Author: UllalaVani

Kannada News From Coastal Karnataka

UN NETWORKS ಕೊಣಾಜೆ: ವಿದ್ಯಾರ್ಥಿಗಳು ಕಲಾಪ್ರಜ್ಞೆ, ಕಲಾಸಕ್ತಿಯನ್ನು ಬೆಳೆಸಿಕೊಂಡು ಮುನ್ನಡೆದರೆ ಭವಿಷ್ಯದಲ್ಲಿ ಉತ್ತಮ ನೆಮ್ಮದಿಯುತ ಬದುಕನ್ನು ಕಂಡುಕೊಳ್ಳಲು ಸಾಧ್ಯವಿದೆ. ಕಲೆಯ ಇತಿಹಾಸ, ಕಲಾಕೃತಿ, ಕಲಾಕಾರನ ಜೀವನ ಚರಿತ್ರೆ, ಸಾಧನೆಗಳ ಬಗ್ಗೆ ಅಧ್ಯಯನ ಮಾಡಿದರೆ ಜ್ಞಾನ ಕೌಶಲವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಎನ್.ಜಿ.ಪಾವಂಜೆ ಪೀಠ ಹಾಗೂ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ ಇದರ ಆಶ್ರಯದಲ್ಲಿ ಸೋಮವಾರ ವಿವಿಯ ಯಕ್ಷಗಾನ ಕಲಾಕೇಂದ್ರದಲ್ಲಿ ನಡೆದ ಒಂದು ದಿನದ `ಕಲಾ ಸಾಕ್ಷರತಾ ಶಿಬಿರವನ್ನು’ ಉದ್ಘಾಟಿಸಿ ಮಾತನಾಡಿದರು. ವಿದೇಶಗಳಲ್ಲಿ ಬಹಳ ವರ್ಷಗಳ ಹಿಂದೆಯೆ ಚಿತ್ರಕಲೆಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಅಲ್ಲಿಯ ಜನರು ಬೆಳೆಸಿಕೊಂಡು ಅದನ್ನು ಅನುಭವಿಸಿದ್ದರು. ನಮ್ಮಲ್ಲಿಯೂ ಕೂಡಾ ಕಲೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದ್ದು, ಕಲಾ ಮನೋಪ್ರಜ್ಞೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಹಾಗೂ ಕಲಾವಿದನಿಗೂ ಕೂಡಾ ಸಮಾಜದಲ್ಲಿ ಉತ್ತಮ ಮನ್ನಣೆ ಸಿಗಬೇಕಿದೆ ಎಂದು ಹೇಳಿದೆ. ಮಂಗಳೂರು ವಿವಿ ಕುಲಸಚಿವ ಪ್ರೊ.ಬಿ.ಎಸ್.ನಾಗೇಂದ್ರ ಪ್ರಕಾಶ್ ಅವರು ಮಾತನಾಡಿ, ಕಲೆಯು ಪ್ರತಿಯೊಬ್ಬರಲ್ಲೂ…

Read More

UN NETWORKS ಕೈರಂಗಳ: ಇಲ್ಲಿನ ಎಸ್.ವೈ.ಎಸ್ ತೋಟಾಲ್ ವಿದ್ಯಾನಗರ ಹಾಗೂ ಎಸ್.ಎಸ್.ಎಫ್ ಡಿ.ಜಿ ಕಟ್ಟೆ ಕೈರಂಗಳ ಶಾಖೆ ಜಂಟಿ ಆಶ್ರಯದಲ್ಲಿ ಜನವರಿ 28 ರಂದು ತಾಜುಲ್ ಉಲಮಾ ನಗರ ಗುಂಡುಕಟ್ಟೆ ರಿಫಾಯಿ ಮಸ್ಜಿದ್ ವಠಾರ ದಲ್ಲಿನ ನೂರುಲ್ ಉಲಮಾ ವೇದಿಕೆಯಲ್ಲಿ ಬ್ರಹತ್ ಸುನ್ನೀ ಸಮ್ಮೇಳನ ಜರುಗಿತು. ಸ್ವಾಗತ ಸಮಿತಿ ಚೆಯರ್ಮ್ಯಾನ್ ಅಬ್ಬಾಸ್ ಹಾಜಿ ತೋಟಾಲ್ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.ಉಡುಪಿ ಚಿಕ್ಕಮಗಳೂರು,ಹಾಸನ ಜಿಲ್ಲಾ ಸಂಯುಕ್ತ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿ,ಮಾತನಾಡುತ್ತಾ ಅಹ್ಲುಸುನ್ನ ಎಂಬುದು ಸತ್ಯಪಥವಾಗಿದೆ,ಸಂಘಟಿತವಾಗಿ ಸುನ್ನತ್ ಜಮಾಅತ್ ನಲ್ಲಿ ಪ್ರವರ್ತಿಸಿ ಸುನ್ನೀ ಆದರ್ಶವನ್ನು ಜೀವನದಲ್ಲಿ ಅಳವಡಿಸುವುದು ಯುವ ಸಮೂಹದ ಗುರಿಯಾಗಬೇಕಾಗಿದೆ ಎಂದರು. ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅಧ್ಯಕ್ಷತೆ ವಹಿಸಿ ,ಮಾತನಾಡಿ ಎಸ್.ಎಸ್.ಎಫ್ ನಂತ ಸಂಘಟನೆಗಳಿಂದ ಸಮಾಜದಲ್ಲಿ ದೀನೀ ಪ್ರಬೋದನೆ ನಡೆಯುತ್ತಿರುವುದು ಶ್ಲಾಘನೀಯ.ಸುನ್ನತ್ ಜಮಾಅತ್ ನ ಪಸರಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ತರವಾಗಬೇಕೆಂದರು.ಮೌಲಾನಾ ಪೆರೋಡ್ ಮುಹಮ್ಮದ್ ಅಝ್ಹರಿ ಮುಖ್ಯ ಪ್ರಭಾಷಣ ಗೈದರು.ಸೈಯದ್ ಯಾಸೀನ್ ಅಸ್ಸಖಾಫ್…

Read More

UN NETWORKS ಉಳ್ಳಾಲ : ಭರತನಾಟ್ಯದಂತಹ ಕಲೆಯಲ್ಲಿ ತಮ್ಮ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಹೆತ್ತವರು ಹೆಚ್ಚಿನ ಒಲವು ತೋರಿಸಬೇಕು, ಈ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸುವ ಕಾರ್ಯ ಆಗಬೇಕಿದೆ ಎಂದು ನಾಟ್ಯನಿಕೇತನದ ಸ್ಥಾಪಕ ಶಾಂತಲಾ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು. ಅವರು ಕೊಲ್ಯ ನಾಟ್ಯನಿಕೇತನ ನೃತ್ಯ ಸಂಸ್ಥೆಯು 60ನೇ ವಾರ್ಷಿಕೋತ್ಸವದ ಅಂಗವಾಗಿ ಉಳ್ಳಾಲ ಅಂಬಿಕಾರೋಡ್‍ನ ಗಟ್ಟಿ ಸಮಾಜ ಭವನದಲ್ಲಿ ನಡೆದ `ನಾಟ್ಯ ಮೋಹನಂ’ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗೋವಾದ ನೃತ್ಯಗುರು ಶೀಲಾ ಜಗದೀಶ್ ಕುಮಾರ್ `ನಾಟ್ಯ ಮೋಹನಂ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭರತನಾಟ್ಯ ಎಲ್ಲಾ ಶಾಸ್ತ್ರೀಯ ನೃತ್ಯಕ್ಕೆ ತಾಯಿಯಾಗಿದ್ದು, ಈ ನೃತ್ಯ ಪ್ರಾಕಾರವನ್ನು ಗುರುಮುಖೇನ ಕಲಿತು ಸಾಧನೆ ಮಾಡಿದರೆ ಉತ್ತಮ ಕಲಾವಿದರಾಗಲು ಸಾಧ್ಯ ಇದನ್ನು ಗಮನದಲ್ಲಿಟ್ಟುಕೊಂಡು ಸಂಸ್ಕøತಿಯ ಉಳಿವಿನ ಜತೆಗೆ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಬೇಕಾಗಿದೆ ಎಂದರು. ಅಬ್ಬಕ್ಕ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ದಿನಕರ ಉಳ್ಳಾಲ್ ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಉಳಿಸುವ…

Read More

UN NETWORKS ತೊಕ್ಕೊಟ್ಟು: ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ 1,000 ಟನ್ ಮರಳನ್ನು ಉಳ್ಳಾಲ ಪೊಲೀಸರು ಪೆರ್ಮನ್ನೂರು ಗ್ರಾಮದ ಜೋಸೆಫ್ ನಗರ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಸುಮಾರು 1,000 ಟನ್ (100 ಲೋಡ್ ಮರಳು) ದಾಸ್ತಾನಿರಿಸಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಮರಳು ಒಟ್ಟು ರೂ.7,00,000 ಮೌಲ್ಯದ್ದೆಂದು ಅಂದಾಜಿಸಲಾಗಿದೆ. ಅಕ್ರಮ ಮರಳುಗಾರಿಕೆ, ಸಾಗಾಟ, ದಾಸ್ತಾನು, ಕಳವು ಮಾರಾಟದ ಬಗ್ಗೆ ಮಾಹಿತಿಗಳು ಇದ್ದಲ್ಲಿ ಠಾಣಾಧಿಕಾರಿ ಮತ್ತು ಇಲಾಖೆಯ ಮೇಲಧಿಕಾರಿಗಳಿಗೆ ನೇರವಾಗಿ ಮಾಹಿತಿ ನೀಡುವಂತೆ ಹಾಗೂ ನೀಡಲಾದ ಖಚಿತ ಮಾಹಿತಿ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರದಂದು ಪೆರ್ಮನ್ನೂರು ಗ್ರಾಮದ ಕಲ್ಲಾಪುವಿನ ಪಟ್ಲ ಎಂಬಲ್ಲಿಂದ 2,500 ಟನ್ ದಾಸ್ತಾನಿರಿಸಲಾದ ಮರಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

Read More

UN NETWORKS ತಲಪಾಡಿ: ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ದೀಪ ಪೂಜೆ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಎರಡು ಸಾವಿರ ಮಹಿಳೆಯರು ಪಾಲ್ಗೊಂಡಿದ್ದರು. ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ದೀಪಪೂಜೆ ನೆರವೇರಿಸಿದರು. ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠಾಧೀಶ ಧರ್ಮಪಾಲ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ , ಹಿಂದು ಜಾಗರಣಾ ವೇದಿಕೆ ಮುಖಂಡ ಜಗದೀಶ ಕಾರಂತ್, ವಿ.ಹಿಂ.ಪ ಮುಖಂಡ ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಸರಕಾರದ ನಿರಂತರ ಪರಿಶ್ರಮದ ಫಲವಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಾಡಹಬ್ಬದ ರೂಪವನ್ನು ಪಡೆದಿದ್ದು, ಈ ಮೂಲಕ ಮನೆ ಮನೆಗಳಲ್ಲಿ ಜಾಗೃತ ಧೀಕ್ಷೆಯಂತೆ ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಆಚರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಹಾಗೂ ಉಳ್ಳಾಲ ನಗರಸಭೆ ಸದಸ್ಯ ಫಾರುಕ್ ಉಳ್ಳಾಲ್ ಹೇಳಿದ್ದಾರೆ. ಅವರು ಉಳ್ಳಾಲದ ಯುನೈಟೆಡ್ ಸೋಷಿಯಲ್ ಮೂವ್‍ಮೆಂಟ್ ಟ್ರಸ್ಟ್ , ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ ಇದರ ಜಂಟಿ ಆಶ್ರಯದಲ್ಲಿ ಭಾನುವಾರ ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ-2018 ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪೋಲಿಯೋದಿಂದ ಶಿಶು ಮರಣಗಳಿಗೆ ಕಾರಣವಾದ ದಿನಗಳಿತ್ತು. ಈಗಲೂ ಅಂತಹ ಮಕ್ಕಳು ಕಷ್ಟದ ಬಾಳನ್ನು ಅನುಭವಿಸುತ್ತಿದ್ದಾರೆ. ಆದರೆ ಸರಕಾರದ ಶ್ರಮದ ಫಲವಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಹಿಂದೆ ಸಚಿವ ಯು.ಟಿ.ಖಾದರ್ ಅವರು ಆರೋಗ್ಯ ಸಚಿವರಾದ ಸಂದರ್ಭ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ಹಾಗೂ…

Read More

UN NETWORKS ಉಳ್ಳಾಲ: ಸರಕಾರದ ಇಚ್ಛಾಶಕ್ತಿಯ ಕೊರತೆಯಿಂದ ಪ್ಲಾಸ್ಟಿಕ್ ನಿಷೇಧ ಅಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಜನರೇ ಜಾಗೃತರಾಗಿ ಮುಂದಿನ ಪೀಳಿಗೆಗೆ ಆರೋಗ್ಯಕರ ವಾತಾವರಣ ನಿರ್ಮಿಸಲು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಶ್ರೀ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಸಂಯೋಜಕರಾದ ಸ್ವಾಮಿ ಏಕಗಮ್ಯಾನಂದಜಿ ಮಹಾರಾಜ್ ಹೇಳಿದರು. ಅವರು ಉಳ್ಳಾಲ ಮೊಗವೀರಪಟ್ನದ ಮೊಗವೀರ ಹಿರಿಯ ಪ್ರಾಥಮಿಕ ಶಾಲಾ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಹಾಗೂ ಬ್ರದರ್ಸ್ ಯುವಕ ಮಂಡಲ , ಶ್ರೀ ರಾಮಕೃಷ್ಣ ಮಿಷನ್ ಮಂಗಳೂರು, ನಗರಸಭೆ ಉಳ್ಳಾಲ, ಉಳ್ಳಾಲ ವಲಯದ ವಿವಿಧ ಮಹಿಳಾ ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಳ್ಳಾಲ ವಲಯದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಭಾನುವಾರ ಸ್ವಚ್ಛ ಭಾರತದ ಸಂಕಲ್ಪದೊಂದಿಗೆ ಉಳ್ಳಾಲದಲ್ಲಿ ಫೆ.9,10,11 ರಂದು ನಡೆಯಲಿರುವ ಬೀಚ್ ಉತ್ಸವ ನಡೆಯುವ ಸ್ಥಳದಲ್ಲಿ `ಉಳ್ಳಾಲ ಕಡಲ ಕಿನಾರೆ ಸ್ವಚ್ಛತಾ ಕಾರ್ಯಕ್ರಮ’ ಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಪ್ರಧಾನಿ ಕರೆ…

Read More

UN NETWORKS ದೇರಳಕಟ್ಟೆ : ಕಣಚೂರು ವಿದ್ಯಾಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ಕ್ರಿಯಾತ್ಮಕ ಕಲೆ ಮತ್ತು ಕರಕುಶಲ ಪ್ರದರ್ಶನ ಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಸಂಸ್ಥೆಯ ಟ್ರಸ್ಟೀ ಝೊಹರಾ ಮೋನು ಕರಕುಶಲಪ್ರದರ್ಶನಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಮುಖ್ಯಸ್ಥ ಯು. ಕೆ. ಮೋನು, ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್, ಶಾಹದಾ ರಹಿಮಾನ್, ಟ್ರಸ್ಟೀಗಳಾದ ಉಮಯ್ಯಾ ಬಾನು, ಫರೀದಾ ಬಾನು, ಮತ್ತು ಡಾ| ಅಬಿದಾ ಬಾನು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಕಲೆ ಮತ್ತು ಕರ ಕುಶಲ ಪ್ರದರ್ಶನದಲ್ಲಿ ಮರದ ತುಂಡಿನಲ್ಲಿ ಭಾವಚಿತ್ರ ಪ್ರದರ್ಶನ, ಕಾಗದದ ಕೌಶಲ್ಯ, ಗಾಜಿನಲ್ಲಿ ಚಿತ್ರಕಲೆ, ನಿಬ್ ಪೇಂಟಿಂಗ್, ಕಾಪಿ ಪೌಡರನ್ನು ಉಪಯೋಗಿಸಿ ಅದರಲ್ಲಿ ಬಿಡಿಸಿದ ಚಿತ್ರಕಲೆ, ಬುಡಕಟ್ಟು ಕಲೆ, ಟೀ-ಶರ್ಟ್ ಪೇಂಟಿಂಗ್, ಭಾರತಿಯ ಕಲೆ, ಲಾಗ್ ಪ್ಯಾಚ್ ಕಲೆ, ಪೆನ್ಸಿಲ್ ಶೇಡಿಂಗ್, ಕಸದಿಂದ ರಸ, ನೈಸರ್ಗಿಕ ದೃಶ್ಯಾವಳಿಯ ಚಿತ್ರಾವಳಿಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರುಗಳಾದ ಫ್ರೊ| ಇಕ್ಬಾಲ್ ಅಹಮ್ಮದ್ ಯು.ಟಿ, ವಿನಿಟಾ ಗಾಮ ರೋಸ್ ಮಥಾಯಸ್,…

Read More

UN NETWORKS ಕೊಣಾಜೆ: ವಿದ್ಯಾರ್ಥಿಗಳು ಮೊಬೈಲ್ ಹಾಗೂ ಟಿವಿಯಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುವುದರೊಂದಿಗೆ ಜೀವನದಲ್ಲಿ ಸಾಧನೆ ಮಾಡಿ ಸತ್ಪ್ರಜೆಯಾಗಿ ರೂಪುಗೊಳ್ಳಬೇಕು ಜೊತೆಗೆ ತಂದೆ ತಾಯಿಂದಿರ ಕನಸನ್ನು ನನಸು ಮಾಡಬೇಕು ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಕೊಣಾಜೆ ಪದವಿನ ದ.ಕ.ಜಿಲ್ಲಾ ಪಂಚಾಯಿತಿ ಸರಕಾರಿ ಪ್ರೌಢಶಾಲೆಯ ಆರ್.ಎಂ.ಎಸ್.ಎ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.ನಾವು ಬಡತನದಲ್ಲಿಯೇ ಹುಟ್ಟಬಹುದು ಆದರೆ ಬಳಿಕ ನಮ್ಮ ಪ್ರಾಮಾಣಿಕ ಸಾಧನೆ, ಪರಿಶ್ರಮದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸಿ ಅಭಿವೃದ್ಧಿಯನ್ನು ಕಾಣಬಹುದು. ಇದಕ್ಕೆಲ್ಲಾ ಶಿಕ್ಷಣವೇ ನಮಗೆ ಪ್ರೇರಕವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಇಬ್ರಾಹಿಂ ಕೋಡಿಜಾಲ್ ಅವರು, ಇಂದು ಸೌಹರ್ದತೆ, ಸಮನ್ವಯತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ನೀತಿ ಮೌಲ್ಯಗಳನ್ನು ತಿಳಿಯಪಡಿಸುವ ಕೆಲಸ ಮಾಡಬೇಕು. ಜೊತೆಗೆ ಸರ್ವಧರ್ಮಗಳ ಉತ್ತಮ ಅಂಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿ ಸಮನ್ವಯತೆಯನ್ನು…

Read More

UN NETWORKS ಉಳ್ಳಾಲ: ಉಳ್ಳಾಲ ಸಮುದ್ರ ಕಿನಾರೆಯಲ್ಲಿ ನಡೆಯಲಿರುವ ಬೀಚ್ ಉತ್ಸವವನ್ನು ಉಳ್ಳಾಲ ಉತ್ಸವವಾಗಿ ಆಚರಿಸುವ ಉದ್ದೇಶವಿದ್ದು, ಸರ್ವಧರ್ಮೀಯರ ಸಹಕಾರದಿಂದ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮೊಗವೀರ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವಜ್ರ ಮಹೋತ್ಸವ ಸಮಿತಿಯ ಮನೋಜ್ ಸಾಲ್ಯಾನ್ ಹೇಳಿದ್ದಾರೆ. ಅವರು ಮೊಗವೀರ ಹಳೇ ವಿದ್ಯಾರ್ಥಿ ಸಂಘ, ಬ್ರದರ್ಸ್ ಸ್ಪೋಟ್ರ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಘಗಳ ಸಹಕಾರದ ಜತೆಗೆ ಫೆ.10 ಮತ್ತು 11 ರಂದು ಉಳ್ಳಾಲ ಸಮುದ್ರ ಕಿನಾರೆಯಲ್ಲಿ ಜರಗಲಿರುವ ಉಳ್ಳಾಲ ಬೀಚ್ ಉತ್ಸವದ ಅಂಗವಾಗಿ ಮೊಗವೀರ ಶಾಲಾ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೀಚ್ ಉತ್ಸವದ ಅಂಗವಾಗಿ ಸ್ವಚ್ಛ ಭಾರತ ಕಾರ್ಯಕ್ರಮ ಫೆ.28 ರಂದು ನಡೆಯಲಿದ್ದು, ಇದರಲ್ಲಿ ಸ್ಥಳೀಯ ಸಂಘಟನೆಗಳು ಭಾಗವಹಿಸುವ ಭರವಸೆಯನ್ನು ನೀಡಿದರು. ಸ್ಥಳೀಯ ಮಹಿಳೆಯರಿಗೆ, ಪುರುಷರಿಗೆ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ದೋಣಿ ಚಲಾಯಿಸುವ ಸ್ಪರ್ಧೆ, ಮಡಕೆ ಒಡೆಯುವುದು, ಬಲೆ ಬೀಸುವ ಸ್ಪರ್ಧೆ, ಬೀಚ್ ತ್ರೋಬಾಲ್ ಪಂದ್ಯಾಟ, ಮೀನು ಹಿಡಿಯುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಬೀಚ್…

Read More