ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಂತ ಜೋಸೆಫ್ ಜೋಯ್ಲ್ಯಾಂಡ್ ಶಾಲೆ, ಸೋಮೇಶ್ವರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸ್ಥಳೀಯ ಸಂಸ್ಥೆ ಹಾಗೂ ಜೆಸಿಐ ಮಂಗಳಗಂಗೋತ್ರಿ ಜಂಟಿಯಾಗಿ ಮಂಗಳೂರು ತಾಲೂಕು ಮಟ್ಟದ ಎರಡು ದಿನಗಳ ರಾಜ್ಯ ಹಾಗೂ ರಾಷ್ಟ್ರಪತಿ ಪುರಸ್ಕಾರದಲ್ಲಿ ಭಾಗವಹಿಸಲು ಸಿದ್ಧತೆಗಾಗಿ ತರಬೇತಿ (ದಳ ರಾತ್ರಿ ತಂಗುವ ಶಿಬಿರ ಮತ್ತು ದಳ ರಾತ್ರಿ ಹೊರ ಸಂಚಾರ ಕಾರ್ಯಕ್ರಮ) ಶಿಬಿರ ಮಂಗಳವಾರ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಪ್ರಶಾಂತ ನಾಯ್ಕ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಭಾರತದಲ್ಲಿ 1909 ರಲ್ಲಿ ಪ್ರಾರಂಭವಾದ ಸ್ಕೌಟ್ ಚಳುವಳಿಗೆ ಶತಮಾನದ ಇತಿಹಾಸವಿದೆ. ಯುವ ಜನತೆಯು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕವಾಗಿ ಸಮೃದ್ಧಿ ಹೊಂದಲು ಸ್ಕೌಟ್ ಒಂದು ಉತ್ತಮ ವೇದಿಕೆಯಾಗಿದ್ದು, ದೇಶ ಸೇವೆಯಲ್ಲಿ ರಚನಾತ್ಮಕವಾಗಿ ಪಾಲ್ಗೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಮಾತ್ರವಲ್ಲ ಜೀವನದಲ್ಲಿ ಎದುರಾಗುವ ಕಠಿಣ ಪರಿಸ್ಥಿತಿಗಳನ್ನು ಧೈರ್ಯ ಮತ್ತು ಜಾಣ್ಮೆಯಿಂದ ಎದುರಿಸುವ ಕೌಶಲ್ಯವನ್ನೂ…
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ` ನನ ಅರೆ ಮರ್ಲೆ ಪಂಡ್ದ್ ಲೆಪ್ಪೊಡ್ಚಿ ಮಾರ್ರೆ’ ತಾತ್ಪರ್ಯವೆಂದರೆ ಅರೆಹುಚ್ಚನೆಂದು ಕರೆಯಬೇಡಿ ಎಂದು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡವರು ತುಳು ಚಿತ್ರರಂಗದ ಅಭಿನಯ ಚಕ್ರವರ್ತಿ ಅರ್ಜುನ್ ಕಾಪಿಕಾಡ್ . ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಇದರ ಆಶ್ರಯದಲ್ಲಿ ವಿವಿ ಕ್ಯಾಂಪಸ್ಸಿನ ಮಂಗಳ ಸಭಾಂಗಣದಲ್ಲಿ ಮಂಗಳವಾರದಿಂದ ಗುರುವಾರದವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಅಂತರ್ ವಿಭಾಗೀಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳ ` ಸಂಭ್ರಮ -2017 ‘ ಕ್ಕೆ ಮಂಗಳವಾರ ಚಾಲನೆಯನ್ನು ನೀಡಿದರು. ರಂಗ್ ಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಹುಲಿ ಎಂದು ಕರೆಯುತ್ತಿದ್ದವರು ನಂತರ ಚಂಡಿಕೋರಿ ಚಿತ್ರದ ಸಂದರ್ಭದಲ್ಲಿ ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರು ಸಹ `ಕೋರಿ’ ಎಂದೇ ಕರೆಯುತ್ತಿದ್ದರು. ಅಷ್ಟಾಗಿ ಸದ್ಯದಲ್ಲೇ ಹೊಸ ಚಿತ್ರ ಅರೆ ಮರ್ಲೆ ಬಿಡುಗಡೆಯಾಗುತ್ತಿದ್ದು, ಮುಂದೆ ನನ್ನನ್ನು ` ಅರೆ ಮರ್ಲೆ’ ಎಂದು ಕರೆಯದಿರಿ ಎಂದು ಹಾಸ್ಯದ ಮಾತುಗಳಿಂದಲೇ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ನಗೆಗಡಲಲ್ಲಿ ತೇಲಿಸಿಬಿಟ್ಟರು. ಅಪ್ಪ ದೇವದಾಸ್…
ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ ನ್ಯೂಸ್ ನೆಟ್ವರ್ಕ್ ಪೆರ್ಮನ್ನೂರು: ಪೆರ್ಮನ್ನೂರಿನ ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಈಸ್ಟರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಫಾ| ಎಡ್ವಿನ್ ಮಸ್ಕರೇನ್ಹಸ್ ಬಲಿಪೂಜೆ ನೆರವೇರಿಸಿದರು. ಫಾ| ನಿಲೇಶ್ ಕ್ರಾಸ್ತಾರವರು ಹಬ್ಬದ ಸಂದೇಶ ನೀಡಿದರು. ಫಾ| ಜೆ.ಬಿ ಸಲ್ಡಾನರವರು ಸ್ಥಾನ ದೀಕ್ಷೆಯ ಸಂಸ್ಕಾರವನ್ನು ನೆರವೇರಿಸಿದರು. ಫಾ| ಪ್ರವೀಣ್ ಜೋಯ್ ಸಲ್ಡಾನ, ಫಾ .ಜೆರಾಯ್ಡ್ ಡಿ’ಸೋಜ, ಉಪಯೋಜಕ ರವಿ ರಿಚ್ಚರ್ಡ್ ಫರ್ನಾಂಡಿಸ್ ಹಬ್ಬದ ಅಚರಣೆಯಲ್ಲಿ ಪಾಲ್ಗೊಂಡಿದ್ದರು. ಫೋಟೋ ಸ್ಟಾರ್ ಸ್ಟುಡಿಯೋ
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ಎದೆಗೆ ಗುಂಡು ಬಿದ್ದರೂ ಹೆದರದೇ ಮುಂದಿರುವ ಶತ್ರುವನ್ನು ಮುಗಿಸುವ ಧೈರ್ಯವನ್ನು ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಸೈನ್ಯಕ್ಕೆ ತೆರಳುವ ಯುವ ಜನಾಂಗಕ್ಕೆ ಸ್ಪೂರ್ತಿ ನೀಡಿದ್ದಾರೆ ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನ ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ದೇಶಕ್ಕಾಗಿ ಜಮ್ಮು ಕಾಶ್ಮೀರದ ಪಾಂಪೋರ್ ಬಳಿ ಭಯೋತ್ಪಾದಕರೊಂದಿಗೆ ಪರಸ್ಪರ ಹೋರಾಟ ನಡೆಸುತ್ತಿದ್ದ ಸಂದರ್ಭ ಐದು ಗುಂಡು ತಗುಲಿ ಸುಮಾರು ಐದೂವರೆ ತಿಂಗಳ ಕೋಮದಲ್ಲಿ ಇದ್ದು ಬಳಿಕ ಚೇತರಿಸಿಕೊಂಡು ತನ್ನ ತವರೂರಾದ ಮುಡಿಪಿಗೆ ಆಗಮಿಸಿರುವ ವೀರಯೋಧ ಸಂತೋಷ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು. ದೇಶ ಕಟ್ಟುವ ಕಾರ್ಯದೊಂದಿಗೆ ದೇಶ ಸಂರಕ್ಷಣೆಯ ಕಾರ್ಯ ಮಹತ್ವದ್ದಾಗಿದ್ದು, ದೇಶಕ್ಕಾಗಿ ಸೈನಿಕರು ಗಡಿ ಭಾಗದಲ್ಲಿ ಸಂಪೂರ್ಣ ಅರ್ಪಣಾ ಭಾವದಿಂದ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದ ಅವರು ದೇಶ ಸೇವೆಗೆ ತೊಡಗಿಸಿಕೊಳ್ಳಲು ಸಂತೋಷ್ ಅವರ ತಾಯಿ ಮತ್ತು ಪತ್ನಿಯ ತ್ಯಾಗ ಮನೋಭಾವನೆಯಿಂದ ಸಾಧ್ಯವಾಗಿದೆ ಎಂದರು. ಇದೇ ಸಂದರ್ಭ ಯೋಧನನ್ನು…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಜಗತ್ತಿನಲ್ಲಿ ಸೌಂದರ್ಯ ಆರಾಧಕರ ಸಂಖ್ಯೆಯೇ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಬಡ ಕುಟುಂಬದಲ್ಲಿರುವ ಸೀಳುತುಟಿ ಹೊಂದಿರುವ ಮಕ್ಕಳ ಚಿಕಿತ್ಸೆಯಲ್ಲಿ ಅಂತಾರಾಷ್ಟ್ರೀಯ ಫೌಂಡೇಶನ್ ಹಾಗೂ ನಿಟ್ಟೆ ಆಸ್ಪತ್ರೆ ಜಂಟಿಯಾಗಿ ಕಾರ್ಯಾಚರಿಸಿ ಸೌಂದರ್ಯದ ಜತೆಗೆ ಅವರನ್ನು ಸಮಾಜವನ್ನು ಧೈರ್ಯವಾಗಿ ಎದುರಿಸುವಂತೆ ರೂಪಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಮಕ್ಕಳ ಸೀಳುತುಟಿ ಫೌಂಡೇಷನ್ನಿನ ಸ್ಥಾಪಕ ಡಾ. ಹರ್ಮನ್ ಸೇಲರ್ ಅಭಿಪ್ರಾಯಪಟ್ಟರು. ಅವರು ಸೆಂಟರ್ ಫಾರ್ ಅಡ್ವಾನ್ಸ್ಡ್ ಡೆಂಟೊಫೇಷಿಯಲ್ ಆಂಡ್ ಸ್ಟೊಮಾಟೋಗ್ನಾಥಿಕ್ ಸೈನ್ಸಸ್ ಹಾಗೂ ಎ.ಬಿ ಶೆಟ್ಟಿ ದಂತ ಮಹಾವಿದ್ಯಾಲಯ ವಿಜ್ಞಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ` ಸರ್ಜಿಕಲ್ ಮೆನೇಜ್ ಮೆಂಟ್ ಕಾಂಪ್ಲೆಕ್ಸ್ ಕ್ರೇನಿಯೋಫೇಷಿಯಲ್ ಅನಾಮಲೀಸ್ ಮತ್ತು ಪ್ರೀಸರ್ಜಿಕಲ್ ನಾಸಲ್ವೀಯೊಲಾರ್ ಮೋಲ್ಡಿಂಗ್ ಕುರಿತ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರಕ್ಕೆ ಸೋಮವಾರ ದೇರಳಕಟ್ಟೆ ಎ.ಬಿ.ಶೆಟ್ಟಿ ಕಾಲೇಜಿನ ವಿಂಶತಿ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಸೀಳುತುಟಿ ಹೊಂದಿರುವ ಮಕ್ಕಳು ತಮ್ಮನ್ನು ಪ್ರೀತಿಸುವವರೇ ಇಲ್ಲವೆಂದು ಖಿನ್ನತೆಗೆ ಜಾರಿದ ಹಲವು ಉದಾಹರಣೆಗಳಿವೆ. ಇದರಿಂದ ಸಮಾಜದಲ್ಲಿ ಎಲ್ಲರಂತೆ ಬಾಳಲು ಹಿಂದೇಟು ಹಾಕುವ ಪರಿಸ್ಥಿತಿಯಿತ್ತು. ಇದನ್ನೆಲ್ಲಾ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಕೊಣಾಜೆ: ರಾಜ್ಯದ ಕಲೆಯಾಗಿರುವ ಯಕ್ಷಗಾನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾನಮಾನ ನೀಡುತ್ತಿದ್ದು, ಇದರ ಜತೆಗೆ ಯಕ್ಷಗಾನದ ಕುರಿತ ನೂತನ ಪದವಿ ಕೋರ್ಸನ್ನು ಸ್ಥಾಪಿಸಿ ಹೆಚ್ಚಿನ ಕಲಾವಿದರನ್ನು ಸೃಷ್ಟಿಸಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಸೋಮವಾರ ಯಕ್ಷಗಾನ ಕ್ಷೇತ್ರದ ದಿಗ್ಗಜರೆನಿಸಿಕೊಂಡ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ತಾಳಮದ್ದಳೆ ಅರ್ಥದಾರಿ, ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ, ಬಡಗುತಿಟ್ಟಿನ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ಹಾಗೂ ಯಕ್ಷಗಾನ ಹಿಮ್ಮೇಳ ತಜ್ಞ ಗೋಪಾಲಕೃಷ್ಣ ಕುರುಪ್ ಅವರಿಗೆ ಯಕ್ಷಮಂಗಳ ಪ್ರಶಸ್ತಿ ಮತ್ತು ಡಾ.ವಸಂತ ಭಾರದ್ವಾಜ ಅವರ `ಯಕ್ಷಗಾನ ಕವಿ ಕಾವ್ಯ ವಿಹಾರ’ ಕೃತಿಗೆ ಯಕ್ಷಮಂಗಳ ಕೃತಿ ಪ್ರಶಸ್ತಿಯನ್ನು ಪ್ರಧಾನ ಮಾಡಿ ಮಾತನಾಡಿದರು. ಸರಕಾರಗಳಿಂದ ನಿರೀಕ್ಷಿತ ಅಭಿವೃದ್ಧಿ ಕಲಾ ಕ್ಷೇತ್ರಕ್ಕೆ ಸಿಗುತ್ತಿಲ್ಲ. ಕ್ರೀಡಾ ಕ್ಷೇತ್ರವೂ ಅದೇ ರೀತಿಯಲ್ಲಿ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ತೊಕ್ಕೊಟ್ಟು: ಅತ್ಯಾಧುನಿಕ ತಂತ್ರಜ್ಞಾನವಿರುವ ಇಂದಿನ ಕಾಲಘಟ್ಟದಲ್ಲಿ ಮನುಷ್ಯರ ನಡುವೆ ಪ್ರೀತಿ ವಿಶ್ವಾಸ ಕಡಿಮೆಯಾಗುತ್ತಿರುವುದು ದುರಂತ. ಸಾಮಾಜಿಕ ಜಾಲತಾಣಗಳಲ್ಲಿಬರುವ ವಿಚಾರಗಳು ಕ್ಷಣ ಮಾತ್ರದಲ್ಲೇ ವೈರಲ್ಗಳಾಗುವ ಮೂಲಕ ಅನೇಕ ಸಮಸ್ಯೆ ಸೃಷ್ಟಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಸ್ಪರರಲ್ಲಿ ವಿಶ್ವಾಸ ಮೂಡಿಸಬೇಕಾದ ಕೆಲಸ ನಡೆಯಬೇಕಾಗಿರುವುದು ಅಗತ್ಯವಾಗಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಯು.ಟಿ ಖಾದರ್ ಅಭಿಪ್ರಾಯಪಟ್ಟರು. ಅವರು ಇಂದು ತೊಕ್ಕೊಟ್ಟು ಒಳಪೇಟೆಯಲ್ಲಿರುವ ಅಂಬೇಡ್ಕರ್ ಮೈದಾನದಲ್ಲಿ ಉಳ್ಳಾಲ ಜಮಾಅತೆ ಇಸ್ಲಾಮಿ ಹಿಂದ್ ಮೂರು ದಿನಗಳ ಕಾಲ ಆಯೋಜಿಸಿರುವ ಸಾರ್ವಜನಿಕ ಕುರಾನ್ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಸಾರ್ವಜನಿಕವಾಗಿ ಧರ್ಮಗ್ರಂಥಗಳ ನೈಜ ವಿಚಾರಗಳನ್ನು ತಿಳಿಸಲು ಪ್ರಯತ್ನಿಸಿರುವುದು ನಿಜಕ್ಕೂ ಉತ್ತಮ ಕಾರ್ಯ ಜಮಾಅತೆ ಇಸ್ಲಾಮಿ ಹಿಂದ್ ಈ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವು ಶ್ಲಾಘನೀಯ ಎಂದರು. “ಮಾನವ ಜೀವನದ ವಾಸ್ತವಿಕತೆ”ಎಂಬ ವಿಷಯದಲ್ಲಿ ಕುರಾನ್ ಪ್ರವಚನ ನೀಡಿದ ತೊಕ್ಕೊಟ್ಟು ಮಸ್ಜಿದುಲ್ ಹುದಾದ ಖತೀಬರಾದ ಮಹಮ್ಮದ್ ಕುಂಞ ಮಾನವರ ಬದುಕಿಗೆ ಕೊನೆ ಇದೆ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು: ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಾರ್ಷಿಕ ವಿಷು ಜಾತ್ರಾಮಹೋತ್ಸವ ಸಂದರ್ಭದಲ್ಲಿ ಸಾವಿನ ದವಡೆಯಿಂದ ಪಾರಾಗಿ ಬಂದ ಮುಡಿಪು ನಿವಾಸಿ ವೀರ ಯೋಧ ಸಂತೋಷ್ ಅವರಿಗೆ ಕುರ್ನಾಡು ಫ್ರೆಂಡ್ಸ್ ಸರ್ಕಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಅವರ ತಾಯಿ ವಿಮಲಾ ಹಾಗೂ ಕುರ್ನಾಡು ಫೆಂಡ್ಸ್ ಸರ್ಕಲ್ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಮಾಡೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಶಬರಿ ಫ್ರೆಂಡ್ಸ್ ಮಾಡೂರು ಇದರ ಜಂಟಿ ಸಹಯೋಗದೊಂದಿಗೆ ಯೆನೆಪೋಯ ವಿಶ್ವವಿದ್ಯಾನಿಲಯ ಇದರ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಮತ್ತು ದೇರಳಕಟ್ಟೆ ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಇದರ ಸಮುದಾಯ ದಂತ ವೈದ್ಯಕೀಯ ವಿಭಾಗದ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಾಡೂರು ಕೊರಗಜ್ಜನ ಕಟ್ಟೆಯ ಬಳಿಯ ಮಾತೃಶ್ರೀ ಕಾಂಪ್ಲೆಕ್ಸ್ನಲ್ಲಿ ಭಾನುವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯೆನೆಪೋಯ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಹುಲ್ ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಮನುಷ್ಯನನ್ನು ಹೆಚ್ಚಾಗಿ ಬಾಧಿಸುತ್ತಿದ್ದು, ಆರೋಗ್ಯದ ಬಗ್ಗೆ ಎಲ್ಲರೂ ಗಮನಹರಿಸಬೇಕು. ಹೃದಯಕ್ಕೆ ಸಂಬಂಧಿಸಿ ಯಾವುದೇ ಸಣ್ಣ ಕಾಯಿಲೆ ಬಂದರೂ ಅದನ್ನು ನಿರ್ಲಕ್ಷಿಸದೇ ತಕ್ಷಣ ವೈದ್ಯರನ್ನು ಕಾಣಬೇಕು. ಈ ನಿಟ್ಟಿನಲ್ಲಿ ಸ್ಥಳಿಯರಿಗೆ ತಮ್ಮ ಆರೋಗ್ಯದ ಬಗ್ಗೆ ಉಚಿತವಾಗಿ ತಪಾಸಣೆ ನಡೆಸಲು ಇಂತಹ ಶಿಬಿರಗಳು ಉಪಯುಕ್ತವಾಗಿದ್ದು ಇಂತಹ ಕಾರ್ಯಕ್ರಮಗಳನ್ನು ನಡೆಸಿದ ಶಬರಿ ಫ್ರೆಂಡ್ಸ್ ಕಾರ್ಯ ಶ್ಲಾಘನೀಯ…

