ಉಳ್ಳಾಲ ನ್ಯೂಸ್ ನೆಟ್ ವರ್ಕ್ ಜೆಪ್ಪು: ಮಂಗಳೂರಿನ ಕೆಲರಾಯಿಯ ಪ್ರೆಸಿಡೆನ್ಸಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೆಸಿಡೆನ್ಸಿ ಅಂತರ್ ಶಾಲಾ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯ 6ರಿಂದ 8ರ ಹರೆಯದ ಬಾಲಕರ ವಿಭಾಗದಲ್ಲಿ ಪ್ರೆಸಿಡೆನ್ಸಿ ಶಾಲಾ ವಿದ್ಯಾರ್ಥಿ ಮಹಮ್ಮದ್ ಫರಾಝ್ ಅಲಿ ಅವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಫರಾಝ್ ಅವರು ಉಮ್ಮರ್ ಫಾರೂಕ್ ಹಾಗೂ ಝರೀನಾ ದಂಪತಿಯ ಪುತ್ರ.
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಶಿಕ್ಷಣಕ್ಕೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಕೆಯ ರೂಪದಲ್ಲಿ ಅಧ್ಯಯನ ಮಾಡುವ ಮೂಲಕ ಎಲ್ಲರಿಗೂ ಶಿಕ್ಷಣವನ್ನು ನೀಡುವ ಕೆಲಸವನ್ನು ತಾಜುಲ್ ಉಲಮಾರವರು ಮಾಡಿದ್ದರು ಎಂದು ಕೇರಳ ಎಸ್ ಎಂಎ ಉಪಾಧ್ಯಕ್ಷ ಮಹಮ್ಮದ್ ಕುಂಞÂ ಸಖಾಫಿ ಕೊಲ್ಲಂ ಹೇಳಿದರು. ಅವರು ಮುಹಿಮ್ಮಾತ್ ಮುಸ್ಲಿಮೀನ್ ಎಜುಕೇಶನಲ್ ಸೆಂಟರ್, ಎಸ್ವೈಎಸ್ ದೇರಳಕಟ್ಟೆ ಸೆಂಟರ್, ಎಸ್ಜೆಎಂ ದೇರಳಕಟ್ಟೆ ರೇಂಜ್ ಇದರ ಸಂಯುಕ್ತ ಆಶ್ರಯದಲ್ಲಿ ಮುಹಿಮ್ಮಾತ್ ವಿದ್ಯಾಸಂಸ್ಥೆಯ ಬೆಳ್ಳಿ ಹಬ್ಬದ ಪ್ರಚಾರಾರ್ಥ ಈ ಶತಮಾನದ ಸಮುದಾರಕ ತಾಜು ಲ್ ಉಲಮಾ ಎಂಬ ವಿಚಾರದ ಕುರಿತು ಭಾನುವಾರ ದೇರಳಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿ ಮಾತನಾಡಿದರು. ಸುನ್ನಿ ಸಮುದಾಯದ ಮತ್ತು ಭಾಷೆಗಳ ಏಳಿಗೆಗೆ ಬಹಳಷ್ಟು ಪ್ರೇರಣೆಯನ್ನು ತಾಜುಲು ಉಲಮಾ ನೀಡಿದ್ದರು. ಅವರ ಪ್ರೇರಣೆಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು. ಮುಹಿಮ್ಮಾತ್ ಮೆನೇಜರ್ ಅಬ್ದುಲ್ ಖಾದಿರ್ ಸಖಾಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹಾಫಿಳ್ ಸುಫ್ಯಾನ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಯ್ಯದ್ ಶರಫುದ್ದೀನ್ ತಂಙಳ್ ಕಾರ್ಯಕ್ರಮವನ್ನು…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು:ದುಡಿಮೆಯ ಆದಾಯದಿಂದ ಮನೆಗೆ ಬೇಕಾಗುವ ರೇಷನ್ ಸಾಮಾಗ್ರಿಗಳನ್ನು ಕೊಂಡೊಯ್ಯಲು ಸಾಧ್ಯವಾಗದೇ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ರೇಷನ್ ಸಾಮಾಗ್ರಿಗಳನ್ನು ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ರೀಲಿಫ್ ಸವಿರ್ಸ್ ಬಹುತೇಕ ವಿತರಿಸುತ್ತಿದ್ದು ಈ ಕಾರ್ಯ ದೇಶಕ್ಕೆ ಮಾದರಿಯಾಗಿದೆ. ಎಂದು ಎಸ್ಎಸ್ಎಫ್ ಇಹ್ಶಾನ್ ಕರ್ನಾಟಕ ಕನ್ವೀನರ್ ಅಬ್ದುಲ್ ರಹಮಾನ್ ರಝ್ವಿ ಕಲ್ಕಟ್ಟ ಹೇಳಿದರು. ಅವರು ಭಾನುವಾರ ದೇರಳಕಟ್ಟೆಯಲ್ಲಿ ನಡೆದ ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ರಿಲೀಫ್ ಸವಿರ್ಸ್ ವತಿಯಿಂದ ರೇಷನ್ ವಿತರಿಸಿ ಮಾತನಾಡಿದರು. ಎಸ್ಎಸ್ಎಫ್ ರಿಲೀಫ್ ಸವಿರ್ಸ್ ಚೆಯರಮನ್ ಅಲ್ತಾಪ್ ಕುಂಪಲ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ , ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ಕೋಶಾಧಿಕಾರಿ ಜುನೈದ್ ಮಧನಿ ನಗರ ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ಉಪಾಧ್ಯಕ್ಷರಾದ ಇಮ್ರಾನ್ ಸ್ವಲಾತ್ ನಗರ , ಎಸ್ಎಸ್ಎಫ್ ಕೊಣಾಜೆ ಸೆಕ್ಟರ್ ನಾಯಕ ಅಬ್ದುಲ್ ಮಜೀದ್ ಉಪಸ್ಥಿತರಿದರು
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಕೃಷಿ ಭೂಮಿಯ ಮೂಲ ಸೌಲಭ್ಯ ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಅಸಹಾಯಕತೆಯನ್ನು ಉಪಯೋಗಿಸಿಕೊಂಡು ಅವರ ಜಾಗಗಳಲ್ಲಿ ಕಾರ್ಖಾನೆಗಳನ್ನು ನಿರ್ಮಿಸಿ ಅವರನ್ನೇ ಕೂಲಿಯಾಳುಗಳನ್ನಾಗಿ ದುಡಿಸುವ ವಾತಾವರಣ ಸೃಷ್ಟಿಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಹೇಳಿದ್ದಾರೆ. ಅವರು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಆಯೋಜಿಸಲಾಗಿದ್ದ ದ.ಕ.ಜಿಲ್ಲಾ ರೈತ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 380 ಕಾರ್ಪೊರೇಟ್ ಕಂಪೆನಿಗಳಿಗೆ 6 ಲಕ್ಷ ಕೋಟಿ ತೆರಿಗೆ ವಿನಾಯಿತಿ ನೀಡಿದಾಗ ಸರಕಾರಕ್ಕೆ ನಷ್ಟವಾಗಿಲ್ಲ. 1,48,000 ಕೋಟಿ ರೈತರಿಗೆ ಸಬ್ಸಿಡಿ ಕೊಡಬೇಕಾದಲ್ಲಿ ಕೇಂದ್ರ ಸಚಿವ ಅರವಿಂದ ಸುಬ್ರಹ್ಮಣ್ಯಂ ನಷ್ಟದ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ಧರಾಮಯ್ಯ ಸರಕಾರ ಹಿಂದಿನ ಬಜೆಟಿನಲ್ಲಿ ಲಿಕ್ಕರ್ ವ್ಯವಹಾರದಲ್ಲಿನ 800 ಕೋಟಿ ತೆರಿಗೆ ಬಾಕಿಯಿರುವ ಕುರಿತು ಹೇಳಿದ್ದರು. ಇತ್ತೀಚೆಗೆ ನಡೆದಿರುವ ಬಜೆಟಿನಲ್ಲಿ ಅದರ ಕುರಿತ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಇಸ್ಲಾಮಾಬಾದ್: ಭಾರತ ದೇಶದಲ್ಲಿರುವ ಹಿಂದೂ ವಿವಾಹ ಮಸೂದೆಯಂತೆ ಇನ್ನು ಮುಂದೆ ಪಾಕಿಸ್ತಾನದಲ್ಲೂ ಹಿಂದೂಗಳ ವಿವಾಹಕ್ಕೆ ಕಾನೂನಿನಲ್ಲಿ ಮಾನ್ಯತೆಯನ್ನು ನೀಡುವ ನಿಟ್ಟಿನಲ್ಲಿ ಐತಿಹಾಸಿಕ ಹಿಂದೂ ವಿವಾಹ ಮಸೂದೆ-2017ಕ್ಕೆ ಅಧ್ಯಕ್ಷ ಮಮ್ನೂನ್ ಹುಸೇನ್ ಅವರು ಅಂಕಿತ ಹಾಕಿದ್ದು, ಕಾಯ್ದೆಯಾಗಿ ಸೋಮವಾರ ಜಾರಿಯಾಗಿದೆ. ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಸಲಹೆಯ ಮೇರೆಗೆ ಅಧ್ಯಕ್ಷರು ಮಸೂದೆಗೆ ಅಂಕಿತ ಹಾಕಿದ್ದಾರೆಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಜಾರಿಯಾಗಿರುವ ಕಾಯ್ದೆ ಹಿಂದೂಗಳ ಕುಟುಂಬಕ್ಕೆ ಕಾನೂನಾತ್ಮಕ ಅಧಿಕಾರ ನೀಡುವುದರ ಜೊತೆಗೆ, ತಾಯಂದಿರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಲಿದೆ. ಇದರಂತೆ ಹಿಂದೂಗಳು ತಮ್ಮ ಸಂಪ್ರದಾಯದಂತೆ ವಿವಾಹ ಆಗಬಹುದಾಗಿದೆ. ವಿವಾಹ ನೋಂದಣಿಗೆ ಸರ್ಕಾರ ರೆಜಿಸ್ಟ್ರಾರ್ ಗಳನ್ನು ನೇಮಿಸಲಿದೆ. ಅಲ್ಲದೆ, ಮರುವಿವಾಹ ಮತ್ತು ವಿಚ್ಛೇದನಕ್ಕೂ ಅವಕಾಶವನ್ನು ಕಲ್ಪಿಸಿದೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಅಲಹಾಬಾದ್: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಮುಖಂಡ ಮೊಹಮ್ಮದ್ ಶಮಿ ಎಂಬುವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಲಹಾಬಾದ್ ನ ಮೌವ್ ಐಮಾ ಎಂಬಲ್ಲಿ ಮೊಹಮ್ಮದ್ ಶಮಿ ಅವರ ಕಚೇರಿ ಬಳಿ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಶಸ್ತ್ರ ಸರ್ಜಿತ ಆಗಂತಕರಿಬ್ಬರು ಶಮಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 60 ವರ್ಷದ ಮೊಹಮ್ಮದ್ ಶಮಿ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಬಳಿಕ ಸ್ಥಳೀಯರು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಚೆಂಬುಗುಡ್ಡೆ:ಶ್ರೀರಾಮಕೃಷ್ಣ ಮಠ ಮಂಗಳಾದೇವಿ ಇದರ ಆಶ್ರಯದಲ್ಲಿ ಜೈ ವೀರಮಾರುತಿ ವ್ಯಾಯಾಮ ಶಾಲೆ ತೊಕ್ಕೊಟ್ಟು,ಶ್ರೀ ವಿಠೋಭ ರುಕ್ಮಯ ಭಜನಾ ಮಂದಿರ, ಅಮ್ಮ ಭಗವಾನ್ ಮಾನವ ವಿಕಾಸ ಸೇವಾ ಸಮಿತಿ, ಜಗತ್ ಫ್ರೆಂಡ್ಸ್ ಸರ್ಕಲ್, ವೆಲ್ ಕಂ ಗ್ರೂಪ್ಸ್ ,ಉಮಾಮಹೇಶ್ವರಿ ದೇವಸ್ಥಾನದ ಸಹಯೋಗ ದೊಂದಿಗೆ ಚೆಂಬು ಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವು ಭಾನುವಾರ ನಡೆಯಿತು. ವೇದಿಕ್ ಕುಮಾರ್ ಕೊಲ್ಯ,ರಾಮಚಂದ್ರ, ಪುರುಷೋತ್ತಮ್, ವಿಶ್ವನಾಥ್ ಮೆಂಡನ್, ರಾಜೀವ ಮೆಂಡನ್, ಬಾಝಿಲ್ ಡಿ’ಸೋಜ,ಜಯಾನಂದ ಅಂಚನ್, ಭಾಸ್ಕರ್ ತೊಕ್ಕೊಟ್ಟು, ನಾಗೇಶ್ ಶೆಟ್ಟಿ, ಕಿಶೋರ್ ಕುಮಾರ್, ಶೇಖರ್ ಚೆಂಬುಗುಡ್ಡೆ ಈ ಸಂದರ್ಭ ಉಪಸ್ಠಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಠಾಣೆ ಎದುರು ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಪಜೀರು ಹಿಂದು ಹಿತರಕ್ಷಣಾ ವೇದಿಕೆ ಕೊಣಾಜೆ ಠಾಣೆ ಎದುರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸ್ಥಳೀಯ ಮುಖಂಡ ಪ್ರಕಾಶ್ ಶೆಟ್ಟಿ ಎಂಬವರು ತಿಂಗಳೊಳಗ ಆರೋಪಿಗಳನ್ನು ಹಿಡಿದರೆ ಪೊಲೀಸರಿಗೆ ರೂ. ೧ ಲಕ್ಷ ಬಹುಮಾನ ಕೊಡುವುಿದಾಗಿ ಘೋಷಿಸಿದ ಪ್ರಸಂಗ ಭಾನುವಾರನಡೆದಿದೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಹಾಗೂ ದಿವಂಗತ ಉಪಕುಲಪತಿಗಳ ಪುತ್ರಿಯೋರ್ವರು ಜಮ್ಮು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಪ್ರಯಾಣ ಬೆಳೆಸಿದ್ದು, 37ನೇ ದಿನವಾದ ಶುಕ್ರವಾರ ಮಂಗಳೂರು ಮೂಲಕ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಮಾರ್ಗವಾಗಿ ಕೇರಳದ ಕಡೆ ಪ್ರಯಾಣ ಬೆಳೆಸಿದರು. ಲಿಂಗ ಸಮಾನತೆ ಮತ್ತು ಹದಿಹರೆಯದವರಿಗೆ ಜೀವನ ಕೌಶಲ್ಯ ಶಿಕ್ಷಣದ ಉದ್ದೇಶವನ್ನಿಟ್ಟುಕೊಂಡು ಸೈಕಲ್ ಜಾಥಾ ಆರಂಭಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿಗಳಾಗಿದ್ದ ದಿ.ಶಿವಶಂಕರ ಮೂರ್ತಿ ಇವರ ಪುತ್ರಿಯಾಗಿರುವ ಮೈಸೂರು ಮೂಲದ 27ರ ಹರೆಯದ ಶ್ರುತಿ ಸೈಕಲ್ ಜಾಥಾ ನಡೆಸುತ್ತಿರುವವರು. ಫೆ.8 ರಂದು ಜಮ್ಮು ಕಾಶ್ಮೀರದಿಂದ ಸೈಕಲ್ ಪ್ರಯಾಣ ಆರಂಭಿಸಿರುವ ಶ್ರುತಿ ಈವರೆಗೆ 3,000 ಕ್ಕೂ ಅಧಿಕ ಕಿ.ಮೀ.ನಷ್ಟು ಕ್ರಮಿಸಿ 11 ರಾಜ್ಯಗಳನ್ನು ದಾಟಿ ಇದೀಗ ಕರ್ನಾಟಕದ ಗಡಿಯನ್ನು ದಾಟಿ ಕೇರಳವನ್ನು ತಲುಪಿದ್ದಾರೆ. ಮೂಲತ: ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಶ್ರುತಿ ಮೂರು ವರ್ಷ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕೆಲಸ ಮಾಡಿ ವೃತ್ತಿಯನ್ನು ಬಿಟ್ಟು ಹದಿಹರೆಯದ ಮಕ್ಕಳ ವಿಷಯದಲ್ಲಿ ಫೆಲೋಶಿಪ್ ಪಡೆದು…
ಉಳ್ಳಾಲ ನ್ಯೂಸ್ ನೆಟ್ವರ್ಕ್ ಮಾಡೂರು: ವಿಶ್ವಹಿಂದೂ ಪರಿಷತ್, ಬಜರಂಗದಳದ ಶ್ರೀ ಹರಿ ಶಾಖೆ ಮಾಡೂರು ಇದರ ವತಿಯಿಂದ ಮಾಡೂರು ಶ್ರೀ ಅಯ್ಯಪ್ಪ ಮಂದಿರದ ಅಯ್ಯಪ್ಪ ಸ್ವಾಮಿಗೆ ಬೆಳ್ಳಿಯ ಪೀಠ ಮತ್ತು ಪ್ರಭಾವಳಿಯನ್ನು ಶುಕ್ರವಾರ ಬೀರಿ ಸಿದ್ಧಿ ವಿನಾಯಕ ಮಂದಿರದಿಂದ ಮಾಡೂರು ಅಯ್ಯಪ್ಪ ಭಜನಾ ಮಂದಿರದವರೆಗೆ ಮೆರವಣಿಗೆಯ ಮೂಲಕ ತಂದು ಅಪಿ೯ಸಲಾಯಿತು. ಮೆರವಣಿಗೆಯ ಉದ್ಘಾಟನೆಯನ್ನು ಕೊಲ್ಯ ಮೂಕಾಂಭಿಕಾ ದೇವಸ್ಥಾನದ ಅಧ್ಯಕ್ಷ ಮಧುಸೂಧನ್ ಅಯ್ಯರ್ ನೆರವೇರಿಸಿದರು. ಈ ಸಂದರ್ಭ ಬಜರಂಗದ ದಳ ಪ್ರಾಂತ್ಯ ಸಂಯೋಜಕ ಶರಣ್ ಪಂಪ್ವೆಲ್, ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುತ್ತಾರು, ಜಿಲ್ಲಾ ಸಹ ಸಂಚಾಲಕ ಗಣೇಶ್ ಕುಂಪಲ, ವಿಶ್ವ ಹಿಂದೂ ಪರಿಷತ್ತು ಉಳ್ಳಾಲ ಪ್ರಖಾಂಡದ ಕಾರ್ಯದರ್ಶಿ ರವಿ ಅಸೈಗೋಳಿ, ನಾರಾಯಣ ಕುಂಪಲ, ಪ್ರಖಾಂಡ ಸಂಚಾಲಕ ಪವಿತ್ರ ಕೆರೆಬೈಲು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನಾಗೇಶ್ ಕುಂಪಲ, ವಿಶ್ವನಾಥ್ ಕೊಲ್ಯ, ಮಂಗಳೂರು ವಿಧಾನ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

