ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ರಾಜ್ಯ ಸಚಿವ ಯು.ಟಿ.ಖಾದರ್ ರವರ ಸಹೋದರ ಯು.ಟಿ.ಇಫ್ತಿಕಾರ್ ಆಲಿಯವರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಳ್ಳುವ ಕುರಿತಂತೆ ಚಿಂತನೆ ನಡೆಸುತ್ತಿದ್ದಾರೆ. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಜಾತ್ಯಾತೀತ ನಿಲುವು ಮತ್ತು ದೇಶದೆಲ್ಲೆಡೆ ಬಿಜೆಪಿಗೆ ವ್ಯಕ್ತವಾಗುತ್ತಿರುವ ಒಲವುಗಳನ್ನು ಮನಗಂಡು ಸ್ವತ: ರಾಜಕೀಯ ಮಹತ್ವಾಕಾಂಕ್ಷಿಯೂ ಆಗಿರುವ ಇಫ್ತಿಕಾರ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅವರ ಆಪ್ತವಲಯಗಳು ತಿಳಿಸಿವೆ. ಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿಗೆ ಇಫ್ತಿಕಾರ್ ರಂತಹ ಮುಸ್ಲಿಂ ಯುವ ನಾಯಕರ ಅಗತ್ಯವೂ ಬಹಳಷ್ಟಿದೆ ಎಂಬುದನ್ನು ಅಲ್ಲಿನ ಹಿರಿಯರು ಒಪ್ಪಿಕೊಳ್ಳುತ್ತಿದ್ದಾರೆ. ಇಫ್ತಿಕಾರ್ ಆಲಿ ಬಿಜೆಪಿಗೆ ಸೇರ್ಪಡೆಗೊಂಡದ್ದೇ ಆದಲ್ಲಿ ಅವರನ್ನು ಬೆಂಗಳೂರಿನ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕೂಡಾ ಬಿಜೆಪಿ ಮುಖಂಡರು ನಿರ್ಧರಿಸಿದಂತಿದೆ. ಕಾಂಗ್ರೆಸ್ ಶಾಸಕ ಹ್ಯಾರಿಸ್ ಪ್ರತಿನಿಧಿಸುತ್ತಿರುವ ಶಾಂತಿನಗರದಿಂದಲೇ ಇಫ್ತಿಕಾರ್ ರವರಿಗೆ ಸ್ಪರ್ಧಿಸಲು ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಇಫ್ತಿಕಾರ್ ಬಿಜೆಪಿ ಸೇರ್ಪಡೆ ಕುರಿತಂತೆ…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಆಕರ್ಷಕವಾಗಿ ನಿರ್ಮಾಣಗೊಂಡಿರುವ ಸರ್. ಸಿ.ವಿ.ರಾಮನ್ ವೃತ್ತದ ಉದ್ಘಾಟನೆ ಸಮಾರಂಭ ಗುರುವಾರ ಸಂಜೆ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಿಂಗಾಪುರ್ ನಾನ್ಯಾಂಗ್ ಟೆಕ್ನಲಾಜಿಕಲ್ ವಿಶ್ವವಿದ್ಯಾಲಯದ ಹಿರಿಯ ಕಾರ್ಯಗಾರಿ ನಿರ್ದೇಶಕ ಹಾಗೂ ವಿಜ್ಞಾನಿ ಪ್ರೊ.ಬಿ.ವಿ.ಆರ್. ಚೌಧರಿ ಅವರು, ಮಂಗಳೂರು ವಿಶ್ವವಿದ್ಯಾಲಯ ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿದ್ದು ದೇಶದ ಪ್ರತಿಷ್ಟಿತ ವಿವಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಅಲ್ಲದೆ ಇದೀಗ ಕ್ಯಾಂಪಸ್ನಲ್ಲಿ ಸುಂದರವಾದ ವೃತ್ತ ನಿರ್ಮಾಣವಾಗಿದ್ದು ಇದಕ್ಕೆ ಸರ್ ಸಿ.ವಿ.ರಾಮನ್ ಹೆಸರಿಟ್ಟಿದ್ದು ಇದರ ಮೌಲ್ಯವನ್ನು ಹೆಚ್ಚಿಸಿದೆ. ಈ ಸಿ.ವಿ.ರಾವiನ್ ವೃತ್ತವು ಮುಂದಿನ ದಿನಗಳಲ್ಲಿ ವಿವಿಯ ಪ್ರಮುಖ ಆಕರ್ಷಕ ಕೇಂದ್ರವಾಗಲಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿಯ ಕುಲಪತಿ ಪ್ರೊ.ಕೆ.ಭೈರಪ್ಪ ಅವರು, ಸಿ.ವಿ.ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಪಾರವಾದುದು. ಅವರು ಸಮಾಜಕ್ಕೆ ನೀಡಿದ ಕೊಡುಗೆಯಿಂದ ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ವೈಫೈ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯಗಳ ವಿಸ್ತರಣೆ ಮಾಡಲಾಗಿದ್ದು ಅದೇ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಮರೋಳಿ ದಿ. ಮಹಾಬಲ ಐತಾಳ್ ಅವರ ಪತ್ನಿ ಪಡುಬಿದ್ರಿ ನಿವಾಸಿ ಪಿ.ಸುಶೀಲಾ ಐತಾಳ್(64) ಎ. 19ರಂದು ಬುಧವಾರ ನಿಧನ ಹೊಂದಿದರು. ನಾಗುರಿಯ ಹಿಂದೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸುದೀ್ರ್ಘ ಸೇವೆ ಸಲ್ಲಿಸಿದ್ದ ಅವರು ಮುಖ್ಯೋಪಾಧ್ಯಾಯಿನಿಯಾಗಿ ನಿವೃತ್ತಿ ಹೊಂದಿದ್ದರು. ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ತೊಡಗಿಸಿಕೊಂಡಿದ್ದ ಅವರು ಮರೋಳಿ ಐತಾಳ್ ಮನೆಯ ಸದಸ್ಯೆಯಾಗಿ ಜನಾನುರಾಗಿಯಾಗಿದ್ದರು. ಮೃತರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ಬದುಕಿನಲ್ಲಿ ಸುಖ, ಕಷ್ಟ, ನಷ್ಟಗಳು ಸಾಮಾನ್ಯ. ಆದರೆ ಅದನ್ನು ಬಂಡೆಗಲ್ಲಿನಂತೆ ಗಟ್ಟಿಯಾಗಿ ಎದುರಿಸಿ ಮುನ್ನಡೆಯುವುದೇ ಜೀವನ. ಬದುಕಿನಲ್ಲಿ ಯಾವತ್ತೂ ನಾವು ಸುಖವನ್ನು ಮಾತ್ರ ಬಯಸದೆ ವಿದ್ಯಾವಂತರಾಗುವುದರೊಂದಿಗೆ ಉತ್ತಮ ಜೀವನವನ್ನು ಕಂಡುಕೊಳ್ಳಲು ಪರರ ದುಃಖಗಳಿಗೂ ಸ್ಪಂದಿಸುವುದರೊಂದಿಗೆ ಮುನ್ನಡೆಯಬೇಕು ಎಂದು ಯಕ್ಷಗಾನದ ಹಾಸ್ಯ ಕಲಾವಿದ ಹಾಗೂ ಯಕ್ಷರಂಗದ ಚಾರ್ಲಿ ಚಾಪ್ಲಿನ್ ಖ್ಯಾತಿಯ ಸೀತರಾಮ ಕುಮಾರ್ ಕಟೀಲ್ ಅವರು ಅಭಿಪ್ರಾಯ ಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ನಡೆದ ಮೂರು ದಿನಗಳ ಅಂತರ್ ವಿಭಾಗೀಯ ಮಟ್ಟದ ಸಾಂಸ್ಕತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇಂದು ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ಅವಕಾಶಗಳಿವೆ, ಹೆತ್ತವರ ಪ್ರೋತ್ಸಾಹ ಸರ್ಕಾರದ ಅನುದಾನವೂ ಸಿಗುತ್ತದೆ. ಆದರೆ ತಾನು ಬಡ ಕುಟುಂಬದಲ್ಲಿ ಹುಟ್ಟಿದ್ದು ನಾಲ್ಕನೇ ತರಗತಿ ಮಾತ್ರ ಕಲಿಯಲು ಸಾಧ್ಯವಾಯಿತು. ಆ ಸಂದರ್ಭ ಟೀಚರ್ ಕೊಟ್ಟ ಚಡ್ಡಿ ತೊಟ್ಟು ಶಾಲೆಗೆ ಹೋಗುತ್ತಿದ್ದೆ, ಹಿಂದಿನ ಭಾಗ ಹರಿದರೂ ಕೈಇಟ್ಟುಕೊಂಡು ಹೋಗುತ್ತಿದ್ದೆ. ಜೀವನ ಸಾಗಿಸಲು ಕಷ್ಟ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಜಿಲ್ಲೆ ಬರಗಾಲ ಪ್ರದೇಶ ಎಂದು ಘೋಷಣೆಯಾದರೂ , ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ನೀರಿನ ಸಮಸ್ಯೆಯ ಹಿನ್ನೆಲೆಯಲ್ಲಿ ಶಾಸಕರ ಅನುದಾನದಡಿ ಕೆರೆ ಅಭಿವೃದ್ದಿಗೆ ಮುಂದಾದ ವೇಳೆ ಅಚ್ಚರಿ ಎಂಬಂತೆ ಏಕಾಏಕಿ ಅಂತರ್ಜಲ ಒಸರಿದ ಘಟನೆ ಪಂಚಾಯಿತಿ ವ್ಯಾಪ್ತಿಯ ಬೆಳ್ಮದೋಟ ಕುಡ್ಪಡ್ಪು ಎಂಬಲ್ಲಿ ಬುಧವಾರ ನಡೆದಿದೆ. ಬೆಳ್ಮದೋಟದ ಕುಡ್ಪಡ್ಪುವಿನ ಸುಮಾರು 150 ಮನೆಗಳಿಗೆ ನೀರು ಪೂರೈಸುವ ಉದ್ದೇಶದಿಂದ ಚಂದ್ರಹಾಸ್ ಶೆಟ್ಟಿ ಎಂಬವರ ಕೃಷಿ ಗದ್ದೆಯಲ್ಲಿ ಕೆರೆ ಅಭಿವೃದ್ದಿ ಕಾರ್ಯಕ್ಕೆ ಬೆಳ್ಮ ಗ್ರಾ.ಪಂ ಮುಂದಾಗಿತ್ತು. ಅಲ್ಲದೇ ಈ ಕಾರ್ಯಕ್ಕೆ ಸ್ಥಳೀಯ ಶಾಸಕ ಯು.ಟಿ.ಖಾದರ್ ಅನುದಾನದಿಂದ ಮೂರು ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ಹೀಗಾಗಿ ಬುಧವಾರ ಬೆಳಿಗ್ಗೆ ಜೆಸಿಬಿ ಸಹಿತ ಕರೆ ಅಭಿವೃದ್ದಿ ಕಾರ್ಯಕ್ಕೆ ಪಂಚಾಯಿತಿ ಆಡಳಿತ ಮುಂದಾಗಿತ್ತು. ಗುದ್ದಲಿ ಪೂಜೆ ನಡೆಸುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗದ್ದೆಗಿಳಿದ ಜೆಸಿಬಿ ವಾಹನ ಗದ್ದೆಯನ್ನು ಕೊರೆದು ಕೆರೆಯ ಮಾದರಿಗೆ ಪರಿವರ್ತಿಸಲು ಮುಂದಾದ ಕೇವಲ ಇಪ್ಪತ್ತು ನಿಮಿಷದಲ್ಲಿ ಅಲ್ಲೊಂದು ಅಚ್ಚರಿ ನಡೆದಿದೆ.…
ಉಳ್ಳಾಲ ನ್ಯೂಸ್ ನೆಟ್ವರ್ಕ್ ವಿಟ್ಲ: ಕರೋಪಾಡಿ ಗ್ರಾ. ಪಂ ಉಪಾಧ್ಯಕ್ಷನನ್ನು ಮುಸುಕುಧಾರಿಗಳ ತಂಡ ಬರ್ಬರವಾಗಿ ತಲವಾರಿನಿಂದ ಕಡಿದ ಪರಿಣಾಮ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪೂರ್ವದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ಇದೆ. ಬಂಟ್ವಾಳ ತಾಪಂ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿಯವರ ಪುತ್ರ, ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರ ಮೇಲೆ ಪಂಚಾಯತ್ ಆವರಣದಲ್ಲೇ ನಾಲ್ವರು ಮುಸುಕುಧಾರಿಗಳ ತಂಡ ತಲವಾರುಗಳಿಂದ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ಅಪಘಾತದಲ್ಲಿ ಇತ್ತೀಚೆಗೆ ಮೃತಪಟ್ಟ ಕೊಣಾಜೆ ಕುಂಟಾಳಗುಳಿಯ ಶೇಖರ್ ಅವರ ಕುಟುಂಬಕ್ಕೆ ಕುಂಟಾಳಗುಳಿಯ ಶ್ರೀ ಮಹಾಕಾಳಿ ಸೇವಾ ಮಂಡಳಿ(ರಿ) ಇದರ ವತಿಯಿಂದ ಸಹಾಯಧನವನ್ನು ವಿತರಿಸಲಾಯಿತು. ಕುಂಟಾಳಗುಳಿ ಶೇಖರ್ (23) ಅವರು ಕಳೆದ ಕೆಲವು ದಿನಗಳ ಹಿಂದೆ ಕೊಣಾಜೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಅವರ ತಂದೆಯೂ ಮೃತಪಟ್ಟಿದ್ದರು. ಕುಟುಂಬದ ಆಧಾರಸ್ಥಂಭವಾಗಿದ್ದ ಶೇಖರ್ ಅವರು ಮೃತಪಟ್ಟ ಕಾರಣ ಬಡ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಕುಂಟಾಳಗುಳಿಯ ಶ್ರೀ ಮಹಾಸೇವಾ ಮಂಡಳಿಯ ಪದಾಧಿಕಾರಿಗಳು ನಿರ್ಧರಿಸಿ ಧನ ಸಂಗ್ರಹಿಸಿ ಸುಮಾರು 22 ಸಾವಿರ ರೂಪಾಯಿಯ ಚೆಕ್ ಅನ್ನು ಶ್ರ ಮಹಾಕಾಳಿ ವನಸಾನಿಧ್ಯದ ಬಳಿ ಶೇಖರ್ ಅವರ ತಾಯಿಗೆ ಹಸ್ತಾಂತರಿಸಿದರು. ಈ ಸಂಭರ್ದದಲ್ಲಿ ಶ್ರೀ ಮಹಾಕಾಳಿ ಸೇವಾ ಮಂಡಳಿಯ ಅಧ್ಯಕ್ಷರಾದ ಶಂಕರ್ ಭಟ್, ಪದಾಧಿಕಾರಿಗಳಾದ ಶ್ರಿವಪ್ರಕಾಶ್ ಭಟ್, ಉದಯ ಶೆಟ್ಟಿ, ಉದಯ ಕೃಷ್ಣ, ಡಾ.ಎಸ್.ಎನ್.ಭಟ್, ಕೃಷ್ಣ ಭಟ್, ಶ್ರೀಧರ ಭಟ್, ಕೃಷ್ಣಪ್ಪ ಕಾನ, ಸುಧಾಕರ ಕಾನ,…
ಉಳ್ಳಾಲ ನ್ಯೂಸ್ ನೆಟ್ವರ್ಕ್ ದೇಶದ ಅಭಿವೃದ್ಧಿ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಸಂರಕ್ಷಣೆ ಮಾಡುವಲ್ಲಿ ಸಂಘ ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಸಪ್ತಸ್ವರ ಕಲಾತಂಡವು ಕಳೆದ ಹಲವಾರು ವರ್ಷದಿಂದ ಶಾರದಾ ಮಾತೆಯ ಆರಾಧನೆಯೊಂದಿಗೆ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಸಪ್ತಸ್ವರ ಕಲಾ ತಂಡ(ರಿ) ಶಾರದಾ ನಗರ ಕೊಣಾಜೆ ಇದರ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಗುರುವಾರ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ರಾಮಾಯಣ ಮಹಾಭಾರತ ಕಾಲದಲ್ಲೂ ರಾವಣ, ದುಶ್ಯಾಸನರಂತಹ ದುರುಳರು ಇದ್ದರು. ಅದೇ ರೀತಿ ಆಗಿನ ಕಾಲದಂತೆ ಇಂದಿನ ಕಾಲದಲ್ಲೂ ಸಮಾಜದಲ್ಲಿ ಉತ್ತಮರೂ ದುರುಳರೂ ಇದ್ದಾರೆ. ಆದ್ದರಿಂದ ಇಂತಹ ಸಂಘ ಸಂಸ್ಥೆಗಳ ಮೂಲಕ ಎಲ್ಲರಲ್ಲೂ ಉತ್ತಮ ಮನಸ್ಸುಗಳನ್ನು ನಿರ್ಮಾಣ ಮಾಡಿ ಸಮಾಜದ ಏಳಿಗಾಗಿ ಪ್ರಯತ್ನಿಸಬೇಕು ಎಂದರು. ಸಪ್ತಸ್ವರ ಕಲಾ ತಂಡದ ಗೌರವ ಸಲಹೆಗಾರ ರವೀಂದ್ರ ರೈ ಹರೇಕಳ, ಮಾಡೂರು ಸಾಯಿಧಾಮದ ಶ್ರೀ ಶಿರಡಿ ಸಾಯಿ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ರಾಜ್ಯದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಎಂದೇ ಗುರುತಿಸಿಕೊಂಡಿದ್ದ ಉಳ್ಳಾಲ ಇಂದು ಕ್ಷೇತ್ರ ಬದಲಾವಣೆಯಿಂದಾಗಿ ಮಂಗಳೂರು ಕ್ಷೇತ್ರವಾಗಿ ಮಾರ್ಪಟ್ಟಿದೆ. ಆದರೆ ಯಾವ ಬದಲಾವಣೆಯ ಮಧ್ಯೆಯೋ ಕೇಸರಿ ಪಡೆಗೆ ಉಳ್ಳಾಲದಲ್ಲಿ ಬಿಜೆಪಿ ಧ್ವಜ ಹಾರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಯು.ಟಿ.ಖಾದರ್ ಖದರ್ಗೆ ಸದ್ದು ಹೊಡೆಯಲು ಕೇಸರಿ ಪಡೆ ಸಮರ್ಥ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಸಂಘ ಪರಿವಾರದ ಗರಡಿಯಲ್ಲಿ ಪಳಗಿದ ಸತ್ಯಜಿತ್ ಸುರತ್ಕಲ್ಗೆ ಟಿಕೆಟ್ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕ್ಷೇತ್ರ ಈಗಾಗಲೇ ಖಾದರ್ ವೈಯುಕ್ತಿಕ ವರ್ಚಸ್ಸಿನ ಮಧ್ಯೆ ಕಾಂಗ್ಸೆಸ್ ಪಕ್ಷದ ಗಟ್ಟಿತನದಿಂದ ಕೈ ಜಾರುತ್ತಿಲ್ಲ. ಹೀಗಾಗಿ ಜಯರಾಮ್ ಶೆಟ್ಟಿ ಬಿಟ್ಟರೆ ಬಿಜೆಪಿಯ ಯಾವೊಬ್ಬನಿಗೂ ಕಾಂಗ್ರೆಸ್ ಸಾಮಾಜ್ಯವನ್ನು ಧೂಳೀಪಟ ಮಾಡಲು ಸಾಧ್ಯವಾಗಿಲ್ಲ. ಜಾತಿ ಸಮೀಕರಣದ ಲೆಕ್ಕಚಾರಕ್ಕೆ ಬಂದರೂ ಇಲ್ಲಿನ ನಿರ್ಧರಿತ ಮತಗಳು ಅಲ್ಪ ಸಂಖ್ಯಾತ ಸಮುದಾಯದ ತೆಕ್ಕೆಯಲ್ಲಿದೆ. ಈ ಮಧ್ಯೆ ಖಾದರ್ ಎದುರು ಸ್ಪರ್ಧಿಸಿದ್ದ ಸ್ವಕ್ಷೇತ್ರದ ಒಂದಷ್ಟು ಬಿಜೆಪಿ ಕಲಿಗಳು ಹಿಂದಿನ ಚುನಾವಣೆಗಳಲ್ಲಿ ನೆಲಕಚ್ಚಿದ್ದರು. ಅಲ್ಲದೇ ಬಿಜೆಪಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಬಾಯಾರ್ : ಮುಜಮ್ಮಉ ಸ್ಸಖಾಫತಿ ಸುನ್ನಿಯ್ಯದಲ್ಲಿ ಸ್ವಲಾತ್ ಮಜ್ಲಿಸ್ ಹಾಗು ಮುಹಿಮ್ಮಾತ್ತ್ ಸಮ್ಮೇಳನ ಪ್ರಚಾರಣೆ ನಾಳೆ ಮಗ್ರಿಬ್ ನಮಾಝಿನ ನಂತರ ನಡೆಯಲಿದೆ ಎಂದು ಮೆನೇಜರ್ ಸಿದ್ಧೀಖ್ ಸಖಾಫಿ ಬಾಯಾರ್ ತಿಳಿಸಿದ್ದಾರೆ. ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕ್ಕೋಯ ತಂಙಳ್ ಅಲ್-ಬುಖಾರಿ ಸ್ವಲಾತ್ ಮಜ್ಲಿಸ್ ಹಾಗೂ ಸಾಮೂಹಿಕ ಪ್ರಾಥ9ನೆಗೆ ನೇತೃತ್ವ ವಹಿಸುವರು. ಪ್ರಮುಖ ಪಂಡಿತರೂ ವಾಗ್ಮಿಯೂ ಆದ ಮುಳ್ಳೂರ್ಕ್ಕರೆ ಮುಹಮ್ಮದಲಿ ಸಖಾಫಿ ಮುಖ್ಯ ಪ್ರಭಾಷಣೆ ಮಾಡಲಿದ್ದಾರೆ. ಸಿ ಅಬ್ದುಲ್ಲ ಮುಸ್ಲಿಯಾರ್, ಪಳ್ಳಂಗೋಡ್ ಅಬ್ದುಲ್ ಖಾದರ್ ಮದನಿ, ಬಾಯಾರ್ ಅಬ್ದುಲ್ಲ ಮುಸ್ಲಿಯಾರ್, ಜಬ್ಬಾರ್ ಸಖಾಫಿ ಪಾತೂರ್, ಸಯ್ಯಿದ್ ಮುನೀರುಲ್ ಅಹ್ದಲ್ , ಸ್ವಲಾಹುದ್ದೀನ್ ಅಯ್ಯೂಬಿ, ಸಿ ಎನ್ ಜಹ್ಫರ್ ಸ್ವಾದಿಖ್, ಸ್ವಾದಿಖ್ ಆವಳ, ಹಾರಿಸ್ ಹಿಮಮಿ ಪರಪ್ಪ , ಅಝೀಝ್ ಸಖಾಫಿ ಮಚ್ಚಂಪಾಡಿ , ಇಬ್ರಾಹಿಂ ಪೈಸಿ ಕನ್ಯಾನ, ಜಲೀಲ್ ಕರೋಪಾಡಿ, ಸಿದ್ದೀಖ್ ಸಖಾಫಿ ಬಾಯಾರ್ ,ಸಿದ್ದೀಖ್ ಹಾಜಿ ಮಂಗಳೂರು , ಸಿದ್ದೀಖ್ ಲತ್ವೀಫಿ ಮುಂತಾದವರು ಭಾಗವಹಿಸುವರು.

