ಉಳ್ಳಾಲ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಯುವ ಸಮುದಾಯಕ್ಕೆ ಎಸ್ಎಸ್ಎಫ್ , ಹಿರಿ ವಯಸ್ಸಿನಲ್ಲಿ ಎಸ್ ವೈಎಸ್ ಜತೆಗಿನ ಸಂಬಂಧದಿಂದ ಎಲ್ಲರೂ ಧಾರ್ಮಿಕ ಸ್ಪರ್ಶದಿಂದ ಬಾಳಲು ಸಾಧ್ಯ. ಈ ಮೂಲಕ ಪ್ರವಾದಿಯವರ ಆದರ್ಶಗಳನ್ನು ಪಾಲಿಸುವಂತಾಗಬೇಕಿದೆ ಎಂದು ಎಸ್ ವೈ ಎಸ್ ರಾಜ್ಯ ಮುಖಂಡ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಹೇಳಿದರು. ಅವರು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್ ) ಇದರ ಸೆಂಟರ್ ಸಮ್ಮೇಳನದ ಪ್ರಯುಕ್ತ ಕೆ.ಸಿ.ನಗರದ ಜಂಕ್ಷನ್ನಿನಲ್ಲಿ ಭಾನುವಾರ ಜರಗಿದ ಎಸ್ ವೈ ಎಸ್ ಕೆ.ಸಿ ರೋಡ್ ಸೆಂಟರ್ ಮಹಾಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಪ್ರಭಾಷಣಕಾರ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಮಾತನಾಡಿ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಕೆ.ಸಿ.ರೋಡಿನ ಎಸ್ ವೈ ಎಸ್ ಸೆಂಟರ್ ತೊಡಗಿಸಿಕೊಳ್ಳುವ ಮೂಲಕ ಜನರ ಸಂಕಷ್ಟಗಳಿಗೆ ಸಾಂತ್ವನ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು. ಸೆಯ್ಯಿದ್ ಸಿ.ಟಿ.ಎಂ ಸಲೀಂ ಅಸ್ಸಖಾಫ್ ತಂಙಳ್ ದುಆ ನೆರವೇರಿಸಿದರು. ಉಮ್ಮರ್ ಮಾಸ್ಟರ್ ಕಾರ್ಯಕ್ರಮದ ಅಧ್ಯಕ್ಷತೆ…
Author: UllalaVani
ಉಳ್ಳಾಲ ನ್ಯೂಸ್ ನೆಟ್ವರ್ಕ್ ಇರಾ: ಬೈಕ್ ಅಪಘಾತ್ಕೀಡಾಗಿ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇರಾ ಸಮೀಪದ ಮೂಳೂರು ಎಂಬಲ್ಲಿ ಮೊನ್ನೆ ತಡರಾತ್ರಿ ವೇಳೆ ಸಂಭವಿಸಿದ್ದು, ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆಲ್ಕಾರ್ ಮೊಗರ್ನಾಡು ನಿವಾಸಿ ವೆಲೇರಿಯನ್ ಡಿಸೋಜ ಎಂಬವರ ಪುತ್ರ ವಿನೋದ್ ವಿಲ್ಸನ್ ಡಿಸೋಜ (23) ಮೃತ ಯುವಕ. ಮೂಳೂರಿನಲ್ಲಿರುವ ಗೆಳೆಯ ರೆಯಾನ್ ಎಂಬಾತನ ಮನೆಗೆ ವಿನೋದ್ ಸೇರಿದಂತೆ ಏಳು ಮಂದಿ ಮೂರು ಬೈಕುಗಳಲ್ಲಿ ಬಂದಿದ್ದರು. ಅಲ್ಲಿಂದ ತಡರಾತ್ರಿ ವೇಳೆ ವಾಪಸ್ಸಾಗುವ ಸಂದರ್ಭ ವಿನೋದ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿನೋದ್ ತೀವ್ರ ತರದ ಗಾಯವಾಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಸವಾರರಾದ ಪ್ರಕಾಶ್ ಮತ್ತು ಕೀರ್ತಿ ಕಿರಣ್ ಅಲ್ಬುಕರ್ಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಸ್ಕತ್ ನಲ್ಲಿ ಉದ್ಯೋಗದಲ್ಲಿದ್ದ ವಿನೋ 15 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಇವರು ತಂದೆ , ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಈ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮುಡಿಪು : ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಮ್ಮ ಸೈನಿಕರ ನಡುವಿನ ಹೋರಾಟ ದಿನಂಪ್ರತಿ ನಡೆಯುತ್ತದೆ. ಅದೆಷ್ಟೋ ಸೈನಿಕರು ತಮ್ಮ ತಾಯ್ನಾಡಿಗಾಗಿ ಭಯೋತ್ಪಾದಕರೊಂದಿಗೆ ಕಾದಾಡಿ ಹುತಾತ್ಮರಾದರೆ, ಕೆಲವರು ಗಾಯಗೊಂಡು ಹುಟ್ಟೂರಿಗೆ ಹಿಂತಿರುಗುತ್ತಾರೆ. ಅಂತಹ ಒಬ್ಬ ಯೋಧ ಭಯೋತ್ಪಾದಕರೊಂದಿಗೆ ಹೋರಾಡಿ ನಾಲ್ಕು ಬಾರಿ ಸಾವಿನ ದವಡೆಯಿಂದ ಪಾರಾಗಿದ್ದು, ನಾಲ್ಕನೇಯ ಹೋರಾಟದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಐದೂವರೆ ತಿಂಗಳ ಚಿಕಿತ್ಸೆಯ ಬಳಿಕ ಸಾವಿನಿಂದ ಪಾರಾಗಿ ಇದೀಗ ತನ್ನ ಹುಟ್ಟೂರಿಗೆ ಮರಳಿದ್ದಾರೆ. ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ನಿವಾಸಿಯಾಗಿರುವ ಸಂತೋಷ್ ಕುಲಾಲ್ ಅವರೇ ಭಯೋತ್ಪಾದಕರೊಂದಿಗೆ ಹೋರಾಡಿ ಸಾವಿನ ದವಡೆಯಿಂದ ಪಾರಾಗಿ ಬಂದ ಯೋದರಾಗಿದ್ದು, ಅ.12ರಂದು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಪಾಂಪೆÇೀರ್ನಲ್ಲಿ ಭಯೋತ್ಪಾದಕರೊಡನೆ ಹೋರಾಡಿ ಗುಂಡಿನೇಟಿನಿಂದ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಸಾವನ್ನು ಜಯಿಸಿ ಬಂದವರಾಗಿದ್ದು, ಐದೂವರೆ ತಿಂಗಳ ಚಿಕಿತ್ಸೆಯ ಬಳಿಕ ಎಪ್ರಿಲ್ನಲ್ಲಿ ತನ್ನ ಹುಟ್ಟೂರಾದ ಮುಡಿಪುವಿಗೆ ಆಗಮಿಸಿದ್ದಾರೆ. ಬಂಟ್ವಾಳ ತಾಲೂಕಿನ ರಾಮಣ್ಣ ಸಾಲಿಯಾನ್…
ಉಳ್ಳಾಲ್ ನ್ಯೂಸ್ ನೆಟ್ವರ್ಕ್ ಉಳ್ಳಾಲ: ಸಮಾಜದಲ್ಲಿ ಹಿಂದುಳಿದವರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಬೃಹತ್ ಸಂಸ್ಥೆಯಾಗಿ ಬೆಳೆಯುವ ಮೂಲಕ ಸೆಂಟ್ರಲ್ ಕಮಿಟಿ ಉಳ್ಳಾಲಕ್ಕೆ ಆಶ್ರಯವಾಗಿರಲಿ ಎಂದು ಸೈಯ್ಯದ್ ಮದನಿ ದರ್ಗಾ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಮತ್ತು ಫಿದಾಗೈಸ್ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಆಶ್ರಯದಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಉಳ್ಳಾಲ ಸೆಂಟ್ರಲ್ ಕಮಿಟಿ ಕಚೇರಿಯಲ್ಲಿ ಭಾನುವಾರ ಜರಗಿದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರಕ್ಕೆ ಗಿಡವೊಂದಕ್ಕೆ ನೀರು ಹಾಯಿಸುವ ಮೂಲಕ ಚಾಲನೆ ನೀಡಿದರು. ದುಶ್ಚಟಗಳು, ಮಧ್ಯವ್ಯಸನಿಗಳಿಂದ ಶಾಂತಿ, ಸೌಹಾರ್ದಯುತ ಉಳ್ಳಾಲದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಯುವಸಮುದಾಯಕ್ಕೆ ಉತ್ತಮ ಮಾರ್ಗದರ್ಶನದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಸೆಂಟ್ರಲ್ ಕಮಿಟಿ ಉತ್ತಮವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಸಂಸ್ಥೆ, ಸಂಘಟನೆಗಳು ಹುಟ್ಟಿ ಸಾಯುತ್ತಲೇ ಇದೆ. ಈ ನಡುವೆ ಐದು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಉಳ್ಳಾಲ ಸೆಂಟ್ರಲ್ ಕಮಿಟಿ ತೊಡಗಿಸಿಕೊಂಡು ಯಶಸ್ವಿಯಾಗಿದೆ ಎಂದರು.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ನರಿಂಗಾನ: ಮೋರ್ಲ ರೇವತಿ.ಎಸ್ ಆಳ್ವ ಮತ್ತು ಮಕ್ಕಳು , ಲಕ್ಷ್ಮೀ.ಎನ್ ಆಳ್ವ ಮತ್ತು ಮಕ್ಕಳು ಹಾಗೂ ಪ್ರಭಾಕರ್ ಶೆಟ್ಟಿ ಸಹೋದರರು ಸೇವಾರೂಪದಲ್ಲಿ ಇತ್ತೀಚೆಗೆ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ಆಯೋಜಿಸಿದ್ದರು. ಭಾಗವತರುಗಳಾದ ಗೋಪಾಲಕೃಷ್ಣ ಮಯ್ಯ, ಹಿರಿಯ ಕಲಾವಿದ ಕೃಷ್ಣ ಮೂಲ್ಯ, ಶ್ರೀಕುಮಾರ್ ಪಡ್ರೆ ಹಾಗೂ ಸ್ಥಳೀಯ ಹಿರಿಯರಾದ ವೆಂಕಪ್ಪ ಶೆಟ್ಟಿ ಮೋರ್ಲ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್, ರವೀಂದ್ರ ಶೆಟ್ಟಿ ದೊಡ್ಡಮನೆ ಮುಖ್ಯ ಅತಿಥಿಗಳಾಗಿ ದ್ದರು. ರೊಟರ್ಯಾಕ್ಟ್ ವಿಕ್ರಂ ದತ್ತ , ಡಾ. ಮೋಹನ್ದಾಸ್ ಪೈ, ವಿಶ್ವನಾಥ ಶೆಟ್ಟಿ ಮೋರ್ಲ, ಚಂದ್ರಹಾಸ್ ಶೆಟ್ಟಿ ಮೋರ್ಲ, ಶಿವರಾಂ ಶೆಟ್ಟಿ ಸಾಂತ್ಯಗುತ್ತು, ಪ್ರಭಾಕರ್ ಶೆಟ್ಟಿ ಕಿನ್ಯಗುತ್ತು, ರೇವತಿ.ಎಸ್ ಆಳ್ವ, ಲಕ್ಷ್ಮೀ.ಎನ್ ಆಳ್ವ, ಗೀತೇಶ್ ಆಳ್ವ, ಗಿರೀಶ್ ಆಳ್ವ, ಸುಧಾಕರ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾಧರ್ ಶೆಟ್ಟಿ ಪೊಸಕುರಲ್ ಕಾರ್ಯಕ್ರಮ ನಿರೂಪಿಸಿದರು.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬೋರ್ವೆಲ್ ಕೆಲಸ ನಿರ್ವಹಿಸುವ ಸಂದರ್ಭ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕಿದ್ದು, ಜಿಲ್ಲಾಡಳಿತವೂ ಹೆಚ್ಚಿನ ಮುತುವರ್ಜಿ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಕೋಟೆಕಾರು ಬೀರಿ ಸಮೀಪ ಬೋರ್ವೆಲ್ ನ ಮೋಟರಿನ ದುರಸ್ತಿ ಕಾರ್ಯದಲ್ಲಿದ್ದ ಸಂದರ್ಭ ಕೊಣಾಜೆ ಅಡ್ಕರೆಪಡ್ಪು ನಿವಾಸಿ ಉಸ್ಮಾನ್ ಎಂಬವರು ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದರು. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ತುಳುನಾಡು ರಕ್ಷಣಾ ವೇದಿಕೆ, ಕಾಮಗಾರಿ ವೇಳೆ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರನ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. ಕೋಟೆಕಾರು ಪಟ್ಟಣ ಪಂಚಾಯಿತಿಯ ಕಾಮಗಾರಿ ನಡೆಸುತ್ತಿದ್ದುದರಿಂದ , ಸಂಬಂಧಿಸಿದ ಪಂಚಾಯಿತಿ ಕೂಡಾ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕಿದೆ ಯಾವುದೇ ಕಾಮಗಾರಿ ವೇಳೆ ಕಾರ್ಮಿಕನ ಸುರಕ್ಷತೆ ಅತ್ಯಾವಶ್ಯಕ . ಆದರೆ ಪ್ರಸ್ತುತ ಘಟನೆಯಲ್ಲಿ ಅದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಕೂಡಲೇ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕಂದಕ ನಿವಾಸಿ ಅರಾಫತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ ತಲಪಾಡಿ ಟೋಲ್ ಗೇಟ್ ಸಿಬ್ಬಂದಿಯನ್ನು ಕೂಡಲೇ ಪೊಲೀಸರು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ತಿಳಿಸಿದ್ದಾರೆ. ಶುಕ್ರವಾರ ಉಳ್ಳಾಲದ ಸರೋಜ್ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಚಿಕಿತ್ಸೆ ಪಡೆಯುತ್ತಿರುವ ಅರಾಫತ್ ಜತೆಗೆ ಮಾತುಕತೆ ನಡೆಸಿ ಘಟನೆಯನ್ನು ಖಂಡಿಸಿದರು. ಗೂಂಡಾಗಳಂತೆ ವರ್ತಿಸುತ್ತಿರುವ ಟೋಲ್ಗೇಟ್ ಸಿಬ್ಬಂದಿಯನ್ನು ಶೀಘ್ರವೇ ಪೊಲೀಸರು ಬಂಧಿಸಬೇಕಿದೆ. ಗೂಂಡಾ ಹಿನ್ನಲೆಯುಳ್ಳ ಸಿಬ್ಬಂದಿಯನ್ನು ಕಂಪೆನಿ ಶೀಘ್ರವೇ ಕೆಲಸದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಜಾತಿ, ಮತ, ರಾಜಕೀಯ ಮರೆತು ಉಗ್ರ ಹೋರಾಟ ಮಾಡುವುದು ಅನಿವಾರ್ಯವಾದೀತು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಉಳ್ಳಾಲ ನಗರಸಭೆ ಅದ್ಯಕ್ಷ ಹುಸೈನ್ ಕುಂಞ ಮೋನು, ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯು.ಬಿ.ಸಲೀಮ್, ತಲಪಾಡಿ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಖಾದರ್ ತಲಪಾಡಿ, ಅಬ್ಬಾಸ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೆ ಸಾಲಿನ ಪ. ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಪೂರ್ವಾಹ್ನ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಗ್ರಾಮೀಣ ವರದಿಗಾರಿಕೆಗಾಗಿ `ಕನ್ನಡ ಪ್ರಭ’ ಪತ್ರಿಕೆಯ ವರದಿಗಾರ ಸಂದೀಪ್ ವಾಗ್ಲೆಯವರಿಗೆ ಪ್ರಶಸ್ತಿಯನ್ನು ಅತಿಥಿಗಳು ಇಂದು ಪ್ರದಾನ ಮಾಡಿದರು. ಇದೇ ವೇಳೆ ವಾಗ್ಲೆಯವರು ತನಗೆ ದೊರೆತ ಪ್ರಶಸ್ತಿಯ ಮೊತ್ತವನ್ನು ಮಂಜನಾಡಿ ಸಮೀಪದ ಮೊಂಟೆಪದವಿನ ಬಡ ಕೊರಗ ಕುಟುಂಬದ ರೂಪಾ ಎಂಬ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕಾಗಿ ನೀಡಿ ಮಾದರಿಯಾದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಹರಿಕೃಷ್ಣ ಬಂಟ್ವಾಳ್, ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ವರ್ಕ್ ಪೆರ್ಮನ್ನೂರು: ಸಂತ ಸೆಬೆಸ್ಟಿಯನ್ ಧರ್ಮಕೇಂದ್ರ ಪೆರ್ಮನ್ನೂರಿನಲ್ಲಿ ಪವಿತ್ರ ಗುರುವಾರವನ್ನು ಎಪ್ರಿಲ್ 13 ರಂದು ಆಚರಿಸಲಾಯಿತು.ಪ್ರಭುಯೇಸುವಿನ ಕಷ್ಟ,ಮರಣ ಶಿಲುಬೆ ಹಾಊ ಪುನರುಸ್ಥಾನವನ್ನು ಧ್ಯಾನಿಸುವ ವಾರವೇ ಪವಿತ್ರವಾರ. ಈ ವಾರದಲ್ಲಿರುವ ಪ್ರಮುಖ ದಿನಗಳಲ್ಲಿ ಮೊದಲನೆಯ ಆಚರಣೆಯೇ ಪವಿತ್ರ ಗುರುವಾರ ಪೆರ್ಮನ್ನೂರು ಕೇಂದ್ರದ ಧರ್ಮಗುರುಗಳಾದ ಅತಿ ನಂದನೀಯ ಫಾದರ್ ಜೆ.ಬಿ ಸಲ್ಡಾನ್ಹಾರವರು ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು . ಸಹಾಯಕ ಧರ್ಮಗುರುಗಳಾದ ನಂದನೀಯ ಫಾದರ್ ಪ್ರವೀಣ್ ಜೋಯ್ ಸಲ್ಡಾನ್ಹಾರವರು ಪ್ರಭು ಕ್ರಿಸ್ತರ ಆದರ್ಶದಂತೆ ನಾವು ನಮ್ಮ ಸಹೋದರ ಸಹೋದರಿಯರ ಸೆಲೆಯನ್ನು ಮಾಡಬೇಕು ಎಂಬ ಪ್ರಭೋದನೆಯನ್ನು ನೀಡಿದರು ಸೇನೆಯ ಹಾಗೂ ದೀನತೆಯ ಸಂಕೇತವಾಗಿ ಯೇಸುವಿನ ಆದರ್ಶದಂತೆ ವಂ|ಫಾ|ಜೆ.ಬಿ.ಸಲ್ಡಾನ್ಹಾರವರು 12 ಮಂದಿಯ ಪಾದಗಳನ್ನು ತೊಳೆದರು.ವಂ|ಫಾ|ನಿಲೇಶ್ ಕ್ರಾಸ್ತಾ,ವಂ|ಫಾ| ಎಡ್ವಿನ್ ಮಸ್ಕರೇನ್ಹಸ್,ಉಪಯೋಜಕ ರವಿ ರಿಚ್ಚರ್ಡ್ ಫೆರ್ನಾಂಡಿಸ್,ಧರ್ಮಭಗಿನಿಯರು ಹಾಗೂ 2000 ಮಂದಿ ಈ ಪವಿತ್ರ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಈ ದಿನದ ವಿಶೇಷತೆ ಎಂದರೆ ಪ್ರಭು ಕ್ರಿಸ್ತರು ಶಿಲುಬೆಯಲ್ಲಿ ಸಾಯಲು ಹೋಗುವ ಹಿಂದಿನ ದಿನ ತಮ್ಮ 12 ಶಿಷ್ಯರ ಜೊತೆ…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಪೆರ್ಮನ್ನೂರು: ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಚರ್ಚ್ನಲ್ಲಿ ಶುಭ ಶುಕ್ರವಾರ ಶೃದ್ಧೆ ಭಕ್ತಿಯಿಂದ ನಡೆಯಿತು. ರೇ. ಫಾ| ಅಜಿತ್ ಮಿನೇಜಸ್ ಮತ್ತು ರೆ| ಫಾ| ಜೆ.ಬಿ. ಸಲ್ದಾನ ಉಪಸ್ಥಿತರಿದ್ದರು. ಫೋಟೋ ಸ್ಟಾರ್ ಸ್ಟುಡಿಯೋ ಉಳ್ಳಾಲ

