Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮುಂಬಯಿ: ರಾಯನ್‍ಅಂತರಾಷ್ಟ್ರೀಯ ಶೈಕ್ಷಣಿಕ ಸಮೂಹ ಸಂಸ್ಥೆಗಳ ಪ್ರವರ್ತಕಿ-ಆಡಳಿತ ನಿರ್ದೇಶಕಿ ಅಚ್ಚ ತುಳು ಕನ್ನಡದ ಮಹಾನ್ ಸಾಧಕಿ ಮೇಡಂಗ್ರೇಸ್ ಪಿಂಟೊ ಆಡಳಿತ್ವದ ರಾಯಾನ್ ಶೈಕ್ಷಣಿಕ ಸಂಸ್ಥೆಗಳು ಮತ್ತೊಮ್ಮೆತಮ್ಮ ಶಿಕ್ಷಣ ಕ್ಷೇತ್ರದ ಅಪ್ರತಿಮ ಸಾಧನೆಯನ್ನು ಕಳೆದ ಸೋಮವಾರ ಪ್ರಕಟವಾದ ಸೆಂಟ್ರಲ್ ಬೋರ್ಡ್‍ಆಫ್ ಸೆಕಂಡರಿ ಎಜ್ಯುಕೇಶನ್ (ಸಿಬಿಎಸ್‍ಇ), ಇಂಡಿಯನ್ ಸೆರ್ಟಿಫಿಕೇಟ್ ಫಾರ್ ಸೆಕಂಡರಿ ಎಜ್ಯುಕೇಶನ್ (ಐಸಿಎಸ್‍ಇ)ಮತ್ತು ಇಂಡಿಯನ್ ಸ್ಕೂಲ್‍ಸೆರ್ಟಿಫಿಕೇಟ್(ಐಎಸ್‍ಸಿ) ಪರೀಕ್ಷಾ ಫಲಿತಾಂಶಗಳಲ್ಲಿ ಪ್ರದರ್ಶಿಸಿದೆ. ರಾಯಾನ್ ವಿದ್ಯಾಸಂಸ್ಥೆಗಳು ಕಳೆದ ಹಲವು ವರ್ಷಗಳಿಂದ ಸತತವಾಗಿ ಶೇಕಡಾ100 ಫಲಿತಾಂಶಗಳನ್ನು ಪಡೆಯುತ್ತಾ ಬಂದಿದೆ. ಅದೇರೀತಿ ಈ ಬಾರಿಯೂ ಭಿನ್ನವಾಗಿಲ್ಲ. ಇದರೊಂದಿಗೆ ಡಿಸ್ಟಿಂಕ್ಷನ್ಸ್ ಮತ್ತು ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ವಿದ್ಯಾರ್ಥಿಗಳ ಪ್ರಯತ್ನ, ಯಶಸ್ವಿ ಸಾಧನೆ ರಾಯಾನ್ ಸಂಸ್ಥೆಯ ಘನತೆಯನ್ನು ಹೆಚ್ಚಿಸಿದೆ. ಖಾರ್‍ಘರ್‍ಇಲ್ಲಿನರಾಯಾನ್‍ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಮಾ| ಋಷಿಕೇಶ್ ನಿಕಂ ಐಸಿಎಸ್‍ಇ ಪರೀಕ್ಷೆಯಲ್ಲಿ ಒಟ್ಟು ಶೇಕಡಾ98.6 ಅಂಕ ಗಳಿಸಿದ್ದಾರೆ. ನನ್ನ ಪರೀಕ್ಷಾ ಸಿದ್ಧತೆಯ ಸಂದರ್ಭ ಶಾಲೆ ಮತ್ತು ಶಾಲೆಯ ಶಿಕ್ಷಕರು ಬಹಳಷ್ಟು…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಮಂಗಳೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಶ್ರೀಘ್ರವೇ ಐದು ಕಡೆಗಳಲ್ಲಿ ಆಧಾರ್ ಕೇಂದ್ರಗಳನ್ನು ಆರಂಭಿಸಲಾಗುವುದು ಇದರಿಂದ ಪ್ರತಿಯೊಬ್ಬರು ಆಧಾರ್ ಕಾರ್ಡ್ ಹೊಂದುವ ಮೂಲಕ ಸರಕಾರಿ ಸೌಲಭ್ಯವನ್ನು ಸುಲಭವಾಗಿ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು ಸಮೀಪದ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಅವರು ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು. ಸರ್ಕಾರ ಎಲ್ಲಾ ವರ್ಗದ ಜನರಿಗೂ ವಿವಿಧ ಸವಲತ್ತುಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆಯುವ ಮನೋಭಾವ ಎಲ್ಲರಲ್ಲಿ ಇರಬೇಕು. ಮಾಸಿಕ ಪೆನ್ಷನ್ ಸಹಿತ ಜನಸಾಮಾನ್ಯರ ದೂರು ಆಲಿಸುವ ನಿಟ್ಟಿನಲ್ಲಿ ತಾಲೂಕು ಕಚೇರಿಯಲ್ಲಿ ದೂರು ಕೇಂದ್ರ ಆರಂಭಿಸುವಂತೆ ತಹಸೀಲ್ದಾರ್‍ಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯಡಿ 186 ಫಲಾನುಭವಿಗಳಿಗೆ 37,60,000 ಹಾಗೂ ಅಂತ್ಯ ಸಂಸ್ಕಾರ ಸಹಾಯಧನವಾಗಿ 100 ಫಲಾನುಭವಿಗಳಿಗೆ 2,22,000 ಮೊತ್ತದ ಚೆಕ್ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯೆ ರಶೀದಾ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ವಿಶ್ವಕ್ಕೆ ಯೋಗ ಶಿಕ್ಷಣ ಭಾರತದ ಒಂದು ಅನನ್ಯ ಕೊಡುಗೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುತ್ತಿದ್ದು, ಕರ್ನಾಟಕದಲ್ಲಿ ಪತಂಜಲಿ ಯೋಗ ಶಿಕ್ಷಣ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜನ ಸಾಮಾನ್ಯರನ್ನು ತಲುಪುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಮಿಶನ್‍ನ ಅಧ್ಯಕ್ಷ ಸ್ವಾಮಿ ಜಿತಕಾಮನಂದ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಚೆಂಬು ಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಇದರ ಸೋಮನಾಥೇಶ್ವರ ವಲಯದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆದ ಯೋಗ ಪ್ರಶಿಕ್ಷಣ ಶಿಬಿರ `ಯೋಗ ಜೀವನ ದರ್ಶನ -2017′ ಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕರ್ನಾಟಕ ಸೋಮನಾಥೇಶ್ವರ ವಲಯದ ಜಯರಾಮ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ತೊಕ್ಕೊಟ್ಟು ಚೆಂಬುಗುಡ್ಡೆಯ ಮಂಗಳೂರು ವನ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ಸುಷ್ಮಾ , ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಗಟ್ಟಿ ವಗ್ಗ,…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಾಲಾ ಬಸ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಕುಂಪಲ ಬೈಪಾಸ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು. ಮಂಗಳೂರಿನಿಂದ ಕಾಸರಗೋಡಿನ ಕಡೆ ತೆರಳುತ್ತಿದ್ದ ಕಾರು ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಶಾಲಾ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದವರು ಸಣ್ಣಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು:ಬಡವರ ಮಕ್ಕಳನ್ನು ಕೋಮುವಾದಿಗಳನ್ನಾಗಿಸಿ, ಈ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಸಂಸದರಿಗೆ ಮರ್ಯಾದೆ ಇದ್ದಲ್ಲಿ ಮುಸ್ಲಿಂ ಸಮುದಾಯದವರಲ್ಲಿ ಕ್ಷಮೆಯಾಚಿಸಿ, ಇಲ್ಲವಾದಲ್ಲಿ ರಾಜೀನಾಮೆ ನೀಡಿ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ದುರುದ್ದೇಶಿತ ಆರೋಪ ಹೊರಿಸಿದ ಬಿಜೆಪಿ ರಾಜಕೀಯ ಕುಟಿಲ ನೀತಿ ವಿರುದ್ಧದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಹೋದರಿಯಿಂದ ಸುಪಾರಿ ಹತ್ಯೆಗೊಳಗಾದ ಕೊಣಾಜೆಯ ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ಮುಂದಿಟ್ಟು ಒಂದು ಸಮುದಾಯವನ್ನು ಗುರಿಯಾಗಿಸಿ ಬಿಜೆಪಿ ಅಲ್ಲಲ್ಲಿ ಪ್ರತಿಭಟನೆ ನಡೆಸಿತು. ಇದರ ಫಲವಾಗಿ ಅಲ್ಲಲ್ಲಿ ಮಕ್ಕಳಿಗೆ ಚೂರಿ ಇರಿತ, ಕೊಲೆಯತ್ನ ಪ್ರಕರಣಗಳು ನಡೆದವು. ಇಂತಹ ಪ್ರಕರಣಗಳನ್ನು ಮುಂದಿಟ್ಟು ರಾಜಕೀಯ ನಡೆಸುವ ಸಂಸದರು ಅಧಿಕಾರಕ್ಕೆ ಯೋಗ್ಯರಲ್ಲ. ಅಧಿಕಾರಕ್ಕಾಗಿ ಬಿಜೆಪಿ ಆರಂಭಿಸಿದ ಹಿಂದುವಾದದ ಹೆಸರಿನ ಕೋಮುವಾದ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಭಟ್ನಗರ ತೊಕ್ಕೊಟ್ಟು ಇದರ ಆಶ್ರಯದಲ್ಲಿ ಅ. 14 ಮತ್ತು 15ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ವಿಶ್ವನಾಥ ಮೆಂಡನ್ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳಾದ ರಾಜೀವ ಮೆಂಡನ್, ವಿಠಲ ಶ್ರೀಯಾನ್, ಸುಂದರ ಅಮಿನ್, ಮೋನಪ್ಪ ಶ್ರೀಯಾನ್, ಜಯಾನಂದ ಅಂಚನ್, ದೇವದಾಸ್ ಶ್ರೀಯಾನ್, ಉತ್ಸವ ಸಮಿತಿ ಕಾರ್ಯನಿರ್ವಾಹಕರಾಗಿ, ಉಪಾಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಪುರುಷೋತ್ತಮ ಗಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಭಟ್ನಗರ, ಕೋಶಾಧಿಕಾರಿಯಾಗಿ ಜಯಾನಂದ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಲ್ಯ, ದಿನೇಶ್ ನಾೈಕ್, ಲೆಕ್ಕ ಪರಿಶೋಧಕರಾಗಿ ರಾಮಚಂದ್ರ ತೊಕ್ಕೊಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿದಾಸ್ ಭಟ್ನಗರ, ಜೊತೆ ಕ್ರೀಡಾ ಕಾರ್ಯದರ್ಶಿಗಳಾಗಿ ಕಿಶೋರ್ ಗಾಂಧಿನಗರ, ಧರ್ಮರಾಜ್, ಸಮಿತಿ ಸದಸ್ಯರುಗಳಾಗಿ ಕೃಷ್ಣಪ್ಪ ಮೆಂಡನ್, ಶಿವರಾಂ ಟಿ., ರಮೇಶ್ ಮೆಂಡನ್, ಸುರೇಂದ್ರ ಶೆಟ್ಟಿ ಮಂಚಿಲಗುತ್ತು, ಭಾಸ್ಕರ ತೊಕ್ಕೊಟ್ಟು , ನವೀನ್ ಕುಂಪಲ, ಸುನೀಲ್ ಕುಮಾರ್, ಶರತ್ ತೊಕ್ಕೊಟ್ಟು, ಚಂದ್ರ ಮೆಂಡನ್, ಪ್ರಕಾಶ್…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಸಮುದ್ರತೀರದ ಪ್ರದೇಶದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಕಿಲೇರಿಯನಗರ , ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಮನೆ ಹಾಗೂ ಮಸೀದಿಗಳಿಗೆ ಅಲೆಗಳು ಬುಧವಾರ ಮಧ್ಯಾಹ್ನದಿಂದ ಅಪ್ಪಳಿಸಲು ಆರಂಭವಾಗಿದ್ದು, ಜನ ಭೀತಿಯನ್ನು ಎದುರಿಸುತ್ತಿದ್ದಾರೆ. ಕಿಲೇರಿಯನಗರದಲ್ಲಿರುವ 10ಕ್ಕೂ ಅಧಿಕ ಮನೆಗಳು, ಮಸೀದಿಗಳಿಗೆ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ಮಳೆ ಆರಂಭವಾಗದೆ ಸಮುದ್ರದ ಅಲೆಗಳ ರಭಸ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಬ್ರೇಕ್ ವಾಟರ್ ನಿಂದ ತೊಂದರೆ: ಕೋಟೆಪುರ, ಮೊಗವೀರಪಟ್ನ ಭಾಗದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಕಿಲೇರಿಯನಗರ, ಸುಭಾಷನಗರ, ಉಚ್ಚಿಲ , ಸೋಮೇಶ್ವರ ಭಾಗದಲ್ಲಿ ಅಪ್ಪಳಿಸಲು ಆರಂಭವಾಗಿದೆ. ಏಕಕಾಲದಲ್ಲಿ ಉಳ್ಳಾಲದಿಂದ ತಲಪಾಡಿ ಭಾಗದವರೆಗೂ ಸುರಕ್ಷಾ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸುತ್ತಿದ್ದಲ್ಲಿ ಇಂತಹ ತೊಂದರೆ ಮರುಕಳಿಸುತ್ತಿರಲಿಲ್ಲ ಅನ್ನುವುದು ಸ್ಥಳೀಯರ ಆರೋಪವಾಗಿದೆ. ಸಚಿವರು ಮತ್ತೆ ಭೇಟಿ ನೀಡಲಿ: ಕೆಲ ದಿನಗಳ ಹಿಂದೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಸುನ್ನಿ ಸ್ಟುಡೆಂಡ್ ಫೆಡರೇಷನ್ ಮದನಿ ನಗರ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.. ಜಮಾಅತ್ ಅಧ್ಯಕ್ಷ ರಾದ ಎಂ ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಉಸ್ಮಾನ್ ಜೌಹರಿ ಕಾರ್ಯವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ‌ಎಸ್ ವೈ ಎಸ್ ಮದನಿ ನಗರ ಅಧ್ಯಕ್ಷರಾದ ಅಬ್ದುಲ್ ಅಝೀಝ್..ಸೆಕ್ಟರ್ ನೇತಾರರಾದ ಇಲ್ಯಾಸ್ ಸಖಾಫಿ. ಅಲ್ತಾಫ್ ಕುಂಪಲ..ಜಾಫರ್ ಅಳೇಕಲ. ಬಾಸಿತ್ ಮಂಚಿಲ.ಶಾಖಾ ಅಧ್ಯಕ್ಷರಾದ ಸಮೀರ್ ಅಹ್ಮದ್. ಉಪಸ್ಥಿತಿ ಇದ್ದರು.ಕಾರ್ಯದರ್ಶಿ ಜುನೈದ್ ನಿರೂಪಿಸಿದರು. ಫಾರೂಖ್ ಸಖಾಫಿ ವಂದಿಸಿದರು..

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಹರೇಕಳ: ಅಂಗಡಿ ಮಾಲೀಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹರೇಕಳದ ಕಡೆಂಜ ತೋಟ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪಾವೂರು ಕಡವಿನ ಬಳಿ ಅಂಗಡಿ ಹೊಂದಿರುವ ಅಬ್ದುಲ್ ರಹಿಮಾನ್ ಮೇ.24ರ ರಾತ್ರಿ ಅಂಗಡಿ ಮುಚ್ಚಿ ಮನೆ ಕಡೆಗೆ ತೆರಳುವ ಸಂದರ್ಭ ರಿಕ್ಷಾದಲ್ಲಿ ಬಂದಿದ್ದ ಆರು ಮಂದಿಯ ತಂಡ ಮಾರಕಾಯುಧಗಳಿಂದ ಅಶ್ರಫ್ ಎಂಬವರ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭ ರಹಿಮಾನ್ ಓರ್ವರೇ, ಆರು ಮಂದಿ ದುಷ್ಕರ್ಮಿಗಳ ನಡುವೆ ಹೊೈಕೈ ನಡೆಸಿದ್ದರು. ಬಳಿಕ ಗಂಭೀರ ಗಾಯಗೊಂಡಿದ್ದ ರಹಿಮಾನ್ ಅವರನ್ನು ನಾಟೆಕಲ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಹಿಮಾನ್ ಅಂಗಡಿಗೆ ಬರುತ್ತಿದ್ದ ಪೊಂಗ ಅಶ್ರಫ್ ಮೊಬೈಲ್ ರೀಚಾರ್ಜ್, ಪಾನೀಯ ಕುಡಿದರೂ ಹಣ ನೀಡದೆ ದಬ್ಬಾಳಿಕೆ ನಡೆಸುತಿತ್ತು. ಇದನ್ನು ರಹಿಮಾನ್ ವಿರೋಧಿಸಿದ್ದರು. ಈ ಹಿಂದೆ ರಹಿಮಾನ್ ಅವರನ್ನು ದರೋಡೆ ನಡೆಸಿದ್ದ ಪ್ರಕರಣದಲ್ಲಿಯೂ ಅಶ್ರಫ್ ಮತ್ತು ತಂಡ ಸಕ್ರಿಯವಾಗಿತ್ತು.…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ:ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಇದರ ವತಿಯಿಂದ ಪಜೀರು, ಪಾವೂರು, ಹರೇಕಳ, ಕೊಣಾಜೆ, ಬೋಳ್ಯಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ಅರ್ಹ 300  ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕ ವಿತರಣಾ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ  ಜರಗಿತು. ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೋಟ್ಯಾನ್ ಕಿಲ್ಲೂರು, ಕಾರ್ಯದರ್ಶಿ ಜನಾರ್ಧನ ಅಂಚನ್ ಹರೇಕಳ, ಕೋಶಾಧಿಕಾರಿ ನಾರಾಯಣ ಪೂಜಾರಿ ಪರಂಡೆ ಹಾಗೂ ಹಿರಿಯರಾದ ರಾಘವ ಪೂಜಾರಿ ಪಂಡಿತ್ ಹೌಸ್, ಲಕ್ಷ್ಮಣ ಸಾಲಿಯಾನ್ ಪಜೀರು, ಜಗನ್ನಾಥ ಕುಕ್ಯಾನ್ ಹರೇಕಳ, ಶ್ರೀನಿವಾಸ ಪೂಜಾರಿ ಪಾವೂರು, ಭೋಜ ಕುಕ್ಯಾನ್ ಕೊಣಾಜೆ, ಗಂಗಾಧರ ಪೂಜಾರಿ ಪಜೀರು, ರವೀಂದ್ರ ಬಂಗೇರ ಕೊಣಾಜೆ,  ಸುಭಾಷ್ ಧರ್ಮ ನಗರ ಇನ್ನಿತರರು ಉಪಸ್ಥಿತರಿದ್ದರು.

Read More