Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಾಡೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡೂರು ಬಲ್ಯ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರಿಗೆ ಸಂಬಂಧಿಸಿದ ಭೂಮಿ ಸುಮಾರು 21 ಅಡಿ ಅಳದವರಗೆ ಹಠಾತ್ ಕುಸಿದಿರುವ ಘಟನೆ ಶುಕ್ರವಾರ ನಡೆದಿದೆ. ಮಾಡೂರಿನ ಬಲ್ಯ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಸೇರಿದ ಖಾಸಗಿ ಜಾಗವಿದ್ದು, ಅದರಲ್ಲಿ ಅಡಿಕೆ ತೋಟ ಕೂಡ ಆವರಿಸಿಕೊಂಡಿದೆ. ಆದರೆ ಎರಡು ದಿನದ ಹಿಂದೆ ಅಡಿಕೆ ತೋಟದಲ್ಲಿ ಭೂಮಿ ಸುಮಾರು 21 ಅಡಿಗಳಷ್ಟು ಆಳಕ್ಕೆ ಏಕಾಏಕಿ ಕುಸಿತ ಕಂಡಿದೆ. ಘಟನೆ ಬಗ್ಗೆ ತಿಳಿದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿ ನೋಡಿದಾಗ ಸುಮಾರು ಅಡಿಗಳಷ್ಟು ಆಳಕ್ಕೆ ಭೂಮಿ ಕುಸಿದಿರುವುದು ಕಂಡು ಬಂದಿದೆ. ಸುರಂಗದ ರೀತಿಯಲ್ಲಿ ಆಳದವರೆಗೆ ವ್ಯಾಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಈ ಜಾಗದಲ್ಲಿ ಯಾವುದೇ ನೀರಿನ ಸೆಳೆತ ಕೂಡ ಪತ್ತೆಯಾಗದೇ ಇರುವುದರಿಂದ ಭೂಮಿ ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳೀಯರ ಪ್ರಕಾರ ಮೊದಲಿಗೆ ಸಣ್ಣ ಮಟ್ಟದಲ್ಲಿ ಕುಸಿತ ಕಂಡಿದ್ದ ಭೂಮಿ ನಂತರ 21 ಅಡಿ ಅಳದವರೆಗೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬೋಳಿಯಾರ್:  ಯು.ಟಿ. ನಸೀಮಾ ಫರೀದ್,ಮೆಮೋರಿಯಲ್ ಟ್ರಸ್ಟ್ ಬೆಂಗಳೂರು, ಮತ್ತು ಯು.ಟಿ. ಫರೀದ್ ಫೌಂಡೇಶನ್ (ರಿ) ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಬೋಳಿಯಾರ್ ಹೋಲಿ ಕ್ವೀನ್ ಹಾಲ್‍ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸದಸ್ಯ ಬಿ.ಕೆ. ಜಬ್ಬಾರ್ ಬೋಳಿಯಾರ್ ಉದ್ಘಾಟಿಸಿದರು,ಯು.ಟಿ. ಫರೀದ್ ಫೌಂಡೇಶನ್‍ನ ಆಡಳಿತ ನಿರ್ದೇಶಕ ಯು.ಟಿ.ಝುಲ್ಪಿಕಾರ್ ಫಲಾನುಭವಿಗಳಿಗೆ ಕನ್ನಡಕ ವಿತರಿಸಿದರು. ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಪಾವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಳಿಯಾರ್ ಗ್ರಾಮ ಪಂಚಾಯತ್ ಸದಸ್ಯ ಶುಕೂರ್ ಕಾಪಿಕಾಡು,ನಾರಾಯಣ ಶೆಟ್ಟಿ ಮಲರಾಯಯ ಬೀಡು, ಅಶ್ರಫ್ ಮೋನು ಬೋಳಿಯಾರ್, ಶೀನ ಪೂಜಾರಿ, ಸ್ಟಾನಿವಾಸ್, ಗುರುವಪ್ಪ ,ಬಿ.ಎಮ್.ಹನೀಫ್, ಎಮ್.ಕೆ.ಅಶ್ರಫ್, ಮುನೀರ್ ಭಂಡಸಾಲೆ, ಉಬೈದ್ ಕರ್ಮಾರ್, ರಹೀಮ್ ಸುಬ್ಬಗುಳಿ ಉಪಸ್ಥಿತರಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:  ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸೋಮೇಶ್ವರ ಬಾಸ್ರಿತ್ತಾಯಬೈಲಿನಲ್ಲಿ ತೆಂಗಿನಮರಕ್ಕೆ ಬಡಿದ ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದ್ದು, ಮನೆಮಂದಿ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಸೋಮೇಶ್ವರ ಬಾಸ್ರಿತ್ತಾಯ ಬೈಲಿನ ಲಕ್ಷ್ಮಣ್ ಸೋಮೇಶ್ವರ ಎಂಬವರ ಮನೆಗೆ ಹಾನಿಯಾಗಿದ್ದು, ಮನೆಯಲ್ಲಿ ಸುಮಾರು ಏಳು ಮಂದಿ ಮಲಗಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದ್ದು, ಅವರಲ್ಲಿ ಐದು ಮಂದಿಗೆ ಸಿಡಿಲಿನ ಅಘಾತಕ್ಕೆ ಮೈಯಲ್ಲಿ ವಿದ್ಯುತ್ ಸಂಚಾರ ಆದಂತೆ ಅನುಭವವಾಗಿದ್ದು, ಶರತ್ ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದೆ. ತೆಂಗಿನ ಮರಕ್ಕೆ ಸಿಡಿಲು ತಪ್ಪಿದ ದುರಂತ : ಲಕ್ಷ್ಮಣ್ ಅವರ ಮನೆಯ ಎದುರಿಗಿದ್ದ ತೆಂಗಿನ ಮರಕ್ಕೆ ಬಿದ್ದ ಪರಿಣಾಮ ತೆಂಗಿನ ಮರ ಸಂಪೂರ್ಣ ಮುದುಡಿದ್ದು, ಅಕ್ಕಪಕ್ಕದ ಸುಮಾರು ಎಂಟಕ್ಕೂ ಹೆಚ್ಚು ತೆಂಗಿನಮರಕ್ಕೆ ಹಾನಿಯಾಗಿದೆ. ತೆಂಗಿನ ಮರದಿಂದ ಸಿಡಿಲಿನ ಅಘಾತ ಮನೆಗೆ ತಾಗಿದ್ದು ಮನೆಯಲ್ಲಿದ್ದ ವಿದ್ಯುತ್ ಸಂಬಂ„ ವಸ್ತುಗಳು ಸಂಪೂರ್ಣ ಹಾನಿಯಾಗಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮನೆಗೆ ದೊಡ್ಡ ಹಾನಿಯಾಗದೆ ಮನೆಯ ಸದಸ್ಯರು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಇಲ್ಲಿನ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ನಿನಲ್ಲಿರುವ ವಿವಿಧ ಹೊಟೇಲ್, ಬೇಕರಿ ಮತ್ತು ಬಾರ್ ಗಳಿಗೆ ಉಳ್ಳಾಲ ನಗರಸಭೆಯ ಆರೋಗ್ಯ ನಿರೀಕ್ಷಕರ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ಸ್ವಚ್ಛತೆ , ತೆರಿಗೆ ಹಾಗೂ ವ್ಯಾಪಾರ ಪರವಾನಗಿಯನ್ನು ಪರಿಶೀಲಿಸಲಾಯಿತು. ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಕಾರ್ಯಾಚರಿಸುತ್ತಿರುವ ಹೊಟೇಲ್‍ಗಳಾದ ವೃಂದಾವನ, ಡೈನ್ ಪಾಯಿಂಟ್, ದಾಮೇರ್ ಫ್ರೆಂಡ್ಸ್ ಚಿಕನ್, ಅಕ್ಷಯ , ಪರಿಮಳ ಬೇಕರಿ ಹಾಗೂ ಸುಧಾ ಬಾರ್ ಆಂಡ್ ರೆಸ್ಟೋರೆಂಟ್ ಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವಚ್ಛತೆಯಿಲ್ಲದ ಹೊಟೇಲುಗಳಿಗೆ ನೋಟೀಸು ನೀಡುವ ಎಚ್ಚರಿಕೆ ನೀಡಿದರು. ವ್ಯಾಪಾರ ಪರವಾನಗಿಯನ್ನು ನವೀಕರಿಸದ ಮತ್ತು ತೆರಿಗೆ ಪಾವತಿ ಮಾಡದ ಹೊಟೇಲು, ಬೇಕರಿಗಳಿಗೆ ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿದರು . ಈ ಸಂದರ್ಭ ಹಿರಿಯ ಆರೋಗ್ಯ ನಿರೀಕ್ಷಕರುಗಳಾದ ಜಯಶಂಕರ್ ಹಾಗೂ ಸಾಜಿದ್ , ಕಿರಿಯ ಆರೋಗ್ಯ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿ ಶಿವಪ್ಪ ಅಟ್ಟೋಳೆ ಉಪಸ್ಥಿತರಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: “ಉತ್ತಮ ಯುವಕನಾಗಿರುವುದೇ ದೇಶದ ಅತಿದೊಡ್ಡ ಆಸ್ತಿಯಾಗಿದೆ. ಶಿಕ್ಷಣದ ಅಂತಿಮ ಉದ್ದೇಶವು ಜೀವನದಲ್ಲಿ ಕಷ್ಟಗಳನ್ನು ನಿವಾರಿಸಲು ನಮಗೆ ತರಬೇತಿ ನೀಡುವುದು ಮತ್ತು ಇದು ನಿಮ್ಮ ವ್ಯಕ್ತಿತ್ವದಲ್ಲಿ ಪ್ರತಿಫಲಿಸಬೇಕು” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು. ಟಿ. ಖಾದರ್ ಹೇಳಿದರು. ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್), ರಾಷ್ಟ್ರೀಯ ಯುವಜನ ಯೋಜನೆ ಮತ್ತು ಯುವಜನ ವ್ಯವಹಾರಗಳ ಸಚಿವಾಲಯ, ಕರ್ನಾಟಕ ಸರಕಾರ ಇವುಗಳ ಜಂಟಿಯಾಗಿ ದೇರಳಕಟ್ಟೆ ಯೆನೆಪೋಯ ವಿ.ವಿಯ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಯುವಜನ ರಾಷ್ಟ್ರೀಯ ಐಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಯುವ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ತನ್ನ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಸಕ್ರಿಯ ಎನ್‍ಎಸ್‍ಎಸ್ ಸ್ವಯಂಸೇವಕರಾಗಿದ್ದಾಗ ತಾವು ಯುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು ಮತ್ತು ಈ ಅನುಭವ ನಂತರ ಸಾರ್ವಜನಿಕ ಜೀವನವನ್ನು ಮುಂದುವರಿಸಲು ಅವರನ್ನು ಪ್ರೇರೇಪಿಸಿತು ಎಂದು ಅವರು ಹೇಳಿದರು. “ವಾಸಿಸಲು ಅತ್ಯುತ್ತಮ ದೇಶ ಭಾರತ. ನಮ್ಮ ದೇಶದ ವೈವಿಧ್ಯತೆಯಿಂದಾಗಿ, ನಾವು ಅನೇಕ ಹಬ್ಬ, ಉತ್ಸವಗಳನ್ನು ಆಚರಿಸಲು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೋಟೆಕಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ಆಸ್ಪತ್ರೆ ಕೋಟೆಕಾರು ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಕೋಟೆಕಾರು ಬೀರಿಯ ಪಶು ಆಸ್ಪತ್ರೆ ಆವರಣದಲ್ಲಿ ಗುರುವಾರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ನೆರವೇರಿಸಿದರು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಮಲಾರ್, ಸೋಮೇಶ್ವರ ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾ.ಪಂ ಸದಸ್ಯರುಗಳಾದ ರವಿಶಂಕರ್, ಸುರೇಖಾ ಚಂದ್ರಹಾಸ್, ಸಿದ್ಧೀಖ್ ತಲಪಾಡಿ, ಪಶುಪಾಲನಾ ಹಾಗೂ ಪಶುವೈದ್ಯ ಸೇವೆಗಳ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ , ಕೆ.ಆರ್.ಐ.ಡಿ.ಎಲ್ ಇದರ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಎಸ್.ಪಾಟೀಲ್, ಧಾರ್ಮಿಕ ಪರಿಷತ್ ಸದಸ್ಯ ಕೃಷ್ಣ ಗಟ್ಟಿ ಸೋಮೇಶ್ವರ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ರವೀಂದ್ರನಾಥ ಶೆಟ್ಟಿ ದೊಡ್ಡಮನೆ, ಮುಖ್ಯ ಅತಿಥಿಗಳಾಗಿದ್ದರು.…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಅಕ್ರಮವಾಗಿ ಕೇರಳ ಕಡೆಗೆ ಮರಳು ಸಾಗಾಟ ನಡೆಸಲು , ಗುಪ್ತ ಸ್ಥಳದಲ್ಲಿ ನಿಂತಿದ್ದ ಒಂಭತ್ತು ಬೃಹತ್ ಮರಳು ಲಾರಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಣಿ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಪಾವೂರು, ಕಲ್ಲಾಪು ಕಡೆಯಿಂದ ತಂದು ತಚ್ಚಣಿ ಎಂಬಲ್ಲಿ ದಾಸ್ತಾನಿರಿಸಲಾದ ಮರಳನ್ನು 10 ಮತ್ತು 12 ಚಕ್ರಗಳ ಬೃಹತ್ ಲಾರಿಯಲ್ಲಿ ತುಂಬಿಸಿಟ್ಟು, ಇಂದು ಕೇರಳ ಕಡೆಗೆ ಸಾಗಾಟ ನಡೆಸಲು ಯತ್ನಿಸುತ್ತಿದ್ದರು. ಗುಪ್ತ ಸ್ಥಳದಲ್ಲಿ ಒಂಭತ್ತು ಲಾರಿಗಳು ನಿಂತಿರುವ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಒಂಭತ್ತು ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ದಾಳಿ ವೇಳೆ ಒಂಭತ್ತು ಲಾರಿಗಳಲ್ಲಿದ್ದ ಚಾಲಕರು ಹಾಗೂ ಕ್ಲೀನರ್ ಗಳು ಪರಾರಿಯಾಗಿದ್ದಾರೆ. ಒಂಭತ್ತು ಲಾರಿ ಮಾಲೀಕರ ವಿರುದ್ಧ ಅಕ್ರಮ ಮರಳು ಸಾಗಾಟ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಪ್ರಾಮಾಣಿಕತೆ ಮತ್ತು ಬದ್ಧತೆಯೊಂದಿಗೆ ಜನಸ್ನೇಹಿಯಾಗಿ ದೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆ ಮುಡಿಪುವಿನಲ್ಲಿ ಘಟಕ ಸ್ಥಾಪಿಸುವುದರ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೇವೆ ಒದಗಿಸಲು ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಶ್ರೀ ವಿದ್ಯಾಧಿರಾಜ ದತ್ತಿ ಸಂಸ್ಥೆ ಮುಡಿಪು ಹಾಗೂ ಕೆ.ಎಸ್.ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಭಾಗಿತ್ವದಲ್ಲಿ ಮುಡಿಪುವಿನ ಗೋಪಾಲಕೃಷ್ಣ ದೇವಸ್ಥಾನದ ಬಳಿ ನೂತನವಾಗಿ ನಿರ್ಮಾಣಗೊಂಡ ಕೆ.ಎಸ್.ಹೆಗಡೆ ಹೊರರೋಗಿಗಳ ಉಪಗ್ರಹ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮುಡಿಪು ಒಳಪ್ರದೇಶದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟಕರವಾದ ಸ್ಥಿತಿಯಿತ್ತು. ಇದೀಗ ಮುಡಿಪು ಭಾಗದ ಜನರ ಸ್ವಾಸ್ಥ್ಯ ನಿರ್ಮಿಸುವಲ್ಲಿ ಹಾಗೂ ಜನಸಾಮಾನ್ಯರಿಗೆ ಪ್ರಯೋಜನವಾಗುವಂತೆ ಆಸ್ಪತ್ರೆ ಘಟಕ ಸ್ಥಾಪನೆಯಾಗಿದೆ. ಇದರ ಸದುಪಯೋಗವನ್ನು ಗ್ರಾಮದ ಜನರು ಪಡೆಯಬಹುದಾಗಿದೆ ಎಂದರು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ಅವರು, ವೈದ್ಯರನ್ನು ಜನರು ದೇವರಂತೆ ಕಾಣುತ್ತಾರೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಯುವಮಿತ್ರರು ಕುಂಪಲ ಇದರ ಆಶ್ರಯದಲ್ಲಿ ದ.ಕ, ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ಪ್ರೋ ಮಾದರಿಯ ಮ್ಯಾಟ್ ಕಬ್ಬಡ್ಡಿ -2017 ಕ್ಕೆ ಕುಂಪಲದ ಮೂರುಕಟ್ಟದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ. ಶೇಖರ್ ಉದ್ಘಾಟಿಸಿದರು. ಶ್ರೀ ಮಾರುತಿ ಮಠ ಗುರುನಗರದ ಬಾಲಯೋಗಿ ಶ್ರೀ ಅಮೃತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಬ್ಬಡ್ಡಿ ಅಮೆಚೂರು ಅಸೋಸಿಷಯೇಷನ್ನಿನ ಉಪಾಧ್ಯಕ್ಷರಾದ ಕೆ.ಟಿ. ಸುವರ್ಣ ವಹಸಿದ್ದರು. ಉದ್ಯಮಿ ಸತೀಶ್ ಕರ್ಕೇರ ಟ್ರೋಫಿ ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಹಿಂದು ಯುವಸೇನೆ ಕೇಂದ್ರೀಯ ಮಂಡಳಿ ಸದಸ್ಯ ಯಶೋಧರ್ ಚೌಟ, ಗೌರವಾಧ್ಯಕ್ಷ ಭಾಸ್ಕರ ಚಂದ್ರ ಶೆಟ್ಟಿ, ಹರೀಶ್ ಕಾಮತ್, ಆರ್ಯ ಯಾನೆ ಮರಾಠ ಸಮಾಜದ ಅಧ್ಯಕ್ಷ ದೇವೋಜಿ ರಾವ್, ಉದ್ಯಮಿ ಹರೀಶ್ ಶೆಟ್ಟಿ ಜೆಪ್ಪು, ಪ್ರಗತಿಪರ ಕೃಷಿಕ ಉಮೇಶ್ ಗಾಂಭೀರ್, ಗೋಕರ್ಣನಾಥ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸಯ್ಯದ್ ಮದನಿ ಅರೆಬಿಕ್ ಎಜುಕೇಶನಲ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಸಯ್ಯದ್ ಮದನಿ ಅರೆಬಿಕ್ ಕಾಲೇಜಿನ 47ನೇ ವಾರ್ಷಿಕ ಮತ್ತು 36ನೇ ಸನದುದಾನ ಮಹಾ ಸಮ್ಮೇಳನ ಉಳ್ಳಾಲ ದರ್ಗಾ ವಠಾರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತಾಡಿ ಉಳ್ಳಾಲದಲ್ಲಿ ಧಾರ್ಮಿಕ ಶಿಕ್ಷಣ ಕೇಂದ್ರಗಳು ಬೆಳೆದು ನಿಲ್ಲಲು ಇಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಸಯ್ಯದ್ ಮದನಿ ತಂಙಳ್‍ರವರ ಪವಾಡವೇ ಕಾರಣ. ತಾಜುಲ್ ಉಲಮಾ ಮತ್ತು ಇಬ್ರಾಹೀಂ ಹಾಜಿಯವರ ಶ್ರಮ ಮತ್ತು ಸೇವೆ ಈ ಶಿಕ್ಷಣ ಕೇಂದ್ರಕ್ಕೆ ಬಹಳಷ್ಟಿದೆ. ಅದನ್ನು ಉಳಿಸಿಕೊಂಡು ಬಂದು ಈ ಶಿಕ್ಷಣ ಕೇಂದ್ರವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಕಾರ್ಯ ಎಲ್ಲರಿಂದ ಆಗಬೇಕಿದೆ ಎಂದರು. ಸೈಯ್ಯದ್ ಮದನಿ ಅರೆಬಿಕ್ ಕಾಲೇಜಿನ ಪ್ರಾಧ್ಯಾಪಕ ಸಯ್ಯದ್ ಚೆರುಕುಂಞ ತಂಙಳ್ ಪ್ರಾರ್ಥನೆ ನೆರವೇರಿಸಿದರು. ಪ್ರಾಧ್ಯಾಪಕ ಅಹ್ಮದ್ ಬಾವಾ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಧ್ಯಾಪಕ ಅಬ್ದುಲ್ ರಶೀದ್ ಮದನಿ ಸನದುದಾನ ಭಾಷಣ ಮಾಡಿದರು. 58 ವಿದ್ಯಾರ್ಥಿಗಳಿಗೆ ಮದನಿ (ಎಂ.ಎಫ್.ಎಂ-ಮೌಲವಿ…

Read More