Author: UllalaVani

Kannada News From Coastal Karnataka

UN NETWORKS ಉಳ್ಳಾಲ: ನಾಟೆಕಲ್‍ನ ಫಾತಿಮಾ ಕಾಂಪ್ಲೆಕ್ಸ್‍ನಲ್ಲಿ ನೂತನವಾಗಿ ಆರಂಭಗೊಂಡ ಎಕ್ಟ್ರೀಂ ಫಿಟ್‍ನೆಸ್ ಜಿಮ್ ಸೋಮವಾರ ಉಳ್ಳಾಲದ ಸೈಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವಕರಿಗೆ ಆಲಸ್ಯ ಜಾಸ್ತಿಯಾಗಿದೆ. ವ್ಯಾಯಾಮ ನಡೆಸದೆ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆಯೇ ಹೆಚ್ಚಿದೆ. ನಮಾಝ್ ಸಮಯದಲ್ಲೂ ಯುವಕರು ಆಲಸ್ಯ ನಡೆಸುವುದು ಕಾಣುತ್ತಿದೆ. ಇಂತಹ ಆಲಸ್ಯ ಮನೋಭಾವನೆಯಿಂದ ವ್ಯಾಯಾಮ ಶಾಲೆಗಳು ಮುಚ್ಚಿಹೋಗುತ್ತಿವೆ. ದುಬಾರಿ ಬೆಲೆಯ ಸಾಮಗ್ರಿಗಳ ಜತೆಗೆ ಜಿಮ್ ಅನ್ನು ಸ್ಥಾಪಿಸಿರುವ ಪಾಲುದಾರರಾದ ಶಬೀರ್ ಮತ್ತು ರಾಮಕೃಷ್ಣ ಅವರು ಯುವಕರನ್ನು ಉತ್ತಮ ತರಬೇತಿಯನ್ನು ನೀಡುವಂತಾಗಲಿ ಎಂದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಜಿಮ್ ಹೆಸರನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವಂತೆ ಮಾಡಬೇಕಿದೆ. ಅದಕ್ಕಾಗಿ ಯುವಕರು ದುಶ್ಚಟಗಳಲ್ಲಿ ಭಾಗವಹಿಸದೆ ತರಬೇತಿಯನ್ನು ಪಡೆದು ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ಜಿಮ್ ಹೆಸರನ್ನು ಶಾಶ್ವತವಾಗಿ ಉಳಿಸುವಂತಾಗಬೇಕು ಎಂದರು. ಉಮರ್ ಮೌಲವಿ ಅಲೇಕಳ ಇವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ…

Read More

UN NETWORKS ಉಳ್ಳಾಲ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಮುಖಂಡ ಖಲೀಲ್ ಎಂಬವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮತ್ತು ಜಿಲ್ಲೆಯಾದ್ಯಂತ ಶಾಂತಿ ನೆಲೆಸುವ ಸಲುವಾಗಿ ಜಿಲ್ಲಾಧಿಕಾರಿ ಪಿಎಫ್ ಐ ಮುಖಂಡ ಸೇರಿದಂತೆ ಹಿಂದು ಜಾಗರಣಾ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಇಬ್ಬರನ್ನು ಆರು ತಿಂಗಳುಗಳ ಕಾಲ ಗಡಿಪಾರು ನಡೆಸಿದ್ದಾರೆಂದು ತಿಳಿದುಬಂದಿದೆ. ಇಬ್ಬರಿಗೆ ಗಡಿಪಾರಿಗೆ ಆದೇಶ ನೀಡುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂತಿಲ್ ಇಬ್ಬರ ಗಡಿಪಾರಿಗೆ ಆದೇಶ ನೀಡಿದ್ದು, ಇಬ್ಬರು ಜಿಲ್ಲೆಯಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

Read More

UN NETWORKS ಮಂಗಳೂರು: ದಕ ಜಿಲ್ಲೆ ಹಿಂದೂ ಜಾಗರಣೆ ವೇದಿಕೆಯ ಜಿಲ್ಲಾಧ್ಯಕ್ಷರಾದ ರತ್ನಾಕರ ಶೆಟ್ಟಿಯವರನ್ನು ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಬಂಟ್ವಾಳ ಪೊಲೀಸರು ಇಂದು ಕಾರ್ಯಗತಗೊಳಿಸಿದರು. ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ವಾಪಸು ಮನೆಗೆ ಮರಳುತ್ತಿದ್ದ ಸಂಧರ್ಭದಲ್ಲಿ ಅವರನ್ನು ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು ,ಅವರನ್ನು ಜಿಲ್ಲೆಯ ಗಡಿ ದಾಟಿಸಿ ಬಿಡುಗಡೆಗೊಳಿಸಿದ್ದಾರೆ. ಗಡಿಪಾರು ಆದೇಶ ವಜಾಗೊಳ್ಳುವವರೆಗೆ ಇನ್ನು ಅವರು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ. ಇದೇ ವರ್ಷದ ಜುಲೈ 13ರಂದು ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಹಾಗೂ ಹಲ್ಲೆ ಸಂಧರ್ಭದಲ್ಲಿ ಗಾಯಗೊಂಡಿದ್ದ ಅವರು ಪುತ್ತೂರು ಖಾಸಗಿ ಆಸ್ಫತ್ರೆಯಲ್ಲಿ 2 ತಿಂಗಳುಗಳ ಕಾಲ ಚಿಕಿತ್ಸೆ ಪಡೆದಿದ್ದರು.ಇದೇ ಪ್ರಕರಣದಲ್ಲಿ ಅವರ ಮೇಲೂ ಹಲ್ಲೆ ಯತ್ನ ಕೇಸು ದಾಖಲಾಗಿತ್ತು. ಈ ಪ್ರಕರಣ ನಡೆದ ಕೆಲ ದಿನಗಳ ಬಳಿಕ ಅವರನ್ನು ಗಡಿಪಾರುಗೊಳಿಸುವ ಆದೇಶವನ್ನು ಜಿಲ್ಲ್ಲಾದಲಿತ ಕೈಗೊಂಡಿತ್ತು.ಇದೀಗ ಇಂದು ಬೆಳಿಗ್ಗೆ ಅವರನ್ನು ಪೂಲೀಸ್ ಇಲಾಖೆ ಅವರನ್ನು ಗಡಿಪಾರುಗೊಳಿಸಿದೆ

Read More

UN NETWORKS ಉಳ್ಳಾಲ: ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ನಿಟ್ಟೆ ವಿಶ್ವವಿದ್ಯಾಲಯ ದೇರಳಕಟ್ಟೆ ಆಶ್ರಯದಲ್ಲಿ ಇತ್ತೀಚೆಗೆ “ವಾಸುದೇವ ಕ್ರಿಯಾಯೋಗ” ಎಂಬ ವಿಷಯದ ಕುರಿತ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಪ್ರೋ.ಡಾ.ಎಂ.ಎಸ್ ಮೂಡಿತ್ತಾಯ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಣಿಪಾಲ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಬಿ.ಎಂ ಹೆಗ್ಡೆ ದಿಕ್ಸೂಚಿ ಭಾಷಣಗೈದರು. “ವಾಸುದೇವ ಕ್ರಿಯಾ ಯೋಗ ” ವಿಭಾಗದ ಮುಖ್ಯಸ್ಥ ರಾಜೇಂದ್ರ ಯಂಕಣ್ಣ ಮೂಲೆ ವಿದ್ಯಾರ್ಥಿಗಳಿಗೆ ವಾಸುದೇವ ಕ್ರಿಯಾಯೋಗ ಇದರ ವಿಧಿವಿಧಾನಗಳು ಆರೋಗ್ಯದ ಹಾಗೂ ಮಾನಸಿಕ ಪರಿಣಾಮಗಳು,ವಿಭಿನ್ನ ಒಳಿತುಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ.ಧಾನೇಶ್ ಕುಮಾರ್ ಕೆ.ಯು ಸ್ವಾಗತಿಸಿದರು. ಡಾ.ಪುರುಷೋತ್ತಮ ಟಿಪ್ಪಲ ವಂದಿಸಿದರು. ಡಾ.ರಶ್ಮಿತಾ ಶೆಟ್ಟಿ ನಿರೂಪಿಸಿದರು. ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದರು.

Read More

UN NETWORKS ತಲಪಾಡಿ : ತಲಪಾಡಿ ಶಾಲೆಯಿಂದ ತೆರಳುವ ಸಂದರ್ಭ ಕೆ.ಸಿ.ರೋಡಿನಲ್ಲಿ ಯುವಕರ ತಂಡವೊಂದು ನಿಂತು ಮೊಬೈಲ್ ನಂಬರ್ ಕೊಡುವಂತೆ ಪೀಡಿಸುತ್ತಿದ್ದು, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹೆದರಿಕೆಯಾಗುತ್ತಿದೆ ಎಂದು ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಆರೋಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಗ್ರಾಮ ಪಂಚಾಯಿತಿ ಶುಕ್ರವಾರ ಗ್ರಾಮಸೌಧ ತಲಪಾಡಿಯಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯಲ್ಲಿ ಆರೋಪಿಸಿದ್ದಾಳೆ. ನಿತ್ಯ ತಲಪಾಡಿಯಿಂದ ಶಾಲೆ ಬಿಟ್ಟು ಮನೆಗೆ ವಾಪಸ್ಸಾಗುವ ಸಂದರ್ಭ ಕೆ.ಸಿ.ರೋಡ್ ಜಂಕ್ಷನ್ ಸಮೀಪ ಕೆಲ ಯುವಕರ ತಂಡ ನಿಂತು ಮೊಬೈಲ್ ನಂಬರನ್ನು ಕೇಳುವುದಲ್ಲದೆ, ಅಶ್ಲೀಲ ಸನ್ನೆಯನ್ನು ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹೆದರಿಕೆಯಾಗುತ್ತಿದೆ. ಈ ಬಗ್ಗೆ ಪಂಚಾಯಿತಿನವರು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಗಮನಹರಿಸಿ , ವಿದ್ಯಾರ್ಥಿಗಳು ನಿರ್ಭೀತಿಯಿಂದ ಶಾಲೆಯಿಂದ ವಾಪಸ್ಸಾಗುವಂತೆ ವಾತಾವರಣ ನಿರ್ಮಿಸಿ ಕೊಡಬೇಕಿದೆ ಎಂದು ಒತ್ತಾಯಿಸಿದ್ದಾಳೆ. ಇದಕ್ಕೆ ಪ್ರತಿಕ್ರಿಯಿಸಿದ ತಲಪಾಡಿ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ತಿಳಿಸಿ,…

Read More

UN NETWORKS ಉಳ್ಳಾಲ: ನಮ್ಮ ತುಳುನಾಡಿನ ಕೃಷಿ ಸಂಸ್ಕೃತಿಯೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರತ್ನೋತ್ಸವದಂತಹ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಕಾರ್ಯಕ್ರಮ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡುನುಡಿ ವೈಭವದ ರತ್ನೋತ್ಸವ-2017 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಬೆರಳೆಣಿಕೆಯಷ್ಟು ಶಿಕ್ಷಣ ಪಡೆಯುತ್ತಿದ್ದರು. ಸರ್ವ ಶಿಕ್ಷಣ ಆಭಿಯಾನ, ಶಿಕ್ಷಣ ಮಾಹಿತಿ ಹಕ್ಕು ಬಂದ ನಂತರ ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಶೋಷಣೆಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಶಿಕ್ಷಣವಂತರಾಗಬೇಕು. ಈ ಸಂದರ್ಭದಲ್ಲಿ ಸ್ವಸ್ಥ ಸಮಾಜ, ಆರೋಗ್ಯ ಸಮಾಜ ನಿರ್ಮಾಣವಾದಾಗ ನಾವು ಅಭಿವೃದ್ದಿಯಾಗುವುದರೊಂದಿಗೆ ಸಮಾಜ ಅಬಿವೃದ್ಧಿಯಾಗುತ್ತದೆ ಎಂದರು. ತುಳು ಭಾಷೆಯ ಸುವರ್ಣ ಯುಗ ಪ್ರಾರಂಭಗೊಂಡಿದ್ದು ಎಲ್ಲಾ ಕಡೆ ತುಳುವಿಗೆ ಸಂಬಂಧಿ ಸಿದ ಕಾರ್ಯಕ್ರಮಗಳು…

Read More

UN NETWORKS ಉಳ್ಳಾಲ: ಜೆಪ್ಪಿನಮೊಗರು ದುಷ್ಕರ್ಮಿಗಳಿಂದ ದಾಳಿಗೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಕೀರ್ ಅಲೇಕಲ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಯು.ಟಿ.ಖಾದರ್ ರವರು ಭೇಟಿ ಮಾಡಿ ಸಾಂತ್ವನ ಹೇಳಿದರು. ದಾಳಿಗೀಡಾದ ಸಂಧರ್ಭದಲ್ಲಿ ಸಾಹಸ ಮೆರೆದು ದುಷ್ಕರ್ಮಿಗಳಿಂದ ತಪ್ಪಿಸಿ,ಕಾರು ನಂಬರನ್ನು ನೋಟ್ ಮಾಡಿ ಆರೋಪಿಗಳನ್ನು ಬಂಧಿಸಲು ಸಹಕರಿಸಿದ ಶಾಕೀರ್ ರವರನ್ನು ಸಚಿವರು ಅಭಿನಂದಿಸಿದರು.ಈ ಸಂಧರ್ಭದಲ್ಲಿ ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯ ಜತೆಗಿದ್ದರು.

Read More

UN NETWORKS ಹೊಸದಿಲ್ಲಿ : ಕುವೆಂಪು ಎಂದೇ ಖ್ಯಾತರಾದ ಕನ್ನಡದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113ನೇ ಜನ್ಮದಿನೋತ್ಸವವಾದ ಡಿಸೆಂಬರ್ 29, ಶುಕ್ರವಾರ ಗೂಗಲ್ ಅವರಿಗೆ ಆಕರ್ಷಕ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ತಮ್ಮ ಕಾಲದ ಮಹೋನ್ನತ ಕವಿ ಹಾಗೂ ಬರಹಗಾರರೆಂದು ಖ್ಯಾತರಾಗಿರುವ ಕುವೆಂಪು ಕನ್ನಡ ಮಾಧ್ಯಮದಲ್ಲಿಯೇ ಮಕ್ಕಳಿಗೆ ಶಿಕ್ಷಣವೊದಗಿಸಬೇಕೆಂದು ಬಲವಾಗಿ ಪ್ರತಿಪಾದಿಸಿದವರು.ಗೂಗಲ್ ಡೂಡಲ್ ಅನ್ನು ರಚಿಸಿದವರು ಉಪಮನ್ಯು ಭಟ್ಟಾಚಾರ್ಯ, ಅದರಲ್ಲಿ ಕನ್ನಡ ಅಕ್ಷರಗಳನ್ನು ಸೇರಿಸಲು ಅವರಿಗೆ ಸಹಾಯ ಮಾಡಿದವರು ಸ್ವಾತಿ ಶೇಲರ್. ಡೂಡಲ್ ನಲ್ಲಿ ಕುವೆಂಪು ತಮ್ಮ ನೆಚ್ಚಿನ ಮನೆ ಸಮೀಪ ಪ್ರಕೃತಿಯ ಮಡಿಲಲ್ಲಿ ಕುಳಿತಂತೆ ತೋರಿಸಲಾಗಿದೆ. ಡಿಸೆಂಬರ್ 29, 1904ರಂದು ಮೈಸೂರಿನಲ್ಲಿ ಜನಿಸಿದ ಅವರು ಕನ್ನಡದ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ವಿಜೇತರು. ಕರ್ನಾಟಕ ಸರಕಾರ ಅವರಿಗೆ 1958ರಲ್ಲಿ ರಾಷ್ಟ್ರಕವಿ ಹಾಗೂ 1992ರಲ್ಲಿ ಕರ್ನಾಟಕ ರತ್ನ ಬಿರುದುಗಳನ್ನಿತ್ತು ಗೌರವಿಸಿತ್ತು. ಅವರ ಕೃತಿ `ಶ್ರೀ ರಾಮಾಯಣ ದರ್ಶನಂ’ ಆಧುನಿಕ ಕಾಲದಲ್ಲಿ ಮಹಾಕಾವ್ಯ ಯುಗವನ್ನು ಪುನರಾರಂಭಿಸಿದ ಕೃತಿ ಎಂದೇ ವರ್ಣಿಸಲ್ಪಟ್ಟಿದೆ. ವಿಶ್ವ…

Read More

UN NETWORKS ಉಡುಪಿ : ಮರ್ಕಝುಲ್ ಬದ್ರಿಯ್ಯಃ ಎಜ್ಯುಕೇಶನಲ್ ಸೆಂಟರ್ (ರಿ.)ಉಡುಪಿ ಇದರ ದಶವಾರ್ಷಿಕ ಸಂಭ್ರಮವು 2018 ಜನವರಿ 2 ಮಂಗಳವಾರ ಕಟಪಾಡಿ ಜಂಕ್ಷನ್ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 1ಗಂಟೆಗೆ ಅಶ್ಶಖ್ ಫಕೀರ್ ಶಾಹ್ ವಲಿಯುಲ್ಲಾಹಿ (ಖ.ಸಿ.)ರವರ ಮಖಾಂ ಝಿಯಾರತ್ ನಡೆಯಲಿದೆ.ಮಧ್ಯಾಹ್ನ 2.30ಕ್ಕೆ ಕಟಪಾಡಿ ಪೇಟೆಯಲ್ಲಿ ಸ್ವಚ್ಚತಾ ಆಂದೋಲನಾ ನಡೆಯಲಿದ್ದು ಮಧ್ಯಾಹ್ನ 3.30ಕ್ಕೆ ದ್ವಜಾರೋಹಣ ನಡೆಯಲಿದೆ ಸಂಜೆ ಗಂಟೆ 4.30ಕ್ಕೆ ದಶವಾರ್ಷಿಕ ಸಂಭ್ರಮವು ಅಸ್ಸಯ್ಯಿದ್ ಜಅಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ರವರ ದುಆ ದೊಂದಿಗೆ ಚಾಲನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ| ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.ಯು.ಕೆ.ಮುಸ್ತಫ ಸಅದಿ ಕಾರ್ಯಕ್ರಮವನ್ನು ಉಧ್ಘಾಟಿಸಲಿರುವರು. ಖ್ಯಾತ ವಾಗ್ಮಿ ಬಹು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಗಯ್ಯಲಿದ್ದು ಅಸ್ಸಯ್ಯಿದ್ ಹೈದರೋಸ್ ಕಿಲ್ಲೂರು ತಂಙಳ್ ಸಮಾರೋಪ ದುಆ ಮಾಡಲಿರುವರು. ಅಲ್ಹಾಜ್ ಸಲೀಂ ಮದನಿ ಎಲ್ಲೂರು. ಸಚಿವರಾದರು ಪ್ರಮೋದ್ ಮಧ್ವರಾಜ್.ಶಾಸಕರಾದ ವಿನಯ ಕುಮಾರ್ ಸೊರಕೆ.ಜನಾಬ್ ಎಂ.ಎ.ಗಫೂರು.ಸುರೇಶ್ ಶೆಟ್ಟಿ ಗುರ್ಮೆ.ವಿನಯ ಬಲ್ಲಾಳ್…

Read More

UN NETWORKS ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23-12-2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಾಗಾರವನ್ನು ಉಧ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು. ಮುಖ್ಯ ಅಥಿತಿಗಳಾಗಿ ಶ್ರೀ ದತ್ತೇಶ್ ಪೂಜಾರಿ ಮಾಲಕರು ಶ್ರೀ ಭವಾನಿ ಸ್ಯಾನಿಟರಿ ಮಂಗಳಾದೇವಿ, ಶ್ರೀ ದೇವೇಂದ್ರ ಕೋಟ್ಯಾನ್ ಮಾಲಕರು ಪ್ರಿಯಾ ವುಡ್ ವಕ್ರ್ಸ್ ಕೋಡಿಕಲ್ ಕಾರ್ಯಾಗಾರಕ್ಕೆ ಶುಭ ಹಾರೈಸಿದರು. ಯುವ ವಾಹಿನಿ ಕೇಂದ್ರ ಸಮಿತಿ ಅದ್ಯಕ್ಷರಾದ ಶ್ರೀ ಯಶವಂತ್ ಪೂಜಾರಿ ಮಾತನಾಡಿ ಮಂಗಳೂರು ಘಟಕವು ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಿಸಿದ ಯುವಜನ ಜಾಗೃತಿ ಪ್ರಗತಿ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಚಿಂತನೆ, ವಿಮರ್ಶೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಒಂದು ಅವಕಾಶವಾಗಿದ್ದು ವಿದ್ಯಾರ್ಥಿಗಳು ಕಾರ್ಯಾಗಾರದ ಪೂರ್ಣ…

Read More