Author: UllalaVani

Kannada News From Coastal Karnataka

UN NETWORKS ತೊಕ್ಕೊಟ್ಟು: ತೊಕ್ಕೊಟ್ಟು ಶ್ರೀ ವಿಠೋಭ ರುಕ್ಮಾಯಿ ಮಂದಿರದ ಎಪ್ಪತ್ತನೇ ವಾರ್ಷಿಕೋತ್ಸವದ ಭಜನಾ ಸಂಕೀರ್ತನಾ ಕಾರ್ಯಕ್ರಮಕ್ಕೆ ಜಪ್ಪಿನಮೊಗರುವಿನ ಉದ್ಯಮಿ ಗಣೇಶ್ ಶೆಟ್ಟಿ, ವನಿತಾ ಶೆ ಜಿ. ಶೆಟ್ಟಿ ದೀಪ ಪ್ರಜ್ವನೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷರಾದ ಟಿ.ಎನ್. ಗಟ್ಟಿ, ಜಯಂತಿ ಭಾಸ್ಕರ್, ಅಧ್ಯಕ್ಷ ಪದ್ಮನಾಭ ಕಾರ್ಪೆಂಟರ್, ಪ್ರ. ಕಾರ್ಯದರ್ಶಿ ಚೇತನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಮೋಹನ್ ಬಂಗೇರ, ಉಪಾಧ್ಯಕ್ಷರಾದ ಜಯಂತ್ ಕೃಷ್ಣನಗರ, ಕಮಲಾಕ್ಷಿ ದೇವದಾಸ್, ಪದಾಧಿಕಾರಿಗಳಾದ ಭವಾನಿಶಂಕರ ರೈ, ರೂಪಶ್ರೀ, ಕೆ. ರಾಮಚಂದ್ರ, ಉಮೇಶ್ ಬಿ.ಎಂ., ಲೀಲಾ ಜಯಂತ್ ಶೆಟ್ಟಿ, ಸುಕುಮಾರ್ ಸಾಲ್ಯಾನ್, ಅರುಣ್ ಉಳ್ಳಾಲ್, ಮಾಜಿ ಅಧ್ಯಕ್ಷ ಸಚ್ಚೀಂದ್ರ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Read More

UN NETWORKS ಹೊಸದಿಲ್ಲಿ : ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‍ಎಲ್‍ವಿಸಿ40 ಮೂಲಕ ತನ್ನ 100ನೇ ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶುಕ್ರವಾರ ಬೆಳಗ್ಗೆ 9:28ಕ್ಕೆ ಪಿಎಸ್‍ಎಲ್‍ವಿಸಿ40 ಮೂಲಕ 710 ಕೆಜಿ ತೂಕದ ಕಾರ್ಟೊಸೆಟ್-2 ಸಿರೀಸ್ ಹಾಗೂ ಇತರ 30 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು. ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್, ಕೆನಡಾ, ರಿಪಬ್ಲಿಕ್ ಆಫ್ ಕೊರಿಯಾ ಹಾಗೂ ಫಿನ್‍ಲ್ಯಾಂಡ್‍ನ 28 ವಿದೇಶಿ ಉಪಗ್ರಹ ಸಹಿತ ಒಟ್ಟು 30 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು. ಈ ಮೂಲಕ ಇಸ್ರೋ 100ನೇ ಉಪಗ್ರಹವನ್ನು ಕಕ್ಷೆ ಸೇರಿಸಿದ ಸಾಧನೆ ಮಾಡಿತು. ಪಿಎಸ್‍ಎಲ್‍ವಿಸಿ40 ಒಟ್ಟು 1323 ಕೆಜಿ ತೂಕದ ಉಪಗ್ರಹವನ್ನು ಹೊತ್ತೊಯ್ದು ಕಕ್ಷೆಗೆ ಸೇರಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಸ್ರೋದ ಉನ್ನತ ಅಧಿಕಾರಿಗಳಾದ ಇಸ್ರೋ ಅಧ್ಯಕ್ಷ ಎಎಸ್ ಕಿರಣ್ ಕುಮಾರ್, ವಿಎಸ್‍ಎಸ್‍ಸಿ ನಿರ್ದೇಶಕ ಕೆ. ಶಿವಂ, ಎಲ್‍ಪಿಎಸ್‍ಸಿ ನಿರ್ದೇಶಕ ಸೋಮ್‍ನಾಥ್, ಎಸ್‍ಡಿಎಸ್‍ಸಿ ಡೈರೆಕ್ಟರ್ ಕುನ್ಹಿ ಕೃಷ್ಣನ್, ಐಎಸ್‍ಎಸಿ ನಿರ್ದೇಶಕ ಅಣ್ಣಾದೊರೈ ಸಾಕ್ಷಿಯಾದರು.

Read More

UN NETWORKS ಉಳ್ಳಾಲ : ಎಸ್ಸೆಸ್ಸೆಫ್, ಎಸ್ ವೈ ಎಸ್ ಅಝಾದ್ ನಗರ ಶಾಖೆ ಇದರ ಒಂದನೆ ವಾರ್ಷಿಕೋತ್ಸವ ದ ಅಂಗವಾಗಿ ಶೈಖುನಾ ತಾಜುಲ್ ಉಲಮಾ ಅನುಸ್ಮರಣೆಯ ಪ್ರಯುಕ್ತ ಇತ್ತೀಚೆಗೆ ಉಳ್ಳಾಲದ ಮಾಸ್ತಿಕಟ್ಟೆಯ ಜಂಕ್ಷನ್ನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸುಮಾರು 55 ವರ್ಷ ಉಳ್ಳಾಲದಲ್ಲಿಯೇ ದೀನಿ ಸೇವೆ ಮಾಡಿದ ಶೈಖುನಾ ಅಹ್ಮದ್ ಬಾವ ಉಸ್ತಾದರಿಗೆ ಶೈಖುನಾ ತಾಜುಲ್ ಉಲಮಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದರ ಅಧ್ಯಕ್ಷ ಸೈಯದ್ ಜಲಾಲ್ ತಂಙಳ್ ಕಾರ್ಯಕ್ರಮ ಆರಂಭಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಇದರ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಶಿಹಾಬುದ್ದೀನ್ ಸಖಾಫಿ ಅಲ್ ಕಾಮಿಲಿ ಉದ್ಘಾಟನೆ ಮಾಡಿದರು. ಸುಂದರಿಬಾಗ್ ಜುಮಾ ಮಸೀದಿ ಖತೀಬ್ ಷರೀಫ್ ಸಅದಿ ಉಸ್ತಾದರು ಅನುಸ್ಮರಣಾ ಬಾಷಣ ಮಾಡಿದರು. ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಸಂದೇಶ ಭಾಷಣ ಮಾಡಿದರು. ಯು ಎಸ್ ಹಂಝ ಹಾಜಿ, ಕೌನ್ಸಿಲರ್ ಇಬ್ರಾಹಿಮ್ ಶೌಕತ್…

Read More

UN NETWORKS ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಇಂದಿನಿಂದ ಜನವರಿ 14ರ ವರೆಗೆ ನಡೆಯುವ ಆಳ್ವಾಸ್ ವಿರಾಸತ್-2018 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಸಂಜೆ 5.15 ರಿಂದ ಮೆರವಣಿಗೆ, 5.30ರಿಂದ 6.45ರ ವರೆಗೆ ಸಭೆ ನಡೆಯಲಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ ವಿರಾಸತ್ 2018 ನ್ನು ಉದ್ಘಾಟಿಸಲಿದ್ದಾರೆ. ಸುಪ್ರಸಿದ್ಧ ಹಿಂದೂಸ್ಥಾನಿ ಗಾಯಕರಾದ ಪದ್ಮಭೂಷಣ ರಾಜನ್ -ಸಾಜನ್ ಮಿಶ್ರಾ ಸಹೋದರರಿಗೆ ಆಳ್ವಾಸ್ ವಿರಾಸತ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. 160 ಅಡಿ ಉದ್ದ, 60 ಅಡಿ ಅಗಲದ ವಿಶಾಲ ವೇದಿಕೆ, 50,000 ಮಂದಿ ಕುಳಿತು ಕಾರ್ಯಕ್ರಮ ಆಸ್ವಾದಿಸಬಹುದಾದ ಗ್ಯಾಲರಿ, ಮೋಹಕ ವಿದ್ಯುದ್ದೀಪಾಲಂಕಾರ, ಅತ್ಯುತ್ತಮ ಬೆಳಕು- ಧ್ವನಿ ವ್ಯವಸ್ಥೆ ವಿರಾಸತ್ ಸಂಭ್ರಮಕ್ಕೆ ಪೂರಕವಾಗಿದೆ.ವ್ಯವಸ್ಥಿತ ಪಾರ್ಕಿಂಗ್, ಖಾದ್ಯಗಳ ಮಳಿಗೆಗಳಿವೆ. ವಿದ್ಯಾರ್ಥಿ ಸ್ವಯಂಸೇವಕರು, ಮಾರ್ಗದರ್ಶಿ ಶಿಕ್ಷಕರು,…

Read More

UN NETWORKS ಉಳ್ಳಾಲ: ಉಚ್ಚಿಲ ಫುಟ್ ಬಾಲ್ ಫ್ಯಾನ್ಸ್ ನೇತೃತ್ವದಲ್ಲಿ ನಡೆಯುವ ಉಚ್ಚಿಲ ಫುಟ್‍ಬಾಲ್ ಲೀಗ್ 2018ರ ಸಮಾರೋಪ ಕಾರ್ಯಕ್ರಮದಲ್ಲಿ ಬ್ರದರ್ಸ್ ಉಚ್ಚಿಲ ಇದರ ಮಾಜಿ ತರಬೇತುದಾರರಾದ ನಾಗೇಶ್ ಉಚ್ಚಿಲ್,ಯುವ ಕ್ರೀಡಾಪಟು ಸಫ್ವಾನ್ ಮತ್ತು ಅನಾನ್ ಅವರನ್ನು ಸನ್ಮಾನಿಸಲಾಯಿತು. ಯು.ಆರ್.ಅಕಾಡೆಮಿ ಆಫ್ ಸೋಕರ್ ಇದರ ಸಂಚಾಲಕ ಉಮೇಶ್ ಉಚ್ಚಿಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡೆಯಿಂದ ತಂಡ ಶಕ್ತಿ,ಉತ್ತಮ ಆರೋಗ್ಯ,ಮತ್ತು ಶಿಸ್ತನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು. ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕೃಷ್ಣ ಗಟ್ಟಿ ಕೋಟೆಕಾರ್,ಮುಹ್ಸಿನ್ ರಹ್ಮಾನ್,ಶಾಬುದ್ದೀನ್,ಝಾಹಿದ್ ಹುಸೈನ್,ಶಾಹುಲ್ ಹಮೀದ್, ಮುಝಪರ್ ಅಹ್ಮದ್, ಅಬ್ಬಾಸ್,ಹಿದಾಯತ್,ನಕೀಬ್,ಇಸ್ಮಾಯಿಲ್ ನಾಗತೋಟ,ಉಚ್ಚಿಲ ಫುಟ್ ಬಾಲ್ ಲೀಗ್ ಇದರ ಸಂಯೋಜಕರಾದ ಆರೀಫ್ ಉಚ್ಚಿಲ್,ಕರೀಮ್ ಉಚ್ಚಿಲ್,ಸಮೀರ್ ಉಚ್ಚಿಲ್,ಸವಾದ್ ಉಚ್ಚಿಲ್ ಉಪಸ್ಥಿತರಿದ್ದರು.ಬಿಬಿ.ಜಿ ಉಚ್ಚಿಲ ಪ್ರಥಮ ಸ್ಥಾನ ಮತ್ತು ಎನ್. ಫ್ಯೂ .ಗೋ .ಎಫ್.ಸಿ ದ್ವಿತೀಯ ಸ್ಥಾನ ಪಡೆಯಿತು.

Read More

UN NETWORKS ಮಂಗಳೂರು : ಕರಾವಳಿಯ ಜನಪದ ಪ್ರತೀಕವಾಗಿರುವ ಯಕ್ಷಗಾನ ಪ್ರದರ್ಶನದ ಪ್ರಸಂಗವೊಂದರಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದ್ದು ಅತ್ಯಂತ ಕೀಳಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅದರೆ ಸಾಮಾಜಿಕ ಜಾಲತಾಣಗಳಲ್ಲಿ ಯಕ್ಶಗಾನದಲ್ಲಿ ಕೂಡ ಮುಸ್ಲಿಂ ಸಮುದಾಯದ ಬಗ್ಗೆ ಮತ್ತು ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಮುಸ್ಲಿಮರಿಗೆ ಹುಟ್ಟುವ ಮಕ್ಕಳ ಬಗ್ಗೆ ಅವಮಾನಿಸಲಾಗಿದೆ.ಮುಸ್ಲಿಮರಿಗೆ ಹುಟ್ಟುವ ಇಷ್ಟೊಂದು ಮಕ್ಕಳು ನಿಮಗೆ ಹುಟ್ಟಿದ್ದು ಎಂಬ ಗ್ಯಾರಂಟಿ ಇದೆಯೇ ಎಂದು ಅವಹೇಳನ ಮಾಡಿ ಅತೀ ಕೀಳು ಭಾಷೆ ಬಳಸಲಾಗಿದೆ. ಮುಸ್ಲಿಮರು ನೀವು ಎಲ್ಲಿಂದಲೋ ಬಂದವರು ಎಂದು ಉಲ್ಲೇಖಿಸಲಾಗಿದೆ. ಹಿಂದುಗಳ ದಾರ್ಮಿಕ ಕಾರ್ಯಕ್ರಮದಲ್ಲಿ ಕೂಡ ಕೋಮುಪ್ರಚೋದನೆ ಮಾಡಿದ ವಿರುದ್ದ ಮುಸ್ಲಿಂ ಸಮುದಾಯ ಸಂಘಟನೆಗಳು ಗಮನಿಸಬೇಕು .ಇದರ ವಿರುದ್ದ ಕೇಸು ದಾಖಲಿಸಬೇಕು. ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇನ್ನೊಂದು ಧರ್ಮವನ್ನು ಅವಮಾನಿಸುತ್ತಿರುವುದು.ಹಿಂದು ಧರ್ಮಕ್ಕೆ ಶೋಭೆ ತರುವಂತದಲ್ಲ.ಇಂತಹ ಅವಿವೇಕಿ ಯಕ್ಷಗಾನದ ಆಟವನ್ನು ಕೊನೆಗೊಳಿಸಿ ಇಲ್ಲದಿದ್ದರೆ ಇಂತಹ ಪಾತ್ರದಾರಿಗಳು ಬೀದಿಯಲ್ಲಿ ಹೆಣವಾಗುದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಲ್ಲಾದಕ್ಕೂ ಒಂದು ಮಿತಿ ಎಂಬುವುದು ಇದೆ ನೆನಪಿರಲಿ ಮುಸ್ಲಿಮರು…

Read More

UN NETWORKS ಉಳ್ಳಾಲ: ನಾಟೆಕಲ್‍ನಲ್ಲಿ ಮಸೀದಿ, ಅಂಗಡಿಗಳಿಗೆ ದಾಂಧಲೆ ನಡೆಸಿ ಗಲಭೆಗೆ ಪ್ರಚೋದಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಹಿಂದಿರುವ ಶಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಾಟೆಕಲ್ ವರ್ತಕರ ಸಂಘ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿತು. ಜ.7 ರಂದು ರಕ್ಷೀದಿ ಮಸೀದಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಉಸ್ತಾದರನ್ನು ಹುಡುಕಿ ಸಿಗದೇ ಇದ್ದಾಗ ಮಸೀದಿಯ ಪೀಠೋಪಕರಣಗಳನ್ನು ಹಾನಿಗೈದಿದ್ದರು. ಇದೇ ವೇಳೆ ನಾಟೆಕಲ್ ಪರಿಸರದಲ್ಲಿರುವ ಮೂರು ಅಂಗಡಿಗಳ ಸೊತ್ತುಗಳಿಗೂ ಹಾನಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೂ, ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಇವರ ಹಿಂದಿರುವ ಶಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ವೇಳೆ ನಾಟೆಕಲ್ ವರ್ತಕರ ಸಂಘದ ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಅನಂದ್. ಕಾರ್ಯದರ್ಶಿ ಇಮ್ರಾನ್, ಜೊತೆ ಕಾರ್ಯದರ್ಶಿ ಕೆ ಮೊಹಮ್ಮದ್. ಮಾಧ್ಯಮ ಸಲಹೆಗಾರ ಅಬ್ಬಾಸ್ ಕಿನ್ಯ, ಸದಸ್ಯರಾದ ಇಬ್ರಾಹಿಂ ಸಾಧಿಕ್, ಎ.ಎಸ್ ಮೊಹಮ್ಮದ್,…

Read More

UN NETWORKS ಕೊಣಾಜೆ: ಶ್ರೀ ನಾಗಬ್ರಹ್ಮ ಭಜನಾ ಮಂಡಳಿ(ರಿ) ಪಟ್ಟೋರಿ, ಕೊಣಾಜೆ ಇದರ ಆಶ್ರಯದಲ್ಲಿ ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನದಲ್ಲಿ ಬಡಾಜೆಬೀಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಯವರ ಮಾರ್ಗದರ್ಶನದಲ್ಲಿ ಫೆ.3ರಿಂದ 10ರವರೆಗೆ ನಡೆಯಲಿರುವ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬುಧವಾರ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅಖಂಡ ಭಜನಾ ಸಮಿತಿಯ ಅಧ್ಯಕ್ಷರಾದ ರಘುರಾಮ ಕಾಜವ ಅವರು, ಪಟ್ಟೋರಿಯ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನವು ಪುರಾತನವಾದ ದೈವಸ್ಥಾನವಾಗಿದ್ದು, ಕಳೆದ ಹಲವಾರು ವರ್ಷದಿಂದ ಇಲ್ಲಿ ಭಜನಾ ಸೇವೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಹಾಗೆಯೇ ಈ ಭಾರಿ ಅಖಂಡ ಭಜನಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು ಈ ಪುಣ್ಯ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಪ್ರತಿಯೊಬ್ಬರ ಸಹಕಾರವೂ ಅತ್ಯಗತ್ಯವಾಗಿದ್ದು ಭಕ್ತಿಪೂರ್ವಕವಾಗಿ ದೇವರ ಸೇವೆಯಲ್ಲಿ ತೊಡಗಿಸಿಕೊಳ್ಳೋಣ ಎಂದರು. ಕಾರ್ಯಾಧ್ಯಕ್ಷರಾದ ಕರುಣಾಕರ ಕಾನ ಅವರು ಮಾತನಾಡಿ ಈಗಾಗಲೇ ಅಖಂಡ ಭಜನಾ ಸಪ್ತಾಹದ ಅಂಗವಾಗಿ ವಿವಿದ ಸಮಿತಿಗಳನ್ನು ರಚಿಸಲಾಗಿದೆ. ಅಲ್ಲದೆ ಈ ಭಜನಾ ಸಪ್ತಾಹಕ್ಕೆ ವಿವಿದ ಕಡೆಯ ಭಜನಾ ಮಂಡಳಿಗಳು ಕೂಡಾ ಸಹಕಾರವನ್ನು…

Read More

UN NETWORKS ಉಳ್ಳಾಲ: ದೀಪಕ್ ರಾವ್ ಮೃತದೇಹವಿದ್ದ ವಾಹನದ ಮೇಲೆ ನಿಂತು ಭಾಷಣ ಮಾಡುವವರು ಹೆಣದ ಮೇಲೆ ರಾಜಕೀಯ ನಡೆಸುತ್ತಿರುವುದು ಸ್ಪಷ್ಟವಾಗಿದ್ದು, ಮಾನವೀಯತೆಯನ್ನು ಕೊಲ್ಲುವ ಕೆಲಸ ಜಿಲ್ಲೆಯಲ್ಲಿ ಆಗುತ್ತಿದ್ದು, ಇದನ್ನು ಗಟ್ಟಿಗೊಳಿಸುವ ಪ್ರಯತ್ನ ಜನತೆಯಿಂದ ಆಗಬೇಕಿದೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದ್ದಾರೆ. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ವತಿಯಿಂದ ದೀಪಕ ರಾವ್ ಮತ್ತು ಬಶೀರ್ ಅವರ ಗೌರವಾರ್ಥ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೀಪಕ್ ರಾಜ್ ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ರಾಜಕೀಯ ಮಾಡಲು ಹೊರಟವರು , ದೀಪಕ್ ಮೃತದೇಹ ಹೊರುತ್ತಿದ್ದ ಆಂಬ್ಯುಲೆನ್ಸ್ ಮೇಲೆ ನಿಂತೇ ಭಾಷಣ ಬಿಗಿಯಲು ಆರಂಭಿಸಿದ್ದರು. ಇದರಿಂದ ಹೆಣದ ಮೇಲೆ ನಿಂತು ರಾಜಕೀಯ ನಡೆಸುವವರ ಮನೋಭಾವ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಕೋಮುವಾದ ಮತೀಯವಾದದ ಹೆಸರಿನಲ್ಲಿ ದಾಳಿ ದಬ್ಬಾಳಿಕೆಗಳು ನಿರಂತರವಾಗಿ ನಡೆದು ಜಿಲ್ಲೆಯ ಹೆಸರನ್ನು ಹಾಳು ಮಾಡುತ್ತಿದೆ. ಧರ್ಮಗಳ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಿ , ಅಧಿಕಾರದ ಖುರ್ಚಿಗೆ ಅಮಾಯಕರ…

Read More

UN NETWORKS ಕೊಣಾಜೆ:ಜಾತಿ ಧರ್ಮಗಳ ನಡುವೆ ಹೊಡೆದಾಟ ಕೊಲೆಯಂತಹ ಕೃತ್ಯಗಳು ಒಂದಡೆಯಾದರೆ. ಇನ್ನೊಂದೆಡೆ ಸಾಮರಸ್ಯ ಸ್ಥಾಪಿಸುವಂತಹ ಕಾರ್ಯಗಳು ನಡೆಯುತ್ತಾ ಇರುತ್ತದೆ. ಇಲ್ಲೊಂದು ಪ್ರದೇಶದಲ್ಲಿ ಶಬರಿಮಲೆ ಯಾತ್ರೆಗೆ ತೆರಳುವ ಮುನ್ನ ಮಸೀದಿಗೆ ಸೌಹಾರ್ಧಯುತ ಭೇಟಿಯನ್ನು ಕಳೆದ ಹಲವು ವರ್ಷಗಳಿಂದ ನಡೆಸಿಕೊಂಡು ಬರುವ ಕಾರ್ಯ ನಡೆಸುತ್ತಾ ಬಂದಿದೆ. ಕೊಣಾಜೆ ಸಮೀಪದ ಶಾರದಾನಗರದ ಸಪ್ತಸ್ವರ ಕಲಾತಂಡದ ಅಯ್ಯಪ್ಪ ವೃತಧಾರಿಗಳು ಸಾಮರಸ್ಯಕ್ಕಾಗಿ ಮಸೀದಿಗೆ ಸೌಹಾರ್ದ ಭೇಟಿಯನ್ನು ನಡೆಸಿಕೊಂಡು ಬರುವ ಯಾತ್ರಾರ್ಥಿಗಳಾಗಿದ್ದು, ಕಳೆದ ಹಲವು ವರ್ಷಗಳಿಂದ ಕೋಡಿಜಾಲ್‍ನ ರಿಫಾಯಿಯ ಜುಮಾ ಮಸೀದಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥನೆ ಸಲ್ಲಿಸಿ ಸಿಹಿ ಹಂಚುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ವರ್ಷವೂ ಮಸೀದಿಗೆ ಬುಧವಾರ ಭೇಟಿ ನೀಡಿದ ಭಕ್ತಾಧಿಗಳ ತಂಡ ಮಸೀದಿಯ ಮದರಸದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಗುರುಸ್ವಾಮಿ ರಾಮಚಂದ್ರ ಗಟ್ಟಿ ಮೇಲಿನತೋಟ, ಚಿತ್ತರಂಜನ್, ಅನೂಪ್, ಶರತ್ ನೇತೃತ್ವದ ಅಯ್ಯಪ್ಪ ಮಾಲಾಧಾರಿಗಳನ್ನು ಮಸೀದಿಯ ಖತೀಬರಾದ ಅಬೂಬಕ್ಕಾರ್ ಸಖಾಫಿ, ಪ್ರ. ಕಾರ್ಯದರ್ಶಿ ಅಬೂಬಕ್ಕಾರ್ ಕೋಡಿಜಾಲ್, ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್ ಬರಮಾಡಿಕೊಂಡರು.

Read More