Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ರೈಲು ಬಡಿದು ಕಾಲು ತುಂಡಾಗಿ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರೈಲ್ವೇ ಹಳಿಯಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವೃದ್ಧರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವೃದ್ಧರು ರೈಲು ಹಳಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳಿಯರೊಬ್ಬರು ನೋಡಿ ಪೊಲೀಸರಿಗೆ ಮತ್ತು 108 ಆ್ಯಂಬುಲೆನ್ಸ್‍ಗೆ ಮಾಹಿತಿ ನಿಇಡಿದ್ದು, ಸ್ಥಳೀಯರ ಸಹಕಾರದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಅಪರಿಚಿತರಾಗಿರುವ ವೃದ್ಧರು ಕುಂಪಲ ಮೂಲದವರು ಎಂದು ತಿಳಿದು ಬಂದಿದೆ. ರೈಲು ಹಳಿಯಲ್ಲೇ ಉಳಿದ ಪಾದ : ರೈಲು ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವೃದ್ಧರನ್ನು ಆಸ್ಪತ್ರೆಗೆ ಸಾಗಿಸುವ ಭರದಲ್ಲಿ ತುಂಡಾದ ಕಾಲಿನ ಪಾದ ಘಟನಾ ಸ್ಥಳದಲ್ಲೇ ಉಳಿದಿತ್ತು. ಪಾದ ಉಳಿದ ಬಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿಯಂತೆ ರಾತ್ರಿ ವೇಳೆ ಆಗಮಿಸಿದ ಪೊಲೀಸರು ಸುಮಾರು ಒಂದು ಗಂಟೆಯ ಹುಡುಕಾಟದ ಬಳಿಕ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ವಿಶ್ವ ತಾಯಂದಿರ ದಿನದ ಅಂಗವಾಗಿ ರೋಟರಿ ಕ್ಲಬ್ ಮಂಗಳೂರು, ರೋಟರಿ ಸಮುದಾಯದಳ ಕುಂಪಲ, ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ , ಕೇಸರಿ ಮಾತೃಮಂಡಳಿಯ ವತಿಯಿಂದ ಸೋಮೇಶ್ವರ ಹಾಗೂ ಕೋಟೆಕಾರು ಗ್ರಾಮ ವ್ಯಾಪ್ತಿಯ 30 ಅಂಗನವಾಡಿ ಹಾಗೂ 2 ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಪುಟ್ಟಯಂತ್ರ ಅಳವಡಿಸಿದ ಬಕೆಟ್‍ಗಳನ್ನು ಕೇಸರಿ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಕೇಸರಿ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ನಾರಾಯಣ ಕುಂಪಲ ಮಾತನಾಡಿ ಅಂಗನವಾಡಿಯ ಪುಟ್ಟ ಮಕ್ಕಳಿಗೆ ಮಾತೃ ಮಂಡಳಿಯೊಂದಿಗೆ ಸೇವೆ ಸಲ್ಲಿಸುವ ಕಾಯಕ ಶ್ರೇಷ್ಠ ಕಾರ್ಯ. ಮಕ್ಕಳಿಗೆ ಶುದ್ಧ ನೀರು ನೀಡುವುದು ತುಂಬಾ ಅವಶ್ಯಕವಾಗಿರುವುದರಿಂದ ಇದರ ಸದುಪಯೋಗವನ್ನು ಪಡೆದು ಆರೋಗ್ಯವಂತ ಪ್ರಜೆಗಳ ನಿರ್ಮಾಣವಾಗಲಿ ಎಂದು ವಿಶ್ವ ತಾಯಂದಿರ ದಿನದ ಅಂಗವಾಗಿ ಎಲ್ಲಾ ತಾಯಂದಿರಿಗೂ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಶಿವಪ್ರಸಾದ್ ವಹಿಸಿ ಮಾತನಾಡಿ ಮಂಗಳೂರಿನ ರೋಟರಿ ಕ್ಲಬ್ ನ ಜೆ.ಟಿ. ಪೌಂಡೇಶನ್ ರವರ ಸಹಕಾರವನ್ನು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತಲಪಾಡಿ: ಕೇಂದ್ರ ಸರಕಾರದ ಕೌಶಲ್ಯ ಮತ್ತು ಉದ್ದಿಮೆ ಖಾತೆ ಸಚಿವ ರಾಜೀವ ಪ್ರತಾಪ್ ರೂಡಿ ಅವರು ಕೇರಳದಿಂದ ಕರ್ನಾಟಕಕ್ಕೆ ಆಗಮಿಸಿದಾಗ ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಮಿತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ ಉಳ್ಳಾಲ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ, ತಾಲೂಕು ಪಂಚಾಯತ್ ಸದಸ್ಯ ನವೀನ್ ಪಾದಲ್ಪಾಡಿ, ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಸುಳ್ಳೆಂಜೀರು, ಹಿರಿಯ ಮುಖಂಡರಾದ ಸೀತಾರಾಮ ಬಂಗೇರ, ವಿನಯ  ನಾಯಕ್, ಡಾ| ಮುನೀರ್ ಬಾವ, ಮೋಹನ್‍ರಾಜ್ ಕೆ.ಆರ್., ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು, ಸಂಜೀವ ಶೆಟ್ಟಿ ಅಂಬ್ಲಮೊಗರು, ಹೇಮಂತ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಆನಂದ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಜನಾಡಿ:ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು, ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಬುಧವಾರ ನಡೆದಿದೆ. ಮಂಜನಾಡಿ ಗ್ರಾಮದ ಕಲ್ಕಟ್ಟದ ತಟ್ಲ ತಿರುವು ಸಮೀಪ ಕಾರೊಂದು ಎದುರಿನಲ್ಲಿದ್ದ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರೆ, ಸಹಸವಾರ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಯುವಕನೋರ್ವ ಮನೆ ಆವರಣದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಮೂರುಕಟ್ಟೆ ಸಮೀಪದ ಬಲ್ಯ ರಸ್ತೆಯಲ್ಲಿ ಬುಧವಾರ ನಸುಕಿನ ಜಾವ ಬೆಳಕಿಗೆ ಬಂದಿದೆ. ಕೆಎಸ್‍ಆರ್‍ಟಿಸಿಯ ನಿವೃತ್ತ ಉದ್ಯೋಗಿ ಶಿವರಾಮ ಎಂಬವರ ಪುತ್ರ ಧನಂಜಯ (30) ಆತ್ಮಹತ್ಯೆಗೈದವರು. ಮಂಗಳವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಅವರು ಮಂಗಳವಾರ ನಸುಕಿನ ಜಾವ ಮನೆ ಹಿಂಬದಿಯಲ್ಲಿರುವ ಹೆಚ್ಚುವರಿ ಕೊಠಡಿಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧನಂಜಯ್, ಆರ್ಥಿಕ ಅಡಚಣೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ವಾರದ ಹಿಂದಷ್ಟೇ ಸಹೋದರಿಯ ವಿವಾಹ ಸಮಾರಂಭ ಮನೆಯಲ್ಲಿ ನಡೆದಿದ್ದು, ಅದಕ್ಕಾಗಿ ಹಾಕಿದ್ದ ತೋರಣಗಳು ಇನ್ನೂ ತೆಗೆಯುವ ಮುನ್ನವೇ ಧನಂಜಯ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಬದ್ರಿಯಾ ಕೇಂದ್ರ ಜುಮಾ ಮಸೀದಿ ಹಾಗೂ ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ಜಂಟಿ ಅಶ್ರಯದಲ್ಲಿ ಮಜ್ಲಿಸುನ್ನೂರು ಹಾಗೂ ಶಂಸುಲ್ ಉಲಮಾ ಮೌಲಿದ್ ವಾರ್ಷಿಕದ ಪ್ರಯುಕ್ತ 2ದಿನಗಳ ಧಾರ್ಮಿಕ ಪ್ರಭಾಷಣ ಮೇ 19,20ರಂದು ರಾತ್ರಿ8.30ಕ್ಕೆ ದೇರಳಕಟ್ಟೆ ಬದ್ರಿಯಾ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಮೇ 19ರಂದು ಯು.ಕೆ ಮುಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮತ್ತು ಮೇ20ರಂದು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಮಯ್ಯನ್ನೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಅಸ್ಸಯ್ಯದ್ ಹಾರಿಸ್ ಅಲಿ ಶಿಹಾಬ್ ತಂಙಳ್, ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಅಸ್ಸಯ್ಯದ್ ಅಲ್-ಹಾದಿ ತಂಙಳ್ ಮೊಗ್ರಾಲ್, ಅಸ್ಸಯ್ಯದ್ ತ್ವಾಹಾ ಜಿಫ್ರಿ ತಂಙಳ್ ಅಡ್ಯಾರ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖಾಧ್ಯಕ್ಷ ನೌಫಲ್ ಬಿ.ದೇರಳಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ರೆಂಜಾಡಿ ಮಸೀದಿ ಬಳಿ ನಿವಾಸಿ ಎ.ಅನ್ಸಾರ್ (28) ಬಂಧಿತ. ಈತ ದೇರಳಕಟ್ಟೆ ಕಾನಕೆರೆಯಿಂದ ಬರುತ್ತಿದ್ದ ರಿಕ್ಷಾ ಪೊಲೀಸ್ ಜೀಪನ್ನು ಕಂಡ ಕೂಡಲೇ ಅತಿವೇಗವಾಗಿ ಚಲಿಸಲು ಆರಂಭವಾಗಿತ್ತು. ಸಂಶಯಗೊಂಡ ಪೊಲೀಸರು ಬೆನ್ನಟಿದಾಗ ರಿಕ್ಷಾವನ್ನು ಅಲ್ಲೇ ಬಿಟ್ಟು ಕೈಯಲ್ಲಿ ಪ್ಲಾಸ್ಟಿಕ್ ಚೀಲ ಹಿಡಿದುಕೊಂಡು ಪರಾರಿಯಾಗಲು ಯತ್ನಿಸಿದ್ದ. ಆದರೆ ಬೆಂಬಿಡದ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಅತನ ಕೈಯಲ್ಲಿದ್ದ 350 ಗ್ರಾಂ ಗಾಂಜಾ ಹಾಗೂ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ಆರೋಪಿ ಗಾಂಜಾ ಸರಬರಾಜು ಮಾಡುತ್ತಿದ್ದ ಉಪ್ಪಳದ ಮುನೀರ್ ಎಂಬಾತ ತಲೆಮರೆಸಿಕೊಂಡಿದ್ದಾನೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಯೇನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಆಶ್ರಯದಲ್ಲಿ ಯೇನೆಪೋಯ ನರ್ಸಿಂಗ್ ಕಾಲೇಜಿನ ಮಕ್ಕಳ ಆರೋಗ್ಯ ಶುಶ್ರೂಷಾ ವಿಭಾಗವು “ತಾಯಿ ಮತ್ತು ಅವರ ನವಜಾತ ಶಿಶುವಿನ ಆರೈಕೆಯಲ್ಲಿ-ಶುಶ್ರೂಷಕರ ಪಾತ್ರ ಎಂಬ ವಿಷಯದ ಬಗ್ಗೆ ಒಂದು ದಿನದ ಪ್ರಾದೇಶಿಕ ಕಾರ್ಯಾಗಾರ ಆಕ್ಟ್ಸ್ ಯೆನ್ ಆಡಿಟೋರಿಯಂನಲ್ಲಿ ನಡೆಯಿತು. ಮಕ್ಕಳ ಆರೋಗ್ಯ ನರ್ಸಿಂಗ್ ಇಲಾಖೆಯ ಪ್ರೊಫೆಸರ್ ಉಮಾರಾಣಿ ಅವರು ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ಪ್ರೊ ಎಚ್.ಓ.ಡಿ. ಡಾ. ಪ್ರೆಮಾ ಡಿ ಕುನ್ಹ ಅವರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಪ್ರೆಮಾ ಡಿ ಕುನ್ಹಾ ” ತಾಯಿ ಮತ್ತು ಮಗುವಿನ ಸುರಕ್ಷತೆ ಹಾಗೂ ಆರೋಗ್ಯಕ್ಕೆ ಜನನ ಯೋಜನೆ” , ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ನ ಸಹಾಯಕ.ಪ್ರೊಫೆಸರ್, ಯಶೋಧ ಸತೀಶ್ “ನವಜಾತ ಶಿಶುಗಳ ಬೆಳವಣಿಗೆಯ ಆರೈಕೆ: ಸವಾಲುಗಳು ಮತ್ತು ಅತ್ಯುತ್ತಮ ಅಭ್ಯಾಸಗಳ ಹಂಚಿಕೆ , ಯೇನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಮುಖ್ಯ ನರ್ಸಿಂಗ್ ಅಧಿಕಾರಿ ಐಲೀನ್…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಮಂಗಳವಾರ ಚುನಾವಣೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್‍ನ ತೊಕ್ಕೊಟ್ಟಿನಲ್ಲಿರುವ ಕಚೇರಿಯಲ್ಲಿ ನಡೆದಿದ್ದು ಚುನಾವಣೆ ವೇಳೆ ಪೊಲೀಸರು ಮತ್ತು ಅಭ್ಯರ್ಥಿಪರ ಬೆಂಬಲಿಗರ ಮಧ್ಯ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಯೂತ್ ಕಾಂಗ್ರೆಸ್‍ನ ರಾಜ್ಯ, ಜಿಲ್ಲೆ ಮತ್ತು ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿರುಸಿನ ಸ್ಪರ್ಧೆ ಏರ್ಪಟಿದ್ದು ಮಂಗಳೂರು ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದು, ಜಿಲ್ಲಾ ಯೂತ್ ಕಾಂಗ್ರೆಸ್‍ಗೆ ಮೂವರು ಸ್ಪರ್ಧಿಗಳಿದ್ದಾರೆ. ಬೆಳಗ್ಗಿನಿಂದಲೇ ಸ್ಪರ್ಧಿಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದರೆ ಮಧ್ಯಾಹ್ನದ ವೇಳೆಗೆ ಝೆರಾಕ್ಸ್ ಪ್ರತಿಯ ಗುರುತಿನ ಚೀಟಿ ನೀಡಿ ಇಬ್ಬರು ಮತದಾರರು ಒಳಗೆ ಹೋಗಿದ್ದಾರೆ ಎಂದು ಆರೋಪಿಸಿ ರಾಜ್ಯದಿಂದ ನಿಯುಕ್ತಿಗೊಂಡಿದ್ದ ಕಾಂಗ್ರೆಸ್ ಏಜೆಂಟ್ ಒಬ್ಬರಲ್ಲಿ ತಗಾದೆ ತೆಗೆದ ಒಂದು ಗುಂಪು ಮತದಾನ ಕೇಂದ್ರದೊಳಗೆ ನುಗ್ಗಲು ಪ್ರಯತ್ನಿಸಿದಾಗ ಮಫ್ತಿಯಲ್ಲಿದ್ದ  ಪೊಲೀಸರು ತಡೆದಾಗ ಪೊಲೀಸರ ಮತ್ತು ಬೆಂಬಲಿಗರ ನಡುವೆ ಮಾತಿನ ಚಕಮಕಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ರಾಜ್ಯದಲ್ಲಿ ಉಳ್ಳಾಲ ಎಂದಲ್ಲಿ ಭೀತಿಯ ವಾತಾವರಣವಿದ್ದು, ಅದನ್ನು ಹೋಗಲಾಡಿಸುವ ಪ್ರಯತ್ನ ಯುವಸಮುದಾಯದಿಂದ ಆಗಬೇಕಿದ್ದು, ಇದರಿಂದ ಇನ್ನಷ್ಟು ಅಭಿವೃದ್ಧಿಯ ಯೋಜನೆಗಳನ್ನು ಉಳ್ಳಾಲದಲ್ಲಿ ಜಾರಿಗೊಳಿಸಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಶಾಸಕರ ವಿಶೇಷ ಅನುದಾನದಿಂದ ರೂ. 30 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಉಳ್ಳಾಲ ಶ್ರೀನಿವಾಸ ಮಲ್ಯ ರಸ್ತೆಯಿಂದ ಸಯ್ಯಿದ್ ಮದನಿ ದರ್ಗಾ ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ಥಳೀಯ ಯುವಕರ ತಾಳ್ಮೆಯಿಂದ ಕಾಮಗಾರಿ ತಡವಾದರೂ ಯಶಸ್ವಿಯಾಗಿ ಸಮಗ್ರ ಕಾಂಕ್ರೀಟಿಕರಣಕ್ಕೆ ಅನುದಾನ ಬಿಡುಗಡೆಗೊಳಿಸಲು ಸಾಧ್ಯವಾಗಿದೆ. ಹೆಚ್ಚುವರಿ 5 ಕೋಟಿ ಅನುದಾನದಲ್ಲಿ ಉಳ್ಳಾಲದಾದ್ಯಂತ ಸುಸಜ್ಜಿತ ಫುಟ್ ಪಾತ್ ಹಾಗೂ ದಾರಿದೀಪಗಳ ವ್ಯವಸ್ಥೆಗಳಿಗೆ ಬಿಡುಗಡೆ ಮಾಡಲಾಗುವುದು. ಉಳ್ಳಾಲ ಕೋಡಿ ರಸ್ತೆಗೆ ರೂ. 10 ಲಕ್ಷ , ತಲಪಾಡಿಯಿಂದ ಕೋಟೆಪುರ ಕಡಲ್ಕೊರೆತ ತಡೆಗೆ ಶಾಶ್ವತ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಅಬ್ಬಕ್ಕ ಸರ್ಕಲ್ ನಿಂದ ಚೋಟಾ ಮಂಗಳೂರು ರಸ್ತೆ ಅಭಿವೃದ್ಧಿಗೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಶಾಂತಿ…

Read More