೇಟಿ ನೀಡಿ ಅವರ ಆರೋಗ್ಯ ಸಮಸ್ಯೆ ಕುರಿತು ವಿಚಾರಿಸಿ ಹತ್ತು ಸಾವಿರ ರೂಪಾಯಿ ಧನ ಸಹಾಯ ನೀಡಿ ನೆರವಾದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ವಕ್ಪ್ ಸದಸ್ಯ ಹಾಗು ಎಸ್ ವೈ ಎಸ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಬಳ್ಳಾರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ನಾಯಕ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಉಪಸ್ಥಿತರಿದ್ದರು.
UN NETWORKS ಉಳ್ಳಾಲ: ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಫುಡೀ 14 ಸಹಯೋಗದೊಂದಿಗೆ foodie14.com ಎಂಬ ವೆಬ್ ಸೈಟ್ ನ್ನು ಪಿ.ಎ. ಎಜುಕೇಶನಲ್ ಟ್ರಸ್ಟ್ ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎ. ಎಜುಕೇಶನಲ್ ಟ್ರಸ್ಟ್ ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎ. ಅಬ್ದುಲ್ಲಾ ಇಬ್ರಾಹಿಂ ಉದ್ಘಾಟಿಸಿದರು. ಈ ವೆಬ್ ಸೈಟನ್ನು ಪಿ.ಎ. ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಿಂದ ಅಭಿವೃದ್ಧಿಪಡಿಸಲಾಯಿತು. foodie14.com ಒಂದು ಆನ್ಲೈನ್ ಸೌಲಭ್ಯವಾಗಿದ್ದು , 100ಕ್ಕೂ ಹೆಚ್ಚು ಆಯ್ಕೆಯ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಒದಗಿಸುವುದು. ಈ ವೆಬ್ ಸೈಟ್ ನ್ನು ಅಭಿವೃದ್ಧಿಪಡಿಸಿದ ವಿದ್ಯಾರ್ಥಿಗಳು ಮೊಹಮ್ಮದ್ ಇರ್ಫಾನ್ ಎಮ್. ಎ. ಸೈಫುಲ್ ಅಸೀಮ್, ಅಬ್ದುಲ್ ಖಾದರ್, ಹಾಸಿರ್ ಅಬ್ದುಲ್ಲಾ, ರುಮೈಸ್ ಅಬ್ದುಲ್ಲಾ ಹಾಗೂ ಜಫಿನ್ ಹಸನ್ ಬಿ. ಹೆಚ್. ವಯನಾಡ್ ಮತ್ತು ಮೊಹಮ್ಮದ್ ಹಿಶಾದ್ ಮಂಗಳೂರು. ಈ ಸಂದರ್ಭ ಪ್ರಾಂಶುಪಾಲ ಡಾ| ಅಬ್ದುಲ್ ಶರೀಫ್, ನಿರ್ದೇಶಕ ಪ್ರೊ| ಸಫ್ರ್ರಾಜ್ ಹಾಶಿಮ್ ಜೆ., ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ| ಶರ್ಮಿಳಾ ಉಪಸ್ಥಿತರಿದ್ದರು.
UN NETWORKS ಉಳ್ಳಾಲ: ಬಬ್ಬುಕಟ್ಟೆಯ ಹಿರಾ ಕ್ಯಾಂಪಸ್ನಲ್ಲಿ ಇತ್ತೀಚೆಗೆ 5ರಿಂದ 12 ವರ್ಷದ ಒಳಗಿನ ಮಕ್ಕಳಿಗಾಗಿ ಏಕದಿನ ಚಿಲ್ಡ್ರನ್ ಫೆಸ್ಟನ್ನು ಜಮಾಅತೆ ಇಸ್ಲಾಮೀ ಹಿಂದ್ ಉಳ್ಳಾಲ ಘಟಕವು ಹಮ್ಮಿಕೊಂಡಿತು. ಜಮಾಅತೆ ಇಸ್ಲಾಮೀ ಹಿಂದ್ ಉಳ್ಳಾಲ ಘಟಕದ ಅಧ್ಯಕ್ಷರಾದ ಜನಾಬ್ ಅಬ್ದುಲ್ ಕರೀಮ್ ಮತ್ತು ಮಸ್ಜಿದುಲ್ ಹುದಾ ತೊಕ್ಕೊಟ್ಟಿನ ನಿಕಟಪೂರ್ವ ಅಧ್ಯಕ್ಷರಾದ ಜನಾಬ್ ಹಸನಬ್ಬರವರು ಪಾರಿವಾಳವನ್ನು ಹಾರಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಬಳಿಕ ಅಬ್ದುಲ್ ಕರೀಮ್ರವರು ಉದ್ಘಾಟನಾ ಭಾಷಣವನ್ನು ಮಾಡುತ್ತಾ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದು ಅವರ ಬಾಲ್ಯವಾಗಿದೆ. ಸನ್ನಡತೆ, ಸದಾಚಾರ, ಶಿಸ್ತು, ಪರಸ್ಪರ ಸಂಬಂಧ, ಸಹಧರ್ಮೀಯರೊಂದಿಗಿನ ಉತ್ತಮ ಬಾಂಧವ್ಯ ಮುಂತಾದ ಧಾರ್ಮಿಕ ಮೌಲ್ಯಗಳ ಬಗ್ಗೆ ಚಿಕ್ಕಂದಿನಿಂದಲೇ ಮಕ್ಕಳಿಗೆ ತರಬೇತಿಯನ್ನು ಕೊಟ್ಟು ಬೆಳೆಸಿದರೆ ಮಾತಾಪಿತರಿಗೆ, ಕುಟುಂಬಸ್ಥರಿಗೆ, ಸಮಾಜಕ್ಕೆ, ದೇಶಕ್ಕೆ ದೊಡ್ಡ ಆಸ್ಥಿಯಾಗಿ ಅವರು ಮಾರ್ಪಡುತ್ತಾರೆ. ಈ ನಿಟ್ಟಿನಲ್ಲಿ ಗುಲ್ಶನ್ ಎಂಬ ಮಕ್ಕಳ ಸಂಘವನ್ನು ಜಮಾಅತೆ ಇಸ್ಲಾಮೀ ಹಿಂದ್ ಸ್ಥಾಪಿಸಿದೆ ಎಂದು ಹೇಳಿದರು. ಜಮಾಅತೆ ಇಸ್ಲಾಮೀ ಹಿಂದ್, ಉಳ್ಳಾಲ ಮಾಜಿ ಅಧ್ಯಕ್ಷರಾದ ಜನಾಬ್ ಪಿ.…
UN NETWORKS ಉಳ್ಳಾಲ: ಶಾರದಾ ಸಮೂಹ ಸಂಸ್ಥೆಗಳು ಪ್ರೊ| ಎಂ.ಬಿ. ಪುರಾಣಿಕ್ ನೇತೃತ್ವದಲ್ಲಿ ಆಡಳಿತ ಮಂಡಳಿಯ ಮಾರ್ಗದರ್ಶನದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗಮನ ಸೆಳೆಯುತ್ತಿದ್ದು, ಇದೀಗ ದ್ರವತ್ಯಾಜ್ಯ ಘಟಕ ಸ್ಥಾಪನೆ ಮಾಡುವ ಮೂಲಕ ಇನ್ನೊಮ್ಮೆ ಮಾದರಿ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆಯನ್ನು ಪಡೆದಂತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಆವರಣದಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎರಡನೆಯ ಅತಿ ದೊಡ್ಡ 10ಲಕ್ಷ ಲೀ. ಸಾಮರ್ಥ್ಯದ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರಿನಲ್ಲಿ ಹಲವು ವಸತಿ ವಾಣಿಜ್ಯ ಸಂಕೀರ್ಣಗಳು ತಂದೊಡ್ಡುವ ಸಮಸ್ಯೆಗಳು ನಮ್ಮ ಕಣ್ಣ ಮುಂದೆ ಇರುವಾಗ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯೊಂದು ಇಂತಹ ಒಂದು ಮಹತ್ವದ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ. ನೂತನ ಘಟಕ ನಿರ್ಮಾಣದಿಂದ ಈ ಭಾಗದಲ್ಲಿ ಸುಂದರ ಪರಿಸರ…
UN NETWORKS ತಲಪಾಡಿ: ಸರಕಾರ ಹಕ್ಕುಪತ್ರ ನೀಡುವ ಮೂಲಕ ಸಮಾಜದ ಜನರು ನೆಮ್ಮದಿಯ ಜೀವನ ನಡೆಸುವುದರೊಂದಿಗೆ ಮುಂದಿನ ಪೀಳಿಗೆಗೆ ಬೆಳೆಬಾಳುವ ಒಂದು ಸಂಪತ್ತಾಗಿ ಅವರು ಉನ್ನತ ಶಿಕ್ಷಣ ಪಡೆದು ಒಂದು ಕ್ರಾಂತಿಕಾರಿ ಬದಲಾವಣೆ ತರುವ ಕಾರ್ಯ ಆಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ತಲಪಾಡಿ ಗ್ರಾಮದ ಪಿಲಿಕೂರು ಬಳಿ ತಲಪಾಡಿ ಮತ್ತು ಕಿನ್ಯ ಗ್ರಾಮದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಸರಕಾರ ನೀಡುವ ಹಕ್ಕುಪತ್ರ ಮುಂದಿನ ದಿನಗಳಲ್ಲಿ ಇದರ ಮೌಲ್ಯ ದುಪ್ಪಾಟ್ಟಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಈ ಹಕ್ಕು ಪತ್ರಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಹಣ ತೆಗೆದುಕೊಳ್ಳುವ ಕಾರ್ಯ ಮಾಡಬಾರದು ಮುಂದಿನ ದಿನಗಳಲ್ಲಿ ಈ ಹಕ್ಕು ಪತ್ರ ಮಕ್ಕಳಿಗೆ ಒಂದು ಸಂಪತ್ತಾಗಿದ್ದು ಆದನ್ನು ಜತನದಲ್ಲಿ ಕಾಯುವ ಕೆಲವನ್ನು ಮಾಡಬೇಕು ಎಂದರು. ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರಕಾರ ಇರುವಾಗ ಹಕ್ಕುಪತ್ರ ನೀಡಿತ್ತು ಇದೀಗ ಸಿದ್ಧರಾಮಯ್ಯರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ನೀಡಲಾಗುತ್ತಿದೆ. ಮಂಗಳೂರು ಕ್ಷೇತ್ರದಲ್ಲಿ ಇದರೊಂದಿಗೆ ಅನ್ನಭಾಗ್ಯ,…
UN NETWORKS ಉಳ್ಳಾಲ: ಕಾಪಿಕಾಡು ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಆಯೋಜಿಸಲಾದ ಅಹೋರಾತ್ರಿ ಏಕಾಹ ಭಜನಾ ಸಂಕೀರ್ತನೆಯನ್ನು ಛಾಯಾಗ್ರಾಹಕ, ಉದ್ಯಮಿ, ಗೋಪಿನಾಥ್ ಬಗಂಬಿಲ ಮತ್ತು ಬಿಂದ್ಯಾ ಗೋಪಿನಾಥ್ ದಂಪತಿ ಉದ್ಘಾಟಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರು ರಾಮಚಂದ್ರ ಭಟ್, ಮೊಕ್ತೇಸರರಾದ ಈಶ್ವರ್ ಉಳ್ಳಾಲ್, ದಿನೇಶ್ ಅತ್ತಾವರ, ರಘುರಾಮ್ ಶೆಟ್ಟಿ ಕಾಪಿಕಾಡ್, ಮಹಾಲಿಂಗ, ನಿರ್ಮಲ ಕುಂಞಂಬು, ಸೇವಾ ಸಮಿತಿ ಗೌರವಾಧ್ಯಕ್ಷ ಸುರೇಂದ್ರ ನಾಯಕ್, ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಕೋಶಾಧಿಕಾರಿ ವೇಣುಗೋಪಾಲ್, ಪ್ರಮುಖರಾದ ಡಾ. ಆರ್.ಕೆ.ಶೆಟ್ಟಿ, ಕೂಸಪ್ಪ ಗಟ್ಟಿ, ಸಂಜೀವ ಶೆಟ್ಟಿ, ನಾರಾಯಣ ರಾವ್, ಆನಂದ ಶೆಟ್ಟಿ, ಪ್ರವೀಣ್ ಉಳ್ಳಾಲಬೈಲ್, ಶಿವರಾಮ್ ಕಾಪಿಕಾಡ್ ಭಜನಾ ಸಂಚಾಲಕರಾದ ವಸಂತ್ ಅಂಬಿಕಾರೋಡ್ ಮುಂತಾದವರು ಉಪಸ್ಥಿತರಿದ್ದರು.

