Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಪೂಜೆ ಸಲ್ಲಿಸಿದರು. ಈ ವೇಳೆ ವಿವಿಧ ಸಂಘ ಮಂಡಳಿಗಳಿಂದ ಏಕಾಹ ಭಜನಾ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನಡೆಯಿತು. ಶಿವರಾತ್ರಿ ದಿನದಂದೇ ಪ್ರದೋಷ ಬಂದಿರುವುದು ವಿಶೇಷ. ದೇವರಿಗೆ ಅಭಿಷೇಕ, ಹೋಮ, ಅಲಂಕಾರ ಹಾಗೂ ರಂಗಪೂಜೆ ನಡೆಯಲಿದೆ. ರಾತ್ರಿ ಹೊತ್ತಿನಲ್ಲಿಯೂ ಭಕ್ತರ ದೇವರ ದರ್ಶನ ಪಡೆಯಲು ಅವಕಾಶವಿದ್ದು, ಈ ನಿಟ್ಟಿನಲ್ಲಿ ದೇವಸ್ಥಾನದ ಬಾಗಿಲು ಹಾಕಲಾಗುವುದಿಲ್ಲ ಎಂದು ಸೋಮೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಹೇಳಿದರು.

Read More

UN NETWORKS ಉಳ್ಳಾಲ: ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿ ಹಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೊಗವೀರಪಟ್ನ ಬಳಿಯ ನಿವಾಸಿ ರಜನೀಶ್ (32) ಎಂಬಾತನನ್ನು ಬಂಧಿಸಲಾಗಿದೆ. 2017ರ, ಮಾ.26 ರಂದು ರಾತ್ರಿ 10 ಕ್ಕೆ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಮುನೀರ್ ಎಂಬವರಿಗೆ ಸೇರಿದ ಸಮೋಸಾ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬರುತ್ತಿದ್ದ ಉಳ್ಳಾಲ ನಿವಾಸಿ ನೌಷಾದ್ ಹುಸೈನ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ತಡೆದು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಘಟನೆ ನಂತರ ತಲಮರೆಸಿಕೊಂಡಿದ್ದ ಆರೋಪಿಗೆ ಪೊಲೀಸರು ಬಲೆ ಬೀಸಿದ್ದರಾದರೂ ಪತ್ತೆಯಾಗಿರಲಿಲ್ಲ. ಸೋಮವಾರ ಖಚಿತ ಮಾಹಿತಿ ಮೇರೆಗೆ ಉಳ್ಳಾಲದಿಂದ ವಶಕ್ಕೆ ಪಡೆದುಕೊಂಡು ಬಳಿಕ ಬಂಧಿಸಿದ್ದಾರೆ. ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳದ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

Read More

UN NETWORKS ಬಜಪೆ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ಇದರ 2018-19 ಸಾಲಿನ ವಾರ್ಷಿಕ ಮಹಾ ಸಭೆಯು ಸೋಮವಾರ ಬಜ್ಪೆ ದ‌ಅ್‌ವಾ ಸೆಂಟರ್ ಕಚೇರಿಯಲ್ಲಿ ನಡೆಯಿತು. ಸಯ್ಯಿದ್ ನಿಝಾಮುದ್ದೀನ್ ಬಾಫಖಿ ತಂಙಳ್ ದುಆಶಿರ್ವಚನ ಮಾಡಿದರು. ಸೆಕ್ಟರ್ ಅಧ್ಯಕ್ಷ ಬಿ.ಎ ಶಾಕಿರ್ ಅಹ್ಮದ್ ಎಮ್ಮೆಸ್ಸಿ ಅಧ್ಯಕ್ಷತೆ ವಹಿಸಿದ್ದರು. ಸೆಕ್ಟರ್ ಉಸ್ತುವಾರಿ ಶರೀಫ್ ವರಕೋಡಿ ಉದ್ಘಾಟಿಸಿದರು. ಬಜ್ಪೆ ಜುಮಾ ಮಸೀದಿ ಖತೀಬರಾದ ರಝಾಖ್ ಮದನಿ ಮತ್ತು ಅಸಾಸ್ ಮಲ್ಲೂರು ಅಧ್ಯಕ್ಷ ಎಂಪಿಎಂ ಅಶ್ರಫ್ ಸ‌ಅದಿ ತರಗತಿ ನಡೆಸಿಕೊಟ್ಟರು. ಇಶಾರ ಪಾಕ್ಷಿಕ ಸಂಪಾದಕರಾದ ಅಬ್ದುಲ್ ಹಮೀದ್ ಬಜ್ಪೆ ದಿಕ್ಸೂಚಿ ಭಾಷಣ ಮಾಡಿದರು. ಸೆಕ್ಟರ್ ಕಾರ್ಯದರ್ಶಿ ಸಿದ್ದೀಖ್ ಬಜ್ಪೆ ವರದಿ ವಾಚಿಸಿದರು. ಕೋಶಾಧಿಕಾರಿ ರಮೀಝ್ ತಾರಿಕಂಬಳ ಲೆಕ್ಕಪತ್ರ ಮಂಡಿಸಿದರು. ನಂತರ ಡಿವಿಶನ್ ವೀಕ್ಷಕ ಉವೈಸ್ ಮಾಸ್ಟರ್ ಉದ್ದಬೆಟ್ಟು ರವರ ನೇತೃತ್ವದಲ್ಲಿ ನೂತನ ಬಜ್ಪೆ ಸೆಕ್ಟರ್ ಎಸ್ಸೆಸ್ಸೆಫ್ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಿ.ಎ ಶಾಕಿರ್ ಅಹ್ಮದ್ ಎಮ್ಮೆಸ್ಸಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎ…

Read More

UN NETWORKS ಉಳ್ಳಾಲ: ಸಮುದಾಯ ಸಮೃದ್ಧಿಯಾಗಬೇಕು. ಶೈಕ್ಷಣಿಕವಾಗಿ ಬೆಳೆಯಬೇಕು, ಭಾರತ `ಭಾರತವಾಗಿ ಮುಂದುವರಿಯಬೇಕು ಎಂಬ ಸ್ವಾತಂತ್ರ್ಯ ನಂತರದ ಸವಾಲನ್ನು ಸ್ವೀಕರಿಸಿದ ಉಳ್ಳಾಲ ಮೊಗವೀರ ಸಮುದಾಯ ಸಾಧನೆ ನಿಜಕ್ಕೂ ಅದ್ಭುತವಾದುದನ್ನೇ ಸಾಧಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್ ಹೇಳಿದರು. ಉಳ್ಳಾಲ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವಜ್ರಮಹೋತ್ಸವ ಪ್ರಯುಕ್ತ ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಹಾಗೂ ಬ್ರದರ್ಸ್ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ಬೀಚ್ ಉತ್ಸವ -2018 ಪ್ರಯುಕ್ತ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾಧವ ಮಂಗಲಶ್ರೀ ಗೌರವ ಪ್ರಶಸ್ತಿ ಪ್ರದಾನ ಮಾಡಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಂತಕ್ಕಾಗಿ ಸ್ವಲ್ಪ, ಸಮಾಜಕ್ಕಾಗಿ ಸರ್ವಸ್ವ ಎಂಬ ಮಾತಿನಂತೆ ನಡೆದ ಮೊಗವೀರ ಸಮಾಜ 47ರ ಸಮಯದಲ್ಲಿ ಇದ್ದಂತಹ ಸವಾಲುಗಳು ಸಮರ್ಥವಾಗಿ ಎದುರಿಸಿ ಜೀವನ ಸಾಗಿಸಿದ್ದರು. ಈಗಿನ ಸವಾಲುಗಳು ಬಹಳಷ್ಟಿದ್ದು ಅದನ್ನು ಅರಿತುಕೊಂಡು ತಮ್ಮ ಶ್ರಮದಾಯಕ ಕುಲಕಸುಬನ್ನು ಮಕ್ಕಳು ಕೂಡಾ ನೆಚ್ಚಿಕೊಳ್ಳುವುದು ಬೇಡ, ಅವರಿಗೆ ಒಂದು ಸುಂದರ ಬದುಕು…

Read More

UN NETWORKS ಕೊಣಾಜೆ: ಭಜನೆಯು ನಿರಂತರವಾಗಿ ನಡೆಯುತ್ತಿದ್ದರೆ ಅಲ್ಲಿ ವಿಭಜನೆ ಖಂಡಿತಾ ಸಾಧ್ಯವಿಲ್ಲ. ಭಜನೆ ಹಾಗೂ ಧಾರ್ಮಿಕತೆಯು ಸಮಾಜದಲ್ಲಿ ಎಲ್ಲರನ್ನೂ ಒಟ್ಟುಗೂಡಿಸುವುದರೊಂದಿಗೆ ಸಾಮರಸ್ಯತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಅವರು ಹೇಳಿದರು. ಅವರು ಪಟ್ಟೋರಿಯಲ್ಲಿ ನಾಗಬ್ರಹ್ಮ ಭಜನಾ ಮಂಡಳಿ ಹಾಗೂ ಅಖಂಡ ಭಜನಾ ಸಪ್ತಾಹ ಸಮಿತಿ ಆಶ್ರಯದಲ್ಲಿ ನಡೆದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಶುಕ್ರವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇಂದಿನ ಆಧುನಿಕ ಸಮಾಜದಲ್ಲಿ ಯುವ ಸಮುದಾಯ ಭಜನೆಯಂತಹ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಯತ್ನ ಮಾಡಿದರೆ ಆರೋಗ್ಯಪೂರ್ಣ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಪಟ್ಟೋರಿಯ ನೆಲದಲ್ಲಿ ಕಳೆದ ಒಂದು ವಾರದಿಂದ ನಡೆಯುವ ಅಖಂಡ ಭಜನಾ ಸಪ್ತಾಹವು ಈ ನೆಲಕ್ಕೆ ಧಾರ್ಮಿಕ ಶಕ್ತಿಯನ್ನು ಒದಗಿಸಿಕೊಟ್ಟಿದ್ದು ಇಂತಹ ಮಾದರಿ ಕಾರ್ಯಗಳು ನಿರಂತರವಾಗಿ ಎಲ್ಲೆಡೆಯೂ ನಡೆಯುವಂತಾಗಬೇಕು ಎಂದು ಹೇಳಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಳ್ಳಾಲ ಕಾಂಗ್ರೆಸ್‍ನ ಅಧ್ಯಕ್ಷರಾದ ಸಂತೋಷ್ ಕುಮಾರ್…

Read More

UN NETWORKS ಸುಳ್ಯ: ಭವ್ಯ ಭಾರತ ದೇಶವು ವಿಶಿಷ್ಟ ಸಂಸ್ಕೃತಿ ಮತ್ತು ಸಂಪ್ರದಾಯದ ಮಾದರಿ ದೇಶವಾಗಿದ್ದು ಎಲ್ಲಾ ವರ್ಗದ ಜನರ ನಡುವಿನ ಸೌಹಾರ್ದತೆ ಮತ್ತು ಸಹಬಾಳ್ವೆ ಬಾರತದ ವೈಶಿಷ್ಟ್ಯತೆಯಾಗಿದೆ. ಸಾಹಿತ್ಯದ ಮೂಲಕ ‌ಸಾಮರಸ್ಯ ಸಾರುವ ಮಹತ್ಕಾರ್ಯ ನಿರಂತರವಾಗಿ ನಡೆದರೆ ಭಾರತ ನಿತ್ಯ ಶಾಂತಿಯ ನೆಲೆವೀಡಾಗಲಿದೆ ಎಂದು ಹವ್ಯಾಸಿ ಪತ್ರಕರ್ತ, ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಅಧ್ಯಕ್ಷ ಕೆ.ಎ.ಅಬ್ದುಲ್ ಅಝೀಝ್ ಪುಣಚ ಹೇಳಿದ್ದಾರೆ. ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ “ಸಾಮರಸ್ಯ ಸಾಹಿತ್ಯ ಸಂಭ್ರಮ”ದಲ್ಲಿ “ಸಾಹಿತ್ಯ ರತ್ನ ” ಪ್ರಶಸ್ತಿ ಸ್ವೀಕರಿಸಿ ‌ ಅವರು ಮಾತನಾಡುತ್ತಿದ್ದರು. ಅಜ್ಜಾವರ ಚೈತನ್ಯ ಸೇವಾಶ್ರಮ ಸಂಚಾಲಕ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಯವರು ಮಾತನಾಡಿ”ಸಾಹಿತ್ಯ ಮಾನವರ ನಡುವೆ ಸೇತುವೆ ಕಟ್ಟುವ ಕೆಲಸವನ್ನು ಮಾಡಬೇಕು.ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಅದು ಸಮಾಜದಲ್ಲಿ ಅಮೂಲಾಗ್ರ ಪರಿವರ್ತನೆಗೆ ಕಾರಣವಾಗುತ್ತದೆ ಎಂದರು. ಸುಳ್ಯ ಚರ್ಚ್ ಧರ್ಮಗುರು ಫಾ.ವಿನ್ಸೆಂಟ್ ಡಿಸೋಜ ಮಾತನಾಡಿ ” ಸ್ನೇಹ, ಸಹಬಾಳ್ವೆ ಪ್ರತಿಯೊಬ್ಬ ಮಾನವರ ಕರ್ತವ್ಯ ವಾಗಿದ್ದು ಸಹಜೀವಿಗಳೊಂದಿಗೆ…

Read More

UN NETWORKS ಉಳ್ಳಾಲ: ಅಬ್ಬಕ್ಕ ಉತ್ಸವವನ್ನು ಬೀಚ್ ಉತ್ಸವವಾಗಿ ಸಮುದ್ರ ತೀರದಲ್ಲಿ ಆಚರಿಸುವ ಯೋಜನೆಯನ್ನು ಮುಂದಿನ ವರ್ಷ ನಡೆಸಲು ರೂಪುರೇಷೆಯನ್ನು ತಯಾರಿಸಲಾಗುವುದು. ಸರ್ವಧರ್ಮದ ಸಮನ್ವಯತೆಕ್ಕೆ ಪೂರಕವಾದಂತಹ ಮೂರು ದಿನಗಳ ಅಬ್ಬಕ್ಕ ಉತ್ಸವ ಮತ್ತು ಬೀಚ್ ಉತ್ಸವವನ್ನು ಆಚರಿಸುವ ಮೂಲಕ ಉಳ್ಳಾಲ ಉತ್ಸವವಾಗಿ ಪರಿವರ್ತನೆ ನಡೆಸಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಮೊಗವೀರ ಹಿರಿಯ ಪ್ರಾಥಮಿಕ ಶಾಲಾ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಹಾಗೂ ಬ್ರದರ್ಸ್ ಯುವಕ ಮಂಡಲ ಇದರ ವಜ್ರಮಹೋತ್ಸವದ ಆಂಗವಾಗಿ ಉಳ್ಳಾಲ ಮೊಗವೀರ ಗ್ರಾಮ ಸಭೆಗೆ ಒಂದೂವರೆ ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಮೊಗವೀರ ಕುಲಗುರು ಪೂಜನೀಯ `ಮಾಧವ ಮಂಗಲ ಗುರೂಜಿ ಸಮುದಾಯ ಭವನ ಲೋಕಾರ್ಪಣೆ, ಶ್ರೀ ವ್ಯಾಘ್ರ ಚಾಮುಂಡೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕರಿಗೆ ನೂತನ ವಸತಿಗೃಹ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿವರ್ಷವೂ ಅಬ್ಬಕ್ಕ ಉತ್ಸವಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಮಾತ್ರ ತಲೆಕೆಡಿಸಿಕೊಳ್ಳುತ್ತಿದ್ದೆ. ಆದರೆ ಉತ್ಸವ ನಡೆಯುವ…

Read More

UN NETWORKS ತೊಕ್ಕೊಟ್ಟು : ತೊಕ್ಕೊಟ್ಟು ಭಟ್ನಗರದ ಜೈ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್‍ನ ನೂತನ ಅಧ್ಯಕ್ಷರಾಗಿ ದೇವದಾಸ್ ಶ್ರೀಯಾನ್ ಆಯ್ಕೆಯಾಗಿದ್ದಾರೆ. ವ್ಯಾಯಾಮ ಶಾಲೆಯಲ್ಲಿ ನಡೆದ 68ನೇ ವಾರ್ಷಿಕ ಮಹಾಸಭೆಯಲ್ಲಿ ಶಾಲೆಯ ಅಧ್ಯಕ್ಷ ವಿಶ್ವನಾಥ ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಶಾಲೆಯ ಉಪಾಧ್ಯಕ್ಷರಾಗಿ ಪುರುಷೋತ್ತಮ ಗಟ್ಟಿ , ನಾಗೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಭಟ್ನಗರ, ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕಲ್ಲಾಪು, ದಿನೇಶ್ ನಾಯಕ್ ತೊಕ್ಕೊಟ್ಟು, ಕೋಶಾಧಿಕಾರಿಯಾಗಿ ಭಾಸ್ಕರ ತೊಕ್ಕೊಟ್ಟು, ಲೆಕ್ಕಪರಿಶೋಧಕರಾಗಿ ರಾಮಚಂದ್ರ ತೊಕ್ಕೊಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ದೀಕ್ಷಿತ್ ಸೋಮೇಶ್ವರ, ಧರ್ಮರಾಜ್ ತೊಕ್ಕೊಟ್ಟು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಶ್ವನಾಥ್ ಮೆಂಡನ್, ರಮೇಶ್ ಮೆಂಡನ್, ಸುರೇಂದ್ರ ಶೆಟ್ಟಿ ಮಂಚಿಲಗುತ್ತು, ಶರತ್ ತೊಕ್ಕೊಟ್ಟು ಪ್ರವೀಣ್ ಕೊಲ್ಯ, ನಾಗೇಶ್ ಕುಂಪಲ, ಸುನಿಲ್ ಕುಮಾರ್ ತೊಕ್ಕೊಟ್ಟು, ಶ್ರೀಕಾಂತ್‍ಗಟ್ಟಿ ಉಳ್ಳಾಲಬೈಲು, ಪ್ರಸಾದ್ ಧರ್ಮನಗರ, ದೀಪಕ್ ಮಾಡೂರು, ಕೃಷ್ಣ್ಪಪ್ಪ ಮೆಂಡನ್, ಚಂದ್ರ ಮೆಂಡನ್ ಶಿವರಾಮ್ ಟಿ.,…

Read More

UN NETWORKS ಮಂಗಳೂರು: ನಗರದ ಪೊಲೀಸರು ಕುಖ್ಯಾತ ರೌಡಿ, ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳ್ಳಾಲ ನಿವಾಸಿ ಸಮೀರ್ (26) ಬಂಧಿತ. ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಅಡಗುತಾಣದಿಂದ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜನವರಿ 13 ರಂದು ಬೆಳಿಗ್ಗೆ ಇಲ್ಯಾಸ್ ಮೇಲೆ ನಡೆದ ದಾಳಿಯಲ್ಲಿ ಆರೋಪಿ ಸಮೀರ್ ನೇರವಾಗಿ ಭಾಗಿಯಾಗಿದ್ದ ಎನ್ನಲಾಗಿದೆ. ಇದೀಗ ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಮಂಗಳೂರಿಗೆ ಕರೆ ತರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ವಿವರ: ಮಂಗಳೂರಿನ ಜಪ್ಪು ಕುಡ್ಪಾಡಿ ಎಂಬಲ್ಲಿರುವ ಮಸೀದಿಯ ಎದುರುಗಡೆಯ ಫ್ಲಾಟ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಇಲ್ಯಾಸ್ ನನ್ನು ಜನವರಿ 13 ರಂದು ಮುಂಜಾನೆ ದುಷ್ಕರ್ಮಿಗಳಿಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. ಮನೆ ಬಾಗಿಲನ್ನು ಒಡೆದು ಒಳ ನುಗ್ಗಿ ಮಲಗಿದ್ದ ಇಲ್ಯಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಲ್ಯಾಸ್ ನನ್ನು ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದ.…

Read More