UN NETWORKS ಉಳ್ಳಾಲ: ಭಾರತದಲ್ಲಿ ಹಿಂದಿನ ಕಾಲದಲ್ಲಿ ಮರದಡಿಯಲ್ಲಿ ಪಾಠ ಹೇಳಿ ಕೊಡುತ್ತಿದ್ದ ಗುರುಕುಲ ಶಿಕ್ಷಣ ವ್ಯವಸ್ಥೆಯಿಂದ ಹಂತಹಂತವಾಗಿ ಇಲ್ಲಿ ಬ್ರಿಟಿಷ್ ಶಿಕ್ಷಣ ವ್ಯವಸ್ಥೆ ಜಾರಿಗೆ ಬಂತು. ಹಾಗಿದ್ದರೂ ವೈದ್ಯಕೀಯ ಕ್ಷೇತ್ರದಲ್ಲಿ ಜ್ಞಾನ ಹಾಗೂ ಕೌಶಲ್ಯ ಅಭಿವೃದ್ಧಿಗಾಗಿ ವಿವಿಧ ಆವಿಷ್ಕಾರಗಳು ನಿತ್ಯವೂ ನಡೆಯುತ್ತಿದೆ. ಹಾಗೆಯೇ ವಿದ್ಯಾರ್ಥಿಗಳ ಬುದ್ಧಿವಂತಿಕೆ ಜ್ಞಾನ ವಿವಿಧ ಬಗೆಯ ವಿವಿಧ ಪರೀಕ್ಷೆಯಲ್ಲಿ ಉತ್ತರಿಸುವ ಮೂಲಕ ಸಾದರಗೊಳ್ಳುವುದು ಎಂದು ನಿಟ್ಟೆ (ಸ್ವಾಯುತ್ತೆ ಆಗಲಿರುವ ವಿ.ವಿ) ಯ ಸಹಕುಲಾಧಿಪತಿ ಪ್ರೊ. ಎಂ ಶಾಂತಾರಾಮ ಶೆಟ್ಟಿ ಹೇಳಿದರು. ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ನಾಸಾಕರ್ಣಕಂಠಶಾಸ್ತ್ರ ವಿಭಾಗದ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಮಂಗಳವಾರ ಜರಗಿದ ಕ್ಷೇಮ ಇಎನ್ ಟಿ ಒಎಸ್ ಸಿ ಇ ಕಾರ್ಯಗಾರ -2018 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲೆ ಹಾಗೂ ಕುತ್ತಿಗೆ ಶಸ್ತ್ರಚಿಕಿತ್ಸೆ ಉಪನ್ಯಾಸ ಹಾಗೂ ಹದಿನಾಲ್ಕನೆಯ ಒಎಸ್ ಸಿ ಇ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ರೋಗಿ ವೈದ್ಯರ ಪಾಲಿಗೆ ದೇವರು. ವೈದ್ಯರು ರೋಗಿಗಳಿಂದಲೇ…
Author: UllalaVani
UN NETWORKS ತೊಕ್ಕೊಟ್ಟು: ಬೇಡಿಕೆ, ಬೆಲೆ ಹೆಚ್ಚಿರುವ ಗೋಡಂಬಿ ಬೆಳೆ ಬೆಳೆಸುವಲ್ಲಿ ರೈತರು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದನ್ನು ಗಣನೆಗೆ ತೆಗೆದುಕೊಳ್ಳುವ ಮೂಲಕ ವಿದೇಶಗಳಿಗೆ ಕಳುಹಿಸುವ ವಿಪುಲ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬೆಳೆ ಬೆಳೆಯುವಲ್ಲಿ ಇನ್ನಷ್ಟು ಪ್ರಬಲವಾಗಬೇಕಿದೆ ಎಂದು ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ನಾರಾಯಣ ಸ್ವಾಮಿ ಹೇಳಿದರು. ಅವರು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ತೊಕ್ಕೊಟ್ಟುವಿನ ಸಂಶೋಧನಾ ಕೇಂದ್ರದ ವಠಾರದಲ್ಲಿ `ಗೇರು ಬೆಳೆ ಕ್ಷೇತ್ರೋತ್ಸವ-2018′ ನ್ನು ಉದ್ಘಾಟಿಸಿ ಮಾತನಾಡಿದರು. ವಿಭಿನ್ನ ಬೆಳೆಯಾಗಿರುವ ಗೋಡಂಬಿ ಬೆಲೆ ಎಂದಿಗೂ ಕಡಿಮೆಯಾಗಿಲ್ಲ. ಏಲಕ್ಕಿ ಬೆಲೆಯಲ್ಲಿ ವ್ಯತ್ಯಾಸಗಳಾಗಿವೆ, ಮೆಣಸಿನ ಬೆಳೆ ಸದ್ಯ ಬೀಳುತ್ತಿದೆ. ದೇಶದಿಂದ 28 ದೇಶಗಳಿಗೆ ಗೋಡಂಬಿ ರಫ್ತಾಗುತ್ತಿದೆ. ಇದರಿಂದ ವಾರ್ಷಿಕ 5,169 ಕೋಟಿ ರೂಗಳ ವರಮಾನ ಬರುತ್ತಿದೆ. ಆದರೆ 5,000 ಕೋಟಿ ರೂ.ಗಳಲ್ಲಿ ಕಚ್ಚಾ ವಸ್ತುಗಳನ್ನು ವಾಪಸ್ಸು ಪಡೆಯಲಾಗುತ್ತಿದೆ. ಇದರಿಂದ…
UN NETWORKS ಉಳ್ಳಾಲ: ಮಾದಕ ದ್ರವ್ಯಗಳ ನಿರ್ಮೂಲನೆ ಮಾಡದೇ ಇದ್ದಲ್ಲಿ ಭವಿಷ್ಯದಲ್ಲಿ ಬಹುದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದ್ದು, ಯುವಸಮುದಾಯವೇ ಹೆಚ್ಚಾಗಿ ದುಶ್ಚಟಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯ ಶಿಕ್ಷಕರಿಂದಲೇ ಆಗಬೇಕಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಸುರೇಶ್ ಟಿ.ಆರ್ ಐಪಿಎಸ್ ಹೇಳಿದ್ದಾರೆ. ಅವರು ನಿಟ್ಟೆ (ಸ್ವಾಯುತ್ತೆ ಆಗಲಿರುವ ವಿ.ವಿ) ಯ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಫಾರೆನ್ಸಿಕ್ ಮತ್ತು ಟಾಕ್ಸಿಕಾಲಜಿ ವಿಭಾಗಗಳ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಮಂಗಳವಾರ ಜರಗಿದ `ಡ್ರಗ್ ಮೇನಿಯಾ ತಡೆಯುವಲ್ಲಿ ಶಿಕ್ಷಕರ ಪಾತ್ರ ‘ ಅನ್ನುವ ವಿಚಾರದ ಕುರಿತ ಕಾರ್ಯಾಗರವನ್ನು ಉದ್ಘಾಟಿಸಿ ಮಾತನಾಡಿದರು. ನಗರಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಆತ್ಮಹತ್ಯೆ ಪ್ರಕರಣಗಳು ಇದೀಗ ಗ್ರಾಮೀಣ ಭಾಗದಲ್ಲೂ ವ್ಯಾಪಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಸ್ಯೆಯಾಗಿ ಪರಿಣಮಿಸಿದೆ. ಹಲವರು ವ್ಯಸನಗಳಿಗೆ ಒಳಗಾಗಿಯೇ ಆತ್ಮಹತ್ಯೆ ಗೈಯ್ಯುತ್ತಿದ್ದರೆ, ಇದರಲ್ಲಿ ಯುವಸಮುದಾಯದವರೇ ಹೆಚ್ಚಿದ್ದಾರೆ. ಯುವಸಮುದಾಯದ ಪಿಡುಗು ತೊಡಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರು, ಹೆತ್ತವರು ಶಿಕ್ಷಕರು ಜಂಟಿಯಾಗಿ ಕಾರ್ಯನಿರ್ವಹಿಸಿದಲ್ಲಿ ನಿರ್ಮೂಲನೆ ಸಾಧ್ಯ. ಹದಿ…
UN NETWORKS ಕೊಲ್ಯ: ಸೋಮೇಶ್ವರ ಕೊಲ್ಯ ಬಿಲ್ಲವ ಸೇವಾ ಸಮಾಜದ 40ನೇ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಪದ್ಮನಾಭ ಕೋಟ್ಯಾನ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ದ್ಯಾನ ಮಂದಿರದಲ್ಲಿ ಆಯೋಜಿಸಿದ ವಾರ್ಷಿಕ ಭಜನಾ ಮಂಗಳೋತ್ಸವ ಉತ್ತಮ ಧಾರ್ಮಿಕ ಕಾರ್ಯವಾಗಿದೆ, ಭಜನೆಗೆ ವಿಶೇಷವಾದ ಶಕ್ತಿ ಇದೆ,ಪ್ರತಿ ಮನೆಯಲ್ಲೂ ಭಜನೆ ಮಾಡಬೇಕು ಎಂದು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಶವಂತ್ ಪೂಜಾರಿ, ಕೊಲ್ಯ ಹಿರಿಯ ರಿಕ್ಷಾ ಚಾಲಕ ಮಾದವ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಮಂಗಳೂರು ಆತ್ಮ ಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೆಮಿರಾಜ್ ಅಧ್ಯಕ್ಷತೆ ವಹಿಸಿದರು,ಮೈಸೂರು ಉದ್ಯಮಿ ಗೋಪಾಲ್ ಕನೀರ್ ತೋಟ, ರಾಷ್ಟ್ರೀಯ ಕರಾಟೆಪಟು ವೇಣುಗೋಪಾಲ್, ಶಿವಗಿರಿ ಯಾತ್ರೆ ಸಂಚಾಲಕ ಯತೀಶ್ ಕೊಲ್ಯ, ಗಂಗಾಧರ್ ಕುಂಪಲ, ದೇರಳೆಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ|ವಸಂತಿ.ಎ.ಬಂಗೇರ, ಮಂಗಳೂರು ಕಟ್ಟಡ ಗುತ್ತಿಗೆದಾರರಾದ ಸುರೇಶ್ ದಂಡಕೇರಿ, ಕೊಲ್ಯ…
UN NETWORKS ಉಳ್ಳಾಲ: ಒಂಟಿ ಮಹಿಳೆಯಿದ್ದ ಮನೆಯೊಳಗೆ ನುಗ್ಗಿ ಆಕೆಯನ್ನು ಬೆದರಿಸಿ ಚಿನ್ನದ ಸರ ದರೋಡೆಗೈದು ತಲಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಸುಂದರಿಭಾಗ್ ನಿವಾಸಿ ಕಳ್ಳ ರಮೀಝ್ ಯಾನೆ ಲೆಮನ್ ಟೀ ರಮೀಝ್ (26) ಬಂಧಿತ. ರೌಡಿಶೀಟರ್ ಆಗಿರುವ ಈತನ ವಿರುದ್ಧ ಹಲವು ಕಳವು ಪ್ರಕರಣಗಳಿವೆ. ಡಿ. 1 ರಂದು ಉಳ್ಳಾಲ ಠಾಣಾ ವ್ಯಾಪ್ತಿಯ ಸುಭಾಷನಗರದ ಪುಷ್ಪ ರೆಡ್ಡಿ (70) ಎಂಬವರು ಮನೆಯಲ್ಲಿ ಒಬ್ಬರೇ ಇದ್ದಾಗ ರಮೀಝ್ ಮತ್ತು ತಂಡ ಮನೆಯೊಳಗೆ ನುಗ್ಗಿ ವೃದ್ಧ ಮಹಿಳೆಯನ್ನು ಬೆದರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದರೋಡೆ ನಡೆಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಹಿಂದೆಯೇ ಬಂಧಿಸಲಾಗಿತ್ತು. ರಮೀಝ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಸುಲಿಗೆ ಮತ್ತು ಕಳವು ಪ್ರಕರಣಗಳಿವೆ. ಆರೋಪಿಗಳು ದರೋಡೆಗೈದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ…
UN NETWORKS ಮಂಗಳೂರು: ಡಿಗ್ರೀ ಕಾಲೇಜು ವಿದ್ಯಾರ್ಥಿಗಳೆಂದರೆ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸುವವರೇ ಜಾಸ್ತಿ. ಅದರ ನಡುವೆಯೇ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಅನ್ನುವ ಕಾಲೇಜಿನ ಆಜ್ಞೆಯಂತೆ ಸೋಮವಾರ ಸಂಜೆ ಅಲೋಷಿಯಸ್ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ಪಿವಿಎಸ್, ಜ್ಯೋತಿ ವೃತ್ತಗಳಲ್ಲಿ ಟ್ರಾಫಿಕ್ ಪೊಲೀಸರ ಜತೆಗೂಡಿ ವಾಹನಗಳನ್ನು ನಿಯಂತ್ರಿಸಿದರು. ಪಿವಿಎಸ್ ವೃತ್ತದಲ್ಲಿ ಆರು ಮಂದಿ ವಿದ್ಯಾರ್ಥಿಗಳು ಟ್ರಾಫಿಕ್ ಪೊಲೀಸರಾದ ಸಂಪತ್ ಅವರ ನಿರ್ದೇಶನದಂತೆ ವಾಹನಗಳನ್ನು ನಿಯಂತ್ರಿಸಿದರು. ಸಂಜೆ ಹೊತ್ತಿನಲ್ಲಿ ವಾಹನಗಳ ಸಾಲು ಅತಿಯಾಗಿರುವ ಸಮಯದಲ್ಲೇ ವಿದ್ಯಾರ್ಥಿಗಳು ಮೂರು ಭಾಗಗಳಲ್ಲಿ ನಿಂತು , ವಾಹನ ಸವಾರರಿಗೆ ಸೂಚನೆ ನೀಡುವುದರ ಜತೆಗೆ ಹೆಲ್ಮೆಟ್ ಧರಿಸದ ಮಂದಿಗೆ ಬುದ್ಧಿಮಾತನ್ನು ಹೇಳಿದರು. ಹೆಚ್ಚಾಗಿ ದ್ವಿಚಕ್ರ ವಾಹನ ಚಲಾಯಿಸುವ ವಿದ್ಯಾರ್ಥಿಗಳು ಟ್ರಾಫಿಕ್ ನಿಯಮಗಳನ್ನೇ ಪಾಲಿಸದೆ, ನಗರವ್ಯಾಪ್ತಿಯಲ್ಲಿ ಎರ್ರಾಬಿರ್ರಿಯಾಗಿ ಸುತ್ತಾಡುತ್ತಿರುತ್ತಾರೆ. ಅಲ್ಲದೆ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡವರಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಆದರೆ ಕಾಲೇಜಿನ ಇಂತಹ ಶಿಕ್ಷಣ ವಿದ್ಯಾರ್ಥಿಗಳನ್ನು ತಮ್ಮನ್ನು ತಾವೇ ತಿದ್ದುವಂತೆ ಮಾಡುತ್ತದೆ. ಇದರ ಜತೆಗೆ ಸಾಮಾಜಿಕ ಜಾಗೃತಿಯೂ…
UN NETWORKS ಮಂಗಳೂರು : ನೆಹರುಮೈದಾನದಲ್ಲಿ ನಡೆದ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ (ಸಿಪಿಎಲ್ -2018 ಕ್ಕೆ ಕರಾವಳಿ ಸಮೂಹ ಕಾಲೇಜುಗಳ ಅಧ್ಯಕ್ಷ ಗಣೇಶ್ ರಾವ್ ಚಾಲನೆ ನೀಡಿದರು. ಕೋಸ್ಟಲ್ವುಡ್ ಕಲಾವಿದರು ಮತ್ತು ತಂತ್ರಜ್ಞರ ಅಸೋಸಿಯೇಷನ್ ( ಸಿಎಟಿಸಿಎ) ನೇತೃತ್ವದಲ್ಲಿ ಪಂದ್ಯಾಟ ಆಯೋಜಿಸಲಾಗಿತ್ತು. ಮೂರು ದಿನಗಳ ಟೂರ್ನಮೆಂಟಿನಲ್ಲಿ ಕಲಾವಿದರು, ತಂತ್ರಜ್ಞರು ಹಾಗೂ ಮಾಧ್ಯಮದವರು ಪಾಲ್ಗೊಳ್ಳುತ್ತಿರುವುದು ಬಲು ಅಪರೂಪದ ಸನ್ನಿವೇಶ. ಕೋಸ್ಟಲ್ ವುಡ್ ಯುವಕಲಾವಿದರು ಇನ್ನಷ್ಟು ಬೆಳೆದು ಸ್ಯಾಂಡಲ್ ವುಡ್, ಬಾಲಿವುಡ್ ನಲ್ಲಿ ಹೆಸರು ಪಡೆಯುವಂತಾಗಬೇಕು ಎಂದು ಹಾರೈಸಿದರು. ಈ ಸಂದರ್ಭ ನಮ್ಮ ಟಿವಿ ಮುಖ್ಯಸ್ಥ ಶಿವಶರಣ್ ಶೆಟ್ಟಿ, ಮಿಸಸ್ ಇಂಡಿಯಾ -2017 ತೃಪ್ತಿ ರಾವ್, ರಾಜ್ಯಪ್ರಶಸ್ತಿ ಪುರಸ್ಕೃತ ನಟ ನವೀನ್ ಡಿ ಪಡೀಲ್ ಹಾಗೂ ಜಯಕಿರಣ ಪತ್ರಿಕೆ ಮಾಲೀಕರು ಹಾಗೂ ತುಳು ಚಿತ್ರ ನಿರ್ಮಾಪಕ, ನಿರ್ದೇಶಕರಾಗಿರುವ ಪ್ರಕಾಶ್ ಪಾಂಡೇಶ್ವರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೋಸ್ಟಲ್ ವುಡ್ ನ ತುಳುವೆರೆ ಸ್ಟಾರ್ಸ್, ಕುಡ್ಲ ರಾಕ್ ಸ್ಟಾರ್ಸ್, ಕರಾವಳಿ ಕಿಂಗ್ಸ್, ಕುಡ್ಲ ಲಿಜೆಂಡ್ಸ್, ಕೋಸ್ಟಲ್…
UN NETWORKS ಉಳ್ಳಾಲ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಇವರನ್ನು ಉಳ್ಳಾಲದ ಯುನೈಟೆಡ್ ಸೋಷಿಯಲ್ ಮೂವ್ಮೆಂಟ್ ಟ್ರಸ್ಟ್ ಇವರ ವತಿಯಿಂದ ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸೋಮವಾರ ಸನ್ಮಾನಿಸಲಾಯಿತು. ಈ ಸಂದರ್ಭ ಟ್ರಸ್ಟ್ ಅಧ್ಯಕ್ಷರಾದ ಅಹಮ್ಮದ್ ಬಾವಾ ಕೊಟ್ಟಾರ, ಉಪಾಧ್ಯಕ್ಷರುಗಳಾದ ಅಬ್ದುಲ್ಲಾ ಬಸ್ತಿಪಡ್ಪು, ಹನೀಫ್ ಸೋಲಾರ್, ಖಜಾಂಚಿ ನೌಷಾದ್ ಅಬೂಬಕರ್ , ಕಾರ್ಯದರ್ಶಿ ಯು.ಯನ್.ಇಬ್ರಾಹಿಂ ಹಾಗೂ ಟ್ರಸ್ಟೀ ಯು.ಡಿ.ಅಝೀಝ್ ಉಪಸ್ಥಿತರಿದ್ದರು.
UN NETWORKS ಕೆ.ಸಿ.ರೋಡು: ಮಾನವೀಯ ಮೌಲ್ಯಗಳು, ಮನುಷ್ಯತ್ವ ಮಾಯವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಕ್ತದಾನಗಳಂತಹ ಶಿಬಿರಗಳು ನಿರಂತರ ನಡೆಸುವ ಮುಖಾಂತರ ಮುಂದಿನ ಪೀಳಿಗೆಗೆ ಮಾನವೀಯ ಮೌಲ್ಯಗಳನ್ನು ಸಾರಬಹುದು ಎಂದು ಕೆ.ಸಿ.ರೋಡು ಎಸ್ವೈಎಸ್ ಅಧ್ಯಕ್ಷ ಎನ್.ಎಸ್.ಉಮರಬ್ಬ ಮಾಸ್ಟರ್ ಅಭಿಪ್ರಾಯಪಟ್ಟರು. ಕೆ.ಸಿ.ರೋಡು ಕಾಟುಂಗೆರೆಗುಡ್ಡೆ ಡೈಮಂಡ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಇದರ ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯ ಸಹಕಾರದಲ್ಲಿ ಭಾನುವಾರ ಕೆ.ಸಿ.ರೋಡು ಜಂಕ್ಷನ್ನಲ್ಲಿ ನಡೆದ ಮೂರನೇ ವರ್ಷದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಕೈಕಾಲು ಗಟ್ಟಿ ಇರುವ ಸಂದರ್ಭ ನೆರೆಯವರು, ಪರಿಸರದವರ ಕಷ್ಟದಲ್ಲೂ ಭಾಗಿಯಾದಾಗ ಮುಂದಿನ ದಿನಗಳಲ್ಲಿ ನಮ್ಮ ಕಷ್ಟದಲ್ಲಿ ಇತರರು ಭಾಗಿಯಾಗುತ್ತಾರೆ. ಇಂದು ಪಾಶ್ಚಿಮಾತ್ಯ ಸಂಸ್ಕøತಿಯ ಅನುಕರಣೆಯಲ್ಲಿ ನಾವಿದ್ದು, ಅಪಘಾತ ನಡೆದಾಗ ಗಾಯಾಳುಗಳನ್ನು ರಕ್ಷಿಸುವ ಬದಲು ಫೊಟೋ ತೆಗೆದು ವಾಟ್ಸಾಪ್ನಲ್ಲಿ ಹಾಕುವಲ್ಲಿ ತಲ್ಲೀನರಾಗುತ್ತಿರುವುದು ದುರಂತ ಎಂದರು. ಕೋಟೆಕಾರ್ ಪಟ್ಟಣ ಪಂಚಾಯಿತಿ ಸದಸ್ಯ ಮೊಯಿದ್ದೀನ್ ಬಾವ ಶಿಬಿರ ಉದ್ಘಾಟಿಸಿದರು. ಸಾಮಾಜಿಕ ಹೋರಾಟಗಾರ ಅಬ್ಬಾಸ್ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯ…
UN NETWORKS ಉಳ್ಳಾಲ: ವಾಕ್ ಚಾತುರ್ಯದಿಂದ ಮಂಗಳೂರು ಉಡುಪಿಯಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಪರಿಸರ ಪ್ರೇಮಿ ರೇಡಿಯೋ ಜಾಕಿ ರಶ್ಮಿ ಅವರ ಮದುವೆ ಸಮಾರಂಭದಲ್ಲೂ ಪರಿಸರದ ಕುರಿತು ಕಾಳಜಿ ವ್ಯಕ್ತಪಡಿಸಿದ್ದು, ಮದುವೆಗೆ ಬಂದ ಬಂಧುಗಳೆಲ್ಲರಿಗೂ ಉಚಿತವಾಗಿ ಗಿಡಗಳನ್ನು ಹಂಚುವ ಮೂಲಕ ಮಾದರಿಯಾಗಿದ್ದಾರೆ. ಉಳ್ಳಾಲ ಒಂಭತ್ತುಕೆರೆಯ ತಾಜ್ಮಹಲ್ ಸಭಾಂಗಣದಲ್ಲಿ ಭಾನುವಾರ ನಡೆದ ವಿವಾಹ ಸಮಾರಂಭದಲ್ಲಿ ಆರ್.ಜೆ ರಶ್ಮೀ ಯು.ಪಿ ಇವರು ಸಾಗರ್ ಅನ್ನುವ ವರನ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ತಮ್ಮ ಕರ್ತವ್ಯದಲ್ಲೂ ಹಾಗೂ ಪ್ರವೃತ್ತಿಗಳಲ್ಲಿ ಪರಿಸರ ಜಾಗೃತಿ ಕುರಿತ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವ ರಶ್ಮೀ, ಸಂಘಟನೆಗಳ ಮೂಲಕವೂ ತೊಡಗಿಸಿಕೊಂಡು ಕಾಳಜಿಯನ್ನು ತೋರ್ಪಡಿಸಿದವರು. ಮದುವೆ ಸಮಾರಂಭದಲ್ಲಿಯೂ ಬಂಧುಗಳಲ್ಲಿಯೂ ಜಾಗೃತಿ ಮೂಡಿಸುವುದರ ಜತೆಗೆ ಮದುವೆ ನೆನಪಿಗೆ ಗಿಡವನ್ನು ಎಲ್ಲರಿಗೂ ನೀಡುವ ಅನ್ನುವ ಉದ್ದೇಶವನ್ನು ಪೂರೈಸಿದ್ದಾರೆ. ಪರಿಸರ ಪ್ರೇಮಿ ಹಾಗೂ ಉಳ್ಳಾಲ ನಗರಸಭೆಯ ಪರಿಸರ ರಾಯಭಾರಿ ಮಾಧವ ಉಳ್ಳಾಲ್ ಅವರ ಸಹಕಾರದೊಂದಿಗೆ ಸಭಾಂಗಣ ಪ್ರವೇಶಿಸುವ ಮುಖದ್ವಾರದಲ್ಲೇ ಕೌಂಟರ್ ನಿರ್ಮಿಸಿ ಉಚಿತವಾಗಿ ಮದುವೆಯಲ್ಲಿ ಪಾಲ್ಗೊಂಡು ವಾಪಸ್ಸಾದವರಿಗೆ ಗಿಡಗಳನ್ನು…

