ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ವಿಶ್ವಕ್ಕೆ ಯೋಗ ಶಿಕ್ಷಣ ಭಾರತದ ಒಂದು ಅನನ್ಯ ಕೊಡುಗೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುತ್ತಿದ್ದು, ಕರ್ನಾಟಕದಲ್ಲಿ ಪತಂಜಲಿ ಯೋಗ ಶಿಕ್ಷಣ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜನ ಸಾಮಾನ್ಯರನ್ನು ತಲುಪುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಮಿಶನ್ನ ಅಧ್ಯಕ್ಷ ಸ್ವಾಮಿ ಜಿತಕಾಮನಂದ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಚೆಂಬು ಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಇದರ ಸೋಮನಾಥೇಶ್ವರ ವಲಯದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆದ ಯೋಗ ಪ್ರಶಿಕ್ಷಣ ಶಿಬಿರ `ಯೋಗ ಜೀವನ ದರ್ಶನ -2017′ ಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಸೋಮನಾಥೇಶ್ವರ ವಲಯದ ಜಯರಾಮ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ತೊಕ್ಕೊಟ್ಟು ಚೆಂಬುಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ಸುಷ್ಮಾ , ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಗಟ್ಟಿ ವಗ್ಗ,…
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಾಲಾ ಬಸ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಕುಂಪಲ ಬೈಪಾಸ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು. ಮಂಗಳೂರಿನಿಂದ ಕಾಸರಗೋಡಿನ ಕಡೆ ತೆರಳುತ್ತಿದ್ದ ಕಾರು ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಶಾಲಾ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದವರು ಸಣ್ಣಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು:ಬಡವರ ಮಕ್ಕಳನ್ನು ಕೋಮುವಾದಿಗಳನ್ನಾಗಿಸಿ, ಈ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಸಂಸದರಿಗೆ ಮರ್ಯಾದೆ ಇದ್ದಲ್ಲಿ ಮುಸ್ಲಿಂ ಸಮುದಾಯದವರಲ್ಲಿ ಕ್ಷಮೆಯಾಚಿಸಿ, ಇಲ್ಲವಾದಲ್ಲಿ ರಾಜೀನಾಮೆ ನೀಡಿ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ದುರುದ್ದೇಶಿತ ಆರೋಪ ಹೊರಿಸಿದ ಬಿಜೆಪಿ ರಾಜಕೀಯ ಕುಟಿಲ ನೀತಿ ವಿರುದ್ಧದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಹೋದರಿಯಿಂದ ಸುಪಾರಿ ಹತ್ಯೆಗೊಳಗಾದ ಕೊಣಾಜೆಯ ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ಮುಂದಿಟ್ಟು ಒಂದು ಸಮುದಾಯವನ್ನು ಗುರಿಯಾಗಿಸಿ ಬಿಜೆಪಿ ಅಲ್ಲಲ್ಲಿ ಪ್ರತಿಭಟನೆ ನಡೆಸಿತು. ಇದರ ಫಲವಾಗಿ ಅಲ್ಲಲ್ಲಿ ಮಕ್ಕಳಿಗೆ ಚೂರಿ ಇರಿತ, ಕೊಲೆಯತ್ನ ಪ್ರಕರಣಗಳು ನಡೆದವು. ಇಂತಹ ಪ್ರಕರಣಗಳನ್ನು ಮುಂದಿಟ್ಟು ರಾಜಕೀಯ ನಡೆಸುವ ಸಂಸದರು ಅಧಿಕಾರಕ್ಕೆ ಯೋಗ್ಯರಲ್ಲ. ಅಧಿಕಾರಕ್ಕಾಗಿ ಬಿಜೆಪಿ ಆರಂಭಿಸಿದ ಹಿಂದುವಾದದ ಹೆಸರಿನ ಕೋಮುವಾದ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಭಟ್ನಗರ ತೊಕ್ಕೊಟ್ಟು ಇದರ ಆಶ್ರಯದಲ್ಲಿ ಅ. 14 ಮತ್ತು 15ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ವಿಶ್ವನಾಥ ಮೆಂಡನ್ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳಾದ ರಾಜೀವ ಮೆಂಡನ್, ವಿಠಲ ಶ್ರೀಯಾನ್, ಸುಂದರ ಅಮಿನ್, ಮೋನಪ್ಪ ಶ್ರೀಯಾನ್, ಜಯಾನಂದ ಅಂಚನ್, ದೇವದಾಸ್ ಶ್ರೀಯಾನ್, ಉತ್ಸವ ಸಮಿತಿ ಕಾರ್ಯನಿರ್ವಾಹಕರಾಗಿ, ಉಪಾಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಪುರುಷೋತ್ತಮ ಗಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಭಟ್ನಗರ, ಕೋಶಾಧಿಕಾರಿಯಾಗಿ ಜಯಾನಂದ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಲ್ಯ, ದಿನೇಶ್ ನಾೈಕ್, ಲೆಕ್ಕ ಪರಿಶೋಧಕರಾಗಿ ರಾಮಚಂದ್ರ ತೊಕ್ಕೊಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿದಾಸ್ ಭಟ್ನಗರ, ಜೊತೆ ಕ್ರೀಡಾ ಕಾರ್ಯದರ್ಶಿಗಳಾಗಿ ಕಿಶೋರ್ ಗಾಂಧಿನಗರ, ಧರ್ಮರಾಜ್, ಸಮಿತಿ ಸದಸ್ಯರುಗಳಾಗಿ ಕೃಷ್ಣಪ್ಪ ಮೆಂಡನ್, ಶಿವರಾಂ ಟಿ., ರಮೇಶ್ ಮೆಂಡನ್, ಸುರೇಂದ್ರ ಶೆಟ್ಟಿ ಮಂಚಿಲಗುತ್ತು, ಭಾಸ್ಕರ ತೊಕ್ಕೊಟ್ಟು , ನವೀನ್ ಕುಂಪಲ, ಸುನೀಲ್ ಕುಮಾರ್, ಶರತ್ ತೊಕ್ಕೊಟ್ಟು, ಚಂದ್ರ ಮೆಂಡನ್, ಪ್ರಕಾಶ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಸಮುದ್ರತೀರದ ಪ್ರದೇಶದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಕಿಲೇರಿಯನಗರ , ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಮನೆ ಹಾಗೂ ಮಸೀದಿಗಳಿಗೆ ಅಲೆಗಳು ಬುಧವಾರ ಮಧ್ಯಾಹ್ನದಿಂದ ಅಪ್ಪಳಿಸಲು ಆರಂಭವಾಗಿದ್ದು, ಜನ ಭೀತಿಯನ್ನು ಎದುರಿಸುತ್ತಿದ್ದಾರೆ. ಕಿಲೇರಿಯನಗರದಲ್ಲಿರುವ 10ಕ್ಕೂ ಅಧಿಕ ಮನೆಗಳು, ಮಸೀದಿಗಳಿಗೆ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಮಳೆ ಆರಂಭವಾಗದೆ ಸಮುದ್ರದ ಅಲೆಗಳ ರಭಸ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಬ್ರೇಕ್ ವಾಟರ್ ನಿಂದ ತೊಂದರೆ: ಕೋಟೆಪುರ, ಮೊಗವೀರಪಟ್ನ ಭಾಗದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಕಿಲೇರಿಯನಗರ, ಸುಭಾಷನಗರ, ಉಚ್ಚಿಲ , ಸೋಮೇಶ್ವರ ಭಾಗದಲ್ಲಿ ಅಪ್ಪಳಿಸಲು ಆರಂಭವಾಗಿದೆ. ಏಕಕಾಲದಲ್ಲಿ ಉಳ್ಳಾಲದಿಂದ ತಲಪಾಡಿ ಭಾಗದವರೆಗೂ ಸುರಕ್ಷಾ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸುತ್ತಿದ್ದಲ್ಲಿ ಇಂತಹ ತೊಂದರೆ ಮರುಕಳಿಸುತ್ತಿರಲಿಲ್ಲ ಅನ್ನುವುದು ಸ್ಥಳೀಯರ ಆರೋಪವಾಗಿದೆ. ಸಚಿವರು ಮತ್ತೆ ಭೇಟಿ ನೀಡಲಿ: ಕೆಲ ದಿನಗಳ ಹಿಂದೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಸುನ್ನಿ ಸ್ಟುಡೆಂಡ್ ಫೆಡರೇಷನ್ ಮದನಿ ನಗರ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.. ಜಮಾಅತ್ ಅಧ್ಯಕ್ಷ ರಾದ ಎಂ ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಉಸ್ಮಾನ್ ಜೌಹರಿ ಕಾರ್ಯವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್ ವೈ ಎಸ್ ಮದನಿ ನಗರ ಅಧ್ಯಕ್ಷರಾದ ಅಬ್ದುಲ್ ಅಝೀಝ್..ಸೆಕ್ಟರ್ ನೇತಾರರಾದ ಇಲ್ಯಾಸ್ ಸಖಾಫಿ. ಅಲ್ತಾಫ್ ಕುಂಪಲ..ಜಾಫರ್ ಅಳೇಕಲ. ಬಾಸಿತ್ ಮಂಚಿಲ.ಶಾಖಾ ಅಧ್ಯಕ್ಷರಾದ ಸಮೀರ್ ಅಹ್ಮದ್. ಉಪಸ್ಥಿತಿ ಇದ್ದರು.ಕಾರ್ಯದರ್ಶಿ ಜುನೈದ್ ನಿರೂಪಿಸಿದರು. ಫಾರೂಖ್ ಸಖಾಫಿ ವಂದಿಸಿದರು..
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಹರೇಕಳ: ಅಂಗಡಿ ಮಾಲೀಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹರೇಕಳದ ಕಡೆಂಜ ತೋಟ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪಾವೂರು ಕಡವಿನ ಬಳಿ ಅಂಗಡಿ ಹೊಂದಿರುವ ಅಬ್ದುಲ್ ರಹಿಮಾನ್ ಮೇ.24ರ ರಾತ್ರಿ ಅಂಗಡಿ ಮುಚ್ಚಿ ಮನೆ ಕಡೆಗೆ ತೆರಳುವ ಸಂದರ್ಭ ರಿಕ್ಷಾದಲ್ಲಿ ಬಂದಿದ್ದ ಆರು ಮಂದಿಯ ತಂಡ ಮಾರಕಾಯುಧಗಳಿಂದ ಅಶ್ರಫ್ ಎಂಬವರ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭ ರಹಿಮಾನ್ ಓರ್ವರೇ, ಆರು ಮಂದಿ ದುಷ್ಕರ್ಮಿಗಳ ನಡುವೆ ಹೊೈಕೈ ನಡೆಸಿದ್ದರು. ಬಳಿಕ ಗಂಭೀರ ಗಾಯಗೊಂಡಿದ್ದ ರಹಿಮಾನ್ ಅವರನ್ನು ನಾಟೆಕಲ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಹಿಮಾನ್ ಅಂಗಡಿಗೆ ಬರುತ್ತಿದ್ದ ಪೊಂಗ ಅಶ್ರಫ್ ಮೊಬೈಲ್ ರೀಚಾರ್ಜ್, ಪಾನೀಯ ಕುಡಿದರೂ ಹಣ ನೀಡದೆ ದಬ್ಬಾಳಿಕೆ ನಡೆಸುತಿತ್ತು. ಇದನ್ನು ರಹಿಮಾನ್ ವಿರೋಧಿಸಿದ್ದರು. ಈ ಹಿಂದೆ ರಹಿಮಾನ್ ಅವರನ್ನು ದರೋಡೆ ನಡೆಸಿದ್ದ ಪ್ರಕರಣದಲ್ಲಿಯೂ ಅಶ್ರಫ್ ಮತ್ತು ತಂಡ ಸಕ್ರಿಯವಾಗಿತ್ತು.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ:ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಇದರ ವತಿಯಿಂದ ಪಜೀರು, ಪಾವೂರು, ಹರೇಕಳ, ಕೊಣಾಜೆ, ಬೋಳ್ಯಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ಅರ್ಹ 300 ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕ ವಿತರಣಾ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೋಟ್ಯಾನ್ ಕಿಲ್ಲೂರು, ಕಾರ್ಯದರ್ಶಿ ಜನಾರ್ಧನ ಅಂಚನ್ ಹರೇಕಳ, ಕೋಶಾಧಿಕಾರಿ ನಾರಾಯಣ ಪೂಜಾರಿ ಪರಂಡೆ ಹಾಗೂ ಹಿರಿಯರಾದ ರಾಘವ ಪೂಜಾರಿ ಪಂಡಿತ್ ಹೌಸ್, ಲಕ್ಷ್ಮಣ ಸಾಲಿಯಾನ್ ಪಜೀರು, ಜಗನ್ನಾಥ ಕುಕ್ಯಾನ್ ಹರೇಕಳ, ಶ್ರೀನಿವಾಸ ಪೂಜಾರಿ ಪಾವೂರು, ಭೋಜ ಕುಕ್ಯಾನ್ ಕೊಣಾಜೆ, ಗಂಗಾಧರ ಪೂಜಾರಿ ಪಜೀರು, ರವೀಂದ್ರ ಬಂಗೇರ ಕೊಣಾಜೆ, ಸುಭಾಷ್ ಧರ್ಮ ನಗರ ಇನ್ನಿತರರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಪಾವೂರು :ಯಾದ್ ಫೌಂಡೇಷನ್ ಮಲಾರ್ ಇದರ ಮೂರನೇ ವರ್ಷದ ವಿದ್ಯಾರ್ಥಿಗಳ ಪುಸ್ತಕ ವಿತರಣಾ ಸಮಾರಂಭವು ಪಾವೂರು ಪಂಚಾಯತ್ ಸಮುದಾಯ ಭವನದಲ್ಲಿ ಸಂಘದ ಗೌರವಾಧ್ಯಕ್ಷರಾದ ಎನ್ ಎಸ್ ಕರೀಂ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಪಜೀರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಭರತ್ ರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.ಎಮ್ ಸಿ ಎಫ್ ಪಣಂಬೂರು ಇದರ ಚೀಫ್ ಮ್ಯಾನೇಜರ್ ಎಚ್ ಆರ್ ಸುರೇಶ್. ಪಿ ರವರು ಮಕ್ಕಳಿಗೆ ಪುಸ್ತಕ ವಿತರಿಸಿದರು .ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ ಪಿ.ಸುರೇಶ್ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪಾವೂರು ಗ್ರಾಮದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢಶಾಲೆಯ ಸುಮಾರು 300 ವಿಧ್ಯಾರ್ಥಿಗಳಿಗೆ ಈ ಸಂಧರ್ಭದಲ್ಲಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು,ತಾಲೂಕು ಪಂಚಾಯತ್ ಸದಸ್ಯರುಗಳಾದ ಬಿ.ಕೆ ಅಬ್ದುಲ್ ಜಬ್ಬಾರ್,ಬಶೀರ್ ಅಹ್ಮದ್,ಸಿದ್ದೀಕ್ ತಲಪಾಡಿ,ಪಾವೂರು ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ,ಪಶು…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಮಾಜಕ್ಕೆ ಆತ್ಮಸ್ಥೈರ್ಯ ಶಕ್ತಿ ತುಂಬಿಸುವ ಕಾರ್ಯ ಆಗಬೇಕಾಗಿದ್ದು, ಈ ಮೂಲಕ ಸಮಾಜವನ್ನು ಬೆಳೆಸುವ ಮಹತ್ತರ ಕಾರ್ಯ ಸಂಘಟನೆಗಳ ಮೇಲಿದೆ ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕೇಂದ್ರ ಸಮಿತಿ ಉಳ್ಳಾಲ ಇದರ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು. ಕೊಲ್ಯ ಶ್ರೀ ಸೌಭಾಗ್ಯ ಸದನದಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕೇಂದ್ರ ಸಮಿತಿ ಉಳ್ಳಾಲ ಇದರ ಅಶ್ರಯದಲ್ಲಿ 17ನೇ ವರ್ಷದ ಬಡ ಕುಟುಂಬದ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಶೈಕ್ಷಣಿಕ ಸಹಾಯಧನ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮದೊಂದಿಗೆ ರಾಜ್ಯ ಪ್ರಶಸ್ತಿ ಪುರಸ್ಕøತ ಚಲನಚಿತ್ರ ನಟ ಕುಸಲ್ದರಸೆ ನವೀನ್ ಡಿ. ಪಡೀಲ್ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಮಾಜದ ಪ್ರತೀ ಕುಟುಂಬದ ಕಟ್ಟಕಡೆಯ ಮಗು ಶಿಕ್ಷಣ ಪಡೆದಾಗ ಸಮಾಜಕ್ಕೆ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿದೆ. ಅಂಗನವಾಡಿಗಳಲ್ಲಿ ಸಿ ಬ್ಬಂದಿಗೂ ಮೆರಿಟ್ ಆಧಾರದಲ್ಲಿ ಕೆಲಸಗಳು ಸಿಗುತ್ತಿದ್ದು,…

