Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ:ವಿದ್ಯಾರ್ಥಿಗಳು ಜೀವನದಲ್ಲೇ ಉತ್ತಮ ಉದ್ದೇಶದ ಮೂಲಕ ಕಾರ್ಯಪ್ರವೃತ್ತರಾಗಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳುವ ಮೂಲಕ ಸವಾಲುಗಳನ್ನು ಎದುರಿಸುವ ಗುಣಗಳನ್ನು ಬೆಳೆಸುವುದರಿಂದ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಅದಾನಿ ಉಡುಪಿ ಪವರ್ ಕಾರ್ಪೋರೇಶನ್ ಲಿಮಿಟೆಡ್‍ನ ಕಾರ್ಯಕಾರಿ ನಿರ್ದೇಶಕ ಕಿಶೋರ್ ಆಳ್ವ ತಿಳಿಸಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವ್ಯವಹಾರಗಳ ಸಂಶೋಧನಾ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರಸಂಕಿರಣ ಮತ್ತು ಸ್ನಾತಕೋತ್ತರ ವಾಣಿಜ್ಯ ಮತ್ತು ವ್ಯವಹಾರ ಉತ್ಸವ `ಮ್ಯಾಗ್ನಮ್’-2017 ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಆಧುನಿಕ ಸ್ಮಧ್ಮಾತ್ಮಕ ಯುಗದಲ್ಲಿ ತಂತ್ರಜ್ಞಾನ ಸೇರಿದಂತೆ ವಾಣಿಜ್ಯ ವ್ಯವಹಾರವು ಕ್ಷೇತ್ರವೂ ಬದಲಾವಣೆಯನ್ನು ಕಾಣುತ್ತಿತ್ತು ಹಲವಾರು ಸವಾಲುಗಳು ಎದುರಾಗುತ್ತಿವೆ. ಇಂತಹ ಆಧುನಿಕ ಸವಾಲುಗಳನ್ನು ಎದುರಿಸಿ ಮುನ್ನಡೆಸುವಲ್ಲಿ ಯುವಜನರ ಪಾತ್ರ, ಜವಾಬ್ಧಾರಿ ಮಹತ್ತರವಾಗಿದೆ. ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ವಾಣಿಜ್ಯ ಮತ್ತು ವ್ಯವಹಾರ ಕ್ಷೇತ್ರವು ಪ್ರಮುಖವಾಗಿ ಗುರುತಿಸಲ್ಪಡುತ್ತದೆ. ನಾವು ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಉದ್ದೇಶದ ಮೂಲಕ ಕಾರ್ಯಪ್ರವೃತರಾಗಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದರು.…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಂಗಳೂರು : ದೇಶ ಡಿಜಿಟಲೀಕರಣದತ್ತ ಮುಖ ಮಾಡುತ್ತಿದ್ದು ಗ್ರಾಹಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುವುದು ಎಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ಅಭಿಪ್ರಾಯಪಟ್ಟರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ .ಲಿ. ಮಂಗಳೂರು ಇದರ ವೆಲೆನ್ಸಿಯಾ ಶಾಖೆಯಲ್ಲಿ ಇತ್ತೀಚೆಗೆ ನಡೆದ ಗ್ರಾಹಕರ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ನಿರ್ದೇಶಕರು ಹಾಗೂ ಶಾಖಾ ಸಲಹಾ ಸಮಿತಿಯ ಅಧ್ಯಕ್ಷ ಎಚ್.ರಾಮಯ ಶೆಟ್ಟಿ ಸಂಘವು ಸಹಕಾರಿ ತತ್ವದಡಿಯಲ್ಲಿ ಸ್ಥಾಪನೆಯಾಗಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಗ್ರಾಹಕರ ಉತ್ತಮ ಸಹಕಾರದಿಂದ ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.ಕಳೆದ 8 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ವೆಲೆನ್ಸಿಯಾ ಶಾಖೆಯು ಹೆಚ್ಚು ಲಾಭದತ್ತ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು. ಮುಖ್ಯ ಅತಿಥಿಯಾಗಿ ಸಂಘದ ಮಹಾಪ್ರಬಂಧಕ ಗಣೇಶ್ ಜಿ.ಕೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 5 ಜನ ಉತ್ತಮ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೈರಂಗಳ: ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಬರಡು ಭೂಮಿಯಲ್ಲಿ ಫಲವತ್ತತೆ ಬರಲು ಸಾಧ್ಯವಿದ್ದು, ಇದಕ್ಕಾಗಿ ಶ್ರಮಿಸಿದ ಪಂಚಾಯತ್ ಸದಸ್ಯರ ಹಾಗೂ ಸಹಕರಿಸಿದ ಸಚಿವರ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದ್ದಾರೆ.ಅವರು ಕೈರಂಗಳ ಗ್ರಾಮದ ಎರ್ಮಾಡಿ ಬಳಿ ರೂ. 50 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಕಿಂಡಿ ಅಣೆಕಟ್ಟಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಎರ್ಮಾಡಿ, ಕೊಳ್ಳರಮಜಲು, ಬೇರೂರು ಪ್ರದೇಶದ ರೈತರಿಗೆ ಅನುಕೂಲವಾಗಲಿದೆ. ಈ ಭಾಗದ ಕೃಷಿಕರಿಗೆ ಸಹಕಾರ ಆಗುವ ರೀತಿಯಲ್ಲಿ ಸ್ಥಳೀಯ ಜಿ.ಪಂ ಸದಸ್ಯೆ, ತಾ.ಪಂ ಹಾಗೂ ಪಂ. ಸದಸ್ಯರ ಮನವಿಗೆ ಸ್ಪಂಧಿಸಿದ ಸಚಿವರು ಮಹತ್ತರ ಯೋಜನೆಗೆ ಅನುದಾನ ಒದಗಿಸಿರುವುದು ಭಾಗದ ರೈತರಿಗೆ ಸಂತಸದ ವಿಚಾರ. ಇದರ ಸದುಪಯೋಗದಿಂದ ಸ್ಥಳದಲ್ಲಿ ಉತ್ತಮವಾದ ಬೆಳೆ ಬೆಳೆಯಲಿ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ.ಡಿ.ಎಸ್.ಗಟ್ಟಿ ಮಾತನಾಡಿ ಕಿಂಡಿಅಣೆಕಟ್ಟು ನಿರ್ಮಾಣದಿಂದ ಪಾಳುಬಿದ್ದ ಕೃಷಿಭೂಮಿಗೆ ಫಲವತ್ತತೆ ಬರಲಿದೆ. ರೈತರಿಗೆ ಕೃಷಿ ಫಲಪ್ರದವಾಗಿ ಬೆಳೆಯಲು ಕಿಂಡಿಅಣೆಕಟ್ಟು…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಕಾರ್ಯಾಲಯವು ತೊಕ್ಕೊಟ್ಟು ಹೈಲ್ಯಾಂಡ್ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಎ.2ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ತಿಳಿಸಿದ್ದಾರೆ. ಅವರು ತೊಕ್ಕೊಟ್ಟುವಿನಲ್ಲಿ ಗುರುವಾರ ಆಯೋಜಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಸಲುವಾಗಿ ಪ್ರತಿ ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 25 ಗ್ರಾಮಗಳು, 1 ನಗರಸಭೆ ಹಾಗೂ 1ಪಟ್ಟಣ ಪಂಚಾಯತಿನ ಎಲ್ಲಾ ಬೂತ್ ಸಮಿತಿ ಸದಸ್ಯರು, ಹಾಗೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಮಾದರಿ ಕಾರ್ಯಾಲಯ ಆಗಿ ಕಾರ್ಯಾಚರಿಸಲಿದೆ ಎಂದ ಅವರು ಉಪಚುನಾವಣೆ ನಿಮಿತ್ತ ರಾಜ್ಯ ನಾಯಕರು ಬರಲು ಅನಾನುಕೂಲವಾಗಿರುವುದರಿಂದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಹೋಲಿಕೆ ಎಂಬ ಗುಣ ಮಾರಕವಾಗಿದ್ದು,ಇಂತಹ ವ್ಯಕ್ತಿತ್ವವನ್ನು ಹೊಂದಿರುವವರು ಜೀವನದಲ್ಲಿ ಯಶಸ್ವಿ ಕಾಣಲು ಅಸಾಧ್ಯ ಎಂದು ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ಅಭಿಪ್ರಾಯಪಟ್ಟರು.ಅವರು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ದೇರಳಕಟ್ಟೆ ಸಭಾಂಗಣದಲ್ಲಿ ಬುಧವಾರ ನಡೆದ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಹೋಮಿಯೋಪತಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 27 ನೇ ಪದವಿ ಪ್ರಧಾನದಲ್ಲಿ ಘಟಿಕೋತ್ಸವ ಭಾಷಣ ನೆರವೇರಿಸಿದರು. ಪ್ರಾರ್ಥನೆ, ತಾಳ್ಮೆ, ಗ್ರಹಿಸುವಿಕೆ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ವಿಯನ್ನು ಕಾಣಬಹುದಾಗಿದೆ. ವೈದ್ಯಕೀಯ ವೃತ್ತಿಯಲ್ಲಿ ಹಣ ಸಂಪಾದಿಸುವುದು ಸುಲಭ ಎಂಬ ಕಾರಣಕ್ಕಾಗಿ ಈ ವೃತ್ತಿಯನ್ನು ಆಯ್ಕೆ ಮಾಡಕೊಳ್ಳದೆ ಸಮಾಜದಲ್ಲಿ ಗೌರವಯುತವಾದ ವೈದ್ಯರಾಗಿ ರೋಗಿಗಳ ಸೇವೆಯನ್ನು ಮಾಡುವ ಗುರಿಯನ್ನು ಹೊಂದುವ ಮೂಲಕ ಯಶಸ್ವಿ ವೈದ್ಯನಾಗಲು ಸಾಧ್ಯ. ಪರಸ್ಪರ ವ್ಯಕ್ತಿತ್ವದ ಹೋಲಿಕೆಯನ್ನು ಮಾಡಿಕೊಳ್ಳುವುದರಿಂದ ಅಸೂಯೆಯ ಭಾವನೆ ಬೆಳೆದುಕೊಳ್ಳುತ್ತದೆ. ಇದರಿಂದ ಆತ್ಮವಿಶ್ವಾಸ…

Read More

ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್ ಉಳ್ಳಾಲ: 4 ದಿನಗಳಿಗೊಮ್ಮೆ ಕುಡಿಯುವ ನೀರು ಕೊಡುತ್ತಿರುವ ಸರಕಾರಗಳು, ಜನರನ್ನು ಕೆಲಸಕ್ಕೆ ಹೋಗದೆ ನೀರಿಗಾಗಿ ಅಲೆದಾಟ ನಡೆಸುವಂತಹ ವಾತಾವರಣವನ್ನು ನಿರ್ಮಿಸಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೃಷ್ಣಪ್ಪ ಸಾಲ್ಯಾನ್ ಅಭಿಪ್ರಾಯಪಟ್ಟರು. ಅವರು ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಶ್ರೀಮಂತರನ್ನು ರಕ್ಷಿಸುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಬಡ, ಮಾಧ್ಯಮ ವರ್ಗದವರು ಬೀದಿಪಾಲಾಗುವಂತಹ ಸ್ಥಿತಿ ಉದ್ಭವಿಸಿದೆ. ಕುಡಿಯುವ ನೀರನ್ನೇ ಪೂರೈಸಲಾಗದ ಸರಕಾರ ಮತ್ತೆ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್, ದಿನಬಳಕೆ ವಸ್ತುಗಳಿಗೂ ಬೆಲೆ ಏರಿಕೆ ಮಾಡುವ ಮೂಲಕ ಚುನಾವಣೆ ವೇಳೆ ನೀಡಿದ ಭರವಸೆಯನ್ನೇ ಸುಳ್ಳಾಗಿಸಿದ್ದಾರೆ. ಕನಿಷ್ಠ ನೀರಿನ ವ್ಯವಸ್ಥೆಯಲ್ಲಾದರೂ ಸ್ಥಳೀಯ ಜನಪ್ರತಿನಿಧಿಗಳುಯ ಸ್ಪಂಧಿಸಿ ಜನಸಾಮಾನ್ಯರಿಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಿರ್ಮಿಸಬೇಕಿದೆ ಎಂದರು. ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಯು.ಜಯಂತ ನಾೈಕ್ ಮಾತನಾಡಿ ನೋಟು ಅಮಾನ್ಯೀಕರಣದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ವಾರಕ್ಕೆ ಆರು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಹೋಮಿಯೋಪತಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 27 ನೇ ಪದವಿ ಪ್ರಧಾನ ಸಮಾರಂಭ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ದೇರಳಕಟ್ಟೆ ಸಭಾಂಗಣದಲ್ಲಿ ಮಾ.29 ರಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ ಎಂದುಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇದರ ಆಡಳಿತಾಧಿಕಾರಿ ಫಾ.ವಿನ್ಸೆಂಟ್ ಸಲ್ದಾನ್ಹ ಹೇಳಿದ್ದಾರೆ. ದೇರಳಕಟ್ಟೆ ಫಾದರ್ ಮುಲ್ಲರ್ಸ್ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು 79 ಹೋಮಿಯೋಪತಿ ಪದವಿ ಹಾಗೂ 23 ಹೋಮಿಯೋಪತಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಈ ವರ್ಷ ಪದವಿ ಸ್ವೀಕರಿಸಲಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಘೋಷಿಸಿದ ಮತ್ತು ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅವರಲ್ಲಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಮಕ್ಕಳಲ್ಲಿ ತೆಗೆದುಕೊಳ್ಳುವ ಗುಣ ಕಳೆದು ಹೋಗಿದೆ, ಇಟ್ಟುಕೊಳ್ಳಲು ಆಗದಿರುವುದರಿಂದ ಅನುಭವಿಸಲು ಅವರಿಂದ ಅಸಾಧ್ಯವಾಗುತ್ತಿದ್ದು, ಅವರ ಸಾಮಥ್ರ್ಯದ ಲೂಟಿ ಆಗುತ್ತಿದೆ ಎಲ್ಲರೂ ಮಿತಿಯ ಒಳಗಡೆ ಬಂಧಿಯಾಗಿದ್ದಾರೆ ಎಂದು ಮಂಗಳೂರು ಸ್ವರೂಪ ಅಧ್ಯಯನ ಸಂಸ್ಥೆಯ ನಿರ್ದೇಶಕ ಗೋಪಾಡ್ಕರ್ ಆತಂಕ ವ್ಯಕ್ತಪಡಿಸಿದರು. ಅವರು ನ್ಯೂಸ್ ಪಾಯಿಂಟ್ ಮುಡಿಪು, ಜನ ಶಿಕ್ಷಣ ಟ್ರಸ್ಟ್ ಮುಡಿಪು ಮತ್ತು ಚಿತ್ತಾರ ಬಳಗ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಮುಡಿಪು ಜನಶಿಕ್ಷಣ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 2016-17ರ ಮಂಚಿ ಮಕ್ಕಳ ಕೊಲಾಜ್ ಚಿತ್ರ ಪಯಣದ ಸಂಪನ್ನ ಸಮಾರಂಭ ಮತ್ತು ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳು ಶಿಕ್ಷಣದ ಸಾಧ್ಯತೆಯ ಮಿತಿಯೊಳಗೆ ಉಳಿದುಕೊಂಡಿದ್ದಾರೆ. ಅವರನ್ನು ಕೆರಳಿಸಿ ಸಹಜವಾಗಿ ಅರಳಿಸುವ ರೀತಿಯಲ್ಲಿ ಕಾರ್ಯಗಳು ಆರಂಭವಾಗಬೇಕಿದೆ. ಸದ್ಯದ ಸ್ಥಿತಿಯಲ್ಲಿ ಮಕ್ಕಳ ಕಲಿಯುವ ಹಕ್ಕನ್ನು ಬೇರೆಯವರು ಇಟ್ಟುಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ದೇಹಕ್ಕೆ ಮತ್ತು ಮನಸ್ಸಿಗೆ ಶಿಕ್ಷೆಯಾಗುತ್ತಿದೆ ಎಂದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಸಿ, ನ್ಯೂಸ್ ಪಾಯಿಂಟ್ ಮಾಲೀಕ ವೆಂಕಟೇಶ್.ಹೆಚ್, ಕೊಳ್ನಾಡು ಮಂಚಿ ಸರಕಾರಿ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಹಳೆಕೋಟೆ  : ರಾಜ್ಯದಲ್ಲಿ ಇಂದು ಮಾತೃಭಾಷಾ ಶಿಕ್ಷಣ ಸಂಸ್ಥೆ ಅದರಲ್ಲೂ ಕನ್ನಡ ಮಾಧ್ಯಮ ಶಾಲೆಗಳು ಅಳಿವಿನಂಚಿನಲ್ಲಿದೆ. ಆಂಗ್ಲ ಭಾಷಾ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿ ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದೇ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ಆದ್ಯತೆ ಎಂದು ಉಳ್ಳಾಲ ಕೇಂದ್ರ ಜಮಾಅತ್ ನ ಅಧ್ಯಕ್ಷರಾದ  ಅಬ್ದುಲ್ ರಶೀದ್ ರವರು ಹೇಳಿದರು. ಅವರು ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುವ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗೆ ಸಾಧಾರಣ 16 ಲಕ್ಷ ರೂಪಾಯಿ ಮೊತ್ತದ ಹೊಸ ಬಸ್ಸನ್ನು ಉಚಿತವಾಗಿ ನೀಡುತ್ತಾ ಕನ್ನಡ ಮಾಧ್ಯಮ ಶಾಲೆಗಳಿಗೂ ಆಕರ್ಷಣೆಯಿಂದ ವಿದ್ಯಾರ್ಥಿಗಳು ಬರಬೇಕು. ಈ ಶಾಲೆಗೆ ದೂರ ಪ್ರದೇಶಗಳಿಂದ ಬರುವ ಮಕ್ಕಳು ಉಚಿತವಾಗಿ ಬರಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ವತಿಯಿಂದ ಬಸ್ ಒದಗಿಸಲಾಗಿದೆ ಎಂದರು. ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಇಬ್ಬರ ತಂಡ ಯುವಕನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಡಿ ಸಮೀಪದ ವೀರಭದ್ರ ದೇವಸ್ಥಾನ ಹಾಗೂ ರೆಹಮಾನಿಯಾ ಮಸೀದಿ ನಡುವೆ ಸೋಮವಾರ ತಡರಾತ್ರಿ ವೇಳೆ ಸಂಭವಿಸಿದೆ. ಕೋಡಿ ನಿವಾಸಿ ನೌಷಾದ್ ಹುಸೈನ್ (23) ಕೊಲೆ ಯತ್ನಕ್ಕೊಳಗಾಗಿರುವ ಯುವಕ. ಮುಕ್ಕಚ್ಚೇರಿಯಲ್ಲಿರುವ ಸಮೋಸಾ ತಯಾರಿಕಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಷಾದ್ ಕೆಲಸಕ್ಕೆಂದು ತೆರಳುವ ಸಂದರ್ಭ ಘಟನೆ ನಡೆದಿದೆ. ಬೈಕಿನಲ್ಲಿ ತೆರಳುವ ಸಂದರ್ಭ ಎದುರಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ನೌಷಾದ್ ಮೇಲೆ ತಲವಾರು ಬೀಸಿದ್ದರು. ತಲವಾರಿನ ಏಟಿನಿಂದ ತಪ್ಪಿಸುವ ಸಂದರ್ಭ ಕೈಯನ್ನು ಅಡ್ಡ ಹಿಡಿದಿದ್ದರಿಂದಾಗಿ ಕೈಗೆ ಕಡಿತದ ಗಾಯವಾಗಿದೆ. ತಪ್ಪಿಸುವ ಧಾವಂತದಲ್ಲಿ ಬೈಕ್ ರಸ್ತೆಗೆ ಉರುಳಿಬಿದ್ದಿದೆ. ಸದ್ದು ಕೇಳಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಪೊಲೀಸ್ ಪೇದೆಗಳಿಬ್ಬರು ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದಾಗ ಓರ್ವ ಆರೋಪಿ ಮೊಗವೀರಪಟ್ನ ಕಡೆಗೆ ಓಣಿಯ ಮೂಲಕ ಪರಾರಿಯಾದರೆ, ಇನ್ನೋರ್ವ ಆರೋಪಿ ಬೈಕ್ ಸಮೇತ ಪರಾರಿಯಾಗಿದ್ದಾನೆ. ಪೊಲೀಸರು ಬರುವಲ್ಲಿ…

Read More