Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕøತಿ, ಜನಾಂಗವನ್ನು ಒಳಗೊಂಡ ದೇಶವಾಗಿದ್ದರೂ ವೈವಿದ್ಯತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದೆ. ಬಹುಭಾಷಿಕತೆ ಎಂಬುದು ಒಂದು ಪ್ರಜಾಪ್ರಭುತ್ವ ಮಾತ್ರವಲ್ಲದೆ ಇದನ್ನು ಬಹುರಾಷ್ಟ್ರೀಯ ಪ್ರಜಾಪ್ರಭುತ್ವವಾಗಿಯೂ ನಾವು ಕಾಣಬಹುದು. ಪ್ರಜಾಪ್ರಭುತ್ವದ ನೈಜವಾದ ಅರ್ಥ ಸ್ವಭಾವವೇ ಬಹುಭಾಷಿಕತೆಯಾಗಿದೆ ಎಂದು ಅಮೇರಿಕದ ನ್ಯೂಯಾರ್ಕ್ ಸ್ಟೋನಿ ಬ್ರೂಕ್ ವಿಶ್ವವಿದ್ಯಾನಿಲಯದ ಭಾರತ ಅಧ್ಯಯನ ವಿಭಾಗದ ನಿರ್ದೇಶಕರಾದ ಹಿರಿಯ ಭಾಷಾವಿಜ್ಞಾನಿ ಪ್ರೊ. ಎಸ್ ಎನ್ ಶ್ರೀಧರ್ ಅವರು ಅಭಿಪ್ರಾಯ ಪಟ್ಟರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ಮೈಕ್ರೊಟ್ರಾನ್ ಸಭಾಂಗಣದಲ್ಲಿ ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅನುದಾನದೊಂದಿಗೆ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಎರಡು ವಾರಗಳ ಕಾಲ ಬಹುಭಾಷಿಕತೆ ಸಾಮಾಜಿಕ ಸಾಂಸ್ಕøತಿಕ ಮತ್ತು ಸಾಹಿತ್ಯಿಕ ಆಯಾಮಗಳು’ ಎಂಬ ವಿಷಯದಲ್ಲಿ ಆಯೋಜಿಸಲಾಗಿದ್ದ `ಗ್ಯಾನ್’  ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ರಾಷ್ಟ್ರದ ಬೆಳವಣಿಗೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮ, ಆರ್ಥಿಕ ಮತ್ತು ಸಾಮಾಜಿಕ  ಕ್ಷೇತ್ರದಲ್ಲಿ ನಡೆದ ಕ್ರಾಂತಿಕಾರಿ ಬೆಳವಣಿಗೆಗಳು ಬಹಳ ಪ್ರಮುಖವಾದವುಗಳಾಗಿವೆ.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಕಡಲ್ಕೊರೆತಕ್ಕೆ ತಾತ್ಕಾಲಿಕ ತಡೆಗೋಡೆಯಾಗಿ ಕಲ್ಲು ಹಾಕುವ ಕಾಮಗಾರಿಯಲ್ಲಿ ನಿರತ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಬದಿಯಲ್ಲೇ ಉರುಳಿಬಿದ್ದು ಸ್ವಲ್ಪದರಲ್ಲೇ ಅಪಾಯದಿಂದ ತಪ್ಪಿದ ಘಟನೆ ಉಳ್ಳಾಲದ ಕೈಕೋ ಪ್ರದೇಶದಲ್ಲಿ ಶುಕ್ರವಾರ ಜರಗಿದೆ. ಕೈಕೋ, ಕಿಲಿರಿಯಾನಗರ ಪ್ರದೇಶದಲ್ಲಿ ಕಲ್ಲು ಹಾಕುವ ಕೆಲಸ ಭರದಿಂದ ಸಾಗುತ್ತಿದೆ. ವಾರದ ಹಿಂದೆ ಇದೇ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆ ಭಾಗಶ: ಸಮುದ್ರಪಾಲಾಗಿತ್ತು. ಆ ಬಳಿಕ ಕಲ್ಲು ಹಾಕುವ ಕಾಮಗಾರಿ ಭರದಿಂದ ಆರಂಭವಾಗಿತ್ತು. ಶುಕ್ರವಾರ ಸಮುದ್ರದ ದಂಡೆಗೆ ಕಲ್ಲು ಹಾಕುವ ವೇಳೆ ನಿಯಂತ್ರಣ ಕಳೆದುಕೊಂಡ ಟಿಪ್ಪರ್ ಲಾರಿ ಸಮುದ್ರಕ್ಕೆ ಬೀಳುವುದರಿಂದ ಮೀ. ಅಂತರದಲ್ಲಿ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸ್ವಲ್ಪ ಗಾಯಗಳಾಗಿವೆ. ಮುಳುಗುವ ಭೀತಿಯಲ್ಲಿರುವ ಬಾರ್ಜ್ ಎದುರುಗಡೆಯೇ ಲಾರಿ ಕೂಡಾ ಮಗುಚಿರುವುದರಿಂದ ಇದನ್ನು ನೋಡಲು ಜನ ಜಮಾಯಿಸಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ: ದೇಶಾದ್ಯಂತ ರಕ್ತದ ಕೊರತೆ ನೀಗಿಸಲು ಜನರಲ್ಲಿ ಜಾಗೃತಿಯ ಅಗತ್ಯತೆ ಇದೆ. ರಕ್ತದಾನದ ಕುರಿತ ಜಾಗೃತಿ ಸಂದೇಶ ಅನೇಕ ಜೀವಗಳನ್ನು ಬದುಕಿಸುತ್ತದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯ ಸಮಾಜಕ್ಕೆ ಪೂರಕವಾಗಿದೆ ಎಂದು ದೇರಳಕಟ್ಟೆ ಕ್ಷೇಮ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆ ಆಸ್ಪತ್ರೆ, ಕ್ಷೇಮ ವೈದ್ಯಕೀಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆಸ್ಪತ್ರೆ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಆಸ್ಪತ್ರೆ ವಠಾರದಲ್ಲಿ ಬುಧವಾರ ನಡೆದ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ರಕ್ತದಾನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕ್ಷೇಮ ಮೆಡಿಕಲ್ ಅಕಾಡೆಮಿಯ ಕುಲಸಚಿವ ಹಾಗೂ ಪೆಥಾಲಜಿ ವಿಭಾಗ ಮುಖ್ಯಸ್ಥ ಡಾ.ಜಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್ ಹಿರೇಮಠ್ , ನಿಟ್ಟೆ ವಿ.ವಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕಿ ಡಾ.ಸುಮಲತಾ.ಆರ್ ಶೆಟ್ಟಿ, ಪ್ರೊ.ಶಶಿಕುಮಾರ್ ಮತ್ತು ನಿವೃತ್ತ ಸೇನಾಧಿಕಾರಿ ಹಾಗೂ ದೇರಳಕಟ್ಟೆ ರೋಟರಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಚೆಂಬುಗುಡ್ಡೆ: ಉಳ್ಳಾಲ ವ್ಯಾಪ್ತಿಯ ಚೆಂಬುಗುಡ್ಡೆ, ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೂರು ಕಡೆಗಳಲ್ಲಿ ಶ್ರೀಘ್ರದಲ್ಲಿ ವಿದ್ಯುತ್ ಘಟಕವನ್ನು ಸ್ಥಾಪಿಸುವ ಮೂಲಕ ವಿದ್ಯುತ್ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲಾಗುವುದು ಎಂದು ಮಂಗಳೂರು ಮೆಸ್ಕಾಂನ ಅಧೀಕ್ಷಕ ಅಭಿಯಂತರ ಮಂಜಪ್ಪ ಅಧಿಕಾರಿಗಳಿಗೆ ಹೇಳಿದರು. ಚೆಂಬುಗುಡ್ಡೆಯಲ್ಲಿರುವ ಉಳ್ಳಾಲ ಮೆಸ್ಕಾಂ ಕಚೇರಿಯಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಇದೀಗ ಉಳ್ಳಾಲ ವ್ಯಾಪ್ತಿಯ ಚೆಂಬುಗುಡ್ಡೆಯಲ್ಲಿ 33 ಕೆ.ವಿ.ಯ ವಿದ್ಯುತ್ ಘಟಕ ಕಾರ್ಯನಿರ್ವಹಿಸುತ್ತಿದೆ ಇದರಿಂದ ಅಧಿಕ ಒತ್ತಡ ಬೀಳುತ್ತಿದೆ. ಈ ನಿಟ್ಟಿನಲ್ಲಿ ಚೆಂಬುಗುಡ್ಡೆಯಲ್ಲಿ 110 ಕೆ.ವಿ, ಉಳ್ಳಾಲ ಅಬ್ಬಕ್ಕ ವೃತ್ತದ ಬಳಿಕ 33 ಹಾಗೂ ಕೋಟೆಕಾರ್‍ನಲ್ಲಿ 33 ಕೆ.ವಿ. ಸಾಮಥ್ರ್ಯದ ವಿದ್ಯುತ್ ಘಟಕ ನಿರ್ಮಾಣ ಯೋಜನೆಯಿದೆ ಎಂದ ಅವರು ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿಗೆ ಮುಖ್ಯ ಅಭಿಯಂತರರಿಂದ ಅನುಮತಿ ದೊರಕಿದೆ, 40 ಲಕ್ಷ ವೆಚ್ಚದ ಕಾಮಗಾರಿ ಇದಾಗಿದ್ದು ಟೆಂಡರ್ ಪ್ರಕ್ರಿಯೆ ನಡೆದ ತಕ್ಷಣ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್  ಚೆಂಬುಗುಡ್ಡೆ: ಅಭಿವೃದ್ಧಿಯ ಉಳ್ಳಾಲದ ಚೆಂಬುಗುಡ್ಡೆ ಸಮೀಪ ಕಾರ್ಯಾಚರಿಸುತ್ತಿರುವ 33 ಕೆ.ವಿ ವಿದ್ಯುತ್ ಘಟಕಕ್ಕೆ ಅಧಿಕ ಒತ್ತಡ ಬೀಳುತ್ತಿರುವುದರಿಂದ ಚೆಂಬುಗುಡ್ಡೆಯಲ್ಲಿ 110 ಕೆ.ವಿ, ಉಳ್ಳಾಲ ಅಬ್ಬಕ್ಕ ವೃತ್ತದ ಬಳಿಕ 33 ಹಾಗೂ ಕೋಟೆಕಾರ್‍ನಲ್ಲಿ 33 ಕೆ.ವಿ. ಸಾಮಥ್ರ್ಯದ ವಿದ್ಯುತ್ ಘಟಕ ನಿರ್ಮಿಸುವ ಯೋಜನೆಯಿದೆ ಎಂದು  ಮಂಗಳೂರು ಮೆಸ್ಕಾಂನ ಅಧೀಕ್ಷಕ ಅಭಿಯಂತರ ಮಂಜಪ್ಪ ಅಧಿಕಾರಿಗಳಿಗೆ ಹೇಳಿದರು. ಚೆಂಬುಗುಡ್ಡೆಯಲ್ಲಿರುವ ಉಳ್ಳಾಲ ಮೆಸ್ಕಾಂ ಕಚೇರಿಯಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಉಳ್ಳಾಲ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಘಟಕಗಳ ಸ್ಥಾಪನೆಗೆ ಇಲಾಖೆ ಮುಂದಾಗಿದೆ. ಅಬ್ಬಕ್ಕ ವೃತ್ತದ ಬಳಿ ನಗರಸಭೆಯಿಂದ ಜಮೀನು ಗುರುತಿಸಿ ನೀಡಿದರೆ ಕಾಮಗಾರಿ ಆರಂಭಿಸಲಾಗುವುದು. ಈ ಮೂಲಕ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲಾಗುವುದು. ದುರಸ್ತಿ ಹೆಸರಲ್ಲಿ ವಾರಕ್ಕೊಮ್ಮೆ ವಿದ್ಯುತ್ ಕಡಿತಗೊಳಿಸುವ ಪ್ರಕ್ರಿಯೆ ಮೆಸ್ಕಾಂನಲ್ಲಿಲ್ಲ, ದುರಸ್ತಿ ಕೆಲಸವಿದ್ದರೆ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿದ ಬಳಿಕವಷ್ಟೇ ವಿದ್ಯುತ್ ಕಡಿತಗೊಳಿಸಬೇಕು. ಈ ಬಗ್ಗೆ ಅಧೀಕ್ಷಕ ಅಭಿಯಂತರರಲ್ಲಿ ಅನಮತಿ ಪಡೆಯುವುದು ಅಗತ್ಯವಾಗಿದ್ದರೂ,…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಕೊಣಾಜೆ ಕಲ್ಲಿಮಾರು ಹೊಸಮನೆ ಬಳಿ ನಿರ್ಮಾಣಗೊಳ್ಳಲಿರುವ ಉಳ್ಳಾಲ್ತಿ ಅಮ್ಮನವರ ಮಾಡ ಮತ್ತು ಧರ್ಮಚಾವಡಿ ನಿರ್ಮಾಣದ ಶಿಲಾನ್ಯಾಸವು ತಂತ್ರಿಗಳಾದ ವೇದಮೂರ್ತಿ ವೆಂಕಟೇಶ್ ತಂತ್ರಿ ಎಡಪದವು ಮತ್ತು ಸುದರ್ಶನ್ ಭಟ್ ಸೇನೆರೆಪಾಲು ಪೌರೋಹಿತ್ಯದಲ್ಲಿ ನಡೆಯಿತು. ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರು ಹೊಸಮನೆ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲ್ತಿ ಅಮ್ಮನವರ ಮಾಡ ನಿರ್ಮಾಣಗೊಳ್ಳಲಿದ್ದು ಮುಂದಿನ ಮಾರ್ಚ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವದ ಸಂಕಲ್ಪ ಮಾಡಲಾಗಿದೆ.ಈ ಪುಣ್ಯ ಕಾರ್ಯದಲ್ಲಿ ಊರಿನ ಪರವೂರಿನ ಭಕ್ತರ ಸಹಕಾರ ಅಗತ್ಯ ಎಂದರು. ಕೊಣಾಜೆ ಮುಲಾರ ಶ್ರೀ ಅರಸು ಮುಂಡಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಸುರೇಶ್ ರೈ ಕಲ್ಲಿಮಾರುಗುತ್ತು, ಪ್ರ. ಕಾರ್ಯದರ್ಶಿ ರವೀಂದ್ರ ರೈ ಹರೇಕಳ, ಕೋಶಾಧಿಕಾರಿ ರವೀಂದ್ರ ಬಂಗೇರ, ದೈವ ಪಾತ್ರಿ ಐತ್ತಪ್ಪ ಪೂಜಾರಿ, ಗಟ್ಟಿ ಸಮಾಜದ ನಾಯ್ಗರ ಪ್ರತಿನಿಧಿ ಪದ್ಮನಾಭ ಗಟ್ಟಿ ಕಟ್ಟಪುಣಿ, ಪ್ರಮುಖರಾದ ರಾಜಾರಾಮ ರೈ ಕಲ್ಲಿಮಾರ್ ಹೊಸಮನೆ, ದೇವಪ್ಪ ಶೆಟ್ಟಿಗಾರ್, ಸೀತಾರಾಮ ಶೆಟ್ಟಿ ನೆತ್ತಿಲ ಬಾಳಿಕೆ, ದೇವದಾಸ್ ಶೆಟ್ಟಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬಬ್ಬುಕಟ್ಟೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಸಾರ್ವಜನಿಕಕ ಶಿಕ್ಷಣ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ(ರಿ)ಮಂಗಳೂರು ಇವರ ಸಹಯೋಗದೊಂದಿಗೆ ಬಾಲ್ಯ ವಿವಾಹ ತಡೆ ಮತ್ತುಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಆಂದೋಲನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಬ್ಬುಕಟ್ಟೆಯಲ್ಲಿ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಳ್ಳಾಲ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು,ಕಾನೂನು ತಜ್ಞೆ ಶ್ರೀಮತಿ ಗೌರಿ,ಮಂಗಳೂರು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶ್ಯಾಮಲಾ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹರ್ಷಲತಾ, ಸಮಾಜ ಸೇವಕಿ ಸುಹಾಸಿನಿ ಬಬ್ಬುಕಟ್ಟೆ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾಲಕ್ಷ್ಮಿ,ಉಪಸ್ಥಿತರಿದ್ದರು. ಸರಕಾರಿ ಪ್ರೌಢ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕಡಲ್ಕೊರೆತದಿಂದ ನಿರಂತರ ತೊಂದರೆಗೊಳಗಾಗುತ್ತಿರುವವರಿಗೆ ಸರಕಾರಿ ಜಮೀನಿನಲ್ಲಿ ವಸತಿ ಸಂಕೀರ್ಣ ಅಥವಾ ಮನೆ ನಿರ್ಮಿಸಿ ಕೊಡುವ ಯೋಜನೆ ಇದ್ದು, ಸದ್ಯ ತಾತ್ಕಾಲಿಕವಾಗಿ ಜೀವನ ನಿರ್ವಹಿಸಲು ಸ್ಥಳೀಯಾಡಳಿತದಿಂದ 4-5 ತಿಂಗಳವರೆಗೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಮಂಗಳೂರಿನ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಹೇಳಿದ್ದಾರೆ. ಮಂಗಳವಾರ ಕಡಲ್ಕೊರೆತ ಪ್ರದೇಶಗಳಾದ ಉಳ್ಳಾಲ ಹಾಗೂ ಸೋಮೇಶ್ವರ ಉಚ್ಚಿಲಕ್ಕೆ ಭೇಟಿ ನೀಡಿದ ಅವರು ಸ್ಥಳೀಯರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಭರವಸೆ ನೀಡಿದರು. ಸಮುದ್ರ ತೀರದಲ್ಲಿ ವಾಸಿಸುತ್ತಿರುವವರು ಮೀನುಗಾರಿಕೆಯನ್ನು ನಂಬಿ ಜೀವನ ನಿರ್ವಹಣೆ ನಡೆಸುತ್ತಿರುವವರು. ಅವರನ್ನು ದೂರದ ಊರಿಗೆ ವರ್ಗಾಯಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಸರ್ಕಾರಿ ಜಮೀನು ಇದ್ದಲ್ಲಿ ಅದರಲ್ಲಿ ವಸತಿ ಸಂಕೀರ್ಣ ಇಲ್ಲವೇ, ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ. ಅದುವರೆಗೆ ತಾತ್ಕಾಲಿಕ ರಕ್ಷಣೆ ನಿಟ್ಟಿನಲ್ಲಿ ಮನೆ ತೊರೆಯಲು ಮನಸ್ಸು ಇದ್ದವರು ನಗರಸಭೆ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನೀಡಿದರೆ ನಾಲ್ಕೈದು ತಿಂಗಳ ಮಟ್ಟಿಗೆ ವ್ಯವಸ್ಥೆ ಮಾಡಲಾಗುವುದು. ಮನೆಗೆ ಮರಳುವ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: 2016-2017ನೇ ಸಾಲಿನ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ಅಫ್ ಇಂಡಿಯಾ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಕೊಣಾಜೆ ರೇಂಜ್‍ಗೊಳಪಟ್ಟ ಖುವ್ವತುಲ್ ಇಸ್ಲಾಂ ಮದ್ರಸ ಫರೀದ್ ನಗರದ ಹಮೀದ್‍ರವರ ಪುತ್ರಿ ಸಾಜಿದ ಬಾನು ಪ್ರಥಮ ಹಾಗೂ ಎಚ್ ಅಬೂಬಕ್ಕರ್ ಪುತ್ರಿ ಹಸ್ನ ಫರ್ವಿನಾ ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಯಗಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ವಿಸ್ಡಂ ವೆಲ್ಪೇರ್ ಅಸೋಸಿಯೇಶನ್ ಮುಡಿಪು ಸಾಂಬಾರತೋಟ ವತಿಯಿಂದ ಶಾಲಾ ಹಾಗೂ ಮದ್ರಸ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಸಾಂಬಾರತೋಟದಲ್ಲಿ ನಡೆಯಿತು. ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಸಾಂಬಾರತೋಟದ ವಿದ್ಯಾರ್ಥಿಗಳಿಗೆ ನೂರಾನಿ ಜುಮಾ ಮಸೀದಿ ಖತೀಬರು ಪಿ.ಕೆ.ಮುಹಮ್ಮದ್ ಮದನಿ ಪುಸ್ತಕ ವಿತರಿಸಿದರು. ಬಳಿಕ ಮಾತನಾಡಿದ ಅವರು ರಂಝಾನ್ ತಿಂಗಳಲ್ಲಿ ದಾನ-ಧರ್ಮ ಮಾಡುವುದು ದೇವರು ಇಷ್ಟಪಡುವ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿಸ್ಡಂ ವೆಲ್ಪೇರ್ ಅಸೋಸಿಯೇಶನ್‍ರವರ ಕಾರ್ಯಕ್ರಮವು ಶ್ಲಾಘನೀಯವಾಗಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಬಿನು ಅಬ್ದುಲ್ಲಾ, ಕಾರ್ಯಾಧ್ಯಕ್ಷರು ಆಸ್ಟಿನ್, ನೂರಾನಿ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಮ್, ಪ್ರಧಾನ ಕಾರ್ಯದರ್ಶಿ ಎಸ್.ಇ.ಮಹಮ್ಮದ್, ಮಾಜಿ ಉಪಾಧ್ಯಕ್ಷರು ಮೊೈದಿನ್ ಕುಂಞ, ಖದ್ಮತುಲ್ ಇಸ್ಲಾಮ್ ಅಸೋಸಿಯೇಶನ್ ಅಧ್ಯಕ್ಷ ಎಚ್.ಎಮ್.ಶಾಹುಲ್ ಹಮೀದ್,ಉದ್ಯಮಿ ಅಬ್ದುಲ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬೂಬಕರ್ ಕೊಡಕ್ಕಲ್, ಎ.ನಾಸೀರ್ ಅರಫಾ ಸಾಂಬಾರತೋಟ, ಸಲಾಮ್ ಸಾಂಬಾರತೋಟ, ಶಿಯಾಬ್ ಸಂಬಾರತೋಟ, ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಸಾಂಬಾರತೋಟ ಅಧ್ಯಾಪಕ ಶ್ರೀ ನೀಲಯ್ಯ,…

Read More