Author: UllalaVani

Kannada News From Coastal Karnataka

UN NETWORKS ಕುಂಪಲ: ಶ್ರೀ ಕೃಷ್ಣ ಮುಖ್ಯಪ್ರಾಣ ದೇವಸ್ಥಾನ,ಮಾರುತಿಮಠ ಗುರುನಗರ ಕುಂಪಲ.ಇದರ ವಾರ್ಷಿಕ ಜಾತ್ರಾ ಮಹೋತ್ಸವ.ಮಾರ್ಚ್ 31 ರಿಂದ ಏಪ್ರಿಲ್ 3ರ ತನಕ ನಡೆಯಲಿದೆ.ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಶ್ರೀ ಬಾಲಯೋಗಿ ಅಮೃತಾನಂದ ಸ್ವಾಮೀಜಿ ಬಿಡುಗಡೆ ಮಾಡಿದರು. ಕೇಶವ ಶೆಟ್ಟಿ,ಸುಧಾಕರ್ ಆಳ್ವ,ರಾಜೇಶ್ ಪೂಜಾರಿ,ಸುರೇಶ್ ಗಟ್ಟಿ,ಸಂಜಯ್ ಪೂಜಾರಿ,ಚಂದ್ರಶೇಖರ್ ನಾಗ ಜ್ಯೋತಿಷಿ,ನಿತಿನ್ ಕುಂಪಲ ಉಪಸ್ಥಿತರಿದ್ದರು.

Read More

UN NETWORKS ತೊಕ್ಕೊಟ್ಟು: ತೊಕ್ಕೊಟ್ಟು ಪರಿಸರದಲ್ಲಿ ಸಾರ್ವಜನಿಕ ಸಂಘಸಂಸ್ಥೆಗಳಿಗೆ ಕಬಡ್ಡಿ ಮತ್ತು, ಕಲಾ ಕಾರ್ಯಕ್ರಮಗಳಿಗೆ, ಸರ್ವಧರ್ಮದ ಉತ್ಸವಗಳಿಗೆ ಇರುವ ಏಕಮೇವ ಮೈದಾನ ತೊಕ್ಕೊಟ್ಟು ಅಂಬೇಡ್ಕರ್ ಮೈದಾನ ಮಾತ್ರ. ಈ ಅಂಬೇಡ್ಕರ್ ರಂಗಮಂದಿರವವನ್ನು ನವೀಕರಿಸಿ ಮೈದಾನಕ್ಕೆ ಮೇಲ್ಚಾವಣಿ ಅಳವಡಿಸಿದರೆ ಇನ್ನಷ್ಟು ಕಲಾ, ಕ್ರೀಡಾ ಚಟುವಟಿಕೆ ನಡೆಸಲು ಅನುಕೂಲವಾಗುತ್ತದೆ. ಈಗಾಗಲೇ ಕಾರ್ಯಕ್ರಮ ನಡೆಸಲು ಯಾವದೇ ಸೌಲಭ್ಯಗಳಿರದ ಅಂಬೇಡ್ಕರ್ ಮೈದಾನ ಮತ್ತು ರಂಗಮಂಟಪವನ್ನು ನವೀಕರಣಗೊಳಿಸಿ ಸಾರ್ವಜನಿಕ ಸಂಘ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಕೂಲತೆ ಒದಗಿಸಿಕೊಡಲು ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ನೇತೃತ್ವದಲ್ಲಿ ಉಳ್ಳಾಲ ನಗರಸಭೆಗೆ ಮನವಿ ಅರ್ಪಿಸಲಾಯಿತು. ತೊಕ್ಕೊಟ್ಟಿನ 25 ಸಂಘ ಸಂಸ್ಥೆಗಳ ಸಹಿಯುಳ್ಳ ಮನವಿಯನ್ನು ಭಗವತಿ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್ ರವರು ಪುರಸಭಾ ಅಧ್ಯಕ್ಷರಿಗೆ ಮತ್ತು ಕಾರ್ಯನಿರ್ವಹಾಣಾಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆ ಗಳ ಪರವಾಗಿ ವಿಠಲ್ ಶ್ರೀಯಾನ್, ರಾಮಚಂದ್ರ ತೊಕ್ಕೊಟ್ಟು ,ರೋಹಿತ್ ಉಳ್ಳಾಲ್, ಪ್ರವೀಣ್.ಎಸ್.ಕುಂಪಲ, ಪ್ರಕಾಶ್ ಸಿಂಪೋನಿ,ವಿಜಯ ಪಂಡಿತಹೌಸ್,ಸೂರಜ್ ತೊಕ್ಕೊಟ್ಟು , ಪುರುಷೋತ್ತಮ ಕಲ್ಲಾಪು, ಪ್ರವೀಣ್ ಕೊಲ್ಯ ,ರೋಹಿ,…

Read More

UN NETWORKS ನವದೆಹಲಿ: ಹನಿ ಟ್ರ್ಯಾಪ್ ಮೂಲಕ ಭಾರತೀಯ ಸೇನೆಯ ಅಧಿಕಾರಿಗಳನ್ನು ಸೆಳೆಯುವ ಪ್ರಯತ್ನ ಪಾಕಿಸ್ತಾನದ ಗೂಢಚಾರಿಕಾ ಸಂಸ್ಥೆ(ಐಎಸ್ ಐ) ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ವಾಯು ಸೇನೆಯ ಅಧಿಕಾರಿಯೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ. ರಾಜಧಾನಿ ದೆಹಲಿಯಲ್ಲಿ ವಾಯುಸೇನೆಯ 51 ವರ್ಷದ ಗ್ರೂಪ್ ಕ್ಯಾಪ್ಟನ್ ಅರುಣ್ ಮರ್ವಾಹ್ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಅಪರಿಚಿತ ಮಹಿಳೆಯ ಜತೆ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದರು.ಈ ಅಪರಿಚಿತ ಮಹಿಳೆ ಐಎಸ್ ಐ ಏಜೆಂಟ್ ಎಂದು ಹೇಳಲಾಗುತ್ತಿದೆ. ಹನಿ ಟ್ರ್ಯಾಪ್ ಮೂಲಕ ಅರುಣ್ ಮರ್ವಾಹ್ ಅವರನ್ನು ಬಲೆಗೆ ಬೀಳಿಸಲು ಐಎಸ್ ಐ ಪ್ರಯತ್ನಿಸಿತ್ತು ಎಂದು ವರದಿಗಳು ಮಾಹಿತಿ ಹೊರ ಹಾಕಿವೆ. ಇವರಿಬ್ಬರ ಮಧ್ಯೆ ಕೆಲವೊಂದು ಗುಪ್ತ ಮಾಹಿತಿಗಳ ಸಹಿತ ಕೆಲವು ವೈಯಕ್ತಿಕ ಲೈಂಗಿಕ ಸಂದೇಶಗಳು ರವಾನೆಯಾಗಿವೆ ಎಂದು ಹೇಳಲಾಗುತ್ತಿದೆ.

Read More

UN NETWORKS ತೊಕ್ಕೊಟ್ಟು: ದೇಶದಲ್ಲಿ ಪ್ರಚಾರಕ್ಕಿಂತ ಹೆಚ್ಚು ಅಪಪ್ರಚಾರಗಳಿಗೆ ಹೆಚ್ಚು ಬೆಲೆ ಸಿಗುತ್ತಿವೆ. ಅಪಪ್ರಚಾರ ಮಾಡಿಯೇ ಆಡಳಿತಕ್ಕೆ ಬರುತ್ತಿರುವ ಬಿಜೆಪಿ ಕಾರ್ಯತಂತ್ರವನ್ನು ಜನತೆ ವಿಫಲಗೊಳಿಸಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್, ಹಿಂದುಳಿದವರ್ಗಗಳ ವಿಭಾಗ,ಅಲ್ಪಸಂಖ್ಯಾತ ವಿಭಾಗ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಗುರುವಾರ ಕೇಂದ್ರ ಬಿಜೆಪಿ ಸರಕಾರದ ಜನವಿರೋಧಿ ನೀತಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದಿನ ರಾಜ್ಯ ಸರಕಾರದ ಆಡಳಿತವಿದ್ದಾಗ ಶ್ರಮವಹಿಸಿ ದುಡಿದ ಜನ ಕಾಂಗ್ರೆಸ್ ಆಡಳಿತದಲ್ಲಿ ಕುಳಿತು ಊಟ ಮಾಡಲಿ ಅನ್ನುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಯಿತು. ಮೊದಲಿಗೆ ಟೀಕಿಸಿದ ಬಿಜೆಪಿಗರು ಇದೀಗ ಕೇಂದ್ರ ಸರಕಾರದ ಯೋಜೆ ಎಂದು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹಿಂದು, ಮುಸ್ಲಿಂ ದರೋಡೆ, ಕೊಲೆ ವಿಚಾರದಲ್ಲಿಯೇ ರಾಜಕೀಯ ನಡೆಸುತ್ತಿರುವ ಬಿಜೆಪಿಯ ಕೇಂದ್ರ ಸರಕಾರ ಜನರನ್ನು ಸಂಕಷ್ಟಕ್ಕೆ ದೂಡುವ…

Read More

UN NETWORKS ಕೋಟೆಕಾರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಕಳವಿಗೆ ವಿಫಲಯತ್ನ ನಡೆಸಿರುವ ಘಟನೆ ಕೋಟೆಕಾರು ಸಮೀಪ ನಡೆದಿದೆ. ಕೋಟೆಕಾರು ಅಜ್ಜಿನಡ್ಕ ಸಲಫಿ ನಗರದ ಕೆ.ಎಚ್. ಮೊಯ್ದಿನ್ ಅವರ ಮನೆಯಲ್ಲಿ ಮಂಗಳವಾರ ಕಳ್ಳತನ ನಡೆದಿದ್ದು ಐದು ಪಾಸ್‍ಪೋರ್ಟ್, ಎರಡು ಎಟಿಎಂ ಕಾರ್ಡ್ ಹಾಗೂ 2500ರೂ. ಕಳ್ಳತನಗೈದಿದ್ದಾರೆ. ಅಲ್ಲಿಂದ ಪಕ್ಕದ ಸಿ.ಎಂ. ಅಹ್ಮದ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

UN NETWORKS ಕೊಣಾಜೆ: ಹಿಂದಿನ ಕಾಲದಲ್ಲಿ ಬಡತನವಿದ್ದರೂ ಪ್ರತಿಯೊಂದು ಮನೆಯಲ್ಲಿಯೂ ಭಜನೆ, ದೇವರ ನಾಮಸ್ಮರಣೆಯಂತಹ ಧಾರ್ಮಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದ ಪರಿಣಾಮ ಕುಟುಂಬದಲ್ಲಿ ಪ್ರೀತಿ, ವಿಶ್ವಾಸ, ಪ್ರಾಮಾಣಿಕತೆ ಎಲ್ಲವೂ ಇತ್ತು. ಆದರೆ ಇಂದು ಕಾಲ ಬದಲಾಗುತ್ತಿದ್ದಂತೆ ಮನೆಗಳಲ್ಲಿ ಧಾರ್ಮಿಕತೆ, ಭಜನೆಯಂತಹ ಕಾರ್ಯಗಳು ಕಡಿಮೆಯಾಗುತ್ತಿದ್ದು ಜೊತೆಗೆ ಜನರಲ್ಲಿ ಪ್ರೀತಿ ವಿಶ್ವಾಸ ಪ್ರಾಮಾಣಿಕತೆ ಕಡಿಮೆಯಾಗುತ್ತಿದೆ ಎಂದು ಮಂಜೇಶ್ವರ ಧರ್ಮಜಾಗೃತಿ ಅಭಿಮಾನಿ ಬಳಗದ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು ಅವರು ಅಭಿಪ್ರಾಯಪಟ್ಟರು. ಅವರು ಪಟ್ಟೋರಿಯ ಶ್ರೀ ನಾಗಬ್ರಹ್ಮ ಭಜನಾ ಮಂಡಳಿ ಹಾಗೂ ಅಖಂಡ ಭಜನಾ ಸಪ್ತಾಹ ಸಮಿತಿ ವತಿಯಿಂದ ನಡೆಯುತ್ತಿರುವ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಇಂದು ನಮ್ಮಲ್ಲಿ ಕಾರು, ಬಂಗಲೆ ಎಲ್ಲವೂ ಇದ್ದರು ಕೂಡಾ ನೆಮ್ಮದಿ ಮಾತ್ರ ಮರೀಚಿಕೆಯಾಗಿದೆ. ಆದ್ದರಿಂದ ನಮ್ಮಲ್ಲಿ ಧಾರ್ಮಿಕತೆಯ ಅಂಶಗಳೆಉ ಬೆಳೆಯಬೇಕು. ಧಾರ್ಮಿಕತೆ ಬೆಳೆಯಬೇಕಾದರೆ ಭಕ್ತಿಭಾವವನ್ನು ನಾವು ಬೆಳೆಸಿಕೊಳ್ಳಬೇಕು. ಮನುಷ್ಯ ಎಷ್ಟೇ ಅನಾಚಾರ ಮಾಡಿದರೂ ಧರ್ಮ…

Read More

UN NETWORKS ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿ ಸೌಂದರ್ಯಗೊಳಿಸಲು ವಿಶೇಷ ಗಮನ ನೀಡಲಾಗಿದೆ. ಆದಾಯ ಹೆಚ್ಳ ನಿಟ್ಟಿನಲ್ಲಿ 15 ಕಡೆ ಹೋರ್ಡಿಂಗ್ಸ್ ಅಳವಡಿಕೆಗೆ ಯೋಚಿಸಲಾಗಿದ್ದು ಇದರಿಂದ 21.60 ಲಕ್ಷ ಆದಾಯ ನಿರೀಕ್ಷಿಸಲಾಗಿದೆ. ಸೌಂದರ್ಯದ ನಿಟ್ಟಿನಲ್ಲಿ ಮೂರು ಕಡೆ ಹೈಮಾಸ್ಟ್ ದೀಪ ಅಳವಡಿಕೆ, ದಾರಿದೀಪ ವಿಸ್ತರಣೆ, ಎಲ್‍ಇಡಿ, ಸೋಡಿಯಂ ಟ್ಯೂಬ್‍ಲೈಟ್ ಖರೀದಿಗಾಗಿ 75 ಲಕ್ಷ ಮೀಸಲಿರಿಸಲಾಗಿದೆ ಎಂದು ಪೌರಾಯುಕ್ತೆ ವಾಣಿ ವಿ.ಆಳ್ವ ಬಜೆಟ್ ಮಂಡಿಸಿ ವಿವರಿಸಿದ್ದಾರೆ. ನಗರಸಭೆಯ 2018-19ನೇ ಸಾಲಿನ ಬಜೆಟ್ ಮಂಡನಾ ಸಭೆ ಬುಧವಾರ ನಡೆಯಿತು,ನಗರಸಭೆಯ ಅಧ್ಯಕ್ಷ ಹುಸೈನ್ ಕುಂಞಮೋನು ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛತೆ ಬಹುಮಾನ ಘೋಷಣೆ ಸ್ವಚ್ಛ ಹಾಗೂ ಕುಡಿಯುವ ನೀರು ಸಮಸ್ಯೆ ಮುಕ್ತ ಉಳ್ಳಾಲ ನಿರ್ಮಾಣಕ್ಕೆ ಮೊದಲ ಪ್ರಾಶಸ್ತ್ಯ ನೀಡಲಾಗಿದ್ದು, ಸ್ವಚ್ಛತೆ ಕಾಪಾಡುವವರಿಗೆ ಬಹುಮಾನವನ್ನೂ ಘೋಷಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂದಡಿಯಿರಿಸಲಾಗಿದ್ದು ಬಹುಮಾನ ನೀಡುವ ವಿಶಿಷ್ಟ ಯೋಜನೆ ರೂಪಿಸಲಾಗಿದೆ. 2018ರಲ್ಲಿ ಗಾಂಧಿ ಜಯಂತಿಯಂದು ಪ್ರತೀ ವಾರ್ಡುಗಳನ್ನು ಪರಿಶಿಲೀಸಿ ಸ್ವಚ್ಛ ವಾರ್ಡ್‍ಗೆ ಪ್ರಥಮ 1ಲಕ್ಷ, ದ್ವಿತೀಯ…

Read More

UN NETWORKS ಕೊಣಾಜೆ: ಆರ್ಥಿಕವಾಗಿ ಹಿಂದುಳಿದ ಕುಟುಂಬದ ನೆರವಿಗೆ ನಿಂತ ಟ್ರಸ್ಟ್‍ನ ಕಾರ್ಯ ಜನಮೆಚ್ಚುವ ಕಾರ್ಯಕ್ರವಾಗಿದೆ, ಎಲ್ಲರ ಸಹಕಾರದಿಂದ ಸುಸಜ್ಜಿತ ಮನೆ ನಿರ್ಮಿಸಲಾಗಿದೆ ಎಂದು ಇಂಟರನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಹೇಳಿದ್ದಾರೆ. ಅವರು ಕೊಣಾಜೆ ಸಮೀಪ ಇಂಟರನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಗ್ರಾಮದ ಯುವಕರ ಸಹಕಾರದ ಜತೆಗೆ ನಳಿನಿ ಶೆಟ್ಟಿ ಎಂಬವರಿಗೆ ನಿರ್ಮಿಸಿಕೊಡಲಾದ `ಸದಾಶಯ’ ಮನೆಯನ್ನು ಹಸ್ತಾಂತರಿಸಿ ಮಾತನಾಡಿದರು. ಉತ್ತಮ ಪರಿಸರದ ಜತೆಗೆ, ಸುಸಜ್ಜಿತ ಮನೆಯ ನಿರ್ಮಾಣವಾಗಿದೆ. ಎಲ್ಲರ ಒಗ್ಗೂಡುವಿಕೆ ಇದ್ದಲ್ಲಿ ಸಮಾಜಮುಖಿ ಕಾರ್ಯ ಯಶಸ್ವಿಯಾಗಲು ಸಾಧ್ಯ. ಟ್ರಸ್ಟ್ ಹಿಂದಿನಿಂದಲೂ ಅಶಕ್ತರ ಬಾಳಿಗೆ ಬೆಳಕಾಗುತ್ತಾ ಬಂದಿದೆ ಎಂದರು. ಪ್ರಸಾದ್ ರೈ ಕಲ್ಲಿಮಾರ್ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಾದ ನಳಿನಿ ಶೆಟ್ಟಿ ಹತ್ತು ವರ್ಷಗಳ ಹಿಂದೆ ಸಾಲ ಮಾಡಿ ಕೊಣಾಜೆ ಸಮೀಪ ಜಾಗವನ್ನು ಖರೀದಿಸಿದ್ದರು. ನಾಲ್ಕು ವರ್ಷಗಳಿಂದ ಹಾಕಿರುವ ಫೌಂಡೇಷನ್ನಿನಲ್ಲಿ ಸಣ್ಣ ಮನೆ ನಿರ್ಮಿಸಿದ್ದರು. ಆದರೆ ಅದರಲ್ಲಿ ಅವರು ಪಡುತ್ತಿದ್ದ ಸಂಕಷ್ಟವನ್ನು ಗಮನಿಸಿ ಊರಿನ  ಮಂದಿ ಸಂಘಸಂಸ್ಥೆಗಳಿಂದ…

Read More

UN NETWORKS ಕುರ್ನಾಡು: ಒಂದು ಕಾಲದಲ್ಲಿ ರಿಕ್ಷಾದವರು ಬರಲು ಒಲ್ಲದ ಪ್ರದೇಶದ ಕಾಂಕ್ರೀಟಿಕರಣ ಯುವಜನರ ಹಾಗೂ ಪಂಚಾಯಿತಿ ಸದಸ್ಯರ ಸಹಕಾರದಿಂದ ನೆರವೇರುವ ಮೂಲಕ ದಶಕಗಳ ಜನರ ಬೇಡಿಕೆ ಈಡೇರಿದೆ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ಕುರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಣೆಮಾರ್ ಪಿದಮಲೆ ಕೂಡುರಸ್ತೆಗೆ ಕಾಶಿಹಿತ್ಲು ಎಂಬಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯವರು ಶಿಲಾನ್ಯಾಸ ನೆರವೇರಿಸಿದ ಎಲ್ಲಾ ಕಾಮಗಾರಿಗಳು ಮುಗಿದಿವೆ. ಪಕ್ಷದ ಮುಖಂಡರು ಮಾತ್ರವಲ್ಲ ಪಂಚಾಯಿತಿ ಸದಸ್ಯರು ಚಾಲನೆ ನೀಡಿರುವ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣವಾಗಿವೆ. ಹಿಂದೆ ಪಕ್ಷದ ಮುಖಂಡರು ತಮ್ಮ ಭೂಮಿಯನ್ನು ಮಾರಿ ರಸ್ತೆ ನಿರ್ಮಿಸಿದ ಇತಿಹಾಸವಿದೆ. 13,14 ನೇ ಹಣಕಾಸು ಮತ್ತು ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಮಂಜೂರಾದ ರೂ. 3 ಲಕ್ಷ ಅನುದಾನದಲ್ಲಿ 69 ಮೀ ಕಾಂಕ್ರೀಟಿಕರಣ ಕಾಮಗಾರಿಯನ್ನು ಪೂರೈಸುವ ಮೂಲಕ ಊರಿಗೆ ಕಿರೀಟ ಇಟ್ಟಂತಾಗಿದೆ. ದಶಕಗಳಿಂದ ಸೇತುವೆಯಿಲ್ಲದೆ ಪ್ರದೇಶ ಕುಗ್ರಾಮದಂತಿತ್ತು. ರಿಕ್ಷಾದವರು ಬರಲು…

Read More

UN NETWORKS ಮಂಗಳೂರು: ಮಜ್ಲಿಸುನ್ನೂರು ಕಾರ್ಯಕ್ರಮದಲ್ಲಿ ಕರೆಯಲ್ಪಡುವ ಪ್ರತಿಯೊಂದು ಪ್ರವಾದಿ ವರ್ಯರ ಹೆಸರುಗಳಲ್ಲಿ ವಿಶೇಷವಾದ ಅರ್ಥವಿದೆ. ಧಾರ್ಮಿಕ ಚೌಕಟ್ಟಿನೊಳಗೆ ಇರುವ ಹಿಂದಿನಿಂದಲೇ ಆಚರಣೆಯಲ್ಲಿ ಬಂದ ಮಾಲೆ, ಮೌಲೂದು ಮುಂತಾದ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು. ಅವರು ಕುಂಡೂರು ಕೇಂದ್ರ ಜುಮ್ಮಾ ಮಸೀದಿ ಮತ್ತು ನುಸ್ರತುಲ್ ಇಸ್ಲಾಂ ಸಮಿತಿ ಇದರ ಆಶ್ರಯದಲ್ಲಿ ಮಂಗಳವಾರ ನಡೆದ ಬೃಹತ್ ಅಹ್ಲ್‍ಬೈತ್ ಸಂಗಮ ಮತ್ತು ಮಜ್ಲಿಸುನ್ನೂರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಚೌಕಟ್ಟು ಮೀರಿದ ಕಾರ್ಯಕ್ರಮಗಳು ಬೇಡ. ಪ್ರವಾದಿಯವರು ಏನನ್ನು ಕಲಿಸಿದ್ದಾರೆಯೋ ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಬರಬೇಕಾದ ಕೆಲಸ ನಮ್ಮದು ಎಂದರು. ಸಚಿವ ಖಾದರ್ ಮಾತನಾಡಿ, ಧಾರ್ಮಿಕ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳುವ ಇಂತಹ ಉತ್ತಮ ಕಾರ್ಯಕ್ರಮಗಳಿಂದ ಸೌಹಾರ್ದತೆ ಬೆಳೆಯಲು ಸಾಧ್ಯವಾಗುತ್ತದೆ. ಜನರಿಗೆ ಸಮಾಜದ ಬಗ್ಗೆ ಅರ್ಥಮಾಡಿಕೊಳ್ಳಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು. ಈ ಸಂದರ್ಭದಲ್ಲಿ ವಕ್ಪ್ ಬೋರ್ಡ್ ಜಿಲ್ಲಾಧ್ಯಕ್ಷ ಕಣಚೂರು ಮೋನು, ಉಪಾಧ್ಯಕ್ಷರಾದ ಶಾಹುಲ್ ಹಮೀದ್ ಮೆಟ್ರೋ, ನೆಕ್ಕರೆ…

Read More