Author: UllalaVani

Kannada News From Coastal Karnataka

UN NETWORKS ಉಳ್ಳಾಲ: ಅಕ್ರಮವಾಗಿ ಹಸು ಮತ್ತು ಕರು ಸಾಗಾಟ ನಡೆಸುತ್ತಿದ್ದ ವಾಹನವನ್ನು ತಡೆಗಟ್ಟಿದ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ರಾಡಿನಿಂದ ದಾಳಿಗೆ ಯತ್ನಿಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುದುಂಗಾರುಕಟ್ಟೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದ್ದು, ಬಳಿಕ ಕೊಣಾಜೆ ಪೊಲೀಸರು ವಾಹನ ಮತ್ತು ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಂಟೆಪದವಿನಿಂದ ಸಾಲೆತ್ತೂರು ಕಡೆಗೆ ಆಸೀಫ್ ಮತ್ತು ಚಾಲಕ ಸೇರಿಕೊಂಡು ಹಸು ಮತ್ತು ಕರುವನ್ನು ಸಂಪೂರ್ಣ ಮುಚ್ಚಿದ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಇದರಿಂದ ಸಂಶಯಗೊಂಡ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ವಿದ್ಯಾರಣ್ಯನಗರದಲ್ಲಿ ವಾಹನವನ್ನು ಅಡ್ಡಗಟ್ಟಲು ಯತ್ನಿಸಿದ್ದರು. ಆದರೆ ವಾಹನದಲ್ಲಿದ್ದವರು ರಾಡಿನಿಂದ ಹಲ್ಲೆಗೆ ಮುಂದಾಗಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ತಾಲೂಕು ಗೋರಕ್ಷಾ ಪ್ರಮುಖ್ ಸೇರಿದಂತೆ ಇಬ್ಬರು ಅಲ್ಲಿಂದ ಸ್ವಲ್ಪ ದೂರದಲ್ಲಿದ್ದ ಕೊಣಾಜೆ ಪೊಲೀಸರ ಪಿಸಿಆರ್ ವಾಹನಕ್ಕೆ ಮಾಹಿತಿ ನೀಡಿದ್ದರು. ಬೈಕ್ ಮತ್ತು ಪಿಸಿಆರ್ ವಾಹನದಲ್ಲಿ ಜಾನುವಾರು ಸಾಗಾಟದ ವಾಹನವನ್ನು ಬೆನ್ನಟ್ಟಿ ಮುದುಂಗಾರುಕಟ್ಟೆ ಎಂಬಲ್ಲಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ವಾಹನ…

Read More

UN NETWORKS ಉಳ್ಳಾಲ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬೆಳವಣಿಗೆಯ ದಿಸೆಯಲ್ಲಿ ವಿವಿಧ ಮಾಧ್ಯಮಗಳಾದ ಟಿವಿ. ಮೊಬೈಲ್‍ಗಳಿಗೆ ವಿಪರೀತ ಜೋತು ಬೀಳದೆ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಗಾಗಿ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ಖ್ಯಾತ ಕ್ರೀಡಾಪಟು, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರೊ| ಡಾ| ರವಿಚಂದನ್ ಹೇಳಿದರು. ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಕ್ಷೇಮ ಕ್ಯಾಂಪಸ್‍ನಲ್ಲಿ ಎರಡು ದಿನ ನಡೆಯಲಿರುವ ಆರನೇ ನಿಟ್ಟೆ ಕ್ರೀಡೋತ್ಸವ-2018ನ್ನು ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲಾ ಬಾಸ್ಕೆಟ್ ಬಾಲ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಮಾತನಾಡಿ ನಿಟ್ಟೆ ವಿವಿ ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡುತ್ತಿದ್ದು ಆ ನಿಟ್ಟಿನಲ್ಲಿ ನಿಟ್ಟೆ ವಿವಿಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು. ನಿಟ್ಟೆ ಕ್ಯಾಂಪಸ್ ನಲ್ಲಿರುವ ಬಾಸ್ಕೆಟ್ ಬಾಲ್ ತರಬೇತಿ ಕ್ರೀಡಾಂಗಣ ಅಂತರಾಷ್ಟ್ರೀಯ ಗುಣಮಟ್ಟದ್ದಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ನುಡಿದರು. ನಿಟ್ಟೆ ವಿವಿ ಕ್ರೀಡಾ…

Read More

UN NETWORKS ಉಳ್ಳಾಲ: ಮೀನು ಸಾಗಾಟದ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಅಂಬ್ಲಮೊಗರು ಎಲಿಯಾರು ನಿವಾಸಿ ಮುಹಮ್ಮದ್ ಶಾಕಿಬ್ (20) ಮೃತ ದುರ್ದೈವಿ. ಶಾಕೀಬ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿ ಹೊಡೆದ. ಡಿಕ್ಕಿಯ ರಭಸಕ್ಕೆ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಅಲ್ಲೇ ಮೃತಪಟ್ಟಿದ್ದಾರೆ. ಉಳ್ಳಾಲ ಪೊಲೀಸರು ಘಟನಾಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

UN NETWORKS ಉಳ್ಳಾಲ : ಕೇರಳದಿಂದ ತಲಪಾಡಿ ಕೊಂಡಾಣ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರನ್ನು ವಶಪಡಿಸಿಕೊಂಡಿರುವ ಉಳ್ಳಾಲ ಪೊಲೀಸರು ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಜೇಶ್ವರ ಪಾತೂರು ಬದಿಮಲೆ ನಿವಾಸಿ ಮಹಮ್ಮದ್ ಮನ್ಸೂರ್(20), ಬಾಳೆಪುಣಿ ಮಸೀದಿ ಬಳಿ ನಿವಾಸಿಗಳಾದ ಉಮ್ಮರ್ ಫಾರೂಕ್ (22), ಸಿಯಾದ್ ( 24), ತಲಪಾಡಿ ಮೇಗಿನ ಪಂಜಾಳ ನಿವಾಸಿ ಮೊಹಮ್ಮದ್ ಅಶ್ರಫ್(28) ಬಂಧಿತರು ಆರೋಪಿಗಳಿಂದ 1.5 ಲಕ್ಷ ರೂ ಮೌಲ್ಯದ 600 ಗ್ರಾಂ ಗಾಂಜಾ ಸಹಿತ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಗಾಂಜಾವನ್ನು ಉಳ್ಳಾಲ ವ್ಯಾಪ್ತಿಯಲ್ಲಿ ಮಾರಾಟಕ್ಕೆ ತರುತ್ತಿದ್ದರೆನ್ನಲಾಗಿದ್ದು, ಖಚಿತ ಮಾಹಿತಿಯಂತೆ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ರಾಮರಾವ್‍ ಉಳ್ಳಾಲ ಮಾರ್ಗದರ್ಶನದಲ್ಲಿ ಪೊಲೀಸ್ ಠಾಣಾ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್., ನೇತೃತ್ವದ ತಂಡದಲ್ಲಿ ಉಪ ನಿರೀಕ್ಷಕರಾದ ವಿನಾಯಕ ತೋರಗಲ್, ಗುರಪ್ಪ ಶಾಂತಿ, ಸಿಬಂದಿಗಳಾದ ಭಾಸ್ಕರ ಕಾಮತ್, ರವೀಂದ್ರ ಎನ್.ಜಿ., ಬಸವರಾಜ್, ರಂಜಿತ್, ಚಂದ್ರ ನಾಯ್ಕ್ ಆರೋಪಿಗಳನ್ನು…

Read More

UN NETWORKS ಮಂಗಳೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಧುಸೂದನ್ ಕುಶೆ ವಿದ್ಯಾಸಂಸ್ಥೆ ಅತ್ತಾವರ ಇಲ್ಲಿ ಮಂಗಳೂರು ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಗಾರವು ನಡೆಯಿತು. ಇದನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಜೀವನ್‍ದಾಸ್ ಶೆಟ್ಟಿ ಬಜ್ಪೆ ಇವರು ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಮತ್ತು ಅಟೋಟಗಳನ್ನು ಮಾತ್ರ ಕಲಿಸಿದರೆ ಸಾಲದು. ಮುಖ್ಯವಾಗಿ ಇಂದಿನ ಸಂದರ್ಭದಲ್ಲಿ ನೈತಿಕತೆ ಹೇಗೆ ರೂಢಿಸಿಕೊಳ್ಳಬೇಕು ಮತ್ತು ಮಾನವೀಯ ಮೌಲ್ಯಗಳನ್ನು ಹೇಗೆ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ತಿಳಿಯಪಡಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು. ಅಧ್ಯಕ್ಷತೆಯನ್ನು ಮಂಗಳೂರು ತಾಲೂಕು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ದೈಹಿಕ ಶಿಕ್ಷಕರ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿಯವರು ವಹಿಸಿ, ಅಧ್ಯಾಪಕರು ಪ್ರತೀ ದಿನ ಪುನಃಶ್ಚೇತನಗೊಳ್ಳುತ್ತಿರಬೇಕು. ಇಂದಿನ ವಿವಿಧ ಸವಾಲುಗಳಿಗೆ ವಿದ್ಯಾರ್ಥಿಗಳು ಯಾವ ರೀತಿ ತಯಾರಾಗಬೇಕು ಎಂಬುದಕ್ಕೆ ಅಧ್ಯಾಪಕರು ಹೆಚ್ಚಿನ ಜ್ಞಾನ ಮತ್ತು ಕೌಶಲ್ಯಗಳನ್ನು ಕಲಿತುಕೊಳ್ಳುವುದು…

Read More

UN NETWORKS ಕೊಣಾಜೆ: ಸನಾತನ ಹಿಂದೂ `ಧರ್ಮದ ಕೇಂದ್ರವಾಗಿರುವ ಭಾರತ ಪ್ರಪಂಚಕ್ಕೆ ದೇವರ ಕೋಣೆಯಾದರೆ ಭಾರತ ದೇಶದ ಮಣ್ಣಿನ ಪ್ರತೀ ಕಣಕಣದಲ್ಲಿ ದೇವರನ್ನು ಪೂಜಿಸುವುದರಿಂದ ಇಲ್ಲಿನ ಆಲಯಗಳು, ಧಾರ್ಮಿಕ ಕೇಂದ್ರಗಳು ದೇಶದ ದೇವರಕೋಣೆಯಾಗಿದ್ದು, ಇಲ್ಲಿ ಹಿಂದೂ ಧರ್ಮದ ವಿಚಾರವನ್ನು ಜನರಿಗೆ ಪಸರಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ್ ಕೋಟ್ಯಾನ್ ಅಭಿಪ್ರಾಯಪಟ್ಟರು. ದಕ್ಷ ಯುವ ಬಳಗ ಗ್ರಾಮಚಾವಡಿ ಇದರ 9ನೇ ವಾರ್ಷಿಕೋತ್ಸವದ ಅಂಗವಾಗಿ ಕೋಟಿಪದವು ಶ್ರೀರಾಮ ಮಂದಿರದ ವಠಾರದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಮಾಜವಿದ್ದರೆ ಅದು ಹಿಂದೂ ಸಮಾಜ. ನಂಬಿಕೆಯೇ ದೇವರು ಎನ್ನುವ ನಾವು ಸತ್ಯನಾರಾಯಣ ಪೂಜೆಯಂತಹ ಕಾರ್ಯಕ್ರಮಗಳು ನಮ್ಮ ಸಂಘಟನೆಯನ್ನು ಬಲಪಡಿಸಲು ಪೂರಕವಾಗಿದ್ದು, ಈ ಮೂಲಕ ಸಮಾಜಕ್ಕೆ ಮತ್ತು ಮುಂದಿನ ಪೀಳಿಗೆಗೆ ಸಂಸ್ಕಾರವನ್ನು ನೀಡುವ ಕಾರ್ಯ ಸಾಧ್ಯ ಎಂದರು. ದ.ಕ. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಮಿತಾ ಶ್ಯಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಜನರು ಸಂಘಟಿತರಾಗಿ ಕಾರ್ಯ…

Read More

UN NETWORKS ಉಳ್ಳಾಲ: ನಿವೃತ್ತಿ ಬಳಿಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನೌಕರರು ತಮ್ಮ ಸೇವಾವಧಿಯಲ್ಲಿ ಗಳಿಕೆ ರಜೆ ಪಡೆಯದೆ ಉಳಿಸಿಕೊಂಡು ಕಾರ್ಯ ನಿರ್ವಹಿಸಿ ನಿವೃತ್ತಿ ಅಂಚಿನಲ್ಲಿ ಸೌಲಭ್ಯವನ್ನು ಪಡೆಯುತ್ತಾ ಬಂದಿದ್ದರು. ಆದರೆ ಕಳೆದ ಹತ್ತು ತಿಂಗಳಿನಿಂದ ನಿವೃತ್ತರಾದ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಸೌಲಭ್ಯಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಿದಾಗ ಅನುದಾನದ ನೆಪಹೇಳಿ ಜಿಲ್ಲಾ ಖಜಾನೆಯಿಂದ ಹಿಂತಿರುಗಿಸಲಾಗುತ್ತದೆ. ಇದು ಕೇವಲ ಅನುದಾನಿತ ಸಿಬಂದಿಗೆ ಮಾತ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳಿಗೆ ,ಶಿಕ್ಷಣ ಸಚಿವರಿಗೆ ಹಾಗೂ ಶಿಕ್ಷಣ ಇಲಾಖೆಯ ಮಖ್ಯ ಕಾರ್ಯದರ್ಶಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು . ಅನುದಾನಿತ ಶಿಕ್ಷಕರಿಗಾಗುವ ಸಮಸ್ಯೆಯ ಗಂಭೀರತೆಯನ್ನರಿತ ಜಿಲ್ಲಾಧಿಕಾರಿಗಳು ಕೂಡಲೇ ಸ್ಪಂಧಿಸಿ ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಸಂಘದ ನಿಯೋಗಕ್ಕೆ ಭರವಸೆ…

Read More

UN NETWORKS ಇರಾ: ಕರ್ನಾಟಕ ಸರಕಾರ, ದ.ಕ.ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಇರಾ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ನವೀಕೃತ ಅಂಬೇಡ್ಕರ್ ಭವನ‌ ಉದ್ಘಾಟನಾ ಸಮಾರಂಭವು ಜನವರಿ 26ರಂದು ಶುಕ್ರವಾರ ಸಂಜೆ 5ಕ್ಕೆ ಇರಾ ಕಂಚಿನಡ್ಕಪದವಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಸಚಿವರಾದ ಯು.ಟಿ.ಖಾದರವರು ನೆರವೇರಿಸಲಿದ್ದಾರೆ.. ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಪಂಚಾಯತ್ ಸದಸ್ಯರಾದ ಸುಧಾಕರ್ ಕೆ.ಟಿ, ತುಳಸಿ ಪೂಜಾರಿ, ಶೇಖರ ಪೂಜಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತವನ್ನು ಬಯಸುವ ಅಬ್ದುಲ್ ರಝಾಕ್ ಕುಕ್ಕಾಜೆ (ಅಧ್ಯಕ್ಷರು, ಇರಾ ಗ್ರಾಮ ಪಂಚಾಯತ್) ………….. ನಳಿನಿ ಎ.ಕೆ. (ಪಂಚಾಯತ್ ಅಭಿವೃದ್ಧಿ ಅಧಿಕಾರಿ) ……………  ಪಂಚಾಯತ್ ಸಿಬ್ಬಂದಿ ವರ್ಗ

Read More

UN NETWORKS ಇರಾ: ಬಂಟ್ವಾಳದ ಇರಾ ಗ್ರಾಮದಲ್ಲಿ ಚಿರತೆಯೊಂದು ಕಂಡುಬಂದಿದ್ದು, ಜೆಸಿಬಿ ಆಪರೇಟರ್ ಓರ್ವರಿಗೆ ಕಾಣಸಿಕ್ಕ ಚಿರತೆಯಿಂದ ಇದೀಗ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇರಾ ಗ್ರಾಮದ ಲಕ್ಷ್ಮೀನರಸಿಂಹ ದೇವಸ್ಥಾನದ ಗುಡ್ಡ ಸಮೀಪ ಜೆಸಿಬಿ ಮೂಲಕ ಜಾಗ ಸಮತಟ್ಟುಗೊಳಿಸಲಾಗುತಿತ್ತು. ಕೆಲಸದ ನಡುವೆ ಜೆಸಿಬಿಯಿಂದ ಇಳಿದ ಆಪರೇಟರ್ ಜಾಗ ಪರಿಶೀಲನೆ ನಡೆಸಲು ಮುಂದಾಗುತ್ತಿದ್ದಂತೆ ಕೆಲ ಮೀ.ಅಂತರದಲ್ಲಿ ಚಿರತೆ ಕಂಡುಬಂದಿತ್ತು. ಬಾಯ್ತೆರೆದು ಚಿರತೆ ಘರ್ಜಿಸುವುದನ್ನು ಕಂಡ ಆಪರೇಟರ್ ಸ್ಥಳದಿಂದ ಓಡಿ ಪಾರಾಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಅದರಂತೆ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ ನೇತೃತ್ವದಲ್ಲಿ ಸ್ಥಳಕ್ಕೆ ಜನ ಬಂದಾಗ ಚಿರತೆ ಕಂಡುಬಂದಿರಲಿಲ್ಲ. ಅರಣ್ಯ ಇಲಾಖೆಗೆ ಪಂಚಾಯತ್ ವತಿಯಿಂದ ಮಾಹಿತಿ ನೀಡಲಾಗಿದ್ದು, ಅದರಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಲವು ತಾಸುಗಳವರೆಗೆ ಗುಡ್ಡಪ್ರದೇಶದಲ್ಲಿ ಹುಡುಕಾಡಿದರೂ ಚಿರತೆ ಸುಳಿವು ಸಿಕ್ಕಿಲ್ಲ. ಬೆಳ್ತಂಗಡಿಯ ವೇಣೂರು ಭಾಗದಲ್ಲಿ ಇಲಾಖೆಯ ಎರಡು ಗೂಡುಗಳನ್ನು ಇರಿಸಿರುವುದರಿಂದ ಮುಂದೆ ಇರಾ ಪ್ರದೇಶದಲ್ಲಿ ಕಂಡು ಬಂದಲ್ಲಿ ಅಲ್ಲಿಂದ ಗೂಡನ್ನು ಇರಾ ಕ್ಕೆ…

Read More

UN NETWORKS ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಹಮ್ಮಿಕೊಡಿರುವ ನ್ಯಾಷನಲ್ ಸ್ಕಾಲರ್ ಶಿಪ್ 2018 ಅಭಿಯಾನದ ಅಂಗವಾಗಿ ಕರ್ನಾಟಕ ರಾಜ್ಯದ ವತಿಯಿಂದ ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮವು ಮಂಗಳೂರಿನ ಕಂಕನಾಡಿ ಜಮಿಯತುಲ್ ಫಲಾಹ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 248 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಚೆಕ್ ವಿತರಿಸಲಾಯಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಸಚೇತಕ ಐವನ್ ಡಿಸೋಜಾ, ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಸದಸ್ಯ ಅಬ್ದುಲ್ ರವೂಫ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಯಾಜ್ ಕೃಷ್ಣಾಪುರ, ಕುದ್ರೋಳಿ ಜಾಮಿಯಾ ಮಸೀದಿ ಖತೀಬರಾದ ಮುಫ್ತಿ ಅಬ್ದುಲ್ ಮನ್ನಾನ್ ಸಾಬ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ಅನ್ವರ್ ಸಾದಾತ್, ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷರಾದ ನವಾಜ್ ಉಳ್ಳಾಲ, ವಾಮಂಜೂರ್ ಜುಮಾ ಮಸೀದಿ…

Read More