Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವಕ್೯ ಕೊಣಾಜೆ: ಶ್ರೀ ಮಹಾಕಾಳಿ ಸೇವಾ ಮಂಡಳಿ ಕೊಣಾಜೆ ಕುಂಟಾಲಗುಳಿ ಇದರ ಆಶ್ರಯದಲ್ಲಿ ಕೊಣಾಜೆ ಕುಂಟಲಗುಳಿ ಶ್ರೀ ಮಹಾಕಾಳಿ ವನ ಸಾನಿಧ್ಯದ 2ನೇ ವರ್ಷದ ಪುನರ್ ಪ್ರತಿಷ್ಠಾ ದಿನದ ಅಂಗವಾಗಿ ದುರ್ಗಾ ಪೂಜೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶ್ರೀ ಮಹಾಕಾಳಿ ಕಟ್ಟೆಯ ಬಳಿ ನಡೆಯಿತು. ದುರ್ಗಾ ಪೂಜೆ ಕಾರ್ಯಕ್ರಮದ ಬಳಿಕ ಸಮಾಜದಲ್ಲಿ ಶಿಕ್ಷಣ ವೃತ್ತಿಯೊಂದಿಗೆ ಸಮಾಜಸೇವೆಗೈದ ವೆಂಕಪ್ಪ ಮಾಸ್ಟರ್ ಅಸೈಗೋಳಿ, ಶಂಕರಭಟ್ ಕೊಣಾಜೆ ಹಾಗೂ ಇಸ್ಮಾಯಿಲ್ ಮಾಸ್ಟರ್ ಅವರನ್ನು ಸನ್ಮಾನಿಸಲಾಯಿತು. ಇಸ್ಮಾಯಿಲ್ ಮಾಸ್ಟರ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಸ್ವಗ್ರಹಕ್ಕೆ ತೆರಳಿ ಪದಾಧಿಕಾರಿಗಳು ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಶಂಕರಭಟ್ ಅವರು, ಇಂದು ಆಧುನಿಕ ಕಾಲಘಟ್ಟ ಆಗಿದ್ದರೂ ಯುವ ಪಿಳಿಗೆಯು ಸಮಾಜದ ಶಿಷ್ಠಾಚಾರಗಳನ್ನು ಪಾಲಿಸಿ, ನಮ್ಮ ಸಂಸ್ಕøತಿ ಸಂಪ್ರದಾಯವನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಬೇಕು. ಅಲ್ಲದೆ ಪೋಷಕರು ಕೂಡಾ ತಮ್ಮ ಮಕ್ಕಳಿಗೆ ನಮ್ಮ ಸಂಸ್ಕøತಿಯ ಬಗ್ಗೆ ಮನವರಿಕೆ ಮಾಡುವ ಪ್ರಯತ್ನಗಳನ್ನು ಮಾಡಬೇಕೆಂದರು. ನಿವೃತ್ತ ಶಿಕ್ಷಕ…

Read More

ಉಳ್ಳಾಲ ನ್ಯೂಸ್ ನೆಟ್ ವಕ್೯ ಕೊಣಾಜೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ(ರಿ), ವಿಜಯ ಗ್ರಾಮಾಭಿವೃದ್ದಿ ಸಮಿತಿ, ವಿಜಯ ಬ್ಯಾಂಕ್ ಕೊಣಾಜೆ ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಇದರ ಆಶ್ರಯದಲ್ಲಿ ರೈತರಿಗೆ ಹಾಗೂ ಪಂಚಾಯಿತಿ ಸದಸ್ಯರಿಗೆ ತರಕಾರಿ ಬೀಜ ವಿತರಣೆ ಕಾರ್ಯಕ್ರಮವು ಕೊಣಾಜೆ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಸಮಿತಿ ನಿರ್ದೇಶಕರಾದ ಪ್ರಸಾದ್ ರೈ ಕಲ್ಲಿಮಾರ್ ಅವರು ರೈತರಿಗೆ ಉಚಿತ ತರಕಾರಿ ಬೀಜವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಕೃಷಿ ಚಟುವಟಿಕೆಗೆ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಅರಿತುಕೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೌಕತ್ ಆಲಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನದ ಕಾರ್ಯ ನಿರ್ವಹಣಾಧಿಕಾರಿ ಉದಯ ಹೆಗ್ಡೆ, ವಿಜಯ ಬ್ಯಾಂಕ್ ಮ್ಯಾನೇಜರ್ ಆತ್ಮರಾಮ್ ಶೆಟ್ಟಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೇಶವ, ಪಂಚಾಯಿತಿ ಸದಸ್ಯರಾದ…

Read More

ಉಳ್ಳಾಲ ನ್ಯೂಸ್ ನೆಟ್ ವಕ್೯ ದೈವರಾಧನೆ ಭೂತರಾಧನೆಯ ಜೀವಳವಾಗಿರುವ ತುಳುನಾಡಿನಲ್ಲಿ ಸಂಪ್ರದಾಯದ ಜೊತೆಗೆ ಕೆಲವೊಂದು ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಕಾಲ ಕಾಲಕ್ಕೆ ತಕ್ಕಂತೆ ಆಚರಣೆಗಳಲ್ಲಿ ವೈವಿಧ್ಯತೆಯ ಜೊತೆಗೆ ಬದಲಾವಣೆಯನ್ನು ಪರಂಪರೆಯಂತೆ ನಡೆಸಲಾಗುತ್ತಿದೆ. ಇನ್ನು ತುಳುನಾಡಿನ ಪತ್ತನಾಜೆಯ ಬಗ್ಗೆ ಹಲವಾರು ನಂಬಿಕೆಗಳಿದ್ದು ಅದರ ಹಿಂದಿರುವ ಉದ್ದೇಶವನ್ನು ತಿಳಿಯೋಣ….                         ಸಾಂದಭಿ೯ಕ ಚಿತ್ರ ಪತ್ತನಾಜೆ ಸಮಯದಲ್ಲಿ ದೈವಗಳಿಗೆ ಪೂಜೆ ನಡೆಸಲಾಗುವುದಿಲ್ಲ, ಯಕ್ಷಗಾನ ಮೇಳಗಳು ತಮ್ಮ ತಿರುಗಾಟವನ್ನು ನಿಲ್ಲಿಸುತ್ತವೆ ಎಂಬುದಷ್ಟೇ ನಮ್ಮ ಈಗಿನ ತಲೆಮಾರಿನ ಜನರಿಗೆ ತಿಳಿದಿದೆ. ಆದರೆ ಅದರ ಹಿಂದಿರುವ ನಿಜವಾದ ಉದ್ದೇಶವೇನು ಎಂಬುದು ಯಾರಿಗೂ ಸರಿಯಾಗಿ ತಿಳಿದಿಲ್ಲ.ಇನ್ನು ಈ ಬಗ್ಗೆ ಉಳ್ಳಾಲ ನ್ಯೂಸ್ ಗೆ ಮಾಹಿತಿ ನೀಡಿ ಮಾತನಾಡಿದ ಕೊಲ್ಯಗುತ್ತುವಿನ ಮಧ್ಯಸ್ಥರಾದ ಸುದರ್ಶನ್ ಪೂಜಾರಿ ಬೊಲ್ಲೈಯವರು ಹೇಳುವಂತೆ, “ಸಾಮಾನ್ಯವಾಗಿ ತುಳುನಾಡಿನ ಜನರ ನಂಬಿಕೆಯೆಂದರೆ ಪತ್ತನಾಜೆಯ ಸಮಯದಲ್ಲಿ ದೈವಗಳು ತಮ್ಮ ಮೂಲಸ್ಥಾನವಾದ ಘಟ್ಟದತ್ತ ತೆರಳುವುದರಿಂದ ಕರಾವಳಿ ಪ್ರದೇಶದಲ್ಲಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಗಳೂರು:ಆಳಸಮುದ್ರ ಮೀನುಗಾರಿಕೆಗೆ  ತೆರಳಿದ್ದ ಗಿಲ್ನೆಟ್ ಬೋಟ್ ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದಿದ್ದು, ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟಿನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಮೀನುಗಾರಿಕಾ ಬೋಟಿನವರು ರಕ್ಷಿಸಿರುವ ಘಟನೆ ಧಕ್ಕೆ ಸಮೀಪದ ಅಳಿವೆಬಾಗಿಲು ಸಮೀಪ ಬುಧವಾರ ಸಂಜೆ ವೇಳೆ ಸಂಭವಿಸಿದೆ. ಲೋಕನಾಥ ಬೋಳಾರ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಕೆಲ ದಿನಗಳ ಹಿಂದೆ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಬುಧವಾರ ಸಂಜೆ ಮಂಗಳೂರಿನ ಧಕ್ಕೆಗೆ ವಾಪಸ್ಸಾಗುವ ಸಂದರ್ಭ   ಅಳಿವೆಬಾಗಿಲು ಸಮೀಪ ಮರಳು ದಿಬ್ಬಕ್ಕೆ ಬಡಿದಿದೆ. ಪರಿಣಾಮ ಬೋಟ್ ಒಡೆದು ಮುಳುಗಲು ಆರಂಭವಾಗಿತ್ತು. ಈ ವೇಳೆ ಅದರಲ್ಲಿದ್ದ 10 ಮಂದಿ ಮೀನುಗಾರರು ರಕ್ಷಣೆ ಯಾಚಿಸುತ್ತಿದ್ದ ಸಂದಭ9 ಮೀನುಗಾರಿಕೆಯಿಂದ ವಾಪಸ್ಸಾಗುತ್ತಿದ್ದ ಇನ್ನೊಂದು ಬೋಟಿನವರು ಅಲ್ಲಿದ್ದ 10 ಮಂದಿಯನ್ನೂ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಘಟನೆಯಿಂದ ಬೋಟ್ ಮಾಲೀಕರಿಗೆ ರೂ. 70 ಲಕ್ಷ ನಷ್ಟ ಉಂಟಾಗಿದೆ. ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:ಸ್ಕೂಟಿಗೆ ಏಸ್ ಟೆಂಪೋ ಡಿಕ್ಕಿ ಹೊಡೆದು ತಾಯಿ ಮಗ ಗಂಬೀರ ಗಾಯಗೊಂಡಿರುವ ಘಟನೆ ರಾ.ಹೆ. 66ರ ಕಾಪಿಕಾಡು ಸಮೀಪ ಇಂದು ಬೆಳಿಗ್ಗೆ ಸಂಭವಿಸಿದೆ. ಉರ್ವಸ್ಟೋರ್ ನಿವಾಸಿ ರೋಹಿತ್ ಮತ್ತವರ ತಾಯಿ ಗಂಭೀರವಾಗಿ ಗಾಯಗೊಂಡವರು. ಇಬ್ಬರು ಬೈಕಿನಲ್ಲಿ ಕುಂಪಲ ದಲ್ಲಿ ನಡೆದಿದ್ದ ಕುಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಸುಕಿನ ಜಾವ ಮಂಗಳೂರಿನ ಮನೆ ಕಡೆಗೆ ತೆರಳುವ ಸಂದರ್ಭ ಅದೇ ಧಿಕ್ಕಿನಲ್ಲಿ ಸಾಗುತ್ತಿದ್ದ ಏಸ್ ವಾಹನ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ಉಳ್ಳಾಲ ಪೊಲೀಸರು ಸಹಕರಿಸಿದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ನರಿಂಗಾನ: ನರಿಂಗಾನ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ ಪುಂಡಿಕಾಯಿ, ಕೊಡಂಚಿಲ್‍ನಿಂದ ಕಲ್ಮಂಜ ಸಂಪರ್ಕಿಸುವ ನೂತನ ರಸ್ತೆ ನಿರ್ಮಾಣಕ್ಕೆ ಬುಧವಾರ ಚಾಲನೆ ನೀಡಲಾಯಿತು. ಸ್ಥಳೀಯ ಹಿರಿಯರಾದ ಕರುಣಾಕರ್ ಶೆಟ್ಟಿ ಪುಂಡಿಕಾಯಿ ಚಾಲನೆ ನೀಡಿದರು. ನರಿಂಗಾನ ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ಲಾ ಕೊಡಂಚಿಲ್ ಮಾತನಾಡಿ ನೂತನ ರಸ್ತೆ ನಿರ್ಮಾಣಕ್ಕೆ ಸ್ಥಳೀಯರು ತಮ್ಮ ಮೌಲ್ಯಯುತ ಜಮೀನು ನೀಡಿದ್ದರಿಂದ ರಸ್ತೆ ನಿರ್ಮಾಣ ಕಾರ್ಯ ಸಹಕಾರಿಯಾಗಲಿದ್ದು, ವಿದ್ಯಾನಗರ ಪುಂಡಿಕಾಯಿ, ಕೊಡಂಚಿಲ್ ನಾಗರಿಕರು ಕಲ್ಮಂಜ ತೌಡುಗೋಳಿ ಪ್ರದೇಶಕ್ಕೆ ಬರಬೇಕಾದರೆ 7.ಕಿ.ಮೀ ಬೇಕಾಗಿತ್ತು. ನೂತನ ಸಂಪರ್ಕ ರಸ್ತೆ ನಿರ್ಮಾಣವಾದರೆ ಕೇವಲ 1ಕಿ.ಮೀ. ದೂರ ಕ್ರಮಿಸಲು ಸಾಧ್ಯವಿದ್ದು, ನೂತನ ರಸ್ತೆ ನಿರ್ಮಾಣಕ್ಕೆ ಸ್ಥಳೀಯರೇ ಹಣ ನೀಡುವುದರಿಂದ ಊರಿನ ಜನರ ಶ್ರಮ ಈ ರಸ್ತೆಯಲ್ಲಿದೆ ಎಂದರು. ಈ ಸಂದರ್ಭದಲ್ಲಿ ಪ್ರಕಾಶ್ ಶೆಟ್ಟಿ ಮರಿಕ್ಕಳ, ಇದ್ದೀನ್‍ಕುಂಞ ಕೊಡಂಚಿಲ್, ಸತ್ಯನಾರಾಯಣ ಭಟ್, ಇದ್ದೀನ್ ಕುಂಞ ಪುಂಡಿಕಾಯಿ, ಅಶ್ರಫ್ ಪುಂಡಿಕಾಯಿ, ರಾಜೇಶ್, ಹಸನ್ ಕುಂಞ ಹೂವೆದಪದವು, ರಮೇಶ್ ಬೆದ್ರಳಿಕೆ, ಅಬ್ಬಾಸ್ ಕೊಡಂಚಿಲ್, ಮುಹಮ್ಮದ್ ಮದನಿ ಪುಂಡಿಕಾಯಿ,…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುನ್ನೂರು: ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮುನ್ನೂರು ಗ್ರಾಮ ಪಂಚಾಯತ್‍ನ ಘನ ತ್ಯಾಜ್ಯ ಘಟಕದ ತ್ಯಾಜ್ಯ ವಿಲೇವಾರಿಗೆ ಬುಧವಾರ ಚಾಲನೆ ದೊರಕಿದ್ದು, ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘನತ್ಯಾಜ್ಯ ಸಂಗ್ರಹ ವಾಹನಕ್ಕೆ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಮತ್ತು ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ಆರ್. ಶೆಟ್ಟಿ ಚಾಲನೆ ನೀಡಿ ಮಾತನಾಡಿದರು. ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಮಾತನಾಡಿ ತಾಂತ್ರಿಕ ಕಾರ್ಯಗಳಿಂದಾಗಿ ಘನ ತ್ಯಾಜ್ಯ ಘಟಕ ಕಾರ್ಯಾರಂಭಕ್ಕೆ ವಿಳಂಬವಾದರೂ ಇಂದು ಪ್ರಾರಂಭಗೊಂಡಿದ್ದು, ಜನಪ್ರತಿನಿಧಿಗಳು, ಪಂಚಾಯತ್ ಆಡಳಿತ ಮತ್ತು ಸಾರ್ವಜನಿಕರ ಸಹಕಾರವಿದ್ದರೆ ಮುನ್ನೂರು ಗ್ರಾಮ ಪಂಚಾಯತನ್ನು ಸ್ವಚ್ಚ ಗ್ರಾಮ ಪಂಚಾಯತನ್ನಾಗಿ ರೂಪಿಸಲು ಸಾಧ್ಯ ಎಂದರು. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಮುನ್ನೂರು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿಗೆ ಸರಕಾರ ನೀಡಿದ ವ್ಯವಸ್ಥೆಯನ್ನು ಸದುಪಯೋಗಪಡಿಸಿರುವುದು ಶ್ಲಾಘನೀಯ ಈ ಕಾರ್ಯ ಮುಂದಿನ ದಿನಗಳಲ್ಲಿ ಯಶಸ್ವಿಯಾಗಿ ಮುನ್ನಡೆಯಾಬೇಕಾದರೆ ಎಲ್ಲರ ಸಹಕಾರ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್  ಹರೇಕಳ:ಅಂಗಡಿ ಮಾಲೀಕರಿಗೆ ಐದು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಪಾವೂರು ನಿವಾಸಿ ಅಬ್ದುಲ್ ರಹಿಮಾನ್ (35) ಕೊಲೆಯತ್ನಕ್ಕೆ ಒಳಗಾದವರು. ಪಾವೂರು ಕಡವಿನಬಳಿ ಇರುವ ಜ್ಯೂಸ್ ಅಂಗಡಿಯನ್ನು ಮುಚ್ಚಲು ಅನುವಾಗುತ್ತಿದ್ದ ಸಂದರ್ಭದಲ್ಲಿ ಓಮ್ನಿ ಕಾರಿನಲ್ಲಿ ಬಂದ ಐದು ಮಂದಿಯ ತಂಡ ಚೂರಿಯಿಂದ ತಲೆ, ಕಾಲು ಹಾಗೂ ಕೈಗಳ ಭಾಗಕ್ಕೆ ಇರಿದು ಕೊಲೆಗೆ ಯತ್ನಿಸಲಾಗಿದೆ. ಸ್ಥಳೀಯವಾಗಿ ಗಾಂಜಾ ವ್ಯಸನಿಗಳ ಉಪಟಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರೆಂಬ ಕಾರಣಕ್ಕಾಗಿ ಹಂಚು ಹಾಕಿದ್ದ ತಂಡ ಕೃತ್ಯ ಎಸಗಿದೆ. ಗಾಯಾಳುವನ್ನು ನಾಟೆಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಹರೇಕಳ: ಕೊಣಾಜೆ, ಮುಡಿಪು ಪ್ರದೇಶ ಅಭಿವೃದ್ಧಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರಿಗೂ ಸಹಕಾರಿಯಾಗುವಂತೆ ಹರೇಕಳದಿಂದ ಅಡ್ಯಾರು ಕಡೆಗೆ ಸೇತುವೆ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಸದ್ಯ ಸರ್ವೇ ಕಾರ್ಯ ನಡೆಯುತ್ತಿದೆ. ಅಲ್ಲದೆ ಸೇತುವೆಯ ಕೊನೆಯ ಎಂಬ್ಯಾಕ್‍ಮೆಂಟ್ ಸ್ಥಳದ ಕೊರತೆಯಿರುವುದರಿಂದ ಅದನ್ನು ತಿಳಿಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಸೇತುವೆ ನಿರ್ಮಾಣವಾದಲ್ಲಿ ಹರೇಕಳ, ಕೊಣಾಜೆ, ಮುಡಿಪು ನಿವಾಸಿಗಳಿಗೆ ಪಟ್ಟಣ ಪ್ರದೇಶ ಬಹಳ ಹತ್ತಿರವಾಗಲಿದ್ದು, ಪ್ರದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳೂರು ಕರಾವಳಿ ಅಲ್ಪ ಸಂಖ್ಯಾತಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಉತ್ತರ ಧಕ್ಕೆ , ಬಂದರು ಇದರ ವತಿಯಿಂದ ಮಂಗಳೂರು ತಾಲೂಕು ಹರೇಕಳ ಗ್ರಾಮದ ರಾಜಗುಡ್ಡೆ, ನ್ಯೂಪಡ್ಪು ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆಗಳ ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ರಾಜಗುಡ್ಡೆ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ವಿತರಣಾ ಸಮಾರಂಭದಲ್ಲಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ನಿಟ್ಟೆ ನರ್ಸಿಂಗ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಿಡ್ ವೈಫ್ ದಿನಾಚರಣೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ಆಸ್ಪತ್ರೆಯ ಡೆಪ್ಯುಟಿ ಚೀಫ್ ನರ್ಸಿಂಗ್ ಅಧಿಕಾರಿ ಡ್ಯಾರಿಲ್ ಅರಾನ್ಹಾ ಇವರು ಮಿಡ್ ವೈಫ್ ತಾಯಂದಿರು, ಕುಟುಂಬಸ್ಥರು, ಜೀವನದ ಪಾಲುದಾರರು ಈ ವಿಷಯದ ಬಗ್ಗೆ ವಿವರಿಸಿದರು. ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಪ್ರೊ| ಸಬಿತಾ ನಾಯಕ್ ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು. ಪ್ರೊ| ಶೈನಿ ಪೌಲ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಸುನಂದಾ ಬಿ. ವಂದಿಸಿದರು.

Read More