ಸುರತ್ಕಲ್, ಜೂ.17: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಸ್ತಾಪವನ್ನು ವಿರೋಧಿಸಿ ಹಾಗೂ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ (ಸಿಎಚ್ಸಿ) ಮೇಲ್ದರ್ಜೆಗೆ ಏರಿಸುವಂತೆ ಆಗ್ರಹಿಸಿ ಸುರತ್ಕಲ್ ಆರೋಗ್ಯ ಕೇಂದ್ರದ ಮುಂಭಾಗ ಬುಧವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ರಾಜಕೀಯ, ಸಾಮಾಜಿಕ, ಕಾರ್ಮಿಕ, ಯುವಜನ ಹಾಗೂ ನಾಗರಿಕ ಸಂಘಟನೆಗಳ ಸದಸ್ಯರು ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರಿ ಆಸ್ಪತ್ರೆಗಳು ಬಡವರು, ಮಧ್ಯಮ ವರ್ಗದವರು ಹಾಗೂ ದುರ್ಬಲ ವರ್ಗಗಳ ಜನರಿಗೆ ಜೀವನಾಡಿಯಾಗಿದ್ದು, ಅವುಗಳನ್ನು ಖಾಸಗಿ ಸಂಸ್ಥೆಗಳ ಅಧೀನಕ್ಕೆ ನೀಡುವುದರಿಂದ ಆರೋಗ್ಯ ಸೇವೆಗಳು ದುಬಾರಿಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ಆರೋಗ್ಯ ಮೂಲಸೌಕರ್ಯಗಳು ಸಾರ್ವಜನಿಕ ಸೇವೆಗಾಗಿಯೇ ಉಳಿಯಬೇಕು ಎಂದು ಒತ್ತಾಯಿಸಿದರು. ಸುರತ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…
Author: UllalaVani
ಮಂಗಳೂರು, ಜೂ. 17 :ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಪೊಲೀಸರು ಮತ್ತೊಮ್ಮೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಶಾಲೆಗಳು ಮತ್ತೆ ತೆರೆದಿರುವುದರಿಂದ ಹೆಚ್ಚಿನ ಸಂಖ್ಯೆಯ ಪೋಷಕರು ತಮ್ಮ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಬೆಳಿಗ್ಗೆ ಬೇಗನೆ ಶಾಲೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಮತ್ತು ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಬಗ್ಗೆ ನ್ಯಾಯಾಲಯದ ನಿರ್ದೇಶನದ ಬಗ್ಗೆ ನೆನಪಿಸುತ್ತಿದ್ದಾರೆ.ಅನೇಕ ಪೋಷಕರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುತ್ತಿದ್ದರೂ, ತಮ್ಮ ಮಕ್ಕಳ ಸುರಕ್ಷತೆಯನ್ನು ನಿರ್ಲಕ್ಷಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ದ್ವಿಚಕ್ರ ವಾಹನದಲ್ಲಿ ಮಗುವನ್ನು ಮುಂದೆ ಅಥವಾ ಹಿಂದೆ ಕುಳಿತಿದ್ದರೂ, ವಾಹನವು ಸಮತೋಲನ ಕಳೆದುಕೊಂಡರೆ ಅಥವಾ ಅಪಘಾತಕ್ಕೀಡಾದರೆ ತಲೆಗೆ ಗಾಯವಾಗುವ ಅಪಾಯ ಹೆಚ್ಚು ಎಂದು ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಶಾಲೆ ಹತ್ತಿರದಲ್ಲಿದೆ ಅಥವಾ ಪ್ರಯಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಹೆಲ್ಮೆಟ್ ಬಳಕೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿ ಎಂದು ಅವರು…
ಮಂಗಳೂರು, ಜೂ. 17: ಕಳೆದ 2001ರಿಂದಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದ್ದು, ಆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರ ಪ್ರತಿಭಟನೆ ನಡೆಸಿ ಸರ್ಕಾರದ ಪ್ರಯತ್ನವನ್ನು ವಿಫಲಗೊಳಿಸಿತ್ತು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ. ಅಂದು ರಾಜ್ಯದಾದ್ಯಂತ ರೈತರು ಕೃಷಿ ಪಂಪ್ಸೆಟ್ಗಳಿಗೆ ಅಳವಡಿಸಿದ್ದ ಮೀಟರ್ಗಳನ್ನು ಕಿತ್ತು ವಿದ್ಯುತ್ ಇಲಾಖೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು ಎಂದು ಅವರು ಸ್ಮರಿಸಿದ್ದಾರೆ. ಈಗ ರಾಜ್ಯ ಸರ್ಕಾರ ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್ ಸಂಸ್ಥೆಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಹಾಗೂ ಕೃಷಿ ಪಂಪ್ಸೆಟ್ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿ ರೈತರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಯೋಜನೆ ರೂಪಿಸಿದೆ ಎಂದು ಆರೋಪಿಸಲಾಗಿದೆ. ಈ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಯುತ್ತಿದೆ. ಆದರೆ ದಕ್ಷಿಣ ಕನ್ನಡ…
ಬೆಂಗಳೂರು,ಜೂ. 17: ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿದ್ದ ಬಾಸ್ ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಗರ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಬಿಡುಗಡೆಗೆ ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.ಸದ್ಯಕ್ಕೆ ಬಿಡುಗಡೆ ಆಗುವುದು ಬಹುತೇಕ ಅನುಮಾನ. ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿರುವ ಅರ್ಜಿದಾರರು, ಚಿತ್ರದ ಬಿಡುಗಡೆಗೆ ತಕ್ಷಣದ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.ಚಿತ್ರದ ಕಥಾವಸ್ತು, ಪಾತ್ರಗಳ ನಿರೂಪಣೆ ಹಾಗೂ ಇತರ ವಿವಾದಿತ ಅಂಶಗಳಿಗೆ ಸಂಬಂಧಿಸಿದಂತೆ ಗಂಭೀರ ಆಕ್ಷೇಪಣೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಬಾಸ್ ಸಿನಿಮಾದ ಕಥೆಯು ರೇಣುಕಾಸ್ವಾಮಿ ಕೊಲೆಯ ಹಿನ್ನೆಲೆಯಾಗಿ ಬಂದಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿಯೇ ದರ್ಶನ್…
ಉಳ್ಳಾಲ: ಅಪರಿಚಿತ ಗಂಡಸಿನ ಮೃತದೇಹವು ಉಳ್ಳಾಲ ಹೋಯಿಗೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇರುವವರು ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಪರ್ಕ ಸಂಖ್ಯೆ: 9480802342, 9480802315.
ಬೆಂಗಳೂರು, ಜೂನ್ 15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಕಾನೂನಿನ ದುರುಪಯೋಗ ತಡೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಭಾರತದ ಸಂವಿಧಾನದ ಪರಿಚ್ಛೇದ 19(1)(a) ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನೀಡಿದೆ. ಸರ್ಕಾರ, ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ನೀತಿಗಳ ಕುರಿತು ಟೀಕೆ ಮಾಡುವುದು, ಪ್ರಶ್ನಿಸುವುದು ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್ಗಳು ಹಲವು ತೀರ್ಪುಗಳಲ್ಲಿ ಈ ಹಕ್ಕಿನ ಮಹತ್ವವನ್ನು ಪುನರುಚ್ಚರಿಸಿವೆ. 2015ರ ಮಾರ್ಚ್ 24ರಂದು ಐತಿಹಾಸಿಕ ಶ್ರೇಯಾ ಸಿಂಘಾಲ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66A ಅನ್ನು ಅಸಂವಿಧಾನಿಕ…
ಬೆಂಗಳೂರು ; ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ…
ಮಂಗಳೂರು, ಜೂನ್ 16: ಡೀಸೆಲ್ ಬೆಲೆಯಲ್ಲಿ ಈಗಾಗಲೇ ಸುಮಾರು ₹9 ರಷ್ಟು ಏರಿಕೆಯಾಗಿರುವುದರಿಂದ ಖಾಸಗಿ ಬಸ್ ಉದ್ಯಮ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಇದರ ನೇರ ಪರಿಣಾಮ ಬಸ್ ಮಾಲಕರು ಹಾಗೂ ನೌಕರರ ಮೇಲೆ ಬೀಳುತ್ತಿದೆ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ತಿಳಿಸಿದ್ದಾರೆ. ಪ್ರಯಾಣಿಕರ ಮೇಲೆ ಹೆಚ್ಚಿನ ಹೊರೆ ಬೀಳದ ರೀತಿಯಲ್ಲಿ ಕೇವಲ ₹1 ರಿಂದ ₹3 ರವರೆಗೆ ಮಾತ್ರ ಬಸ್ ಟಿಕೆಟ್ ದರವನ್ನು ಪರಿಷ್ಕರಿಸುವ ಮೂಲಕ ಖಾಸಗಿ ಬಸ್ ಉದ್ಯಮಕ್ಕೆ ಸ್ವಲ್ಪ ಮಟ್ಟಿನ ರಕ್ಷಣೆ ಒದಗಿಸಲು ಬಸ್ ಮಾಲಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಖಾಸಗಿ ಬಸ್ ಸೇವೆಯ ಆದಾಯದ ಮೇಲೆ ಮತ್ತಷ್ಟು ಪರಿಣಾಮ ಉಂಟಾಗಿದೆ. ಇದರಿಂದ ಖಾಸಗಿ ಬಸ್ ಉದ್ಯಮ ನಡೆಸುವುದು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.…
ಬಂಟ್ವಾಳ, ಜೂ. 16 : ಮಳೆಗಾಲ ಆರಂಭವಾಗುತ್ತಿದ್ದಂತೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಭಟ್ಟಾಜೆಯ ತಾರಬಳಿ ಸಂಪರ್ಕ ಸೇತುವೆ ಕುಸಿದ ಪರಿಣಾಮ ಹಲವು ಗ್ರಾಮಗಳ ಸಂಪರ್ಕ ಕಡಿದು, ನೂರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಿರಲೆ, ಭಟ್ಟಾಜೆ, ಸೊರ್ನಾಡು, ಎರ್ಮಲಪದವು, ಕುರಿಯಾಳ, ಬಾಳಿಕೆ, ಬಂಡಸಾಲೆ ಹಾಗೂ ಕೊಳತ್ತಮಜಲು, ಬಡಗಬೆಳ್ಳೂರು, ಪೊಳಲಿ ಭಾಗಗಳನ್ನು ಸಂಪರ್ಕಿಸುತ್ತಿದ್ದ ಈ ಸೇತುವೆಯೇ ಗ್ರಾಮಸ್ಥರ ನಿತ್ಯ ಓಡಾಟದ ಪ್ರಮುಖ ಕೊಂಡಿಯಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಅಪಾಯಕಾರಿಯಾಗಿದ್ದ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ನಿಷೇಧಿಸಿ, ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಇದೀಗ ಇಲಾಖೆ ಬುಲ್ಡೋಜರ್ ಮೂಲಕ ಸೇತುವೆ ತೆರವು ಕಾರ್ಯ ಆರಂಭಿಸಿದ್ದು, ಫೌಂಡೇಶನ್ ತೆರವು ಸೇರಿದಂತೆ ಸಂಪೂರ್ಣ ಕಾಮಗಾರಿಗೆ ಕೆಲವು ವಾರಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.ಸೇತುವೆ ಕುಸಿತದಿಂದ ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ತೋಡು ದಾಟಿ ಸಂಚರಿಸಬೇಕಾದ ಅಥವಾ ಹತ್ತಾರು ಕಿಲೋಮೀಟರ್ ಸುತ್ತುಬಳಸಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ತೋಡಿನಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ಸಂಚಾರ ಇನ್ನಷ್ಟು ಅಪಾಯಕಾರಿಯಾಗಲಿದೆ.…
ಹರೇಕಳ, ಜೂನ್ 16: ಹರೇಕಳ ಗ್ರಾಮದ ಗ್ರಾಮಸ್ಥರು ಹಾಗೂ ತೆರಿಗೆದಾರರ ಪರವಾಗಿ ಸುಖಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಗ್ರ ಸಾರ್ವಜನಿಕ ದೂರು ಮತ್ತು ಸಾಮೂಹಿಕ ಮನವಿಯನ್ನು ಸಲ್ಲಿಸಲಾಗಿದೆ. ಮನವಿಯಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ನೀರಿನ ಟ್ಯಾಂಕ್ಗಳು, ಪೈಪ್ಲೈನ್ ಕಾಮಗಾರಿಗಳು, ಭೂಸ್ವಾಧೀನ, ರಸ್ತೆ ಬದಿಯ ಸೆಟ್ಬ್ಯಾಕ್ ನಿಯಮಗಳ ಪಾಲನೆ, ಕಾನೂನುಬದ್ಧ ಅನುಮೋದನೆಗಳು ಹಾಗೂ ಸಾರ್ವಜನಿಕರ ಹಣದ ಬಳಕೆಯ ಕುರಿತು ಹಲವು ಪ್ರಶ್ನೆಗಳನ್ನು ಎತ್ತಲಾಗಿದೆ. ಗ್ರಾಮದಲ್ಲಿ ನಿರ್ಮಿಸಲಾಗಿರುವ ನೀರಿನ ಟ್ಯಾಂಕ್ಗಳ ವಿನ್ಯಾಸಿತ ಬಾಳಿಕೆ ಅವಧಿ, ರಚನಾತ್ಮಕ ಸುರಕ್ಷತೆ, ಗುಣಮಟ್ಟ ಪ್ರಮಾಣೀಕರಣ, ತೃತೀಯ ಪಕ್ಷದ ತಪಾಸಣಾ ವರದಿಗಳು ಹಾಗೂ ಸಂಬಂಧಿತ ಇಂಜಿನಿಯರ್ಗಳ ಪ್ರಮಾಣಪತ್ರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಇದಲ್ಲದೆ, ಪೈಪ್ಲೈನ್ ಅಳವಡಿಕೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ (PWD), ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಸೇರಿದಂತೆ ಸಂಬಂಧಿತ…

