Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಅಂತಾರಾಜ್ಯ ಬೃಹತ್ ಜಾನುವಾರು ಸಾಗಾಟ ಜಾಲವನ್ನು ಬೇಧಿಸಿರುವ ಉಳ್ಳಾಲ ಪೊಲೀಸರು 20 ಕೋಣ , ಎಮ್ಮೆಗಳ ಸಹಿತ ಇಬ್ಬರು ಆರೋಪಿಗಳನ್ನು ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಚೆಂಗಳದ ಚೇರ್ಕಳ ನಿವಾಸಿ ದಿವಾಕರನ್ ನಾಯರ್ (47) ಮತ್ತು ತೆಕ್ಕಿಲ್ ನಿವಾಸಿ ತೈನುಲ್ ಅಬಿದಿನ್ (33) ಬಂಧಿತರು. ಇಬ್ಬರು ಸೋಲಾಪುರದಿಂದ ಕೇರಳ ಕಡೆಗೆ ಬೃಹತ್ ಗಾತ್ರದ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕೋಣ ಮತ್ತು ಎಮ್ಮೆಗಳನ್ನು ಕೂಡಿ ಹಾಕಿ ಕೊಂಡೊಯ್ಯುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು , ಕೋಟೆಕಾರು ಚೆಕ್ ಪೋಸ್ಟ್ ಸಮೀಪ ಗುರುವಾರ ನಸುಕಿನ ಜಾವ ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ದಾಖಲೆಗಳಿಲ್ಲದೆ ರಾತ್ರೋರಾತ್ರಿ ಜಾನುವಾರು ಸಾಗಾಟ ನಡೆಸುತ್ತಿದ್ದು, ಸೋಲಾಪುರದ ಹಳ್ಳಿಗಳಿಂದ ಕಳವು ನಡೆಸಿ ಜಾನುವಾರು ಸಾಗಾಟ ನಡೆಸುತ್ತಿರುವುದಾಗಿ ಸಂಶಯಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಲಾರಿ ರೂ. 15 ಲಕ್ಷ, ಜಾನುವಾರು ರೂ. 4ಲಕ್ಷ ಮತ್ತು 11,000 ನಗದು ಸೇರಿದಂತೆ ಒಟ್ಟು 19…

Read More

UN NETWORKS ಉಳ್ಳಾಲ : ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರತೀ ಕ್ಲಸ್ಟರ್ ಸಂಪನ್ಮೂಲ ಕೇಂದ್ರಕ್ಕೆ ಟ್ಯಾಬ್ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದ್ದು, ಸರಕಾರ ಟ್ಯಾಬ್ ನೀಡಿದರೆ ಶಿಕ್ಷಕರಿಗೆ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಶಿಕ್ಷಣ ಗೀತಾ ಶ್ಯಾನುಭೋಗ್ ತಿಳಿಸಿದರು. ಮುನ್ನೂರು ಗ್ರಾಮ ಪಂಚಾಯತ್‍ನ 2017-18ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯಲ್ಲಿ ನೋಡೆಲ್ ಅ„ಕಾರಿಯಾಗಿ ಭಾಗವಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಕಂಪ್ಯೂಟರ್ ಇಲ್ಲದೆ ಸೈಬರ್‍ನ ಮೊರೆ ಹೋಗಬೇಕಾದ ಅವಶ್ಯಕತೆಯಿದೆ ಎನ್ನುವ ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಿದ ಅವರು ಆಧುನಿಕ ತಂತ್ರಜ್ಞಾನವಾದ ಆ್ಯಂಡ್ರಾಯ್ಡ್ ಮೊಬೈಲ್‍ನ ಉಪಯೋಗ ಹೆಚ್ಚಿನ ಶಿಕ್ಷಕರಿಗೆ ಆರಿವು ಇರುವುದರಿಂದ ಶಾಲೆಗೆ ಸಂಬಂ„ಸಿದ ಕೆಲಸ ಕಾರ್ಯಗಳನ್ನು ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿ ನಲ್ಲಿ ಕಂಪ್ಯೂಟರ್‍ನಂತಹ ಮೂಲಭೂತ ಸೌಕರ್ಯದಿಂದ ಕೊರತೆಯಿರುವ ಶಾಲೆಗಳಿಗೆ ಸಹಕಾರಿಯಾಗುವಂತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಟ್ಯಾಬ್‍ನ ವ್ಯವಸ್ಥೆ ಮಾಡುವುದರಿಂದ ಆವ್ಯಪ್ತಿಯ ಶಾಲಾ ಮುಖ್ಯ ಶಿಕ್ಷಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದರು. ಗ್ರಾಮಸ್ಥರೊಬ್ಬರು ಶಿಕ್ಷಕರಿಗೆ ಆಂತರ್ಜಾಲದ ಸಮಸ್ಯೆಯೊಂದಿಗೆ…

Read More

UN NETWORKS ಮಂಗಳೂರು: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಗೊಂದಲಕ್ಕೆ ಕಾರಣವಾಗಿತ್ತು. ತುಳುನಾಡಿನ ಬಗ್ಗೆ ಹಾಗೂ ತುಳುವಿನ ಬಗ್ಗೆ ಅವಮಾನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದ ಕ.ರ.ವೇ ಬೆಂಗಳೂರು ಘಟಕದ ಸಂಘಟನಾ ಕಾರ್ಯದರ್ಶಿ ಜಾನ್ ಎಂಬಾತನಿಗೆ ಬುದ್ಧಿ ಕಲಿಸಲು ಕಾಯುತ್ತಿದ್ದ ತುಳುನಾಡು ಸಂಘಟನೆಗಳು ಈ ಅವಕಾಶವನ್ನು ರೈಲು ನಿಲ್ದಾಣದಲ್ಲಿ ಸರಿಯಾಗಿ ಬಳಸಿಕೊಂಡಿತು. ರೈಲು ತಡೆ ಪ್ರತಿಭಟನೆಗೆ ಬಂದಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಜಾನ್ ವಿರುದ್ಧ ಕೆಂಡಾಮಂಡಲವಾದ ತುಳುನಾಡ ಸಂಘಟನೆಗಳು ಆತನ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಜಿಲ್ಲೆಯ ಕ.ರ.ವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಬೆವರಿಳಿಸಿದ್ದಾರೆ. ಕ.ರ.ವೇ ಜಿಲ್ಲಾಧ್ಯಕ್ಷ ಅನಿಲ್ ದಾಸ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ತುಳುನಾಡ ಸಂಘಟನೆಗಳು ತುಳುನಾಡಿನ ಬಗ್ಗೆ ಅವಮಾನಕಾರಿ ಹೇಳಿಕೆ ನೀಡುವವರ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ಎತ್ತಿನಹೊಳೆ ಯೋಜನೆಯ ವಿರುದ್ಧ ಪ್ರತಿಭಟನೆಗೆ ಬೆಂಬಲ ನೀಡದ ಜಿಲ್ಲೆಯ ಕ.ರ.ವೇ ಪದಾಧಿಕಾರಿಗಳು ಇದೀಗ…

Read More

UN NETWORKS ನವದೆಹಲಿ: ಭಾರತದ ಅತಿದೊಡ್ಡ ಕಾರು ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಮೊದಲ ಎಲೆಕ್ಟ್ರಿಕ್ ಕಾರಿನ ಮಾದರಿಯನ್ನು ಮುಂದಿನ ತಿಂಗಳು ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಕ್ಕೆ ಇಡಲಿದೆ. 2 ಸೀಟಿನ ಇ-ಸರ್ವೈವರ್ ಎಸ್‌ಯುವಿ ಕಾರಿನ ಮಾದರಿಯನ್ನು ಕಂಪನಿ ಸಿದ್ಧಪಡಿಸಿದೆ. ಈ ಕಾರು ಭವಿಷ್ಯದ ಪರಿಕಲ್ಪನೆ ಹೊಂದಿದ್ದು, ಹೊಸ ತಂತ್ರ ಜ್ಞಾನವನ್ನು ಒಳಗೊಂಡಿದೆ. ಸ್ಥಳೀಯ ಘಟಕಗಳು, ಬ್ಯಾಟರಿಗಳು ಮತ್ತು ಮರು ಬಳಕೆ ಬ್ಯಾಟರಿಗಳು ಸೇರಿದಂತೆ ಸಂಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಕಂಪನಿ ಬದ್ಧವಾಗಿದೆ ಎಂದು ಮಾರುತಿ ತಿಳಿಸಿದೆ.

Read More

UN NETWORKS ಮಂಗಳೂರು: ತುಳು ಭಾಷೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೀಳು ಶಬ್ದಗಳಿಂದ ನಿಂದನೆ ಮಾಡಿರುವ ಕ.ರ.ವೇ ಕಾರ್ಯಕರ್ತ ಜಾನ್ ನನ್ನು ಸಂಘಟನೆಯಿಂದ ಉಚ್ಛಾಟಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಹೇಳಿದ್ದಾರೆ. ಕನ್ನಡ ಭಾಷೆಯ ಸೋದರ ಭಾಷೆಯಾದ ತುಳು ಭಾಷೆ ಮತ್ತು ತುಳುನಾಡಿನ ಜನರ ಬಗ್ಗೆ ಕರವೇ ಅಪಾರವಾದ ಗೌರವ ಹೊಂದಿದೆ. ಸಂವಿಧಾನದ 8 ನೇ ಪರಿಚ್ಛೇದದಲ್ಲಿ ತುಳು ಮತ್ತು ಕೊಡವ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಕರವೇ ಕೇಂದ್ರ ಸರಕಾರವನ್ನು ಹಲವು ಬಾರಿ ಒತ್ತಾಯಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಕನ್ನಡಪರ ಹೋರಾಟಗಳ ಕುರಿತಾಗಿ ಅತ್ಯಂತ ಕೀಳು ಶಬ್ದಗಳಲ್ಲಿ ನಿಂದನೆ ಮಾಡುವ ಕೆಲಸ ಕನ್ನಡಿಗರಿಂದಲೇ ನಡೆಯುತ್ತಿರುವುದು ನೋವಿನ ಸಂಗತಿ. ಕರವೇ ಕಾರ್ಯಕರ್ತ ಜಾನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆಯ ಬಗ್ಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿರುವುದು ತಪ್ಪಾಗಿದೆ. ಇದು ಜಾನ್ ಹೇಳಿಕೆಯೇ ಹೊರತು ಕರವೇ ನಿಲುವಲ್ಲ. ಅದಕ್ಕಾಗಿ ಜಾನ್ ನನ್ನು ಕರವೇ ಯಿಂದ ಉಚ್ಛಾಟನೆ ಮಾಡಲಾಗಿದೆ. ಅದಕ್ಕಾಗಿ…

Read More

UN NETWORKS ಉಳ್ಳಾಲ: ಎಸ್ಕೆಎಸ್ಸೆಎಸ್ಸೆಎಫ್ ಉರುಮಣೆ ಶಾಖೆ ವತಿಯಿಂದ ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆಯು ಸೋಮವಾರ ಬಾಪು ಉಸ್ತಾದ್ ವೇದಿಕೆ ಶಂಸುಲ್ ಉಲಮಾ ನಗರ ಉರುಮಣೆಯಲ್ಲಿ ನಡೆಯಿತು. ಕಾರ್ಯಕ್ರಮದ ನೇತೃತ್ವವನ್ನು ಎಸ್ಕೆಎಸ್ಸೆಸ್ಸೆಎಫ್ ಉರುಮಣೆ ಶಾಖೆ ಉಪಾಧ್ಯಕ್ಷರಾದ ಅಬೂಬಕ್ಕರ್ ದಾರಿಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಸ್ಸಯ್ಯದ್ ಅಮೀರ್ ತಂಙಳ್ ಅಲ್‍ಬುಖಾರಿ ಕಿನ್ಯ ಪ್ರಾರ್ಥನೆಯನ್ನು ನೆರವೇರಿಸಿದರು. ಎಸ್ಕೆಎಸ್ಸೆಸ್ಸೆಎಫ್ ಉರುಮಣೆ ಶಾಖೆ ಅಧ್ಯಕ್ಷ ಹಸೈನಾರ್ ಉರುಮಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಬ್ದುಲ್ ಖಾದರ್ ಅಶ್ವಾಫಿ ಉದ್ಘಾಟಿಸಿದರು. ಅಬ್ದುರ್ರಹ್ಮಾನ್ ಫೈಝಿ ಅಸೈ ಪ್ರಾಸ್ತಾವಿಕ ಭಾಷಣ ಮಾಡಿದರು. ಅಬೂಬಕರ್ ಸಿದ್ದೀಖ್ ಅಝ್‍ಹರಿ ಪಯ್ಯನ್ನೂರು ಮುಖ್ಯ ಪ್ರಭಾಷಣ ಮಾಡಿದರು. ಸಮೀಮ್ ತಂಙಳ್ ಕುಂಬೋಳ್ ಸಮಾರೋಪ ಪ್ರಾರ್ಥನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ದೇರಳಕಟ್ಟೆ ರೇಂಜ್ ಮದ್ರಸ ಮ್ಯಾನೇಜ್‍ಮೆಂಟ್ ಅಧ್ಯಕ್ಷರಾದ ಮೊೈದಿನ್ ಕುಂಞ ಮರಾಠಿಮೂಲೆ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಮುಹಮ್ಮದ್ ಮೋನು, ಎಸ್ಕೆಎಸ್ಸೆಸ್ಸೆಎಫ್ ಮಂಜೇಶ್ವರ ಕೌನ್ಸಿಲರ್ ಪಿ.ಎಂ ಅಲಿ ಮುಸ್ಲಿಯಾರ್, ಇಸ್ಹಾಕ್ ನಾಟೆಕಲ್ ಮುಂತಾದವರು ಉಪಸ್ಥಿತರಿದ್ದರು. ಎಸ್ಕೆಎಸ್ಸೆಸ್ಸೆಫ್ ಉರುಮಣೆ ಶಾಖೆ ಉಪಾಧ್ಯಕ್ಷರಾದ…

Read More

UN NETWORKS ತಲಪಾಡಿ: ಸಾಮಾಜಿಕ ಸಾಮರಸ್ಯದ ಜತೆಗೆ ಸಮಾಜವನ್ನು ಒಟ್ಟುಗೂಡಿಸಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮಾತೃಶಕ್ತಿಯನ್ನು ಬದಲಾಯಿಸುವ ಉದ್ದೇಶದಿಂದ ಜ.28 ರಂದು ಸಂಜೆ 4 ಕ್ಕೆ ದೇವಿನಗರ ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆ ಇದರ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ `ದೀಪ ಪೂಜೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ ಹೇಳಿದ್ದಾರೆ. ಅವರು ತಲಪಾಡಿ ದೇವಿನಗರದ ಶಾರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಎಲ್ಲದರಲ್ಲೂ ಬದಲಾವಣೆಯ ಜತೆಗೆ ವ್ಯವಸ್ಥೆಗಳು ಬದಲಾವಣೆಯಾಗುತ್ತಿದೆ. ಇದರಿಂದ ಯುವಸಮುದಾಯ ಸಂಸ್ಕøತಿಯ ಅರಿವಿಲ್ಲದೆ ಹಾದಿತಪ್ಪುವಂತಹ ಕೆಲಸಕ್ಕೆ ಮುಂದಾಗುತ್ತಿದೆ. ಆದ್ದರಿಂದ ದೀಪ ಪೂಜೆ ಅನ್ನುವ ಸಂಸ್ಕøತಿಯ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮದ ಮೂಲಕ 2,000 ದಷ್ಟು ಮಹಿಳೆಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ಶಾರದಾ ವಿದ್ಯಾ ಸಮೂಹ ಸಂಸ್ಥೆಗಳಲ್ಲಿ ಆಧುನಿಕ ಶಿಕ್ಷಣದ ಜತೆಗೆ ಧಾರ್ಮಿಕ ಪಂಚಮುಖಿ ಶಿಕ್ಷಣವನ್ನು ನೀಡುವಂತಹ ಕೆಲಸಗಳು ಆಗುತ್ತಿವೆ. ಸಮಾಜದ ಹಿತದೃಷ್ಠಿಯಿಂದ ತಾಯಂದಿರನ್ನು ಒಟ್ಟುಗೂಡಿಸಿ ಸಾಮಾಜಿಕ ಬದಲಾವಣೆ ನಡೆಸುವ ಪ್ರಾಮಾಣಿಕ…

Read More

UN  NETWORKS ಉಳ್ಳಾಲ: ಸಮಾಜವನ್ನು ಒಗ್ಗೂಡಿಸಿ ಸಾಮರಸ್ಯ ವನ್ನು ಸಾರುತ್ತಾ ನಿರಂತರ 100 ವರ್ಷಗಳ ಸೇವೆ ಸಲ್ಲಿಸಿದ ಇಗರ್ಜಿಯಲ್ಲಿ ಸೇವೆ ಸಲ್ಲಿಸಿದ ಸರ್ವರ ಕಾರ್ಯ ಶ್ಲಾಘನೀಯ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಶತಮಾನೋತ್ಸವ ಸಮಾರಂಭದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು. ಕೆಲ ಸಮಾಜಘಾತುಕ ಶಕ್ತಿಗಳು ಸಮಾಜವನ್ನು ಒಡೆಯುವ ಕಾರ್ಯ ಮಾಡುತ್ತಿದೆ. ಇಂತಹ ಶಕ್ತಿಗಳ ಎದುರಾಗಿ ಸಂತ ಸೆಬೆಸ್ತಿಯನ್ನರ ಧರ್ಮಕೇಂದ್ರ ಎಲ್ಲರನ್ನು ಒಟ್ಟುಗೂಡಿಸುವ ಪ್ರಯತ್ನ ನಡೆಸುವ ಕಾರ್ಯ ಶ್ಲಾಘನೀಯ . ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ದೊರೆತಿದೆ ಎಂದರು. ಸಮಾರಂಭದ ಬಳಿಕ ಚಚ್ 9ನಲ್ಲಿ ಆಯೋಜಿಸಿದ್ದ ಸೌಹಾರ್ದ ಔತಣಕೂಟದಲ್ಲಿಯೂ ಮಾಜಿ ಪ್ರಧಾನಿಗಳು ಭಾಗವಹಿಸಿ ಊಟ ಸವಿದರು. ಈ ಸಂದರ್ಭ ಪೆರ್ಮನ್ನೂರು ಧರ್ಮ ಕೇಂದ್ರದ ಧರ್ಮಗುರು ಫಾ. ಜೆ.ಬಿ ಸಲ್ದಾನ್ಹ, ಜೆಡಿಎಸ್ ಮುಖಂಡರುಗಳಾದ ಬಿ.ಎಂ ಫಾರುಕ್, ಹೈದರ್ ಪರ್ತಿಪ್ಪಾಡಿ, ಗಂಗಾಧರ್ ಉಳ್ಳಾಲ್, ಮುಂತಾದವರು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಕೊಲ್ಯ ಸೋಮೇಶ್ವರದ ನಾಟ್ಯನಿಕೇತನ ಇದರ ವಜ್ರ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ನಾಟ್ಯಮೋಹನಂ ಕಾರ್ಯಕ್ರಮ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ಜ.26 ರಂದು ಮಧ್ಯಾಹ್ನ 3.30 ರಿಂದ ನಡೆಯಲಿದೆ. ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಗುರು ಉಳ್ಳಾಲ ಶ್ರೀ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ನಾಟ್ಯಮೋಹನಂ ನಾಟ್ಯನಿಕೇತನದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ನೃತ್ಯಗುರು ಶೀಲಾ ಜಗದೀಶ್ ಗೋವಾ ಉದ್ಘಾಟಿಸಲಿದ್ದಾರೆ, ಅಧ್ಯಕ್ಷತೆಯನ್ನು ಆನಂದಾಶ್ರಮ ಹೈಸ್ಕೂಲಿನ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಫಾರಂ ಫಾರ್ ಬ್ಲೈಂಡ್ ಇದರ ನಿರ್ದೇಶಕ ಪಿ.ಗುರುರಾಜ ರಾವ್ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಹಾಸ ರೈ, ಉಳ್ಳಾಲ ಅಬ್ಬಕ್ಕ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ದಿನಕರ ಉಳ್ಳಾಲ್, ರಥಬೀದಿ ಕಾಲೇಜು ಮಂಗಳೂರು ಇದರ ಇತಿಹಾಸ ವಿಭಾಗ ಮುಖ್ಯಸ್ಥರಾದ ಡಾ.ನವೀನ್ .ಎನ್.ಕೊಣಾಜೆ, ಜಿಲ್ಲಾ ಪಂಚಾಯತ್ ಸದಸ್ಯ ಧನಲಕ್ಷ್ಮೀ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಹುಮುಖ…

Read More

UN NETWORKS ಉಳ್ಳಾಲ: ಶ್ರೀ ಜೈ ವೀರಾಂಜನೇಯ ವ್ಯಾಯಾಮಶಾಲೆಯ 33ನೇ ಮಹಾ ಸಭೆಯು ಭಾನುವಾರ ಕುತ್ತಾರು ಶ್ರೀ ಜೈ ವೀರಾಂಜನೇಯ ವ್ಯಾಯಾಮಶಾಲೆಯಲ್ಲಿ ಭಾನುವಾರ ನಡೆಯಿತು. ನೂತನ ಅಧ್ಯಕ್ಷರಾಗಿ ದಿವ್ಯನ್ ತೇವುಲ ಪುನರಾಯ್ಕೆಗೊಂಡಿದ್ದಾರೆ. ಗೌರವಾಧ್ಯಕ್ಷರಾಗಿ ಗಣೇಶ್ ಟೈಲರ್, ಕಾರ್ಯದರ್ಶಿಯಾಗಿ ಸುರೇಶ್ ತಳೆನೀರು, ಉಪಾಧ್ಯಕ್ಷರಾಗಿ ನವೀನ್ ಗಿರಿಯಮೂಲೆ, ಜೊತೆ ಕಾರ್ಯದರ್ಶಿಯಾಗಿ ದೀಕ್ಷಿತ್ ತೇವುಲ, ಕೋಶಾಧಿಕಾರಿಯಾಗಿ ದಿವ್ಯರಾಜ್ ತೇವುಲ, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷಿತ್ ತೇವುಲ, ಅಕ್ಷಯ್ ಗಿರಿಯಮೂಲೆ ಪೂಜಾ, ಸಂಚಾಲಕರಾಗಿ ಮನೋಜ್ ತೇವುಲ, ಶ್ರಾವಣ್ ತೇವುಲ ಹಾಗೂ 10 ಸದಸ್ಯರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Read More